All posts by nagaraj11081993

ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

ಸ್ಟಾರ್ ಕಲಾವಿದ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಕೇವಲ ಪ್ರೇಕ್ಷಕರು ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ದಿಗ್ಗಜ ನಟ, ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಈ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಆದಿತ್ಯ ಧರ್ ಬಾಕ್ಸ್ ಆಫೀಸ್ ಕಾ ಬಾಪ್’ ಎಂದು ಅವರು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ‘ಧುರಂಧರ್ 2’ (Dhurandhar 2) ಬಗ್ಗೆ ಪೋಸ್ಟ್ ಮಾಡಿದ್ದಾರೆ.

ಸಿನಿಮಾ ವೀಕ್ಷಿಸಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ರಜನಿಕಾಂತ್ ಅವರು ಚಿತ್ರತಂಡವನ್ನು ಭರ್ಜರಿಯಾಗಿ ಅಭಿನಂದಿಸಿದ್ದಾರೆ. ‘ವಾಟ್ ಎ ಫಿಲ್ಮ್. ಧುರಂಧರ್ 2! ಆದಿತ್ಯ ಧರ್ ಬಾಕ್ಸ್ ಆಫೀಸ್ ಕಾ ಬಾಪ್. ರಣವೀರ್ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಇದು ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ. ಜೈ ಹಿಂದ್’ ಎಂದು ರಜನಿ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಭಾರತದ ಸೂಪರ್‌ಸ್ಟಾರ್‌ನಿಂದ ಇಂತಹ ಮೆಚ್ಚುಗೆಯ ಮಾತುಗಳು ಬಂದಿರುವುದು ಚಿತ್ರದ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿದೆ. ‘ಜಿಯೋ ಸ್ಟುಡಿಯೋಸ್’ ಸಂಸ್ಥೆ ನಿರ್ಮಾಣ ಮಾಡಿರುವ ಈ ಸಿನಿಮಾ ಭಾರತೀಯ ಚಿತ್ರರಂಗದ ಎಲ್ಲಾ ಹಳೆಯ ದಾಖಲೆಗಳನ್ನು ಧೂಳೀಪಟ ಮಾಡಿದೆ. ಮೊದಲ ವಾರಾಂತ್ಯದಲ್ಲೇ ವಿಶ್ವದಾದ್ಯಂತ ಬರೋಬ್ಬರಿ 761 ಕೋಟಿ ರೂಪಾಯಿ ಗಳಿಸುವ ಮೂಲಕ ಇದು ಭಾರತದ ಸಾರ್ವಕಾಲಿಕ ಅತಿದೊಡ್ಡ ಬ್ಲಾಕ್‌ಬಸ್ಟರ್ ಆರಂಭವನ್ನು ಪಡೆದಿದೆ.

ಭಾರತದ ಮಾರುಕಟ್ಟೆಯಲ್ಲಿ ಅತಿ ವೇಗವಾಗಿ 300 ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬುಕ್‌ ಮೈ ಶೋನಲ್ಲಿ ಒಂದು ಗಂಟೆಯಲ್ಲಿ ಅತಿ ಹೆಚ್ಚು ಟಿಕೆಟ್‌ಗಳು ಮಾರಾಟವಾದ ದಾಖಲೆಯೂ ಈ ಚಿತ್ರದ ಹೆಸರಿಗೆ ಸೇರಿದೆ. ವಿದೇಶಗಳಲ್ಲಿ ಮೊದಲ ವಾರಾಂತ್ಯದಲ್ಲಿ ಸುಮಾರು 210 ಕೋಟಿ ರೂಪಾಯಿ ಗಳಿಸಿ ಅತಿ ದೊಡ್ಡ ಓವರ್‌ಸೀಸ್ ಓಪನಿಂಗ್ ಕಂಡ ಭಾರತೀಯ ಚಿತ್ರ ಎನಿಸಿಕೊಂಡಿದೆ.

ಇದನ್ನೂ ಓದಿ: ‘ಧುರಂಧರ್ 2’ ಅತಿ ಕೆಟ್ಟ ಸಿನಿಮಾ ಎಂದ ಪಾಕ್ ಕುಟುಂಬ; ವಿಡಿಯೋ ವೈರಲ್

ಆದಿತ್ಯ ಧರ್ ಅವರ ನಿರ್ದೇಶನ ಮತ್ತು ರಣವೀರ್ ಸಿಂಗ್ ಅವರ ಪವರ್‌ಫುಲ್ ಅಭಿನಯದಿಂದ ಈ ಮಟ್ಟದ ಯಶಸ್ಸು ಸಿಕ್ಕಿದೆ. ದೇಶಪ್ರೇಮದ ಕಥಾಹಂದರ ಹೊಂದಿರುವ ಈ ಸಿನಿಮಾ ಈಗ ಜಾಗತಿಕ ಮಟ್ಟದಲ್ಲಿ ಭಾರತೀಯ ಚಿತ್ರರಂಗದ ಕೀರ್ತಿ ಪತಾಕೆಯನ್ನು ಹಾರಿಸುತ್ತಿದೆ. ಈ ನಡುವೆ ಅನೇಕ ಸೆಲೆಬ್ರಿಟಿಗಳಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ಇದೊಂದು ಪ್ರೊಪಗಾಂಡ ಸಿನಿಮಾ ಎಂಬ ಟೀಕೆ ಕೂಡ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ನವದೆಹಲಿ, ಮಾರ್ಚ್ 23: ಇರಾನ್, ಇಸ್ರೇಲ್-ಅಮೆರಿಕದ ನಡುವೆ ಯುದ್ಧ ನಡೆಯುತ್ತಿರುವುದರಿಂದ ಅದರ ಪರಿಣಾಮಗಳನ್ನು ಬೇರೆ ದೇಶಗಳೂ ಅನುಭವಿಸುತ್ತಿವೆ. ಮಧ್ಯ ಏಷ್ಯಾದ ಈ ಸಂಘರ್ಷದ ಕುರಿತು ಇಂದು ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. “2014ರ ನೀರಸತೆಯನ್ನು ಬಿಟ್ಟು ಭಾರತವು ಹೊಸ ಆತ್ಮವಿಶ್ವಾಸದೊಂದಿಗೆ ಹೊರಹೊಮ್ಮುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಇಂದಿನ ಯುದ್ಧ ವಾತಾವರಣದವರೆಗೆ ಭಾರತೀಯರು ಪ್ರತಿ ವರ್ಷವೂ ಪರೀಕ್ಷೆಗಳನ್ನು ಎದುರಿಸುತ್ತಲೇ ಇದ್ದಾರೆ. 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದಿಂದ ಮಾತ್ರ ನಾವು ಪ್ರತಿಯೊಂದು ವಿಪತ್ತನ್ನು, ಸವಾಲನ್ನು ಎದುರಿಸಲು ಸಾಧ್ಯವಾಗಿದೆ. ಯುದ್ಧದ ಸಮಯದಲ್ಲೂ ಭಾರತ ಅನುಸರಿಸುತ್ತಿರುವ ತಂತ್ರಗಳು ಮತ್ತು ಆರ್ಥಿಕ ಸ್ಥಿರತೆಯಿಂದ ಜಗತ್ತು ಬೆರಗುಗೊಂಡಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಫೆಬ್ರವರಿ 28ರಿಂದ ಜಗತ್ತು ಪ್ರಕ್ಷುಬ್ಧತೆಯಿಂದ ಕೂಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಗಳಿಂದ ಯಾವುದೇ ದೇಶವು ಪ್ರಭಾವಿತವಾಗದೆ ಇರುವುದು ಅಸಾಧ್ಯ. ಯುದ್ಧಗಳು ನಮ್ಮ ಗಡಿಗಳಿಂದ ದೂರದಲ್ಲಿ ನಡೆಯುತ್ತಿದ್ದರೂ ಅವುಗಳ ಅಡ್ಡಪರಿಣಾಮಗಳನ್ನು ಪ್ರಪಂಚದಾದ್ಯಂತ ದೇಶಗಳು ಅನುಭವಿಸುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಇಂತಹ ಭೀಕರ ಪರಿಸ್ಥಿತಿಯಲ್ಲೂ ಭಾರತ ತನ್ನ ಅಭಿವೃದ್ಧಿಯ ವೇಗವನ್ನು ನಿಧಾನಗೊಳಿಸಿಲ್ಲ” ಎಂದು ಅವರು ಹೆಮ್ಮೆಯಿಂದ ಘೋಷಿಸಿದರು.

ಇದನ್ನೂ ಓದಿ: PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

“ಜಗತ್ತು ವಿಭಿನ್ನ ಬಣಗಳಾಗಿ ವಿಭಜನೆಯಾಗುತ್ತಿದ್ದರೆ ಭಾರತ ದೇಶಗಳ ನಡುವೆ ಅಭೂತಪೂರ್ವ ಸೇತುವೆಗಳನ್ನು ನಿರ್ಮಿಸುತ್ತಿದೆ. ಜಾಗತಿಕ ದಕ್ಷಿಣದಿಂದ ನಮ್ಮ ನೆರೆಹೊರೆಯವರವರೆಗೆ ಭಾರತವು ವಿಶ್ವಾಸಾರ್ಹ ಪಾಲುದಾರನಾಗಿ ಮಾರ್ಪಟ್ಟಿದೆ. ನಾವು ಶಾಂತಿ ಮತ್ತು ಸಂವಾದಕ್ಕಾಗಿ ಮಾತ್ರ ನಿಲ್ಲುತ್ತೇವೆ. ಅದು ಬಿಟ್ಟು ನಾವು ಯಾವ ದೇಶದ ಪರವಾಗಿಯೂ ಅಲ್ಲ” ಎಂದು ಮೋದಿ ವಿವರಿಸಿದರು.

“ಯುದ್ಧದ ಪರಿಣಾಮದ ಹೊರತಾಗಿಯೂ, ಭಾರತವು ತನ್ನ ಅಭಿವೃದ್ಧಿಯ ವೇಗವನ್ನು ನಿಲ್ಲಿಸಿಲ್ಲ. ಕಳೆದ 23 ದಿನಗಳಲ್ಲಿ ಸರ್ಕಾರ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಯುದ್ಧದ ನಡುವೆಯೂ ಭಾರತ ಪ್ರಗತಿಯನ್ನು ಕಾಯ್ದುಕೊಂಡಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

ನವದೆಹಲಿ, (ಮಾರ್ಚ್ 23): ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾನಿ ಮೋದಿಯವರು ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ. ಇನ್ನು ಈ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ ಮೋದಿ ಮಾತನಾಡಿ, ಭಾರತದ ಆರ್ಥಿಕತೆ, ಭಾರತದ ಸಾಧನೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.

Source link

IPL 2026: ಬುಮ್ರಾಗೆ ಇಂಜುರಿ? ತಂಡ ತೊರೆದು ಬೆಂಗಳೂರಿಗೆ ಬಂದ ಯಾರ್ಕರ್ ಕಿಂಗ್

Source link

ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್

ನವದೆಹಲಿ, (ಮಾರ್ಚ್ 23): ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇನ್ನು  ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.  ಇದರೊಂದಿಗೆ ಪ್ರಧಾನಿ ಮೋದಿ ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ.

ಇದೇ ವೇಳೆ ಮಾತನಾಡಿದ ಬರುಣ್ ದಾಸ್,  ನಾವು ಇಂದು ಅತ್ಯಂತ ಅಸ್ಥಿರವಾದ ದಿನಗಳಲ್ಲಿ ಬದುಕುತ್ತಿದ್ದೇವೆ. ಪಶ್ಚಿಮ ಏಷ್ಯಾದ ಯುದ್ಧಕ್ಕೂ ಮೊದಲು ಸುಂಕದ ಸಮರವು ವಿಶ್ವದ ಆರ್ಥಿಕತೆಯನ್ನು ನಡುಗಿಸಿತ್ತು. ಸೇನಾ ಬಲದ ಯುದ್ಧ ಒಂದಾದರೆ, ಆರ್ಥಿಕ ಯುದ್ಧ ಮತ್ತೊಂದು. ಜಗತ್ತಿನ 830 ಕೋಟಿ ಜನರು ಬಾಧಿತರಾಗಿದ್ದಾರೆ. ಈ ಜಾಗತಿಕ ಅಸ್ಥಿರತೆ ನಡುವೆ ಭಾರತ ಅಭಿವೃದ್ದಿ ಹೊಂದುತ್ತಿರುವುದು ಮಾತ್ರವಲ್ಲ, ಜಾಗತಿಕ ವ್ಯವಸ್ಥೆ ಸ್ಥಿರಗೊಳಿಸಲು ನೆರವಾಗಿದೆ ಎಂದರು.

ಇದನ್ನೂ ಓದಿ: PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

Source link

ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಎಂದರೆ ಅಭಿಮಾನಿಗಳಿಗೆ ಸಖತ್ ಇಷ್ಟ. ಶಿವಣ್ಣ ಕೂಡ ಅಭಿಮಾನಿಗಳನ್ನು ಪ್ರೀತಿಯಿಂದ ಕಾಣುತ್ತಾರೆ. ‘ಅಭಿಮಾನಿ ದೇವರುಗಳು’ ಎಂದು ನಂಬಿದ ಫ್ಯಾಮಿಲಿ ಅವರದ್ದು. ಆ ಮಾತಿಗೆ ಆಗಾಗ ಸಾಕ್ಷಿ ಸಿಗುತ್ತಲೇ ಇರುತ್ತದೆ. ಅಥಣಿಯಿಂದ ಶಿವಣ್ಣ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ (DKD) ರಿಯಾಲಿಟಿ ಶೋ ಚಿತ್ರೀಕರಣದ ಸೆಟ್​​ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಶಿವಣ್ಣ (Shivanna) ಅವರು ವಿಶೇಷ ಚೇತನ ಅಭಿಮಾನಿಗೆ ಫೋಟೋ ನೀಡಿ, ಆರ್ಥಿಕ ಸಹಾಯ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿ ಫೋಟೋ ತೆಗೆದುಕೊಂಡ ಆ ಅಭಿಮಾನಿ ಸಖತ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಪಹರಿಸಿ ಸ್ನೇಹಿತನ ಕೊಲೆ ಕೇಸ್: ನಾಪತ್ತೆಯಾಗಿದ್ದ ಡೆಲಿವರಿ ಬಾಯ್​​ ಮಿಸ್ಟ್ರಿ ಬಯಲು; ಐವರು ಅರೆಸ್ಟ್​​​

ಹಾಸನ, ಮಾರ್ಚ್​ 23: ಕೇವಲ 7 ಸಾವಿರ ರೂ ಹಣಕ್ಕಾಗಿ ಗಾಂಜಾ ಅಮಲಿನಲ್ಲಿ ಗೆಳೆಯನ್ನೇ ಹತ್ಯೆಗೈದ (kill) ಪ್ರಕರಣವನ್ನು ಬೇಧಿಸಿರುವ ಪೊಲೀಸರು ಐವರ ಹೆಡೆಮುರಿ ಕಟ್ಟಿದ್ದಾರೆ. ವರುಣ್​​ನ್ನ ಸಿನಿಮೀಯ ರೀತಿಯಲ್ಲಿ ಅಪಹರಿಸಿ ಕರೆತಂದು ಕೂಡಿ ಹಾಕಿ ಸ್ನೇಹಿತರ ಗ್ಯಾಂಗ್​​ ಹಲ್ಲೆ ಮಾಡಿ ಬಳಿಕ ಕೊಲೆಗೈದು ಎರಡು ದಿನ ಶವದ ಜೊತೆ ಕಳೆದು ಬಳಿಕ ಸುಟ್ಟು ಎಸ್ಕೇಪ್ ಆಗಿದ್ದವರ ಬೆನ್ನಟ್ಟಿದ ಪೊಲೀಸರು, ನಾಪತ್ತೆ ಕೇಸ್​​ನ ಮಿಸ್ಟ್ರಿಯನ್ನ ಬಯಲು ಮಾಡಿದ್ದಾರೆ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎನ್ನುವ ಒಂದೇ ಕಾರಣಕ್ಕೆ ಅಮಾನುಷವಾಗಿ ಕೊಲೆ ಮಾಡಿದವರು ಒಬ್ಬೊಬ್ಬರಾಗಿ ಪೊಲೀಸರ ಕೈಗೆ ಸಿಗುತ್ತಿದ್ದಾರೆ. ಪ್ರಮುಖ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಐವರ ಬಂಧನ

ನಿನ್ನೆ ನಡೆದಿದ್ದ ಭೀಕರ ಕೊಲೆಗೆ ಇಡೀ ಹಾಸನ ಜಿಲ್ಲೆಯೇ ಬೆಚ್ಚಿಬಿದ್ದಿತ್ತು. ಅರಸೀಕೆರೆ ತಾಲ್ಲೂಕಿನ ಕಾಡಯ್ಯನಕೊಪ್ಪಲು ಗ್ರಾಮದ ವರುಣ್(22) ನನ್ನ ಆತನ ಸ್ನೇಹಿತ ಶಶಾಂಕ್ ಹಾಗೂ ಇತರೆ 7 ಜನರು ಸೇರಿ ಮಾರ್ಚ್ 10ರಂದು ಅಪಹರಿಸಿದ್ದಾರೆ. 7 ಸಾವಿರ ರೂ ಸಾಲದ ಹಣ ಕೊಟ್ಟಿಲ್ಲ ಎಂದು ಕರೆದೊಯ್ದು ಕಿರಣ್ ಎಂಬಾತನ ತೋಟದ ಮನೆಯಲ್ಲಿಟ್ಟು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಮಾರ್ಚ್ 12ರವರೆಗೆ ಎರಡು ದಿನ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಬಳಿಕ ಮಾರ್ಚ್ 13ರ ಮುಂಜಾನೆ ಅರಸೀಕೆರೆ ತಾಲ್ಲೂಕಿನ ಜೇನುಕಲ್ ಸಿದ್ದೇಶ್ವರ ಸ್ವಾಮಿ ಬೆಟ್ಟದ ಸಮೀಪ ಶವವನ್ನು ಸಂಪೂರ್ಣವಾಗಿ ಸುಟ್ಟು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಮಾರ್ಚ್ 10ರಿಂದ ಮಗ ಕಾಣುತ್ತಿಲ್ಲ ಎಂದು ವರುಣ್ ತಾಯಿ ಕಲಾವತಿ ಮಾರ್ಚ್ 15ರಂದು ಗಂಡಸಿ ಠಾಣೆಗೆ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ ಭೀಕರ ಕೊಲೆ ರಹಸ್ಯ ಬಯಲಾಗಿತ್ತು. ಮಾರ್ಚ್ 19ರಂದು ದುದ್ದಾ ಠಾಣೆಯಲ್ಲಿ ಕೊಲೆ ಕೇಸ್ ದಾಖಲು ಮಾಡಿಕೊಂಡು ತನಖೆ ನಡೆಸಿ ಸದ್ಯ ಸತೀಶ್, ಉಮರ್, ವಿಜಯ್, ಚೇತನ್ ಹಾಗೂ ಮನು ಎಂಬುವವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ, ಕೊಲೆಯ ಪ್ರಮುಖ ಆರೋಪಿ ಶಶಾಂಕ್ ಹಾಗೂ ಇನ್ನು ಹಲವರ ಬಂಧನಕ್ಕೆ ಬಲೆಬೀಸಲಾಗಿದೆ ಎಂದಿದ್ದಾರೆ.

ಎಸ್ಪಿ ಶುಭಾನ್ವಿತ ಹೇಳಿದ್ದಿಷ್ಟು 

ವರುಣ್​ನಿಂದ ಗಾಂಜಾ ಪಡೆಯಲು ಶಶಾಂಕ್ 7 ಸಾವಿರ ರೂ ಹಣ ನೀಡಿದ್ದ. ಆದರೆ ವರುಣ್ ಗಾಂಜಾ ನೀಡಿರಲಿಲ್ಲ. ಹೀಗಾಗಿ ಶಶಾಂಕ್​ ತನ್ನ ಸ್ನೇಹಿತರ ಜೊತೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಶುಭಾನ್ವಿತ ಹೇಳಿದ್ದಾರೆ.

ಆರು ತಿಂಗಳ ಹಿಂದೆ ತಂದೆ ಮೃತಪಟ್ಟಿದ್ದರಿಂದ ಕೆಲಸಕ್ಕೆಂದು ಬೆಂಗಳೂರು ಸೇರಿಕೊಂಡಿದ್ದ ವರುಣ್, ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಯುಗಾದಿ ಹಿನ್ನೆಲೆ ತಾಯಿ ಜೊತೆಗೆ ಊರಿಗೆ ಬಂದಿದ್ದ. ಬೈಕ್ ರಿಪೇರಿ ಮಾಡಿಸಿಕೊಂಡು ಬರುವುದಾಗಿ ಹೇಳಿ ಹೋದವನು ವಾಪಸ್ ಬರಲಿಲ್ಲ. ಎಲ್ಲೆಡೆ ಹುಡುಕಾಡಿದ್ದ ತಾಯಿ ಕಡೆಗೆ ನಾಪತ್ತೆ ಕೇಸ್ ನೀಡಿದ್ದರು. ಆದರೆ ಅಷ್ಟರಲ್ಲಿ ಶಶಾಂಕ್​ ಗ್ಯಾಂಗ್​​ ವರುಣ್ ಹಾಗೂ ಆತನ ಸ್ನೇಹಿತ ಲೋಹಿತ್​ನನ್ನ ಕಿಡ್ನ್ಯಾಪ್​​ ಮಾಡಿ ಬಳಿಕ ಕೊಂದೇ ಬಿಟ್ಟಿದ್ದಾರೆ.

ಶವದೊಂದಿಗೆ ಒಂದು ದಿನ ಕಳೆದ ಕಿರಾತಕರು

ವರುಣ್ ಶವವನ್ನು ಹಾಸನದ ಗುಡ್ಡೇಗೌಡನ ಕೊಪ್ಪಲಿನ ಶಶಾಂಕ್ ರೂಮ್​ನಲ್ಲಿಟ್ಟು ಒಂದು ದಿನ ಶವ ಎಲ್ಲಿ ವಿಲೇವಾರಿ ಮಾಡುವುದು ಎಂದು ಹುಡುಕಾಡಿದ್ದಾರೆ. ಕಡೆಗೆ ದೂರದ ಅರಸೀಕೆರೆಗೆ ಕೊಂಡೊಯ್ದು ಶವ ಸಂಪೂರ್ಣ ಸುಟ್ಟು ಹೋಗುವವರೆಗೆ ಅಲ್ಲೆ ಇದ್ದು ಬಳಿಕ ಎಲ್ಲರೂ ಎಸ್ಕೇಪ್ ಆಗಿದ್ದಾರೆ. ಆದರೆ ಯಾವಾಗ ಮಿಸ್ಸಿಂಗ್ ಕೇಸ್​ನಲ್ಲಿ ಸಿಕ್ಕ ಕೆಲ ಸಾಕ್ಷಿಗಳನ್ನ ವಿಚಾರಣೆ ಮಾಡಿದ ಪೊಲೀಸರಿಗೆ ಪ್ರಕರಣದಲ್ಲಿ ಬೇರೆಯ ಸುಳಿವು ಸಿಕ್ಕಿದೆ. ತಕ್ಷಣ ಅಲರ್ಟ್ ಆಗಿ ತನಿಖೆಗಿಳಿದಾಗ ಕೊಲೆ ರಹಸ್ಯ ಬಯಲಾಗಿದೆ.

ಸದ್ಯ ಐವರು ಆರೋಪಿಗಳ ಬಂಧನವಾಗಿದೆ. ಕೊಲೆ ಮಾಡಿ ಶವ ಸುಟ್ಟಿರು ಸಂಬಂಧ ಕೆಲ ಸಾಕ್ಷಿಗಳ ಸುಳಿವು ಸಿಕ್ಕಿದೆ. ಇದನ್ನೆ ಸಂಗ್ರಹ ಮಾಡಿ ತನಿಖೆ ನಡೆಸಲಾಗುತ್ತಿದೆ. ಕೊಲೆ ಎಲ್ಲಿ ಮಾಡಲಾಯ್ತು, ಕೊಲೆಗೆ ಬೇರೆ ಏನಾದರು ಕಾರಣ ಇದೆಯಾ ಎಲ್ಲವೂ ಪ್ರಮುಖ ಆರೋಪಿ ಶಶಾಂಕ್ ಬಂಧನದ ಬಳಿಕ ತಿಳಿಯಲಿದ್ದು, ಸದ್ಯ 8 ಜನರ ಮೇಲೆ ಎಫ್​ಐಆರ್ ದಾಖಲಾಗಿದೆ. ಬೇರೆ ಯಾರಾದರೂ ಕೊಲೆಯಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ದವೂ ಕಠಿಣ ಕ್ರಮ ಎಂದು ಎಸ್ಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿ ಕೊಲೆಗೈಯಲಾಗಿದೆಯೋ, ಇಲ್ಲಾ ಗಾಂಜಾ ವ್ಯವಹಾರದ ಸಲುವಾಗಿ ಶುರುವಾದ ಕಿತ್ತಾಟ ಕೊಲೆಯಲ್ಲಿ ಕೊನೆಯಾಗಿದೆಯೋ ತನಿಖೆಯಲ್ಲೇ ಬಯಲಾಗಬೇಕಿದೆ. ಸದ್ಯ ಪೊಲೀಸರು ಎಲ್ಲಾ ಆಯಾಮದಲ್ಲಿ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

PM Modi in WITT Summit 2026: ನಾವು ಭಾರತೀಯರ ಪರ, ನಮಗೆ ಅಭಿವೃದ್ಧಿಯೇ ಮುಖ್ಯ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ನವದೆಹಲಿ, ಮಾರ್ಚ್ 23: ಟಿವಿ9 ನೆಟ್‌ವರ್ಕ್ ಆಯೋಜಿಸಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit- 2026) ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಅಂತಾರಾಷ್ಟ್ರೀಯ ಬೆಳವಣಿಗೆಗಳ ಕುರಿತು ಪ್ರಮುಖ ಹೇಳಿಕೆಗಳನ್ನು ನೀಡಿದರು. ಈ ಬಾರಿಯ ಶೃಂಗಸಭೆಯ ವಿಷಯ ಭಾರತ ಮತ್ತು ಜಗತ್ತು ಎಂಬುದಾಗಿರುವುದರಿಂದ ಜಾಗತಿಕ ವಿಚಾರಗಳ ಬಗ್ಗೆಯೂ ಪ್ರಧಾನಿ ಮೋದಿ ಬೆಳಕು ಚೆಲ್ಲಿದರು. “ಜಾಗತಿಕ ಸಂಘರ್ಷದಲ್ಲಿ ನಾವು ಯಾರ ಪರವಾಗಿರುತ್ತೇವೆ?” ಎಂದು ಕೇಳುವವರಿಗೆ ನಮ್ಮ ಉತ್ತರ ಒಂದೇ. ನಾವು ದೇಶದ ಪರವಾಗಿರುತ್ತೇವೆ, ನಮಗೆ ಭಾರತೀಯರ ಅಭಿವೃದ್ಧಿಯೊಂದೇ ಮುಖ್ಯ” ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು.

“ಯುದ್ಧದಿಂದಾಗಿ ವಿಶ್ವದ ಹಲವು ಏಳುಬೀಳುಗಳ ನಡುವೆಯೂ ಭಾರತ ಅಭಿವೃದ್ಧಿ ಹೊಂದುತ್ತಿದೆ. ದೇಶದಲ್ಲಿ ಹೊಸ ಏರ್‌ಪೋರ್ಟ್‌ ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಯುವಕರಿಗೆ ಉದ್ಯೋಗ ಸೃಷ್ಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಕಿಸಾನ್ ಸಮ್ಮಾನ್‌ ಯೋಜನೆಯಡಿ ರೈತರಿಗೆ 18 ಸಾವಿರ ಕೋಟಿ ರೂ. ಸಂದಾಯವಾಗಿದೆ. 2014ರ ಹಿಂದಿನ 10 ವರ್ಷಗಳು ಹಾಗೂ 2014ರ ನಂತರ 10 ವರ್ಷಗಳ ಅಭಿವೃದ್ಧಿ ಕೆಲಸಗಳನ್ನು ಹೋಲಿಕೆ ಮಾಡಿ ನೋಡಿ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಪ್ರತಿ ಯಶಸ್ಸನ್ನು ಪ್ರಶ್ನಿಸುವುದು ಕಾಂಗ್ರೆಸ್ಸಿನ ಕೆಲಸ ಎಂದು ಪ್ರಧಾನಿ ಮೋದಿ ಹೇಳಿದರು. “ಕೋವಿಡ್ ಲಸಿಕೆ ಬಗ್ಗೆಯೂ ಪ್ರಶ್ನೆಗಳು ಎದ್ದವು. ಭಾರತವು ಸವಾಲನ್ನು ಯಶಸ್ಸಾಗಿ ಪರಿವರ್ತಿಸಿದ್ದು ಕಾಂಗ್ರೆಸ್ಸಿನ ದುರದೃಷ್ಟ ಮತ್ತು ಭಾರತದ ಅದೃಷ್ಟ. ಡಿಜಿಟಲ್ ಪಾವತಿಗಳಲ್ಲಿ ಭಾರತವು ಮುಂಚೂಣಿಯಲ್ಲಿರುವ ದೇಶ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಅಗತ್ಯ. ಆದರೆ ಪ್ರತಿಭಟನೆ ಮತ್ತು ದ್ವೇಷದ ನಡುವೆ ಒಂದು ಗೆರೆ ಇದೆ. ದೇಶವನ್ನು ಕೆಣಕುವುದು ಕಾಂಗ್ರೆಸ್ಸಿನ ಉದ್ದೇಶಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದರು.

“ಭಾರತವು ಪ್ರತಿಯೊಂದು ವಲಯವನ್ನೂ ಪರಿವರ್ತಿಸಿದೆ. ಇಂದು ಭಾರತ ದೇಶವು 160ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಹೊಂದಿದೆ. ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ವೇಗ ನಿಧಾನವಾಗಿತ್ತು, ಆದರೆ ಇಂದು ಭಾರತವು ವೇಗದ ಹಾದಿಯಲ್ಲಿದೆ. ಇಂದು, ನಿರ್ಣಯಗಳು ಸಾಧನೆಗಳಾಗಿ ಬದಲಾಗುತ್ತಿವೆ. ಇದು ಹೊಸ ಭಾರತ ಎಂಬ ಸಂದೇಶವನ್ನು ಜಗತ್ತಿಗೆ ನೀಡಲಾಗುತ್ತಿದೆ. ಈ ಭಾರತವು ತನ್ನ ಅಭಿವೃದ್ಧಿಗಾಗಿ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಜಗತ್ತಿಗೆ ತಿಳಿದಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: PM Modi Speech in WITT Live: ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ

“ಜಗತ್ತಿನ ಯಾವುದೇ ಭಾಗದಲ್ಲಿ ಯುದ್ಧ ನಡೆದರೂ ಅದು ಎಲ್ಲರ ಮೇಲೆ ಪರಿಣಾಮ ಬೀರುತ್ತದೆ. ಆದರೆ ರಾಜಕೀಯ ಹಿತಾಸಕ್ತಿಗಳಿಂದ ಪ್ರೇರಿತರಾದ ಕೆಲವರು ತಮಗಾಗಿ ರಾಜಕೀಯ ಅವಕಾಶಗಳನ್ನು ಹುಡುಕುತ್ತಿದ್ದಾರೆ. ಆದ್ದರಿಂದ, ಇದು ಸಂಯಮ ಮತ್ತು ಸೂಕ್ಷ್ಮತೆಯ ಸಮಯ ಎಂದು ನಾನು ಟಿವಿ9 ವೇದಿಕೆಯಿಂದ ಪುನರುಚ್ಚರಿಸುತ್ತೇನೆ. COVID-19 ಸಾಂಕ್ರಾಮಿಕ ಸಮಯದಲ್ಲಿಯೂ ಸಹ ಇಡೀ ರಾಷ್ಟ್ರವು ಒಟ್ಟಾಗಿ ಕೆಲಸ ಮಾಡಿದಾಗ ಫಲಿತಾಂಶಗಳು ಸಕಾರಾತ್ಮಕವಾಗಿತ್ತು. ನಾವು ಈಗಿನ ಪರಿಸ್ಥಿತಿಯನ್ನು ಅದೇ ರೀತಿಯಲ್ಲಿ ಸವಾಲನ್ನು ಎದುರಿಸಬೇಕು” ಎಂದು ಪ್ರಧಾನಿ ಮೋದಿ ಕರೆ ನೀಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

‘ಶಾರುಖ್ ಖಾನ್ ಬಳಿ ನಾನು ಲಂಚ ಕೇಳಿಲ್ಲ’: ಬಾಂಬೆ ಹೈಕೋರ್ಟ್‌ನಲ್ಲಿ ಸಮೀರ್ ವಾಂಖೆಡೆ ವಾದ

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan Khan) ಅವರನ್ನು ಡ್ರಗ್ಸ್ ಪ್ರಕರಣದಿಂದ ಪಾರು ಮಾಡಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede), ಸೋಮವಾರ (ಮಾರ್ಚ್ 23) ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ವಾದ ಮಂಡಿಸಿದ್ದಾರೆ. ‘ನಾನು ಶಾರುಖ್ ಖಾನ್ (Shah Rukh Khan) ಅವರಿಂದ ಯಾವುದೇ ಲಂಚ ಕೇಳಿಲ್ಲ ಅಥವಾ ಸ್ವೀಕರಿಸಿಲ್ಲ’ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸಿಬಿಐ ಬಳಿ ಯಾವುದೇ ಪುರಾವೆಯಿಲ್ಲ ಎಂದು ಸಮೀರ್ ಪರ ವಕೀಲರು ವಾದ ಮಾಡಿದ್ದಾರೆ.

ಸಮೀರ್ ವಾಂಖೆಡೆ ಪರ ವಾದ ಮಂಡಿಸಿದ ಹಿರಿಯ ವಕೀಲ ಅಬಾದ್ ಪೋಂಡಾ ಅವರು ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಮನವಿ ಮಾಡಿದರು. ‘ವಾಂಖೆಡೆ ಅವರು ಲಂಚ ಕೇಳಿದ್ದಾರೆ ಅಥವಾ ಪಡೆದಿದ್ದಾರೆ ಎನ್ನುವುದಕ್ಕೆ ಸಿಬಿಐ ಬಳಿ ಯಾವುದೇ ಬಲವಾದ ಪುರಾವೆಗಳಿಲ್ಲ. ಅಂದು ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾರ್ಡೆಲಿಯಾ ಕ್ರೂಸ್ ಹಡಗಿನ ಮೇಲೆ ಕಾನೂನುಬದ್ಧವಾಗಿ ದಾಳಿ ನಡೆಸಲಾಗಿತ್ತು. ಆರ್ಯನ್ ಖಾನ್ ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು’ ಎಂದು ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

ಏನಿದು 25 ಕೋಟಿ ರೂ. ಲಂಚದ ಹಗರಣ?

2023ರ ಮೇ 11ರಂದು ಸಿಬಿಐ ದಾಖಲಿಸಿದ ಎಫ್‌ಐಆರ್ ಪ್ರಕಾರ, ಅಕ್ಟೋಬರ್ 2021ರ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಸಿಲುಕಿಸದಿರಲು ಶಾರುಖ್ ಖಾನ್ ಅವರಿಗೆ 25 ಕೋಟಿ ರೂಪಾಯಿ ಬೇಡಿಕೆ ಇಡಲಾಗಿತ್ತು. ನಂತರ ಈ ಲಂಚದ ಮೊತ್ತವನ್ನು 18 ಕೋಟಿ ರೂಪಾಯಿಗೆ ಇಳಿಕೆ ಮಾಡಲಾಗಿತ್ತು ಎಂಬ ಗಂಭೀರ ಆರೋಪವಿದೆ. ಇದರಲ್ಲಿ ವಾಂಖೆಡೆ ಮಾತ್ರವಲ್ಲದೆ, ಆಗಿನ ಎನ್‌ಸಿಬಿ ಎಸ್‌ಪಿ ವಿಶ್ವ ವಿಜಯ್ ಸಿಂಗ್, ಕಿರಣ್ ಗೋಸಾವಿ ಸೇರಿದಂತೆ ಹಲವರ ಹೆಸರಿದೆ.

ಆರ್ಯನ್ ಖಾನ್‌ಗೆ ಸಿಕ್ಕ ‘ಕ್ಲೀನ್ ಚಿಟ್’

2021ರ ಅಕ್ಟೋಬರ್ 3ರಂದು ಆರ್ಯನ್ ಖಾನ್ ಬಂಧನವಾಗಿತ್ತು. ಆದರೆ, ಎನ್‌ಸಿಬಿಯ ವಿಶೇಷ ತನಿಖಾ ತಂಡ ನಡೆಸಿದ ಆಂತರಿಕ ತನಿಖೆಯಲ್ಲಿ ಆರ್ಯನ್ ಖಾನ್ ಯಾವುದೇ ದೊಡ್ಡ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿತ್ತು. ವಾಂಖೆಡೆ ತಂಡವು ತನಿಖೆಯ ಸಮಯದಲ್ಲಿ ಫೋನ್ ವಶಪಡಿಸಿಕೊಳ್ಳುವಿಕೆ ಮತ್ತು ಹೇಳಿಕೆ ದಾಖಲಿಸುವಲ್ಲಿ ಸರಿಯಾದ ಪ್ರಕ್ರಿಯೆ ಅನುಸರಿಸಿಲ್ಲ ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ ಆರ್ಯನ್ ಖಾನ್‌ಗೆ ಕ್ಲೀನ್ ಚಿಟ್ ನೀಡಲಾಗಿತ್ತು.

ಇದನ್ನೂ ಓದಿ: ಮಧ್ಯ ಬೆರಳು ತೋರಿಸಿದ ಆರ್ಯನ್ ಖಾನ್ ಮೇಲೆ ದೂರು; ಅಲ್ಲೇನಾಯಿತು ವಿವರಿಸಿದ ಝೈದ್ ಖಾನ್

ಸದ್ಯ ಸಮೀರ್ ವಾಂಖೆಡೆ ವಿರುದ್ಧ ಜಾರಿ ನಿರ್ದೇಶನಾಲಯ (ED) ಕೂಡ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದ್ದು, ನ್ಯಾಯಾಲಯದ ಮುಂದಿನ ತೀರ್ಪಿನ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಸದ್ಯ ಆರ್ಯನ್ ಖಾನ್ ಅವರು ಬಾಲಿವುಡ್​​ನಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

WITT Summit 2026- ಜಗತ್ತಿಗೆ ಪ್ರತಿಭೆಗಳ ಪೂರೈಕೆಗೆ ಭಾರತ ಸಿದ್ಧ: ಡಬ್ಲ್ಯುಐಟಿಟಿ ಸಮಿಟ್​ನಲ್ಲಿ ಜೂಪಲ್ಲಿ ರಾಮು ರಾವ್ ಹೇಳಿಕೆ

ನವದೆಹಲಿ, ಮಾರ್ಚ್ 23: ಗುಣಮಟ್ಟದ ಪ್ರತಿಭೆಗಳಿಗೆ ಇರವ ಬೇಡಿಕೆ ಸಾರ್ವತ್ರಿಕವಾದುದು. ಈ ಬೇಡಿಕೆ ಪೂರೈಸಲು ಶಕ್ತವಾಗಿರುವ ಏಕೈಕ ರಾಷ್ಟ್ರ ಭಾರತ ಎಂದು ಮೈ ಹೋಮ್ ಗ್ರೂಪ್​ನ ಎಕ್ಸಿಕ್ಯೂಟಿವ್ ವೈಸ್ ಛೇರ್ಮನ್ ಜೂಪಲ್ಲಿ ರಾಮು ರಾವ್ (Jupally Ramu Rao) ಹೇಳಿದರು. ಟಿವಿ9 ನೆಟ್ವರ್ಕ್ ಆಯೋಜಿಸಿರುವ 2026ರ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (What India Thinks Today – WITT Summit 2026) ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ರಾಮು ರಾವ್ ಅವರು ಮಾತನಾಡುತ್ತಿದ್ದರು.

ಟಿವಿ9 ನೆಟ್ವರ್ಕ್​ನ ಈ ವಾರ್ಷಿಕ ಸಮಿಟ್​ನ ಈ ಆವೃತ್ತಿಯ ಥೀಮ್ ‘ಭಾರತ ಹಾಗೂ ವಿಶ್ವ’ ಎಂದಿದೆ. ಹಿಂದಿನ ಆವೃತ್ತಿಗಳಂತೆ ಈ ಬಾರಿಯೂ ಟಿವಿ9ನ ಈ ಡಬ್ಲ್ಯುಐಟಿಟಿ ಸಮಿಟ್​ನಲ್ಲಿ ಉದ್ಯಮ ಮುಖಂಡರು, ನೀತಿ ರೂಪಕರು, ಜಾಗತಿಕ ಚಿಂತಕರು ಸೇರಿ ಭಾರತದ ಜಾಗತಿಕ ಪ್ರಭಾವ ಹಾಗೂ ಬೆಳವಣಿಗೆ ಕುರಿತು ವಿಚಾರ ವಿನಿಮಯ ಮಾಡಲಿದ್ದಾರೆ.

ಇದನ್ನೂ ಓದಿ: WITT Summit 2026: ತೈಲ ಬಿಕ್ಕಟ್ಟು – ಭಾರತ ಏನು ಯೋಚಿಸುತ್ತಿದೆ ಎಂಬುದು ಜಗತ್ತಿಗೆ ಮುಖ್ಯ ಎಂದ ಟಿವಿ9 ನೆಟ್ವರ್ಕ್ ಸಿಇಒ ಬರುಣ್ ದಾಸ್

ಸದ್ಯ ಜಾಗತಿಕವಾಗಿ ಬಹು ಬಿಕ್ಕಟ್ಟುಗಳು ಎಲ್ಲೆಡೆ ಆರ್ಥಿಕತೆಗಳಿಗೆ ಹೊಡೆತ ಕೊಡುತ್ತಿವೆ. ಇವುಗಳ ಮಧ್ಯೆ ಭಾರತವು ಕ್ಷಮತೆ, ಪ್ರತಿರೋಧ ಶಕ್ತಿಯಾಗಿ ತೋರ್ಪಡಿಸುತ್ತಿದೆ. ಡೆಮಾಕ್ರಸಿ, ಡೆಮಾಗ್ರಫಿ ಮತ್ತು ಡೈವರ್ಸಿಟಿ ಹೊಂದಿರುವ ಭಾರತದ ಬಗ್ಗೆ ವಿಶ್ವಕ್ಕೆ ವಿಶ್ವಾಸ ಮೂಡಿದೆ. ಭಾರತದ ಯುವ ಸಮುದಾಯದ ಬಗ್ಗೆ ವಿಶ್ವವು ಭರವಸೆ ಮತ್ತು ವಿಶ್ವಾಸ ಕಣ್ಣುಗಳಿಂದ ನೋಡುತ್ತಿದೆ ಎಂದು ಮೈ ಹೋಮ್ ಗ್ರೂಪ್​ನ ವೈಸ್ ಛೇರ್ಮನ್ ಹೇಳಿದರು.

ದೊಡ್ಡ ಆರ್ಥಿಕತೆಯ ದೇಶಗಳು ನಿಧಾನ ಬೆಳವಣಿಗೆ ಹೊಂದುತ್ತಿರುವ ಹೊತ್ತಲ್ಲಿ ಭಾರತ ಸ್ಥಿರ ಬೆಳವಣಿಗೆ ಸಾಧಿಸುತ್ತಿದೆ. ವಾರ್ಷಿಕವಾಗಿ ಶೇ. 7ರಷ್ಟು ಬೆಳವಣಿಗೆ ಹೊಂದುತ್ತಿದೆ. ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶವೆನಿಸುವ ನಿಟ್ಟಿನಲ್ಲಿ ಭಾರತ ಸಾಗುತ್ತಿದೆ ಎಂದು ಹೇಳಿದ ರಾಮು ರಾವ್ ಜೂಪಲ್ಲಿ, ಸರ್ಕಾರದಿಂದ ಪೂರಕವಾದ ನೀತಿಗಳು ಜಾರಿಯಾಗುತ್ತಿರುವುದನ್ನು ಉಲ್ಲೇಖಿಸಿದರು.

ಇದನ್ನೂ ಓದಿ: PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತದ ಬಳಿ ಪ್ರತಿಭೆಗಳ ಕಣಜ

ಭಾರತವು ಜಾಗತಿಕ ಪ್ರತಿಭಾ ಕೇಂದ್ರವಾಗಿ ಬೆಳೆಯುತ್ತಿದೆ. ಜರ್ಮನಿಯಿಂದ ಕೆನಡಾವರೆಗೆ ವಿವಿಧ ದೇಶಗಳು ಹಾಗೂ ಗಲ್ಫ್​ನ ದೇಶಗಳು ಕೌಶಲ್ಯವಂತ ಮಾನವ ಸಂಪನ್ಮೂಲಗಳ ಕೊರತೆ ಎದುರಿಸುತ್ತಿವೆ. ಇದನ್ನು ಭಾರತ ನೀಗಬಲ್ಲುದು. ಗುಣಮಟ್ಟದ ಪ್ರತಿಭೆಯನ್ನು ದೊಡ್ಡ ಮಟ್ಟದಲ್ಲಿ ನಿರ್ಮಿಸಲು ಸಮರ್ಥವಾಗಿರುವ ಏಕೈಕ ದೇಶ ಭಾರತವಾಗಿದೆ ಎಂದು ಜೂಪಲ್ಲಿ ರಾಮು ರಾವ್ ಈ ಸಂದರ್ಭದಲ್ಲಿ ತಿಳಿಸಿದರು.

ಜೂಪಲ್ಲಿ ರಾಮು ರಾವ್ ಸ್ವಾಗತ ಭಾಷಣದ ಬಳಿಕ ಟಿವಿ9 ನೆಟ್ವರ್ಕ್​ನ ಎಂಡಿ ಮತ್ತು ಸಿಇಒ ಬರುಣ್ ದಾಸ್ ಅವರು ಮಾತನಾಡಿದರು. ಆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಿಗಳು ಹಿಂದಿನ ಎರಡು ಶೃಂಗಸಭೆಗಳಲ್ಲೂ ಭಾಗವಹಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link