nagaraj11081993

Daily Devotional: ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಕಟ್ಟುವಾಗ ಅಡಿಪಾಯ ಯಾವ ದಿನ ಕಾಕಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯ ಪ್ರಕಾರ, ಮನೆಯ ನಿರ್ಮಾಣ ಕಾರ್ಯವನ್ನು (ಗೃಹಾರಂಭ) ಪ್ರಾರಂಭಿಸುವ ಸಮಯ ಬಹಳ ಮಹತ್ವಪೂರ್ಣವಾಗಿದೆ. ಸರಿಯಾದ ಮಾಸದಲ್ಲಿ ಗೃಹಾರಂಭ ಮಾಡಿದರೆ ಅದು ನಿರ್ವಿಘ್ನವಾಗಿ ಪೂರ್ಣಗೊಂಡು ಮನೆ ನಿವಾಸಿಗಳಿಗೆ ಶುಭ ಫಲ ನೀಡುತ್ತದೆ. ವೈಶಾಖ, ಫಾಲ್ಗುಣ, ಶ್ರಾವಣ ಮತ್ತು ಮಾಘ ಮಾಸಗಳು ಗೃಹಾರಂಭಕ್ಕೆ ಅತ್ಯಂತ ಶುಭಕರ ಎಂದು ಬಾದರಾಯಣರು ತಮ್ಮ ಗ್ರಂಥಗಳಲ್ಲಿ ಹೇಳಿದ್ದಾರೆ. ನಾರದ ಮಹರ್ಷಿಗಳು ಪುಷ್ಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ

ಮೇಷ ರಾಶಿ : ನಿರಂತರ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲವು ದೌರ್ಬಲ್ಯವನ್ನು ಪ್ರಯತ್ನಪೂರ್ವಕವಾಗಿ ಬಿಡಬೇಕಾಗಬಹುದು. ನಿಮ್ಮ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಸಂಗಾತಿಯ ಜೊತೆ ಆರ್ಥಿಕತೆಯ ಬಗ್ಗೆ ವಾಗ್ವಾದ ಮಾಡುವಿರಿ. ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗದೆ ಬೇಸರವಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ವೃಷಭ ರಾಶಿ : ಇಂದು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು….

Read More

KKR vs SRH: ಕೆಕೆಆರ್​ಗೆ ಸತತ ಎರಡನೇ ಸೋಲು; ಗೆಲುವಿನ ಖಾತೆ ತೆರೆದ ಸನ್‌ರೈಸರ್ಸ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯವನ್ನು ಗೆಲ್ಲು ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ 2026 ರಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಉತ್ತಮ ಆರಂಭದ ಹೊರತಾಗಿಯೂ 65 ರನ್​​ಗಳ ಹೀನಾಯ ಸೋಲುಂಡು ಲೀಗ್​ನಲ್ಲಿ ಸತತ ಎರಡನೇ ಸೋಲನ್ನು ಅನುಭವಿಸಿತು. 226 ರನ್ ಕಲೆಹಾಕಿದ…

Read More

ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ

ಸತ್ಯ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ (Boss Movie) ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ನಟ ದರ್ಶನ್ (Darshan) ಅವರ ಜೀವನದ ಘಟನೆಗಳಿಗೂ ಸಾಮ್ಯತೆ ಕಾಣಿಸಿದೆ ಎಂಬ ಆರೋಪ ಇದೆ. ಆ ಬಗ್ಗೆ ನಿರ್ದೇಶಕರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ‘ನಮ್ಮ ಸಿನಿಮಾಗೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ. ಯಾರ ಪ್ರಭಾವಕ್ಕೂ ಒಳಗಾಗದೇ ಕಾನೂನಿನ ಪ್ರಕಾರ ಯು/ಎ ಪ್ರಮಾಣಪತ್ರ ನೀಡಲಾಗಿದೆ. ಸ್ಪಷ್ಟವಾಗಿ ನಾನು ಹೇಳುತ್ತೇನೆ.. ಇದು ಪ್ರತಿ ದಿನ…

Read More

ಕರ್ನಾಟಕ ಸರ್ಕಾರಕ್ಕೆ ‘EV’ ಅಂದ್ರ ಅಲರ್ಜಿ: ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆಗೆ ಜೋಶಿ ಕಿಡಿ

ನವದೆಹಲಿ, (ಏಪ್ರಿಲ್ 02): ಕರ್ನಾಟಕ ಸರ್ಕಾರ (Karnataka Government) EVM ಬದಲು ಬ್ಯಾಲೆಟ್ ಪೇಪರ್ ಬಳಸಿ ತಂತ್ರಜ್ಞಾನದಿಂದ ದೂರ ಸರಿದ ಬೆನ್ನಲ್ಲೇ ಇದೀಗ “EVಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದು ಲೈಫ್‌ಟೈಮ್ ರಸ್ತೆ ತೆರಿಗೆ ವಿಧಿಸುತ್ತಿರುವುದು ಸುಧಾರಣೆಯಿಂದ ಮತ್ತೊಂದು ಹೆಜ್ಜೆ ಹಿಂದೆ ಹೋದಂತಿದೆ” ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Union Minister pralhad joshi)  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಈ ಮೂಲಕ EV ನೀತಿಗೆ ಭಾರೀ ಯು-ಟರ್ನ್…

Read More

ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ದೇವನಹಳ್ಳಿ, ಏಪ್ರಿಲ್​ 02: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತಿನ ಜಟಾಪಟಿಯೇ ನಡೆಯಿತು. ಇದೇ ವೇಳೆ ಸಚಿವರ ಎದುರೇ ವಿಷ ಕುಡಿಯುವುದಾಗಿ ರೈತರೊಬ್ಬರು ಹೇಳಿದ್ದಾರೆ. ದೇವನಹಳ್ಳಿಯ ಮುದಗುರ್ಕಿ ಗ್ರಾಮದ ನಿವಾಸಿ ಆಂಜಿನಪ್ಪ ಸಭೆಗೆ ವಿಷದ ಬಾಟಲ್ ತಂದಿದ್ದರು. 20 ಗುಂಟೆ ಜಮೀನು ವ್ಯಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಆರೋಪ…

Read More

ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ರಾಘವ್ ಚಡ್ಡಾ ವಿಡಿಯೋ ರಿಲೀಸ್

ನವದೆಹಲಿ, ಏಪ್ರಿಲ್ 2: ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಹುದ್ದೆಯಿಂದ ವಜಾಗೊಳಿಸಿದೆ. ಅವರನ್ನು ತೆಗೆದುಹಾಕುವಂತೆ ಕೋರಿ ಎಎಪಿ ರಾಜ್ಯಸಭಾ ಸಚಿವಾಲಯಕ್ಕೆ ಪತ್ರ ಬರೆದಿದೆ. ಎಎಪಿಯ ವತಿಯಿಂದ ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡುವ ಸಮಯವನ್ನು ನೀಡಬಾರದು ಎಂದು ಮನವಿ ಮಾಡಿದೆ. ಆದರೆ, ಈ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಪಕ್ಷ ಯಾವುದೇ ಮಾಹಿತಿ ನೀಡದಿರುವುದು ಕುತೂಹಲ ಮೂಡಿಸಿದೆ. ಇನ್ನೊಂದೆಡೆ ರಾಘವ್ ಚಡ್ಡಾ ಕೂಡ ಈ ಸುದ್ದಿಯ ಬಗ್ಗೆ…

Read More

KKR vs SRH Viral Moment: 4,4,6,6,4.. ಮೊದಲ ಓವರ್​ನಲ್ಲೇ ಅಬ್ಬರಿಸಿದ ಅಲೆನ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಕೆಕೆಆರ್ ತಂಡ, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಪರ ಆರಂಭಿಕ ಫಿನ್ ಅಲೆನ್ ಮೊದಲ ಓವರ್​ನಲ್ಲೇ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದು 25 ರನ್ ಕಲೆಹಾಕಿದರು. ಸನ್‌ರೈಸರ್ಸ್ ಪರ ಡೇವಿಡ್ ಪೇನ್ ಮೊದಲ ಓವರ್ ಬೌಲ್ ಮಾಡಿದರು. ಈ ಓವರ್​ನ ಮೊದಲ ಎಸೆತವನ್ನು ಎದುರಿಸಿದ…

Read More

ರಾಜ್ಯಸಭಾ ಸದಸ್ಯರಾಗಿ ಏ. 10ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ; ಏಪ್ರಿಲ್ ಮಧ್ಯದಲ್ಲಿ ಬಿಹಾರದಲ್ಲಿ ಹೊಸ ಸರ್ಕಾರ ರಚನೆ

ನವದೆಹಲಿ, ಏಪ್ರಿಲ್ 2: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ತಮ್ಮ ಪ್ರಸ್ತುತ ಹುದ್ದೆಯಿಂದ ಕೆಳಗಿಳಿಯುವ ಸಾಧ್ಯತೆಯಿದ್ದು, ರಾಜ್ಯಸಭೆಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. ನಿತೀಶ್ ಕುಮಾರ್ ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಏಪ್ರಿಲ್ 9ರಂದು ಪಾಟ್ನಾದಿಂದ ದೆಹಲಿಗೆ ಪ್ರಯಾಣಿಸಿ ದೆಹಲಿಯಲ್ಲಿ ಉಳಿಯಲಿದ್ದು, ಈ ಭೇಟಿಯ ಸಮಯದಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಪಾಟ್ನಾಗೆ ಹಿಂದಿರುಗಿದ ಸ್ವಲ್ಪ ಸಮಯದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ….

Read More

ಲೋಕಾಯುಕ್ತ ಭರ್ಜರಿ ಕಾರ್ಯಚರಣೆ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಲವು ಅಧಿಕಾರಿಗಳು

ಯಾದಗಿರಿ, ಏಪ್ರಿಲ್​ 02: ಗುತ್ತಿಗೆದಾರನಿಂದ ಲಂಚ (Bribe) ಸ್ವೀಕರಿಸುತ್ತಿದ್ದ ವೇಳೆ ಕೆಬಿಜೆಎನ್ಎಲ್ ಭೀಮರಾಯನಗುಡಿ ವಿಭಾಗದ ಎಇಇ ಮತ್ತು ಜೆಇ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಲೋಕಾಯುಕ್ತ ಡಿವೈಎಸ್​ಪಿ ಜೆ.ಹೆಚ್.ಇನಾಂದಾರ್ ನೇತೃತ್ವದಲ್ಲಿ ದಾಳಿ ಮಾಡಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಅಧಿಕಾರಿಗಳು ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಕಾಮಗಾರಿ ಬಿಲ್ ಮಂಜೂರು ಮಾಡಲು ಗುತ್ತಿಗೆದಾರ ಖಾಸಿಂ ಸಾಬ್​ನಿಂದ…

Read More