Headlines

nagaraj11081993

ಸೋತು ಸುಸ್ತಾಗಿದ್ದ ಸ್ಟಾರ್ ನಿರ್ದೇಶಕನಿಗೆ ಹೈಕೋರ್ಟ್​​ನಿಂದ ಶಾಕ್

ಗೌತಮ್ ವಾಸುದೇವ್ ಮೆನನ್ (Gautham Vasudev Menon), ತಮಿಳಿನಲ್ಲಿ ಸ್ಟಾರ್ ನಿರ್ದೇಶಕರಾಗಿ ಮೆರೆದವರು. ಅವರ ತಮಿಳು ನಿರ್ದೇಶಕರು ಮಾಸ್, ಮಸಾಲ, ತಲೆ-ಬುಡವಿಲ್ಲದ ಕಮರ್ಶಿಯಲ್ ಸಿನಿಮಾಗಳನ್ನು ಮಾಡುವಾಗ ಗೌತಮ್ ವಾಸುದೇವ್ ಮೆನನ್ ‘ಅಪ್ಪಟ ಸಿನಿಮಾ’ಗಳನ್ನು ಮಾಡಿ ಹಿಟ್ ಮೇಲೆ ಹಿಟ್ ಕೊಟ್ಟವರು. ತಮಿಳು ಚಿತ್ರರಂಗಕ್ಕೆ ಹೊಸ ಮಾದರಿಯನ್ನೇ ಹಾಕಿಕೊಟ್ಟವರು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಸೋಲಿನ ಮೇಲೆ ಸೋಲು ಗೌತಮ್​​ಗೆ ಎದುರಾಗಿದೆ. ತಮ್ಮ ಕಷ್ಟಗಳ ಬಗ್ಗೆ ಕೆಲವು ಸಂದರ್ಶನಗಳಲ್ಲಿ ಗೌತಮ್ ಹೇಳಿಕೊಂಡಿದ್ದಾರೆ ಸಹ. ಇದೀಗ ಹೈಕೋರ್ಟ್, ಗೌತಮ್ ಅವರಿಗೆ ಮತ್ತೊಂದು…

Read More

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ಬೆಂಗಳೂರು, ಮಾ.25: ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಪೂರ್ವಮುಂಗಾರು ಮಳೆ (Pre-monsoon showers) ತೀವ್ರಗೊಳ್ಳಲಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯ ಮುನ್ಸೂಚನೆಯೂ ಇದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಳೆಯ ಸಮಯದಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ಇರಲಿದ್ದು, ಮರಗಳು ಅಥವಾ…

Read More

IPL 2026: ಆರ್​ಸಿಬಿ, ಆರ್​ಆರ್ ಮಾರಾಟದಿಂದ ಬಿಸಿಸಿಐಗೆ ಹರಿದು ಬಂತು ಸಾವಿರ ಕೋಟಿಗೂ ಅಧಿಕ ಆದಾಯ

2026 ರ ಐಪಿಎಲ್ (IPL 2026) ಆರಂಭಕ್ಕೂ ಮುನ್ನ ಲೀಗ್​ನ ಎರಡು ಚಾಂಪಿಯನ್‌ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವನ್ನು ಕಾಲ್ ಸೊಮಾನಿ ನೇತೃತ್ವದ ಕನ್ಸಾರ್ಟಿಯಂ 15000 ಸಾವಿರ ಕೋಟಿ ರೂ.ಗೆ ಖರೀದಿ ಮಾಡಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ…

Read More

ಇರಾನ್‌ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಇರಾನ್ ಮೇಲೆ ಇಸ್ರೇಲ್ ದಾಳಿ (Israel Attack) ನಿಂತಿಲ್ಲ. ಇಂದು ಇರಾನ್​ನ ಬುಶೆಹ್ರ್ ಪರಮಾಣು ಸ್ಥಾವರದ ಬಳಿಯ ದಾಳಿ ಇರುವ ರಿಯಾಕ್ಟರ್ ಘಟಕದ ಬಳಿಗೆ ಇಸ್ರೇಲ್​ನ ಕ್ಷಿಪಣಿ ಬಂದು ಅಪ್ಪಳಿಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಕೂಡ ಇಸ್ರೇಲ್​ನ ಪವರ್ ಪ್ಲಾಂಟ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗಿದೆ. ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಇತ್ತೀಚೆಗೆ ನಡೆದ ದಾಳಿಯು ಕಾರ್ಯಾಚರಣಾ ರಿಯಾಕ್ಟರ್ ಘಟಕದ ಬಳಿಗೆ ಅಪ್ಪಳಿಸಿದೆ ಎಂದು ರಷ್ಯಾದ ರಾಜ್ಯ…

Read More

ದಾವಣಗೆರೆಯಲ್ಲಿ ಕಾಂಗ್ರೆಸ್​​ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು

ದಾವಣಗೆರೆ, (ಮಾರ್ಚ್ 25): ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere Byelection ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ…

Read More

ಕತೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ: ನಟ ಹೇಳಿದ್ದೇನು?

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿರುವ ‘ಲವ್ ಮಾಕ್ಟೆಲ್ 3’ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ‘ಧುರಂಧರ್ 2’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳ ಅಬ್ಬರದ ನಡುವೆಯೂ ಸಹ ‘ಲವ್ ಮಾಕ್ಟೆಲ್ 3’ ಯಶಸ್ಸು ಗಳಿಸುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ರಾಘವೆಂದ್ರ ನಾಯಕ್ ಅವರುಗಳು ಡಾರ್ಲಿಂಗ್ ಕೃಷ್ಣ ಅವರು ನಮ್ಮ ಕತೆ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಅಪ್ಪ-ಮಗಳ ಬಂಧದ ಬಗ್ಗೆ ಕತೆಯನ್ನು ‘ಲವ್ ಮಾಕ್ಟೆಲ್ 3’ ಸಿನಿಮಾ ಹೊಂದಿದ್ದು, ಸಿನಿಮಾದ ಕತೆಯನ್ನು…

Read More

KSRTC ಬಸ್ ಬ್ರೇಕ್ ಫೇಲ್; ಆಟೋ, ಹಣ್ಣಿನ ಅಂಗಡಿಗೆ ಡಿಕ್ಕಿ! ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ

ಬಳ್ಳಾರಿ, ಮಾ.25: ನಗರದ ಮೋತಿ ವೃತ್ತದ ಬಳಿ ಕೆಎಸ್ಆರ್ಟಿಸಿ ಸಾರಿಗೆ ಬಸ್ ಅಪಘಾತಕ್ಕೀಡಾಗಿದೆ. ಬಸ್‌ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಬಸ್ ವೇಗವಾಗಿ ಸಾಗಿ, ರಸ್ತೆ ಬದಿಯಲ್ಲಿದ್ದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ನಂತರ ಹಣ್ಣಿನ ಅಂಗಡಿ, ಟೀ ಅಂಗಡಿ ನುಗ್ಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಫ್ರೂಟ್ಸ್ ಅಂಗಡಿ ಸಂಪೂರ್ಣವಾಗಿ ಜಖಂಗೊಂಡಿದೆ. ಅಲ್ಲದೆ, ಅಪಘಾತಕ್ಕೆ ಸಿಲುಕಿದ ಆಟೋರಿಕ್ಷಾ ಕೂಡ ಜಖಂಗೊಂಡಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ…

Read More

Gold Rates: ಇಳಿಕೆಯ ಹಾದಿ ಬಿಟ್ಟ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

ಬೆಂಗಳೂರು, ಮಾರ್ಚ್ 25: ಸತತವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ ಸುಮಾರು 600 ರೂಗಳಷ್ಟು ಏರಿಕೆ ಪಡೆದಿದೆ. ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 13,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 15,000 ರೂ ಸಮೀಪಕ್ಕೆ ದೌಡಾಯಿಸಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಏರಿದರೆ, ಕೆಲವೆಡೆ ಇಳಿಮುಖವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆ ಆಗಿದೆ. ಒಂದು ಗ್ರಾಮ್​ಗೆ 15-20 ರೂಗಳಷ್ಟು ಬೆಲೆ ಜಿಗಿದಿದೆ. ಭಾರತದಲ್ಲಿ…

Read More

‘ನಮ್ಮದು ಧುರಂಧರ್ ರೀತಿ ವಯಸ್ಕರ ಸಿನಿಮಾ ಅಲ್ಲ’: ಅಕ್ಷಯ್ ಕುಮಾರ್ ಹೀಗೆ ಹೇಳಿದ್ದು ಯಾಕೆ?

ಬಾಲಿವುಡ್‌ನಲ್ಲಿ ಸದ್ಯ ಆ್ಯಕ್ಷನ್ ಸಿನಿಮಾಗಳದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಮತ್ತು ಅದರ ಸೀಕ್ವೆಲ್ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿವೆ. ಇಂತಹ ಅಬ್ಬರದ ಆ್ಯಕ್ಷನ್ ಸಿನಿಮಾಗಳ ನಡುವೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲ’ (Bhooth Bangla) ಚಿತ್ರ ಯಾವ ರೀತಿ ವಿಭಿನ್ನವಾಗಿರಲಿದೆ ಎಂಬುದನ್ನು ಸ್ವತಃ ಅಕ್ಷಯ್ ವಿವರಿಸಿದ್ದಾರೆ. ‘ನಮ್ಮದು ಧುರಂಧರ್ ರೀತಿ ಅಡಲ್ಟ್ ಸಿನಿಮಾ ಅಲ್ಲ’ ಎಂದು ಅಕ್ಷಯ್ ಕುಮಾರ್…

Read More

‘ಮ್ಯಾಕ್ಸ್’ ಸಿನಿಮಾ ವಿವಾದ: ಕೆಆರ್​​ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್

ನಟ ಕಿಚ್ಚ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ಸಿನಿಮಾಕ್ಕೆ ತಮಿಳಿನ ನಿರ್ಮಾಪಕ ಕಲೈಪುಲಿ ಎಸ್ ತನು ಮತ್ತು ಕಿಚ್ಚ ಸುದೀಪ್ ಇಬ್ಬರೂ ಬಂಡವಾಳ ಹೂಡಿದ್ದರು. ಸಿನಿಮಾವನ್ನು ವಿತರಣೆ ಮಾಡಿದ್ದು ಕೆಆರ್​​ಜಿ ಸ್ಟುಡಿಯೋಸ್. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ಮಾಪಕರು ಮತ್ತು ಕೆಆರ್​​ಜಿ ನಡುವೆ ಹಣಕಾಸಿಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದ್ದು, ನಿರ್ಮಾಪಕ ಕಲೈಪುಲಿ ತನು ಅವರು ಕೆಆರ್​​​ಜಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ…

Read More