ಹುಬ್ಬಳ್ಳಿ, ಮಾರ್ಚ್ 26: ಹುಬ್ಬಳ್ಳಿ ನಗರದಲ್ಲಿ ಬುಧವಾರ ಅಚಾನಕ್ಕಾಗಿ ಕಾಣಿಸಿಕೊಂಡ ಮೂರು ಯುದ್ಧ ವಿಮಾನಗಳು ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಸಿದವು. ಮಾರ್ಚ್ 25 ರ ಸಂಜೆ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಈ ವಿಮಾನಗಳನ್ನು ನೋಡಿದ ಜನರು, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಗಾಬರಿಗೊಂಡರು. ಕೆಲ ಹೊತ್ತು ಹುಬ್ಬಳ್ಳಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದರೂ, ನಂತರ ಇದು ಕೇವಲ ಪ್ರಾಯೋಗಿಕ ಹಾರಾಟ (training sortie) ಎಂಬುದು ಸ್ಪಷ್ಟವಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್ ಕುಮಾರ್ ಅವರು ನೀಡಿದ ಮಾಹಿತಿಯಂತೆ, ಈ ಮೂರು ಯುದ್ಧ ವಿಮಾನಗಳು ಗೋವಾ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆಗಿ, ನಿಯಮಿತವಾಗಿ ನಡೆಯುವ ತರಬೇತಿ ಹಾರಾಟದ ಭಾಗವಾಗಿ ಹುಬ್ಬಳ್ಳಿ ಆಕಾಶದಲ್ಲಿ ಸಂಚರಿಸಿದ್ದವು. ಇಂತಹ ಪ್ರಾಯೋಗಿಕ ಹಾರಾಟಗಳು ಸಾಮಾನ್ಯವಾಗಿ ಎರಡು ತಿಂಗಳಿಗೆ ಒಮ್ಮೆ ನಡೆಯುತ್ತವೆ. ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಒಂದು ವಾರಕ್ಕೆ ನೂರು ಕೋಟಿ ರೂಪಾಯಿ ಗಳಿಕೆ ಆದರೆ ದೊಡ್ಡದು ಎನ್ನುವ ಪರಿಸ್ಥಿತಿ ಈಗ ಇದೆ. ಯಾರೂ ಸಿನಿಮಾ ನೋಡಲು ಥಿಯೇಟರ್ಗೆ ಬರುತ್ತಿಲ್ಲ ಎಂಬ ಆರೋಪ ಜೋರಾಗಿರುವ ಈ ಸಂದರ್ಭದಲ್ಲಿ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದರೂ ಅತಿ ವೇಗದಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾ ಎಂಬ ದಾಖಲೆಯನ್ನು ಮುರಿಯೋಕೆ ಸಾಧ್ಯವಾಗಿಲ್ಲ.
‘ಧುರಂಧರ್ 2’ ಚಿತ್ರ ಅಬ್ಬರಿಸುತ್ತಿದೆ. ಮೊದಲ ವಾರದಲ್ಲಿ ಈ ಚಿತ್ರ ಎಲ್ಲ ಕಡೆಗಳಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಹಿಂದಿ ಮಾತ್ರವಲ್ಲದೆ, ತೆಲುಗು ಭಾಷೆಯಲ್ಲೂ ಚಿತ್ರ ಉತ್ತಮ ರೀತಿಯಲ್ಲಿ ಗಳಿಕೆ ಮಾಡುತ್ತಿದೆ. ಇದರಿಂದ ಸಿನಿಮಾ ಒಂದು ವಾರಕ್ಕೆ 1,006 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಅತಿ ವೇಗದಲ್ಲಿ ಗಳಿಕೆ ಮಾಡಿದ ಎರಡನೇ ಸಿನಿಮಾ ಆಗಿ ಇದು ಹೊರಹೊಮ್ಮಿದೆ.
ಅತಿ ವೇಗದಲ್ಲಿ ಸಾವಿರ ಕ್ಲಬ್ ಸೇರಿದ ದಾಖಲೆ ‘ಪುಷ್ಪ 2’ ಬಳಿ ಇದೆ. ಈ ಚಿತ್ರ ಏಳು ದಿನಗಳಲ್ಲಿ ಬರೋಬ್ಬರಿ 1067 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಅಲ್ಲು ಅರ್ಜುನ್ ಸಿನಿಮಾ ಮಾಡಿದ ದಾಖಲೆಯನ್ನು ಮುರಿಯಲು ‘ಪುಷ್ಪ 2’ ಬಳಿ ಇನ್ನೂ ಸಾಧ್ಯವಾಗಿಲ್ಲ. ಒಟ್ಟಾರೆ ಗಳಿಕೆ ವಿಷಯದಲ್ಲಿ ‘ಧುರಂಧರ್ 2’ ಚಿತ್ರವು ‘ಪುಷ್ಪ 2’ ಚಿತ್ರದ ದಾಖಲೆಯನ್ನು ಮುರಿಯುತ್ತದೆಯೇ ಎಂಬುದು ಸದ್ಯದ ಕುತೂಹಲ.
‘ಧುರಂಧರ್ 2’ ಸಿನಿಮಾ ಬುಧವಾರ (ಮಾರ್ಚ್ 25) 47 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರದ ಹೆಚ್ಚುಗಾರಿಕೆ. ವಾರದ ದಿನವೂ ಸಿನಿಮಾ ಅಬ್ಬರಿಸುತ್ತಿರುವುದು ವಿಶೇಷ. ಈ ವಾರಾಂತ್ಯದಲ್ಲಿ ಸಿನಿಮಾ ಪ್ರತಿ ದಿನ 100 ಕೋಟಿ ರೂಪಾಯಿ ಗಳಿಕೆ ಮಾಡುವ ನಿರೀಕ್ಷೆ ಇದೆ. ವೀಕೆಂಡ್ ಶೋಗಳು ಈಗಲೇ ಹೌಸ್ಪುಲ್ ಪ್ರದರ್ಶನ ಕಾಣುತ್ತಾ ಇವೆ. ರಣವೀರ್ ಸಿಂಗ್ ಅವರು ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ.
ನವದೆಹಲಿ/ಬೆಂಗಳೂರು, ಮಾರ್ಚ್ 26: ಏಳು ವರ್ಷಗಳ ಸುದೀರ್ಘ ಅಂತರದ ನಂತರ ಭಾರತವು ಇರಾನ್ನಿಂದ ಎಲ್ಪಿಜಿ ಅನಿಲವನ್ನು ಖರೀದಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತ 2019ರಲ್ಲಿ ಕೊನೆಯ ಬಾರಿಗೆ ಇರಾನ್ನಿಂದ ಅನಿಲ ಖರೀದಿಸಿತ್ತು. ಇದೀಗ ಅಮೆರಿಕದ ನಿರ್ಬಂಧಗಳ ತಾತ್ಕಾಲಿಕ ತೆರವು ಹಿನ್ನೆಲೆಯಲ್ಲಿ ಎಲ್ಪಿಜಿ ಖರೀದಿ ನಿರ್ಧಾರಕ್ಕೆ ಬಂದಿದೆ. ದೇಶದಲ್ಲಿ ಎದುರಾಗಿರುವ LPG ಗ್ಯಾಸ್ ಸಮಸ್ಯೆ ಮತ್ತು ಕಚ್ಚಾ ತೈಲ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಭಾರತವು ಹಗಲಿರುಳು ಪ್ರಯತ್ನಗಳನ್ನು ನಡೆಸುತ್ತಿದೆ. ಇದರ ಭಾಗವಾಗಿ, ಇರಾನ್ನ ವಿದೇಶಾಂಗ ಇಲಾಖೆ ಮತ್ತು ಅಲ್ಲಿನ ಮುಖ್ಯಸ್ಥರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತ ಸರ್ಕಾರವು ಇರಾನ್ ಸರ್ಕಾರದೊಂದಿಗೆ ಈ ಕುರಿತು ನಿರಂತರ ಮಾತುಕತೆ ನಡೆಸುತ್ತಿದ್ದು, ಏಳು ವರ್ಷಗಳ ನಂತರ ಇರಾನ್ನಿಂದ LPG ಗ್ಯಾಸ್ ಖರೀದಿ ಮಾಡಿಕೊಳ್ಳಲು ಸಿದ್ಧತೆಗಳು ನಡೆಯುತ್ತಿವೆ. ಮತ್ತೊಂದು ಮೂಲಗಳ ಪ್ರಕಾರ, ಇರಾನ್ನಿಂದ ಎಲ್ಪಿಜಿ ತುಂಬಿಕೊಂಡ ಹಡಗು ಈಗಾಗಲೇ ಹೊರಟಿದ್ದು, ಶೀಘ್ರದಲ್ಲೇ ಮಂಗಳೂರು ಬಂದರು ತಲುಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಹಿಂದೂ ಸನಾತನ ಸಂಪ್ರದಾಯಗಳಲ್ಲಿ ಅನೇಕ ವಿಧಿ ವಿಧಾನಗಳಿವೆ. ಅವುಗಳ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಯನ್ನು ಅರಿತಾಗ ಅವುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತದೆ. ವಿವಾಹದ ಸಂದರ್ಭದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲ ಇಡುವ ವಿಧಿ ಅಂತಹ ಒಂದು ವಿಶಿಷ್ಟ ಆಚರಣೆಯಾಗಿದೆ. ಈ ಆಚರಣೆಯ ವೈಶಿಷ್ಟ್ಯವೆಂದರೆ, ತಲೆಯ ಮೇಲಿರುವ ಸಹಸ್ರಾರ ಚಕ್ರವನ್ನು ಜಾಗೃತಿಗೊಳಿಸುವುದು. ಮದುವೆಯ ನಂತರ ಜೀವನದಲ್ಲಿ ಜವಾಬ್ದಾರಿಗಳು ಹೆಚ್ಚಾಗುವುದರಿಂದ, ಈ ವಿಧಿಯು ನಾನು ಮದುವೆಯಾಗುತ್ತಿದ್ದೇನೆ, ನನಗೆ ಜವಾಬ್ದಾರಿಗಳು ಬರುತ್ತಿವೆ ಎಂಬ ಪ್ರಜ್ಞೆಯನ್ನು ಮೂಡಿಸುತ್ತದೆ. ಇದರಿಂದ ಸಂಪಾದನೆ, ಆದಾಯ, ಖರ್ಚುಗಳನ್ನು ನಿಭಾಯಿಸುವ ಅರಿವು ಮೂಡುತ್ತದೆ. ಮೆದುಳಿನಲ್ಲಿ ಧನಾತ್ಮಕ ಶಕ್ತಿಗಳು ಜಾಗೃತಗೊಳ್ಳುತ್ತವೆ.
ಜೀರಿಗೆಯು ದೇಹದಲ್ಲಿರುವ ಋಣಾತ್ಮಕ ಶಕ್ತಿಗಳನ್ನು ಹೊರಹಾಕುತ್ತದೆ ಎಂದು ನಂಬಲಾಗಿದೆ. ಬೆಲ್ಲವು ಉಷ್ಣತೆಯನ್ನು ಪ್ರಚೋದಿಸಿ ಶಕ್ತಿಯನ್ನು ನೀಡುತ್ತದೆ. ಆದರೆ ಇಲ್ಲಿ ಜೀರಿಗೆ ಬೆಲ್ಲವನ್ನು ಸೇವಿಸಲು ನೀಡುವುದಿಲ್ಲ, ಬದಲಿಗೆ ತಲೆಯ ಮೇಲೆ ಇಡಲಾಗುತ್ತದೆ. ಇದು ದಂಪತಿಗಳಲ್ಲಿ ಅನ್ಯೋನ್ಯತೆಯನ್ನು ಹೆಚ್ಚಿಸಿ, ಮನಸ್ಸಿನ ಭಾವನೆಗಳಿಗೆ ವಿಶೇಷ ಶಕ್ತಿಯನ್ನು ನೀಡುತ್ತದೆ. ಮಾನಸಿಕವಾಗಿ ಪರಿವರ್ತನೆ ಮಾಡುವಂತಹ ಈ ವಿಧಿಯು ಪ್ರಾಚೀನ ಸಂಪ್ರದಾಯಗಳ ಸಕಾರಾತ್ಮಕ ಪ್ರಭಾವಕ್ಕೆ ಸಾಕ್ಷಿ ಎಂಬುದು ಡಾ. ಬಸವರಾಜ ಗುರೂಜಿ ಅವರ ಅಭಿಪ್ರಾಯ.
ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಶೋಭನ ಯೋಗ, ಆರಿದ್ರಾ ನಕ್ಷತ್ರ ಮತ್ತು ಭವಕರಣ ಇರಲಿದೆ. ರವಿ ಮೀನ ರಾಶಿಯಲ್ಲೂ, ಚಂದ್ರ ಮಿಥುನ ರಾಶಿಯಲ್ಲೂ ಸಂಚಾರ ಮಾಡಲಿದ್ದಾರೆ. ಇಂದು ಗುರುವಾರವಾದ್ದರಿಂದ ಗುರುಗಳ ಸ್ಮರಣೆಗೆ ವಿಶೇಷ ಮಹತ್ವವಿದೆ. ಅಶೋಕಾಷ್ಟಮಿ ಆಚರಣೆ, ಅಲಂಕಾರು ಯಾತ್ರೆ, ಮದ್ದೂರಿನ ಮಹೋತ್ಸವ, ಕಿಗ್ಗಾ ಋಷ್ಯಶೃಂಗ ಪರ್ವತದ ರಥೋತ್ಸವಗಳು ನಡೆಯುವ ಪರ್ವಕಾಲ ಇದಾಗಿದೆ. ಪ್ರತಿ ರಾಶಿಯ ಆರ್ಥಿಕ ಪರಿಸ್ಥಿತಿ, ಉದ್ಯೋಗ, ಕುಟುಂಬ ಸಂಬಂಧಗಳು, ಆರೋಗ್ಯ ಮತ್ತು ಇತರ ಪ್ರಮುಖ ಅಂಶಗಳ ಬಗ್ಗೆ ಡಾ. ಬಸವರಾಜ ಗುರೂಜಿ ಅವರು ನೀಡಿರುವ ಸಂಪೂರ್ಣ ಮಾಹಿತಿ ವಿಡಿಯೋದಲ್ಲಿದೆ.
ಬೆಂಗಳೂರು, ಮಾರ್ಚ್ 26: ಕರ್ನಾಟಕದಲ್ಲಿ ಉಪಚುನಾವಣೆ (By Election) ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ರಾಜಭವನ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಸಭೆಯಲ್ಲಿ ಉಪಚುನಾವಣೆ ಕುರಿತಂತೆ ಮಹತ್ವದ ಚರ್ಚೆಗಳು ನಡೆದವು. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು ಮತ್ತು ಶಾಸಕರು ಭಾಗವಹಿಸಿದರು.
ಸಭೆಯಲ್ಲಿ ಮಾತನಾಡಿದ ಸುರ್ಜೇವಾಲ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು, ಗೆಲ್ಲಲೇಬೇಕು ಎಂದು ಸೂಚನೆ ನೀಡಿದರು. ಎಲ್ಲಾ ಸಚಿವರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಕಡ್ಡಾಯವಾಗಿ ಕನಿಷ್ಠ 10 ದಿನ ಕ್ಷೇತ್ರದಲ್ಲೇ ತಂಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ಮುಸ್ಲಿಮರ ಅಸಮಾಧಾನ ಶಮನ ಹೊಣೆ ಜಮೀರ್, ತನ್ವೀರ್ಗೆ!
ಸಮುದಾಯವಾರು ಮತಗಳನ್ನು ಸೆಳೆಯುವ ಉದ್ದೇಶದಿಂದ ಪ್ರತ್ಯೇಕ ನಾಯಕರಿಗೆ ಜವಾಬ್ದಾರಿಗಳನ್ನು ಹಂಚಲಾಗಿದ್ದು, ಮತ ಬ್ಯಾಂಕ್ಗಳನ್ನು ಗರಿಷ್ಠ ಮಟ್ಟದಲ್ಲಿ ಪರಿವರ್ತಿಸಲು ಕಾರ್ಯತಂತ್ರ ರೂಪಿಸಲಾಗಿದೆ. ಅಲ್ಪಸಂಖ್ಯಾತರ ಅಸಮಾಧಾನ ಶಮನಗೊಳಿಸುವ ಹೊಣೆಗಾರಿಕೆಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ತನ್ವೀರ್ ಸೇಠ್ ಅವರಿಗೆ ನೀಡಲಾಗಿದೆ.
ಇನ್ನೊಂದೆಡೆ, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದ್ದು, ವಿಶೇಷವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ 20ಕ್ಕೂ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಯಾರು ವಾಪಸ್ ಪಡೆಯುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.
ಹಣ ಅಕ್ರಮ ಸಾಗಾಟದ ಮೇಲೆ ಅಧಿಕಾರಿಗಳ ಕಟ್ಟುನಿಟ್ಟಿನ ನಿಗಾ
ಚುನಾವಣಾ ಕಾವಿನ ನಡುವೆ ಅಕ್ರಮ ಹಣ ಸಾಗಣೆ ಮೇಲೂ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 6.17 ಲಕ್ಷ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಸಹ 10 ಲಕ್ಷಕ್ಕೂ ಹೆಚ್ಚು ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಶೋಭನ ಯೋಗ, ಆರಿದ್ರಾ ನಕ್ಷತ್ರ ಮತ್ತು ಭವಕರಣ ಇರಲಿದೆ. ರವಿ ಮೀನ ರಾಶಿಯಲ್ಲೂ, ಚಂದ್ರ ಮಿಥುನ ರಾಶಿಯಲ್ಲೂ ಸಂಚಾರ ಮಾಡಲಿದ್ದಾರೆ. ಇಂದು ಗುರುವಾರವಾದ್ದರಿಂದ ಗುರುಗಳ ಸ್ಮರಣೆಗೆ ವಿಶೇಷ ಮಹತ್ವವಿದೆ. ಅಶೋಕಾಷ್ಟಮಿ ಆಚರಣೆ, ಅಲಂಕಾರು ಯಾತ್ರೆ, ಮದ್ದೂರಿನ ಮಹೋತ್ಸವ, ಕಿಗ್ಗಾ ಋಷ್ಯಶೃಂಗ ಪರ್ವತದ ರಥೋತ್ಸವಗಳು ನಡೆಯುವ ಪರ್ವಕಾಲ ಇದಾಗಿದೆ. ಪ್ರತಿ ರಾಶಿಯ ಆರ್ಥಿಕ ಪರಿಸ್ಥಿತಿ, ಉದ್ಯೋಗ, ಕುಟುಂಬ ಸಂಬಂಧಗಳು, ಆರೋಗ್ಯ ಮತ್ತು ಇತರ ಪ್ರಮುಖ ಅಂಶಗಳ ಬಗ್ಗೆ ಡಾ. ಬಸವರಾಜ ಗುರೂಜಿ ಅವರು ನೀಡಿರುವ ಸಂಪೂರ್ಣ ಮಾಹಿತಿ ವಿಡಿಯೋದಲ್ಲಿದೆ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ನವ ವಿವಾಹಿತರ ಮಧ್ಯೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಅದರಲ್ಲಿಯೂ ಹಣಕಾಸಿನ ವಿಚಾರಕ್ಕೆ ಸಣ್ಣದಾಗಿ ಆರಂಭವಾಗುವ ಕಲಹ ತೀರಾ ಮನಶ್ಶಾಂತಿ ಹಾಳು ಮಾಡುವ ಮಟ್ಟಕ್ಕೆ ಹೋಗಲಿದೆ. ನೀವು ಒಂದು ವೇಳೆ ಈಗಾಗಲೇ ಸಾಲವನ್ನು ಪಡೆದುಕೊಂಡಿದ್ದೀರಿ ಎಂದಾದಲ್ಲಿ ತಕ್ಷಣವೇ ಹಿಂತಿರುಗಿಸುವಂತೆ ಕೆಲವರು ಕುತ್ತಿಗೆ ಮೇಲೆ ಕುಳಿತಂತಹ ಅನುಭವ ನಿಮಗೆ ಆಗಲಿದೆ. ಇತರರನ್ನು ಓಲೈಕೆ ಮಾಡುವ ಸಲುವಾಗಿ ನಿಮ್ಮ ಕೈಯಿಂದ ಹಣ ಕಳೆದುಕೊಳ್ಳುವ ಸಾಧ್ಯತೆ ಈ ದಿನ ಕಾಣಿಸುತ್ತಿದೆ. ಮುಖ್ಯವಾದ ಕಾಗದ ಪತ್ರಗಳ ವಿಚಾರಗಳು ಇದ್ದಲ್ಲಿ ಈ ದಿನ ಸಾಧ್ಯವಾದಷ್ಟು ಮುಂದಕ್ಕೆ ಹಾಕುವುದು ಉತ್ತಮ.
ಒಂದು ವೇಳೆ ರಾಜೀ-ಸಂಧಾನ ಆಗುವಂಥ ಅಸಮಾಧಾನಗಳು ಈಗಾಗಲೇ ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳುವುದು ಉತ್ತಮ. ಆದರೆ ನಿಮ್ಮ ಹಠಮಾರಿತನ ಧೋರಣೆಯಿಂದ ಸಮಸ್ಯೆಗಳನ್ನು ಮಾಡಿಕೊಳ್ಳಲಿದ್ದೀರಿ ಎಂಬಂತೆಯೇ ಸನ್ನಿವೇಶಗಳಿವೆ. ಆದ್ದರಿಂದ ಈ ದಿನ ಕೆಲವು ಪರಿಸ್ಥಿತಿಯಲ್ಲಿ ನಾನು ಹೇಳಿದ್ದೇ ಆಗಬೇಕು ಎಂಬ ಮೊಂಡುತನ ಬೇಡ. ಹೊಸದಾಗಿ ಪರಿಚಯವಾಗುವ ವ್ಯಕ್ತಿಗಳ ಬಗ್ಗೆ ತುಂಬಾ ಎಚ್ಚರಿಕೆಯಿಂದ ಇರಬೇಕು. ಸೆಕೆಂಡ್ ಹ್ಯಾಂಡ್ ಮನೆ ನಿರ್ಮಾಣ ವಸ್ತುಗಳು, ಕುರ್ಚಿ- ಸೋಫಾ ಅಥವಾ ಬೇರೆ ಯಾವುದೇ ಆದರೂ ಈ ದಿನ ಖರೀದಿ ಮಾಡದಿರುವುದು ಉತ್ತಮ.
ಹಿಂದಿನ ನಿಮ್ಮ ಅನುಭವಗಳು ಹಾಗೂ ಘಟನಾವಳಿಗಳ ಕಾರಣದಿಂದಾಗಿ ಬಹಳಷ್ಟು ಬದಲಾವಣೆಗಳು ನಿಮ್ಮಲ್ಲಿ ಆಗಲಿದೆ. ಈ ದಿನ ಪ್ರತಿ ವಿಚಾರದಲ್ಲೂ ವಿಷಯದಲ್ಲೂ ವ್ಯವಹಾರದಲ್ಲೂ ಹಣಕಾಸಿನ ಲೆಕ್ಕಾಚಾರವನ್ನೇ ಹಾಕಲಿದ್ದೀರಿ. ಇದನ್ನು ಮಾಡುವುದರಿಂದ ನನಗೇನು ಲಾಭ ಎಂಬ ಧೋರಣೆ ಇರಲಿದೆ. ನಿಮ್ಮ ಈ ಸ್ವಭಾವ ಸ್ನೇಹಿತರು ಅಥವಾ ಸಂಬಂಧಿಕರನ್ನು ಗೊಂದಲಕ್ಕೆ ಸಿಲುಕಿಸಲಿದೆ. ನಿಮ್ಮಲ್ಲಿ ಕೆಲವರಿಗೆ ಐಷಾರಾಮಿ ಕಾರು ಖರೀದಿ ಮಾಡುವಂಥ ಯೋಗ ಇದೆ. ಕೆಲವರು ಈ ದಿನ ಅಡ್ವಾನ್ಸ್ ನೀಡಿ ಬುಕ್ ಸಹ ಮಾಡುವ ಸಾಧ್ಯತೆಗಳಿವೆ.
ವಿದೇಶಗಳಲ್ಲಿನ ಪ್ರತಿಷ್ಠಿತ ಸಂಘ- ಸಂಸ್ಥೆಗಳಿಂದ ನಿಮ್ಮಲ್ಲಿ ಕೆಲವರಿಗೆ ಸನ್ಮಾನ- ಗೌರವ ಅಥವಾ ಹಣಕಾಸಿನ ಅನುದಾನಗಳು ದೊರೆಯುವ ಮಾಹಿತಿ ದೊರೆಯಲಿದೆ. ನಿಮ್ಮ ಸ್ಥಿರಾಸ್ತಿ ಪೈಕಿ ಕೆಲವನ್ನು ಮಾಡುವುದಕ್ಕೆ ಪ್ರಯತ್ನಿಸಲಿದ್ದೀರಿ. ಪರಿಸರ ಪ್ರೇಮಿಗಳು, ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವವರು, ಪ್ರಾಣಿ ದಯಾ ಸಂಘಗಳಲ್ಲಿ ಇರುವಂಥವರಿಗೆ ಪ್ರಮುಖವಾದ ದಿನ ಇದಾಗಿರುತ್ತದೆ. ಅದೆಷ್ಟೇ ಸಣ್ಣ ಕೆಲಸ ಅಂತಾದರೂ ಹೆಚ್ಚಿನ ಗಮನ ಇಟ್ಟು, ಮಾಡುವುದಕ್ಕೆ ಪ್ರಯತ್ನಿಸಿ. ಇತರರ ಪ್ರಭಾವಕ್ಕೆ ನೀವು ಒಳಗಾಗುವ ಸಾಧ್ಯತೆಗಳಿವೆ.
ನೀವು ನಂಬಿಕೆ ಇಟ್ಟುಕೊಂಡ ವ್ಯಕ್ತಿಗಳಿಂದ ದೊಡ್ಡ ಮಟ್ಟದ ಸಹಾಯಗಳು ಆಗಲಿವೆ. ಕೆಲವು ಹೊಸ ಪರಿಚಯಗಳಿಂದ ಪ್ರಭಾವದ ವ್ಯಾಪ್ತಿ ವಿಸ್ತರಣೆ ಆಗುವುದಕ್ಕೂ ಅನುಕೂಲ ಒದಗಿ ಬರಲಿದೆ. ನಿಮ್ಮಲ್ಲಿ ಕೆಲವರಿಗೆ ಈ ದಿನ ಆಭರಣಗಳನ್ನು ಖರೀದಿಸುವಂತಹ ಯೋಗ ಇದೆ. ಅದರಲ್ಲೂ ನೀವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಮೊತ್ತದ ಚಿನ್ನಾಭರಣ ಅಥವಾ ವಜ್ರಾಭರಣಗಳನ್ನು ಖರೀದಿ ಮಾಡಲಿದ್ದೀರಿ. ಚಿನ್ನದ ಚೀಟಿಯನ್ನು ಕಟ್ಟುವುದಕ್ಕೆ ಆರಂಭ ಮಾಡುವ ಅಥವಾ ಈಗಾಗಲೇ ಕಟ್ಟುತ್ತಿದ್ದಲ್ಲಿ ಇನ್ನೂ ಒಂದು ಹೆಚ್ಚುವರಿಯಾಗಿ ಆರಂಭಿಸುವ ಸಾಧ್ಯತೆಗಳಿವೆ.
ಬೇರೆಯವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ಬಹಳ ಮುಖ್ಯವಾಗಲಿದೆ. ಇನ್ನೊಂದು ಕಡೆ ನಿಮ್ಮ ಆರ್ಥಿಕ ಪರಿಸ್ಥಿತಿ ಚಿಂತೆಗೆ ಕಾರಣವಾಗಲಿದೆ. ಆದಾಯ ಹೆಚ್ಚಳ ಮಾಡಿಕೊಳ್ಳಬೇಕು ಎಂಬ ನಿಮ್ಮ ಪ್ರಯತ್ನಗಳು ಅಂದುಕೊಂಡಂತೆ ಫಲ ನೀಡದೆ ಗೊಂದಲಕ್ಕೆ ಗುರಿಯಾಗಲಿದ್ದೀರಿ. ಇತರರು ನಿಮಗೆ ಸಹಾಯ ಮಾಡುತ್ತಾರೆ ಎಂದುಕೊಂಡು ಯಾವುದೇ ದೊಡ್ಡ ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಬೇಡಿ. ಇನ್ನೂ ನಿಮ್ಮ ಕೈಗೆ ಸೇರದ ಹಣವನ್ನು ನೆಚ್ಚಿಕೊಂಡು ಯಾರಿಗೂ ಮಾತು ಕೊಡಲು ಹೋಗಬೇಡಿ. ಸಂಗಾತಿಯ ಸಲಹೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ.
ನಿಮಗೆ ಎಷ್ಟೇ ಆಪ್ತರು ಅಥವಾ ಹತ್ತಿರದವರೇ ಆದರೂ ಇತರರ ವೈಯಕ್ತಿಕ ವಿಚಾರಗಳಿಗೆ, ಪ್ರೀತಿ- ಪ್ರೇಮದ ಸಂಗತಿಗಳಿಗೆ ನೀವು ತಲೆ ಹಾಕಲು ಹೋಗಬೇಡಿ. ಒಂದು ವೇಳೆ ಮಧ್ಯಸ್ಥರಾಗಿ ನಿಮಗೆ ಆಹ್ವಾನ ನೀಡಿದರು ಸಹ ಅದನ್ನು ಒಪ್ಪಿಕೊಳ್ಳದೇ ಇರುವುದು ಒಳ್ಳೆಯದು. ಒಂದು ವೇಳೆ ನೀವೇ ಅತ್ಯುತ್ಸಾಹದಿಂದ ಯಾವುದಾದರೂ ಇಂಥ ವಿಚಾರಗಳಲ್ಲಿ ತೊಡಗಿಕೊಂಡಿರೋ ನಿಂದೆ ಆರೋಪಗಳಿಗೆ ಗುರಿಯಾಗುವುದು ನಿಶ್ಚಿತ. ಈ ಹಿಂದೆ ಯಾವಾಗಲೂ ಮಾಡಿದ್ದ ಹೂಡಿಕೆ, ಅದರಲ್ಲೂ ಭೂಮಿಗೆ ಸಂಬಂಧಪಟ್ಟಂತಹ ಹೂಡಿಕೆ ಇದ್ದಲ್ಲಿ ಅದನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆ ಆಲೋಚನೆ ಮಾಡಲಿದ್ದೀರಿ.
ನಿಮ್ಮ ಬಹು ದಿನಗಳ ಕನಸು ಸಾಕಾರ ಆಗುವಂಥ ಸುಳುಹು ನಿಮಗೆ ದೊರೆಯಲಿದೆ. ಇನ್ನು ವ್ಯಾಪಾರ, ವ್ಯವಹಾರ ಅಥವಾ ಉದ್ಯಮವನ್ನು ಆರಂಭಿಸುವ ಉದ್ದೇಶದಿಂದ ಹಣಕಾಸನ್ನು ಹೊಂದಾಣಿಕೆ ಮಾಡಲು ಪ್ರಯತ್ನ ಪಡುತ್ತಿರುವವರಿಗೆ ಈ ದಿನ ಒಳ್ಳೆ ಸುದ್ದಿ ಇದೆ. ಇಷ್ಟು ಸಮಯ ಒಂದು ವೇಳೆ ಕುಟುಂಬದ ಒಳಗಿಂದ ಏನಾದರೂ ವಿರೋಧಗಳು ಬರುತ್ತಿದ್ದಲ್ಲಿ ಅದಕ್ಕೆ ಈಗ ಅವರ ಸಹಕಾರ ದೊರೆಯಲಿದೆ. ವಿದೇಶಗಳಲ್ಲಿ ಉದ್ಯೋಗಕ್ಕೋ ಅಥವಾ ವ್ಯಾಸಂಗಕ್ಕೋ ಪ್ರಯತ್ನ ಪಡುತ್ತಾ ಇರುವವರಿಗೆ ನಿರೀಕ್ಷೆಯೇ ಮಾಡದ ರೀತಿಯಲ್ಲಿ ಸಹಾಯಗಳು ದೊರೆಯಲಿವೆ.
ಈ ದಿನ ನಿಮ್ಮ ಏಕಾಗ್ರತೆ- ಗಮನವೇ ಒಂದು ಬಗೆಯಲ್ಲಿ ವಿಚಿತ್ರವಾಗಿ ಇರಲಿದೆ. ಇತರರನ್ನು ಮೆಚ್ಚಿಸುವ ಪ್ರಯತ್ನದಲ್ಲಿ ಒತ್ತಡಕ್ಕೆ ಸಿಲುಕಿಕೊಳ್ಳಲಿದ್ದೀರಿ. ನಿಮ್ಮ ಬಳಿ ಇರುವ ಹಣಕ್ಕೆ ಮಾತ್ರ ಖರ್ಚನ್ನು ಪ್ಲಾನ್ ಮಾಡುವುದು ಉತ್ತಮ. ನೆನಪಿನಲ್ಲಿ ಇರಬೇಕಾದದ್ದು ಏನೆಂದರೆ, ಅದೆಷ್ಟೇ ಸಣ್ಣ ಕೆಲಸ ಅಂತಾದರೂ ನಿರೀಕ್ಷೆ ಮಾಡಿದ್ದಕ್ಕಿಂತ ಜಾಸ್ತಿ ಖರ್ಚು ಆಗಲಿದೆ. ಮನೆಯ ದುರಸ್ತಿ, ಕಚೇರಿ ನವೀಕರಣ, ವಾಹನಗಳನ್ನು ಸರ್ವೀಸ್ ಗೆ ಬಿಡುವುದು ಇಂಥ ಯಾವುದೇ ಕೆಲಸ ಆದರೂ ಎಷ್ಟು ಖರ್ಚು ಬರಬಹುದು ಎಂಬುದನ್ನು ಮೊದಲಿಗೇ ಲೆಕ್ಕ ಹಾಕಿಟ್ಟುಕೊಳ್ಳುವುದು ಮುಖ್ಯ.
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಸೌಭಾಗ್ಯ, ಕರಣ : ವಣಿಜ, ಸೂರ್ಯೋದಯ – 06 – 25 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:01 – 15:32 ಯಮಗಂಡ ಕಾಲ 09:26 – 07:57, ಗುಳಿಕ ಕಾಲ 09:28 – 10:59
ಮೇಷ ರಾಶಿ :
ನೀವು ತೆಗೆದುಕೊಳ್ಳುವ ನಿರ್ಣಯವು ಪೂರ್ಣ ಬೆಂಬಲದಿಂದ ಕೂಡಿರದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸುವುದು. ಅಸಾಧ್ಯವಾದುದನ್ನು ಸಾಧಿಸುವ ಭ್ರಮೆಯಿಂದ ಹೊರಬನ್ನಿ. ಅಹಂಕಾರ ಸುಳಿಯುವ ಸಾಧ್ಯತೆ ಇದೆ. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಮಕ್ಕಳ ವಿವಾಹ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ಮಾತನ್ನು ಚೆನ್ನಾಗಿ ಇಟ್ಟುಕೊಂಡು ವ್ಯವಹಾರವನ್ನು ಮುನ್ನಡೆಸುವಿರಿ.
ವೃಷಭ ರಾಶಿ :
ಕೃತಜ್ಞತೆಯನ್ನು ಬೆಳೆಸಿಕೊಳ್ಳುವುದು ನಿಮ್ಮ ವ್ಯಕ್ತಿತ್ವವನ್ನು ಬದಲಿಸಬಹುದು. ಪ್ರೇಮದಲ್ಲಿ ಹಿನ್ನಡೆಯಾಗಲಿದೆ. ತಾಳ್ಮೆಯಿಂದ ಮುಖ್ಯ ಆಯುಧವಾಗಿರಲಿ. ವಿದೇಶದ ಕನಸು ಸದ್ಯ ಸಾಕಾರವಾಗದು. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಉನ್ನತ ಅಭ್ಯಾಸದಿಂದ ಹಿಂದೇಟುಹಾಕುವ ಸ್ಥಿತಿ ಬರಬಹುದು. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಂಡು ಸಮಾಧಾನ ಪಡುವಿರಿ. ತುರ್ತು ಅವಶ್ಯಕತೆ ಇರುವುದು. ಇನ್ನೊಬ್ಬರ ಯೋಜನೆಯನ್ನು ನಿಮ್ಮದೆಂದು ಸಾಧಿಸುವಿರಿ.
ಮಿಥುನ ರಾಶಿ :
ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುವುದು. ವಿದ್ಯಾರ್ಥಿಗಳು ಅನಾರೋಗ್ಯದಿಂದ ವಿಶ್ರಾಂತಿ ಪಡೆಯಬೇಕಾಗಬಹುದು. ಅಧಿಕಾರಕ್ಕಾಗಿ ಯಾರನ್ನೂ ವಂಚಿಸಬಹುದು. ಸರಿಯಾದ ಹಂಚಿಕೊಂಡು ಕೆಲಸವನ್ನು ಮಾಡುವುದು ಸೂಕ್ತ. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಅಪರಿಚಿತರ ಜೊತೆ ಮಾತನಾಡಲು ಬಹಳ ಹಿಂಜರಿಕೆ ಇರುವುದು.
ಕರ್ಕಾಟಕ ರಾಶಿ :
ಅವಶ್ಯಕತೆ ಇರುವವರಿಗೆ ಬೇಕಾದ ಸಹಾಯವನ್ನು ಮಾಡಿ. ಇಂದಿನ ಕೆಲವು ಮಾತುಗಳು ನಿಮಗೆ ಇಷ್ಟವಾಗದೇ ಹೋಗುವುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ಮನೆಯ ಖರೀದಿಯ ಬಗ್ಗೆ ಉತ್ಸಾಹ ತೋರುವಿರಿ. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ಮನೆಯ ವಾತಾರಣದಲ್ಲಿ ಇರಲು ಖುಷಿಯಾಗುವುದು. ನಿಮ್ಮ ರಹಸ್ಯವನ್ನು ನೀವು ಗೊತ್ತಿಲ್ಲದೇ ಬೇರೆಯವರ ಜೊತೆ ಹಂಚಿಕೊಳ್ಳುವಿರಿ.
ಸಿಂಹ ರಾಶಿ :
ಊಹಿಸದೇ ಇರುವ ಕಡೆಯಿಂದ ನಿಮಗೆ ಬೇಕು ಎನಿಸಿದ ಸಂಪತ್ತು ದೊರೆಯುವುದು. ಸರ್ಕಾರೀ ಮೂಲದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ನೂತನ ಸ್ನೇಹವನ್ನು ಬೆಳೆಸಿಕೊಳ್ಳುವಿರಿ. ಆಕರ್ಷಕ ಮಾತಿಗೆ ಮನಸೋತು ಪ್ರೀತಿಯಲ್ಲಿ ಬೀಳುವಿರಿ. ನಿಮ್ಮನ್ನು ಅಧಿಕಾರದಲ್ಲಿ ಕುಳ್ಳಿರಿಸಲು ಮೇಲಧಿಕಾರಿಗಳು ಕಾಯುವರು.
ಕನ್ಯಾ ರಾಶಿ :
ಮುಖವನ್ನು ಗಂಟು ಹಾಕಿಕೊಂಡು ಇರುವುದರಿಂದ ನಿಮ್ಮಿಂದ ಜನರನ್ನು ದೂರವಿರಿಸುವುದು. ಅತಿಯಾದ ಆಡಂಬರವು ನಿಮಗೆ ಇಷ್ಟವಾಗದು. ಬೇಡವೆನಿಸಿದವರನ್ನು ನಿಧಾನವಾಗಿ ಗೊತ್ತಾಗದಂತೆ ಪಕ್ಕಕ್ಕೆ ಸರಿಸುವಿರಿ. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಉದ್ಯೋಗಕ್ಕೆ ವಿರಾಮ ಹೇಳಿ ಹೊರಗೆ ಸುತ್ತಾಟವನ್ನು ಮಾಡುವಿರಿ. ಎಲ್ಲ ಕಾರ್ಯವನ್ನೂ ನೀವೇ ಮಾಡಬೇಕು ಎಂಬ ಹೆಬ್ಬಯಕೆ ಬೇಡ. ಸಂತೋಷಕೂಟಕ್ಕೆ ಹಣವನ್ನು ಖರ್ಚು ಮಾಡಬೇಕಾದೀತು.
ತುಲಾ ರಾಶಿ :
ಇಂದು ನೀವು ತೋರಿಕೆಗೆ ಬಹಳ ಶಾಂತರಂತೆ ಕಂಡರೂ ಒಳಗೇ ಜ್ವಾಲಗ್ನಿಯಂತೆ ಕುದಿಯುವಿರಿ. ಎಲ್ಲ ವಿಚಾರದಲ್ಲಿಯೂ ಅಸಮಾಧನವು ಇರಲಿದೆ. ಪರರ ಅವಕಾಶವನ್ನು ನೋಡಿ ಮನಸ್ಸಿನಲ್ಲಿ ಸಂಕಟ. ಅತಿಯಾದ ಒತ್ತಡವು ನಿಮ್ಮ ದಕ್ಷತೆಯನ್ನು ಕಡಿಮೆ ಮಾಡುವುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಇಂದು ಖರೀದಿಸಿದ ಹೊಸ ವಸ್ತುಗಳು ನಿಮಗೆ ಬಹಳ ಖುಷಿಯನ್ನು ಕೊಡುವುದು. ವೃತ್ತಿಯಲ್ಲಿ ನಿಮ್ಮನ್ನು ಗುರುತಿಸಿರುವುದು ಮನಸ್ಸನ್ನು ಹಿಗ್ಗಿಸಿರುವುದು.
ವೃಶ್ಚಿಕ ರಾಶಿ :
ನಿಮ್ಮ ಕಾರ್ಯಕ್ಷಮತೆ ಕಡಿಮೆಯಾದಂತೆ ತೋರುವುದು. ಯಾವ ಹೊಸತನ್ನೂ ಸ್ವೀಕರಿಸುವ ಮಾನಸಿಕತೆ ಇಂದು ಇರದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಹೂಡಿಕೆಯನ್ನು ಹಿಂಪಡೆಯುವ ಸಾಧಿಸುವಿರಿ ಇದೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ.
ಧನು ರಾಶಿ :
ದುಡುಕಿನಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ಉದ್ಯಮಕ್ಕೆ ಸಂಬಂಧಿಸಿದ ಸರಿಯಾದ ನಿರ್ಧಾರವನ್ನು ಯಾರಿಂದಲಾದರೂ ಪಡಡಸುಕೊಳ್ಳಿ. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು. ಕಛೇರಿಯಲ್ಲಿ ನಿಮ್ಮ ಶ್ರಮಕ್ಕೆ ಮೆಚ್ಚುಗೆ ಉಂಟಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಹಿನ್ನಡೆ ಉಂಟಾಗಬಹುದು.
ಮಕರ ರಾಶಿ :
ಪತ್ರವ್ಯವಹಾರವು ಸಂಪೂರ್ಣ ಪ್ರಾಮಾಣಿಕವಾಗಿ ಇರದು ಎಂಬುದು ಗಮನದಲ್ಲಿ ಇರಲಿ. ನಿಮ್ಮ ಉದ್ಯೋಗವನ್ನು ನೀವು ಪ್ರೀತಿಸುವಿರಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಕುಟುಂಬದ ಜವಾಬ್ದಾರಿಯನ್ನು ಸಂಗಾತಿ ನೋಡಿಕೊಳ್ಳುವಂತೆ ಮಾಡುವಿರಿ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ. ಇವತ್ತಿಗೆ ತುರ್ತಾಗಿ ಬೇಕಾದುದನ್ನು ಸ್ನೇಹಿತರಿಂದ ಪಡೆದುಕೊಳ್ಳುವಿರಿ. ಪಕ್ಷಪಾತ ಮಾಡದೇ ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವ ಪ್ರಯತ್ನ ಮಾಡಿ.
ಕುಂಭ ರಾಶಿ :
ಇಂದು ಬಂಧುಗಳಿಂದ ನೀವು ದೂರವಾಗುವಿರಿ. ಸದಾ ಅನ್ಯರ ಬಗ್ಗೆ ಆಲೋಚನೆ ಮಾಡುವುದನ್ನು ಬಿಡಿ. ನೆರೆ ಹೊರೆಯವರ ವಿಚಾರದಲ್ಲಿ ಸಣ್ಣ ಅಸಮಾಧಾನ ಇರಲಿದೆ. ದೇಹಕ್ಕೆ ತೊಂದರೆ ಮಾಡಿಕೊಳ್ಳುವ ಸನ್ನಿವೇಶವಿರಲಿದೆ. ಮನೆಯ ಬದಲಾವಣೆಯನ್ನು ಮಾಡುವಿರಿ. ನಿಮ್ಮ ನಡಿಗೆಯೇ ವಿಶ್ವಾಸದಿಂದ ಇರುವುದನ್ನು ಹೇಳುತ್ತದೆ. ಇದರಿಂದ ಅಪಮಾನವು ಆಗುವುದು. ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಮಸ್ಯೆಯಾಗಬಹುದು. ಇಂದು ಭಯವು ಕಾಡಲಿದ್ದು ಮನೆಯನ್ನು ಬಿಟ್ಟು ಹೋಗಲಾರಿರಿ.
ಮೀನ ರಾಶಿ :
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆ ಆಗಲಿದ್ದು ಮನಸ್ಸು ಪ್ರೇಮದ ಕಾರಣಕ್ಕೆ ವಿಚಲಿತವಾಗಬಹುದು. ಮಿತ್ರರು ನಿಮಗೆ ಸಹಕಾರ ನೀಡಲಾರರು. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ವಿದ್ಯಾರ್ಥಿಗಳ ಕ್ರಿಯಾಶೀಲ ವ್ಯಕ್ತಿತ್ವದಿಂದ ಎಲ್ಲರ ಗಮನವನ್ನು ಸೆಳೆಯುವರು. ಇಂದಿನ ಹೂಡಕೆಯು ಲಾಭದಾಯಕವಾಗಿರುವುದು. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ಅತಿಯಾದ ಕಾರ್ಯಗಳಿಂದ ಏಕಾಂಗಿಯಾಗಿ ಇರಬೇಕು ಎಂದು ಅನ್ನಿಸಬಹುದು.
ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ್ದಾರೆ. ಅದರಿಂದಾಗಿ ಡಾರ್ಲಿಂಗ್ ಕೃಷ್ಣ ಗರಂ ಆಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹಲವು ವಿಷಯಗಳಿಗೆ ಪ್ರತಿಕ್ರಿಯಿಸಿದರು. ‘ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಆರೋಪದಲ್ಲಿ ಲಾಜಿಕ್ ಇಲ್ಲ. ಚಿತ್ರಕತೆ, ಡೈಲಾಗ್ ಅಥವಾ ಯಾವುದೇ ಸೀನ್ ಕೂಡ ಕಾಪಿ ಆಗಿಲ್ಲ ಅಂತ ಅವರೇ ಹೇಳಿದ್ದಾರೆ. ಮತ್ತೆ ಯಾಕೆ ಬಂದಿದ್ದಾರೆ? ಸೋಶಿಯಲ್ ಮೀಡಿಯಾದಲ್ಲಿ, ಗೂಗಲ್ನಲ್ಲಿ ಸಿಗುವ ಕಥೆಯನ್ನು ಇಟ್ಟುಕೊಂಡು ಬಂದು ಇದು ತಮ್ಮ ಕಥೆ ಅಂತ ಹೇಳುತ್ತಿದ್ದಾರಲ್ಲ. ಇವರಿಗೆ ಕಾಮನ್ ಸೆನ್ಸ್ ಏನಾದರೂ ಇದೆಯಾ?’ ಎಂದು ಡಾರ್ಲಿಂಗ್ ಕೃಷ್ಣ (Darling Krishna) ಅವರು ಖಡಕ್ ಆಗಿ ಪ್ರಶ್ನಿಸಿದ್ದಾರೆ.