All posts by nagaraj11081993

‘ಡಾನ್ 3’ ವಿವಾದ: ರಣವೀರ್ ಸಿಂಗ್ ದೊಡ್ಡ ನಿರ್ಧಾರ; 18 ತಿಂಗಳು ಯಾರಿಗೂ ಸಿಗಲ್ಲ ನಟ – Kannada News | Ranveer Singh’s 18 Month Media Silence: Don 3 Controversy and Pranaya Release Strategy

ಬಾಲಿವುಡ್‌ನ ಎನರ್ಜಿಟಿಕ್ ನಟ ರಣವೀರ್ ಸಿಂಗ್ ಸದ್ಯ ‘ಡಾನ್ 3’ ಸಿನಿಮಾದ ವಿವಾದದ ಮೂಲಕ ಸುದ್ದಿಯಲ್ಲಿದ್ದಾರೆ. ಅವರು ಈ ಚಿತ್ರದಿಂದ ಹೊರಬಂದಿರುವುದೇ ವಿವಾದದ ಕೇಂದ್ರಬಿಂದು. ಈ ಬೆಳವಣಿಗೆಯ ಬಗ್ಗೆ ರಣವೀರ್ ಸಿಂಗ್ ಅವರನ್ನು ಪ್ರಶ್ನೆ ಮಾಡಲು ಮತ್ತು ಅವರ ಪ್ರತಿಕ್ರಿಯೆ ಪಡೆಯಲು ಇಡೀ ಮಾಧ್ಯಮ ಲೋಕ ಹಾಗೂ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆದರೆ, ರಣವೀರ್ ಮಾತ್ರ ಮಾಧ್ಯಮಗಳಿಗೆ ಸಿಗದಂತೆ ಸೈಲೆಂಟ್ ಆಗಿ ದೊಡ್ಡದೊಂದು ನಿರ್ಧಾರ ಪ್ರಕಟಿಸಿದ್ದಾರೆ. ಹೌದು, ಇತ್ತೀಚಿನ ವರದಿಗಳ ಪ್ರಕಾರ, ರಣವೀರ್ ಸಿಂಗ್ ಮುಂದಿನ 18 ತಿಂಗಳುಗಳ ಕಾಲ ಯಾವುದೇ ಮಾಧ್ಯಮಗಳಿಗೆ ಇಂಟರ್ವ್ಯೂ ನೀಡದಿರಲು ಮತ್ತು ಸಂಪೂರ್ಣ ಮೌನಕ್ಕೆ ಶರಣಾಗಲು ನಿರ್ಧರಿಸಿದ್ದಾರೆ.

ಇತ್ತೀಚೆಗಷ್ಟೇ ರಣವೀರ್ ಸಿಂಗ್ ಅವರ ಆಪ್ತ ತಂಡ ಅಧಿಕೃತ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ‘ಡಾನ್ 3’ ಚಿತ್ರದ ವಿವಾದದ ಬಗ್ಗೆ ನಟ ಸಾರ್ವಜನಿಕವಾಗಿ ಎಲ್ಲೂ ಮಾತನಾಡುವುದಿಲ್ಲ ಮತ್ತು ಘನತೆಯಿಂದ ಮೌನ ಕಾಯ್ದುಕೊಳ್ಳಲಿದ್ದಾರೆ ಎಂದು ತಿಳಿಸಿದೆ. ‘ನಾನು ಡಾನ್ 3 ವಿವಾದದ ಬಗ್ಗೆ ಆಗಲಿ ಅಥವಾ ಬೇರೆ ವಿಷಯಗಳ ಬಗ್ಗೆ ಆಗಲಿ ಮುಂದಿನ 18 ತಿಂಗಳು ಯಾವುದೇ ಸಂದರ್ಶನಗಳನ್ನು ನೀಡುವುದಿಲ್ಲ’ ಎಂದು ರಣವೀರ್ ಖಚಿತಪಡಿಸಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಪತ್ರಕರ್ತರು ಕಳುಹಿಸಿರುವ ಎಲ್ಲಾ ಇಂಟರ್ವ್ಯೂ ರಿಕ್ವೆಸ್ಟ್‌ಗಳನ್ನು ನಟ ಅನಿರ್ದಿಷ್ಟಾವಧಿಗೆ ತಡೆಹಿಡಿದಿದ್ದಾರೆ.

‘ಪ್ರಳಯ’ ಸಿನಿಮಾ ರಿಲೀಸ್ ಆಗುವವರೆಗೂ ಇಲ್ಲ ಸಂದರ್ಶನ:

ಚಿತ್ರರಂಗದ ಆಪ್ತರ ಪ್ರಕಾರ, ಜೈ ಮೆಹ್ತಾ ನಿರ್ದೇಶನದ ತಮ್ಮ ಮುಂಬರುವ ‘ಪ್ರಳಯ’ ಸಿನಿಮಾ ತೆರೆಗೆ ಬರುವವರೆಗೂ ರಣವೀರ್ ಪ್ರೆಸ್ ಮುಂದೆ ಬರುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲಿಯವರೆಗೆ ‘ಡಾನ್ 3’ ವಿವಾದ ಸಂಪೂರ್ಣವಾಗಿ ತಣ್ಣಗಾಗಿರುತ್ತದೆ ಎಂಬುದು ರಣವೀರ್ ನಂಬಿಕೆ.

ಇದನ್ನೂ ಓದಿ: ಹೊಸ ಫೆರಾರಿ ಕಾರಲ್ಲಿ ಮುಂಬೈ ಸುತ್ತಿದ ರಣವೀರ್; ಇದರ ಬೆಲೆ 6 ಕೋಟಿ ರೂಪಾಯಿ

ರಣವೀರ್ ಸಿಂಗ್ ಸದ್ಯ ಹನ್ಸಲ್ ಮೆಹ್ತಾ ನಿರ್ಮಾಣ ಹಾಗೂ ಜೈ ಮೆಹ್ತಾ ನಿರ್ದೇಶನದ ‘ಪ್ರಳಯ’ ಚಿತ್ರದ ಬಗ್ಗೆ ಭಾರಿ ಉತ್ಸುಕರಾಗಿದ್ದಾರೆ. ಇದು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ನಡೆಯುವ ಹೈ-ಕಾನ್ಸೆಪ್ಟ್ ‘ಜಾಂಬಿ ಡ್ರಾಮಾ’ ಸಿನಿಮಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಡ್ಡಮತದಾನದ ಹಿಂದೆ ಅಡಗಿದೆ ಕೋಟಿ ಕೋಟಿ ಅನುದಾನದ ಆಮಿಷ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ – Kannada News | Kumaraswamy Dismisses Impact of Cross Voting on BJP JDS Alliance and General Elections

ಬೆಂಗಳೂರು, ಜೂ.20: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಇದರಿಂದಾಗಿ ಜನರ ಹಾಗೂ ಕಾರ್ಯಕರ್ತರ ಅಸಮಾಧಾನ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ. ಇದೇ ಹಿನ್ನೆಲೆಯಲ್ಲಿ, ಈಗಿನ ಸರ್ಕಾರವು ಮತದಾರರಿಗೆ “ನಮ್ಮ ಪಕ್ಷಕ್ಕೆ ಮತ ಹಾಕಿದರೆ 50 ಕೋಟಿ, 100 ಕೋಟಿ ಅನುದಾನ ಕೊಡುತ್ತೇವೆ” ಎಂದು ಆಮಿಷ ಒಡ್ಡಿರುವುದು ಅಡ್ಡಮತದಾನಕ್ಕೆ ಪ್ರಮುಖ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೆಲ ಶಾಸಕರು ಅನುದಾನದ ಆಮಿಷಕ್ಕೆ ಒಳಗಾಗಿ ಚಂಚಲ ಮನಸ್ಸು ಮಾಡಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಅಡ್ಡಮತದಾನದಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಡುವೆ ಯಾವುದೇ ವಿಶ್ವಾಸ ಕೊರತೆ ಉಂಟಾಗಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಇದು ಮುಂಬರುವ ಸಾರ್ವತ್ರಿಕ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು 2017ರ ರಾಜ್ಯಸಭಾ ಚುನಾವಣೆಯ ಉದಾಹರಣೆ ನೀಡಿ ವಿವರಿಸಿದರು. ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಜೆಡಿಎಸ್ ನಡುವೆ ಬಿರುಕು ಸೃಷ್ಟಿಸಲು ಯತ್ನಿಸುತ್ತಿದೆ ಎಂದೂ ಅವರು ಹೇಳಿದ್ದಾರೆ. ಅಡ್ಡಮತದಾನದ ಬಗ್ಗೆ ಬಿಜೆಪಿ ಹೈಕಮಾಂಡ್​​ಗೆ ಮಾಹಿತಿ ನೀಡಲು ದೆಹಲಿಗೆ ತೆರಳುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: 6 ರನ್​ಗೆ 4 ವಿಕೆಟ್..! ಕನ್ನಡಿಗ ಪ್ರಸಿದ್ಧ್ ದಾಳಿಗೆ ತತ್ತರಿಸಿದ ಅಫ್ಘನ್ – Kannada News | Prasidh Krishna’s Fiery 4 Wicket Haul Stuns Afghanistan in Chennai ODI Powerplay

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತಿದ್ದ ಅಫ್ಘಾನಿಸ್ತಾನ 2-0 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಗೆದ್ದು ವೈಟ್ ವಾಶ್ ಮುಖಭಂಗದಿಂದ ಪಾರಾಗುವ ಸಲುವಾಗಿ ಅಫ್ಘನ್ ತಂಡ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿತು. ಆದರೆ ಚಿದಂಬರಂ ಮೈದಾನದಲ್ಲಿ ಅಫ್ಘನ್ ಬ್ಯಾಟಿಂಗ್‌ ವಿಭಾಗವನ್ನು ಕಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಪವರ್ ಪ್ಲೇ ಮುಗಿಯುವುದಕ್ಕೂ ಮುನ್ನವೇ ಪ್ರಮುಖ 4 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

6 ರನ್ ನೀಡಿ 4 ವಿಕೆಟ್ ಪಡೆದ ಪ್ರಸಿದ್ಧ್

ಪವರ್​ ಪ್ಲೇನಲ್ಲಿ ಅಂದರೆ ಮೊದಲ 10 ಓವರ್​ಗಳಲ್ಲಿ 5 ಓವರ್​ಗಳನ್ನು ಬೌಲ್ ಮಾಡಿದ ಪ್ರಸಿದ್ಧ್ ಕೃಷ್ಣ ಕೇವಲ 6 ರನ್ ನೀಡಿ ಪ್ರಮುಖ 4 ವಿಕೆಟ್‌ಗಳನ್ನು ಉರುಳಿಸಿದರು. ಪ್ರಸಿದ್ಧ್ ಬೌಲ್ ಮಾಡಿದ ಈ 5 ಓವರ್​ಗಳಲ್ಲಿ 2 ಓವರ್​ಗಳು ಮೇಡನ್ ಆಗಿದ್ದವು. ಪ್ರಸಿದ್ಧ್ ಮಾರಕ ದಾಳಿಗೆ ತತ್ತರಿಸಿದ ಅಫ್ಘಾನಿಸ್ತಾನ ತಂಡ ಮೊದಲ 10 ಓವರ್​ಗಳಲ್ಲಿ ಕೇವಲ 37 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ನಾಲ್ವರು ಅಗ್ರ ಬ್ಯಾಟ್ಸ್‌ಮನ್​ಗಳಲ್ಲಿ ಮೂವರು ಆಟಗಾರರು ಒಂದಂಕಿಗೆ ವಿಕೆಟ್ ಒಪ್ಪಿಸಿದರೆ, ಒಬ್ಬ ಬ್ಯಾಟ್ಸ್‌ಮನ್ ಮಾತ್ರ 11 ರನ್ ಕಲೆಹಾಕಿ ಎರಡಂಕಿ ಮೊತ್ತ ದಾಟಿದರು.

IND vs AFG: ನಾಯಕನಾಗಿ ಚೊಚ್ಚಲ ಏಕದಿನ ಸರಣಿ ಗೆದ್ದ ಶುಭ್​ಮನ್ ಗಿಲ್

ಪ್ರಸಿದ್ಧ್ ಬೌಲ್ ಮಾಡಿದ 5 ಓವರ್​ಗಳು

  • ತಮ್ಮ ಖೋಟಾದ ಮೊದಲ ಓವರ್​ನ ಮೊದಲ ಎಸೆತದಲ್ಲೇ ಪ್ರಸಿದ್ಧ್, ಅಫ್ಘನ್ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಅವರ ವಿಕೆಟ್ ಉರುಳಿಸಿದರು. ಗುರ್ಬಾಜ್ 7 ಎಸೆತಗಳಲ್ಲಿ 5 ರನ್ ಬಾರಿಸಿ ಔಟಾದರು. ಉಳಿದಂತೆ ಈ ಓವರ್​ನಲ್ಲಿ ಲೆಗ್ ಬೈಸ್ ಮೂಲಕ 4 ರನ್​ಗಳು ಬಂದವು.
  • ತಮ್ಮ ಖೋಟಾದ ಎರಡನೇ ಓವರ್​ನಲ್ಲೂ ಕರಾರುವಕ್ಕಾದ ದಾಳಿ ಮಾಡಿದ ಪ್ರಸಿದ್ಧ್ ಈ ಓವರ್​ನಲ್ಲಿ ಲೆಗ್ ಬೈಸ್ ಮೂಲಕ ಕೇವಲ 1 ರನ್ ಬಿಟ್ಟುಕೊಟ್ಟರು.
  • ಪ್ರಸಿದ್ಧ್ ಬೌಲ್ ಮಾಡಿದ ಮೂರನೇ ಓವರ್​ನ 4ನೇ ಎಸೆತದಲ್ಲಿ ರಹಮತ್ ಶಾ ಬೌಂಡರಿ ಬಾರಿಸಿದರು. ಆದರೆ ಅದೇ ಓವರ್​ನ ಕೊನೆಯ ಎಸೆತದಲ್ಲಿ ಪ್ರಸಿದ್ಧ್ ರಹಮತ್ ಶಾ ವಿಕೆಟ್ ಪಡೆದರು.
  • ನಾಲ್ಕನೇ ಓವರ್​ನ ಎರಡನೇ ಎಸೆತದಲ್ಲಿ ಅಫ್ಘನ್ ಆರಂಭಿಕ ಇಬ್ರಾಹಿಂ ಜದ್ರಾನ್ ಅವರ ವಿಕೆಟ್ ಉರುಳಿಸಿದ ಪ್ರಸಿದ್ಧ್ ಈ ಓವರ್​ನಲ್ಲೂ ನೀಡಿದ್ದು ಕೇವಲ 1 ರನ್.
  • 5ನೇ ಓವರ್​ನಲ್ಲೂ ತಮ್ಮ ವಿಕೆಟ್ ಬೇಟೆ ಮುಂದುವರೆಸಿದ ಪ್ರಸಿದ್ಧ್, ಈ ಓವರ್​ನ ಎರಡನೇ ಎಸೆತದಲ್ಲಿ ದರ್ವಿಶ್ ರಸೂಲಿ ಅವರ ವಿಕೆಟ್ ಕಬಳಿಸಿದರು. ಜೊತೆಗೆ ಕೇವಲ 1 ರನ್ ಮಾತ್ರ ಬಿಟ್ಟುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:44 pm, Sat, 20 June 26

Source link

ಸಾರ್ವಜನಿಕರ ಕುಂದು ಕೊರತೆ ನಿರ್ವಹಣೆಗೆ ಡಿಕೆಶಿ ದಿಟ್ಟ ಹೆಜ್ಜೆ: ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜಾಸೇವೆ ಇಲಾಖೆ ಸ್ಥಾಪನೆ – Kannada News | CM DK Shivakumar Announces New Prajaseve Department for solve peoples problems

ಬೆಂಗಳೂರು, (ಜೂನ್ 20):  ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರವಾಗಿಯೇ ಸಿಎಂ ಡಿಕೆ ಶಿವಕುಮಾರ್ (DK Shivakumar) ದಿಟ್ಟ ಹೆಜ್ಜೆ ಇಟ್ಟಿದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಒಂದು ಪ್ರತ್ಯೇಕ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ.  ಹೌದು.. ಕರ್ನಾಟಕ (Karnataka) ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ನಾಡಿನ ಜನರ ಕುಂದುಕೊರತೆ ಆಲಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಈಗಾಗಲೇ ಘೋಷಿಸಿದ್ದು, ಇಂದು (ಜೂನ್ 20) ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಎರಡನೇ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ ಪ್ರಜಾಸೇವೆ ಇಲಾಖೆ ಎಂದು ನಾಮಕರಣ ಮಾಡುವುದಾಗಿ ಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸ್ಪಂದಿಸಿ ನ್ಯಾಯ ದೊರಕಿಸಲು ಈ ಪ್ರಜಾಸೇವೆ ಇಲಾಖೆಯನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದ್ದು, ಈ ಹೊಸ ಇಲಾಖೆಯಲ್ಲಿ ಪ್ರತ್ಯೇಕವಾಗಿ ಸಚಿವರು ಹಾಗೂ IAS ಅಧಿಕಾರಿಗಳು ಇರಲಿದ್ದಾರೆ.

ಮುಖ್ಯಾಂಶಗಳು

  • ಸಚಿವ ಸಂಪುಟ ಬಳಿಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ
  • ಸಮಸ್ಯೆ ಇದ್ದಾಗ ನ್ಯಾಯ ಕೊಡಿಸಲು ಹೊಸ ಇಲಾಖೆ ಸ್ಥಾಪನೆ
  • ಪ್ರತ್ಯೇಕ ಪ್ರಜಾಸೇವೆ ಇಲಾಖೆ ಸ್ಥಾಪನೆ ಮಾಡುವುದಾಗಿ ಘೋಷಿಸಿದ ಡಿಕೆಶಿ
  • ಹೊಸ ಇಲಾಖೆಯಲ್ಲಿ ಪ್ರತ್ಯೇಕ ಸಚಿವರು, IAS ಅಧಿಕಾರಿಗಳು ಇರಲಿದ್ದಾರೆ
  • ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿಕೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇಂದು (ಜೂನ್ 20) ನಡೆದ 2ನೇ ಸಚಿವ ಸಂಪುಟ ಸಭೆಯಲ್ಲಿ ಪ್ರಜಾಸೇವೆ ಇಲಾಖೆಯನ್ನು ರಚಿಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್, ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಹೊಸ ಪ್ರಜಾಸೇವೆ ಇಲಾಖೆ ರಚನೆಯನ್ನು ಪ್ರಕಟಿಸಿದರು.

ಇದನ್ನೂ ಓದಿ: ಸಾರ್ವಜನಿಕರ ಕುಂದು ಕೊರತೆಗಳ ನಿರ್ವಹಣೆಗೆ, NRIಗೆ ಪ್ರತ್ಯೇಕ ಸಚಿವಾಲಯ: ಸಿಎಂ ಡಿಕೆಶಿ ಮಹತ್ವ ಘೋಷಣೆ

ಇಲಾಖೆಯಲ್ಲಿ ಪ್ರತ್ಯೇಕ ಸಚಿವರು, ಹಿರಿಯ IAS ಅಧಿಕಾರಿ

ಈ ಇಲಾಖೆಗೆ ಪ್ರತ್ಯೇಕ ಸಚಿವರು, ಹಿರಿಯ ಐಎಎಸ್ ಅಧಿಕಾರಿ ಇರುತ್ತಾರೆ. ಈ ಇಲಾಖೆ ಪೋಸ್ಟಮ್ಯಾನ್ ಕೆಲಸ ಮಾಡುವುದಿಲ್ಲ. ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವ ಕೆಲಸವನ್ನು ಮಾಡುತ್ತದೆ. ಸಚಿವರು ಎಲ್ಲಾ ೨೨೪ ಕ್ಷೇತ್ರಗಳಿಗೂ ಹೋಗಿ ಶಾಸಕರ ಜತೆ ಸಭೆ ನಡೆಸಿ ಜನರ ಅಹವಾಲುಗಳನ್ನು ಆಲಿಸಿ ನ್ಯಾಯ ದೊರಕಿಸುವ ಕೆಲಸ ಮಾಡಲಿದ್ದಾರೆ. ವಾರಕ್ಕೊಮ್ಮೆ ಕಡ್ಡಾಯವಾಗಿ ಶಾಸಕರ ಜತೆಗೂಡಿ ಜನಸ್ಪಂದನ ಸಭೆ ನಡೆಸಿ ಅಲ್ಲಿನ ಅಭಿಪ್ರಾಯಗಳನ್ನು ನಮಗೆ ತಲಪಿಸುತ್ತಾರೆ. ಅದಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ವಿವರಿಸಿದರು.

ಮೊನ್ನೇ ಅಷ್ಟೇ ಹಿರಿಯ ಅಧಿಕಾರಿಗಳ ಜೊತೆ ಸಭೆಯಲ್ಲಿ ಈ ಸಾರ್ವಜನಿಕರ ಕುಂದು ಕೊರತೆ ಆಲಿಸಲು ಪ್ರತ್ಯೇಕ ಸಚಿವಾಲಯದ ಸ್ಥಾಪನೆ ಬಗ್ಗೆ ಚರ್ಚಿಸಿದ್ದರು. ಇದೀಗ ಅಂತಿಮವಾಗಿ ಇಂದಿನ ಸಚಿವ ಸಂಪುಟ ಸಹ ಅನುಮೋದನೆ ನೀಡಿದೆ. ಇದಕ್ಕೆ ಪ್ರಜಾಸೇವೆ ಇಲಾಖೆ ಎಂದು ಹೆಸರಿಡಲಾಗಿದೆ. ಪ್ರತೇಕ ಇಲಾಖೆಯಾದರೆ ಸಾರ್ವಜನಿಕರು ತಮ್ಮ ತಮ್ಮ ಸಮಸ್ಯೆ , ಕುಂದು ಕೊರತೆಗಳನ್ನು ಅರ್ಜಿ ಮೂಲಕ ಈ ಇಲಾಖೆಗೆ ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲು ಅನುಕೂಲವಾಗಲಿದೆ.

ಸಾರ್ವಜನಿಕ ಕುಂದುಕೊರತೆಗೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗುವುದು. ದಿನಕ್ಕೆ ಎರಡು ಮೂರು ತಂಡ ಪ್ರತಿಭಟನೆ ಮಾಡುತ್ತಿರುತ್ತದೆ. ಅವರ ಅಹವಾಲು ಕೇಳಬೇಕಾಗಿದೆ. ಏನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ?. ಅವರ ಬೇಡಿಕೆಗಳೇನು?. ಸಮಸ್ಯೆಗಳೇನು? ಎಂಬ ಬಗ್ಗೆ ತಿಳಿದುಕೊಳ್ಳಬೇಕಾಗಿದೆ. ಬಳಿಕ ಅವರ ಸಮಸ್ಯೆಗೆ ಸ್ಪಂದಿಸಲು, ಪ್ರತ್ಯೇಕ ಸಚಿವಾಲಯ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Source link

ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..! – Kannada News | Hardik Pandya ruled out of the England ODI series

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜುಲೈ 1 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ. ಗಾಯದ ಸಮಸ್ಯೆಯಿಂದ ಸಂಪೂರ್ಣ ಚೇತರಿಸಿಕೊಳ್ಳಲು ಪಾಂಡ್ಯ ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡದಿರಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ.

2026ರ ಐಪಿಎಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬೆನ್ನುನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ಸಮಸ್ಯೆಯ ಕಾರಣ ಅವರು ಮುಂಬೈ ಇಂಡಿಯನ್ಸ್ ತಂಡದ ಕೆಲ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು. ಇದಾಗ್ಯೂ ಅವರನ್ನು ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿತ್ತು.

ಆದರೆ ಸಂಪೂರ್ಣ ಫಿಟ್​ನೆಸ್ ಸಾಧಿಸದ ಕಾರಣ ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಕೈ ಬಿಡಲಾಗಿತ್ತು. ಆದಾಗ್ಯೂ ಅವರು ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಅದರಂತೆ ಬೆಂಗಳೂರಿನ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರದಲ್ಲಿ ತರಬೇತಿ ಮತ್ತು ರಿಹ್ಯಾಬ್ ಪ್ರಕ್ರಿಯೆಗೆ ಒಳಗಾಗಿದ್ದರು.

ಆದರೀಗ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ನಡೆಸಲಾದ ಫಿಟ್​ನೆಸ್ ಟೆಸ್ಟ್​ನಲ್ಲಿ ಹಾರ್ದಿಕ್ ಪಾಂಡ್ಯ ಮತ್ತೆ ವಿಫಲರಾಗಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಅವರನ್ನು ಪರಿಗಣಿಸದಿರಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

10 ಓವರ್​ ಟಾರ್ಗೆಟ್:

ಮುಂಬರುವ ಏಕದಿನ ವಿಶ್ವಕಪ್​ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಹಾರ್ದಿಕ್ ಪಾಂಡ್ಯ ಅವರ ಫಿಟ್​ನೆಸ್ ಟೆಸ್ಟ್​ ನಡೆಯುತ್ತಿದೆ. ಇಲ್ಲಿ ಮುಖ್ಯವಾಗಿ ಪಾಂಡ್ಯ ಅವರಿಗೆ 10 ಓವರ್​ಗಳ ಟಾರ್ಗೆಟ್ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅಂದರೆ ಬೆನ್ನು ನೋವಿನ ಸಮಸ್ಯೆಯ ಕಾರಣ ಹಾರ್ದಿಕ್ ಪಾಂಡ್ಯಗೆ ದೀರ್ಘಾವಧಿಯವರೆಗೆ ಬೌಲಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಇತ್ತೀಚಿನ ತರಬೇತಿ ಅವಧಿಗಳಲ್ಲಿ ಅವರು ಪೂರ್ಣ 10 ಓವರ್‌ಗಳ ಬೌಲಿಂಗ್ ಕೋಟಾವನ್ನು ಪೂರೈಸಲು ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಕಾರಣದಿಂದಾಗಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ಅವರನ್ನು ಆಲ್​ರೌಂಡರ್ ಆಗಿ ಏಕದಿನ ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಅಂದರೆ ಮುಂಬರುವ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಫಿಟ್​ನೆಸ್ ಸಾಧಿಸಿದರೆ 2027ರ ಏಕದಿನ ವಿಶ್ವಕಪ್ ಆಡುವುದು ಖಚಿತ.

ಇದರ ನಡುವೆ ನಡೆಯುವ ಟಿ20 ಸರಣಿಗಳ ವೇಳೆ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ಆಯ್ಕೆ ಸಮಿತಿ ಪ್ಲ್ಯಾನ್ ರೂಪಿಸಿದೆ. ಇದೇ ಕಾರಣದಿಂದಾಗಿ ಅವರನ್ನು ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಗೆ ಆಯ್ಕೆ ಮಾಡಲಾಗಿಲ್ಲ.  ಇನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಶೀಘ್ರದಲ್ಲೇ ಭಾರತ ತಂಡವನ್ನು ಪ್ರಕಟಿಸಲಾಗುವುದು ಬಿಸಿಸಿಐ ತಿಳಿಸಿದೆ. ಈ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: Virat Kohli: ಕಿಂಗ್ ಕೊಹ್ಲಿ ಕಂಬ್ಯಾಕ್ ಯಾವಾಗ?

ಇಂಗ್ಲೆಂಡ್ ಟಿ20 ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ,  ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ.

Source link

ಶಾಸಕರ ಮತದಾನದಲ್ಲಿ ಎರಡು ನಿಯಮ ಯಾಕೆ? ಚುನಾವಣಾ ಆಯೋಗದ ದ್ವಂದ್ವ ನೀತಿ ಪ್ರಶ್ನಿಸಿ ಶಾಸಕ ಎಸ್. ಸುರೇಶ್ ಕುಮಾರ್ ಪತ್ರ – Kannada News | BJP MLA S Suresh Kumar Writes To Karnataka CEO Questioning Duality in Rajya Sabha and MLC Election Voting Rules

ಶಾಸಕ ಎಸ್. ಸುರೇಶ್ ಕುಮಾರ್ ಹಾಗೂ ಅವರು ಚುನಾವಣಾ ಅಧಿಕಾರಿಗೆ ಬರೆದ ಪತ್ರದ ಪ್ರತಿ (ಕೃಪೆ: ಶಾಸಕರ ಫೇಸ್​ಬುಕ್ ಹಾಗೂ ಎಕ್ಸ್ ಪೋಸ್ಟ್)Image Credit source: Facebook

ಬೆಂಗಳೂರು, ಜೂನ್ 20: ಇತ್ತೀಚೆಗೆ ನಡೆದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ, ಶಾಸಕರು (ಮತದಾರರ ನೆಲೆಯಲ್ಲಿ) ವರ್ತಿಸಬೇಕಾದ ನಿಯಮಗಳಲ್ಲಿರುವ ವ್ಯತ್ಯಾಸಗಳ ಬಗ್ಗೆ ರಾಜಾಜಿನಗರ ಕ್ಷೇತ್ರದ ಬಿಜೆಪಿ (BJP) ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ಪ್ರಶ್ನೆ ಮಾಡಿದ್ದಾರೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಈ ನಿಯಮಾವಳಿಗಳ ಹಿಂದಿರುವ ಅಸಲಿ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಮುಖ್ಯಾಂಶಗಳು

ಶಾಸಕರ ಮತದಾನದ ದ್ವಂದ್ವ ನೀತಿ ಬಗ್ಗೆ ಪ್ರಶ್ನೆ.
ರಾಜ್ಯಸಭೆಯಲ್ಲಿ ಬಹಿರಂಗ, ಪರಿಷತ್ತಿನಲ್ಲಿ ಗೌಪ್ಯ ಮತದಾನ.
ಗೊಂದಲಕ್ಕೆ ಸ್ಪಷ್ಟೀಕರಣ ಕೋರಿ ಸಿಇಒಗೆ ಪತ್ರ.

ಪತ್ರದಲ್ಲಿರುವ ಪ್ರಮುಖ ಅಂಶಗಳೇನು?

ಇತ್ತೀಚೆಗೆ ನಮ್ಮ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಹಾಗೂ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಚುನಾವಣೆಗಳು ನಡೆದಿದ್ದವು. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಎರಡೂ ಚುನಾವಣೆಗಳಿಗೂ ವಿಧಾನಸಭಾ ಸದಸ್ಯರೇ (ಶಾಸಕರು) ಮತದಾರರಾಗಿದ್ದಾರೆ. ಆದರೆ, ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಮತ ಚಲಾಯಿಸುವಾಗ ತಾವು ಗುರುತು ಮಾಡಿದ ಮತಪತ್ರವನ್ನು ಅಲ್ಲಿ ಕುಳಿತಿರುವ ತಮ್ಮ ಪಕ್ಷದ ಏಜೆಂಟರಿಗೆ ಕಡ್ಡಾಯವಾಗಿ ತೋರಿಸಿ ಹಾಕಬೇಕಿರುತ್ತದೆ. ಆದರೆ, ಅದೇ ವಿಧಾನ ಪರಿಷತ್ ಚುನಾವಣೆಯಲ್ಲಿ ಇದೇ ಶಾಸಕರಿಗೆ ಗೌಪ್ಯ ಮತದಾನದ ಸೌಲಭ್ಯವನ್ನು ನೀಡಲಾಗಿರುತ್ತದೆ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದ ಪ್ರತಿಯನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸುರೇಶ್ ಕುಮಾರ್

ನಿಯಮಾವಳಿಗಳ ಉದ್ದೇಶವೇನು? ಸುರೇಶ್ ಕುಮಾರ್ ಪ್ರಶ್ನೆ

ಒಂದೊಮ್ಮೆ ರಾಜ್ಯಸಭೆಯ ಚುನಾವಣೆಗಳು ಅವಿರೋಧವಾಗಿ ಆಯ್ಕೆಯಾಗದೇ ಹೋಗಿದ್ದರೆ, ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಎರಡೂ ಚುನಾವಣೆಗಳು ಒಂದೇ ದಿನ ನಡೆಯುತ್ತಿದ್ದವು. ಅಂತಹ ಸಂದರ್ಭದಲ್ಲಿ ಅದೇ ವಿಧಾನಸಭಾ ಸದಸ್ಯರು ರಾಜ್ಯಸಭೆಗೆ ಮತ ಹಾಕುವಾಗ ತಮ್ಮ ಏಜೆಂಟರಿಗೆ ಬ್ಯಾಲೆಟ್ ಪೇಪರ್ ತೋರಿಸಬೇಕಾಗುತ್ತದೆ ಮತ್ತು ಅದೇ ದಿನ ವಿಧಾನ ಪರಿಷತ್ತಿಗೆ ಮತ ಚಲಾಯಿಸುವಾಗ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಒಂದೇ ದಿನ, ಒಂದೇ ಮತದಾರರಾಗಿ ವರ್ತಿಸುವಾಗ ಶಾಸಕರಿಗೆ ಈ ದ್ವಂದ್ವ ನೀತಿ ಏಕೆ? ಈ ರೀತಿಯ ವಿಭಿನ್ನ ನಿಯಮಾವಳಿಗಳ ಹಿಂದೆ ಇರುವ ಉದ್ದೇಶವಾದರೂ ಏನು? ಎಂದು ಸುರೇಶ್ ಕುಮಾರ್ ಅವರು ಪತ್ರದ ಮೂಲಕ ಚುನಾವಣಾ ಆಯೋಗವನ್ನು ನೇರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು: ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ

ಸಾರ್ವಜನಿಕವಾಗಿ ಮತ್ತು ರಾಜಕೀಯ ವಲಯದಲ್ಲಿ ಉದ್ಭವಿಸಿರುವ ಈ ಗೊಂದಲಕ್ಕೆ ಶೀಘ್ರವೇ ಸ್ಪಷ್ಟೀಕರಣ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ; 50 ಲಕ್ಷ ಅನಿವಾಸಿ ಭಾರತೀಯರ ನೆರವಿಗೆ ನಿಂತ ರಾಜ್ಯ ಸರ್ಕಾರ – Kannada News | CM D.K. Shivakumar Announces New NRI Department for Welfare and Investment Growth

ಬೆಂಗಳೂರು, ಜೂ.20: ರಾಜ್ಯದಲ್ಲಿ ಅನಿವಾಸಿ ಭಾರತೀಯ (ಎನ್‌ಆರ್‌ಐ) ಇಲಾಖೆ ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ 10ಕ್ಕೂ ಹೆಚ್ಚು ಅನಿವಾಸಿ ಭಾರತೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು, ಬಂಡವಾಳ ಕ್ರೂಢೀಕರಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ವ್ಯಾಪಾರ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ಈ ಇಲಾಖೆಯ ಪ್ರಮುಖ ಉದ್ದೇಶಗಳಾಗಿವೆ. ತಮಿಳುನಾಡು, ಕೇರಳ ಮತ್ತು ಪಂಜಾಬ್ ರಾಜ್ಯಗಳ ಮಾದರಿಯಲ್ಲಿ ಈ ಇಲಾಖೆಯನ್ನು ರೂಪಿಸಲಾಗುತ್ತಿದೆ. ವಿದೇಶದಲ್ಲಿ ಕಾನೂನು ಸಮಸ್ಯೆಗಳು, ಪಾಸ್‌ಪೋರ್ಟ್ ತೊಂದರೆಗಳು, ಮರಣದಂತಹ ಸಂದರ್ಭಗಳಲ್ಲಿ ನೆರವು ನೀಡಲು ಇಲಾಖೆ ಕಾರ್ಯನಿರ್ವಹಿಸಲಿದೆ. ಅನಿವಾಸಿ ಕನ್ನಡಿಗರ ದೂರುಗಳನ್ನು ಪರಿಹರಿಸಲು ಪ್ರತ್ಯೇಕ ವಿಚಾರಣಾ ಡೆಸ್ಕ್ ರಚಿಸುವ ಸಾಧ್ಯತೆಗಳೂ ಇವೆ. ಸುಮಾರು 50 ಲಕ್ಷ ಅನಿವಾಸಿ ಭಾರತೀಯರಿಗೆ ನೆರವು ನೀಡುವ ಗುರಿಯನ್ನು ಇಲಾಖೆ ಹೊಂದಿದೆ. ಈ ನಿರ್ಧಾರದಿಂದ ರಾಜ್ಯಕ್ಕೆ ವಿದೇಶಿ ವಿನಿಮಯ ಹೆಚ್ಚಳವಾಗುವ ನಿರೀಕ್ಷೆಯಿದೆ. ಅನಿವಾಸಿ ಕನ್ನಡಿಗರ ಬಹು ವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಇದು ಮುಖ್ಯಮಂತ್ರಿಗಳ ಆರನೇ ಗ್ಯಾರಂಟಿಗಳಲ್ಲಿ ಒಂದಾಗಿದೆ ಎಂದು ಅನಿವಾಸಿ ಭಾರತೀಯ ಸಂಘಟನೆಗಳು ಸಂತಸ ವ್ಯಕ್ತಪಡಿಸಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Mercury Transit: ಬುಧ ಕರ್ಕಾಟಕ ರಾಶಿಗೆ ಪ್ರವೇಶ;ಈ 5 ರಾಶಿಯವರ ವೃತ್ತಿ ಮತ್ತು ಆರ್ಥಿಕ ಜೀವನದಲ್ಲಿ ಯಶಸ್ಸು! – Kannada News | Mercury Transit June 22: Budha Gochara in Cancer and Its Astrological Impact on 5 Zodiacs!

ಜ್ಯೋತಿಷ್ಯ ಶಾಸ್ತ್ರImage Credit source: jpl.nasa.gov

ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧ ಗ್ರಹಕ್ಕೆ ವಿಶೇಷ ಸ್ಥಾನವಿದೆ. ನಮ್ಮ ಬುದ್ಧಿಶಕ್ತಿ, ಮಾತು, ಸಂವಹನ ಕಲೆ ಮತ್ತು ವ್ಯಾಪಾರ-ವ್ಯವಹಾರಗಳನ್ನು ನಿಯಂತ್ರಿಸುವ ಗ್ರಹವೇ ಬುಧ. ಇಂತಹ ಬುದ್ಧಿಕಾರಕ ಬುಧನು ಜೂನ್ 22 ರಂದು ತನ್ನ ಪಥವನ್ನು ಬದಲಾಯಿಸಿ, ಅತ್ಯಂತ ಭಾವನಾತ್ಮಕ ರಾಶಿಯಾದ ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ.

ಬುಧನ ಈ ರಾಶಿ ಬದಲಾವಣೆಯಿಂದಾಗಿ ಇಡೀ ಜಗತ್ತಿನ ಆಲೋಚನಾ ಶೈಲಿಯಲ್ಲಿ ಮಹತ್ವದ ಬದಲಾವಣೆ ಕಂಡುಬರಲಿದೆ. ಇಲ್ಲಿಯವರೆಗೆ ಕೇವಲ ಲಾಭ-ನಷ್ಟ ಅಥವಾ ಸಾಧಕ-ಬಾಧಕಗಳನ್ನು ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಜನರು, ಇನ್ನು ಮುಂದೆ ಸ್ವಲ್ಪ ಭಾವನಾತ್ಮಕವಾಗಿ ಮತ್ತು ಮೃದುವಾಗಿ ಯೋಚಿಸಲು ಆರಂಭಿಸುತ್ತಾರೆ. ಬುಧನ ಈ ಸಾಗಣೆಯು ಕೆಲವು ರಾಶಿಚಕ್ರದ ಚಿಹ್ನೆಗಳಿಗೆ, ವಿಶೇಷವಾಗಿ ಕರ್ಕಾಟಕ, ಕನ್ಯಾ, ತುಲಾ, ವೃಶ್ಚಿಕ ಮತ್ತು ಮೀನ ರಾಶಿಯವರಿಗೆ ವೃತ್ತಿಜೀವನದಿಂದ ಆರ್ಥಿಕತೆಯವರೆಗೆ ಎಲ್ಲದರಲ್ಲೂ ಅದ್ಭುತ ಅವಕಾಶಗಳನ್ನು ತರಲಿದೆ. ಆ ರಾಶಿಗಳ ವಿವರ ಇಲ್ಲಿದೆ:

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿಯವರೇ, ಬುಧನು ನಿಮ್ಮದೇ ರಾಶಿಗೆ ಆಗಮಿಸುತ್ತಿರುವುದರಿಂದ ಈ ಸಮಯವು ನಿಮಗೆ ಸಂಪೂರ್ಣವಾಗಿ ಮಾಂತ್ರಿಕವಾಗಿರಲಿದೆ. ನಿಮ್ಮಲ್ಲಿ ಅಡಗಿದ್ದ ಆತ್ಮವಿಶ್ವಾಸವು ದುಪ್ಪಟ್ಟಾಗಲಿದೆ. ಇದುವರೆಗೆ ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಹಿಂಜರಿಯುತ್ತಿದ್ದ ನೀವು, ಇನ್ನು ಮುಂದೆ ಧೈರ್ಯವಾಗಿ ಮಾತನಾಡಲಿದ್ದೀರಿ. ಸಮಾಜದಲ್ಲಿ ಹೊಸ ಜನರೊಂದಿಗೆ ಸಂಪರ್ಕ ಸಾಧಿಸುವಿರಿ. ನಿಮ್ಮ ಈ ಹೊಸ ನೆಟ್‌ವರ್ಕಿಂಗ್ ನೀವು ಎಂದಿಗೂ ಊಹಿಸದಂತಹ ದೊಡ್ಡ ಅವಕಾಶಗಳ ಬಾಗಿಲನ್ನು ತೆರೆಯುತ್ತದೆ. ನೀವು ಕೆಲವೊಮ್ಮೆ ಸಣ್ಣ ವಿಷಯಗಳನ್ನೂ ಅತಿಯಾಗಿ ಯೋಚಿಸುತ್ತೀರಿ (Overthinking). ಈ ಸಮಯದಲ್ಲಿ ಆ ಅಭ್ಯಾಸವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಳ್ಳೆಯದು.

ಕನ್ಯಾ ರಾಶಿ:

ಕನ್ಯಾ ರಾಶಿಯವರಿಗೆ ಬುಧನೇ ಅಧಿಪತಿ (ಆಡಳಿತ ಗ್ರಹ). ಈಗ ಆತ ನಿಮ್ಮ ಲಾಭದ ಮನೆಯಾದ 11ನೇ ಮನೆಗೆ ಪ್ರವೇಶಿಸುತ್ತಿದ್ದಾನೆ. ನಿಮ್ಮ ಯಶಸ್ಸಿನ ಹಾದಿಯ ಕೀಲಿ ಕೈ ಈಗ ನಿಮ್ಮ ಕೈಯಲ್ಲಿದೆ ಎಂದೇ ಅರ್ಥ. ನಿಮ್ಮ ಹಳೆಯ ಸ್ನೇಹಿತರು ಮತ್ತು ಸಹೋದ್ಯೋಗಿಗಳು ನಿಮ್ಮ ಪ್ರಗತಿಗೆ ದೊಡ್ಡ ಶಕ್ತಿಯಾಗಿ ನಿಲ್ಲಲಿದ್ದಾರೆ. ಆರ್ಥಿಕವಾಗಿ ಇದು ನಿಮಗೆ ಅತ್ಯಂತ ಸುಸಮಯ. ನೀವು ಕೈಗೊಳ್ಳುವ ಪ್ರತಿಯೊಂದು ಕೆಲಸದಲ್ಲೂ ಖಂಡಿತವಾಗಿಯೂ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಯಶಸ್ಸಿನ ಸಮಯದಲ್ಲಿ ಇತರರಿಗೆ ಸಹಾಯ ಮಾಡಲು ಮರೆಯಬೇಡಿ. ನೀವು ನೀಡುವ ಸಕಾರಾತ್ಮಕತೆಯು ನಿಮಗೇ ಒಳ್ಳೆಯ ರೂಪದಲ್ಲಿ ಹಿಂತಿರುಗುತ್ತದೆ.

ತುಲಾ ರಾಶಿ:

ತುಲಾ ರಾಶಿಯವರ ಹತ್ತನೇ ಮನೆಯಲ್ಲಿ (ಕರ್ಮ ಸ್ಥಾನ) ಬುಧನ ಸಂಚಾರವಾಗುತ್ತಿರುವುದರಿಂದ, ನಿಮ್ಮ ವೃತ್ತಿಜೀವನವು ಹೊಸ ಎತ್ತರಕ್ಕೆ ತಲುಪಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಮೇಲಿನ ವಿಶ್ವಾಸಾರ್ಹತೆ ಮತ್ತು ಗೌರವ ಸಿಕ್ಕಾಪಟ್ಟೆ ಬೆಳೆಯಲಿದೆ. ಉದ್ಯೋಗದಲ್ಲಿ ಪ್ರಗತಿಯ ಲಕ್ಷಣಗಳಿವೆ. ನೀವು ಯಾವುದೇ ಪ್ರಮುಖ ಸಭೆಗಳಲ್ಲಿ ಭಾಗವಹಿಸಬೇಕಿದ್ದರೆ ಅಥವಾ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಬೇಕಿದ್ದರೆ ನಿಮ್ಮ ಮಾತು ಸಿಹಿಯಾಗಿ ಮತ್ತು ಪರಿಣಾಮಕಾರಿಯಾಗಿರಲಿ. ನಿಮ್ಮ ಸಂವಹನ ಶೈಲಿಯು ಜನರನ್ನು ಸುಲಭವಾಗಿ ಆಕರ್ಷಿಸುತ್ತದೆ. ನಿಮ್ಮ ಕೆಲಸದ ಬಗ್ಗೆ ಹೆಚ್ಚು ಗಂಭೀರವಾಗಿ ಮತ್ತು ಶಿಸ್ತಿನಿಂದ ಇರಿ, ಇದು ನಿಮ್ಮನ್ನು ಎಲ್ಲರಿಗಿಂತ ಭಿನ್ನವಾಗಿ ಗುರುತಿಸುವಂತೆ ಮಾಡುತ್ತದೆ.

ಇದನ್ನೂ ಓದಿ: ಫ್ಯಾಶನ್​​ಗಾಗಿ ವಜ್ರ ಧರಿಸುವ ಮುನ್ನ ಎಚ್ಚರ! ಈ ರಾಶಿಯವರು ವಜ್ರ ಧರಿಸಿದರೆ ಕಷ್ಟ ತಪ್ಪಿದ್ದಲ್ಲ!

ವೃಶ್ಚಿಕ ರಾಶಿ:

ವೃಶ್ಚಿಕ ರಾಶಿಯವರೇ, ಸದ್ಯಕ್ಕೆ ಅದೃಷ್ಟ ದೇವತೆ ನಿಮ್ಮ ಕಡೆ ಇದ್ದಾಳೆ! ಬುಧ ಗ್ರಹವು ನಿಮ್ಮ ಭಾಗ್ಯ ಸ್ಥಾನದಲ್ಲಿ (ಒಂಬತ್ತನೇ ಮನೆ) ಸಂಚರಿಸುತ್ತಿದ್ದಾನೆ. ಹೊಸ ವಿಷಯಗಳನ್ನು ಕಲಿಯಲು ನೀವು ತುಂಬಾ ಉತ್ಸುಕರಾಗುತ್ತೀರಿ. ನಿಮ್ಮ ಜ್ಞಾನದ ಹಸಿವು ಎಷ್ಟು ವೇಗವಾಗಿ ಹೆಚ್ಚಾಗುತ್ತದೆಯೋ, ಅಷ್ಟೇ ವೇಗವಾಗಿ ನಿಮ್ಮ ಪ್ರಗತಿಯೂ ಆಗುತ್ತದೆ. ದೀರ್ಘಾವಧಿಯ ಪ್ರಯಾಣಗಳು ನಿಮಗೆ ಆರ್ಥಿಕವಾಗಿ ಮತ್ತು ವೃತ್ತಿಪರವಾಗಿ ಬಹಳ ಫಲಪ್ರದವಾಗುತ್ತವೆ. ಹೊಸ ಕೋರ್ಸ್ ಅಥವಾ ಹೊಸ ಉದ್ಯೋಗ ಕಲಿಯಲು ಇದು ಅತ್ಯುತ್ತಮ ಸಮಯ. ನಿಮ್ಮ ಮಾರ್ಗದರ್ಶಕರು ಮತ್ತು ಹಿರಿಯರು ನೀಡುವ ಸಲಹೆಗಳನ್ನು ಅಲಕ್ಷಿಸಬೇಡಿ, ಅದು ನಿಮ್ಮ ಇಡೀ ಭವಿಷ್ಯವನ್ನೇ ಬದಲಾಯಿಸುವ ಶಕ್ತಿ ಹೊಂದಿದೆ.

ಮೀನ ರಾಶಿ:

ಮೀನ ರಾಶಿಯವರು ಸ್ವಭಾವತಃ ಸೃಜನಶೀಲರು (Creative). ಈಗ ಬುಧನು ನಿಮ್ಮ ಐದನೇ ಮನೆಗೆ ಪ್ರವೇಶಿಸುತ್ತಿರುವುದರಿಂದ ನಿಮ್ಮ ಈ ಕಲೆ ಮತ್ತಷ್ಟು ಮಿನುಗಲಿದೆ. ನೀವು ಮಾಡುವ ಪ್ರತಿಯೊಂದು ಕೆಲಸದಲ್ಲೂ ಒಂದು ಹೊಸ ಉತ್ಸಾಹ ಮತ್ತು ಕಾಳಜಿ ಎದ್ದು ಕಾಣುತ್ತದೆ. ನಿಮ್ಮ ಕೆಲಸದಲ್ಲಿ ನಿಮ್ಮ ಭಾವನೆಗಳನ್ನು ತುಂಬಿ ಮಾಡಿದಾಗ, ಜನರು ಅದನ್ನು ಆಳವಾಗಿ ಮೆಚ್ಚಿಕೊಳ್ಳುತ್ತಾರೆ. ನೀವು ವಿದ್ಯಾರ್ಥಿಯಾಗಿದ್ದರೆ, ಅಧ್ಯಯನದಲ್ಲಿ ನಿಮ್ಮ ಏಕಾಗ್ರತೆ ಮತ್ತು ಆಸಕ್ತಿ ಹೆಚ್ಚಾಗಲಿದೆ. ಕಲಾತ್ಮಕ ಕ್ಷೇತ್ರ, ಬರವಣಿಗೆ ಅಥವಾ ವಿನ್ಯಾಸ ರಂಗದಲ್ಲಿರುವವರಿಗೆ ಇಂದು ಅವರು ಮಾಡುವ ಸೃಷ್ಟಿಗೆ ಸಮಾಜದಿಂದ ಅಪಾರ ಪ್ರಶಂಸೆ ಸಿಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್ – Kannada News | Aamir Khan Productions’ Documentary on President Droupadi Murmu: Inspiring Journey Revealed

ದ್ರೌಪದಿ ಮುರ್ಮು-ಆಮಿರ್ Image Credit source: Droupadi Murmu

ಬಾಲಿವುಡ್ ನಟ ಆಮಿರ್ ಖಾನ್ ಅವರು (Aamir Khan) ಇತ್ತೀಚೆಗೆ ನಟನೆಗಿಂತ, ಸಿನಿಮಾ ನಿರ್ಮಾಣದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈಗ ಈ ನಿರ್ಮಾಣ ಸಂಸ್ಥೆಯಿಂದ ಡಾಕ್ಯುಮೆಂಟರಿ ಒಂದು ಬರಲಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ರೋಚಕ ಹಾಗೂ ಸ್ಪೂರ್ತಿದಾಯಕ ಜೀವನದ ಕುರಿತು ವಿಶೇಷ ಸಾಕ್ಷ್ಯಚಿತ್ರ (ಡಾಕ್ಯುಮೆಂಟರಿ) ಒಂದನ್ನು ಸಿದ್ಧಪಡಿಸಲು ಆಮಿರ್ ಖಾನ್ ನಿರ್ಮಾಣ ಸಂಸ್ಥೆ ಮುಂದಾಗಿದೆ ಎಂದು ವರದಿಯಾಗಿದೆ.

ಖ್ಯಾತ ಬರಹಗಾರ್ತಿ ಹಾಗೂ ನಿರ್ದೇಶಕಿ ಸ್ವಾತಿ ಚಕ್ರವರ್ತಿ ಈ ಡಾಕ್ಯುಮೆಂಟರಿಯನ್ನು ನಿರ್ದೇಶಿಸುತ್ತಿದ್ದಾರೆ. ಒಡಿಶಾದ ಸಣ್ಣ ಹಳ್ಳಿಯೊಂದರಿಂದ ಆರಂಭವಾಗಿ, ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಪೀಠದವರೆಗೆ ದ್ರೌಪದಿ ಮುರ್ಮು ಅವರು ನಡೆದುಬಂದ ಹಾದಿಯನ್ನು ಈ ಸಾಕ್ಷ್ಯಚಿತ್ರದಲ್ಲಿ ಅನಾವರಣಗೊಳಿಸಲಾಗುತ್ತದೆ.

ಕಷ್ಟದ ದಿನಗಳು ಹಾಗೂ ಹಳ್ಳಿಯ ಜೀವನದ ಮರುಸೃಷ್ಟಿ:

ವರದಿಗಳ ಪ್ರಕಾರ, ಈ ಡಾಕ್ಯುಮೆಂಟರಿಯಲ್ಲಿ ದ್ರೌಪದಿ ಮುರ್ಮು ಅವರ ಜೀವನದ ಪ್ರಮುಖ ಘಟ್ಟಗಳನ್ನು ತೋರಿಸಲಾಗುತ್ತದೆ. ಒಡಿಶಾದ ಹಳ್ಳಿಯ ದಿನಗಳು, ಅವರ ಸಾರ್ವಜನಿಕ ಜೀವನದ ಪ್ರವೇಶ ಹಾಗೂ ಭಾರತದ ಮೊದಲ ಬುಡಕಟ್ಟು ಸಮುದಾಯದ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾದ ಸುಂದರ ಕ್ಷಣಗಳು ಇದರಲ್ಲಿ ಇರಲಿವೆ. ಅಷ್ಟೇ ಅಲ್ಲದೆ, ತಮ್ಮ ವೈಯಕ್ತಿಕ ಜೀವನದಲ್ಲಿ ಅವರು ಎದುರಿಸಿದ ಕಷ್ಟಗಳು, ಅವರು ಕಂಡ ಸಾವು-ನೋವುಗಳು ಮತ್ತು ಅವುಗಳನ್ನು ಮೆಟ್ಟಿ ನಿಂತ ಅವರ ಧೈರ್ಯದ ಕಥೆಯೂ ಇದರಲ್ಲಿ ಇರಲಿವೆ.

ದ್ರೌಪದಿ ಮುರ್ಮು ಅವರು ಹುಟ್ಟಿ ಬೆಳೆದ ಒಡಿಶಾದ ಹಳ್ಳಿಯಲ್ಲಿ ಸಾಕ್ಷ್ಯಚಿತ್ರದ ಕೆಲವು ಪ್ರಮುಖ ಭಾಗಗಳ ಶೂಟಿಂಗ್ ಮುಗಿದಿದೆ ಎಂದು ಹೇಳಲಾಗುತ್ತಿದೆ. ಅವರ ಬಾಲ್ಯದ ದಿನಗಳನ್ನು ಮರುಸೃಷ್ಟಿಸಲು ಸ್ಥಳೀಯ ಕಲಾವಿದರನ್ನೇ ಬಳಸಿಕೊಂಡು ಚಿತ್ರೀಕರಣ ಮಾಡಲಾಗಿದೆ. 2022ರಲ್ಲಿ ಭಾರತದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ಮುರ್ಮು ಅವರು, ಈ ಹುದ್ದೆಗೇರಿದ ದೇಶದ ಎರಡನೇ ಮಹಿಳೆಯಾಗಿದ್ದಾರೆ.

ಹಳೆಯ ಜೋಡಿ ಮತ್ತೆ ಒಂದಾಗಿ ಮುನ್ನಡೆ:

ಈ ಹಿಂದೆ ಆಮಿರ್ ಖಾನ್ ಹಾಗೂ ಕಿರಣ್ ರಾವ್ ನಿರ್ಮಾಣದಲ್ಲಿ ಮೂಡಿಬಂದಿದ್ದ ಸೂಪರ್ ಹಿಟ್ ‘ರುಬಾರು ರೋಶ್ನಿ’ (2019) ಸಾಕ್ಷ್ಯಚಿತ್ರವನ್ನು ಕೂಡ ಸ್ವಾತಿ ಚಕ್ರವರ್ತಿ ಅವರೇ ನಿರ್ದೇಶಿಸಿದ್ದರು. ಈಗ ಈ ಯಶಸ್ವಿ ಜೋಡಿ ದ್ರೌಪದಿ ಮುರ್ಮು ಅವರ ಬಯೋಪಿಕ್ ಮಾದರಿಯ ಡಾಕ್ಯುಮೆಂಟರಿಗಾಗಿ ಮತ್ತೊಮ್ಮೆ ಕೈಜೋಡಿಸಿದೆ.

ಇದನ್ನೂ ಓದಿ: ಒಂದೇ ಕಾರಿನಲ್ಲಿ ಇಬ್ಬರು ಮಾಜಿ ಪತ್ನಿಯರು, ಭಾವಿ ಪತ್ನಿ; ಆಮಿರ್ ಖಾನ್ ಜರ್ನಿ ಕಂಡು ನೆಟ್ಟಿಗರು ಶಾಕ್

ಸದ್ಯ ಆಮಿರ್ ಖಾನ್ ಪ್ರೊಡಕ್ಷನ್ಸ್ ಸಖತ್ ಬ್ಯುಸಿಯಾಗಿದೆ. ಆಮಿರ್ ಖಾನ್ ಅವರು ಸನ್ನಿ ಡಿಯೋಲ್ ನಟನೆಯ ಮತ್ತು ರಾಜ್‌ಕುಮಾರ್ ಸಂತೋಷಿ ನಿರ್ದೇಶನದ ‘ಬಟ್ವಾರಾ 1947’ ಚಿತ್ರದ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಈ ಬಿಗ್ ಬಜೆಟ್ ಸಿನಿಮಾ ಆಗಸ್ಟ್ 14ರಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೆಎಲ್ ರಾಹುಲ್ ಔಟ್: ಟೀಮ್ ಇಂಡಿಯಾದಲ್ಲಿ 3 ಬದಲಾವಣೆ – Kannada News | India vs Afghanistan, 3rd ODI Toss And Playing XI

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಏಕದಿನ ಪಂದ್ಯ ಶುರುವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ನಿತೀಶ್ ಕುಮಾರ್ ರೆಡ್ಡಿಗೆ ಸ್ಥಾನ ಕಲ್ಪಿಸಲಾಗಿದೆ.

ಹಾಗೆಯೇ ಕಳೆದ ಮ್ಯಾಚ್​ನಲ್ಲಿ ಬೆಂಚ್ ಕಾದಿದ್ದ ಹರ್ಷ್ ದುಬೆ ಹಾಗೂ ಪ್ರಸಿದ್ಧ್ ಕೃಷ್ಣ ಈ ಪಂದ್ಯದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ಕುಲ್ದೀಪ್ ಯಾದವ್ ಹಾಗೂ ಅರ್ಷದೀಪ್ ಸಿಂಗ್ ಹೊರುಗಳಿಯಬೇಕಾಗಿ ಬಂದಿದೆ.

ಭಾರತ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷ್ ದುಬೆ, ಗುರ್ನೂರ್ ಬ್ರಾರ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್.

ಅಫ್ಘಾನಿಸ್ತಾನ್ ಪ್ಲೇಯಿಂಗ್ XI: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ದರ್ವಿಶ್ ರಸೂಲಿ, ಮೊಹಮ್ಮದ್ ನಬಿ, ಅಝ್ಮತ್​ ಒಮರ್​ಝಾಹಿ, ರಶೀದ್ ಖಾನ್, ಅಲ್ಲಾ ಗಝನ್​ಫರ್, ಜಿಯಾ ಉರ್ ರಹಮಾನ್ ಷರೀಫಿ, ಫರೀದ್ ಅಹ್ಮದ್.

ಸರಣಿ ಗೆದ್ದಿರುವ ಟೀಮ್ ಇಂಡಿಯಾ:

ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯವು ಮಳೆಯ ಕಾರಣ 25 ಓವರ್​ಗಳಿಗೆ ಸೀಮಿತವಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 24.2 ಓವರ್​ಗಳಲ್ಲಿ 194 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 22.5 ಓವರ್​ಗಳಲ್ಲಿ 195 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತು.

ಇನ್ನು ಲಕ್ನೋನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 402 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ 232 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತ ತಂಡವು 170 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.

ಇದನ್ನೂ ಓದಿ: ಗಂಭೀರ್ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದರು: ಶ್ರೀಶಾಂತ್ ಗಂಭೀರ ಆರೋಪ 

ಅಫ್ಘಾನಿಸ್ತಾನ್ ಏಕದಿನ ತಂಡ: ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಝ್ಮತ್​ ಒಮರ್​ಝಾಹಿ, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗೆಯಾಲಿಯಾ ಖರೋಟಿ, ಅಲ್ಲಾ ಗಝನ್​ಫರ್, ಬಿಲಾಲ್ ಸಮಿ, ದರ್ವೀಶ್ ರಸೂಲಿ, ಫರೀದ್ ಮಲಿಕ್, ಝಿಯಾ ಉರ್ ರೆಹಮಾನ್ ಶರೀಫಿ.

Source link