ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ, ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನು?
ಬೆಂಗಳೂರು, ಮಾ.25: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಈಗ ಬೆಂಗಳೂರಿನ ರಸ್ತೆಗಳ ಮೇಲೂ ಬಿದ್ದಿದೆ. ಯುದ್ಧದ ಹಿನ್ನೆಲೆಯಲ್ಲಿ ಬಿಟುಮೆನ್ (Bitumen) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳು ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಡಾಂಬರು ಮಿಶ್ರಣಕ್ಕೆ ಅತ್ಯಗತ್ಯವಾಗಿರುವ ‘ಬಿಟುಮೆನ್’ ಕಚ್ಚಾ ತೈಲದ ಉಪ ಉತ್ಪನ್ನವಾಗಿದೆ. ಭಾರತಕ್ಕೆ ಇದರ ಬಹುಪಾಲು ಪೂರೈಕೆ ಕೊಲ್ಲಿ ರಾಷ್ಟ್ರಗಳಿಂದ ಆಗುತ್ತದೆ. ಯುದ್ಧದಿಂದಾಗಿ ಹಡಗುಗಳ ಸಂಚಾರ ಮತ್ತು ಪೂರೈಕೆಗೆ ಪೆಟ್ಟು…