Headlines

nagaraj11081993

ಲ್ಯಾಂಬೋರ್ಗಿನಿ ಕಾರು ಜಪ್ತಿ ಮಾಡಿದ ಸಾರಿಗೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್: 1 ವಾರದಲ್ಲಿ ಕಾರು ಹಿಂದಿರುಗಿಸಿ

ಬೆಂಗಳೂರು, ಮಾ.24: ಮನೆಯ ಕಾರಿನ ಶೆಡ್​​​​ನಲ್ಲಿದ್ದ ವಿಲಾಸಿ ಲ್ಯಾಂಬೋರ್ಗಿನಿ ಕಾರನ್ನು ಕಾನೂನು ಬಾಹಿರವಾಗಿ ಜಪ್ತಿ ಮಾಡಿದ್ದ ಸಾರಿಗೆ ಇಲಾಖೆಯ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿರುವ ನ್ಯಾಯಾಲಯ, ಒಂದು ವಾರದಲ್ಲಿ ಕಾರನ್ನು ಮಾಲೀಕರಿಗೆ ಹಿಂದಿರುಗಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ. ರಾತ್ರಿ ವೇಳೆಯಲ್ಲಿ ಅರ್ಜಿದಾರರ ಮನೆಯ ಕಾರಿನ ಶೆಡ್​​​ಗೆ ನುಗ್ಗಿ ಕಾರನ್ನು ಸೀಜ್ ಮಾಡಿದ ವಿಧಾನವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು…

Read More

ವಾರಣಾಸಿಯನ್ನೇ ಮರುಸೃಷ್ಟಿಸಿದ ರಾಜಮೌಳಿ; ಫೋಟೋ ವೈರಲ್

ಮಹೇಶ್ ಬಾಬು ಹಾಗೂ ಎಸ್​​ಎಸ್​ ರಾಜಮೌಳಿ ಒಟ್ಟಾಗಿ ‘ವಾರಣಾಸಿ’ (Varanasi) ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರ್ದೇಶಕರು ಬಿಟ್ಟುಕೊಟ್ಟಿಲ್ಲ. ಈಗ ಹೈದರಾಬಾದ್​ ಅಲ್ಲಿ ಅವರು ವಾರಣಾಸಿ ನಗರವನ್ನೇ ಧರೆಗಿಳಿಸಿದ್ದಾರೆ. ಅಲ್ಲಿ ಸಿನಿಮಾದ ಶೂಟ್ ಮಾಡಲಾಗುತ್ತಿದೆ. ತುಂಬಾನೇ ಕಟ್ಟುನಿಟ್ಟಾಗಿ ಸಿನಿಮಾ ಮಾಡಲಾಗುತ್ತಿದೆ. ಕಠಿಣ ನಿಯಮಕ್ಕೆ ಈ ಹಿಂದೆ ರಾಜಮೌಳಿ ಮಾಡಿದ ತಪ್ಪೇ ಕಾರಣ ಎಂದು ಹೇಳಲಾಗುತ್ತಿದೆ. ರಾಜಮೌಳಿ ಅವರು ಎಲ್ಲಾ ವಿಷಯಗಳನ್ನು ಗುಟ್ಟಾಗಿ ಇಡಲು ಇಷ್ಟಪಡುತ್ತಾರೆ. ಯಾವುದೇ ಘೋಷಣೆ ಇದ್ದರೂ ಅದನ್ನು ಸರಿಯಾದ…

Read More

ಅವಧಿಗೂ ಮುನ್ನವೇ ಫೋಟೋ ಶೂಟ್ ಬಗ್ಗೆ ಭಾರೀ ಚರ್ಚೆ: ಸಿಎಂ ಬದಲಾವಣೆಯೋ? ಸ್ಪೀಕರ್ ಚೇಂಜ್? ಸಂಪುಟ ಪುನರ್ ರಚನೆಯೋ?

ಬೆಂಗಳೂರು, (ಮಾರ್ಚ್ 25): ಸರ್ಕಾರದ (Karnataka Government) ಅವಧಿ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ವಿಧಾನಸೌಧದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ (MLAs Group photoshoot) ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾಕಂದ್ರೆ, ಸಾಮಾನ್ಯವಾಗಿ ವಿಧಾನಸಭೆ ಅವಧಿ ಮುಕ್ತಾಯಗೊಳ್ಳುವ ಸಂದರ್ಭದಲ್ಲಿ ಸ್ಪೀಕರ್ ಸಮ್ಮುಖದಲ್ಲಿ ಶಾಸಕರ ಗ್ರೂಪ್ ಫೋಟೋ ತೆಗೆದುಕೊಳ್ಳುವುದು ಸಂಪ್ರದಾಯವಾಗಿದೆ. ಆದ್ರೆ, ಅವಧಿಗೂ ಮುನ್ನವೇ ಸ್ಫೀಕರ್ ಯುಟಿ ಖಾದರ್,  (UT Khader)ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಶಾಸಕರ ಫೋಟೋ ಶೂಟ್ ಮಾಡಿಸಿರುವುದು ಅನುಮಾನಗಳಿಗೆ…

Read More

ಮ್ಯೂಚುವಲ್ ಫಂಡ್​ಗಳನ್ನು ಉಡುಗೊರೆಯಾಗಿ ನೀಡಬೇಕಾ? ಸೆಬಿ ಮುಂದಿದೆ ಹೊಸ ಪ್ಲಾನ್

ನವದೆಹಲಿ, ಮಾರ್ಚ್ 25: ಮ್ಯೂಚುವಲ್ ಫಂಡ್​ಗಳಲ್ಲಿ (Mutual Funds) ಹೂಡಿಕೆ ಮಾಡಬಹುದಾದಂತಹ ಗಿಫ್ಟ್ ಕಾರ್ಡ್ ಅಥವಾ ಗಿಫ್ಟ್ ಪಿಪಿಐ (PPI- Pre Paid Instrument) ಅನ್ನು ಹೊರತರಲು ಸೆಬಿ ಯೋಜಿಸಿದೆ. ಪಿಪಿಐ ಎಂಬುದು ಒಂದು ರೀತಿಯಲ್ಲಿ ಪ್ರೀಪೇಡ್ ಕಾರ್ಡ್. ಈ ಪ್ರೀಪೇಡ್ ಕಾರ್ಡ್ ಬಳಸಿ ಮ್ಯುಚುವಲ್ ಫಂಡ್​ನಲ್ಲಿ ಹೂಡಿಕೆ ಮಾಡಲು ಅವಕಾಶ ಇರುತ್ತದೆ. ಯಾರು, ಯಾರಿಗೆ ಬೇಕಾದರೂ ಈ ಮ್ಯೂಚುವಲ್ ಫಂಡ್ ಗಿಫ್ಟ್ ಕಾರ್ಡ್ ಕೊಡಬಹುದು. ಮ್ಯೂಚುವಲ್ ಫಂಡ್ ಗಿಫ್ಟ್ ಕಾರ್ಡ್ ಹೇಗೆ ಕೆಲಸ ಮಾಡುತ್ತದೆ? ಯಾವುದೇ…

Read More

ಐಪಿಎಲ್​ನಲ್ಲಿ 30 ಲಕ್ಷಕ್ಕೆ ಮಾರಾಟವಾಗಿದ್ದವ ಈಗ 16 ಸಾವಿರ ಕೋಟಿ ಮೌಲ್ಯದ ಆರ್​ಸಿಬಿಗೆ ಅಧ್ಯಕ್ಷ

2026 ರ ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಕೈಸೇರಿದೆ. 2008 ರಿಂದ ಐಪಿಎಲ್‌ನಲ್ಲಿ ಆಡುತ್ತ ಬಂದಿರುವ ಆರ್​ಸಿಬಿ ಇದುವರೆಗೆ ಒಮ್ಮೆ ಮಾತ್ರ ಚಾಂಪಿಯನ್ ಆಗಿದೆ, ಅದು ಕಳೆದ ಆವೃತ್ತಿಯಲ್ಲಿ. ಅಂದರೆ ಸತತ 18 ವರ್ಷಗಳ ಕಾಯುವಿಕೆಯ ಬಳಿಕ ಏಕೈಕ ಟ್ರೋಫಿ ಗೆದ್ದಿರುವ ಆರ್​ಸಿಬಿ, ಇದೀಗ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. ಇಲ್ಲಿ ಅಚ್ಚರಿಯ ಸಂಗತಿ ಏನೆಂದರೆ ಒಂದು ಕಾಲದಲ್ಲಿ ಇದೇ ಐಪಿಎಲ್ ಹರಾಜಿನಲ್ಲಿ ಭಾಗವಹಿಸಿ ಕೇವಲ 30 ಲಕ್ಷ ರೂ. ಮೂಲ…

Read More

ಅಪ್ರಾಪ್ತರ ಮದ್ಯಪಾನಕ್ಕೆ ಹೈಕೋರ್ಟ್ ಬ್ರೇಕ್! ವಯಸ್ಸಿನ ಪರೀಕ್ಷೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಯಾರಿಗೆ ಶಿಕ್ಷೆ?

ಬೆಂಗಳೂರು, ಮಾ.25: ಪಬ್ ಮತ್ತು ಬ್ರೀವರಿಗಳಲ್ಲಿ ಅಪ್ರಾಪ್ತರು ಮದ್ಯಪಾನ ಮಾಡುವ ಪ್ರವೃತ್ತಿಗೆ ಕರ್ನಾಟಕ ಹೈಕೋರ್ಟ್ ಗಂಭೀರ ಕಡಿವಾಣ ಹಾಕಿದೆ. ಅಪ್ರಾಪ್ತರನ್ನು ಮದ್ಯಪಾನದ ವ್ಯಸನದಿಂದ ರಕ್ಷಿಸುವುದು ಆಡಳಿತ ಮಂಡಳಿಯ ನೈತಿಕ ಮತ್ತು ಶಾಸನಾತ್ಮಕ ಕರ್ತವ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬ್ರೀವರಿಗಳಿಗೆ ಗ್ರಾಹಕರು ಪ್ರವೇಶಿಸುವಾಗಲೇ ಅವರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮದ್ಯ ಸರಬರಾಜು ಮಾಡುವ ಸಂದರ್ಭದಲ್ಲೂ ಸಿಬ್ಬಂದಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಿದೆ. “ಅಪ್ರಾಪ್ತರಿಗೆ ಮದ್ಯ ನೀಡಲಾಗುವುದಿಲ್ಲ” ಎಂಬ ಎಚ್ಚರಿಕೆ…

Read More

‘ಧುರಂಧರ್ 2’ ಡಿಜಿಟಲ್ ಹಕ್ಕಿದೆ ಜಿದ್ದಾಜಿದ್ದಿ: ಅಂತಿಮ ಗೆಲುವು ಯಾರಿಗೆ?

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2′ (Dhuandhar 2) ಸಿನಿಮಾ ಬಿಡುಗಡೆಯಾದ ಕೇವಲ ಆರು ದಿನಗಳಲ್ಲಿ ವಿಶ್ವದಾದ್ಯಂತ ಸುಮಾರು 800 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಕೆ ಮಾಡಿ ಇತಿಹಾಸ ಸೃಷ್ಟಿಸುತ್ತಿದೆ. ಈಗಾಗಲೇ ‘ಜವಾನ್’, ‘ಪುಷ್ಪ 2’ ಇನ್ನೂ ಕೆಲವು ಸಿನಿಮಾಗಳ ದಾಖಲೆಗಳನ್ನು ಮುರಿದು ಹಾಕಿದೆ ಈ ಸಿನಿಮಾ. ಚಿತ್ರಮಂದಿರದಲ್ಲಿ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ವೀಕೆಂಡ್ ಮಾತ್ರವಲ್ಲ, ವಾರದ ದಿನಗಳಲ್ಲಿಯೂ ಸಹ ಶೋಗಳು ಭರ್ತಿ ಆಗುತ್ತಿವೆ. ಚಿತ್ರಮಂದಿರದಲ್ಲಿ ಅಬ್ಬರಿಸುತ್ತಿರುವ ಈ ಸಿನಿಮಾ ಒಟಿಟಿಯಲ್ಲಿಯೂ ದೊಡ್ಡ ಮ್ಯಾಜಿಕ್…

Read More

ನಾಚಿಕೆಯಾಗುವುದಿಲ್ಲವೇ?; 4 ವರ್ಷದ ಮಗು ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ, ಮಾರ್ಚ್ 25: ಹರಿಯಾಣದ ಗುರುಗ್ರಾಮದಲ್ಲಿ 4 ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ತನಿಖೆ ವೇಳೆ ಹರಿಯಾಣ ಪೊಲೀಸರು ಸೂಕ್ಷ್ಮತೆಯಿಲ್ಲದೆ ವರ್ತಿಸಿದ್ದಾರೆ, ಮಗುವಿನ ಬಳಿ ಯಾವುದೇ ಪುರಾವೆಗಳಿಲ್ಲವೆಂದು ನಿರೂಪಿಸಲು ಪ್ರಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಹರಿಯಾಣ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. 4 ವರ್ಷದ ಮಗುವಿನ ಮೇಲಿನ ಅತ್ಯಾಚಾರದಲ್ಲಿ ಸಾಕ್ಷಿಗಳು ಸ್ಪಷ್ಟವಾಗಿದ್ದರೂ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ….

Read More

‘ಪೆದ್ದಿ’ ಸಿನಿಮಾ ಶೂಟಿಂಗ್ ವೇಳೆ ರಾಮ್ ಚರಣ್‌ಗೆ ಗಾಯ; ಕಣ್ಣಿನ ಮೇಲ್ಭಾಗ 4 ಹೊಲಿಗೆ

ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ಅವರು ‘ಪೆದ್ದಿ’ (Peddi) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬೇಸರದ ವಿಷಯ ಏನೆಂದರೆ, ಈ ಸಿನಿಮಾದ ಚಿತ್ರೀಕರಣದ ವೇಳೆ ರಾಮ್ ಚರಣ್ ಅವರು ಗಾಯಗೊಂಡಿದ್ದಾರೆ. ಮಂಗಳವಾರ (ಮಾರ್ಚ್ 24) ಹೈದರಾಬಾದ್‌ನಲ್ಲಿ ಸಾಹಸ ದೃಶ್ಯವೊಂದನ್ನು ಚಿತ್ರೀಕರಿಸುವಾಗ ಈ ಘಟನೆ ನಡೆದಿದೆ. ರಾಮ್ ಚರಣ್ (Ram Charan) ಕಣ್ಣಿಗೆ ಗಾಯವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದೆ. ಆದ್ದರಿಂದ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ದೊಡ್ಡ ಗಾಯ ಆಗಿಲ್ಲ ಎಂಬ ಮಾಹಿತಿ…

Read More

ಮೊಬೈಲ್ ಕೊಡಲ್ಲ, ನಾನೇ ಸೆಲ್ಫೀ ತೆಗೀತೀನಿ! ಮಹಿಳೆಯ ಫೋನ್ ಕಸಿದ ಮಂಗನ ಕೆಲಸಕ್ಕೆ ನೆಟ್ಟಿಗರು ಫಿದಾ; ವಿಡಿಯೋ ವೈರಲ್!

ಗುಜರಾತ್‌ನ ಪಠಾಣ್ ಜಿಲ್ಲೆಯಲ್ಲಿ ಒಂದು ಕುತೂಹಲಕಾರಿ ಘಟನೆ ನಡೆದಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮೂಲಗಳ ಮಾಹಿತಿಯ ಪ್ರಕಾರ, ಪಠಾಣ್ ಬಳಿಯ ಅಘರ್ ಗ್ರಾಮದಲ್ಲಿ ಮಹಿಳೆಯೊಬ್ಬರು ಮೊಬೈಲ್ ಫೋನ್‌ನೊಂದಿಗೆ ನಿಂತಿದ್ದಾಗ ಇದ್ದಕ್ಕಿದ್ದಂತೆ ಮುಸುವಗಳ (ಕೋತಿಗಳ ಒಂದು ಪ್ರಭೇದ) ಗುಂಪು ಅಲ್ಲಿಗೆ ಬಂದಿದೆ. ಈ ಸಮಯದಲ್ಲಿ, ಒಂದು ಕೋತಿ ಮಹಿಳೆಯ ಕೈಯಿಂದ ಮೊಬೈಲ್ ಫೋನ್ ಕಸಿದುಕೊಂಡಿದೆ. ನಂತರ ನಡೆದ ಘಟನೆ ಅಲ್ಲಿದ್ದ ಜನರನ್ನು ಆಶ್ಚರ್ಯಚಕಿತರನ್ನಾಗಿಸಿದೆ. ಕೋತಿ ಮೊಬೈಲ್ ಅನ್ನು ಒಂದು ಬದಿಯಲ್ಲಿ ಹಿಡಿದುಕೊಂಡು…

Read More