All posts by nagaraj11081993

IMDb ಪಟ್ಟಿಯಲ್ಲಿ ‘ಧುರಂಧರ್ 2’ ಸಿನಿಮಾ ನಿರ್ದೇಶಕ ಆದಿತ್ಯ ಧರ್ ನಂಬರ್ ಒನ್

IMDb ಪಟ್ಟಿಯಲ್ಲಿ ‘ಧುರಂಧರ್ 2’ ಸಿನಿಮಾ ನಿರ್ದೇಶಕ ಆದಿತ್ಯ ಧರ್ ನಂಬರ್ ಒನ್

ಭಾರತೀಯ ಚಿತ್ರರಂಗದಲ್ಲಿ ಈಗ ಎಲ್ಲಿ ಕೇಳಿದರೂ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾದ ಬಗ್ಗೆಯೇ ಮಾತು ಕೇಳಿಬರುತ್ತಿದೆ. ಕೇವಲ ಬಾಕ್ಸ್ ಆಫೀಸ್ ಕಲೆಕ್ಷನ್ ಮಾತ್ರವಲ್ಲದೇ, ಈ ವಾರದ IMDb ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲೂ (IMDb Popular Indian Celebrities list) ಈ ಚಿತ್ರದ ತಂಡವೇ ರಾರಾಜಿಸುತ್ತಿದೆ. ವಿಶೇಷ ಏನೆಂದರೆ, ಈ ಸಿನಿಮಾದ ಕಲಾವಿದರನ್ನೂ ಮೀರಿಸಿ, ನಿರ್ದೇಶಕ ಆದಿತ್ಯ ಧರ್ ಅವರು ನಂಬರ್ ಒನ್ ಸ್ಥಾನ ಪಡೆದಿದ್ದಾರೆ.

ಸಾಮಾನ್ಯವಾಗಿ ಇಂತಹ ಪಟ್ಟಿಗಳಲ್ಲಿ ಸ್ಟಾರ್ ನಟರು ಮೊದಲ ಸ್ಥಾನದಲ್ಲಿರುತ್ತಾರೆ. ಆದರೆ ಈ ಬಾರಿ ‘ಧುರಂಧರ್’ ಚಿತ್ರದ ನಿರ್ದೇಶಕ ಆದಿತ್ಯ ಧರ್ ಅವರು ನಟರನ್ನೆಲ್ಲಾ ಹಿಂದಿಕ್ಕಿ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಚಿತ್ರದ ಕಥೆ ಮತ್ತು ಮೇಕಿಂಗ್ ಮೂಲಕ ಅವರು ಜನಮನ ಗೆದ್ದಿರುವುದಕ್ಕೆ ಇದು ಸಾಕ್ಷಿಯಾಗಿದೆ. ಅವರ ಕೆಲಸಕ್ಕೆ ಅಭಿಮಾನಿಗಳು ಭೇಷ್ ಎನ್ನುತ್ತಿದ್ದಾರೆ.

IMDb ಪಟ್ಟಿಯಲ್ಲಿರುವ ‘ಧುರಂಧರ್ 2’ ಚಿತ್ರತಂಡ:

  • ಆದಿತ್ಯ ಧರ್ (ನಿರ್ದೇಶಕ): 1ನೇ ಸ್ಥಾನ
  • ಸಾರಾ ಅರ್ಜುನ್: 2ನೇ ಸ್ಥಾನ
  • ರಣವೀರ್ ಸಿಂಗ್: 3ನೇ ಸ್ಥಾನ
  • ಉದಯ್‌ಬೀರ್ ಸಂಧು: 7ನೇ ಸ್ಥಾನ
  • ಅರ್ಜುನ್ ರಾಮ್​ಪಾಲ್: 9ನೇ ಸ್ಥಾನ
  • ಸೌಮ್ಯಾ ಟಂಡನ್: 10ನೇ ಸ್ಥಾನ
  • ಗೌರವ್ ಗೇರಾ: 12ನೇ ಸ್ಥಾನ
  • ಡ್ಯಾನಿಶ್ ಇಕ್ಬಾಲ್: 13ನೇ ಸ್ಥಾನ
  • ರಾಕೇಶ್ ಬೇಡಿ: 20ನೇ ಸ್ಥಾನ

ಇದಲ್ಲದೆ, ಮೊದಲ ಭಾಗದಲ್ಲಿ ನಟಿಸಿದ್ದ ಅಕ್ಷಯ್ ಖನ್ನಾ 16ನೇ ಸ್ಥಾನದಲ್ಲಿದ್ದಾರೆ. ಇತರ ನಟರ ಪೈಕಿ ಅನಾಸ್ವರ ರಾಜನ್ (6ನೇ ಸ್ಥಾನ) ಮತ್ತು ಜತಿನ್ ಗೋಸ್ವಾಮಿ (14ನೇ ಸ್ಥಾನ) ಕೂಡ ಪಟ್ಟಿಯಲ್ಲಿದ್ದಾರೆ.

ಮಾರ್ಚ್ 19ರಂದು ಬಿಡುಗಡೆಯಾದ ‘ಧುರಂಧರ್ 2’ ಸಿನಿಮಾ, ಕರಾಚಿಯ ಲಿಯಾರಿ ಹಿನ್ನೆಲೆಯಲ್ಲಿ ನಡೆಯುವ ಕಥೆ ಹೊಂದಿದೆ. ಭಾರತೀಯ ಸಂಸತ್ ಭವನದ ಮೇಲಿನ ದಾಳಿ, 26/11 ಮುಂಬೈ ದಾಳಿ ಮತ್ತು ಕಂದಹಾರ್ ವಿಮಾನ ಹೈಜಾಕ್‌ನಂತಹ ನೈಜ ಘಟನೆಗಳ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಸದ್ಯ ಈ ಚಿತ್ರವು ಭಾರತದಲ್ಲಿ 450 ಕೋಟಿ ರೂ. ಹಾಗೂ ವಿಶ್ವದಾದ್ಯಂತ ಭರ್ಜರಿ 750 ಕೋಟಿ ರೂ. ಗಳಿಕೆ ಮಾಡಿ ಮುನ್ನುಗ್ಗುತ್ತಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಗುತ್ತಿದೆ.

ಇದನ್ನೂ ಓದಿ: ಎಐ ಮೂಲಕ ಬದಲಾಯ್ತು ‘ಧುರಂಧರ್ 2’ ಕ್ಲೈಮಾಕ್ಸ್; ಪ್ರೇಕ್ಷಕರ ಬಯಕೆಯಂತೆ ಕಥೆ ಅಂತ್ಯ

ಐಎಂಡಿಬಿ ಕುರಿತು:

ಐಎಂಡಿಬಿ ಒಂದು ಪ್ರಸಿದ್ಧ ಆನ್‌ಲೈನ್ ವೇದಿಕೆ ಆಗಿದ್ದು, ಸಿನಿಮಾ, ಟಿವಿ ಶೋಗಳು, ನಟರು, ನಿರ್ಮಾಪಕರ ಮತ್ತು ತಂತ್ರಜ್ಞರ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ಜನರು ಸಿನಿಮಾಗಳ ವಿಮರ್ಶೆಗಳನ್ನು ಓದಲು, ರೇಟಿಂಗ್ ನೀಡಲು ಮತ್ತು ಹೊಸ ಬಿಡುಗಡೆಗಳ ಬಗ್ಗೆ ಈ ವೆಬ್​ಸೈಟ್ ಮೂಲಕ ತಿಳಿದುಕೊಳ್ಳಬಹುದು. ಇದು ಚಿತ್ರರಂಗದ ಮಾಹಿತಿಗಾಗಿ ವಿಶ್ವಾಸಾರ್ಹ ಮೂಲವಾಗಿದೆ. ಇಲ್ಲಿ ಜನರು ಸಿನಿಮಾಗಳಿಗೆ ರೇಟಿಂಗ್ ಮತ್ತು ವಿಮರ್ಶೆಗಳನ್ನು ನೀಡಬಹುದು. ನಿಖರ ಮಾಹಿತಿ, ನಟರ ವಿವರಗಳು ಮತ್ತು ಟ್ರೈಲರ್‌ಗಳು ಸುಲಭವಾಗಿ ಲಭ್ಯವಾಗುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೊಸ ಪ್ಯಾನ್ ನಿಯಮದಿಂದ ಹಿಡಿದು ಇನ್ಷೂರೆನ್ಸ್ ಪಾವತಿವರೆಗೆ, ಮಾರ್ಚ್ 31ಕ್ಕೆ ಡೆಡ್​ಲೈನ್ ಇರುವ ಕೆಲ ಪ್ರಮುಖ ಹಣಕಾಸು ಕಾರ್ಯಗಳು

ನವದೆಹಲಿ, ಮಾರ್ಚ್ 23: ಹೊಸ ಹಣಕಾಸು ವರ್ಷ ಆರಂಭವಾಗಲು ಒಂದು ವಾರವಷ್ಟೇ ಉಳಿದಿರುವುದು. ಹೊಸ ವಿತ್ತ ವರ್ಷ ಆರಂಭಕ್ಕೆ ಮುನ್ನ ಮಾಡಬೇಕಾದ ಕೆಲ ಹಣಕಾಸು ಕಾರ್ಯಗಳು (Financial tasks) ತಿಳಿದಿರಲಿ. ಕೆಲ ಪ್ರಮುಖ ಕಾರ್ಯಗಳಿಗೆ ಮಾರ್ಚ್ 31ರವರೆಗೆ ಕಾಲಾವಕಾಶ ಇರುತ್ತದೆ. ಅದು ತಪ್ಪಿದರೆ ಒಂದಷ್ಟು ಹಿನ್ನಡೆ ಅಥವಾ ತೊಂದರೆ ಎದುರಾಗಬಹುದು. ಆರ್ಥಿಕವಾಗಿ ಪರಿಣಾಮ ಬೀರಬಲ್ಲ ಈ ಮಾರ್ಚ್ 31ರ ಡೆಡ್​ಲೈನ್​ಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಪ್ಯಾನ್ ಕಾರ್ಡ್ ನಿಯಮ ಬದಲಾವಣೆ

ಸದ್ಯ ನೀವು ಪ್ಯಾನ್ ಕಾರ್ಡ್ ಪಡೆಯಬೇಕಾದರೆ ಆಧಾರ್ ದಾಖಲೆ ಕೊಟ್ಟರೆ ಸಾಕು. ಈ ಅವಕಾಶ 2026ರ ಮಾರ್ಚ್ 31ರವರೆಗೆ ಮಾತ್ರ. ಏಪ್ರಿಲ್ 1ರಿಂದ ಹೊಸ ನಿಯಮ ಬರುತ್ತಿದೆ. ಆಗ ನೀವು ಪ್ಯಾನ್ ಕಾರ್ಡ್​ಗೆ ಅರ್ಜಿ ಸಲ್ಲಿಸುವಾಗ ಆಧಾರ್ ಮಾತ್ರವಲ್ಲ, ವೋಟರ್ ಐಡಿ, ಪಾಸ್​ಪೋರ್ಟ್, ಡಿಎಲ್, ಬರ್ತ್ ಸರ್ಟಿಫಿಕೇಟ್, ಎಸ್ಸೆಸ್ಸೆಲ್ಸಿ ಸರ್ಟಿಫಿಕೇಟ್ ಇತ್ಯಾದಿ ಯಾವುದಾದರೂ ಹೆಚ್ಚುವರಿ ದಾಖಲೆಗಳನ್ನು ಕೊಡಬೇಕಾಗುತ್ತದೆ.

ಇದನ್ನೂ ಓದಿ: ನಿಷ್ಕ್ರಿಯ ಇಪಿಎಫ್ ಅಕೌಂಟ್​ಗಳಿಗೆ ಬಡ್ಡಿ ಸಿಗುತ್ತಾ? ಯಾವುದಕ್ಕೆ ಟ್ಯಾಕ್ಸ್ ಇರುತ್ತೆ?

ಕಂಪನಿ ಎಚ್​ಆರ್​ಗೆ ನಿಮ್ಮ ಹೂಡಿಕೆಗಳ ದಾಖಲೆ ಸಲ್ಲಿಸಿ

ಉದ್ಯೋಗಿಯ ಸಂಬಳದ ಹಣಕ್ಕೆ ಟಿಡಿಎಸ್ ಮುರಿದುಕೊಳ್ಳುವುದನ್ನು ತಪ್ಪಿಸಲು ಕಂಪನಿಗಳು ಉದ್ಯೋಗಿಗಳಿಂದ ಇನ್ವೆಸ್ಟ್​ಮೆಂಟ್ ಪ್ರೂಫ್ ಕೇಳುತ್ತವೆ. ಇನ್ಷೂರೆನ್ಸ್ ಪ್ರೀಮಿಯಮ್ ಪೇಮೆಂಟ್​ನ ರೆಸಿಪ್ಟ್​ಗಳು, ಪಿಪಿಎಫ್​ನಲ್ಲಿ ಹೂಡಿಕೆ ಮಾಡಿದ್ದರೆ ಅದರ ರೆಸಿಪ್ಟ್​ಗಳು; ಎಚ್​ಆರ್​ಎ ಕ್ಲೇಮ್ ಮಾಡಬೇಕೆಂದಿದ್ದರೆ ರೆಂಟ್ ರೆಸಿಪ್ಟ್​ಗಳು ಮತ್ತು ರೆಂಟಲ್ ಅಗ್ರೀಮೆಂಟ್; ಇಎಲ್​ಎಸ್​ಎಸ್ ಇನ್ವೆಸ್ಟ್​ಮೆಂಟ್ ಸ್ಟೇಟ್ಮೆಂಟ್ ಇತ್ಯಾದಿ ದಾಖಲೆಗಳನ್ನು ಉದ್ಯೋಗಿಗಳು ತಮ್ಮ ಕಂಪನಿಯ ಎಚ್​ಆರ್ ವಿಭಾಗಕ್ಕೆ ಸಲ್ಲಿಸಬೇಕಾಗುತ್ತದೆ. ಇದಕ್ಕೆ ಡೆಡ್​ಲೈನ್ ಮಾರ್ಚ್ 31. ನೀವು ದಾಖಲೆ ಸಲ್ಲಿಸದಿದ್ದರೆ ಸಂಬಳದಿಂದ ಟಿಡಿಎಸ್ ಕಡಿತ ಆಗಬಹುದು.

ಪಿಪಿಎಫ್, ಎಸ್​ಎಸ್​ವೈ, ಎನ್​ಪಿಎಸ್ ಸ್ಕೀಮ್​ಗಳಿಗೆ ಪ್ರೀಮಿಯಮ್ ಪಾವತಿಸಿ

ಹಳೆಯ ಟ್ಯಾಕ್ಸ್ ರಿಜೀಮ್​ನಲ್ಲಿ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 80ಸಿ ಅಡಿಯಲ್ಲಿ ಟ್ಯಾಕ್ಸ್ ಲಾಭಕ್ಕೆ ಅವಕಾಶ ಇದೆ. ಪಿಪಿಎಫ್, ಸುಕನ್ಯಾ ಸಮೃದ್ದಿ, ಎನ್​ಪಿಎಸ್ ಇತ್ಯಾದಿ ಸೇವಿಂಗ್ಸ್ ಸ್ಕೀಮ್​ಗಳಿಗೆ ಮಾಡುವ ಹೂಡಿಕೆಗಳಿಗೆ ಟ್ಯಾಕ್ಸ್ ಡಿಡಕ್ಷನ್ ಕ್ಲೇಮ್ ಮಾಡಬಹುದು. ಮಾರ್ಚ್ 31ರೊಳಗೆ ನೀವು ಹೂಡಿಕೆ ಮಾಡಬೇಕು. ಇಲ್ಲದಿದ್ದರೆ ಅದು ಮುಂದಿನ ಹಣಕಾಸು ವರ್ಷದ ಲೆಕ್ಕಕ್ಕೆ ಹೋಗುತ್ತದೆ.

ಇದನ್ನೂ ಓದಿ: ಬ್ಯಾಂಕು, ಷೇರು, ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಹೂಡಿಕೆದಾರರ ಹಣ ಏನಾಗುತ್ತೆ? ಇಲ್ಲಿದೆ ಡೀಟೇಲ್ಸ್

ಹೆಲ್ತ್ ಇನ್ಷೂರೆನ್ಸ್, ಹೋಮ್ ಲೋನ್ ಇತ್ಯಾದಿ

ಸೆಕ್ಷನ್ 80ಡಿ ಅಡಿಯಲ್ಲಿ ಹೆಲ್ತ್ ಇನ್ಷೂರೆನ್ಸ್ ಪ್ರೀಮಿಯಮ್ ಹಣ ಪಾವತಿಗೆ ಡಿಡಕ್ಷನ್ ಸಿಗುತ್ತದೆ. 25,000 ರೂವರೆಗಿನ ಪಾವತಿಗೆ ಡಿಡಕ್ಷನ್ ಕ್ಲೇಮ್ ಮಾಡಬಹುದು. ಮಾರ್ಚ್ 31ರೊಳಗೆ ಇನ್ಷೂರೆನ್ಸ್ ಪ್ರೀಮಿಯಮ್ ಪಾವತಿಸಿರಿ.

ಹೋಮ್ ಲೋನ್ ಪಡೆದಿದ್ದರೆ ಪ್ರಿನ್ಸಿಪಾಲ್ ಮೊತ್ತ ಹಾಗೂ ಬಡ್ಡಿ ಎರಡಕ್ಕೂ ಡಿಡಕ್ಷನ್ ಸೌಲಭ್ಯ ಇದೆ. ತೆರಿಗೆ ಪಾವತಿದಾರರು ತಮ್ಮ ಬ್ಯಾಂಕಿಂದ ಹೋಮ್ ಲೋನ್ ಇಂಟರೆಸ್ಟ್ ಸರ್ಟಿಫಿಕೇಟ್ ಪಡೆದುಕೊಳ್ಳಬೇಕು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಿಂದೂ ಶಾಸಕ ಏಕೆ ಆಯ್ಕೆಯಾಗಿಲ್ಲ? ಎಂದ ಕೇರಳದ ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ತಿರುವನಂತಪುರಂ, ಮಾರ್ಚ್ 23: ಕೇರಳದ ವಿಧಾನಸಭಾ ಚುನಾವಣೆಗೂ (Kerala Assembly Elections) ಕೆಲವೇ ದಿನಗಳ ಮೊದಲು, ಕೇರಳದ ಬಿಜೆಪಿ ನಾಯಕ ಮತ್ತು ಗುರುವಾಯೂರಿನ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ವಿರುದ್ಧ ಕೇಸ್ ದಾಖಲಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋಮುವಾದಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕೇರಳದಲ್ಲಿ ಏಪ್ರಿಲ್ 9ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿ ಅಭ್ಯರ್ಥಿ ಗೋಪಾಲಕೃಷ್ಣನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 192 ಮತ್ತು ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ಹೇಳಿಕೆಯ ವಿರುದ್ಧ ಕೇರಳ ರಾಜ್ಯದಲ್ಲಿ ಗಲಾಟೆ ಭುಗಿಲೆದ್ದ ನಂತರ ಈ ಬೆಳವಣಿಗೆ ನಡೆದಿದೆ. ಆಡಳಿತಾರೂಢ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಈ ಹೇಳಿಕೆಗಳ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು.

ಇದನ್ನೂ ಓದಿ: ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ಕಾಂಗ್ರೆಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆಯಾದ ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು) ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಬಿಜೆಪಿ ನಾಯಕನ ಈ ಹೇಳಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದೆ. ಈ ಹೇಳಿಕೆ ಕೋಮುವಾದವನ್ನು ಹರಡುತ್ತಿದೆ ಎಂದು ಆರೋಪಿಸಲಾಗಿದೆ. ಈ ವಿಷಯದ ಬಗ್ಗೆ ಜಿಲ್ಲಾಧಿಕಾರಿಯಿಂದ ವರದಿ ಕೇಳಲಾಗಿದೆ.

ಚುನಾವಣಾ ಪ್ರಚಾರದ ವೀಡಿಯೊ ವೈರಲ್ ಆದ ನಂತರ ವಿವಾದ ಪ್ರಾರಂಭವಾಯಿತು. ಇದರಲ್ಲಿ ಬಿ. ಗೋಪಾಲಕೃಷ್ಣನ್ ಅವರು ಗುರುವಾಯೂರು ಕ್ಷೇತ್ರವು ಸುಮಾರು 5 ದಶಕಗಳಿಂದ “ಹಿಂದೂ ಶಾಸಕ”ನನ್ನು ಆಯ್ಕೆ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಎಡಪಂಥೀಯರು ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಎರಡೂ ಸಮುದಾಯದ ಹಿಂದೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ ಎಂದು ಅವರು ಆರೋಪಿಸಿದ್ದರು. “ಗುರುವಾಯೂರ್‌ನಲ್ಲಿ ಇಲ್ಲಿಯವರೆಗೆ ಹಿಂದೂ ಶಾಸಕರು ಏಕೆ ಆಯ್ಕೆಯಾಗಲಿಲ್ಲ?” ಎಂದು ಅವರು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಗುರುವಾಯೂರು ದೇವಸ್ಥಾನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ಗೋಪಾಲಕೃಷ್ಣನ್ ಅವರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊವನ್ನು ಗುರುವಾಯೂರು ದೇವಸ್ಥಾನದ ಪೂರ್ವ ಪ್ರವೇಶದ್ವಾರವಾದ ನಾಡವಾಳಿಯಲ್ಲಿ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಲಾಗಿದೆ. ಮುಖ್ಯ ಚುನಾವಣಾ ಅಧಿಕಾರಿ ರಥನ್ ಯು ಕೇಳ್ಕರ್ ಈ ಹೇಳಿಕೆಗಳ ಕುರಿತು ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್: ಸಚಿವರಿಂದ ಮಹತ್ವದ ಭರವಸೆ

ಕೊಪ್ಪಳ, ಮಾರ್ಚ್​ 23: ತುಂಗಭದ್ರಾ ಎಡದಂಡೆ ಕಾಲುವೆ (tungabhadra left bank canal) ಒಡೆದ ಘಟನೆಗೆ ಸಂಬಂಧಿಸಿದಂತೆ ಬೆಳೆ ಹಾಗೂ ಜಮೀನು ಹಾಳು ಮಾಡಿಕೊಂಡ ರೈತರಿಗೆ, ಸರ್ಕಾರದಿಂದ ಪರಿಹಾರದ ಭರವಸೆ ನೀಡುವ ಮೂಲಕ ದುರಸ್ಥಿ ಕಾರ್ಯ ಶುರುವಾಗಿದೆ. ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ದುರಸ್ಥಿ ಕಾರ್ಯ ಜೋರಾಗಿದ್ದು, ಎರಡು ದಿನದಲ್ಲಿ ನೀರು ಪೊರೈಕೆ ಮಾಡುವ ಭರವಸೆ ನೀಡಲಾಗಿದೆ.

ಕಳೆದ ವಾರ, ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ ಪ್ರಮಾಣ ನಷ್ಟ ಉಂಟಾಗಿತ್ತು. ಜೊತೆಗೆ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಪೂರೈಕೆ ಸ್ಥಗಿತವಾಗಿತ್ತು. ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಮಾಡಿದ್ದ ನಿರ್ಲಕ್ಷದಿಂದ ಇಡೀ ರಾಯಚೂರು ಜಿಲ್ಲೆಗೆ ಕುಡಿಯುವ ನೀರಿಗೆ ಕಂಟಕ ಬಂದಿದೆ.

ಇಂದಿನಿಂದ ಕಾಮಗಾರಿ ಕೆಲಸ ಆರಂಭ 

ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ರೈತರು ಬೆಳೆದ ಭತ್ತದ ಬೆಳೆ ನಾಶವಾಗಿದೆ. ಜಮೀನಿನ ತುಂಬು ಮರಳು, ಕಲ್ಲು ಸೇರಿಕೊಂಡು ಭತ್ತದ ಗದ್ದೆಗಳೆಲ್ಲಾ ನಾಶವಾಗಿ ಹೋಗಿದೆ. ಇದರಿಂದ ರೊಚ್ಚಿಗೆದ್ದ ರೈತರು, ಕಾಲುವೆ ದುರಸ್ಥಿಗೆ ಬಂದಾಗ ವಾಹನಗಳನ್ನ ತಡೆದು ಕೆಲಸಕ್ಕೆ ಅಡ್ಡಿ ಪಡಿಸಿ ಆಕ್ರೋಶ ಹೊರಹಾಕಿದ್ದರು. ಪರಿಹಾರ ನೀಡದೆ ಕಾಮಗಾರಿ ಮಾಡಲು ಬಿಡಲ್ಲ ಎಂದು ಪಟ್ಟು ಹಿಡಿದಿದ್ದರು. ಆದರೆ ಎರಡು ದಿನಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಭೆ ನಡೆಸಿ ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಇಂದಿನಿಂದ ಕಾಮಗಾರಿ ಕೆಲಸ ಆರಂಭ ಮಾಡಿದ್ದಾರೆ. ಸದ್ಯ ತಾತ್ಕಾಲಿಕವಾಗಿ ಸ್ಯಾಂಡ್ ಬ್ಯಾಗ್​ಗಳನ್ನ ಹಾಕಿ ರಿಪೇರಿ ಕಾರ್ಯ ಶುರು ಮಾಡಲಾಗುತ್ತಿದೆ. ಎರಡು ದಿನಗಳಲ್ಲಿ ತಾತ್ಕಾಲಿಕವಾಗಿ ಕಾಲುವೆ ದುರಸ್ತಿ ಮಾಡಿ, 5 ರಿಂದ 6 ಅಡಿಗಳಷ್ಟು ನೀರನ್ನ ಹರಿಸಿ, ಕುಡಿಯುವ ನೀರಿನ ವ್ಯವಸ್ಥೆ ಮಾಡೋದಾಗಿ ಸಣ್ಣ ನೀರಾವರಿ ಸಚಿವ ಎನ್​ಎಸ್ ಬೋಸರಾಜು ತಿಳಿಸಿದ್ದಾರೆ.

ಸಚಿವ ಎನ್​ಎಸ್ ಬೋಸರಾಜು ಹೇಳಿದ್ದಿಷ್ಟು 

ಇಂದು ಬಸ್ಸಾಪುರ ಗ್ರಾಮದ ಬಳ ಕಾಲುವೆ ಒಡೆದ ಸ್ಥಳಕ್ಕೆ ಬಂದು ವೀಕ್ಷಣೆ ಮಾಡಿದ ಸಚಿವ ಬೋಸರಾಜು, ಅಧಿಕಾರಿಗಳು ಹಾಗೂ ರೈತರ ಬಳಿ ಮಾಹಿತಿ ಪಡೆದುಕೊಂಡರು. ಸಚಿವರ ಎದುರು ರೈತರು, ಕಳೆದ ನಾಲ್ಕು ತಿಂಗಳಿನಿಂದ ಗುದ್ದು ಬಿದ್ದಿರೋದನ್ನ ಅಧಿಕಾರಿಗಳ ಗಮನಕ್ಕೆ ತಂದರು. ಸರಿಯಾಗಿ ನಿರ್ವಹಣೆ ಮಾಡದ ಕಾರಣ ದೊಡ್ಡ ದುರಂತ ಸಂಭವಿಸಿದೆ ಎಂದು ಆಕ್ರೋಶ ಹೊರಹಾಕಿದರು. ಬಳಿಕ ಮಾತಮಾಡಿದ ಸಚಿವ, ರೈತರಿಗೆ ಪರಿಹಾರ ನೀಡಬೇಕು. ಈಗಾಗಲೇ ನಾವು ರೈತರ ಜೊತೆ ಮಾತನಾಡಿದ್ದೇವೆ. ಸದ್ಯ ಬೆಳೆ ಕಳೆದುಕೊಂಡ ರೈತರಿಗೆ ಸಣ್ಣ ನೀರಾವರಿ ಇಲಾಖೆಯಿಂದಲೇ ಪರಿಹಾರ ನೀಡಲಾಗತ್ತೆ‌. 92 ರೈತರ ಬೆಳೆಗಳು ಹಾಳಾಗಿವೆ. ಸಚಿವರು ಹಾಗೂ ನಾವು ಎಲ್ಲರೂ ಸೇರಿ ಪರಿಹಾರದ ಪ್ರಮಾಣ ತೀರ್ಮಾನ ಮಾಡಿ ಪರಿಹಾರ ಒದಗಿಸಲಾಗತ್ತುದೆ. ನಿರ್ಲಕ್ಷ ತೋರಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಚಿವ ಎನ್​ಎಸ್ ಬೋಸರಾಜು ಹೇಳಿದ್ದಾರೆ.

ಇದನ್ನೂ ಓದಿ: ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಪರಿಹಾರ ನೀಡದೇ ಕೆಲಸ ಮಾಡಲು ಬಿಡಲ್ಲ ಎಂದು ಪಟ್ಟುಹಿಡಿದಿದ್ದ ರೈತರನ್ನ ಮನವೊಲಿಸಿ, ದುರಸ್ಥಿ ಕಾರ್ಯ ಆರಂಭವಾಗಿದೆ. ಸದ್ಯ ತಾತ್ಕಾಲಿಕವಾಗಿ ಸ್ಯಾಂಡ್ ಬ್ಯಾಗ್​ಗಳನ್ನ ಹಾಕಿ, ನೀರು ಪೊರೈಕೆ ಮಾಡಲಾಗತ್ತೆ ಎಂದಿದ್ದಾರೆ. ಎರಡು ಮೂರು ದಿನಗಳ ಅವಧಿಯಲ್ಲಿ 2 ಸಾವಿರ ಕ್ಯೂಸೆಕ್ ನೀರು ಕುಡಿಯುವ ನೀರಿನ ಉದ್ದೇಶಕ್ಕೆ ನೀಡಲಾಗತ್ತೆ. ಬಳಿಕ ಶಾಶ್ವತವಾಗಿ ಕಾಲುವೆ ನಿರ್ಮಾಣ ಮಾಡಲಾಗತ್ತೆ. ಆದರೆ ಈ ಕೆಲಸ ಆದಷ್ಟು ಬೇಗ ಆಗಬೇಕಿದೆ. ಜೊತೆಗೆ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರವು ಬೇಗನೆ ಸಿಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಾಗಲಕೋಟೆ ಬೈ ಎಲೆಕ್ಷನ್ ಟಿಕೆಟ್ ಮೇಟಿ ಕುಟುಂಬಕ್ಕೆ ಕೊಟ್ಟಿರುವ ಹಿಂದಿನ ಕಾರಣ ಬಿಚ್ಚಿಟ್ಟ ಸಿಎಂ

ಬಾಗಲಕೋಟೆ (ಮಾರ್ಚ್ 23): ದಾವಣಗೆರೆ ದಕ್ಷಿಣ (Davanagere South By Election) ಹಾಗೂ ಬಾಗಲಕೋಟೆ (Bagalkot) ಉಪ ಚುನಾವಣೆ ಕಾಂಗ್ರೆಸ್‌ ಅಧಿಕೃತ ಟಿಕೆಟ್‌ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್‌ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಕಾಂಗ್ರೆಸ್‌ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಟಿಕೆಟ್‌ ನೀಡಿದೆ. ಶಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅವರ ಮೊಮ್ಮಗ ಸಮರ್ಥ್​​ಗೆ ನೀಡಿದ್ದರೆ, ಇತ್ತ ಎಚ್​​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಉಪಚುನಾವಣೆಗೆ ಅವರ ಪುತ್ರ ಉಮೇಶ್ ಅವರಿಗೆ ಮಣೆ ಹಾಕಲಾಗಿದೆ. ಇನ್ನು ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮೇಟಿ ಕುಟುಂಬಕ್ಕೆ  ಟಿಕೆಟ್ ನೀಡಿರುವ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.

Source link

IPL 2026: ಉಳಿದ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ? ಪಂದ್ಯಗಳ ಸಂಖ್ಯೆ ಹೆಚ್ಚಾಗುತ್ತಾ?

2026 ರ ಐಪಿಎಲ್ (IPL 2026) ಆರಂಭಕ್ಕೆ ಒಂದು ವಾರಕ್ಕಿಂತ ಕಡಿಮೆ ಸಮಯ ಉಳಿದಿದೆ. ಆದರೆ ಇದುವರೆಗೂ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಕೆಲವು ದಿನಗಳ ಹಿಂದೆ ಬಿಸಿಸಿಐ (BCCI), ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗಿನ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಕೇವಲ 20 ಪಂದ್ಯಗಳು ಮಾತ್ರ ಸೇರಿವೆ. ಇದೀಗ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಉಳಿದ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟವಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ವಾಸ್ತವವಾಗಿ ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣದಿಂದ ಭದ್ರತಾ ದೃಷ್ಟಿಯಿಂದ ಬಿಸಿಸಿಐ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿರಲಿಲ್ಲ. ಇದೀಗ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದ್ದು, ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗುವ ಕಾಲವು ಸನಿಹಿತವಾಗಿದೆ.

26 ರೊಳಗೆ ವೇಳಾಪಟ್ಟಿ ಪ್ರಕಟ

ವರದಿಗಳ ಪ್ರಕಾರ, ಮಾರ್ಚ್ 26 ರೊಳಗೆ ಬಿಸಿಸಿಐ, ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಹೀಗಾಗಿ ಅಂತಿಮ ಪಟ್ಟಿಯನ್ನು ಸಿದ್ಧಗೊಳಿಸಲು 3-4 ದಿನಗಳನ್ನು ತೆಗೆದುಕೊಳ್ಳಬಹುದು ಎಂದು ಮಂಡಳಿಯು ಎಲ್ಲಾ ಫ್ರಾಂಚೈಸಿಗಳಿಗೆ ತಿಳಿಸಿದೆ ಎಂದು ವರದಿಯಾಗಿದೆ.

ಮೇಲೆ ಹೇಳಿದಂತೆ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣದಿಂದ ಬಿಸಿಸಿಐ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಇದೀಗ ವಿಧಾನಸಭಾ ಚುನಾವಣೆ ನಡೆಯುವ ದಿನಾಂಕಗಳನ್ನು ಘೋಷಿಸಲಾಗಿದೆ. ಅದರಂತೆ ವಿಧಾನಸಭಾ ಚುನಾವಣೆಗಳು ನಡೆಯುವ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಐಪಿಎಲ್ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಆದ್ದರಿಂದ, ಚೆನ್ನೈ (ಏಪ್ರಿಲ್ 23), ಕೋಲ್ಕತ್ತಾ (ಏಪ್ರಿಲ್ 23 ಮತ್ತು 29) ಮತ್ತು ಗುವಾಹಟಿಯ (ಏಪ್ರಿಲ್ 9) ಮತದಾನದ ದಿನಗಳಲ್ಲಿ ಯಾವುದೇ ಪಂದ್ಯಗಳು ನಡೆಯುವುದಿಲ್ಲ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾರ್ಚ್ 29 ರೊಳಗೆ ಮತದಾನ ಪೂರ್ಣಗೊಳ್ಳುತ್ತದೆ ಮತ್ತು ಮೇ 4 ರಂದು ಮತ ಎಣಿಕೆ ನಡೆಯಲಿದೆ. ಆದ್ದರಿಂದ, ಈ ದಿನಾಂಕಗಳಲ್ಲಿ ಈ ರಾಜ್ಯಗಳಲ್ಲಿ ಯಾವುದೇ ಐಪಿಎಲ್ ಪಂದ್ಯಗಳನ್ನು ಆಡಲಾಗುವುದಿಲ್ಲ.

IPL: ಕೆಟ್ಟ ಮೇಲೆ ಬುದ್ದಿ ಕಲಿತ ಬಾಂಗ್ಲಾದೇಶ; ಐಪಿಎಲ್ ಬ್ಯಾನ್ ತೆರವಿಗೆ ಚಿಂತನೆ

ಎಷ್ಟು ಪಂದ್ಯಗಳು ನಡೆಯಲಿವೆ?

ವಾಸ್ತವವಾಗಿ ಈ ಬಾರಿಯ ಐಪಿಎಲ್​ನಲ್ಲಿ ಪಂದ್ಯಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂಬ ಮಾತುಗಳು ಕೇಳಿಬಂದಿದ್ದವು. ಅಂದರೆ ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ಪಂದ್ಯಗಳ ಸಂಖ್ಯೆ 84ಕ್ಕೆ ಏರಲಿದೆ ಎಂದು ವರದಿಯಾಗಿತ್ತು. ಆದರೆ ಈ ಬಾರಿಯೂ ಕಳೆದ ಬಾರಿ ನಡೆದಷ್ಟೇ ಪಂದ್ಯಗಳು ಅಂದರೆ ಫೈನಲ್ ಪಂದ್ಯವೂ ಸೇರಿದ್ದಂತೆ 74 ಪಂದ್ಯಗಳು ನಡೆಯಲಿವೆ ಎಂದು ವರದಿಯಾಗಿದೆ. ಇದೀಗ ಪ್ರಕಟವಾಗಿರುವ 20 ಪಂದ್ಯಗಳ ವೇಳಾಪಟ್ಟಿಯ ಜೊತೆಗೆ ಮುಂಬರುವ ದಿನಗಳಲ್ಲಿ ಉಳಿದ 54 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಎರಡು ವಾರಗಳ ಕಾಲ ಆಫೀಸಿನಿಂದ ಮನೆಗೆ 2.7 ಕಿಮೀ ನಡಿಗೆ; ಸಾಧಕ ಬಾಧಕ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ

ಬೆಂಗಳೂರು, ಮಾರ್ಚ್ 23: ಬೆಂಗಳೂರು (Bengaluru) ಅಂದ್ರೆ ಮೊದಲು ನೆನಪಿಗೆ ಬರುವುದೇ ಟ್ರಾಫಿಕ್. ಈ ಟ್ರಾಫಿಕ್‌ನಲ್ಲಿ ಸಿಲುಕಿ ಟೈಮ್ ವೇಸ್ಟ್ ಮಾಡೋದಕ್ಕಿಂತ ನಡೆದುಕೊಂಡು ಹೋಗೋದೇ ಬೆಸ್ಟ್ ಎನ್ನುವ ಅಭಿಪ್ರಾಯವಿದ್ರೂ ಅಂತಹ ಸಾಹಸಕ್ಕೆ ಯಾರು ಕೈ ಹಾಕಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಎರಡು ವಾರಗಳ ಕಾಲ ಪ್ರತಿದಿನ ಸಂಜೆ ಆಫೀಸಿನಿಂದ ಮನೆಗೆ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ತನಗಾದ ಅನುಭವ ಹಂಚಿಕೊಂಡಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶಿಲ್ಪಾ (silly_fied) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಮಹಿಳೆಯೊಬ್ಬರು ಆಫೀಸಿನಿಂದ ಮನೆಗೆ ನಡೆದುಕೊಂಡು ಹೋಗುವ ಮೂಲಕ ತನ್ನ ಪ್ರಯಾಣವನ್ನು ದೈನಂದಿನ ನಡಿಗೆಯೊಂದಿಗೆ ಹೇಗೆ ಬದಲಾಯಿಸಲು ನಿರ್ಧರಿಸಿದರು ಎಂದು ವಿವರಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಬೆಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ನಾನು ಪ್ರತಿದಿನ ಆಫೀಸಿನಿಂದ ಮನೆಗೆ ನಡೆದುಕೊಂಡು ಹೋಗಲು ನಿರ್ಧರಿಸಿದೆ. ಗೂಗಲ್ ಮ್ಯಾಪ್ 2.7 ಕಿಲೋಮೀಟರ್ ಗೆ 38 ನಿಮಿಷಗಳು ಬೇಕು ಎಂದು ತೋರಿಸಿದ್ದವು. ಅದಕ್ಕಿಂತ ಹೆಚ್ಚು ಸಮಯ ಬೇಕಿತ್ತು. ಎರಡು ವಾರಗಳ ನಂತರ ನನ್ನ ಫಲಿತಾಂಶಗಳು ಇವಾಗಿದ್ದವು. ಸಾಧಕಗಳಲ್ಲಿ ನಾನು ಮೊದಲಿಗಿಂತ ಶಕ್ತಿವಂತಳಾಗಿದ್ದೇನೆ. ಆದರೆ, ಅನಾನುಕೂಲವೆಂದರೆ, ನಾನು ಎಳನೀರಿಗಾಗಿ 840 ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗ್ಳೂರಿನಲ್ಲಿ ತಿಂಗಳ ಬಾಡಿಗೆಗೆ 40,000 ರೂ ಖರ್ಚು ಮಾಡುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ವೈಟ್‌ಫೀಲ್ಡ್‌ನಲ್ಲಿ ನಡೆಯುವುದು ಸವಾರಿಗಿಂತ ಉತ್ತಮವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ನನಗೆ ಇದು ಆಸಕ್ತಿದಾಯಕವೆನಿಸಿತು, ಖಂಡಿತವಾಗಿಯೂ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದು ತುಂಬಾ ವಿಶಿಷ್ಟವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂಧನದ ಬೆಲೆ ಕಡಿಮೆ ಮಾಡುವ ಪ್ಲಾನ್; ಟ್ರಂಪ್ ಜೊತೆ ಯಾವ ಮಾತುಕತೆಯೂ ನಡೆದಿಲ್ಲ ಎಂದ ಇರಾನ್

ಟೆಹ್ರಾನ್, ಮಾರ್ಚ್ 23: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇರಾನ್ ಜೊತೆ ‘ಪ್ರೊಡಕ್ಟಿವ್ ಮಾತುಕತೆ’ ನಡೆಸಿದ್ದೇವೆ ಎಂಬ ಹೇಳಿಕೆಯನ್ನು ಇರಾನ್ ತಳ್ಳಿಹಾಕಿದೆ. ಇಂಧನದ ಬೆಲೆಗಳನ್ನು ಕಡಿಮೆ ಮಾಡುವ ಪ್ರಯತ್ನಗಳ ಭಾಗವಾಗಿ ಅಮೆರಿಕ ಈ ರೀತಿಯ ಹೇಳಿಕೆ ನೀಡಿದೆ ಎಂದು ಇರಾನ್ ಟೀಕಿಸಿದೆ. ಇರಾನ್ ಮೇಲೆ ನಡೆಸಲು ಯೋಚಿಸಲಾಗಿದ್ದ ಮಿಲಿಟರಿ ದಾಳಿಗಳಿಗೆ ವಿರಾಮ ನೀಡುವುದಾಗಿ ಟ್ರಂಪ್ ಘೋಷಿಸಿದ ಸ್ವಲ್ಪ ಸಮಯದ ನಂತರ ಇರಾನ್ ರಾಯಭಾರ ಕಚೇರಿ ಈ ಹೇಳಿಕೆ ಬಿಡುಗಡೆ ಮಾಡಿದೆ.

“ಇರಾನ್‌ನ ದೃಢ ಎಚ್ಚರಿಕೆಯ ನಂತರ ಟ್ರಂಪ್ ನಮ್ಮ ದೇಶದ ಮೇಲೆ ದಾಳಿ ನಡೆಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇರಾನ್‌ನ ಇಂಧನ ಮೂಲಸೌಕರ್ಯದ ಮೇಲೆ ಯಾವುದೇ ಯುಎಸ್ ದಾಳಿ ನಡೆದರೂ ಅದು ಇಡೀ ಪ್ರದೇಶದ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸುವುದಾಗಿ ಇರಾನ್ ಬೆದರಿಕೆ ಹಾಕಿತ್ತು. ಇದಾದ ನಂತರವೇ ಟ್ರಂಪ್ ಹಿಂದೆ ಸರಿದು ಇರಾನ್ ಮೇಲಿನ ದಾಳಿಯನ್ನು ಮುಂದೂಡಲು ಆದೇಶ ಹೊರಡಿಸಿದ್ದಾರೆ” ಎಂದು ಇರಾನ್​ನ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ಟ್ರಂಪ್ ಅವರ ಈ ಹೇಳಿಕೆಗಳು ಇಂಧನದ ಬೆಲೆಗಳನ್ನು ಕಡಿಮೆ ಮಾಡುವ ಮತ್ತು ಮುಂದಿನ ದಾಳಿಗೆ ಸಮಯವನ್ನು ಮಾಡಿಕೊಳ್ಳುವ ಗುರಿಯನ್ನು ಹೊಂದಿವೆ ಎಂದು ಇರಾನಿನ ಮಾಧ್ಯಮ ವರದಿ ಮಾಡಿದೆ. ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಈ ಬಗ್ಗೆ ವರದಿ ಮಾಡಿದ್ದು, ಇರಾನ್ ಮತ್ತು ಅಮೆರಿಕದ ನಡುವೆ ಪ್ರಸ್ತುತ ಯಾವುದೇ ಮಾತುಕತೆಗಳು ನಡೆಯುತ್ತಿಲ್ಲ ಎಂದು ಹೇಳಿದೆ.

ಇದರ ನಡುವೆ, ಇಸ್ರೇಲಿನ ಸೈನ್ಯವು ಇಂದು ಇರಾನ್​ನಲ್ಲಿ ಮತ್ತೊಂದು ದಾಳಿಯನ್ನು ಪ್ರಾರಂಭಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಎಐ ಮೂಲಕ ಬದಲಾಯ್ತು ‘ಧುರಂಧರ್ 2’ ಕ್ಲೈಮಾಕ್ಸ್; ಪ್ರೇಕ್ಷಕರ ಬಯಕೆಯಂತೆ ಕಥೆ ಅಂತ್ಯ

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅಭಿನಯ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಸಿನಿಮಾ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರು ರಣವೀರ್ (Ranveer Singh) ನಟನೆ ಮತ್ತು ಆದಿತ್ಯ ಧರ್ ಅವರ ನಿರ್ದೇಶನಕ್ಕೆ ಫಿದಾ ಆಗಿದ್ದಾರೆ. ಆದರೆ, ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಅಭಿಮಾನಿಗಳಲ್ಲಿ ಸಣ್ಣದೊಂದು ಬೇಸರವಿತ್ತು. ಈಗ ಆ ಬೇಸರವನ್ನು ಕೃತಕ ಬುದ್ಧಿಮತ್ತೆ (AI) ದೂರ ಮಾಡಿದೆ. ಪ್ರೇಕ್ಷಕರ ಬಯಕೆಯಂತೆ ಒಂದು ಎಐ ವಿಡಿಯೋ ಮಾಡಲಾಗಿದ್ದು, ಅದನ್ನು ನೋಡಿದ ನೆಟ್ಟಿಗರು ಖುಷಿಯಾಗಿದ್ದಾರೆ.

ಸ್ಪಾಯ್ಲರ್ ಇದೆ ಎಚ್ಚರಿಕೆ: ‘ಧುರಂಧರ್ 2’ ಸಿನಿಮಾದ ಅಂತ್ಯದಲ್ಲಿ ಕಥಾನಾಯಕ ತನ್ನ ಊರಿಗೆ ಮರಳುತ್ತಾನೆ. ಅಲ್ಲಿ ತಾನಿಲ್ಲದೆಯೂ ತಾಯಿ ಮತ್ತು ತಂಗಿ ನೆಮ್ಮದಿಯ ಜೀವನ ನಡೆಸುತ್ತಿರುವುದನ್ನು ದೂರದಿಂದಲೇ ನೋಡಿ ಮರುಗುತ್ತಾನೆ. ತನ್ನ ಉಪಸ್ಥಿತಿಯು ಅವರ ಶಾಂತಿಯನ್ನು ಕೆಡಿಸಬಹುದು ಎಂದು ಭಾವಿಸುವ ಆತ, ಭಾರವಾದ ಹೃದಯದಿಂದ ಅಲ್ಲಿಂದ ಗುಟ್ಟಾಗಿ ನಿರ್ಗಮಿಸುತ್ತಾನೆ. ಈ ದೃಶ್ಯವು ಭಾವುಕವಾಗಿದ್ದರೂ, ಅಭಿಮಾನಿಗಳಿಗೆ ಇದು ಸಮಾಧಾನ ನೀಡಿರಲಿಲ್ಲ.

ಅಭಿಮಾನಿಗಳ ಆಸೆಯಂತೆ ಈಗ ಸೋಷಿಯಲ್ ಮೀಡಿಯಾದಲ್ಲಿ ಎಐ ಮೂಲಕ ಸೃಷ್ಟಿಸಲಾದ ಪರ್ಯಾಯ ಕ್ಲೈಮ್ಯಾಕ್ಸ್ ವೈರಲ್ ಆಗಿದೆ. ಈ ಹೊಸ ವಿಡಿಯೋದಲ್ಲಿ ಕಥಾನಾಯಕ ತನ್ನ ತಾಯಿಯನ್ನು ಭೇಟಿಯಾಗುತ್ತಾನೆ. ವರ್ಷಗಳ ನಂತರ ಮಗನನ್ನು ಕಂಡ ತಾಯಿ ಭಾವುಕಳಾಗಿ ತಬ್ಬಿಕೊಳ್ಳುತ್ತಾಳೆ. ನಂತರ ಇಡೀ ಕುಟುಂಬ ಒಂದಾಗಿ ಗ್ರೂಪ್ ಫೋಟೋ ತೆಗೆಸಿಕೊಳ್ಳುವ ಮೂಲಕ ಸುಖಾಂತ್ಯ ಕಾಣುತ್ತದೆ.

ಎಐ ವಿಡಿಯೋ:

ಅಭಿಮಾನಿಗಳು ಈ ವಿಡಿಯೋ ನೋಡಿ, ‘ನಮಗೆ ಬೇಕಾಗಿದ್ದ ಕ್ಲೈಮ್ಯಾಕ್ಸ್ ಇದೇ. AI ತಂತ್ರಜ್ಞಾನದ ಅತ್ಯುತ್ತಮ ಬಳಕೆ ಎಂದರೆ ಇದು’ ಎಂದು ಕಮೆಂಟ್ ಮಾಡಿದ್ದಾರೆ. ಸಿನಿಮಾದಲ್ಲಿ ತೋರಿಸಿರುವ ಮೂಲ ಕ್ಲೈಮ್ಯಾಕ್ಸ್ ಚೆನ್ನಾಗಿದೆ. ಆದರೆ ಪ್ರೇಕ್ಷಕರಿಗೆ ಈ ಕ್ಲೈಮ್ಯಾಕ್ಸ್​ನಿಂದ ಭಾವುಕವಾದ ಸಮಾಧಾನ ಸಿಕ್ಕಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಈ ಸಿನಿಮಾದಲ್ಲಿ ರಣವೀರ್ ಸಿಂಗ್ ಜೊತೆ ಸಾರಾ ಅರ್ಜುನ್, ಸಂಜಯ್ ದತ್, ರಾಕೇಶ್ ಬೇಡಿ, ಅರ್ಜುನ್ ರಾಮ್​ಪಾಲ್, ಆರ್. ಮಾಧವನ್ ಮುಂತಾದವರು ನಟಿಸಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ. ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆ ಬರೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Oil Prices: ಟ್ರಂಪ್ ವರಸೆ ಬದಲು; ಕಚ್ಛಾ ತೈಲ ಬೆಲೆ ದಿಢೀರ್ ಇಳಿಕೆ

ನವದೆಹಲಿ, ಮಾರ್ಚ್ 23: ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ ಪರಿಣಾಮ ಗಗನಕ್ಕೇರಿದ್ದ ತೈಲ ಬೆಲೆಗಳು (crude oil prices) ಇದೀಗ ತಗ್ಗಿವೆ. ಸೋಮವಾರ ಬ್ರೆಂಟ್ ಕ್ರೂಡ್ ಶೇ 11ರಷ್ಟು ಕಡಿಮೆ ಆಗಿದೆ. ಒಂದು ಬ್ಯಾರಲ್ ತೈಲದ ಬೆಲೆ 100 ಡಾಲರ್​ಗಿಂತ ಕಡಿಮೆಗೆ ಇಳಿದಿದೆ. ತೈಲ ಬೆಲೆ ಏರಲು ಕಾರಣವಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಹಾಕಿದ ಬಳಿಕ ತೈಲ ಬೆಲೆ ಕೆಳ ಜಾರಿದೆ.

ಬ್ರೆಂಟ್ ಮತ್ತು ಡಬ್ಲ್ಯುಟಿಐ ಕ್ರೂಡ್ ಫ್ಯೂಚರ್ ಬೆಲೆಗಳಲ್ಲಿ ಇಳಿಕೆ

ಇರಾನ್​ನ ವಿದ್ಯುತ್ ಘಟಕಗಳು ಮತ್ತು ಇಂಧನ ಘಟಕಗಳ (Energy infrastructure) ಮೇಲೆ ದಾಳಿಯನ್ನು ಐದು ದಿನ ಮುಂದೂಡಿದ್ದೇವೆ. ಎರಡು ದಿನಗಳಿಂದ ಇರಾನ್ ಜೊತೆ ಉತ್ತಮ ಮಾತುಕತೆ ನಡೆಸಿರುವುದಾಗಿ ಟ್ರಂಪ್ ಹೇಳಿಕೊಂಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ತಿಳಿಯಾಗುವ ಆಶಾಭಾವನೆ ಮೂಡಿರುವುದರಿಂದ ತೈಲ ಬೆಲೆ ಕಡಿಮೆಗೊಂಡಿರಬಹುದು. ಬ್ರೆಂಟ್ ಪ್ಯೂಚರ್ಸ್ ಮತ್ತು ಡಬ್ಲ್ಯುಟಿಐ ಫ್ಯೂಚರ್ಸ್ ಎರಡೂ ಕೂಡ ಶೇ. 10ಕ್ಕಿಂತಲೂ ಹೆಚ್ಚಿನ ಪ್ರಮಾಣದಷ್ಟು ಕುಸಿತ ಕಂಡಿವೆ.

ಇದನ್ನೂ ಓದಿ: PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

ಸೋಮವಾರ ಒಂದು ಹಂತದಲ್ಲಿ ಬ್ರೆಂಟ್ ಫ್ಯೂಚರ್ಸ್ ಬ್ಯಾರಲ್​ಗೆ 98 ಡಾಲರ್ ಬೆಲೆ ಹೊಂದಿತ್ತು. ಡಬ್ಲ್ಯುಟಿಐ ಕ್ರೂಡ್ ಫ್ಯೂಚರ್ಸ್ 91 ಡಾಲರ್ ಬೆಲೆ ಹೊಂದಿತ್ತು. ಟ್ರಂಪ್ ಹೇಳಿಕೆಯ ಪರಿಣಾಮ ಇದು. ಮತ್ತೊಂದು ಸಕಾರಾತ್ಮಕ ವಿಚಾರ ಎಂದರೆ, ಇರಾನ್ ಜೊತೆ ಅಮೆರಿಕ ನಡೆಸಿದ ಮಾತುಕತೆ ಎರಡು ದಿನಕ್ಕೆ ಸೀಮಿತವಾಗಿಲ್ಲ. ಈ ವಾರಾದ್ಯಂತ ಮಾತುಕತೆಗಳು ಮುಂದುವರಿಯಲಿವೆ. ಅಲ್ಲಿಯವರೆಗೆ ಇರಾನ್​ನ ವಿದ್ಯುತ್ ಮತ್ತು ಇಂಧನ ಘಟಕಗಳ ಮೇಲೆ ಮಿಲಿಟರಿ ದಾಳಿಗಳನ್ನು ನಿಲ್ಲಿಸುವಂತೆ ಟ್ರಂಪ್ ಸೂಚಿಸಿದ್ದಾರೆ.

ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಕಚ್ಛಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಷ್ಟಸಾಧ್ಯ. ಗೋಲ್ಡ್​ಮ್ಯಾನ್ ಸ್ಯಾಕ್ಸ್ ಮಾಡಿರುವ ಅಂದಾಜು ಪ್ರಕಾರ 2026ರಲ್ಲಿ ಬ್ರೆಂಟ್ ಕ್ರೂಡ್​ನಲ್ಲಿ ತೈಲ ಬೆಲೆ ಸರಾಸರಿಯಾಗಿ 85 ಡಾಲರ್ ಇರಬಹುದು ಎನ್ನಲಾಗಿದೆ. ಇನ್ನು ಡಬ್ಲ್ಯುಟಿಐನಲ್ಲಿ ಸರಾಸರಿ ಬೆಲೆ 79 ಡಾಲರ್ ಇರಲಿದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್ನ ವರದಿ ಹೇಳುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link