All posts by nagaraj11081993

ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

ಬೆಂಗಳೂರು, (ಮಾರ್ಚ್ 23): ನಗರದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ (luxury car drifting Case) ವಿಡಿಯೋ ಬೆಚ್ಚಿಬೀಳಿಸಿದ್ದು, ಎಲ್ಲೆಡೆ ಫುಲ್ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ (Rikki Rai)  ಹೆಸರು ಕೇಳಿಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ರಿಕ್ಕಿ ರೈ ವಿರುದ್ಧದ ಎಫ್​​ಐಆರ್ ದಾಖಲಿಸಿ ನೋಟಿಸ್ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇತ್ತ ರಿಕ್ಕಿ ರೈ  ಬೆಂಗಳುರಿನ 5ನೇ ಎಸಿಎಂಎಂ ಕೋರ್ಟ್​​ನಿಂದ ಜಾಮೀನು ಪಡೆದುಕೊಂಡಿದ್ದಾರೆ.

ಡ್ರಿಪ್ಟಿಂಗ್ ವಿಡಿಯೋ ವೈರಲ್

ಮಾರ್ಚ್ 21ರ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಲ್ಯಾಬೋರ್ಗಿನಿ ಕಾರು (ಕೆಎ-05, ಎನ್‌ಆರ್‌-0009) ಶಿವಾಜಿನಗರ ಕಡೆಯಿಂದ ಅನಿಲ್‌ ಕುಂಬ್ಳೆ ವೃತ್ತಕ್ಕೆ ಅತಿ ವೇಗವಾಗಿ ಬಂದಿತ್ತು. ಬಳಿಕ ಕಾರು ಚಾಲಕ ಅದೇ ವೃತ್ತದಲ್ಲಿಕಾರನ್ನು ಎರಡು ಸುತ್ತು ಅತಿ ವೇಗವಾಗಿ ತಿರುಗಿಸಿದ್ದ. ನಂತರ ಶಿವಾಜಿನಗರದ ಕಡೆಗೆ ಶರವೇಗದಲ್ಲಿ ಕಾರು ಚಾಲನೆ ಮಾಡಿಕೊಂಡು ಹೋಗಿದ್ದ. ಕಾರು ಚಾಲಕನ ಅಪಾಯಕಾರಿ ಚಾಲನೆಯ ವಿಡಿಯೊ ಸಮೀಪದ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಬಳಿಕ ಪೊಲೀಸರು ಕಾರು ಸಂಚರಿಸಿದ ಮಾರ್ಗದುದ್ದಕ್ಕೂ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಅದರಲ್ಲಿ ರಿಕ್ಕಿ ರೈ ಸ್ವತಃ ವಾಹನ ಚಲಾಯಿಸುತ್ತಿರುವುದು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಿಕ್ಕಿ ರೈ ವಿರುದ್ಧ IMV 184, 189,BNS 281 ಅಡಿ ಎಫ್ ಐ ಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ರಿಕ್ಕಿ ರೈ ನಿರೀಕ್ಷಣಾ ಜಾಮೀನು ಮೊರೆ ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ನೋಡಿ: ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ ರಿಕ್ಕಿ?

ಲ್ಯಾಂಬೋರ್ಗಿನಿ ಕಾರು ರಿಕ್ಕಿ ರೈ ಅವರಿಗೆ ಸೇರಿದೆ ಎಂದು ಗೊತ್ತಾಗಿದ್ದು, ಸದಾಶಿವನಗರದಲ್ಲಿನ ಅವರ ನಿವಾಸದಲ್ಲಿಕಾರನ್ನು ವಶಕ್ಕೆ ಪಡೆದಿದ್ದಾರೆ. ಆದ್ರೆ, ಕಾರು ಯಾರು ಚಾಲನೆ ಮಾಡುತ್ತಿದ್ದರು ಎಂಬ ಬಗ್ಗೆ ತನಿಖೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಪ್ಪ -ಮಗನ ಸಂಯೋಗದಿಂದ ಈ ರಾಶಿಯವರಿಗೆ ಕಾದಿದೆ ಬಹುದೊಡ್ಡ ಕಂಟಕ

ಮಾರ್ಚ್ 2026ರ ಈ ಅವಧಿಯಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಸೂರ್ಯರ ಸಂಯೋಗ ಸಂಭವಿಸುತ್ತಿದೆ. ಕಾಲಜ್ಞಾನ ಶಾಸ್ತ್ರದ ಪ್ರಕಾರ ಸೂರ್ಯ ತಂದೆ ಮತ್ತು ಶನಿ ಮಗ. ಇಬ್ಬರೂ ಪರಸ್ಪರ ಶತ್ರು ಗ್ರಹಗಳು. ಈ ಇಬ್ಬರೂ ಒಂದೇ ರಾಶಿಯಲ್ಲಿದ್ದಾಗ ಸಂಘರ್ಷ, ಶಿಸ್ತು ಮತ್ತು ಪರಿವರ್ತನೆಯ ಕಾಲಘಟ್ಟ ನಿರ್ಮಾಣವಾಗುತ್ತದೆ.

​ಈ ಸಂಯೋಗದಿಂದ ಯಾವ ರಾಶಿಯವರಿಗೆ ಶುಭ ಮತ್ತು ಅಶುಭ ಫಲಗಳ ಮಿಶ್ರಣವಿರಲಿದೆ ಎಂಬ ವಿವರ ಇಲ್ಲಿದೆ.

​ಮೀನ ರಾಶಿ :

​ಈ ಸಂಯೋಗ ನಿಮ್ಮ ಸ್ವಂತ ರಾಶಿಯಲ್ಲೇ ನಡೆಯುತ್ತಿರುವುದರಿಂದ ನೀವು ಹೆಚ್ಚಿನ ಮಿಶ್ರಫಲ ಅನುಭವಿಸುವಿರಿ. ವೃತ್ತಿಜೀವನದಲ್ಲಿ ದೊಡ್ಡ ಜವಾಬ್ದಾರಿಗಳು ಅರಸಿ ಬರುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗಬಹುದು. ಮಾನಸಿಕ ಒತ್ತಡ, ಅನಗತ್ಯ ಭಯ ಮತ್ತು ಆರೋಗ್ಯದಲ್ಲಿ ಏರುಪೇರಾಗಬಹುದು. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗೊಂದಲ ಉಂಟಾಗಬಹುದು.

​ಕನ್ಯಾ ರಾಶಿ :

​ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಅಂದರೆ ಸಪ್ತಮ ಭಾವ ಈ ಯುತಿ ನಡೆಯುತ್ತಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಹೊಸ ಆಯಾಮಗಳು ತೆರೆದುಕೊಳ್ಳುತ್ತವೆ. ಹಳೆಯ ಬಾಕಿ ಕೆಲಸಗಳು ಪೂರ್ಣಗೊಳ್ಳಬಹುದು. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಬಹುದು. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸಾರ್ವಜನಿಕ ಜೀವನದಲ್ಲಿ ಟೀಕೆಗಳನ್ನು ಎದುರಿಸಬೇಕಾಗಬಹುದು.

ಸಿಂಹ ರಾಶಿ :

​ನಿಮ್ಮ ರಾಶ್ಯಾಧಿಪತಿ ಸೂರ್ಯ ಎಂಟನೇ ರಾಶಿಯಲ್ಲಿ ಶನಿಯೊಂದಿಗೆ ಇರುವುದರಿಂದ ಜಾಗರೂಕತೆ ಅಗತ್ಯ. ನಿಗೂಢ ಶಾಸ್ತ್ರಗಳಲ್ಲಿ ಆಸಕ್ತಿ ಹೆಚ್ಚುವುದು. ಪಿತ್ರಾರ್ಜಿತ ಆಸ್ತಿಯಿಂದ ಅನಿರೀಕ್ಷಿತ ಲಾಭವಾಗಬಹುದು. ಸರ್ಕಾರಿ ಕೆಲಸಗಳಲ್ಲಿ ಅಡೆತಡೆಗಳು ಎದುರಾಗಬಹುದು. ಆರೋಗ್ಯದ ದೃಷ್ಟಿಯಿಂದ ಇದು ಸ್ವಲ್ಪ ಕಠಿಣ ಸಮಯ. ವಾಹನ ಚಾಲನೆಯಲ್ಲಿ ಎಚ್ಚರವಿರಲಿ.

​ಕುಂಭ ರಾಶಿ :

​ನಿಮ್ಮ ರಾಶಿಯಿಂದ ಎರಡನೇ ರಾಶಿಯಲ್ಲಿ ಈ ಸಂಯೋಗ ಆಗಲಿದೆ. ಸ್ಥಿರ ಆಸ್ತಿಯಲ್ಲಿ ಹೂಡಿಕೆ ಮಾಡಲು ಅವಕಾಶ ಸಿಗಲಿದೆ. ಕುಟುಂಬದ ಹಿರಿಯರಿಂದ ಮಾರ್ಗದರ್ಶನ ದೊರೆಯುತ್ತದೆ. ಹಣಕಾಸಿನ ಹರಿವು ಇದ್ದರೂ ಉಳಿತಾಯ ಮಾಡುವುದು ಕಷ್ಟವಾಗಬಹುದು. ಮಾತಿನಿಂದಾಗಿ ಆಪ್ತರೊಂದಿಗೆ ಕಹಿಯಾದ ಸಂಬಂಧ ಉಂಟಾಗುವ ಸಾಧ್ಯತೆ ಇದೆ.

ಈ ಅವಧಿಯಲ್ಲಿ ಸೂರ್ಯ ಮತ್ತು ಶನಿಯ ಅಶುಭ ಪ್ರಭಾವ ತಗ್ಗಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಬಹುದು. ​ಶನಿ ಚಾಲೀಸಾ ಅಥವಾ ಹನುಮಾನ್ ಚಾಲೀಸಾ ಪಠಿಸುವುದು. ​ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಅರ್ಪಿಸುವುದು. ​ಶನಿವಾರದಂದು ಕಪ್ಪು ಎಳ್ಳನ್ನು ಸಂಕಲ್ಪ ಪೂರ್ವಕ ದಾನ ಮಾಡುವುದು.

– ಲೋಹಿತ ಹೆಬ್ಬಾರ್

Source link

IPL: ಕೆಟ್ಟ ಮೇಲೆ ಬುದ್ದಿ ಕಲಿತ ಬಾಂಗ್ಲಾದೇಶ; ಐಪಿಎಲ್ ಬ್ಯಾನ್ ತೆರವಿಗೆ ಚಿಂತನೆ

ಐಪಿಎಲ್​ನಿಂದ (IPL) ಬಾಂಗ್ಲಾದೇಶ ಆಟಗಾರ ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಹೊರಹಾಕಿದ್ದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ, ಬಾಂಗ್ಲಾದೇಶದಲ್ಲಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಇದಕ್ಕೆ ಪೂರಕವಾಗಿ ಬಾಂಗ್ಲಾದೇಶದ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್, ಹಿಂದಿನ ಸರ್ಕಾರ ತೆಗೆದುಕೊಂಡಿದ್ದ ಐಪಿಎಲ್ ಬ್ಯಾನ್ ನಿರ್ಧಾರವನ್ನು ಮರುಪರಿಶೀಲಿಸುವ ಬಗ್ಗೆ ಸುಳಿವು ನೀಡಿದ್ದಾರೆ.

ಬಾಂಗ್ಲಾದೇಶ ಕ್ರೀಡಾ ಸಚಿವ ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರದ ಬಗ್ಗೆ ಹೇಳಿಕೆ ನೀಡಿರುವ ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್, ‘ಪ್ರಸ್ತುತ ಐಪಿಎಲ್ ಪ್ರಸಾರದ ಬಗ್ಗೆ ಇನ್ನೂ ಚರ್ಚಿಸಿಲ್ಲ, ಆದರೆ ಈದ್ ರಜಾದಿನಗಳು ಮುಗಿದ ಬಳಿಕ ಈ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಮೇಲೆ ಹೇಳಿದಂತೆ ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಕಂಡಿಸಿ, ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ ಬಿಸಿಸಿಐ ಆದೇಶದ ಮೇರೆಗೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿತ್ತು.

ಇದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಟಿ20 ವಿಶ್ವಕಪ್​ ಆಡಲು ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುವುದಿಲ್ಲ. ಹೀಗಾಗಿ ನಮ್ಮ ತಂಡದ ಪಂದ್ಯಗಳನ್ನು ಭಾರತದಿಂದ ಹೊರಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿ, ಐಸಿಸಿಗೆ ಮನವಿ ಮಾಡಿತ್ತು. ಆದರೆ ಐಸಿಸಿ ಮಾತ್ರ ಈ ಹಂತದಲ್ಲಿ ಬಾಂಗ್ಲಾ ತಂಡದ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದಿತ್ತು. ಇದರಿಂದ ಇನ್ನಷ್ಟು ಕೆರಳಿದ್ದ ಬಾಂಗ್ಲಾದೇಶ ಸರ್ಕಾರ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿತ್ತು. ಬಾಂಗ್ಲಾ ಸರ್ಕಾರದ ಈ ನಿರ್ಧಾರ ಐಸಿಸಿಗಾಗಲಿ ಅಥವಾ ಬಿಸಿಸಿಐಗಾಗಲಿ ಯಾವುದೇ ನಷ್ಟವನ್ನುಂಟು ಮಾಡಲಿಲ್ಲ. ಆದರೆ ಬಾಂಗ್ಲಾ ಕ್ರಿಕೆಟ್ ಮಂಡಳಿ ಹಾಗೂ ಆಟಗಾರರಿಗೆ ಆರ್ಥಿಕವಾಗಿ ಸಾಕಷ್ಟು ನಷ್ಟ ಉಂಟಾಯಿತು. ಸರ್ಕಾರದ ಈ ನಡೆಯನ್ನು ಬಾಂಗ್ಲಾ ಆಟಗಾರರೇ ವಿರೋಧಿಸಿದ್ದರು.

ಐಪಿಎಲ್ ಇತಿಹಾಸದಲ್ಲಿ ಫೈನಲ್ ತಲುಪದ ಏಕೈಕ ತಂಡ ಯಾವುದು ಗೊತ್ತಾ?

ಇದರಿಂದ ಬಾಂಗ್ಲಾದೇಶಕ್ಕೆ ಲಾಭ

ಇದೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ಜಾರಿಗೆ ಬಂದಿದೆ. ಇದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ನಿಲುವಿನಲ್ಲಿ ಬದಲಾವಣೆಗೆ ಕಾರಣವಾಗಿದೆ. ಆದಾಗ್ಯೂ ಸರ್ಕಾರದೊಂದಿಗಿನ ಸಭೆಯಲ್ಲಿ ಐಪಿಎಲ್ ಪ್ರಸಾರದ ಬಗ್ಗೆ ಅಂತಿಮ ನಿರ್ಧಾರವೇನು ಎಂಬುದನ್ನು ಈಗ ನೋಡಬೇಕಾಗಿದೆ?. ಐಪಿಎಲ್ ಪ್ರಸಾರದಿಂದ ಬಾಂಗ್ಲಾದೇಶಕ್ಕೆ ಆರ್ಥಿಕವಾಗಿ ಲಾಭವಾಗುವುದರಿಂದ ಪ್ರಸಾರಕ್ಕೆ ಅನುವು ಮಾಡಿಕೊಡುವ ಸಾಧ್ಯತೆಗಳು ಹೆಚ್ಚಿವೆ. ಇದರ ಜೊತೆಗೆ ಭವಿಷ್ಯದಲ್ಲಿ ಬಿಸಿಸಿಐ ಜೊತೆಗಿನ ಸಂಬಂಧವನ್ನು ಸುಧಾರಿಸಿಕೊಳ್ಳಲು ಬಾಂಗ್ಲಾ ಕ್ರಿಕೆಟ್ ಮಂಡಳಿಗೆ ಇದು ಉತ್ತಮ ಅವಕಾಶವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈಗ ಗ್ಯಾಸ್ ಸಿಲಿಂಡರ್​​ ಮೇಲೆ ಖದೀಮರ ಕಣ್ಣು: ಶಾಲೆಯಲ್ಲಿದ್ದ 6 ಸಿಲಿಂಡರ್ ಹೊತ್ತೊಯ್ದ ಕಳ್ಳರು

ಬೀದರ್​​, ಮಾರ್ಚ್​​ 23: ಬೆಂಗಳೂರು ಸೇರಿ ಜಿಲ್ಲೆ ಜಿಲ್ಲೆಗಳಲ್ಲೂ ಗ್ಯಾಸ್​ ಸಿಲಿಂಡರ್ ಅಭಾವ ತಲೆದೂರಿದೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್​ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್​​ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ ಸಂಕಷ್ಟ ಹಬ್ಬವಾಗಿದೆ. ಹಾಡಹಗಲೇ ರಾಜಾರೋಷವಾಗಿ ಸಿಲಿಂಡರ್‌ ಕಳ್ಳತನ (Gas Cylinder Theft) ಮಾಡಿತ್ತಿದ್ದಾರೆ. ಬೀದರ್​​ನ ಶಾಲೆಯಲ್ಲಿದ್ದ 6 ಸಿಲಿಂಡರ್​​ ಕಳತನ ಮಾಡಿರುವಂತಹ ಘಟನೆ ನಡೆದಿದೆ.

ಅಡುಗೆಕೋಣೆ ಬೀಗ ಮುರಿದು ಸಿಲಿಂಡರ್ ಕಳ್ಳತನ

ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿದ್ದ 6 ಸಿಲಿಂಡರ್​​ಗಳನ್ನ ಕಳ್ಳರು ಹೊತ್ತೊಯ್ದಿದ್ದಾರೆ.​ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಪೂರೈಸಿದ್ದ ಸಿಲಿಂಡರ್​ಗಳನ್ನ ಅಡುಗೆಕೋಣೆ ಬೀಗ ಮುರಿದು ಕಳ್ಳರು ಹೊತ್ತೊಯ್ದಿದ್ದಾರೆ. ಸದ್ಯ ಈ ಕುರಿತಾಗಿ ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗೋದಾಮಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಕದ್ದ ಅಪರಿಚಿತ ವ್ಯಕ್ತಿ

ಇನ್ನು ಇತ್ತೀಚೆಗೆ ಭಾಲ್ಕಿ ನಿವಾಸಿ ಮಲ್ಲಿಕಾರ್ಜುನ ಕಂಟೆಪ್ಪಾ ಅವರು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಖರೀದಿಸಲು ಗೋದಾಮಿಗೆ ತೆರಳಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಗ್ಯಾಸ್ ಸಿಲಿಂಡರ್ ಕದ್ದು ಪರಾರಿಯಾಗಿದ್ದ.

ಇದನ್ನೂ ಓದಿ: ಪೂರೈಕೆ ವ್ಯತ್ಯಯದ ನಡುವೆ LPG ಸಿಲಿಂಡರ್​​ಗೆ ಕಳ್ಳರ ಕಾಟ: ಮನೆಯ ಕಾಂಪೌಂಡ್​​ಗೆ ನುಗ್ಗಿ ಕದ್ದು ಎಸ್ಕೇಪ್​​!

ಮಾರ್ಚ್ 14ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿತ್ತು. ಕಳುವಾದ ಗ್ಯಾಸ್ ಸಿಲಿಂಡರ್ ಹುಡುಕಿಕೊಡುವಂತೆ ಮಲ್ಲಿಕಾರ್ಜುನ ಕಂಟೆಪ್ಪಾ ಭಾಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹಾಡಹಗಲೇ 2 ಸಿಲಿಂಡರ್‌ ಹೊತ್ತೊಯ್ದ ಖದೀಮರು

ಗ್ಯಾಸ್‌ಗೆ ಬೇಡಿಕೆ ಹೆಚ್ಚಾಗ್ತಿದ್ದಂತೆ ಸಿಲಿಂಡರ್ ಮೇಲೆ ಕಣ್‌ ಹಾಕಿದ್ದಾರೆ. ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಆರ್.ಸಿ ಲೇಔಟ್‌ನಲ್ಲಿರೋ ಸಾಯಿ ಅಪಾರ್ಟ್‌ಮೆಂಟ್‌ನಲ್ಲಿ ಹಾಡಹಗಲೇ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಇತ್ತೀಚಿಗೆ ನಡೆದಿದೆ.

ಇದನ್ನೂ ಓದಿ: Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

ಯುಗಾದಿ ಹಬ್ಬದ ದಿನವೇ ಹೆಲ್ಮೆಟ್‌ ಧರಿಸಿ ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಖದೀಮರು, ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗೆ ನುಗ್ಗಿದ್ದಾರೆ. ಅಲ್ಲಿದ್ದ ಎರಡು ಸಿಲಿಂಡರ್‌ಗಳನ್ನ ಸ್ಕೂಟರ್‌ನಲ್ಲಿಟ್ಟುಕೊಂಡು ಎಸ್ಕೇಪ್ ಆಗಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಬೇಗೂರು ಪೊಲೀಸರು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಎಲ್ಲಾ ಮಾಡೋಕೆ ಆಗುತ್ತೆ, ಟೆನ್ಶನ್ ಮಾಡಿಕೊಳ್ಬೇಡಿ; ಆಡೋ ವಯಸ್ಸಿನಲ್ಲಿ ಲೈಫ್ ಟಿಪ್ಸ್ ನೀಡಿದ ಪುಟ್ಟ ಬಾಲಕ

ಕೆಲವರು ಸಣ್ಣ ಪುಟ್ಟ ಸಮಸ್ಯೆ ಬಂತು ಅಂದ್ರೆ ಆಕಾಶನೇ ತಲೆ ಮೇಲೆ ಬಿತ್ತು ಅನ್ನೋ ಹಾಗೆ ಕುಳಿತು ಬಿಡ್ತಾರೆ. ಮುಂದೇನು ಮಾಡೋದು ಅನ್ನೋದು ತೋಚೊದೇ ಇಲ್ಲ. ಆದರೆ ಇದೀಗ ಈ ಪುಟ್ಟ ಹುಡುಗನ ಮಾತು ಕೇಳಿದ್ರೆ ನೀವು ಟೆನ್ಶನ್ ಫ್ರೀ ಆಗ್ತೀರಾ. ಸಣ್ಣ ಪುಟ್ಟ ವಿಷ್ಯಕ್ಕೆ ಚಿಂತೆ ಮಾಡುವವರಿಗೆ ಪುಟ್ಟ ಹುಡುಗನು (little boy) ಧೈರ್ಯ ತುಂಬುವ ಮಾತುಗಳನ್ನಾಡಿದ್ದಾನೆ. ಸಣ್ಣ ವಯಸ್ಸಿನಲ್ಲಿ ಸಲಹೆ ನೀಡಿದ ರೀತಿ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.

kruthi.pov ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಪುಟ್ಟ ಹುಡುಗನೊಬ್ಬ ಟೆನ್ಶನ್ ತಕೊಳ್ಬೇಡಿ ಏನಾಗಲ್ಲ. ನೀವು ಯಾಕೆ ಟೆನ್ಶನ್ ತಕೊಳ್ತೀರಾ ಎಲ್ಲಾ ಮಾಡೋಕೆ ಆಗುತ್ತೆ ಎಂದು ಧೈರ್ಯ ತುಂಬಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಮ್ಮ ಬೈದದ್ದಕ್ಕೆ ದೇವರ ಮುಂದೆ ದೂರು ನೀಡಿದ ಪುಟಾಣಿ

ಈ ವಿಡಿಯೋ ಒಂಬತ್ತು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ನಡುವೆ ಟೆನ್ಶನ್ ಆಗಿಲ್ಲ ಅಂದ್ರೆ, ಟೆನ್ಶನ್ ಆಗೋ ತರಹ ಆಗಿದೆ ಎಂದು ಹೇಳಿದರೆ, ಮತ್ತೊಬ್ಬರು, ಇದನ್ನು ಹೇಳಿಕ್ಕೆ ನೀನು ಎಷ್ಟು ಟೆನ್ಶನ್ ತಕೊಂಡೆಯಲ್ವಾ ಎಂದು ಕಾಲೆಳೆದಿದ್ದಾರೆ. ಇನ್ನೊಬ್ಬರು, ನೀನು ಹೇಳೋದು ನೋಡಿ ಟೆನ್ಶನ್ ಆಗ್ತಿದೆ ಅಪ್ಪಿ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Gold Rates: 10 ಗ್ರಾಮ್ ಚಿನ್ನದ ಬೆಲೆಯಲ್ಲಿ 9,450 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ನಿಲ್ಲುತ್ತಿಲ್ಲ. ಬಂಗಾರದ ಬೆಲೆ (Gold Rates) ಒಂದೇ ದಿನ ಒಂದು ಗ್ರಾಮ್​ಗೆ ಬರೋಬ್ಬರಿ 1,000 ರೂ ಸಮೀಪದಷ್ಟು ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 14,000 ರೂ ಕೆಳಗೆ ಬಂದಿದೆ. ಇದೇ ಟ್ರೆಂಡ್ ಮುಂದುವರಿದರೆ ಚಿನ್ನದ ಬೆಲೆ ನಾಲ್ಕಂಕಿಗೆ ಬಂದರೂ ಅಚ್ಚರಿ ಇಲ್ಲ. ಇನ್ನು, ಬೆಳ್ಳಿ ಬೆಲೆಯಲ್ಲಿ 15 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,24,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,565 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,435 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,174 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,565 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,435 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,435 ರೂ
  • ಚೆನ್ನೈ: 12,950 ರೂ
  • ಮುಂಬೈ: 12,435 ರೂ
  • ದೆಹಲಿ: 12,450 ರೂ
  • ಕೋಲ್ಕತಾ: 12,435 ರೂ
  • ಕೇರಳ: 12,435 ರೂ
  • ಅಹ್ಮದಾಬಾದ್: 12,440 ರೂ
  • ಜೈಪುರ್: 12,450 ರೂ
  • ಲಕ್ನೋ: 12,450 ರೂ
  • ಭುವನೇಶ್ವರ್: 12,435 ರೂ

ಇದನ್ನೂ ಓದಿ: ರುಪಾಯಿ ಮತ್ತಷ್ಟು ಕುಸಿತ; ಪ್ರಪ್ರಥಮ ಬಾರಿಗೆ 94ರ ಮಟ್ಟಕ್ಕೆ ಇಳಿಕೆ; ಭಾರತೀಯ ಕರೆನ್ಸಿ ಮೌಲ್ಯ ಕುಸಿಯಲು ಏನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 541 ರಿಂಗಿಟ್ (12,904 ರುಪಾಯಿ)
  • ದುಬೈ: 501.50 ಡಿರಾಮ್ (12,837 ರುಪಾಯಿ)
  • ಅಮೆರಿಕ: 140.50 ಡಾಲರ್ (13,213 ರುಪಾಯಿ)
  • ಸಿಂಗಾಪುರ: 175.10 ಸಿಂಗಾಪುರ್ ಡಾಲರ್ (12,807 ರುಪಾಯಿ)
  • ಕತಾರ್: 499 ಕತಾರಿ ರಿಯಾಲ್ (12,867 ರೂ)
  • ಸೌದಿ ಅರೇಬಿಯಾ: 508 ಸೌದಿ ರಿಯಾಲ್ (12,720 ರುಪಾಯಿ)
  • ಓಮನ್: 53.15 ಒಮಾನಿ ರಿಯಾಲ್ (12,978 ರುಪಾಯಿ)
  • ಕುವೇತ್: 41.27 ಕುವೇತಿ ದಿನಾರ್ (12,642 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 230 ರೂ
  • ಚೆನ್ನೈ: 235 ರೂ
  • ಮುಂಬೈ: 230 ರೂ
  • ದೆಹಲಿ: 230 ರೂ
  • ಕೋಲ್ಕತಾ: 230 ರೂ
  • ಕೇರಳ: 235 ರೂ
  • ಅಹ್ಮದಾಬಾದ್: 230 ರೂ
  • ಜೈಪುರ್: 230 ರೂ
  • ಲಕ್ನೋ: 230 ರೂ
  • ಭುವನೇಶ್ವರ್: 235 ರೂ
  • ಪುಣೆ: 230

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು, (ಮಾರ್ಚ್ 23): ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ (bangalore hotel association) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court)​ ಇತ್ಯರ್ಥಗೊಳಿಸಿದೆ. ಇಂದು (ಮಾರ್ಚ್ 23) ಹೋಟೆಲ್ ಅಸೋಸಿಯೇಷನ್​ ಹಾಗೂ ಕೇಂದ್ರ ಸರ್ಕಾರದ ಪರ ವಾದ ಆಲಿಸಿ ರಿಟ್ ಅರ್ಜಿ ಇತ್ಯರ್ಥಪಡಿಸಿದೆ. ಎಲ್‌ಪಿಜಿ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಸಂಶಯಿಸುವ ಅಗತ್ಯವಿಲ್. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ವಾದ ಪ್ರತಿವಾದ

ತಮಿಳುನಾಡಿನಲ್ಲಿ 8500, ಕೇರಳದಲ್ಲಿ 4200 ಸಿಲಿಂಡರ್ ನೀಡಲಾಗುತ್ತಿದೆ. ಆದ್ರೆ, ಕರ್ನಾಟಕದಲ್ಲಿ ಹೋಟೆಲ್ ಗಳಿಗೆ ಕೇವಲ 1000 ಮಾತ್ರ ನೀಡುತ್ತಿದ್ದಾರೆ. ಸರ್ಕಾರ ಸಿಲಿಂಡರ್ ವಿತರಣೆ ಮಾರ್ಗಸೂಚಿ ಪಾಲಿಸುತ್ತಿಲ್ಲ ಎಂದು ಹೋಟೆಲ್ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ವಾದ ಮಂಡಿಸಿದರು.

ಇನ್ನು ಇದಕ್ಕೆ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿ, ಕೇಂದ್ರ ಸರ್ಕಾರ ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆ ನಡೆಸುತ್ತಿದೆ. ತೈಲ, ಅನಿಲ ಪೂರೈಕೆ ಸಂಪೂರ್ಣವಾಗಿ ನಮ್ಮ ನಿಯಂತ್ರಣದಲ್ಲಿಲ್ಲ. ಎಲ್‌ಪಿಜಿ, ತೈಲ ಪೂರೈಕೆ ಪರಿಸ್ಥಿತಿ ಪ್ರತಿದಿನವೂ ಬದಲಾಗುತ್ತಿದೆ. ಎಲ್‌ಪಿಜಿ ಹಂಚಿಕೆ ಸುಧಾರಿಸಲು ಸರ್ಕಾರ ಎಲ್ಲ ಹಂತದ ಪ್ರಯತ್ನ ಮಾಡುತ್ತಿದೆ. ಸರ್ಕಾರವೂ ಕಳಕಳಿಯಿಂದ ಕೆಲಸ ಮಾಡುತ್ತಿದೆ. ಈ ಬಗ್ಗೆ ನಂಬಿಕೆ ಇರಲಿ ಎಂದು ವಾದ ಮಂಡಿಸಿದರು.

ಇದನ್ನೂ ಓದಿ: ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್: ರಿಟ್​​ ಅರ್ಜಿ ಸಲ್ಲಿಕೆ

ಹರ್ಮುಜ್ ಗೆ ಹೋಟೆಲ್ ಸಂಘದ ಹಡಗು ಕಳುಹಿಸಿದರೂ LPG ತರಲು ಸಾಧ್ಯವೇ?

ನಮ್ಮ ದೇಶದಲ್ಲಿ ಕಚ್ಚಾತೈಲ, ಎಲ್‌ಪಿಜಿ ಉತ್ಪಾದನೆಯಾಗುತ್ತಿಲ್ಲ. ಹರ್ಮುಜ್ ಗೆ ಹೋಟೆಲ್ ಅಸೋಸಿಯೋಷನ್ ನ ಹಡಗು ಕಳುಹಿಸಿದರೂ ಎಲ್‌ಪಿಜಿ ತರಲು ಸಾಧ್ಯವೇ?  ಬೇರೆ ದೇಶಗಳಿಗೆ ಹೋಲಿಸಿದರೆ ಇಲ್ಲಿನ ಪರಿಸ್ಥಿತಿ ಉತ್ತಮವಾಗಿದೆ. ಯುದ್ಧದ ಸ್ಥಿತಿಯಿರುವಾಗ ಕೋರ್ಟ್ ಈ ಬಗ್ಗೆ ಹಸ್ತಕ್ಷೇಪ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್, ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅಭಿಪ್ರಾಯಪಟ್ಟಿದೆ. ಈ ಮೂಲಕ ಗ್ಯಾಸ್ ಸಿಲಿಂಡರ್​​ ಬಗ್ಗೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ.

Source link

LPG: 14.2 ಕಿಲೋ ಬದಲು 10 ಕಿಲೋ ಎಲ್​ಪಿಜಿ ಗ್ಯಾಸ್ ವಿತರಿಸುವ ಸಾಧ್ಯತೆ

ನವದೆಹಲಿ, ಮಾರ್ಚ್ 23: ಹೆಚ್ಚೆಚ್ಚು ಜನರಿಗೆ ಎಲ್​ಪಿಜಿ ಪೂರೈಕೆ (LPG distribution) ಸಿಗುವಂತಾಗಲು ಸರ್ಕಾರ ಹೊಸ ತಂತ್ರ ಯೋಜಿಸಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಗೃಹಬಳಕೆಗೆ ಕಡಿಮೆ ಎಲ್​ಪಿಪಿ ಇರುವ ಸಿಲಿಂಡರ್​ಗಳನ್ನು ವಿತರಿಸಲು ಆಲೋಚಿಸಿವೆ. ಎಕನಾಮಿಕ್ ಟೈಮ್ಸ್​ನಲ್ಲಿ ಬಂದಿರುವ ವರದಿ ಪ್ರಕಾರ, ಈಗಿರುವ 14.2 ಕಿಲೋ ಎಲ್​ಪಿಜಿ ಬದಲು 10 ಕಿಲೋ ಎಲ್​ಪಿಜಿ ಸಿಲಿಂಡರ್​ಗಳ ವಿತರಣೆ ಮಾಡಲಾಗಬಹುದು.

ಕಡಿಮೆ ಪ್ರಮಾಣದ ಎಲ್​ಪಿಜಿ ಪೂರೈಕೆಯಿಂದ ಏನು ಲಾಭ?

ಎಲ್​ಪಿಜಿ ಲಭ್ಯತೆ ಸೀಮಿತ ಪ್ರಮಾಣದಲ್ಲಿ ಮಾತ್ರವೇ ಇರುವುದು. ಹೀಗಾಗಿ, ಗೃಹಬಳಕೆಗೆ ಎಲ್​ಪಿಜಿ ಕಡಿಮೆ ಪ್ರಮಾಣದ ಇರುವ ಸಿಲಿಂಡರ್ ಅನ್ನು ನೀಡಿದರೆ ಹೆಚ್ಚೆಚ್ಚು ಮನೆಗಳಿಗೆ ಪೂರೈಕೆ ಮಾಡಲು ಸಾಧ್ಯವಾಗುತ್ತದೆ ಎಂಬುದು ಒಂದು ಆಲೋಚನೆ. ಪಶ್ಚಿಮ ಏಷ್ಯಾದ ಯುದ್ಧದ ಸ್ಥಿತಿ ದೀರ್ಘಕಾಲ ಮುಂದುವರಿಯದೇ ಇದ್ದರೆ ಈ ತಂತ್ರ ಕೆಲಸ ಮಾಡುತ್ತದೆ.

ಇದನ್ನೂ ಓದಿ: PM Modi on Fertilizers: ಭಾರತದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನಿದೆ, ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ

ಭಾರತದ ಶೇ. 60ರಷ್ಟು ಎಲ್​ಪಿಜಿ ಅಗತ್ಯವನ್ನು ಆಮದು ಮೂಲಕ ಪೂರೈಸಲಾಗುತ್ತಿದೆ. ಅದರ ಶೇ. 80ಕ್ಕಿಂತಲೂ ಹೆಚ್ಚು ಆಮದು ಹಾರ್ಮುಜ್ ಜಲಸಂಧಿ ಮಾರ್ಗದಿಂದ ಬರುತ್ತದೆ. ಹೀಗಾಗಿ, ಭಾರತಕ್ಕೆ ಎಲ್​ಪಿಜಿ ಬಿಕ್ಕಟ್ಟು ಬಹಳವೇ ಕಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಇಂದು ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿ, ಮಧ್ಯಪ್ರಾಚ್ಯ ಯುದ್ಧ ಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಭಾರತದಲ್ಲಿ ಗೃಹಬಳಕೆಗೆ 14.2 ಕಿಲೋ ಎಲ್​ಪಿಜಿ ಸಿಲಿಂಡರ್ ವಿತರಣೆ ಮಾಡಲಾಗುತ್ತದೆ. ಒಂದು ಸಣ್ಣ ಕುಟುಂಬಕ್ಕೆ ಈ ಸಿಲಿಂಡರ್​ನಲ್ಲಿರುವ ಗ್ಯಾಸ್ ಒಂದರಿಂದ ಮೂರು ತಿಂಗಳವರೆಗೆ ಬಾಳಿಕೆ ಬರುತ್ತದೆ. 10 ಕಿಲೋ ಎಲ್​ಪಿಜಿ ರೀಫಿಲ್ ಆಗಿರುವ ಸಿಲಿಂಡರ್ ಸಾಮಾನ್ಯವಾಗಿ ಒಂದರಿಂದ ಎರಡು ತಿಂಗಳು ಬರಬಹುದು.

ಇದನ್ನೂ ಓದಿ: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

10 ಕಿಲೋ ಎಲ್​ಪಿಜಿ ಎಂದರೆ ಸಿಲಿಂಡರ್ ಬದಲಾಗಲ್ಲ. 14.2 ಕಿಲೋ ಎಲ್​ಪಿಜಿ ಸಿಲಿಂಡರ್​ನಲ್ಲೇ 10 ಕಿಲೋ ಎಲ್​ಪಿಜಿ ರೀಫಿಲ್ ಮಾಡಲಾಗುತ್ತದೆ. ಸಿಲಿಂಡರ್ ಮೇಲೆ ಹೊಸ ಲೇಬಲ್ ಹಾಕಲಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಶ್ಲೀಲ ಹಾಡಿನ ವಿವಾದ: 800ಕ್ಕೂ ಹೆಚ್ಚು ಲಿಂಕ್ಸ್ ಡಿಲೀಟ್ ಮಾಡಿದ ಪೊಲೀಸರು

ಬಾಲಿವುಡ್‌ನ ಖ್ಯಾತ ಗಾಯಕ ಬಾದ್‌ಶಾ (Badshah) ಅವರ ಹೊಸ ಹಾಡು ‘ಟಟೀರಿ’ ಭಾರಿ ವಿವಾದಕ್ಕೆ ಗುರಿಯಾಗಿದೆ. ಮಹಿಳೆಯರು ಮತ್ತು ಅಪ್ರಾಪ್ತರ ಬಗ್ಗೆ ಆಕ್ಷೇಪಾರ್ಹ ಸಾಹಿತ್ಯವನ್ನು ಹೊಂದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಹರಿಯಾಣ ಪೊಲೀಸರು ಈ ಹಾಡಿನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಹರಿಯಾಣ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ‘ಟಟೀರಿ’ (Tateeree) ಹಾಡಿನ ಒಟ್ಟು 857 ಲಿಂಕ್‌ಗಳನ್ನು ಈವರೆಗೆ ತೆಗೆದುಹಾಕಿದ್ದಾರೆ. ಇದರಲ್ಲಿ ಯೂಟ್ಯೂಬ್‌ನ 154 ವೀಡಿಯೊಗಳು ಮತ್ತು ಇನ್‌ಸ್ಟಾಗ್ರಾಮ್‌ನ 703 ರೀಲ್ಸ್‌ ಸೇರಿವೆ. ಮರು-ಅಪ್‌ಲೋಡ್ ಮಾಡಲಾದ ವೀಡಿಯೊಗಳು ಮತ್ತು ಶಾರ್ಟ್ಸ್​ಗಳನ್ನು ಸಹ ಡಿಲೀಟ್ ಮಾಡುವಂತೆ ಸೋಶಿಯಲ್ ಮೀಡಿಯಾ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ.

ಮಹಿಳೆಯರ ಮತ್ತು ಅಪ್ರಾಪ್ತರ ಘನತೆಗೆ ಧಕ್ಕೆ ತರುವಂತಹ ಯಾವುದೇ ವಿಷಯವನ್ನು ಸಹಿಸುವುದಿಲ್ಲ ಎಂದು ಹರಿಯಾಣ ಪೊಲೀಸ್ ಮಹಾನಿರ್ದೇಶಕ (DGP) ಅಜಯ್ ಸಿಂಘಾಲ್ ತಿಳಿಸಿದ್ದಾರೆ. ನಿಯಮ ಉಲ್ಲಂಘಿಸುವ ಖಾತೆಗಳನ್ನು ನಿರ್ಬಂಧಿಸಲಾಗುವುದು ಮತ್ತು ಪದೇ ಪದೇ ತಪ್ಪು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಅಲ್ಲದೇ, ಈ ಹಾಡನ್ನು ಬಳಸಿ ಹೊಸ ವೀಡಿಯೊಗಳನ್ನು ಕ್ರಿಯೇಟ್ ಮಾಡದಂತೆ ಅಥವಾ ಶೇರ್ ಮಾಡದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹರಿಯಾಣದ ಪಂಚಕುಲ ನಗರದ ಸೆಕ್ಟರ್ 20 ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಹಾಡಿನ ವಿವಾದದಿಂದಾಗಿ ಬಾದ್​ಶಾ ಅವರಿಗೆ ಅಪಖ್ಯಾತಿ ಬಂದಂತೆ ಆಗಿದೆ.

ಕಳೆದ ವಾರವಷ್ಟೇ ರಾಷ್ಟ್ರೀಯ ಮಹಿಳಾ ಆಯೋಗವು ಈ ಹಾಡಿನ ಅಶ್ಲೀಲತೆಯ ಬಗ್ಗೆ ಗಾಯಕ ಬಾದ್‌ಶಾ ಮತ್ತು ಹಾಡಿನ ನಿರ್ಮಾಪಕರಿಗೆ ಸಮನ್ಸ್ ನೀಡಿತ್ತು. ಈ ಹಾಡು ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ. ಸಂಕಷ್ಟಕ್ಕೆ ಸಿಲುಕಿದ ಬಾದ್‌ಶಾ ಈಗಾಗಲೇ ಈ ಬಗ್ಗೆ ಕ್ಷಮೆಯಾಚಿಸಿದ್ದು, ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ಹಾಡನ್ನು ಹಿಂಪಡೆದಿದ್ದಾರೆ.

ಇದನ್ನೂ ಓದಿ: ಪ್ರೇಮ್ ಬರೆದ ‘ಕೆಡಿ’ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಜನರ ಆಕ್ರೋಶ; ಸೆಲೆಬ್ರಿಟಿಗಳೂ ಗರಂ

ಕನ್ನಡದ ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ಕೂಡ ದೇಶಾದ್ಯಂತ ವಿವಾದ ಸೃಷ್ಟಿ ಮಾಡಿದೆ. ಈ ಹಾಡಿನಲ್ಲಿ ಕೂಡ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿತು. ತೀವ್ರ ವಿರೋಧ ವ್ಯಕ್ತವಾದ ಬಳಿಕ ಹಾಡನ್ನು ಡಿಲೀಟ್ ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೊಬೈಲ್ ಟಾರ್ಚ್ ಬೆಳಕಲ್ಲಿ ಆಪರೇಷನ್; 12 ವರ್ಷಗಳ ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲು

ಮುಂಬೈ, ಮಾರ್ಚ್ 23: ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ರೋಗಿಗೆ ಆಪರೇಷನ್ (Operation) ಮಾಡಿ ಆ ರೋಗಿ ಮೃತಪಟ್ಟಿದ್ದರು. ಇದಾದ 12 ವರ್ಷಗಳವರೆಗೂ ಆ ವೈದ್ಯರಿಗೆ ಶಿಕ್ಷೆ ಕೊಡಿಸಲು ಮೃತಪಟ್ಟ ರೋಗಿಯ ತಾಯಿ ತೀವ್ರ ಹೋರಾಟ ನಡೆಸಿದ್ದರು. ಆ ಘಟನೆ ನಡೆದು 12 ವರ್ಷಗಳ ಬಳಿಕ ಇದೀಗ ಈ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಯಶಸ್ಸು ಸಿಕ್ಕಿದ್ದು, 12 ವರ್ಷಗಳ ನಂತರ ಆ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.

2014ರಲ್ಲಿ ನಡೆದ ದುರಂತ ಘಟನೆಯಲ್ಲಿ ಮಹಾರಾಷ್ಟ್ರದ ಗೋವಂಡಿಯ 23 ವರ್ಷದ ಸಲ್ಮಾನ್ ಬಾಬರ್ ಶಾ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ತಾಯಿ ನಸೀಮ್ ಬಾನು ಬಾಬರ್ ಶಾ ತನ್ನ ಮಗನ ಸಾವಿಗೆ ನ್ಯಾಯ ಕೊಡಿಸಲು ಹಠದಿಂದ ಹೋರಾಟ ನಡೆಸಿದ್ದರು.

ಇದನ್ನೂ ಓದಿ: ನಗರದಲ್ಲಿ ಹೆಚ್ಚಿದ ಡಿಜಿಟಲ್ ಅರೆಸ್ಟ್ ಸ್ಕ್ಯಾಮ್; ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!

2014ರ ಏಪ್ರಿಲ್ 8ರಂದು ಸಲ್ಮಾನ್ ಬೈಕ್ ಅಪಘಾತಕ್ಕೀಡಾದರು. ಈ ಅಪಘಾತದಲ್ಲಿ ಅವರ ಬಲ ತೊಡೆಯ ಮೂಳೆ ಮುರಿದಿತ್ತು. ಅವರನ್ನು ತಕ್ಷಣ ಗೋವಂಡಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಇದು ಸಣ್ಣ ಗಾಯವಾದ್ದರಿಂದ ಕೆಲವೇ ದಿನಗಳಲ್ಲಿ ಅವರು ಚೇತರಿಸಿಕೊಳ್ಳುತ್ತಾರೆ ಎಂದು ಕುಟುಂಬವು ನಿರೀಕ್ಷಿಸಿತ್ತು. ಆದರೆ, ಶಸ್ತ್ರಚಿಕಿತ್ಸೆಯ ನಂತರ ಅವರ ಸ್ಥಿತಿ ಹದಗೆಡಲು ಪ್ರಾರಂಭಿಸಿತು. ನಂತರ ಅವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಏಪ್ರಿಲ್ 17, 2014ರಂದು ಅವರು ‘ಸೆಪ್ಟಿಸೆಮಿಯಾ’ದಿಂದ ನಿಧನರಾದರು. ಇದು ತೀವ್ರವಾದ ರಕ್ತಪ್ರವಾಹ ಸೋಂಕು. ಅಧಿಕೃತ ದಾಖಲೆಗಳು ಅದು ಸಹಜ ಸಾವು ಎಂದೇ ಹೇಳುತ್ತಿದ್ದರೂ ಅವರ ತಾಯಿ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ರೋಗಿಯ ತಾಯಿ ನಸೀಮ್ ವೈದ್ಯರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಅವರ ಪ್ರಕಾರ, ವಿದ್ಯುತ್ ಇಲ್ಲದಿದ್ದರೂ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತ. ಅತ್ಯಂತ ನಿರ್ಲಕ್ಷ್ಯದಿಂದ ಆಪರೇಷನ್ ಮಾಡಲಾಗಿತ್ತು. ಸರಿಯಾದ ವೈದ್ಯಕೀಯ ಸೌಲಭ್ಯಗಳನ್ನು ಬಳಸದೆ ಚಿಕಿತ್ಸೆಯನ್ನು ನೀಡಲಾಗಿತ್ತು. ರೋಗಿಯ ಸ್ಥಿತಿಯ ಬಗ್ಗೆ ಕುಟುಂಬಕ್ಕೆ ತಪ್ಪು ಮಾಹಿತಿ ನೀಡಲಾಗಿತ್ತು ಎಂದು ಅವರು ಆರೋಪಿಸಿದ್ದರು. ಚಿಕಿತ್ಸೆಗೆ ಸಂಬಂಧಿಸಿದ ದಾಖಲೆಗಳನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಲಾಗಿದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪ್ರೀತಿಸಿದವನನ್ನು ನಂಬಿ ಮದುವೆಯಾಗಿ ಬಂದಿದ್ದ ಮಹಿಳೆ ನಾಲ್ಕೇ ತಿಂಗಳಲ್ಲಿ ಪತಿ ಕೈಯಿಂದಲೇ ಹೆಣವಾದ್ಲು

ಈ ಘಟನೆಯ ನಂತರ, ನಸೀಮ್ ನ್ಯಾಯಕ್ಕಾಗಿ ನಿರಂತರವಾಗಿ ಹೋರಾಡಿದರು. ಅವರು ಪೊಲೀಸರಿಗೆ ಪದೇ ಪದೇ ದೂರುಗಳನ್ನು ಸಲ್ಲಿಸಿದರು. ಮಾಹಿತಿ ಹಕ್ಕು ಕಾಯ್ದೆಯನ್ನು ಬಳಸಿಕೊಂಡು ಮಾಹಿತಿ ಪಡೆಯಲು ಪ್ರಯತ್ನಿಸಿದರು. ಕೊನೆಗೆ ಎಲ್ಲೂ ನ್ಯಾಯ ಸಿಗದ ಕಾರಣದಿಂದ ಅಂತಿಮವಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು. ಕೊನೆಗೂ ಈಗ ಅಂದರೆ ಸಲ್ಮಾನ್ ಸಾವನ್ನಪ್ಪಿ 12 ವರ್ಷಗಳ ನಂತರ ಪೊಲೀಸರು ಸಂಬಂಧಪಟ್ಟ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link