All posts by nagaraj11081993

ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳ ವರದಿ ನಾರ್ಮಲ್ ಇದ್ದರೂ ದಿನಪೂರ್ತಿ ದಣಿವೇ? ಈ 4 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಗಮನ

ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳ ವರದಿ ನಾರ್ಮಲ್ ಇದ್ದರೂ ದಿನಪೂರ್ತಿ ದಣಿವೇ? ಈ 4 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಗಮನ

ತುಂಬಾ ಸುಸ್ತು (fatigue) ಎನ್ನುವುದು ಇತ್ತೀಚೆಗೆ ಸಾಮಾನ್ಯವಾಗಿ ಪ್ರತಿಯೊಬ್ಬರ ಬಾಯಲ್ಲೂ ಕೇಳಿಬರುವ ಮಾತು. ಬಹುತೇಕ ಜನರಿಗೆ ದಿನಪೂರ್ತಿ ದಣಿವು ಕಾಣಿಸಿಕೊಂಡರೆ, ಇನ್ನು ಕೆಲ ಮಂದಿಗೆ ಇದು ಅಲ್ಪಕಾಲಿಕವಾಗಿ ಅನುಭವಕ್ಕೆ ಬಂದಿರುತ್ತದೆ. ಹೀಗಾಗಿ ಕೆಲಸ ಮಾಡಲು ಮನಸ್ಸಾಗುವುದಿಲ್ಲ ಮತ್ತು ಸಣ್ಣ ಕೆಲಸಗಳೂ ಕಷ್ಟವಾಗುತ್ತವೆ ಎಂಬ ಕಾರಣಕ್ಕೆ ಜನರು ಬ್ಲಡ್ ಟೆಸ್ಟ್, ಥೈರಾಯ್ಡ್, ಶುಗರ್ ಹಾಗೂ ವಿಟಮಿನ್ B12 ಮತ್ತು D ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅವುಗಳ ವರದಿ ನಾರ್ಮಲ್ ಬಂದರೂ ದಣಿವು ಕಡಿಮೆಯಾಗುವುದಿಲ್ಲ. ಬಹುಪಾಲು ಜನರು ಇದನ್ನು ಸಾಮಾನ್ಯ ದೌರ್ಬಲ್ಯವೆಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ದೇಹದ ಈ ಲಕ್ಷಣಗಳ ಹಿಂದೆ ಆರೋಗ್ಯ ಸಮಸ್ಯೆಗಳು ಇರಬಹುದು. ಸಮಯಕ್ಕೆ ಗಮನ ಕೊಡದಿದ್ದರೆ ದೀರ್ಘಕಾಲ ಸಮಸ್ಯೆಯಾಗಬಹುದು.

ದಿನಪೂರ್ತಿ ದಣಿವಿಗೆ ಇವೂ ಕಾರಣ ಆಗಿರಬಹುದು

ಕ್ರೋನಿಕ್ ಫ್ಯಾಟಿಗ್ ಸಿಂಡ್ರೋಮ್: ಈ ಸ್ಥಿತಿಯಲ್ಲಿ ವ್ಯಕ್ತಿಗೆ ದೀರ್ಘಕಾಲದ ದಣಿವು ಇರುತ್ತದೆ. ವಿಶ್ರಾಂತಿ ತೆಗೆದುಕೊಂಡರೂ ದಣಿವು ಹೋಗುವುದಿಲ್ಲ. ನಿದ್ರೆಯಾದರೂ ಫ್ರೆಶ್ ಅನಿಸದು, ಗಮನ ಕೇಂದ್ರೀಕರಿಸಲು ಕಷ್ಟವಾಗುತ್ತದೆ.

ಸ್ಲೀಪ್ ಅಪ್ನಿಯಾ: ನಿದ್ರೆಯ ಸಮಯದಲ್ಲಿ ಉಸಿರಾಟಕ್ಕೆ ಮತ್ತೆ ಮತ್ತೆ ತೊಂದರೆ ಆಗುವುದು ಈ ರೋಗದ ಲಕ್ಷಣ. ಇದರಿಂದ ನಿದ್ರೆ ಸಂಪೂರ್ಣವಾಗುವುದಿಲ್ಲ. ದಿನಪೂರ್ತಿ ನಿದ್ರೆ ಬರುವುದು, ತಲೆನೋವು ಮತ್ತು ದಣಿವು ಮುಂದುವರಿಯುತ್ತದೆ.

ಹಾರ್ಮೋನ್‌ ಅಸಮತೋಲನ: ಥೈರಾಯ್ಡ್ ಸೇರಿದಂತೆ ಹಾರ್ಮೋನ್‌ಗಳಲ್ಲಿ ಅಸಮತೋಲನ ಉಂಟಾದರೆ ದೇಹದ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ದಣಿವು, ಮನೋಭಾವದ ಬದಲಾವಣೆ (ಮೂಡ್ ಸ್ವಿಂಗ್) ಮತ್ತು ತೂಕದಲ್ಲಿ ಬದಲಾವಣೆ ಕಾಣಬಹುದು.

ಮಾನಸಿಕ ಆರೋಗ್ಯ ಸಮಸ್ಯೆಗಳು: ಡಿಪ್ರೆಶನ್ ಮತ್ತು ಆಂಕ್ಸೈಟಿ ರೀತಿಯ ಸಮಸ್ಯೆಗಳು ದೇಹವನ್ನು ದಣಿಗೊಳಿಸುತ್ತವೆ. ಮನಸ್ಸಿನ ಒತ್ತಡದಿಂದ ದೇಹದಲ್ಲಿ ಎನರ್ಜಿ ಕಡಿಮೆಯಾಗುತ್ತದೆ ಮತ್ತು ನಿರಂತರ ದಣಿವು ಉಂಟಾಗುತ್ತದೆ.

ಇದನ್ನೂ ಓದಿ: ದೇಹದಲ್ಲಿ ಈ ಲಕ್ಷಣಗಳು ಕಂಡುಬಂದರೆ ಬೇಡ ನಿರ್ಲಕ್ಷ್ಯ; ಅವಾಗಿರಬಹುದು ಬ್ರೈನ್ ಸ್ಟ್ರೋಕ್ ಮುನ್ಸೂಚನೆ!

ಸಾಕಷ್ಟು ನಿದ್ರೆ ಮಾಡಿದರೂ ದಣಿವು ಕಡಿಮೆಯಾಗದಿರುವುದು, ಗಮನ ಕೇಂದ್ರೀಕರಿಸಲು ಕಷ್ಟವಾಗುವುದು ಈ ರೀತಿಯ ಆರೋಗ್ಯ ಸಮಸ್ಯೆಯ ಪ್ರಮುಖ ಲಕ್ಷಣ ತಲೆನೋವಿನ ಜೊತೆಗೆ, ದೇಹ ಭಾರವಾಗಿರುವ ಅನುಭವವೂ ಕೆಲವರಲ್ಲಿ ಕಂಡುಬರುತ್ತದೆ. ನಿದ್ರೆಯ ವೇಳೆ ಗೊರಕೆ ಹೊಡೆಯುವುದು ಅಥವಾ ಬೆಳಗ್ಗೆ ಎದ್ದರೂ ತಾಜಾತನ ಕಾಣಿಸದಿರುವುದು ಕೂಡ ಸಾಮಾನ್ಯ ಲಕ್ಷಣಗಳೆಂದೇ ಪರಿಗಣಿಸಲ್ಪಟ್ಟಿವೆ. ಇವುಗಳ ಪೈಕಿ ಯಾವುದೇ ಆರೋಗ್ಯ ಲಕ್ಷಣಗಳು ದೀರ್ಘಕಾಲ ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ.

ಈ ಸಮಸ್ಯೆಗಳಿಂದ ದೂರ ಉಳಿಯುವುದು ಹೇಗೆ?

ಪ್ರತಿದಿನ 7–8 ಗಂಟೆ ಉತ್ತಮ ನಿದ್ರೆ ಮಾಡುವ ಜೊತೆಗೆ, ಹಣ್ಣು, ತರಕಾರಿ ಮತ್ತು ಪ್ರೋಟೀನ್ ಒಳಗೊಂಡ ಸಮತೋಲನ ಆಹಾರ ಸೇವಿಸಿ. ಯೋಗ ಮತ್ತು ಧ್ಯಾನದಿಂದ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಿ. ಹಾಗೆಯೇ ವ್ಯಾಯಾಮ ಮಾಡುವುದನ್ನೂ ಅಭ್ಯಾಸ ಮಾಡಿಕೊಳ್ಳಿ. ಸ್ಕ್ರೀನ್ ಟೈಮ್ ಕಡಿಮೆ ಮಾಡಿ, ಮಲಗುವ ಮೊದಲು ಮೊಬೈಲ್ ಬಳಕೆ ತಪ್ಪಿಸಿ ಎಂಬುದು ವೈದ್ಯರ ಸಲಹೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಾವುಂಡಿ ದೇವಾಲಯದಲ್ಲಿ ರಣವೀರ್ ಸಿಂಗ್ ಕ್ಷಮೆ ಕೇಳಬೇಕು: ದೂರುದಾರರ ಒತ್ತಾಯ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಈಗಾಗಲೇ ಕ್ಷಮೆ ಕೇಳಿದ್ದಾರೆ. ಆದರೂ ದೂರುದಾರರು ಕಾನೂನು ಹೋರಾಟ ಮುಂದುವರಿಸಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದು ಕೋರಿ ರಣವೀರ್ ಸಿಂಗ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ನಡೆಯುತ್ತಿದೆ. ‘ಚಾವುಂಡಿ ದೇವಾಲಯಕ್ಕೆ ರಣವೀರ್ ಸಿಂಗ್ (Ranveer Singh) ಭೇಟಿ ನೀಡಲೇಬೇಕು’ ಎಂದು ದೂರುದಾರರು ಬೇಡಿಕೆ ಇಟ್ಟಿದ್ದಾರೆ.

ಈಗಾಗಲೇ ತಮ್ಮ ವಿವಾದಾತ್ಮಕ ಹೇಳಿಕೆಗಾಗಿ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಖಾತೆ ಮೂಲಕ ಕ್ಷಮೆ ಯಾಚಿಸಿರುವ ರಣವೀರ್ ಸಿಂಗ್, ಕಾನೂನಾತ್ಮಕವಾಗಿಯೂ ಪಶ್ಚಾತ್ತಾಪ ವ್ಯಕ್ತಪಡಿಸಲು ಮುಂದಾಗಿದ್ದಾರೆ. ನ್ಯಾಯಾಲಯಕ್ಕೆ ಅಧಿಕೃತವಾಗಿ ಕ್ಷಮೆಯಾಚನೆಯ ಪ್ರಮಾಣಪತ್ರ ಸಲ್ಲಿಸುವುದಾಗಿ ಅವರ ಪರ ವಕೀಲರು ಹೈಕೋರ್ಟ್ ಪೀಠಕ್ಕೆ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ದೂರುದಾರರಾಗಿರುವ ಪ್ರಶಾಂತ್ ಮೆತಾಲ್ ಅವರು ರಣವೀರ್ ಸಿಂಗ್ ಅವರ ಕ್ಷಮೆ ಯಾಚನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಕೇವಲ ಟ್ವೀಟ್ ಅಥವಾ ಪೇಪರ್ ಮೇಲೆ ಕ್ಷಮೆ ಕೇಳಿದರೆ ಸಾಲದು. ರಣವೀರ್ ಸಿಂಗ್ ಅವರಲ್ಲಿ ನೈಜ ಪಶ್ಚಾತ್ತಾಪವಿರಬೇಕು. ಅವರು ಖುದ್ದಾಗಿ ಚಾವುಂಡಿ ದೇವಾಲಯಕ್ಕೆ ಭೇಟಿ ನೀಡಿ ದೈವದ ಮುಂದೆ ಕ್ಷಮೆ ಕೇಳಬೇಕು’ ಎಂದು ವಾದಿಸಿದ್ದಾರೆ.

ದೂರುದಾರರ ಬೇಡಿಕೆಗೆ ಸ್ಪಂದಿಸಿರುವ ರಣವೀರ್ ಸಿಂಗ್ ಪರ ವಕೀಲರು, ‘ಅವರು ಚಾವುಂಡಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಯಾಚಿಸಲಿದ್ದಾರೆ ಹಾಗೂ ಅದರೊಂದಿಗೆ ನ್ಯಾಯಾಲಯಕ್ಕೂ ಪ್ರಮಾಣಪತ್ರ ಸಲ್ಲಿಸಲಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬೆಳವಣಿಗೆಯ ನಂತರ ಹೈಕೋರ್ಟ್‌ನ ಏಕಸದಸ್ಯ ಪೀಠವು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 10ಕ್ಕೆ ಮುಂದೂಡಿದೆ.

ಇದನ್ನೂ ಓದಿ: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್​ಗಳು; ಆರ್​ಜಿವಿ ಟೀಕೆ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಅವರ ನಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದು ರಣವೀರ್ ಸಿಂಗ್ ಅವರ ಉದ್ದೇಶ ಆಗಿತ್ತು. ಆದರೆ ಅದನ್ನು ವ್ಯಕ್ತಪಡಿಸುವ ಭರದಲ್ಲಿ ಅವರು ತೋರಿದ ಮುಖಭಾವದಿಂದ ದೈವಕ್ಕೆ ಅವಮಾನ ಆಗಿದೆ ಎಂಬ ಆರೋಪ ಕೇಳಿಬಂತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮತಾಂತರಗೊಂಡು ವಿವಾಹವಾಗಬೇಕು ಎಂದು ಬಾಲಕಿಗೆ ಕಿರುಕುಳ ಆರೋಪ: ಮುಸ್ಲಿಂ ಬಾಲಕನ ಮೇಲೆ ಹಲ್ಲೆ

ಮೂಡಿಗೆರೆ, ಮಾ.24: ಚಿಕ್ಕಮಗಳೂರಿನ ಬಿಳುಗುಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮತ್ತು ಅನ್ಯಕೋಮಿನ ಅಪ್ರಾಪ್ತ ಬಾಲಕನ ನಡುವಿನ ವಿಚಾರವು ಈಗ ಸಂಘರ್ಷಕ್ಕೆ ಕಾರಣವಾಗಿದ್ದು, ಪೊಲೀಸರು ಎರಡು ಗುಂಪುಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತಾಂತರದ ಒತ್ತಾಯ ಮತ್ತು ಅಶ್ಲೀಲ ಫೋಟೋಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಆರೋಪ ಒಂದೆಡೆಯಾದರೆ, ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಮತ್ತೊಂದೆಡೆ ಕೇಳಿಬಂದಿದೆ. ಬಾಲಕಿಯ ತಂದೆ ನೀಡಿದ ದೂರಿನನ್ವಯ, ಅಪ್ರಾಪ್ತ ಬಾಲಕ ಮತ್ತು ಆತನ ತಂದೆ ಇಲಿಯಾಸ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬಾಲಕಿಯು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ತನ್ನನ್ನು ವಿವಾಹವಾಗಬೇಕು ಎಂದು ಬಾಲಕ ಒತ್ತಾಯಿಸುತ್ತಿದ್ದ, ಬಾಲಕಿ ಒಪ್ಪದಿದ್ದಾಗ ಆಕೆಯ ಕೆಲವು ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿ ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್ (BNS) 329(4), ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 (ಮತಾಂತರ ನಿಷೇಧ ಕಾಯ್ದೆ), ಐಟಿ ಆಕ್ಟ್ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಬಿಜೆಪಿಗೆ ಮುಸ್ಲಿಂ ಸಾಥ್! ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮಹಿಳೆಯರು

ಅಪ್ರಾಪ್ತ ಬಾಲಕ ನೀಡಿದ ದೂರಿನನ್ವಯ, ಆತನ ಮೇಲೆ ಹಲ್ಲೆ ನಡೆಸಿದ ಆರೋಪದಡಿ 6 ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ದಿನಾಂಕ 23-03-2026ರಂದು ಸಂಜೆ ಕಬಾಬ್ ಅಂಗಡಿ ಬಳಿ ಕರೆಸಿಕೊಂಡ ಆರೋಪಿಗಳಾದ ಪ್ರಶಾಂತ್, ಸುದೇವ್, ಪ್ರಣೀತ್, ಚಂದ್ರು, ಪುಷ್ಪ ಮತ್ತು ವಿನೋದ್ ಎಂಬುವವರು ಬಾಲಕನಿಗೆ ಮುತ್ತಿಗೆ ಹಾಕಿ, ಕೆನ್ನೆಗೆ ಹೊಡೆದು, ಕುತ್ತಿಗೆ ಹಿಸುಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತಾವಿಬ್ಬರೂ ಈ ಹಿಂದೆ ಪ್ರೀತಿಸುತ್ತಿದ್ದು, ಪೋಷಕರು ಬುದ್ಧಿವಾದ ಹೇಳಿದ ಮೇಲೆ ಓದಿನ ಕಡೆ ಗಮನ ಹರಿಸಿದ್ದೆವು. ಆದರೆ ಹಳೆಯ ವಿಚಾರಕ್ಕೆ ಈಗ ಹಲ್ಲೆ ನಡೆಸಲಾಗಿದೆ ಎಂದು ಬಾಲಕ ದೂರಿದ್ದಾನೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬೆಂಗಳೂರು, ಮಾರ್ಚ್​ 24: ಬೆಂಗಳೂರಿನ ಬಾರ್​ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಿಲಿಂಡರ್ ಅಭಾವದ ಎಫೆಕ್ಟ್​​ಗೆ ಮಾಂಸಾಹಾರ ಪದಾರ್ಥಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಗ್ರಾಹಕರು ಇಷ್ಟಪಡುವ ಚಿಕನ್, ಮಟನ್ ಮತ್ತು ಫಿಶ್ ಐಟಂಗಳನ್ನು ನೀಡಲು ಮಾಲೀಕರಿಗೆ ಕಷ್ಟವಾಗಿದೆ. ಸದ್ಯ ಸಲಾಡ್ ಮತ್ತು ಕೆಲವು ಸರಳ ಐಟಂಗಳನ್ನು ಮಾತ್ರ ನೀಡಲಾಗುತ್ತಿದೆ. ವ್ಯಾಪಾರದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಗ್ರಾಹಕರು ನಾನ್-ವೆಜ್‌ಗಾಗಿ ಬರುತ್ತಿದ್ದರೂ, ಗ್ಯಾಸ್ ಇಲ್ಲದ ಕಾರಣ ಅವರಿಗೆ ಬೇಕಾದ ಆಹಾರವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಬಾರ್​ ಮತ್ತು ರೆಸ್ಟೋರೆಂಟ್ ಮಾಲೀಕರು ಹೇಳುವುದೇನು ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಇರಾನ್ ಮೇಲೆ ಟ್ರಂಪ್ ಯುದ್ಧ ಘೋಷಿಸಲು ಕಾರಣರಾದ ಪೀಟ್ ಹೆಗ್ಸೆತ್ ಯಾರು?

ವಾಷಿಂಗ್ಟನ್, ಮಾರ್ಚ್ 24: ಅಮೆರಿಕ-ಇಸ್ರೇಲ್-ಇರಾನ್ ಯುದ್ಧದಲ್ಲಿ ಇದೀಗ ಗಮನ ಸೆಳೆಯುತ್ತಿರುವ ವ್ಯಕ್ತಿ ಅಮೆರಿಕದ ಪೀಟ್ ಹೆಗ್ಸೆತ್. ಇವರು ಡೊನಾಲ್ಡ್ ಟ್ರಂಪ್ (Donald Trump) ಅವರ ಕಟ್ಟಾ ಬೆಂಬಲಿಗರಲ್ಲಿ ಒಬ್ಬರು. ಅಮೆರಿಕದ ರಕ್ಷಣಾ ಕಾರ್ಯದರ್ಶಿಯಾಗಿರುವ ಪೀಟ್ ಹೆಗ್ಸೆತ್ ಅವರೇ ಇರಾನ್ ಮೇಲೆ ದಾಳಿ ನಡೆಸೋಣ ಎಂದು ಟ್ರಂಪ್​ ಕಿವಿಯೂದಿದ್ದಾರೆ ಎಂಬ ವಿಷಯ ಬಯಲಾಗಿದೆ. ಹೀಗಾಗಿ, ಈ ಪೀಟ್ ಹೆಗ್ಸೆತ್ ಬಗ್ಗೆ ಭಾರೀ ಚರ್ಚೆಗಳು ಶುರುವಾಗಿವೆ.

ಇರಾನ್ ಮೇಲೆ ಯುದ್ಧ ಮಾಡೋಣ ಎಂದು ಮೊದಲು ಹೇಳಿದ್ದೇ ಪೀಟ್ ಹೆಗ್ಸೆತ್ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಈ ಯುದ್ಧದ ಹೊಣೆಯನ್ನು ಹೆಗ್ಸೆತ್ ಹೆಗಲಿಗೆ ಹಾಕಿರುವ ಟ್ರಂಪ್ ಅವರ ಹೇಳಿಕೆಯಿಂದ ಪೀಟ್ ಹೆಗ್ಸೆತ್ ಟೀಕೆಗೆ ಗುರಿಯಾಗಿದ್ದಾರೆ. ಇಂದು ಟೆನ್ನೆಸ್ಸೀಯ ಮೆಂಫಿಸ್‌ನಲ್ಲಿ ರಾಷ್ಟ್ರೀಯ ಮಿಲಿಟರಿ ಮತ್ತು ಕಾನೂನು ಜಾರಿ ನಾಯಕರಿಗಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯುಎಸ್ ಅಧ್ಯಕ್ಷ ಟ್ರಂಪ್, ಫೆಬ್ರವರಿ 28ರಂದು ಆಪರೇಷನ್ ಎಪಿಕ್ ಫ್ಯೂರಿಯನ್ನು ಪ್ರಾರಂಭಿಸಲು ಕಾರಣವಾದ ಸಂದರ್ಭಗಳ ಬಗ್ಗೆ ಹೀಗೆ ಹೇಳಿದ್ದಾರೆ. “ಆ ದಿನ ನಾನು ಪೀಟ್‌ಗೆ ಕರೆ ಮಾಡಿದೆ. ನಾನು ಜನರಲ್ ಕೇನ್‌ಗೆ ಕರೆ ಮಾಡಿದೆ. ಈ ಬಗ್ಗೆ ಮಾತಾಡೋಣ ಎಂದು ಅವರನ್ನು ಕರೆದೆ. ಮಧ್ಯಪ್ರಾಚ್ಯದಲ್ಲಿ ನಮಗೆ ಒಂದು ಸಮಸ್ಯೆ ಇದೆ. ಇರಾನ್ 47 ವರ್ಷಗಳಿಂದ ಭಯೋತ್ಪಾದನೆಯ ಪೂರೈಕೆದಾರ ದೇಶವಾಗಿದೆ. ಆ ದೇಶ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಿದೆ. ಯಾವ ರೀತಿ ಈ ಸಮಸ್ಯೆಯನ್ನು ನಿವಾರಿಸಬಹುದು? ಎಂದು ಚರ್ಚಿಸಿದೆವು” ಎಂದಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಅಮೆರಿಕ-ಇರಾನ್ ಮಾತುಕತೆ? ಟ್ರಂಪ್ ಹೇಳಿದ್ದೇನು?

“ಆಗ ಪೀಟ್ ಹೆಗ್ಸೆತ್ ಅವರೇ ಮೊದಲು ಮಾತನಾಡಿದವರು. ಆಗ ಅವರು ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಬಿಡಬಾರದು. ನಾವು ಅವರ ಮೇಲೆ ಯುದ್ಧ ಮಾಡೋಣ ಎಂದು ಹೇಳಿದರು ಎಂದು ನನಗೆ ನೆನಪು. ಅದಾದ ನಂತರ ನಾವು ಈ ಬಗ್ಗೆ ರಾತ್ರಿಯಿಡೀ ಚರ್ಚಿಸಿ ನಿರ್ಧಾರ ತೆಗೆದುಕೊಂಡೆವು” ಎಂದು ಟ್ರಂಪ್ ಹೇಳಿದ್ದಾರೆ.

ಈ ಮೂಲಕ ಟೆಹ್ರಾನ್ ವಿರುದ್ಧದ ಮಿಲಿಟರಿ ದಾಳಿಗೆ ಬೆಂಬಲ ನೀಡಿದವರಲ್ಲಿ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಮೊದಲಿನವರು ಎಂದು ಟ್ರಂಪ್ ಸುಳಿವು ನೀಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿದ್ದು, ‘ಧುರಂಧರ್ 2’, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಎದುರು ಒಳ್ಳೆಯ ಪ್ರದರ್ಶನವನ್ನೇ ನೀಡುತ್ತಿದೆ. ಆದರೆ ಇದೀಗ ಡಾರ್ಲಿಂಗ್ ಕೃಷ್ಣ ವಿರುದ್ಧ ಕತೆ ಕದ್ದ ಆರೋಪ ಕೇಳಿ ಬರುತ್ತಿದೆ. ತಾವು ಹೇಳಿದ್ದ ಕತೆಯನ್ನು ಕದ್ದು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಅನುಮತಿ ಇಲ್ಲದೇ ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಬಳಸಿಕೊಂಡಿದ್ದಾರೆ ಎಂದು ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯಕ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಗುರು ದೇಶಪಾಂಡೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಶ್ಮಿಕಾ-ವಿಜಯ್ ಮದುವೆ ಮಾಡಿಸಿದ್ದು ಇವರೇ ನೋಡಿ

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾದರು. ಇವರ ಮದುವೆಯ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದವು. ಅದರಲ್ಲೂ ಮುಹೂರ್ತದ ದಿನ ರಶ್ಮಿಕಾ ಮತ್ತು ವಿಜಯ್ ಅವರುಗಳ ಧರಿಸಿದ್ದ ಉಡುಗೆ, ಧರಿಸಿದ್ದ ಚಿನ್ನದ ಆಭರಣಗಳಂತೂ ಎಲ್ಲರ ಮನಗೆದ್ದವು. ಇಡೀ ಮದುವೆ ಸಂಪ್ರದಾಯಿಕವಾಗಿ, ಸಾಂಸ್ಕೃತಿಕವಾಗಿ ರಿಚ್​ ಆಗಿತ್ತು. ಸುಮಾರು ಒಂದು ವಾರ ನಡೆದ ಇವರ ಮದುವೆಯನ್ನು ಅರೇಂಜ್ ಮಾಡಿದ್ದು ಇವೆಂಟ್ ಮ್ಯಾನೇಜ್​​ಮೆಂಟ್ ಸಂಸ್ಥೆಯಾದ ‘ಆರ್​​ವಿಆರ್ ಇವೆಂಟ್ ಆಂಡ್ ಡಿಜೈನ್’. ಇದರ ಮುಖ್ಯಸ್ಥೆ ಪ್ರಿಯಾ ಮಾಗಂಟಿ ಇದೀಗ ರಶ್ಮಿಕಾ ಮತ್ತು ವಿಜಯ್ ಅವರ ವಿವಾಹದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

“ಈ ವಿವಾಹವು ಕೇವಲ ಎರಡು ದೊಡ್ಡ ತಾರೆಗಳ ಮಿಲನವಾಗಿರಲಿಲ್ಲ, ಬದಲಾಗಿ ಎರಡು ಸರಳ ಮತ್ತು ಸುಂದರ ಮನಸ್ಸುಗಳ ಸಂಗಮವಾಗಿತ್ತು. ರಶ್ಮಿಕಾ ಮತ್ತು ವಿಜಯ್ ಅವರ ನಡುವಿನ ಗೌರವ ಮತ್ತು ಪ್ರೀತಿಯನ್ನು ಕಂಡು ತಾವು ಬೆರಗಾದೆ. ಅದ್ದೂರಿತನಕ್ಕಿಂತ ಹೆಚ್ಚಾಗಿ ಸಂಪ್ರದಾಯ ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ಮದುವೆ ನಡೆಯಬೇಕು ಎಂಬುದು ಈ ಜೋಡಿಯ ಆಸೆಯಾಗಿತ್ತು. ದಕ್ಷಿಣ ಭಾರತದ ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತೆ ಪ್ರತಿಯೊಂದು ಅಲಂಕಾರವನ್ನೂ ವಿನ್ಯಾಸಗೊಳಿಸಲಾಗಿತ್ತು’ ಎಂದಿದ್ದಾರೆ.

ಇದನ್ನೂ ಓದಿ:ಮುನಿಸಿಕೊಂಡ ಬಾಲಕಿಯನ್ನು ಮನೆಗೆ ಕರೆಸಿ ಊಟ ಬಡಿಸಿದ ರಶ್ಮಿಕಾ ಮಂದಣ್ಣ, ವಿಜಯ್

ರಶ್ಮಿಕಾ ಮಂದಣ್ಣ ಅವರು ತಮ್ಮ ಮದುವೆಯ ಪ್ರತಿಯೊಂದು ಸಣ್ಣ ವಿಷಯದಲ್ಲೂ ಆಸಕ್ತಿ ವಹಿಸಿದ್ದರು. ಹೂವಿನ ಅಲಂಕಾರದಿಂದ ಹಿಡಿದು ಅತಿಥಿಗಳಿಗೆ ನೀಡುವ ಉಡುಗೊರೆಯವರೆಗೆ ಎಲ್ಲವೂ ಪರಿಸರ ಸ್ನೇಹಿಯಾಗಿರಬೇಕು ಎಂಬುದು ಅವರ ಕಾಳಜಿಯಾಗಿತ್ತು. ವಿಜಯ್ ಅವರು ಸಿದ್ಧತೆಗಳ ಸಮಯದಲ್ಲಿ ಅತ್ಯಂತ ಶಾಂತವಾಗಿ ಮತ್ತು ಸಹಕಾರದಿಂದ ನಡೆದುಕೊಂಡರು. “ನನ್ನ ಜೀವನದ ಈ ವಿಶೇಷ ದಿನವನ್ನು ಅತ್ಯಂತ ನೆನಪಿನ ಬುತ್ತಿಯಾಗಿಸಲು ನೀವು ಪಟ್ಟ ಶ್ರಮಕ್ಕೆ ಧನ್ಯವಾದಗಳು” ಎಂದು ವಿಜಯ್ ಪ್ಲಾನರ್ ತಂಡಕ್ಕೆ ವೈಯಕ್ತಿಕವಾಗಿ ಕೃತಜ್ಞತೆ ಸಲ್ಲಿಸಿದ್ದಾಗಿ ಪ್ರಿಯಾ ಹೇಳಿದ್ದಾರೆ.

ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬದವರು ನೀಡಿದ ಸಹಕಾರ, ಇರಿಸಿದ ನಂಬಿಕೆಗೆ ಧನ್ಯವಾದ ಹೇಳಿರುವ ಪ್ರಿಯಾ, ವಿಶೇಷವಾಗಿ ತಾವು ಕೊಡಗಿಗೆ ರಶ್ಮಿಕಾರ ಮನೆಗೆ ಭೇಟಿ ನೀಡಿದ್ದು, ಅಲ್ಲಿ ಕೊಡವ ಸಂಪ್ರದಾಯವನ್ನು ನೋಡಿ ಕಲಿತು, ಅದನ್ನೇ ಮದುವೆಯಲ್ಲಿ ಬಳಸಿದ್ದು, ಇನ್ನೂ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ಇಷ್ಟು ದೊಡ್ಡ ಮಟ್ಟದ ಖ್ಯಾತಿ ಇದ್ದರೂ, ಈ ಜೋಡಿಯ ಸರಳತೆ ನಮಗೆ ಮಾದರಿ. ಅವರ ಬದುಕು ಹೀಗೆಯೇ ಸುಂದರವಾಗಿರಲಿ’ ಎಂದು ಶುಭ ಹಾರೈಸಿದ್ದಾರೆ.

ಪ್ರಿಯಾ ಮಾಗಂಟಿ ಅವರು ಸೆಲೆಬ್ರಿಟಿ ವೆಡ್ಡಿಂಗ್ ಪ್ರಾನರ್ ಮತ್ತು ಇವೆಂಟ್ ಆರ್ಗನೈಜರ್ ಆಗಿದ್ದಾರೆ. ಹಲವು ಕೋಟ್ಯಧಿಪತಿಗಳ ಮಕ್ಕಳ ಮದುವೆಗಳನ್ನು ಪ್ರಿಯಾ ಮಾಡಿದ್ದಾರೆ. ಕೆಲ ತಿಂಗಳ ಹಿಂದೆ ನಡೆದ ಕ್ರೀಡಾ ತಾರೆ ಪಿವಿ ಸಿಂಧು ಅವರ ಮದುವೆಗೂ ಇವರೇ ಇವೆಂಟ್ ಆರ್ಗನೈಜರ್ ಆಗಿದ್ದರು. ಇನ್ನೂ ಹಲವಾರು ಸೆಲೆಬ್ರಿಟಿಗಳ ಮದುವೆಗಳನ್ನು ಇವರು ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಿಂಗಲ್ ಪೇರೆಂಟ್ ಆಗಿ ಮಗನ ಬೆಳೆಸುವುದು ತುಂಬಾ ಕಷ್ಟ: ಮೇಘನಾ ರಾಜ್

ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ಚಿರಂಜೀವಿ ಸರ್ಜಾ (Chiranjeevi Sarja) ನಿಧನದ ಬಳಿಕ ಅವರು ಸಖತ್ ನೋವು ಅನುಭವಿಸಿದರು. ಪುತ್ರ ರಾಯನ್ (Raayan) ಜನಿಸಿದ ಬಳಿಕ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಯಿತು. ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಬೆಳೆಸುವುದು ಸುಲಭವಲ್ಲ. ಆ ಬಗ್ಗೆ ಮೇಘನಾ ರಾಜ್ (Meghana Raj) ಅವರು ಮಾತನಾಡಿದ್ದಾರೆ. ‘ರೆಯಾನ್ ಮಿಥುನ್’ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಅವರು ಖಾಸಗಿ ಜೀವನದ ವಿಷಯಗಳನ್ನು ಹಂಚಿಕೊಂಡಿದ್ದಾರೆ.

‘ಸಿಂಗಲ್ ಪೇರೆಂಟ್ ಆಗಿದ್ದಾಗ ಕಷ್ಟಗಳು ಡಬಲ್ ಆಗಿರುತ್ತವೆ. ಅದರಲ್ಲೂ ತಾಯಿಯಾಗಿ ಮತ್ತು ಸೆಲೆಬ್ರಿಟಿಯಾಗಿದ್ದಾಗ 10 ಪಟ್ಟು ಜಾಸ್ತಿ ಕಷ್ಟ ಆಗುತ್ತದೆ. ಆ ಮಗುವಿನ ಮೇಲೂ ಜನರಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ. ರಾಯನ್ ಹುಡುಗ ಆದ ಕಾರಣ ಆತನ ಜೀವನದಲ್ಲಿ ತಂದೆಯ ರೀತಿ ಮೇಲ್ ಫಿಗರ್ ಇರಬೇಕಾದ್ದು ತುಂಬಾ ಮುಖ್ಯ. ಈಗ ಅವನಿಗೆ 5 ವರ್ಷ ಆಗುತ್ತಿದೆ. ಅವನ ಚಟುವಟಿಕೆಗಳು ಬದಲಾಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ನಾನು ಸಿಂಗಲ್ ಪೇರೆಂಟ್ ಎಂಬುದು ನನಗೆ ಹೆಚ್ಚು ಫೀಲ್ ಆಗುತ್ತಿದೆ’ ಎಂದಿದ್ದಾರೆ ಮೇಘನಾ ರಾಜ್.

‘ಈ ಮೊದಲು ನಾನು ಇದನ್ನು ನಿಭಾಯಿಸಬಲ್ಲೆ ಎನಿಸಿತ್ತು. ಆದರೆ ಪ್ರತಿದಿನವೂ ನಿಭಾಯಿಸುವುದು ಕಷ್ಟ. ಸಾಕಪ್ಪ ಎನಿಸಿದ ದಿನಗಳು ಕೂಡ ಇವೆ. ಕೆಲವು ದಿನ ಅವನ ಎನರ್ಜಿ ನನ್ನ ಎನರ್ಜಿಗೆ ಹೊಂದಿಕೆ ಆಗಲ್ಲ. ನನ್ನ ಒಬ್ಬಳು ಕಸಿನ್ ಕೂಡ ಸಿಂಗಲ್ ಪೇರೆಂಟ್ ಪಾಲನೆಯಲ್ಲಿ ಬೆಳೆದವಳು. ಆಕೆಯ ಬಳಿ ಹೋಗಿ ನಾನು ಅನುಭವ ಕೇಳಿದೆ. ಸಾಕಷ್ಟು ವಿಷಯ ಚರ್ಚೆ ಮಾಡಿದೆವು. ‘ನೀನು ತಾಯಿ. ಒಳ್ಳೆಯ ತಾಯಿ ಆಗುವುದರ ಕಡೆಗೆ ಮಾತ್ರ ಗಮನ ಹರಿಸು. ತಂದೆ ಆಗಲು ಪ್ರಯತ್ನಿಸಬೇಡ. ಅದರ ಅವಶ್ಯಕತೆ ಕೂಡ ಇಲ್ಲ’ ಅಂತ ಆಕೆ ನನಗೆ ಸಲಹೆ ನೀಡಿದಳು. ನಾನು ಆ ಸಲಹೆಯನ್ನು ಗಂಭೀರವಾಗಿ ತೆಗೆದುಕೊಂಡೆ. ಅದರಿಂದ ನನಗೆ ಬಹಳ ಅನುಕೂಲ ಆಯಿತು. ಕೆಲವು ದಿನ ನನಗೆ ಕಷ್ಟ ಆಗುತ್ತದೆ. ಆಗ ರಾಯನ್ ಜೀವನದಲ್ಲಿ ಫಾದರ್ ಫಿಗರ್ ಖಂಡಿತವಾಗಿಯೂ ಬೇಕು ಎನಿಸುತ್ತದೆ’ ಎಂದು ಮೇಘನಾ ರಾಜ್ ಹೇಳಿದ್ದಾರೆ.

‘ನನ್ನನ್ನು ಅರ್ಥ ಮಾಡಿಕೊಳ್ಳುವ ಸ್ನೇಹಿತರು ಇದ್ದಾರೆ. ಅವರ ಜೊತೆ ಮಾತನಾಡಿ ಎಲ್ಲವನ್ನೂ ಹೇಳಿಕೊಳ್ಳುವುದು ಸುಲಭ. ಮಾನಸಿಕವಾಗಿ ನನ್ನ ಮೇಲೆ ಇರುವ ಭಾರ ಹೆಚ್ಚು. ರಾಯನ್​ಗೆ ಸೂಕ್ತವಾದ ಸ್ಕೂಲ್ ಹುಡುಕುವುದು, ಯಾವುದು ಬೇಕು-ಬೇಡ ಎಂದು ನಿರ್ಧರಿಸುವುದು ಕೂಡ ಕಷ್ಟ. ಎಲ್ಲವನ್ನೂ ಚರ್ಚಿಸಿ ನಿರ್ಧರಿಸಲು ನನಗೆ ಪಾರ್ಟ್ನರ್ ಇಲ್ಲ. ರಾಯನ್​​ನ ಎಲ್ಲ ಕೆಲಸಗಳನ್ನು ನಾನೇ ಮಾಡಬೇಕು. ಪಾರ್ಟ್ನರ್ ಇದ್ದರೆ ಇದನ್ನೆಲ್ಲ ಅವರು ಕೂಡ ಮಾಡಬೇಕಾಗುತ್ತದೆ. ಈಗ ನನ್ನ ತಂದೆ-ತಾಯಿಗೆ ವಯಸ್ಸಾಗುತ್ತಿದೆ. ಅವರಿಗೂ ಮಿತಿಗಳಿವೆ. ಅವರಿಗೆ ವಿಶ್ರಾಂತಿ ಬೇಕು. ನಾನು ಎಲ್ಲವನ್ನೂ ನಿಭಾಯಿಸಲೇಬೇಕು. ಅದೇ ಜೀವನ’ ಎಂದು ಮೇಘನಾ ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ‘ರಾಯನ್ ಫ್ರೆಂಡ್ಸ್​ಗೆ ಬೈಸೆಪ್ಸ್ ತೋರಿಸ್ತಾನೆ’; ಎಲ್ಲಾ ಧ್ರುವಾ ಎಫೆಕ್ಟ್ ಎಂದ ಮೇಘನಾ ರಾಜ್

ಮಗನಿಗೆ ರಾಯನ್ ಎಂದು ಹೆಸರು ಇಟ್ಟಿದ್ದರ ಹಿಂದಿನ ಇಂಟರೆಸ್ಟಿಂಗ್ ವಿಷಯವನ್ನು ಮೇಘನಾ ರಾಜ್ ವಿವರಿಸಿದ್ದಾರೆ. ‘ಮಗನ ಹೆಸರು ಯಾವುದೇ ಧರ್ಮವನ್ನು ಸೂಚಿಸುವಂತೆ ಇರಬಾರದು. ಯಾಕೆಂದರೆ, ನಾನು ಆ ರೀತಿ ಬೆಳೆದಿಲ್ಲ. ಚಿರು ಆಲೋಚನೆ ಕೂಡ ಹಾಗೆ ಇರಲಿಲ್ಲ. ಭಾರತೀಯ ಹೆಸರು ಆಗಿರಬೇಕು. ಸಂಸ್ಕೃತದ ಪದವೇ ಆಗಿರಬೇಕು ಎಂಬುದು ನನ್ನ ಆಸೆ ಆಗಿತ್ತು. ಅದಕ್ಕಾಗಿ ಹುಡುಕಿದೆವು. ರಾಯನ್ ಎಂದರೆ ಎಲ್ಲ ಧರ್ಮದಲ್ಲೂ ರಾಜಕುಮಾರ ಎಂಬ ಅರ್ಥ ಇದೆ. ಹಾಗಾಗಿ ಇದಕ್ಕಿಂತ ಉತ್ತಮ ಹೆಸರು ಬೇರೆ ಇಲ್ಲ ಅನಿಸಿತು’ ಎಂದು ಮೇಘನಾ ರಾಜ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

152820324000 ರೂಗೆ ರಾಜಸ್ಥಾನ್ ರಾಯಲ್ಸ್ ತಂಡ ಖರೀದಿಸಿದ ಉದ್ಯಮಿ ಕಾಲ್ ಸೊಮಾನಿ ಯಾರು? ಐಪಿಎಲ್​ಗೂ ಅವರಿಗೂ ಏನು ಸಂಬಂಧ?

ನವದೆಹಲಿ, ಮಾರ್ಚ್ 24: ಸೇಲ್​ಗೆ ಇಡಲಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಮಾರಾಟವಾಗುವ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ (Rajasthan Royals) ಬಿಕರಿಯಾಗಿದೆ. ಐಪಿಎಲ್​ನ ಮೂಲ ಎಂಟು ಫ್ರಾಂಚೈಸಿಗಳಲ್ಲಿ ಒಂದಾದ ರಾಜಸ್ಥಾನ್ ರಾಯಲ್ಸ್ ಅನ್ನು ಕಾಲ್ ಸೊಮಾನಿ (Kal Somani) ಅವರ ನೇತೃತ್ವದ ಕನ್ಸಾರ್ಟಿಯಂ 1.63 ಬಿಲಿಯನ್ ಡಾಲರ್​ಗೆ ಖರೀದಿ ಮಾಡಿದೆ. 1.63 ಬಿಲಿಯನ್ ಡಾಲರ್ ಎಂದರೆ ಸುಮಾರು 152820324000 ರೂ (15.28 ಸಾವಿರ ಕೋಟಿ ರೂ) ಆಗುತ್ತದೆ.

ಅಮೆರಿಕದ ರೀಟೇಲ್ ಕಿಂಗ್ ಎನಿಸಿದ ವಾಲ್ಮಾರ್ಟ್ ಮೊದಲಾದ ಹಲವು ಸಂಸ್ಥೆಗಳು ಸೇರಿ ಮಾಡಿಕೊಳ್ಳಲಾದ ಕನ್ಸಾರ್ಟಿಯಂ, ಅಥವಾ ಗುಂಪು ರಾಯಲ್ಸ್ ಫ್ರಾಂಚೈಸಿಯ ಚುಕ್ಕಾಣಿ ಹಿಡಿದಿದೆ. ಕನ್ಸಾರ್ಟಿಯಂ ನೇತೃತ್ವ ವಹಿಸಿರುವ ಕಾಲ್ ಸೋಮಾನಿ ಅವರು ಭಾರತ ಮೂಲದ ಅಮೆರಿಕನ್ ಉದ್ಯಮಿ.

ಸದ್ಯ, ರಾಜಸ್ಥಾನ್ ರಾಯಲ್ಸ್ ಮಾರಾಟವಾಗಿರುವ ಸುದ್ದಿ ಅಧಿಕೃತವಾಗಿ ಘೋಷಿಸಲಾಗಿಲ್ಲ. ಮಾಧ್ಯಮಗಳಿಗೆ ಮೂಲಗಳಿಂದ ಸಿಕ್ಕಿರುವ ಮಾಹಿತಿ. ಮುಂದಿನ ಕೆಲ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಬಹುದು.

ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲೇ ದಾಖಲೆ: 15,286 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ ರಾಯಲ್ಸ್!

ಮುಂಚಿನ ಆರ್​ಆರ್ ಮಾಲೀಕರು ಯಾರು?

ರಾಜಸ್ಥಾನ್ ರಾಯಲ್ಸ್ ತಂಡದ ಮುಂಚಿನ ಮಾಲೀಕರು ಮನೋಜ್ ಬಡಲೆ (Manoj Badale). ಬ್ರಿಟನ್ ಮೂಲದ ಮನೋಜ್ ಬಡಲೆ ಅವರು ಎಮರ್ಜಿಂಗ್ ಮೀಡಿಯಾದ ಮುಖ್ಯಸ್ಥರು. ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯಲ್ಲಿ ಇವರು ಶೇ. 65ರಷ್ಟು ಪಾಲು ಹೊಂದಿದ್ದರು. ರಾಯಲ್ಸ್​ನ ಮೊದಲ ಮಾಲೀಕರು ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ. ಬೆಟ್ಟಿಂಗ್ ಹಗರಣಕ್ಕೆ (Betting scandal) ಸಿಲುಕಿ ಅವರು ಫ್ರಾಂಚೈಸಿ ಕಳೆದುಕೊಳ್ಳಬೇಕಾಯಿತು. ಆ ಬಳಿಕ ಮನೋಜ್ ಬಡಲೆ ಅವರು ಮಾಲಕತ್ವ ಪಡೆದರು.

ಕಾಲ್ ಸೊಮಾನಿ ಅವರು ಈ ಮುಂಚೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಪ್ರಮುಖ ಷೇರುದಾರರಲ್ಲಿ ಒಬ್ಬರಾಗಿದ್ದರು. ಇದೀಗ ಅವರ ಸಂಸ್ಥೆಯು ರಾಯಲ್ಸ್ ತಂಡದ ಪೂರ್ಣ ಷೇರುಗಳನ್ನು ಖರೀದಿ ಮಾಡಿದೆ. ಈ ಮಾರಾಟ ಅಥವಾ ಖರೀದಿಯು ಅಧಿಕೃತವಾಗಿ ಘೋಷಣೆ ಆಗಬೇಕು. ಹಾಗೆಯೇ, ಬಿಸಿಸಿಐನಿಂದ ಅನುಮೋದನೆ ಕೂಡ ಆಗಬೇಕು.

ರಾಜಸ್ಥಾನ್ ರಾಯಲ್ಸ್ ತಂಡದ ಖರೀದಿಗೆ ಕಾಲ್ ಸೊಮಾನಿ ಮಾತ್ರವಲ್ಲ, ಇನ್ನೂ ಕೆಲ ದಿಗ್ಗಜರು ಪೈಪೋಟಿ ನಡೆಸಿದದ್ದರು. ಟೈಮ್ಸ್ ಗ್ರೂಪ್, ಆದಿತ್ಯ ಬಿರ್ಲಾ ಗ್ರೂಪ್, ಮಿಟ್ಟಲ್ ಕುಟುಂಬ ಮೊದಲಾದವರು ಪ್ರಯತ್ನ ಪಟ್ಟಿದ್ದರೆನ್ನಲಾಗಿದೆ.

ಇದನ್ನೂ ಓದಿ: ಎರಡು ಬಿಲಿಯನ್ ಡಾಲರ್ ಮೈಲಿಗಲ್ಲು ದಾಟಿದ ಭಾರತದ ಕ್ರೀಡಾ ಆರ್ಥಿಕತೆ

ಕಾಲ್ ಸೊಮಾನಿ ಯಾರು?

ಅಮೆರಿಕದ ಎರಿಝೋನಾದ ಸ್ಕಾಟ್ಸ್​ಡೇಲ್​ನಲ್ಲಿರುವ ಕಾಲ್ ಸೊಮಾನಿ ಅವರು ವಿವಿಧ ಉದ್ದಿಮೆಗಳ ಸ್ಥಾಪಕರೆನಿಸಿದ್ದಾರೆ. ಎಜುಟೆಕ್, ಎಐ, ಸ್ಪೋರ್ಟ್ಸ್ ಟೆಕ್, ಡಾಟಾ ಪ್ರೈವೆಸಿ ಇತ್ಯಾದಿ ಸೆಕ್ಟರ್​ಗಳಲ್ಲಿ ಇವರ ಉದ್ದಿಮೆಗಳಿಗೆ. ಅನೇಕ ಸ್ಪೋರ್ಟ್ಸ್ ತಂಡಗಳಲ್ಲಿ ಹೂಡಿಕೆ ಮಾಡಿದ್ದಾರೆ, ಭಾಗಿಯಾಗಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಸಿನಿಮಾದಿಂದ ನಿಂತೇ ಹೋಯ್ತು ಅಮಿತಾಬ್ ಬಚ್ಚನ್ ಸಿನಿಮಾ

ಧುರಂಧರ್ 2’ (Dhurandhar) ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆ ಆದ ವಾರಕ್ಕೂ ಮುಂಚೆಯೇ 500 ಕೋಟಿಗೂ ಹೆಚ್ಚು ಗಳಿಕೆಯನ್ನು ಭಾರತದಲ್ಲಿ ಮಾಡಿದೆ. ಎಲ್ಲೆಡೆ ಸಿನಿಮಾದ ಶೋಗಳು ಹೌಸ್​​ಫುಲ್ ಆಗುತ್ತಿವೆ. ಅಲ್ಲು ಅರ್ಜುನ್, ರಾಜಮೌಳಿ, ರಜನೀಕಾಂತ್, ರಾಮ್ ಚರಣ್ ಇನ್ನೂ ಹಲವು ಸೆಲೆಬ್ರಿಟಿಗಳು ‘ಧುರಂಧರ್ 2’ ಸಿನಿಮಾ ಬಗ್ಗೆ ಟ್ವೀಟ್ ಮಾಡಿ ಸಿನಿಮಾವನ್ನು ಕೊಂಡಾಡಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಂತೂ ಸಿನಿಮಾ ಬಗ್ಗೆ ಪ್ರಶಂಸೆಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಇದೀಗ ‘ಧುರಂಧರ್ 2’ ಸಿನಿಮಾದಿಂದಾಗಿ ಅಮಿತಾಬ್ ಬಚ್ಚನ್ ಅವರ ಸಿನಿಮಾ ನಿಂತು ಹೋಗಿದೆ.

ಅಮಿತಾಬ್ ಬಚ್ಚನ್ ಅವರು ‘ಸರ್ಕಾರ್’ ಹೆಸರಿನ ಸಿನಿಮಾನಲ್ಲಿ ವರ್ಷಗಳ ಹಿಂದೆ ನಟಿಸಿದ್ದರು. ಈ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಿತ್ತು. ಎರಡೂ ಭಾಗಗಳನ್ನು ರಾಮ್ ಗೋಪಾಲ್ ವರ್ಮಾ ನಿರ್ದೇಶಿಸಿದ್ದರು. ಇತ್ತೀಚೆಗಷ್ಟೆ ರಾಮ್ ಗೋಪಾಲ್ ವರ್ಮಾ ‘ಸರ್ಕಾರ್ 3’ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಆದರೆ ‘ಧುರಂಧರ್ 2’ ಸಿನಿಮಾ ನೋಡಿದ ಮೇಲೆ ‘ಸರ್ಕಾರ್ 3’ ಸಿನಿಮಾ ಮಾಡುವ ಯೋಚನೆಯನ್ನೇ ಕೈಬಿಟ್ಟಿದ್ದಾರಂತೆ ವರ್ಮಾ.

ಸಂದರ್ಶನವೊಂದರಲ್ಲಿ ಈ ಬಗ್ಗೆ ರಾಮ್ ಗೋಪಾಲ್ ವರ್ಮಾ ಮಾತನಾಡಿದ್ದು, ‘ಧುರಂಧರ್ 2’ ಸಿನಿಮಾ ಶ್ರೇಷ್ಠವಾದ ಸಿನಿಮಾ ಆಗಿದ್ದು, ಆ ಶ್ರೇಷ್ಠತೆಯನ್ನು ನನ್ನಿಂದ ಮುಟ್ಟಲು ಸಾಧ್ಯವಿಲ್ಲ. ಸಿನಿಮಾ ನಿರ್ಮಾಣದ ಒಂದು ಮಾದರಿಯನ್ನು ‘ಧುರಂಧರ್ 2’ ಸಿನಿಮಾ ಸೆಟ್​​​​​ ಮಾಡಿದೆ, ಆ ಸ್ಟಾಂಡರ್ಡ್ ಅನ್ನು ಈಗ ನನ್ನಿಂದ ತಲುಪಲು ಸಾಧ್ಯವಿಲ್ಲ, ಹಾಗಾಗಿ ‘ಸರ್ಕಾರ್ 3’ ಸಿನಿಮಾ ನಿರ್ದೇಶಿಸುತ್ತಿಲ್ಲ’ ಎಂದು ವರ್ಮಾ ಹೇಳಿದ್ದಾರೆ.

ಇದನ್ನೂ ಓದಿ:ಬರಲಿದೆಯಾ ‘ಧುರಂಧರ್ 3’? ಚಿತ್ರತಂಡದ ಪ್ರಮುಖ ಸದಸ್ಯ ಹೇಳಿದ್ದೇನು?

ಅದೇ ಸಂದರ್ಶನದಲ್ಲಿ ‘ಧುರಂಧರ್ 2’ ಸಿನಿಮಾದ ಬಗ್ಗೆ ಮಾತನಾಡಿರುವ ವರ್ಮಾ, ‘ಸಾಕಷ್ಟು ಸಿನಿಮಾಗಳು ಹಿಟ್, ಸೂಪರ್ ಹಿಟ್ ಆಗುತ್ತವೆ, ಆದರೆ ಈ ಸಿನಿಮಾ ‘ಪ್ರಭಾವ’, ‘ಪರಿಣಾಮ’ಗಳನ್ನು ಸೃಷ್ಟಿಸಿದೆ. ಇದು ಎಲ್ಲರಿಂದ ಸಾಧ್ಯವಿಲ್ಲ. ಬಾಲಿವುಡ್​ಗೆ ಹೇಗೆ ಸಿನಿಮಾ ಮಾಡಬೇಕು ಎಂಬುದನ್ನು ಆದಿತ್ಯ ತೋರಿಸಿಕೊಟ್ಟಿದ್ದಾರೆ’ ಎಂದು ವರ್ಮಾ, ‘ಧುರಂಧರ್ 2’ ಸಿನಿಮಾವನ್ನು ಕೊಂಡಾಡಿದ್ದಾರೆ.

‘ಧುರಂಧರ್ 2’ ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಅವರು ರಾಮ್ ಗೋಪಾಲ್ ವರ್ಮಾ ಅವರ ಅಭಿಮಾನಿಯಂತೆ. ವರ್ಮಾ ಅವರ ‘ಸತ್ಯ’ ಮತ್ತು ‘ಕಂಪೆನಿ’ಗಳು ತಮ್ಮ ಮೇಲೆ ಪ್ರಭಾವ ಬೀರಿರುವುದಾಗಿ ಆದಿತ್ಯ ಹೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link