Headlines

nagaraj11081993

ಗ್ಯಾಸ್ ಟ್ರಬಲ್ ಆಯ್ತು, ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!

ಬೆಂಗಳೂರು, ಮಾರ್ಚ್ 25: ಭಾರತ್ ಪೆಟ್ರೋಲಿಯಂ ಲಿಮಿಟೆಡ್‌ನಿಂದ ಇಂಧನ ಪೂರೈಕೆ ಸ್ಥಗಿತಗೊಂಡಿರುವುದರಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗುವ ಆತಂಕ ಎದುರಾಗಿದೆ. ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಈ ಕುರಿತು ಎಚ್ಚರಿಕೆ ನೀಡಿದೆ. ಕಂಪನಿಯು ಮುಂಗಡ ಹಣ ಪಡೆದಿದ್ದರೂ ಲೋಡ್ ನೀಡುತ್ತಿಲ್ಲ ಎಂದು ಫೆಡರೇಶನ್ ತಿಳಿಸಿದೆ. ಈ ಸಮಸ್ಯೆ ಪ್ರಸ್ತುತ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಾದ ಆನೇಕಲ್, ಕೋಲಾರ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ಭಾಗಗಳಲ್ಲಿ ಕಂಡುಬಂದಿದೆ. ಇದು ಮುಂದಿನ ದಿನಗಳಲ್ಲಿ ರಾಜಧಾನಿ…

Read More

ಎಲ್​ಪಿಜಿ ಕೊರತೆ ನಡುವೆ ಗ್ಯಾಸ್ ಬುಕಿಂಗ್ ನಿಯಮ ಬದಲಿಸಿದ ಕೇಂದ್ರ , ಸಿಲಿಂಡರ್ ಬುಕ್ ಮಾಡಿದ್ರೆ ಎಷ್ಟು ದಿನ ಕಾಯ್ಬೇಕು?

ನವದೆಹಲಿ, ಮಾರ್ಚ್​ 25: ಅಮೆರಿಕ-ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಭಾರತ ಸೇರಿ ಹಲವು ದೇಶಗಳ ಮೇಲಾಗುತ್ತಿದೆ. ಭಾರತದಲ್ಲಿ ಎಲ್​ಪಿಜಿ(LPG) ಕೊರತೆ ಎದುರಾಗಿದೆ. ಇದರ ನಡುವೆ ಕೇಂದ್ರ ಸರ್ಕಾರವು ಬುಕಿಂಗ್ ನಿಯಮವನ್ನು ಬದಲಿಸಿದೆ. ನಿನ್ನೆ ಸಂಜೆ ಹೊಸ ನಿಯಮ ಜಾರಿಗೆ ಬಂದಿದ್ದು, 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ವಿತರಣಾ ಸಮಯವನ್ನು 25 ದಿನಗಳಿಂದ 35 ದಿನಗಳಿಗೆ ಹೆಚ್ಚಿಸಲಾಗಿದೆ. ನಿಯಮದ ಪ್ರಕಾರ ಒಂದು ಸಿಲಿಂಡರ್ ಬುಕ್ ಮಾಡಿದ ನಂತರ, 35 ದಿನಗಳ ನಂತರವೇ ಎರಡನೇ ಸಿಲಿಂಡರ್ ಬುಕ್ ಮಾಡಲು ಸಾಧ್ಯವಾಗುತ್ತದೆ….

Read More

ಕೆಲಸ ಅರಸಿ ಬರುವ ಒಂಟಿ ಮಹಿಳೆಯರಿಗೆ ಬೆಂಗಳೂರು ಸೇಫಾ? ಬ್ರಿಟಿಷ್ ಯುವತಿಯ ಪ್ರಶ್ನೆಗೆ ನೆಟ್ಟಿಗರೇನಂದ್ರು?

ಬೆಂಗಳೂರು, ಮಾರ್ಚ್​ 25: ಜೀವನದಲ್ಲಿ ಏನನ್ನಾದರೂ ಸಾಧಿಸಬೆಕೆಂದುಕೊಂಡು ಬೆಂಗಳೂರಿಗೆ (Bengaluru) ಕೆಲಸ ಹುಡುಕಿ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕರ್ನಾಟಕವಷ್ಟೇ ಅಲ್ಲದೆ ಭಾರತದ ಮೂಲೆ ಮೂಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಅನ್ನ ನೀಡಿ ಸಲಹುತ್ತಿರುವ ಐಟಿ ಸಿಟಿ, ಪಾಶ್ಚಿಮಾತ್ಯರನ್ನೂ ಕೈ ಬೀಸಿ ಕರೆಯುತ್ತದೆ. ಹೀಗಿರುವಾಗ ಒಬ್ಬಂಟಿಯಾಗಿರಲು ಬೆಂಗಳೂರು ಸುರಕ್ಷಿತವೆ (Women Safety)ಎಂಬ ಪ್ರಶ್ನೆ ಹಲವರನ್ನು ಕಾಡುವುದುಂಟು. ಅದರಲ್ಲಿಯೂ ಒಬ್ಬಂಟಿ ಮಹಿಳೆಯರು ಇಲ್ಲಿ ನೆಮ್ಮದಿಯಿಂದ ಜೀವಿಸಬಹುದೆ ಎಂಬುದೂ ಗಮನಾರ್ಹವೇ. ಇದೇ ಕುತೂಹಲವನ್ನಿಟ್ಟುಕೊಂಡು ಪ್ರಶ್ನೆ ಮಾಡಿದ ಯುಕೆ ಯುವತಿಯೊಬ್ಬಳ ರೆಡಿಟ್…

Read More

ಹೈದರಾಬಾದ್​ ಮೇಲೆ ಕಣ್ಣು ಹಾಕಿದ ಬಾಲಿವುಡ್, ಹಾಲಿವುಡ್: ಕಾರಣ?

ಭಾರತೀಯ ಚಿತ್ರರಂಗ ಎಂದರೆ ಅದು ಬಾಲಿವುಡ್ (Bollywood) ಎಂಬ ಕಾಲವೊಂದಿತ್ತು. ಆದರೆ ಈಗ ಅದು ಬದಲಾಗಿದೆ. ಭಾರತದ ಇತರೆ ಚಿತ್ರರಂಗ ಅದರಲ್ಲೂ ದಕ್ಷಿಣ ಭಾರತದ ಚಿತ್ರರಂಗಗಳು ಬಾಲಿವುಡ್ ಅನ್ನು ಮೀರಿ ಬೆಳೆದಿವೆ ಮತ್ತು ವಿಶ್ವದಾದ್ಯಂತ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿವೆ. ತೆಲುಗು ಚಿತ್ರರಂಗವಂತೂ ಭಾರತದ ಅತ್ಯಂತ ಯಶಸ್ವಿ ಚಿತ್ರರಂಗ ಎನಿಸಿಕೊಂಡಿದೆ. ವಿಶ್ವದಾದ್ಯಂತ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದೆ. ಯಾವ ಮಟ್ಟಿಗೆಂದರೆ ಇದೀಗ ಬಾಲಿವುಡ್​​ನವರು ಸಹ ಹೈದರಾಬಾದ್​​ ಕಡೆ ಮುಖ ಮಾಡಿದ್ದಾರೆ. ಹಾಲಿವುಡ್ ಸಹ ಅದೇ ದಾರಿ ಹಿಡಿದಿವೆ. ‘ಬಾಹುಬಲಿ’, ‘ಪುಷ್ಪ’, ‘RRR’,…

Read More

ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗು!

ದಾವಣಗೆರೆ, ಮಾರ್ಚ್ 25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಸಾದಿಕ್ ಪೈಲ್ವಾನ್, ‘ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಶಕ್ತಿ ಪ್ರದರ್ಶನವಾಗಬೇಕು. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಮತ್ತು…

Read More

ಕೇವಲ ಒಂದು ಕೋಟಿ ಗಳಿಸಿದ ಪವನ್ ಕಲ್ಯಾಣ್ ಸಿನಿಮಾ; ‘ಧುರಂಧರ್ 2’ ಎದುರು ಮಂಕಾದ ಉಸ್ತಾದ್

‘ಧುರಂಧರ್ 2’ ಸಿನಿಮಾ (Dhurandhar 2 Movie) ಅಬ್ಬರಕ್ಕೆ ಎಲ್ಲರೂ ನಡುಗಿ ಹೋಗಿದ್ದಾರೆ. ಇಡೀ ಬಾಕ್ಸ್ ಆಫೀಸ್​ ಶೇಕ್ ಆಗುತ್ತಿದೆ. ಈ ಚಿತ್ರದ ನಾಗಾಲೋಟಕ್ಕೆ ಎಲ್ಲಾ ಸಿನಿಮಾಗಳು ಮಂಕಾಗುತ್ತಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವಂತೂ ಮಕಾಡೆ ಮಲಗಿದೆ. ಈ ಚಿತ್ರ ಮಂಗಳವಾರ ಗಳಿಕೆ ಮಾಡಿದ್ದು ಕೇಲವ ಒಂದು ಕೋಟಿ ರೂಪಾಯಿ. ಆದರೆ, ತೆಲುಗು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆದ ‘ಧುರಂಧರ್ 2’ಸಿನಿಮಾ, ಪವನ್ ಚಿತ್ರಕ್ಕಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ‘ಧುರಂಧರ್ 2’…

Read More

Video: ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಗೆ ಹೆಗಲು ನೀಡಿದ ಪುಟಾಣಿ

ಪುಟಾಣಿಗಳ (little kids) ತೊದಲು ನುಡಿ, ತುಂಟಾಟ, ಅಪ್ಪ ಅಮ್ಮನ ಮುದ್ದಿಸುವ ರೀತಿ ನೋಡುವುದೇ ಚಂದ. ಕೆಲವೊಮ್ಮೆ ಈ ಪುಟಾಣಿ ಮಕ್ಕಳು ತಾವು ಮಾಡುವ ಕೆಲಸದಿಂದಲೇ ದೊಡ್ಡವರಂತೆ ಕಾಣುವುದಿದೆ.. ಇದೀಗ ಈ ಪುಟಾಣಿಯೂ ದೊಡ್ಡವರಂತೆ ನಡೆದುಕೊಂಡಿದೆ. ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಯನ್ನು (mother) ಪುಟಾಣಿಯೊಂದು ತನ್ನ ಹೆಗಲ ಮೇಲೆ ಹೊತ್ತುಕೊಳ್ಳಲು ಪ್ರಯತ್ನಿಸಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ನೆಟ್ಟಿಗರು ತಾಯಿ ಮಗನ ಬಾಂಧವ್ಯಕ್ಕೆ ಫಿದಾ ಆಗಿದ್ದಾರೆ. Leenesh Madhav ಹೆಸರಿನ ಫೇಸ್ಬುಕ್…

Read More

MNREGA: ಕರ್ನಾಟಕ ನರೇಗಾದಲ್ಲಿ ಭಾರಿ ಅಕ್ರಮ, ಸಿಎಜಿ ವರದಿಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ

ಬೆಂಗಳೂರು, ಮಾರ್ಚ್​ 25: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಮಂಡನೆಯಾದ ಮಹಾಲೇಖಾಪರಿಶೋಧಕರ (CAG) ವರದಿಯು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅನುಷ್ಠಾನದಲ್ಲಿ ಭಾರಿ ಅಕ್ರಮಗಳು ನಡೆದಿರುವುದನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ, ಈಗಾಗಲೇ ಪೂರ್ಣಗೊಂಡ ಮನೆ ಕಾಮಗಾರಿಗಳಿಗೆ ಮತ್ತೆ ಹಣ ಪಾವತಿ ಮಾಡಿರುವುದು, ಅರ್ಹತೆಯಿಲ್ಲದವರಿಗೆ ಹಣ ನೀಡಿರುವುದು ಹಾಗೂ ಯಾವುದೇ ಕೆಲಸ ಮಾಡದೇ ಕಾರ್ಮಿಕರಿಗೆ ವೇತನ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಕೆಲಸವೇ ಇಲ್ಲದೆ ವೇತನ! ಕೆಲವು ಸ್ಥಳಗಳಲ್ಲಿ ನಿರ್ಮಾಣ ಕಾರ್ಯವೇ ನಡೆಯದಿದ್ದರೂ ಕಾರ್ಮಿಕರಿಗೆ…

Read More

ಅಮೆರಿಕ-ಇರಾನ್ ಸಂಘರ್ಷ: ಭೂತದ ಬಾಯಲ್ಲಿ ಭಗವದ್ಗೀತೆಯಂತೆ ಶೆಹಬಾಜ್ ಬಾಯಲ್ಲಿ ಶಾಂತಿ ಮಂತ್ರ

ಇಸ್ಲಾಮಾಬಾದ್, ಮಾರ್ಚ್​ 25: ಅಂದು ಭಾರತ-ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಏನು ಮಾಡಿದ್ದರೂ, ಅದೇ ಕೆಲಸವನ್ನು ಈಗ ಇರಾನ್-ಅಮೆರಿಕ ಮಧ್ಯೆ ಹುಟ್ಟುಕೊಂಡಿರುವ ಉದ್ವಿಗ್ನತೆ ನಡುವೆ ಪಾಕ್ ಮಾಡಲು ಹೊರಟಿದೆ. ಯಾರೂ ಆಹ್ವಾನಿಸದಿದ್ದರೂ ಶೆಹಬಾಜ್ ಷರೀಫ್ ಮಧ್ಯಸ್ಥಿಕೆಗೆ ಬಂದು ಕುಳಿತಿದ್ದಾರೆ, ತಾವು ಶಾಂತಿ ಸ್ಥಾಪಕ ಎಂದು ಕರೆದುಕೊಳ್ಳುತ್ತಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಿನ ಒಪ್ಪಂದದ ನಂತರ, ಎರಡೂ ದೇಶಗಳ ನಡುವೆ ಅರ್ಥಪೂರ್ಣ ಮತ್ತು ನಿರ್ಣಾಯಕ ಸಂವಾದವನ್ನು ಆಯೋಜಿಸಲು ಪಾಕಿಸ್ತಾನ ಸಿದ್ಧವಾಗಿದೆ ಎಂದು…

Read More

ಅಬ್ಬಬ್ಬಾ! ಇಡೀ ರಾಜ್ಯದಲ್ಲಿ ಪ್ರತಿದಿನಕ್ಕೆ ಇಷ್ಟು ಕಸ ಸಂಗ್ರಹಣೆಯಾಗುತ್ತಾ?

ಬೆಂಗಳೂರು, ಮಾರ್ಚ್​ 25: ವಿಧಾನ ಪರಿಷತ್‌ನಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ (Waste management) ಕುರಿತು ಮಹತ್ವದ ಮಾಹಿತಿ ಹೊರಬಂದಿದೆ. ಪೌರಾಡಳಿತ ಸಚಿವ ರಹೀಂ ಖಾನ್ ಮಂಗಳವಾರ ಪರಿಷತ್‌ನಲ್ಲಿ ಮಾತನಾಡುತ್ತಾ, ಬೆಂಗಳೂರು ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳು (ULBs) ಪ್ರತಿದಿನ ಒಟ್ಟು 7,304 ಮೆಟ್ರಿಕ್ ಟನ್ ಘನ ತ್ಯಾಜ್ಯವನ್ನು ಸಂಗ್ರಹಿಸುತ್ತಿವೆ ಎಂದು ತಿಳಿಸಿದ್ದಾರೆ. ಇದರಲ್ಲಿ 6,083 ಮೆಟ್ರಿಕ್ ಟನ್ ತ್ಯಾಜ್ಯವನ್ನು ಸಂಸ್ಕರಿಸಲಾಗುತ್ತಿದೆ ಎಂದು ವಿವರಿಸಿದರು. ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಡಿಪಿಆರ್…

Read More