Headlines

nagaraj11081993

Snake Village: ಈ ಗ್ರಾಮದ ಪ್ರತಿಯೊಂದು ಮನೆಯಲ್ಲೂ ಒಂದೊಂದು ಹಾವು; ವಿಷಕಾರಿ ಹಾವುಗಳನ್ನೇ ಸಾಕುಪ್ರಾಣಿಗಳಂತೆ ಸಾಕುವ ಗ್ರಾಮವಿದು!

ಮನುಷ್ಯ-ಹಾವುಗಳ ಅಪರೂಪದ ಸ್ನೇಹImage Credit source: Pinterest ಮಹಾರಾಷ್ಟ್ರದ ಪುಣೆ ನಗರದಿಂದ ಸುಮಾರು ಇನ್ನೂರು ಕಿಲೋಮೀಟರ್ ದೂರದಲ್ಲಿರುವ ಶೆಟ್‌ಪಾಲ್ (Shetphal) ಎಂಬ ಪುಟ್ಟ ಗ್ರಾಮವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟವಾದ ಸಂಪ್ರದಾಯಕ್ಕೆ ಹೆಸರಾಗಿದೆ. ಸಾಮಾನ್ಯವಾಗಿ ಹಾವು ಎಂದರೆ ಮನುಷ್ಯರು ಮೈಲಿ ದೂರ ಓಡುತ್ತಾರೆ, ಆದರೆ ಈ ಹಳ್ಳಿಯಲ್ಲಿ ಮಾತ್ರ ಪರಿಸ್ಥಿತಿ ಸಂಪೂರ್ಣ ಉಲ್ಟಾ. ಹೊರಗಿನವರು ಮೊದಲ ಬಾರಿಗೆ ಈ ಗ್ರಾಮಕ್ಕೆ ಭೇಟಿ ನೀಡಿದರೆ ಮುಕ್ತವಾಗಿ ಓಡಾಡುವ ಹಾವುಗಳನ್ನು ನೋಡಿ ಖಂಡಿತವಾಗಿಯೂ ಹೆದರುತ್ತಾರೆ. ಆದರೆ ಸ್ಥಳೀಯರ ಧೈರ್ಯ, ಪ್ರೀತಿ ಮತ್ತು…

Read More

‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್

ಹಿರಿಯ ನಟ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನ. ಅವರು ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಿರ್ದೇಶನದಲ್ಲಿ ಅವರಿಗೆ ತುಂಬಾನೇ ಅನುಭವ ಇದೆ. ಅವರ ಜನ್ಮದಿನದ ಪ್ರಯುಕ್ತ ಅವರ ಹಳೆಯ ಸಂದರ್ಶನ ನೆನಪಿಸಿಕೊಳ್ಳೋ ಸಮಯ. ಟಿವಿ9 ಜೊತೆ ಮಾತನಾಡಿದ್ದ ಅವರು, ‘ಸೋಲು’ ಎಂಬ ಪದದ ಬಗ್ಗೆ ಮಾತನಾಡಿದ್ದರು. ‘ಸೋಲು ಎಂಬ ಶಬ್ದ ಕೇಳಿದರೆ ನನಗೆ ಸಿಟ್ಟು ಬರುತ್ತದೆ. ಸೋಲಿನಿಂದ ನಾನು ದುಡ್ಡು ಕಳೆದಿಲ್ಲ. ಬದಲಿಗೆ ಒಂದಷ್ಟು ವಿಷಯಗಳನ್ನು ಕಲಿತಿದ್ದೇನೆ. ಅದು ನನ್ನ ಹೆಗಲಮೇಲಿದೆ. ಅದನ್ನು ಕೇಳಿದರೆ…

Read More

ಅದೆಂತಹ ನೋವು… ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಕ್ವಾಲಿಫೈಯರ್-2 ಪಂದ್ಯವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಮುಲ್ಲನ್​ಪುರ್​ನಲ್ಲಿ ನಡೆದ  ರಾಜಸ್ಥಾನ್ ರಾಯಲ್ಸ್ (RR) ಹಾಗೂ ಗುಜರಾತ್ ಟೈಟನ್ಸ್ (GT) ನಡುವಿನ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ, 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಏಕಾಂಗಿಯಾಗಿ ಹೋರಾಟ ನಡೆಸಿದರೂ ತಂಡವನ್ನು ಫೈನಲ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಈ ನೋವಿನೊಂದಿಗೆ ಮೈದಾನ ತೊರೆದ ವೈಭವ್ ಸೂರ್ಯವಂಶಿ ನೇರವಾಗಿ ತೆರಳಿದ್ದು ಡಗೌಟ್​ಗೆ. ಇತ್ತ ಪ್ರಶಸ್ತಿ ಸಮಾರೋಪ ನಡೆಯುತ್ತಿದ್ದರೆ ಅತ್ತ ವೈಭವ್ ಏಕಾಂಗಿಯಾಗಿ ಕೂತು…

Read More

Karnataka CM News Live: ಕೆಪಿಸಿಸಿ ಅಧ್ಯಕ್ಷ ಗಾದಿಗೆ ಮತ್ತೊರ್ವರ ಹೆಸರು ಸಪ್ರೈಸ್​ ಎಂಟ್ರಿ!

ವಿಧಾನಸೌಧದ ಸುತ್ತಮುತ್ತ ರಾಜಕೀಯ ಚಟುವಟಿಕೆ ಚುರುಕು ಬೆಂಗಳೂರು, ಮೇ 30: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಇಡೀ ರಾಜ್ಯ ಕಾತುರದಿಂದ ಕಾಯುತ್ತಿದೆ. ರಾಜೀನಾಮೆ ಘೊಷಿಸಿದ ನಂತರ, ಮುಂದಿನ ಸಿಎಂ ಆಗಿ ಡಿಕೆ ಶಿವಕುಮಾರ್ ಕುರ್ಚಿ ಏರಲಿದ್ದಾರೆ ಎಂದು ಸಿದ್ದರಾಮಯ್ಯ ಸುಳಿವು ನೀಡಿದ್ದರು. ಅದರಂತೆಯೇ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ (CLP) ನಡೆಯಲಿದ್ದು, ಈ ವೇಳೆ ಮುಖ್ಯಮಂತ್ರಿಯಾಗಿ ಯಾರು ರಾಜ್ಯಭಾರ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ತೆರೆ ಬೀಳಲಿದೆ. ನೂತನ ಮುಖ್ಯಮಂತ್ರಿಯ…

Read More

Pearl Astrology: ಜ್ಯೋತಿಷ್ಯದಲ್ಲಿ ಮುತ್ತುಗಳ ಮಹತ್ವ; ಮನಸ್ಸಿಗೆ ಶಾಂತಿ ಮತ್ತು ಅದೃಷ್ಟ ನೀಡುವ ರತ್ನ!

ಜ್ಯೋತಿಷ್ಯದಲ್ಲಿ ಮುತ್ತುಗಳ ಮಹತ್ವImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ರತ್ನಗಳಿಗೆ ವಿಶೇಷ ಸ್ಥಾನವಿದೆ. ಅದರಲ್ಲಿಯೂ ಬಿಳಿ ಮುತ್ತುಗಳನ್ನು ಶುದ್ಧತೆ, ಪ್ರಶಾಂತತೆ, ಸೌಂದರ್ಯ ಮತ್ತು ಸೌಭಾಗ್ಯದ ಸಂಕೇತವೆಂದು ಪರಿಗಣಿಸಲಾಗುತ್ತದೆ. ತನ್ನ ನೈಸರ್ಗಿಕ ಹೊಳಪಿನಿಂದ ಆಭರಣ ಲೋಕದಲ್ಲಿ ಸದಾ ರಾಜನಾಗಿರುವ ಮುತ್ತು, ಕೇವಲ ಸೌಂದರ್ಯವರ್ಧಕ ಮಾತ್ರವಲ್ಲ; ಧರಿಸುವವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಅದ್ಭುತ ರತ್ನವೂ ಹೌದು. ಇದಲ್ಲದೆ, ಮುತ್ತುಗಳನ್ನು ಧರಿಸುವುದರಿಂದ ಮನಸ್ಸಿನ ಶಾಂತಿ, ಅದೃಷ್ಟ ಮತ್ತು ಸಕಾರಾತ್ಮಕ ಶಕ್ತಿ ಬರುತ್ತದೆ ಎಂದು ಹಲವರು ನಂಬುತ್ತಾರೆ. ಜ್ಯೋತಿಷ್ಯ ಶಾಸ್ತ್ರ…

Read More

ಇಂಧನ ದರ ಏರಿಕೆ ಬರೆ: ಸರಕು ಸಾಗಣೆ ದರ ಹೆಚ್ಚಳಕ್ಕೆ ಲಾರಿ ಮಾಲೀಕರ ನಿರ್ಧಾರ, ಪ್ರಧಾನಿ ಮೋದಿಗೆ ಸಿಮ್ಟಾ ಪತ್ರ

ಬೆಂಗಳೂರು, ಮೇ 30: ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಜಾಗತಿಕ ಪರಿಣಾಮವಾಗಿ ದೇಶದಲ್ಲಿ ಇಂಧನ ದರಗಳು ಪದೇಪದೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳೆದ ಕೇವಲ ಹತ್ತು ದಿನಗಳಲ್ಲಿ ಬರೋಬ್ಬರಿ ನಾಲ್ಕು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಿಸಲಾಗಿದೆ. ಈ ಹಠಾತ್ ದರ ಏರಿಕೆಯಿಂದ ಕಂಗಾಲಾಗಿರುವ ದಕ್ಷಿಣ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟರ್ಸ್ ಅಸೋಸಿಯೇಷನ್ (SIMTA) ಹಾಗೂ ವಾಹನ ಮಾಲೀಕರು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ತುರ್ತು ಪತ್ರ…

Read More

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ, ನಡೆದಿದ್ದೇನು ನೋಡಿ

ಸಾಕುಪ್ರಾಣಿಗಳು ನಮ್ಮ ಕುಟುಂಬದ ಸದಸ್ಯರಂತೆಯೇ ಇದ್ದುಬಿಡುತ್ತವೆ. ನಮ್ಮ ಜತೆಯೇ ಆಟ, ನಮ್ಮ ಜತೆಯೇ ಊಟ, ನಮ್ಮ ಜತೆಯೇ ನಿದ್ರೆ ಕೂಡ. ಅವುಗಳ ವಯಸ್ಸಾಗುತ್ತಾ ಬಂದಂತೆ, ಅವುಗಳನ್ನು ಕಳೆದುಕೊಳ್ಳುವ ಭಯ ನಮ್ಮನ್ನು ಸದಾ ಕಾಡುತ್ತಿರುತ್ತದೆ. ಇಂತಹದೇ ಒಂದು ಭಾವನಾತ್ಮಕ ಕ್ಷಣ ಮಹಿಳೆಯೊಬ್ಬರ ಜೀವನದಲ್ಲಿ ಎದುರಾಯಿತು. ಆಕೆಯ ಮನೆಯಲ್ಲಿದ್ದ 19 ವರ್ಷದ ಮುದ್ದಿನ ಬೆಕ್ಕು ಸ್ವಲ್ಪ ಹೊತ್ತು ಯಾವುದೇ ಚಲನೆಯಿಲ್ಲದೆ ಮಲಗಿತ್ತು. ವಯಸ್ಸಾಗಿದ್ದರಿಂದ, ಅದು ನಿದ್ದೆಯಲ್ಲೇ ಶಾಂತವಾಗಿ ಕೊನೆಯುಸಿರೆಳೆದಿದೆ ಎಂದು ಆಕೆ ಭಾವಿಸಿದ್ದರು. ಆಳವಾದ ದುಃಖ ಮತ್ತು ಮೌನ ಇಡೀ…

Read More

ಫೈನಲ್ ಪಂದ್ಯದಲ್ಲಿ ಕೈಗೆ ಗಮ್ ಹಾಕಿ ಬ್ಯಾಟಿಂಗ್ ಮಾಡ್ತೀರಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಮೂರು ಬಾರಿ ಹಿಟ್​​ ವಿಕೆಟ್ ಆಗಿ ಔಟಾದ ಏಕೈಕ ಬ್ಯಾಟರ್ ಸಾಯಿ ಸುದರ್ಶನ್. ಅದರಲ್ಲೂ ಬ್ಯಾಕ್ ಟು ಬ್ಯಾಕ್ ಹೀಗೆ ವಿಕೆಟ್ ಒಪ್ಪಿಸಿದ ಏಕೈಕ ಆಟಗಾರ ಕೂಡ ಸಾಯಿ ಸುದರ್ಶನ್. ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಿಟ್​ ವಿಕೆಟ್ ಆಗಿದ್ದ ಸಾಯಿ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹಿಟ್ ವಿಕೆಟ್ ಆಗಿ ವಿಕೆಟ್ ಕೈಚೆಲ್ಲಿದ್ದಾರೆ. ಹೀಗಾಗಿಯೇ ಫೈನಲ್ ಪಂದ್ಯದಲ್ಲಿ ಕೈಗೆ ಗ್ಲೂ (ಗಮ್) ಹಾಕಿ…

Read More

Daily Devotional: ದೇವಸ್ಥಾನಗಳಲ್ಲಿ ಮಹಿಳೆಯರು ಅರ್ಚಕರಾಗಬಹುದೇ? ಶಾಸ್ತ್ರಗಳು ಹೇಳುವುದೇನು?

ಅರ್ಚಕ ವೃತ್ತಿಗೆ ನಮ್ಮ ಸಂಸ್ಕೃತಿಯಲ್ಲಿ ಅತೀವ ಮಹತ್ವವಿದೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರ” ಎಂಬ ಸೂಕ್ತಿ ಹೇಳುವಂತೆ, ಅರ್ಚಕರು ಮನಸ್ಸು ಮಾಡಿದರೆ ಒಂದು ಶಿಲೆಯಲ್ಲಿನ ಮೂರ್ತಿಯಲ್ಲೂ ಕೂಡ ಭಗವಂತನ ಶಕ್ತಿ ನೆಲೆಸುತ್ತದೆ. ಅರ್ಚಕರು ಭಗವಂತ ಮತ್ತು ನಮ್ಮ ನಡುವೆ ಇರುವ ಬಹುದೊಡ್ಡ ಶಕ್ತಿ. ಈ ವೃತ್ತಿಯು ಒಂದು ವಿಶೇಷವಾದ ಪುಣ್ಯದ ವೃತ್ತಿ. ಈ ಅರ್ಚಕ ವೃತ್ತಿಯಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬುದು ಪ್ರಸ್ತುತ ಪ್ರಶ್ನೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು…

Read More

Bengaluru Air Quality: ಮೈಸೂರು, ಮಂಗಳೂರು ಸೇರಿ ಕರ್ನಾಟಕದ ಇಂದಿನ ಏರ್ ಕ್ವಾಲಿಟಿ ಹೇಗಿದೆ?

ಮೈಸೂರು, ಮಂಗಳೂರು ಸೇರಿ ಕರ್ನಾಟಕದ ಇಂದಿನ ಏರ್ ಕ್ವಾಲಿಟಿ ಹೇಗಿದೆ? ಬೆಂಗಳೂರು, ಮೇ 30: ಇಂದು ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (AQI) 53 ರಿಂದ 71 ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದು ‘ಸಾಧಾರಣ’ (Moderate) ವಲಯಕ್ಕೆ ಸೇರುತ್ತದೆ. ಇತ್ತೀಚೆಗೆ ನಗರದ ಕೆಲವು ಭಾಗಗಳಲ್ಲಿ ಬಿದ್ದ ಮಳೆ ಮತ್ತು ಬೀಸುತ್ತಿರುವ ಗಾಳಿಯ ಕಾರಣದಿಂದಾಗಿ ವಾಯು ಮಾಲಿನ್ಯದ ಮಟ್ಟವು ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ಸೂಚ್ಯಂಕವು ಸಾಧಾರಣ ಮಟ್ಟದಲ್ಲಿ ದಾಖಲಾಗಿದೆ. ರಾಜ್ಯದ ಬಹುತೇಕ ಪ್ರಮುಖ…

Read More