Headlines

nagaraj11081993

ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್

ನವದೆಹಲಿ, (ಮಾರ್ಚ್ 23): ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇನ್ನು  ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.  ಇದರೊಂದಿಗೆ ಪ್ರಧಾನಿ ಮೋದಿ ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ…

Read More

ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಎಂದರೆ ಅಭಿಮಾನಿಗಳಿಗೆ ಸಖತ್ ಇಷ್ಟ. ಶಿವಣ್ಣ ಕೂಡ ಅಭಿಮಾನಿಗಳನ್ನು ಪ್ರೀತಿಯಿಂದ ಕಾಣುತ್ತಾರೆ. ‘ಅಭಿಮಾನಿ ದೇವರುಗಳು’ ಎಂದು ನಂಬಿದ ಫ್ಯಾಮಿಲಿ ಅವರದ್ದು. ಆ ಮಾತಿಗೆ ಆಗಾಗ ಸಾಕ್ಷಿ ಸಿಗುತ್ತಲೇ ಇರುತ್ತದೆ. ಅಥಣಿಯಿಂದ ಶಿವಣ್ಣ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ (DKD) ರಿಯಾಲಿಟಿ ಶೋ ಚಿತ್ರೀಕರಣದ ಸೆಟ್​​ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಶಿವಣ್ಣ (Shivanna) ಅವರು ವಿಶೇಷ ಚೇತನ ಅಭಿಮಾನಿಗೆ ಫೋಟೋ ನೀಡಿ, ಆರ್ಥಿಕ ಸಹಾಯ…

Read More

ಅಪಹರಿಸಿ ಸ್ನೇಹಿತನ ಕೊಲೆ ಕೇಸ್: ನಾಪತ್ತೆಯಾಗಿದ್ದ ಡೆಲಿವರಿ ಬಾಯ್​​ ಮಿಸ್ಟ್ರಿ ಬಯಲು; ಐವರು ಅರೆಸ್ಟ್​​​

ಹಾಸನ, ಮಾರ್ಚ್​ 23: ಕೇವಲ 7 ಸಾವಿರ ರೂ ಹಣಕ್ಕಾಗಿ ಗಾಂಜಾ ಅಮಲಿನಲ್ಲಿ ಗೆಳೆಯನ್ನೇ ಹತ್ಯೆಗೈದ (kill) ಪ್ರಕರಣವನ್ನು ಬೇಧಿಸಿರುವ ಪೊಲೀಸರು ಐವರ ಹೆಡೆಮುರಿ ಕಟ್ಟಿದ್ದಾರೆ. ವರುಣ್​​ನ್ನ ಸಿನಿಮೀಯ ರೀತಿಯಲ್ಲಿ ಅಪಹರಿಸಿ ಕರೆತಂದು ಕೂಡಿ ಹಾಕಿ ಸ್ನೇಹಿತರ ಗ್ಯಾಂಗ್​​ ಹಲ್ಲೆ ಮಾಡಿ ಬಳಿಕ ಕೊಲೆಗೈದು ಎರಡು ದಿನ ಶವದ ಜೊತೆ ಕಳೆದು ಬಳಿಕ ಸುಟ್ಟು ಎಸ್ಕೇಪ್ ಆಗಿದ್ದವರ ಬೆನ್ನಟ್ಟಿದ ಪೊಲೀಸರು, ನಾಪತ್ತೆ ಕೇಸ್​​ನ ಮಿಸ್ಟ್ರಿಯನ್ನ ಬಯಲು ಮಾಡಿದ್ದಾರೆ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎನ್ನುವ ಒಂದೇ ಕಾರಣಕ್ಕೆ…

Read More

PM Modi in WITT Summit 2026: ನಾವು ಭಾರತೀಯರ ಪರ, ನಮಗೆ ಅಭಿವೃದ್ಧಿಯೇ ಮುಖ್ಯ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ನವದೆಹಲಿ, ಮಾರ್ಚ್ 23: ಟಿವಿ9 ನೆಟ್‌ವರ್ಕ್ ಆಯೋಜಿಸಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit- 2026) ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಅಂತಾರಾಷ್ಟ್ರೀಯ ಬೆಳವಣಿಗೆಗಳ ಕುರಿತು ಪ್ರಮುಖ ಹೇಳಿಕೆಗಳನ್ನು ನೀಡಿದರು. ಈ ಬಾರಿಯ ಶೃಂಗಸಭೆಯ ವಿಷಯ ಭಾರತ ಮತ್ತು ಜಗತ್ತು ಎಂಬುದಾಗಿರುವುದರಿಂದ ಜಾಗತಿಕ ವಿಚಾರಗಳ ಬಗ್ಗೆಯೂ ಪ್ರಧಾನಿ ಮೋದಿ ಬೆಳಕು ಚೆಲ್ಲಿದರು. “ಜಾಗತಿಕ ಸಂಘರ್ಷದಲ್ಲಿ ನಾವು ಯಾರ ಪರವಾಗಿರುತ್ತೇವೆ?” ಎಂದು ಕೇಳುವವರಿಗೆ ನಮ್ಮ ಉತ್ತರ ಒಂದೇ. ನಾವು ದೇಶದ ಪರವಾಗಿರುತ್ತೇವೆ, ನಮಗೆ ಭಾರತೀಯರ ಅಭಿವೃದ್ಧಿಯೊಂದೇ…

Read More

‘ಶಾರುಖ್ ಖಾನ್ ಬಳಿ ನಾನು ಲಂಚ ಕೇಳಿಲ್ಲ’: ಬಾಂಬೆ ಹೈಕೋರ್ಟ್‌ನಲ್ಲಿ ಸಮೀರ್ ವಾಂಖೆಡೆ ವಾದ

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan Khan) ಅವರನ್ನು ಡ್ರಗ್ಸ್ ಪ್ರಕರಣದಿಂದ ಪಾರು ಮಾಡಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede), ಸೋಮವಾರ (ಮಾರ್ಚ್ 23) ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ವಾದ ಮಂಡಿಸಿದ್ದಾರೆ. ‘ನಾನು ಶಾರುಖ್ ಖಾನ್ (Shah Rukh Khan) ಅವರಿಂದ ಯಾವುದೇ ಲಂಚ ಕೇಳಿಲ್ಲ ಅಥವಾ ಸ್ವೀಕರಿಸಿಲ್ಲ’ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸಿಬಿಐ ಬಳಿ ಯಾವುದೇ ಪುರಾವೆಯಿಲ್ಲ…

Read More

WITT Summit 2026- ಜಗತ್ತಿಗೆ ಪ್ರತಿಭೆಗಳ ಪೂರೈಕೆಗೆ ಭಾರತ ಸಿದ್ಧ: ಡಬ್ಲ್ಯುಐಟಿಟಿ ಸಮಿಟ್​ನಲ್ಲಿ ಜೂಪಲ್ಲಿ ರಾಮು ರಾವ್ ಹೇಳಿಕೆ

ನವದೆಹಲಿ, ಮಾರ್ಚ್ 23: ಗುಣಮಟ್ಟದ ಪ್ರತಿಭೆಗಳಿಗೆ ಇರವ ಬೇಡಿಕೆ ಸಾರ್ವತ್ರಿಕವಾದುದು. ಈ ಬೇಡಿಕೆ ಪೂರೈಸಲು ಶಕ್ತವಾಗಿರುವ ಏಕೈಕ ರಾಷ್ಟ್ರ ಭಾರತ ಎಂದು ಮೈ ಹೋಮ್ ಗ್ರೂಪ್​ನ ಎಕ್ಸಿಕ್ಯೂಟಿವ್ ವೈಸ್ ಛೇರ್ಮನ್ ಜೂಪಲ್ಲಿ ರಾಮು ರಾವ್ (Jupally Ramu Rao) ಹೇಳಿದರು. ಟಿವಿ9 ನೆಟ್ವರ್ಕ್ ಆಯೋಜಿಸಿರುವ 2026ರ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (What India Thinks Today – WITT Summit 2026) ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ರಾಮು ರಾವ್ ಅವರು ಮಾತನಾಡುತ್ತಿದ್ದರು….

Read More

‘ಧುರಂಧರ್ 2’ ಅತಿ ಕೆಟ್ಟ ಸಿನಿಮಾ ಎಂದ ಪಾಕ್ ಕುಟುಂಬ; ವಿಡಿಯೋ ವೈರಲ್

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಸಿನಿಮಾ ವಿಶ್ವಾದ್ಯಂತ 750 ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಇನ್ನೊಂದೆಡೆ ವಿದೇಶದಲ್ಲಿ ಈ ಚಿತ್ರದ ವಿರುದ್ಧ ಕಿಡಿಕಾರುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಯುನೈಟೆಡ್ ಕಿಂಗ್​ಡಮ್​ನ​​ ಚಿತ್ರಮಂದಿರವೊಂದರಿಂದ ಹೊರಬಂದ ಪಾಕಿಸ್ತಾನ (Pakistan) ಮೂಲದ ಕುಟುಂಬದವರು ಈ ಸಿನಿಮಾದ ವಿರುದ್ಧ ಅತ್ಯಂತ ಕಟುವಾದ ಪದಗಳನ್ನು ಬಳಸಿ ಚಿತ್ರದ ಬಗ್ಗೆ ವಿಮರ್ಶೆ ಹಂಚಿಕೊಂಡಿದ್ದಾರೆ. ಅವರ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಸಿನಿಮಾ ನೋಡಿ ಹೊರಬರುತ್ತಿರುವ ಪಾಕಿಸ್ತಾನಿ ವ್ಯಕ್ತಿಯೊಬ್ಬರು, ‘ಇದು…

Read More

PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್ 23: ದೆಹಲಿಯಲ್ಲಿ ಇಂದಿನಿಂದ ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ಆರಂಭವಾಗಿದೆ. ಈ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Modi in WITT Summit) ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಮಾಡಿದ ಪಾಪದ ಹೊರೆಗಳನ್ನು ನಾವು ಹೊತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ. “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಕಾಂಗ್ರೆಸ್ ದೇಶದ…

Read More

IPL 2026: ಕರ್ನಾಟಕದ ಈ 2 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ಸ್ಥಾಪನೆ; ಯಾವಾಗ, ಎಲ್ಲಿ?

2026 ರ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ನೋಡಲು ಅಭಿಮಾನಿಗಳು ಕೂಡ ಕಾದು ಕುಳಿತಿದ್ದಾರೆ. ಆದಾಗ್ಯೂ ಎಲ್ಲಾ ಅಭಿಮಾನಿಗಳಿಗೂ ಕ್ರೀಡಾಂಗಣಕ್ಕೆ ಹೋಗಿ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಟಿಕೆಟ್ ಸಿಗದೆ ಇರುವುದು ಅಥವಾ ಟಿಕೆಟ್ ಬೆಲೆ ಅಧಿಕವಾಗಿರುವುದು ಸೇರಿದಂತೆ ಇದಕ್ಕೆ ನಾನಾ ಕಾರಣಗಳಿರುತ್ತವೆ. ಅಂತಹ ಅಭಿಮಾನಿಗಳು ನಿರಾಶೆಗೊಳ್ಳದಂತೆ ನೋಡಿಕೊಳ್ಳುವ ಸಲುವಾಗಿ ಬಿಸಿಸಿಐ ದೇಶದ ನಾನಾ ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್​ಗಳನ್ನು (IPL 2026 Fan Parks) ಸ್ಥಾಪಿಸಲಿದೆ….

Read More

WITT Summit 2026: ತೈಲ ಬಿಕ್ಕಟ್ಟು – ಭಾರತ ಏನು ಯೋಚಿಸುತ್ತಿದೆ ಎಂಬುದು ಜಗತ್ತಿಗೆ ಮುಖ್ಯ ಎಂದ ಟಿವಿ9 ನೆಟ್ವರ್ಕ್ ಸಿಇಒ ಬರುಣ್ ದಾಸ್

ನವದೆಹಲಿ, ಮಾರ್ಚ್ 23: ಟಿವಿ9 ವಾರ್ಷಿಕ ಶೃಂಗಸಭೆಯಾದ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಸಮಿಟ್​ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳಲಾಯಿತು. ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಲ್ಲೂ ಪ್ರಧಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಮಯ ಮಾಡಿಕೊಂಡಿರುವುದಕ್ಕೆ ಬರುಣ್ ದಾಸ್ ಹರ್ಷ ವ್ಯಕ್ತಪಡಿಸಿದರು. ಪ್ರಧಾನಿಯವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ ಬಳಿಕ ಮಾತು ಮುಂದುವರಿಸಿದ ಬರುಣ್ ದಾಸ್, ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಪರಿಸ್ಥಿತಿ ಜಾಗತಿಕ…

Read More