Headlines

nagaraj11081993

ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು?

ಬೆಳಗಾವಿ, (ಮಾರ್ಚ್ 23): ಅವರಿಬ್ಬರೂ ಹದಿನೈದು ವರ್ಷದ ಹಿಂದೆ ಪ್ರೀತಿಸಿ ಕುಟುಂಬಸ್ಥರ ವಿರೋಧದ ನಡುವೆಯೂ ಅಂತರ್ಜಾತಿ ಮದುವೆಯಾದವರು. ಮೂರು ಮುದ್ದಾದ ಮಕ್ಕಳು ಈ ದಂಪತಿ ಅನ್ಯೋನ್ಯತೆಗೆ ಸಾಕ್ಷಿಯಾಗಿದ್ದರು. ಆದರೀಗ ಅದೊಂದು ಕಾರಣಕ್ಕೆ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಪತಿ ಮನೆಯಿಂದ ಎಳೆತಂದು ಕಲ್ಲಿನಿಂದ ಜಜ್ಜಿ ನಡು ರಸ್ತೆಯಲ್ಲೇ ಬರ್ಬರ ಹತ್ಯೆ ಮಾಡಿದ್ದಾನೆ. ಈ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಿವಕ್ಕ ಹಾಗೂ ಬಸವರಾಜ 15 ವರ್ಷಗಳ ಹಿಂದೆ ಪ್ರೀತಿಸಿ ಅಂತರ್ಜಾತಿ ವಿವಾಹ…

Read More

ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್

ಕುವೈತ್, ಮಾರ್ಚ್ 23: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ದಾಳಿ ಮುಂದುವರೆದಂತೆ ಇರಾನ್ (Iran War) ಕೂಡ ಗಲ್ಫ್ ದೇಶಗಳಲ್ಲಿನ ಅಮೆರಿಕದ ವಾಯುನೆಲೆಗಳ ಮೇಲಿನ ದಾಳಿಯನ್ನು ಮುಂದುವರೆಸಿದೆ. ಈ ಯುದ್ಧ ಆರಂಭವಾಗಿ 24 ದಿನಗಳಾಗಿವೆ. ಇನ್ನೂ ಮಧ್ಯಪ್ರಾಚ್ಯ ಸಂಘರ್ಷ ತೀವ್ರಗೊಳ್ಳುತ್ತಲೇ ಇದೆ. ಇದರ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದಂತೆ ಎಕ್ಸ್​ನಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಇದು ಕುವೈತ್‌ನಲ್ಲಿ ಅಮೆರಿಕದ ಮಿಲಿಟರಿಯ ಮತ್ತೊಂದು F-15E ಯುದ್ಧವಿಮಾನ ಪತನವಾಗುವುದನ್ನು ತೋರಿಸುತ್ತದೆ. ಇದು…

Read More

PM Modi Speech in WITT Live: ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್​ 23: ಟಿವಿ9 ನೆಟ್ವರ್ಕ್​​​ನ ಪ್ರತಿಷ್ಠಿತ ಕಾರ್ಯಕ್ರಮ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026”ರ ನಾಲ್ಕನೇ ಆವೃತ್ತಿ ನವದೆಹಲಿಯಲ್ಲಿ ಇಂದಿನ ಆರಂಭವಾಗಿದೆ. ಈ ಬಾರಿಯ ಶೃಂಗಸಭೆ ಭಾರತ ಮತ್ತು ಜಗತ್ತು ಎಂಬ ಥೀಮ್ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಗಣ್ಯರನ್ನು ಉದ್ದೇಶಿಸಿ ಮಾತನಾಡಿದರು. ಉದ್ಯಮ ಕ್ಷೇತ್ರದ ದಿಗ್ಗಜರು, ಆರ್ಥಿಕ ತಜ್ಞರು, ರಾಜಯಕೀಯ ನಾಯಕರು, ಸಿನಿಮಾ ಕ್ಷೇತ್ರದ ನಟರು, ಕ್ರೀಡಾಪಟುಗಳು ಸೇರಿದಂತೆ ಪ್ರಮುಖ ವ್ಯಕ್ತಿಗಳು ಈ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ. “ವಾಟ್…

Read More

IMDb ಪಟ್ಟಿಯಲ್ಲಿ ‘ಧುರಂಧರ್ 2’ ಸಿನಿಮಾ ನಿರ್ದೇಶಕ ಆದಿತ್ಯ ಧರ್ ನಂಬರ್ ಒನ್

ಭಾರತೀಯ ಚಿತ್ರರಂಗದಲ್ಲಿ ಈಗ ಎಲ್ಲಿ ಕೇಳಿದರೂ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾದ ಬಗ್ಗೆಯೇ ಮಾತು ಕೇಳಿಬರುತ್ತಿದೆ. ಕೇವಲ ಬಾಕ್ಸ್ ಆಫೀಸ್ ಕಲೆಕ್ಷನ್ ಮಾತ್ರವಲ್ಲದೇ, ಈ ವಾರದ IMDb ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲೂ (IMDb Popular Indian Celebrities list) ಈ ಚಿತ್ರದ ತಂಡವೇ ರಾರಾಜಿಸುತ್ತಿದೆ. ವಿಶೇಷ ಏನೆಂದರೆ, ಈ ಸಿನಿಮಾದ ಕಲಾವಿದರನ್ನೂ ಮೀರಿಸಿ, ನಿರ್ದೇಶಕ ಆದಿತ್ಯ ಧರ್ ಅವರು ನಂಬರ್ ಒನ್ ಸ್ಥಾನ ಪಡೆದಿದ್ದಾರೆ. ಸಾಮಾನ್ಯವಾಗಿ ಇಂತಹ ಪಟ್ಟಿಗಳಲ್ಲಿ ಸ್ಟಾರ್ ನಟರು ಮೊದಲ…

Read More

ಹೊಸ ಪ್ಯಾನ್ ನಿಯಮದಿಂದ ಹಿಡಿದು ಇನ್ಷೂರೆನ್ಸ್ ಪಾವತಿವರೆಗೆ, ಮಾರ್ಚ್ 31ಕ್ಕೆ ಡೆಡ್​ಲೈನ್ ಇರುವ ಕೆಲ ಪ್ರಮುಖ ಹಣಕಾಸು ಕಾರ್ಯಗಳು

ನವದೆಹಲಿ, ಮಾರ್ಚ್ 23: ಹೊಸ ಹಣಕಾಸು ವರ್ಷ ಆರಂಭವಾಗಲು ಒಂದು ವಾರವಷ್ಟೇ ಉಳಿದಿರುವುದು. ಹೊಸ ವಿತ್ತ ವರ್ಷ ಆರಂಭಕ್ಕೆ ಮುನ್ನ ಮಾಡಬೇಕಾದ ಕೆಲ ಹಣಕಾಸು ಕಾರ್ಯಗಳು (Financial tasks) ತಿಳಿದಿರಲಿ. ಕೆಲ ಪ್ರಮುಖ ಕಾರ್ಯಗಳಿಗೆ ಮಾರ್ಚ್ 31ರವರೆಗೆ ಕಾಲಾವಕಾಶ ಇರುತ್ತದೆ. ಅದು ತಪ್ಪಿದರೆ ಒಂದಷ್ಟು ಹಿನ್ನಡೆ ಅಥವಾ ತೊಂದರೆ ಎದುರಾಗಬಹುದು. ಆರ್ಥಿಕವಾಗಿ ಪರಿಣಾಮ ಬೀರಬಲ್ಲ ಈ ಮಾರ್ಚ್ 31ರ ಡೆಡ್​ಲೈನ್​ಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಪ್ಯಾನ್ ಕಾರ್ಡ್ ನಿಯಮ ಬದಲಾವಣೆ ಸದ್ಯ ನೀವು ಪ್ಯಾನ್ ಕಾರ್ಡ್…

Read More

ಹಿಂದೂ ಶಾಸಕ ಏಕೆ ಆಯ್ಕೆಯಾಗಿಲ್ಲ? ಎಂದ ಕೇರಳದ ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ತಿರುವನಂತಪುರಂ, ಮಾರ್ಚ್ 23: ಕೇರಳದ ವಿಧಾನಸಭಾ ಚುನಾವಣೆಗೂ (Kerala Assembly Elections) ಕೆಲವೇ ದಿನಗಳ ಮೊದಲು, ಕೇರಳದ ಬಿಜೆಪಿ ನಾಯಕ ಮತ್ತು ಗುರುವಾಯೂರಿನ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ವಿರುದ್ಧ ಕೇಸ್ ದಾಖಲಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋಮುವಾದಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕೇರಳದಲ್ಲಿ ಏಪ್ರಿಲ್ 9ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಅಭ್ಯರ್ಥಿ ಗೋಪಾಲಕೃಷ್ಣನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 192 ಮತ್ತು ಜನಪ್ರಾತಿನಿಧ್ಯ…

Read More

ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್: ಸಚಿವರಿಂದ ಮಹತ್ವದ ಭರವಸೆ

ಕೊಪ್ಪಳ, ಮಾರ್ಚ್​ 23: ತುಂಗಭದ್ರಾ ಎಡದಂಡೆ ಕಾಲುವೆ (tungabhadra left bank canal) ಒಡೆದ ಘಟನೆಗೆ ಸಂಬಂಧಿಸಿದಂತೆ ಬೆಳೆ ಹಾಗೂ ಜಮೀನು ಹಾಳು ಮಾಡಿಕೊಂಡ ರೈತರಿಗೆ, ಸರ್ಕಾರದಿಂದ ಪರಿಹಾರದ ಭರವಸೆ ನೀಡುವ ಮೂಲಕ ದುರಸ್ಥಿ ಕಾರ್ಯ ಶುರುವಾಗಿದೆ. ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ದುರಸ್ಥಿ ಕಾರ್ಯ ಜೋರಾಗಿದ್ದು, ಎರಡು ದಿನದಲ್ಲಿ ನೀರು ಪೊರೈಕೆ ಮಾಡುವ ಭರವಸೆ ನೀಡಲಾಗಿದೆ. ಕಳೆದ ವಾರ, ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ…

Read More

ಬಾಗಲಕೋಟೆ ಬೈ ಎಲೆಕ್ಷನ್ ಟಿಕೆಟ್ ಮೇಟಿ ಕುಟುಂಬಕ್ಕೆ ಕೊಟ್ಟಿರುವ ಹಿಂದಿನ ಕಾರಣ ಬಿಚ್ಚಿಟ್ಟ ಸಿಎಂ

ಬಾಗಲಕೋಟೆ (ಮಾರ್ಚ್ 23): ದಾವಣಗೆರೆ ದಕ್ಷಿಣ (Davanagere South By Election) ಹಾಗೂ ಬಾಗಲಕೋಟೆ (Bagalkot) ಉಪ ಚುನಾವಣೆ ಕಾಂಗ್ರೆಸ್‌ ಅಧಿಕೃತ ಟಿಕೆಟ್‌ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್‌ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಕಾಂಗ್ರೆಸ್‌ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಟಿಕೆಟ್‌ ನೀಡಿದೆ. ಶಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅವರ ಮೊಮ್ಮಗ ಸಮರ್ಥ್​​ಗೆ ನೀಡಿದ್ದರೆ, ಇತ್ತ…

Read More

IPL 2026: ಉಳಿದ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ? ಪಂದ್ಯಗಳ ಸಂಖ್ಯೆ ಹೆಚ್ಚಾಗುತ್ತಾ?

2026 ರ ಐಪಿಎಲ್ (IPL 2026) ಆರಂಭಕ್ಕೆ ಒಂದು ವಾರಕ್ಕಿಂತ ಕಡಿಮೆ ಸಮಯ ಉಳಿದಿದೆ. ಆದರೆ ಇದುವರೆಗೂ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಕೆಲವು ದಿನಗಳ ಹಿಂದೆ ಬಿಸಿಸಿಐ (BCCI), ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗಿನ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಕೇವಲ 20 ಪಂದ್ಯಗಳು ಮಾತ್ರ ಸೇರಿವೆ. ಇದೀಗ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಉಳಿದ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟವಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ವಾಸ್ತವವಾಗಿ ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯದಲ್ಲಿ…

Read More

Video: ಎರಡು ವಾರಗಳ ಕಾಲ ಆಫೀಸಿನಿಂದ ಮನೆಗೆ 2.7 ಕಿಮೀ ನಡಿಗೆ; ಸಾಧಕ ಬಾಧಕ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ

ಬೆಂಗಳೂರು, ಮಾರ್ಚ್ 23: ಬೆಂಗಳೂರು (Bengaluru) ಅಂದ್ರೆ ಮೊದಲು ನೆನಪಿಗೆ ಬರುವುದೇ ಟ್ರಾಫಿಕ್. ಈ ಟ್ರಾಫಿಕ್‌ನಲ್ಲಿ ಸಿಲುಕಿ ಟೈಮ್ ವೇಸ್ಟ್ ಮಾಡೋದಕ್ಕಿಂತ ನಡೆದುಕೊಂಡು ಹೋಗೋದೇ ಬೆಸ್ಟ್ ಎನ್ನುವ ಅಭಿಪ್ರಾಯವಿದ್ರೂ ಅಂತಹ ಸಾಹಸಕ್ಕೆ ಯಾರು ಕೈ ಹಾಕಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಎರಡು ವಾರಗಳ ಕಾಲ ಪ್ರತಿದಿನ ಸಂಜೆ ಆಫೀಸಿನಿಂದ ಮನೆಗೆ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ತನಗಾದ ಅನುಭವ ಹಂಚಿಕೊಂಡಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿಲ್ಪಾ (silly_fied) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ…

Read More