Headlines

nagaraj11081993

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು

ನೆಲಮಂಗಲ, ಮೇ 31: ಕಳೆದ ಎರಡು ದಿನಗಳಿಂದ ನಿರಂತರ ಮಳೆಗೆ (Rain) ಅವಘಡವೊಂದು ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಬೊಮ್ಮಶಟ್ಟಿಹಳ್ಳಿಯಲ್ಲಿ ದ್ಯಾಮಪ್ಪ ಮತ್ತು ಬಾಬುಲಾಲ್ ಮೃತರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕರ ಸಾವು ಕಳೆದ 2 ದಿನಗಳಿಂದ ನಿರಂತರ ಮಳೆಗೆ ಕುಸಿದ ಗೋಡೆ ನಡೆದಿದ್ದೇನು?…

Read More

ಬೆಂಗಳೂರಿನಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ; ಸಾರ್ವಜನಿಕರ ಆಕ್ರೋಶ!

ವಿಐಪಿ ಸಂಸ್ಕೃತಿ , ರಾಜ್ಯಪಾಲರ ಸಂಚಾರ ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ವಿಐಪಿ ಸಂಸ್ಕೃತಿ ಮತ್ತು ಅಧಿಕಾರಿಗಳ ಭದ್ರತೆಯ ಹೆಸರಿನಲ್ಲಿ ಸಾಮಾನ್ಯ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುವ ಘಟನೆಗಳು ನಿಲ್ಲುವಂತೆ ಕಾಣುತ್ತಿಲ್ಲ. ಈಗಾಗಲೇ ಅಂಡರ್‌ಪಾಸ್ ನಿರ್ಮಾಣ ಕಾರ್ಯದಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ನರಕಸದೃಶ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ…

Read More

ಸಿಎಂ ಆಗಿ ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​

ಬೆಂಗಳೂರು, ಮೇ 31: ಜೂನ್​ 3ರಂದು ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್​​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಇದೇ ದಿನದಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲು ಡಿಕೆ ಶಿವಕುಮಾರ್​​ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆಯನ್ನು ಆಯೋಜಿಸಲು ಸಿದ್ಧತೆಗಳು ನಡೆದಿವೆ. ಇನ್ನು ಪ್ರಮಾಣ ವಚನ ಸಮಾರಂಭಕ್ಕೆ ಎಲ್ಲ…

Read More

RCB vs GT Final: ಫೈನಲ್ ಪಂದ್ಯದಲ್ಲೂ ಆರ್​ಸಿಬಿಗೆ ಮೋಸ; 3ನೇ ಅಂಪೈರ್ ವಿರುದ್ಧ ಫ್ಯಾನ್ಸ್ ಆಕ್ರೋಶ

ಪ್ರತಿ ಐಪಿಎಲ್​ನಂತೆ ಈ ಬಾರಿಯ ಐಪಿಎಲ್ ಕೂಡ ವಿವಾದಗಳಿಂದ ಹೊರತಾಗಿರಲಿಲ್ಲ. ಈ ಆವೃತ್ತಿಯಲ್ಲೂ ಸಾಕಷ್ಟು ವಿವಾದಗಳು ಸೃಷ್ಟಿಯಾದವು. ಅದರಲ್ಲೂ ಮೂರನೇ ಅಂಪೈರ್​ ನೀಡಿದ ಕೆಲವೊಂದು ತೀರ್ಪುಗಳು ಹಲವರ ಅಸಮಾಧಾನಕ್ಕೆ ಕಾರಣವಾಗಿದ್ದವು. ಅದರಲ್ಲಿ ಪ್ರಮುಖವಾದದ್ದು, ಲೀಗ್ ಹಂತದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ನೀಡಿದ ಕ್ಯಾಚ್ ಅನ್ನು ಜೇಸನ್ ಹೊಲ್ಡರ್ ಹಿಡಿದ ರೀತಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಚೆಂಡು ಸ್ಪಷ್ಟವಾಗಿ ನೆಲಕ್ಕೆ ತಾಗಿದರೂ ಮೂರನೇ ಅಂಪೈರ್ ಅದನ್ನು ಔಟೆಂದು ತೀರ್ಪು ನೀಡಿದ್ದರು….

Read More

IPL 2026 Orange Cap: ಆರೆಂಜ್ ಕ್ಯಾಪ್ ಗೆದ್ದ 15 ವರ್ಷದ ವೈಭವ್ ಸೂರ್ಯವಂಶಿ

ಐಪಿಎಲ್ 2026 ರ ಫೈನಲ್ ಪಂದ್ಯ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಈ ಫೈನಲ್ ಪಂದ್ಯ ಮುಗಿಯುವುದಕ್ಕೆ ಮುನ್ನವೇ ಈ ಬಾರಿಯ ಆರೆಂಜ್ ಕ್ಯಾಚ್ ಯಾರ ಪಾಲಾಗಿದೆ ಎಂಬುದು ಖಚಿತವಾಗಿದೆ. ವಾಸ್ತವವಾಗಿ ಎಲ್ಲರಿಗೂ ತಿಳಿದಿರುವಂತೆ ಇಡೀ ಆವೃತ್ತಿಯಲ್ಲಿ ಯಾರು ಅತ್ಯಧಿಕ ರನ್ ಕಲೆಹಾಕುತ್ತಾರೋ ಅವರಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಈ ಆರೆಂಜ್ ಕ್ಯಾಪ್ ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಅಗ್ರಸ್ಥಾನದಲ್ಲಿದ್ದರು. ಆದಾಗ್ಯೂ ಅದರ ನಂತರದ ಎರಡು ಸ್ಥಾನಗಳಲ್ಲಿ ಗುಜರಾತ್ ತಂಡದ ಶುಭ್​ಮನ್…

Read More

ಬಾಲಸುಬ್ರಹ್ಮಣ್ಯಂ ನಟನೆಯ ಸುಂದರ ತೆಲುಗು ಸಿನಿಮಾ ಕನ್ನಡದಲ್ಲೂ ಬಿಡುಗಡೆ

ಭಾರತೀಯ ಸಿನಿಮಾ ಸಂಗೀತ ಲೋಕದ ಅತ್ಯುತ್ತಮ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ (sp balasubrahmanyam) ಅತ್ಯದ್ಭುತ ಗಾಯಕರಾಗಿದ್ದ ಜೊತೆಗೆ ಅದ್ಭುತ ನಟರೂ ಆಗಿದ್ದರು. ಅವರು ಕನ್ನಡದಲ್ಲಿ ‘ಮುದ್ದಿನ ಮಾವ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ಪರಭಾಷೆಯ ಕೆಲ ಸಿನಿಮಾಗಳಲ್ಲೂ ಅವರು ನಟಿಸಿದ್ದರು. ಬಾಲಸುಬ್ರಹ್ಮಣ್ಯಂ ಸಾಮಾನ್ಯವಾಗಿ ಅಮಾಯಕ, ಮುಗ್ಧ ವ್ಯಕ್ತಿಯ ಪಾತ್ರದಲ್ಲಿ ನಟಿಸುತ್ತಿದ್ದರು. ಅವರು ನಟಿಸಿದ ಹಲವು ಸಿನಿಮಾಗಳು ಹಿಟ್ ಆಗಿರುವುದು ಮಾತ್ರವಲ್ಲ ಅವರ ಪಾತ್ರವೂ ಜನಪ್ರಿಯತೆ ಗಳಿಸಿವೆ. ಆದರೆ ಎಸ್​​ಪಿಬಿ ಅವರು ನಿಧನ ಹೊಂದುವುದಕ್ಕೆ ಮುಂಚೆ…

Read More

RCB vs GT Final: ಪವರ್​ ಪ್ಲೇನಲ್ಲೇ ಗುಜರಾತ್ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಆರ್​ಸಿಬಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ತಂಡ ಪವರ್​​ಪ್ಲೇನಲ್ಲೇ ಅಂದರೆ ಮೊದಲ 6 ಓವರ್​​ಗಳಲ್ಲೇ ತನ್ನ ಬ್ಯಾಟಿಂಗ್‌ ಆಧಾರಸ್ತಂಭಗಳಾಗಿದ್ದ ನಾಯಕ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಅವರ ವಿಕೆಟ್ ಕಳೆದುಕೊಂಡಿದೆ. ಈ ಎರಡು ವಿಕೆಟ್​ಗಳು ಕೇವಲ 26 ರನ್​ಗಳಿಗೆ…

Read More

ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ಪೋಸ್ಟ್; ಇಬ್ಬರು ಅಡ್ಮಿನ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ, ಮೇ 31: ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಸಚಿವ ಸತೀಶ್ ಜಾರಕಿಹೊಳಿ‌ (Satish Jarkiholi) ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ವದಂತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎರಡು ಫೇಸ್‌ಬುಕ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಬೆಳಗಾವಿ (belagavi) ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್ ಪೋಸ್ಟ್ ಹರಿಬಿಟ್ಟ ಕಿಡಿಗೇಡಿಗಳು ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಂದ FIR ಸತೀಶ್ ಜಾರಕಿಹೊಳಿ ಬೆಂಗಲಿಗರಿಂದ ದೂರು…

Read More

Video: ಬೇಸಿಗೆ ರಜೆ ಮುಗಿಸಿ ಅಜ್ಜಿ ಮನೆಯಿಂದ ಹೊರಟ ಮೊಮ್ಮಗನನ್ನು ಕಂಡು ಭಾವುಕರಾದ ಅಜ್ಜಿ 

ಅಜ್ಜಿ ಮನೆ ಎಂದರೆ ಎಲ್ಲಾ ಮೊಮ್ಮಕ್ಕಳಿಗೂ (grandchildren) ಸ್ವರ್ಗ. ಬಾಲ್ಯದ ಸುಂದರ ಬೇಸಿಗೆ ನೆನಪುಗಳು ಬೆಸೆದುಕೊಂಡಿರುವುದು ಅದೇ ಮನೆಯಲ್ಲಿ. ಬೇಸಿಗೆ ರಜೆ (summer vacation) ಶುರುವಾಗುತ್ತಿದ್ದಂತೆ ಯಾವಾಗ ಅಜ್ಜಿ ಮನೆಗೆ ಹೋಗುತ್ತೇನೆ ಎಂದು ಅದೆಷ್ಟೋ ಮಕ್ಕಳು ಕಾಯುತ್ತಾರೆ. ಅಜ್ಜಿಯ ಮಡಿಲಲ್ಲಿ ಮಲಗಿ ಕಥೆಗಳನ್ನು ಕೇಳುವುದು, ಅಜ್ಜನ ಜತೆಗೆ ಊರು ಸುತ್ತುವುದು ಇಂತಹ ನೆನಪುಗಳು ಒಂದೆರಡಲ್ಲ. ಹಳ್ಳಿಗಳಲ್ಲಿನ ಅಜ್ಜಿ ಮನೆಯ ಅನುಭವವು ಇಂದಿಗೂ ಅಷ್ಟೇ ಅಮೂಲ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬೇಸಿಗೆ ರಜೆ ಮುಗಿಸಿ ತನ್ನ ಮನೆಗೆ…

Read More

ಐದು ರಾಜ್ಯಗಳಲ್ಲಿ ಹೊಸ ಸರ್ಕಾರ; ವೇಗವಾಗಿ ಪಿಕಪ್ ಆದವೆಷ್ಟು, ಆಕ್ಸಲರೇಟರ್ ಆಗದ ಸರ್ಕಾರಗಳೆಷ್ಟು?

ಈ ವರ್ಷದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ, ಸೇರಿ ಐದು ಕಡೆ ವಿಧಾನಸಭಾ ಚುನಾವಣೆಗಳು (Five states assembly elections 2026) ನಡೆದಿದ್ದವು. ಕೇರಳದಿಂದ ಹಿಡಿದು ಅಸ್ಸಾಮ್​ವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಕೂಟ ಮೂರರಲ್ಲಿ ವಿಕ್ರಮ ಸಾಧಿಸಿದೆ. ಚುನಾವಣೆಗಳ ನಂತರ ಹೊಸದಾಗಿ ರಚನೆಯಾದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಮೊದಲ 15 ದಿನಗಳ ಪ್ರಮುಖ ಅಂಶಗಳ ವಿವರವಾದ ಮಾಹಿತಿ ಇಲ್ಲಿದೆ. 1. ಕೇರಳ (ಯುಡಿಎಫ್ ಸರ್ಕಾರ) ಮುಖ್ಯಮಂತ್ರಿ: ವಿ.ಡಿ. ಸತೀಶನ್…

Read More