Headlines

nagaraj11081993

ಕಮರ್ಷಿಯಲ್ ಅಷ್ಟೇ ಅಲ್ಲ, ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಕಿಲೋಮೀಟರ್ ಉದ್ದದ ಕ್ಯೂ!

ಬೆಂಗಳೂರು, ಮಾರ್ಚ್ 25: ಕರ್ನಾಟಕದ ವಿವಿಧ ಕಡೆಗಳಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಮಸ್ಯೆ ತೀವ್ರಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಕೊರತೆ ಎದ್ದು ಕಾಣುತ್ತಿದೆ. ಕಲಬುರಗಿ, ಆಳಂದ, ಬಳ್ಳಾರಿ, ಸಂಡೂರು ಮತ್ತು ದಾವಣಗೆರೆಯ ಜಗಳೂರಿನಲ್ಲಿ ಜನರು ಗ್ಯಾಸ್ ಸಿಲಿಂಡರ್‌ಗಳಿಗಾಗಿ ಪರದಾಡುತ್ತಿದ್ದಾರೆ. ಇಂಡಿಯನ್ ಗ್ಯಾಸ್ ಏಜೆನ್ಸಿಗಳ ಮುಂದೆ ರಾತ್ರಿಯಿಡೀ ಸರತಿ ಸಾಲಿನಲ್ಲಿ ನಿಲ್ಲುವ ದೃಶ್ಯಗಳು ಕಂಡುಬಂದಿವೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರೂ ಸಹ ಸಿಲಿಂಡರ್ ಪಡೆಯಲು ಮಳೆ, ಗಾಳಿ, ಬಿಸಿಲನ್ನೂ ಲೆಕ್ಕಿಸದೆ ಕಾಯುತ್ತಿದ್ದಾರೆ. ಖಾಲಿ ಸಿಲಿಂಡರ್‌ಗಳನ್ನು ಕಿಲೋಮೀಟರ್‌ಗಟ್ಟಲೆ…

Read More

ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!

ಬೆಂಗಳೂರು, ಮಾರ್ಚ್​ 25: ಕರ್ನಾಟಕ ವಿಧಾನಸಭೆಯ ಮುಂಬರುವ ಬಜೆಟ್ 2026ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್ ಆಯೋಜಿಸಲಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗವಹಿಸಿದರು. ವಿಧಾನಸಭೆಯ ಸದಸ್ಯರು ಒಟ್ಟಾಗಿ ಕ್ಯಾಮರಾ ಮುಂದೆ ನಿಂತು ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ನಾವು ತಲೆ ಬಾಗುವುದಿಲ್ಲ, ಟ್ರಂಪ್ ಶಾಂತಿ ಪ್ರಸ್ತಾಪಕ್ಕೆ ಕಠಿಣ ಷರತ್ತುಗಳ ವಿಧಿಸಿದ ಇರಾನ್

ಟೆಹ್ರಾನ್, ಮಾರ್ಚ್​ 25:ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಸಂಭಾವ್ಯ ಕದನ ವಿರಾಮಕ್ಕೆ ಇರಾನ್(Iran) ಹೆಚ್ಚಿನ ಮತ್ತು ಕಠಿಣ ಷರತ್ತುಗಳನ್ನು ವಿಧಿಸಿದೆ. ಡೊನಾಲ್ಡ್ ಟ್ರಂಪ್ ಅವರ ಹೊಸ ಮಾತುಕತೆಗಳ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿ, ಗಲ್ಫ್‌ನಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳನ್ನು ಮುಚ್ಚುವುದರಿಂದ ಹಿಡಿದು ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ಪ್ರಮುಖ ಹಡಗು ಮಾರ್ಗದ ಮೇಲೆ ನಿಯಂತ್ರಣ ಸಾಧಿಸುವವರೆಗೆ ಇರಾನ್ ವ್ಯಾಪಕ ಬೇಡಿಕೆಗಳನ್ನು ಮುಂದಿಟ್ಟಿದೆ. ಅಮೆರಿಕ ಮತ್ತು ಇಸ್ರೇಲ್ ಜತೆಗಿನ ನೇರ ಮುಖಾಮುಖಿ ಸಂದರ್ಭದಲ್ಲಿ ಯಾವುದೇ ಒತ್ತಡಕ್ಕೆ ತಾನು ಮಣಿಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ….

Read More

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ, ಕೇಂದ್ರ ಸ್ಪಷ್ಟನೆ

ನವದೆಹಲಿ, ಮಾರ್ಚ್​ 25: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ನಡುವೆ, ಅನಿಲ ಕಂಪನಿಗಳು ತಮ್ಮ ಬುಕಿಂಗ್ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿವೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ಅಂತಹ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸರ್ಕಾರ  ಹೇಳಿದೆ. ತಮ್ಮ ಮುಂದಿನ ಸಿಲಿಂಡರ್ ಬುಕ್ ಮಾಡಲು ಹೆಚ್ಚು ಸಮಯ ಕಾಯಬೇಕಾಗುತ್ತದೆ ಎಂದು ಹೇಳಲಾಗಿತ್ತು. ಗ್ರಾಹಕರು ನಿಗದಿತ ಸಮಯಕ್ಕಿಂತ ಮೊದಲು ಗ್ಯಾಸ್ ಸಿಲಿಂಡರ್ ಅನ್ನು…

Read More

ರಾಜಸ್ಥಾನ ರಾಯಲ್ಸ್ ಮಾರಾಟ ಆಗಿದ್ದಕ್ಕೆ ಶೇನ್ ವಾರ್ನ್ ಕುಟುಂಬಕ್ಕೆ ಸಿಗಲಿದೆ 450 ಕೋಟಿ ರೂಪಾಯಿ

ಐಪಿಎಲ್ ಆರಂಭಕ್ಕೂ ಮೊದಲು ಕೆಲವು ಮಹತ್ವದ ಬೆಳವಣಿಗೆ ನಡೆದಿದೆ. ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರಾಟ ಆಗಿದೆ. ಆರ್​​ಸಿಬಿ ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ಖರೀದಿಸಿದರೆ, ರಾಜಸ್ಥಾನ ರಾಯಲ್ಸ್ ತಂಡವನ್ನು ಅಮೆರಿಕ ಮೂಲದ ಕಲ್ ಸೋಮಾನಿ ಒಕ್ಕೂಟ ಈ ಕಂಪನಿಯ ಶೇ. 100ರಷ್ಟು ಷೇರನ್ನು ಖರೀದಿ ಮಾಡಿದೆ. ಇದಕ್ಕಾಗಿ 15,290 ಕೋಟಿ ರೂಪಾಯಿ ಪಾವತಿಸಿದೆ. ಈ ಹಣದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ದಿವಂಗತ ಶೇನ್ ವಾರ್ನ್​​​ ಕುಟುಂಬಕ್ಕೂ 450 ಕೋಟಿ ರೂಪಾಯಿ ಸಿಗಲಿದೆ….

Read More

ದುನಿಯಾ ವಿಜಿ ತೆಲುಗು ಸಿನಿಮಾ ಕಾದಿದೆ ಸಂಕಷ್ಟ?

ದುನಿಯಾ ವಿಜಿ (Duniya Viji) ಈಗ ಕೇವಲ ಕನ್ನಡ ನಟರು ಮಾತ್ರವೇ ಅಲ್ಲ. ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿಯೂ ನಟಿಸುತ್ತಾ ಪ್ಯಾನ್ ಇಂಡಿಯಾ ನಟರಾಗುವತ್ತ ದಾಪುಗಾಲು ಹಾಕಿದ್ದಾರೆ. ಈಗಾಗಲೇ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ‘ವೀರ ನರಸಿಂಹ ರೆಡ್ಡಿ’ ಸಿನಿಮಾನಲ್ಲಿ ನಟಿಸಿದ್ದಾರೆ. ತಮಿಳಿನ ‘ಮೂಕುತ್ತಿ ಅಮ್ಮನ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತೆಲುಗಿನಲ್ಲಿ ಬಹಳ ಪ್ರಮುಖವಾದ ಸಿನಿಮಾ ಒಂದರಲ್ಲಿ ಇದೀಗ ದುನಿಯಾ ವಿಜಿ ನಟಿಸುತ್ತಿದ್ದು, ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ ಆದರೆ ಈ ಸಿನಿಮಾಕ್ಕೆ ಸಂಕಷ್ಟ…

Read More

ಆಲಿಕಲ್ಲು ಮಳೆಯಿಂದ ರೈತರು ಕಂಗಾಲು; ನೂರಾರು ಎಕರೆಯಲ್ಲಿ ಬೆಳೆದ ಕಲ್ಲಂಗಡಿ ಬೆಳೆ ಸಂಪೂರ್ಣ ನಾಶ!

ಗದಗ ಜಿಲ್ಲೆಯಲ್ಲಿ ಭಾರಿ ಗಾಳಿ, ಮಳೆ ಹಾಗೂ ಆಲಿಕಲ್ಲು ಮಳೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದಲ್ಲಿ ನೂರಾರು ಎಕರೆಗಳಲ್ಲಿ ಬೆಳೆದ ಕಲ್ಲಂಗಡಿ ತೋಟಗಳು ಹಾನಿಗೊಳಗಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಬೇಸಿಗೆಯಲ್ಲಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ವರುಣನ ಆರ್ಭಟ ದೊಡ್ಡ ಹೊಡೆತ ನೀಡಿದೆ. ಕಳೆದ ನಾಲ್ಕು–ಐದು ದಿನಗಳಿಂದ ನಿರಂತರವಾಗಿ ಸುರಿದ ಆಲಿಕಲ್ಲು ಮಳೆಯಿಂದ ಕಲ್ಲಂಗಡಿ ಹಣ್ಣುಗಳು ಹಾನಿಗೊಳಗೊಂಡಿವೆ. ಹೊಲದಲ್ಲೇ ಹಣ್ಣುಗಳು ಒಡೆದು ಹಾಳಾಗಿದ್ದು, ರಾಶಿ ರಾಶಿಯಾಗಿ ಕೊಳೆಯುತ್ತಿವೆ. ಉತ್ತಮ ಗುಣಮಟ್ಟದ ಹಣ್ಣುಗಳು ಸಂಪೂರ್ಣ ಹಾನಿಯಾಗಿರುವುದರಿಂದ ರೈತರಿಗೆ…

Read More

‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’; ಮೊನಾಲಿಸಾ ಗಂಭೀರ ಆರೋಪ

ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ತಮ್ಮ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಅವರನ್ನು ಮದುವೆ ಆದರು. ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದರು. ಇದೇ ವೇಳೆ ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ ಗಂಭೀರ ಆರೋಪ ಮಾಡಿದ್ದರು. ಇದು ಲವ್ ಜಿಹಾದ್ ಎಂದಿದ್ದರು. ಈ ಬಗ್ಗೆ ಮೋನಾಲಿಸಾ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿರ್ದೇಶಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ‘ಸನೋಹ್ ಮಿಶ್ರಾ ಚಲನಚಿತ್ರಗಳ…

Read More

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಕರಡಿಯನ್ನು10 ಸೆಕೆಂಡುಗಳಲ್ಲಿ ಗುರುತಿಸಿ

ನಿಮ್ಮ ಏಕಾಗ್ರತೆ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಮುಂದಾಗಿದ್ದೀರಾ. ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್‌ ಟೀಸರ್‌ ಚಿತ್ರಗಳು ನಿಮಗೆ ಖಂಡಿತ ಸಹಾಯ ಮಾಡುತ್ತದೆ. ಈ ಒಗಟಿನ ಆಟದಿಂದ ಆಲೋಚನಾ ಕೌಶಲ್ಯವನ್ನು ಹೆಚ್ಚಿಸಿ, ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಿದೆ. ಮೆದುಳಿಗೆ ವ್ಯಾಯಾಮ ನೀಡುವ ಇಂತಹ ಮನೋರಂಜನಾತ್ಮಕ ಈ ಒಗಟಿನ ಆಟಗಳನ್ನು ನೀವು ಇಷ್ಟ ಪಡುತ್ತೀರಾ ಅಲ್ವಾ, ಇದೀಗ ಅಂತಹದ್ದೇ  ಚಿತ್ರವೊಂದು ವೈರಲ್‌ ಆಗಿದೆ. ಈ ಚಿತ್ರದಲ್ಲಿ ಕರಡಿಯೊಂದನ್ನು ಮರೆ ಮಾಡಲಾಗಿದ್ದು, ನೀವು ಕೇವಲ 10 ಸೆಕೆಂಡುಗಳೊಳಗೆ ಈ…

Read More

ಗ್ಯಾಸ್ ಟ್ರಬಲ್ ಆಯ್ತು, ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!

ಬೆಂಗಳೂರು, ಮಾರ್ಚ್ 25: ಭಾರತ್ ಪೆಟ್ರೋಲಿಯಂ ಲಿಮಿಟೆಡ್‌ನಿಂದ ಇಂಧನ ಪೂರೈಕೆ ಸ್ಥಗಿತಗೊಂಡಿರುವುದರಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗುವ ಆತಂಕ ಎದುರಾಗಿದೆ. ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಈ ಕುರಿತು ಎಚ್ಚರಿಕೆ ನೀಡಿದೆ. ಕಂಪನಿಯು ಮುಂಗಡ ಹಣ ಪಡೆದಿದ್ದರೂ ಲೋಡ್ ನೀಡುತ್ತಿಲ್ಲ ಎಂದು ಫೆಡರೇಶನ್ ತಿಳಿಸಿದೆ. ಈ ಸಮಸ್ಯೆ ಪ್ರಸ್ತುತ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಾದ ಆನೇಕಲ್, ಕೋಲಾರ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ಭಾಗಗಳಲ್ಲಿ ಕಂಡುಬಂದಿದೆ. ಇದು ಮುಂದಿನ ದಿನಗಳಲ್ಲಿ ರಾಜಧಾನಿ…

Read More