ದಾವಣಗೆರೆ, ಎಪ್ರಿಲ್ 1: ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಟುಂಬದೊಂದಿಗೆ ಭಾಗವಹಿಸಿ, ಅಗ್ನಿಕುಂಡ ಹಾಯುವ ಮೂಲಕ ದೈವಭಕ್ತಿ ಮೆರೆದರು. ವಿಶೇಷವೆಂದರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿರುವ ಸಚಿವರ ಪುತ್ರ ಸಮರ್ಥ್ ಶಾಮನೂರು ಮತ್ತು ಪುತ್ರಿ ಶ್ರೇಷ್ಠ ಕೂಡ ತಂದೆಯೊಂದಿಗೆ ಕೊಂಡ ಹಾಯ್ದರು. ಕೊಂಡೋತ್ಸವಕ್ಕೂ ಮುನ್ನ ಸಚಿವ ಮಲ್ಲಿಕಾರ್ಜುನ ಅವರ ಕುಟುಂಬವು ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಕ್ಷೇತ್ರದ ಏಳಿಗೆಗಾಗಿ ಪ್ರಾರ್ಥಿಸಿತು. ಉಪಚುನಾವಣೆಯ ಪ್ರಚಾರದ ನಡುವೆಯೇ ಸಚಿವರ ಕುಟುಂಬ ಈ ರೀತಿ ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದು ಬೆಂಬಲಿಗರಲ್ಲಿ ಉತ್ಸಾಹ ತುಂಬಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಏಪ್ರಿಲ್ 01: ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಿಲಿಂಡರ್ಸ್ಫೋಟಗೊಂಡ ಘಟನೆ ವರದಿಯಾಗಿದೆ. ಘಟನೆಯ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ನಡೆಸಿವೆ. ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಅವಘಡ ನಡೆದಿದ್ದು, ಹರಗಯ್ಯ ಎಂಬುವವರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದು ಗಂಟೆ ಮುನ್ನ ಹೊಸ ಎಲ್ಪಿಜಿ ಸಿಲಿಂಡರ್ ಬಂದಿತ್ತು. ಅದನ್ನು ಜೋಡಿಸುವ ವೇಳೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮನೆಯವರು ತಕ್ಷಣ ಹೊರಬಂದಿದ್ದು, ಹರಗಯ್ಯ ಪತ್ನಿ ಭಾಗ್ಯಮ್ಮ ಮತ್ತು ಮಕ್ಕಳು ಸೇರಿ ಐವರು ಮನೆಯಲ್ಲಿ ವಾಸವಿದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನವದೆಹಲಿ, ಏಪ್ರಿಲ್ 1: ಹೊಸ ವರ್ಷದ ಮೊದಲ ದಿನದಂದು ಸಾಮಾನ್ಯ ಜನರಿಗೆ ಡಬಲ್ ಶಾಕ್ ಸಿಕ್ಕಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 19 ರೂ ಏರಿಕೆಯಾದರೆ, ಪ್ರೀಮಿಯಮ್ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ (Premium Petrol price) ಭರ್ಜರಿ ಹೆಚ್ಚಳ ಆಗಿದೆ. ಪ್ರೀಮಿಯಮ್ ಪೆಟ್ರೋಲ್ ಬೆಲೆ ಲೀಟರ್ಗೆ 11 ರೂನಷ್ಟು ಹೆಚ್ಚಿದೆ. ಪ್ರೀಮಿಯಮ್ ಡೀಸಲ್ ಬೆಲೆಯಲ್ಲಿ ಒಂದೂವರೆ ರೂನಷ್ಟು ಅಲ್ಪ ಹೆಚ್ಚಳ ಆಗಿದೆ. ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಈ ದರ ಏರಿಕೆ ಮಾಡಿವೆ. ಕಳೆದ ತಿಂಗಳು ಕೂಡ ಪ್ರೀಮಿಯಮ್ ಇಂಧನ ಬೆಲೆಗಳಲ್ಲಿ ಏರಿಕೆ ಮಾಡಲಾಗಿತ್ತು.
ಭಾರತದ ಅತಿದೊಡ್ಡ ತೈಲ ಮಾರುಕಟ್ಟೆ ಸಂಸ್ಥೆಯಾದ ಇಂಡಿಯನ್ ಆಯಿಲ್ ತನ್ನ ಪ್ರೀಮಿಯಮ್ ದರ್ಜೆಯ ಎಕ್ಸ್ಪಿ100 ಪೆಟ್ರೋಲ್ ಬೆಲೆಯನ್ನು 160 ರೂ ಹೆಚ್ಚಿಸಿದೆ. 149 ರೂ ಇದ್ದ ಇದರ ಬೆಲೆಯಲ್ಲಿ 11 ರೂ ಏರಿಕೆ ಆಗಿದೆ. ಈ ಎಕ್ಸ್ಪಿ100 ಭಾರತದ ಮೊದಲ 100 ಆಕ್ಟೇನ್ ಪ್ರೀಮಿಯಮ್ ಪೆಟ್ರೋಲ್ ಎನಿಸಿದೆ.
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಸಂಸ್ಥೆಯ ಪವರ್100 ಪೆಟ್ರೋಲ್ ದರವೂ ಏರಿಕೆ ಆಗಿರುವುದು ತಿಳಿದುಬಂದಿದೆ. ಈ ಪ್ರೀಮಿಯಮ್ ಪೆಟ್ರೋಲ್ ಅನ್ನು ಅಧಿಕ ಎಂಜಿನ್ ಕಾರ್ಯಕ್ಷಮತೆ ಅಗತ್ಯ ಇರುವ ಲಕ್ಷುರಿ ಕಾರು, ಸ್ಪೋರ್ಟ್ಸ್ ಬೈಕ್ಗಳಲ್ಲಿ ಬಳಸಲಾಗುತ್ತದೆ.
ಪ್ರೀಮಿಯಮ್ ಡೀಸಲ್ ಬೆಲೆಯಲ್ಲೂ ಏರಿಕೆ
ಇನ್ನು, ಪ್ರೀಮಿಯಮ್ ಡೀಸಲ್ ಬೆಲೆಯಲ್ಲೂ ಹೆಚ್ಚಳ ಆಗಿದೆ. ಇಂಡಿಯನ್ ಆಯಿಲ್ನ ಎಕ್ಸ್ಟ್ರಾ ಗ್ರೀನ್ ಪ್ರೀಮಿಯಮ್ ಡೀಸಲ್ನ ರೀಟೇಲ್ ಬೆಲೆ ಒಂದು ಲೀಟರ್ಗೆ 91.49 ರೂನಿಂದ 92.99 ರೂಗೆ ಏರಿದೆ.
ಆದರೆ, ಇತರ ಸಾಮಾನ್ಯ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳಲ್ಲಿ ಯಾವುದೇ ಏರಿಕೆ ಆಗಿಲ್ಲ. ನಯಾರಾ ಪೆಟ್ರೋಲ್ ಬಂಕ್ಗಳಲ್ಲಿ ಮಾತ್ರ ಪೆಟ್ರೋಲ್ ಬೆಲೆ 5 ರೂ ಹೆಚ್ಚಿದೆ. ಇಂಡಿಯನ್ ಆಯಿಲ್, ಬಿಪಿ, ಎಚ್ಪಿ ಪಂಪ್ಗಳಲ್ಲಿ ಸಾಮಾನ್ಯ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳಲ್ಲಿ ವ್ಯತ್ಯಯ ಆಗಿಲ್ಲ. ಕಳೆದ ವಾರ ಸರ್ಕಾರವು ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳ ಮೇಲಿನ ಹೊರೆಯನ್ನು ಸರ್ಕಾರ ಇಳಿಸಿದಂತಾಗಿದೆ.
ಇದೇ ವೇಳೆ ಇವತ್ತು 19 ಕಿಲೋ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 195 ರೂನಷ್ಟು ಏರಿಕೆ ಆಗಿದೆ. ಮಾರ್ಚ್ ತಿಂಗಳಿಂದೀಚೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 300 ರೂ ಹೆಚ್ಚಳ ಆದಂತಾಗಿದೆ. ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಕಳೆದ ತಿಂಗಳು ಒಮ್ಮೆ ಏರಿಕೆ ಆಗಿದೆ.
ತಾಯಿ ತನ್ನ ಕಂದಮ್ಮನನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಹೀಗಾಗಿ ಪ್ರತಿಯೊಬ್ಬ ಮಗಳಿಗೂ (daughter) ಅಪ್ಪ ಅಂದ್ರೆ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ಮಗಳ ಯಾವುದೇ ಬೇಡಿಕೆಗೆ ಇಲ್ಲ ಎನ್ನದೇ ಈಡೇರಿಸುತ್ತಾನೆ. ಇತ್ತ ತಮದೆಗೆ ಮಗಳು ತಾಯಿ ಪ್ರೀತಿಸುತ್ತಾಳೆ. ಇದೀಗ ಮಗಳೊಬ್ಬಳು ಕೆಲಸದಲ್ಲಿದ್ದ ಬ್ಯುಸಿಯಾಗಿದ್ದ ತಂದೆಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಈ ಸುಂದರ ಸಂಬಂಧವನ್ನು ಮೆಚ್ಚಿಕೊಂಡಿದ್ದಾರೆ.
ಇಂದ್ರಜಿತ್ ಎಎನ್ (Indrajith AN) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪುಟಾಣಿಯೂ ಪ್ಲೇಟ್ನಲ್ಲಿ ದ್ರಾಕ್ಷಿ ಹಣ್ಣು ಇಟ್ಟುಕೊಂಡಿದೆ. ತನ್ನ ತಂದೆ ಲ್ಯಾಪ್ ಟಾಪ್ ಮುಂದೆ ಕುಳಿತು ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಒಂದೊಂದು ದ್ರಾಕ್ಷಿ ಹಣ್ಣನ್ನು ತನ್ನ ಪುಟ್ಟ ಕೈಯಿಂದ ತೆಗೆದು ತನ್ನ ಅಪ್ಪನ ಬಾಯಿಗೆ ಇಡುತ್ತಿರುವುದನ್ನು ಕಾಣಬಹುದು.
ಈ ವಿಡಿಯೋ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅಪ್ಪನ ಮುದ್ದು ಮಗಳು ಎಂದರೆ, ಮತ್ತೊಬ್ಬರು, ಬೆಸ್ಟ್ ವರ್ಕ್ ಫ್ರಮ್ ಹೋಮ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ದೇವರ ಉಡುಗೊರೆ ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕಲಬುರಗಿ, ಏಪ್ರಿಲ್ 01: ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ತಮ್ಮ ಹಾಸ್ಯಪ್ರಜ್ಞೆಯಿಂದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ನಟ ರಾಜ್ಪಾಲ್ ಯಾದವ್, ತಿಹಾರ್ ಜೈಲಿನಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಚಿತ್ರ ನಿರ್ಮಿಸಲು ಅವರು 5 ಕೋಟಿ ರೂ. ಸಾಲ ಪಡೆದಿದ್ದರು, ಆದರೆ ಚಿತ್ರ ವಿಫಲವಾದ ಕಾರಣ, ಅವರು ಸಾಲವನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ. ಅವರು ನೀಡಿದ ಎಲ್ಲಾ ಚೆಕ್ಗಳು ಬೌನ್ಸ್ ಆದ ನಂತರ, ಅವರು ಅಂತಿಮವಾಗಿ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಯಿತು. ಅದರ ನಂತರ, ಬಾಲಿವುಡ್ ಉದ್ಯಮದ ಅನೇಕ ನಟರು ಅವರಿಗೆ ಸಹಾಯ ಮಾಡಿದರು. ಈಗ ನಟ ಅಕ್ಷಯ್ ಕುಮಾರ್ ಈ ಪ್ರಕರಣದ ಬಗ್ಗೆ ರಾಜ್ಪಾಲ್ ಬಗ್ಗೆ ಮಾತನಾಡಿದ್ದಾರೆ.
ಅಕ್ಷಯ್ ಕುಮಾರ್ ಅವರ ಮುಂಬರುವ ಚಿತ್ರ ‘ಭೂತ್ ಬಾಂಗ್ಲಾ’ದಲ್ಲಿ ರಾಜ್ಪಾಲ್ ಪ್ರಮುಖ ಪಾತ್ರ ವಹಿಸಲಿದ್ದಾರೆ. ಈ ಚಿತ್ರದ ಸಂದರ್ಭದಲ್ಲಿ ನೀಡಿದ ಸಂದರ್ಶನದಲ್ಲಿ, ರಾಜ್ಪಾಲ್ ಅವರ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಅಕ್ಷಯ್ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಿದರು. ಈ ಮೊದಲು ರಾಜ್ಪಾಲ್ ಹಾಗೂ ಅಕ್ಷಯ್ ಕುಮಾರ್ ‘ಫಿರ್ ಹೇರಾ ಫೇರಿ’, ‘ಭೂಲ್ ಭುಲಯ್ಯ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು.
‘ಭೂತ್ ಬಾಂಗ್ಲಾ’ ಚಿತ್ರದ ಪ್ರಚಾರದ ಸಮಯದಲ್ಲಿ, ಅಕ್ಷಯ್ ಅವರು ರಾಜ್ಪಾಲ್ಗೆ ಈಗಾಗಲೇ ಸಿನಿಮಾ ನಿರ್ಮಿಸದಂತೆ ಸಲಹೆ ನೀಡಿರುವುದಾಗಿ ಸ್ಪಷ್ಟಪಡಿಸಿದರು. ಹಿರಿಯ ನಟ ಅಸ್ರಾನಿ ಅವರು ಅಕ್ಷಯ್ಗೆ ಒಂದು ಸಲಹೆ ನೀಡಿದ್ದರು. ತಮ್ಮ ಜೀವನದ ಕಠಿಣ ಅವಧಿಯನ್ನು ಉಲ್ಲೇಖಿಸಿದ್ದ ಅಸ್ರಾನಿ, ಚಲನಚಿತ್ರಗಳನ್ನು ನಿರ್ಮಿಸುವುದು ತಮ್ಮ ದೊಡ್ಡ ತಪ್ಪು ಎಂದು ಅಕ್ಷಯ್ಗೆ ಹೇಳಿದ್ದರು. ಈ ಅನುಭವದ ಆಧಾರದ ಮೇಲೆ, ನಟರು ಮೊದಲು ನಿರ್ಮಾಣ ಕ್ಷೇತ್ರಕ್ಕೆ ಹಾರುವ ಮೊದಲು ಸಂಪೂರ್ಣವಾಗಿ ಅಧ್ಯಯನ ಮಾಡಬೇಕು ಎಂದು ಅಕ್ಷಯ್ ಅವರು ರಾಜ್ಪಾಲ್ ಯಾದವ್ಗೆ ವಿವರಿಸಿದ್ದರು. ’ನಾವು ನಟರು ಮತ್ತು ನಿರ್ಮಾಪಕರ ಕೆಲಸವು ತುಂಬಾ ವಿಭಿನ್ನವಾಗಿದೆ. ನಾವು ಶಾರ್ಟ್ಕಟ್ಗಳ ಮೂಲಕ ಹಣ ಗಳಿಸಲು ಪ್ರಯತ್ನಿಸಬಾರದು’ ಎಂದು ಅಕ್ಷಯ್ ರಾಜ್ಪಾಲ್ಗೆ ಈ ಮಾತುಗಳಲ್ಲಿ ವಿವರಿಸಿದರು.
ನಿರ್ದೇಶಕ ಪ್ರಿಯದರ್ಶನ್ ಮತ್ತು ಅಕ್ಷಯ್ ಕುಮಾರ್ ‘ಭೂತ್ ಬಾಂಗ್ಲಾ’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಅಕ್ಷಯ್ ಕುಮಾರ್ ಜೊತೆಗೆ, ಪರೇಶ್ ರಾವಲ್, ರಾಜ್ಪಾಲ್ ಯಾದವ್, ವಾಮಿಕಾ ಗಬ್ಬಿ ಮತ್ತು ಟಬು ಕೂಡ ಇದರಲ್ಲಿ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಈ ಹಾರರ್ ಕಾಮಿಡಿ ಚಿತ್ರಕ್ಕಾಗಿ ಅಕ್ಷಯ್ ಸುಮಾರು 50 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಟಬು 2.5 ಕೋಟಿ ರೂ. ಸ್ವೀಕರಿಸಿದ್ದಾರೆ. ಹಿರಿಯ ನಟ ಪರೇಶ್ ರಾವಲ್ 2 ಕೋಟಿ ರೂ. ಮತ್ತು ನಟಿ ವಾಮಿಕಾ ಗಬ್ಬಿ 3 ಕೋಟಿ ರೂ. ಇದರಲ್ಲಿ, ರಾಜ್ಪಾಲ್ 1 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬ ಮಾಹಿತಿ ಇದೆ.
ಬೆಂಗಳೂರು, ಏಪ್ರಿಲ್ 01: ಪೊಲೀಸ್ ಇಲಾಖೆಗೆ ಸೇರಿದ ಸುಮಾರು 80 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿರುವ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಸ್ಕಾಂ, ಬಿಬಿಎಂಪಿ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಮಹಿಳೆಯ ಹೆಸರಲ್ಲಿ ಬಂದ ವಿದ್ಯುತ್ ಬಿಲ್
ಹಳೆಯ ಮಲ್ಲೇಶ್ವರಂ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿರುವ ಈ ಜಾಗಕ್ಕೆ 100 ವರ್ಷಕ್ಕೂ ಹೆಚ್ಚು ಇತಿಹಾಸವಿದೆ. 1913ರ ಮಾಪನ ನಕ್ಷೆಯಲ್ಲಿಯೇ ಈ ಪ್ರದೇಶವನ್ನು ಪೊಲೀಸ್ ವಸತಿಗೃಹ ಎಂದು ಗುರುತಿಸಲಾಗಿದೆ. ಪ್ರಸ್ತುತವೂ ಇಲ್ಲಿ ನಾಲ್ವರು ಇನ್ಸ್ಪೆಕ್ಟರ್ಗಳ ಕುಟುಂಬಗಳು ವಾಸಿಸುತ್ತಿವೆ. ಆದರೆ ಇತ್ತೀಚೆಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಕುಮಾರ್ ಅವರ ಮನೆಗೆ ಬಂದ ವಿದ್ಯುತ್ ಬಿಲ್ಲಿನಲ್ಲಿ ಮಹಾಲಕ್ಷ್ಮೀ ಎಂಬ ಖಾಸಗಿ ವ್ಯಕ್ತಿಯ ಹೆಸರು ನಮೂದಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಇದರಿಂದ ಅನುಮಾನಗೊಂಡ ಕುಮಾರ್ ಸಂಬಂಧಪಟ್ಟ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಕ್ರಮವಾಗಿ ಆಸ್ತಿ ದಾಖಲೆಗಳನ್ನು ಮಹಾಲಕ್ಷ್ಮೀ ಹೆಸರಿಗೆ ವರ್ಗಾವಣೆ ಮಾಡಿರುವುದು ಬಹಿರಂಗವಾಗಿದೆ.
ಇದಲ್ಲದೆ, ಬಿಬಿಎಂಪಿ ಮೂಲಕ ಅಕ್ರಮವಾಗಿ ಇ-ಖಾತಾ ಮಾಡಿಸಿರುವುದು ಹಾಗೂ ಕೃಷ್ಣಮೂರ್ತಿ ಎಂಬಾತನಿಗೆ ಮಾರಾಟ ಮಾಡಲು ಒಪ್ಪಂದ ಪತ್ರ (ಅಗ್ರಿಮೆಂಟ್ ಆಫ್ ಸೇಲ್) ಕೂಡ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ನಡುವೆ, ಅಧಿಕಾರಿಗಳಿದ್ದರೂ ಜಾಗ ಖಾಲಿ ಮಾಡಿಸುತ್ತೇನೆ ಎಂದು ಮಹಿಳೆ ಕಡೆಯವರು ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಪ್ರಸ್ತುತ ಲೋಕಾಯುಕ್ತ ಇನ್ಸ್ಪೆಕ್ಟರ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈ ನಾಲ್ಕು ದಿನಗಳಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ನಾಲ್ಕು ತಂಡಗಳು ಜಯ ಸಾಧಿಸಿದೆ. ಈ ನಾಲ್ಕು ಗೆಲುವುಗಳ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಮೊಹಮ್ಮದ್ ಶಮಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ…
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಮೊಹಮ್ಮದ್ ಶಮಿ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಉತ್ತಮ ಪ್ರದರ್ಶನ ನೀಡಲಿದ್ದು, ಈ ಮೂಲಕ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ (KKR): ಅಜಿಂಕ್ಯ ರಹಾನೆ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದಲೂ ಈ ಬಾರಿ ಉತ್ತಮ ಪ್ರದರ್ಶನವನ್ನು ಎದುರು ನೋಡಬಹುದು. ಈ ತಂಡ ಕೂಡ ಟಾಪ್-4 ರಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಮೊಹಮ್ಮದ್ ಶಮಿ.
ಪಂಜಾಬ್ ಕಿಂಗ್ಸ್ (PBKS): ಕಳೆದ ಬಾರಿ ಫೈನಲ್ಗೇರಿದ್ದ ಪಂಜಾಬ್ ಕಿಂಗ್ಸ್ ತಂಡದಿಂದಲೂ ಕೂಡ ಈ ಬಾರಿ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅದರಂತೆ ಶ್ರೇಯಸ್ ಅಯ್ಯರ್ ಪಡೆಯನ್ನು ಟಾಪ್-4 ನಲ್ಲಿ ಎದುರು ನೋಡಬಹುದು ಎಂದು ಶಮಿ ಹೇಳಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ (LSG): ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಸಲ ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದು ಶಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದಲ್ಲಿ ಉತ್ತಮ ಆಟಗಾರರು ಇರುವ ಕಾರಣ ನಾವು ಸಹ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದ್ದೇವೆ ಎಂದು ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ ಭವಿಷ್ಯ ನುಡಿದಿದ್ದಾರೆ.
ಪಾಟ್ನಾ, ಏಪ್ರಿಲ್ 1: ಮನೆಗೆ ದಿನಸಿ ವಸ್ತುಗಳನ್ನು ತರಲು ಹೊರಗೆ ತೆರಳಿದ್ದ ವಿವಾಹಿತ ಮಹಿಳೆ ಮನೆಗೆ ಹಿಂದಿರುಗುವಾಗ ಗುಂಪೊಂದು ಆಕೆಯನ್ನು ಅಡ್ಡಗಟ್ಟಿತ್ತು. ಅದರಲ್ಲಿ ಒಬ್ಬಾತ ಆಕೆಯನ್ನು ಹಿಂದಿನಿಂದ ಹಿಡಿದುಕೊಂಡು ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿ ಚಿತ್ರಹಿಂಸೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಆಕೆ ಎಷ್ಟೇ ಆತನನ್ನು ತಡೆಯಲು ಪ್ರಯತ್ನಿಸಿದರೂ ಕೂಡ ಆತ ಪದೇ ಪದೇ ಅದೇ ರೀತಿ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದು ಕೇವಲ ಅಪರಾಧವಲ್ಲ, ಆದರೆ ಕಾನೂನು ಮತ್ತು ಸಮಾಜ ಎರಡಕ್ಕೂ ಬಹಿರಂಗ ಸವಾಲು.
ಎರಡು ಮಕ್ಕಳ ತಾಯಿಯಾಗಿರುವ ಸಂತ್ರಸ್ತೆ ಮಾರ್ಚ್ 26 ರ ಸಂಜೆ ದಿನಸಿ ಸಾಮಾನುಗಳೊಂದಿಗೆ ಮನೆಗೆ ಹಿಂತಿರುಗುತ್ತಿದ್ದಳು. ಗ್ರಾಮದ ಮೂವರು ಯುವಕರು ಕತ್ತಲೆಯ ಲಾಭ ಪಡೆದು ದಾರಿ ಮಧ್ಯದಲ್ಲಿ ಆಕೆಯನ್ನು ಹಿಡಿದು ಬಲವಂತವಾಗಿ ಹೊಲದ ಕಡೆಗೆ ಎಳೆದುಕೊಂಡು ಹೋಗಿದ್ದಾರೆ.
ಎಫ್ಐಆರ್ ಪ್ರಕಾರ, ಆರೋಪಿಯು ಮಹಿಳೆಯನ್ನು ನೆಲಕ್ಕೆ ಎಸೆದು, ಆಕೆಯ ಬಟ್ಟೆಗಳನ್ನು ಹರಿದು, ಹಲ್ಲೆ ಮಾಡಲು ಪ್ರಾರಂಭಿಸಿದ್ದ.ಆರೋಪಿಗಳಲ್ಲಿ ಒಬ್ಬನು ಆಕೆಗೆ ಲೈಂಗಿಕ ಕಿರುಕುಳ ನೀಡಿದರೆ, ಉಳಿದ ಇಬ್ಬರು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು.
ಆಘಾತಕಾರಿ ವಿಡಿಯೋ
This incident occurred in Nalanda, Bihar, where a woman was being held by some miscreants and abused. Strict action should be taken against all those responsible. pic.twitter.com/Xs0voCE2ZV
ಘಟನೆಯ ಸಮಯದಲ್ಲಿ, ಆರೋಪಿಯು ಇಡೀ ಘಟನೆಯನ್ನು ಚಿತ್ರೀಕರಿಸಿದ್ದಾನೆ. ವೀಡಿಯೊದಲ್ಲಿ ಮಹಿಳೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಬಿಟ್ಟುಕೊಡುವಂತೆ ಬೇಡಿಕೊಳ್ಳುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ, ಆದರೆ ಆರೋಪಿಗಳು ನಗುತ್ತಾ ಅವಳನ್ನು ನಿಂದಿಸುತ್ತಾ, ವೀಡಿಯೊ ತೆಗೆಯುವಂತೆ ಒತ್ತಾಯಿಸುತ್ತಿದ್ದಾರೆ.
ಮಾರ್ಚ್ 27 ರಂದು ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ, ಆರೋಪಿಯು ಅದೇ ವೀಡಿಯೊವನ್ನು ಇಂಟರ್ನೆಟ್ ಮಾಧ್ಯಮದಲ್ಲಿ ವೈರಲ್ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದ.ಸಂತ್ರಸ್ತೆಯ ಪತಿ ಮಹಾರಾಷ್ಟ್ರದ ನಾಸಿಕ್ನಲ್ಲಿ ಕೆಲಸ ಮಾಡುತ್ತಿದ್ದಾರೆ.
ವಿಶೇಷ ಪೊಲೀಸ್ ತಂಡ ದಾಳಿ ನಡೆಸಿ ಅಶೋಕ್ ಯಾದವ್ ಮತ್ತು ಮಟ್ಲು ಮಹ್ತೊ ಅಲಿಯಾಸ್ ನವನೀತ್ ಕುಮಾರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದೆ ಎಂದು ಸದರ್ ಡಿಎಸ್ಪಿ-2 ಸಂಜಯ್ ಕುಮಾರ್ ಜೈಸ್ವಾಲ್ ತಿಳಿಸಿದ್ದಾರೆ. ಮೂರನೇ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ.
ವಕೀಲರಾದ ತೇಜಸ್ವಿತಾ ರಾಧಾ ಮಾತನಾಡಿ, ನುರ್ಸರೈನಲ್ಲಿ ನಡೆದ ಈ ಘಟನೆ ಕೇವಲ ಮಹಿಳೆಯ ಮೇಲಿನ ದಾಳಿಯಲ್ಲ, ಬದಲಾಗಿ ಇಡೀ ಸಮಾಜಕ್ಕೆ ಒಂದು ಎಚ್ಚರಿಕೆ ಎಂದು ಅವರು ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ವಿಜಯ್ ದೇವರಕೊಂಡ ಜೊತೆ ವಿವಾಹ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು. ಈಗ ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋ ಗಮನ ಸೆಳೆದಿವೆ.
ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋ ಗಮನ ಸೆಳೆದಿದೆ. ಈ ಫೋಟೋದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ತೊಡೆಯ ಮೇಲೆ ಕುಳಿತು ರಶ್ಮಿಕಾ ಪೋಸ್ ಕೊಟ್ಟಿದ್ದಾರೆ. ಫೋಟೋ ಗಮನ ಸೆಳೆದಿದೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡು ಹಾಗೂ ವಿಜಯ್ ಸಹೋದರ ಆನಂದ್ ಇತ್ತೀಚೆಗೆ ಮದುವೆ ಒಂದರಲ್ಲಿ ಭಾಗಿ ಆಗಿದ್ದರು. ಆ ಸಂದರ್ಭದ ಫೋಟೋ ಇದಾಗಿದೆ.
ವಿವಾಹದ ಬಳಿಕ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ವಿವಾಹದ ಬಳಿಕ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ಇಬ್ಬರೂ ತಮ್ಮ ಮುಂದಿನ ಸಿನಿಮಾ ‘ರಣಬಾಲಿ’ ಸಿನಿಮಾ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.
ವಿಜಯ್ ಹಾಗೂ ರಶ್ಮಿಕಾ ಮೊದಲ ಬಾರಿಗೆ ಭೇಟಿ ಆಗಿದ್ದು ಸಿನಿಮಾ ಸೆಟ್ ಅಲ್ಲಿ. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ಈ ಪ್ರೀತಿಗೆ ಇಬ್ಬರೂ ಇತ್ತೀಚೆಗೆ ಹೊಸ ಅರ್ಥ ನೀಡಿದರು. ಫೆಬ್ರವರಿ 26ರಂದು ಇವರ ವಿವಾಹ ನೆರವೇರಿತು.