Headlines

nagaraj11081993

ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು, (ಮಾರ್ಚ್ 23): ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ (bangalore hotel association) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court)​ ಇತ್ಯರ್ಥಗೊಳಿಸಿದೆ. ಇಂದು (ಮಾರ್ಚ್ 23) ಹೋಟೆಲ್ ಅಸೋಸಿಯೇಷನ್​ ಹಾಗೂ ಕೇಂದ್ರ ಸರ್ಕಾರದ ಪರ ವಾದ ಆಲಿಸಿ ರಿಟ್ ಅರ್ಜಿ ಇತ್ಯರ್ಥಪಡಿಸಿದೆ. ಎಲ್‌ಪಿಜಿ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಸಂಶಯಿಸುವ ಅಗತ್ಯವಿಲ್. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ…

Read More

LPG: 14.2 ಕಿಲೋ ಬದಲು 10 ಕಿಲೋ ಎಲ್​ಪಿಜಿ ಗ್ಯಾಸ್ ವಿತರಿಸುವ ಸಾಧ್ಯತೆ

ನವದೆಹಲಿ, ಮಾರ್ಚ್ 23: ಹೆಚ್ಚೆಚ್ಚು ಜನರಿಗೆ ಎಲ್​ಪಿಜಿ ಪೂರೈಕೆ (LPG distribution) ಸಿಗುವಂತಾಗಲು ಸರ್ಕಾರ ಹೊಸ ತಂತ್ರ ಯೋಜಿಸಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಗೃಹಬಳಕೆಗೆ ಕಡಿಮೆ ಎಲ್​ಪಿಪಿ ಇರುವ ಸಿಲಿಂಡರ್​ಗಳನ್ನು ವಿತರಿಸಲು ಆಲೋಚಿಸಿವೆ. ಎಕನಾಮಿಕ್ ಟೈಮ್ಸ್​ನಲ್ಲಿ ಬಂದಿರುವ ವರದಿ ಪ್ರಕಾರ, ಈಗಿರುವ 14.2 ಕಿಲೋ ಎಲ್​ಪಿಜಿ ಬದಲು 10 ಕಿಲೋ ಎಲ್​ಪಿಜಿ ಸಿಲಿಂಡರ್​ಗಳ ವಿತರಣೆ ಮಾಡಲಾಗಬಹುದು. ಕಡಿಮೆ ಪ್ರಮಾಣದ ಎಲ್​ಪಿಜಿ ಪೂರೈಕೆಯಿಂದ ಏನು ಲಾಭ? ಎಲ್​ಪಿಜಿ ಲಭ್ಯತೆ ಸೀಮಿತ ಪ್ರಮಾಣದಲ್ಲಿ ಮಾತ್ರವೇ ಇರುವುದು. ಹೀಗಾಗಿ,…

Read More

ಅಶ್ಲೀಲ ಹಾಡಿನ ವಿವಾದ: 800ಕ್ಕೂ ಹೆಚ್ಚು ಲಿಂಕ್ಸ್ ಡಿಲೀಟ್ ಮಾಡಿದ ಪೊಲೀಸರು

ಬಾಲಿವುಡ್‌ನ ಖ್ಯಾತ ಗಾಯಕ ಬಾದ್‌ಶಾ (Badshah) ಅವರ ಹೊಸ ಹಾಡು ‘ಟಟೀರಿ’ ಭಾರಿ ವಿವಾದಕ್ಕೆ ಗುರಿಯಾಗಿದೆ. ಮಹಿಳೆಯರು ಮತ್ತು ಅಪ್ರಾಪ್ತರ ಬಗ್ಗೆ ಆಕ್ಷೇಪಾರ್ಹ ಸಾಹಿತ್ಯವನ್ನು ಹೊಂದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಹರಿಯಾಣ ಪೊಲೀಸರು ಈ ಹಾಡಿನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಹರಿಯಾಣ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ‘ಟಟೀರಿ’ (Tateeree) ಹಾಡಿನ ಒಟ್ಟು 857 ಲಿಂಕ್‌ಗಳನ್ನು ಈವರೆಗೆ ತೆಗೆದುಹಾಕಿದ್ದಾರೆ. ಇದರಲ್ಲಿ ಯೂಟ್ಯೂಬ್‌ನ 154 ವೀಡಿಯೊಗಳು ಮತ್ತು ಇನ್‌ಸ್ಟಾಗ್ರಾಮ್‌ನ 703 ರೀಲ್ಸ್‌ ಸೇರಿವೆ. ಮರು-ಅಪ್‌ಲೋಡ್ ಮಾಡಲಾದ…

Read More

ಮೊಬೈಲ್ ಟಾರ್ಚ್ ಬೆಳಕಲ್ಲಿ ಆಪರೇಷನ್; 12 ವರ್ಷಗಳ ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲು

ಮುಂಬೈ, ಮಾರ್ಚ್ 23: ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ರೋಗಿಗೆ ಆಪರೇಷನ್ (Operation) ಮಾಡಿ ಆ ರೋಗಿ ಮೃತಪಟ್ಟಿದ್ದರು. ಇದಾದ 12 ವರ್ಷಗಳವರೆಗೂ ಆ ವೈದ್ಯರಿಗೆ ಶಿಕ್ಷೆ ಕೊಡಿಸಲು ಮೃತಪಟ್ಟ ರೋಗಿಯ ತಾಯಿ ತೀವ್ರ ಹೋರಾಟ ನಡೆಸಿದ್ದರು. ಆ ಘಟನೆ ನಡೆದು 12 ವರ್ಷಗಳ ಬಳಿಕ ಇದೀಗ ಈ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಯಶಸ್ಸು ಸಿಕ್ಕಿದ್ದು, 12 ವರ್ಷಗಳ ನಂತರ ಆ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. 2014ರಲ್ಲಿ ನಡೆದ ದುರಂತ ಘಟನೆಯಲ್ಲಿ ಮಹಾರಾಷ್ಟ್ರದ ಗೋವಂಡಿಯ 23…

Read More

PSL 2026: ಐಪಿಎಲ್‌ಗಾಗಿ ಪಿಎಸ್‌ಎಲ್‌ ತೊರೆದ ಮತ್ತೊಬ್ಬ ಸ್ಟಾರ್ ಆಟಗಾರ

ಐಪಿಎಲ್ ಜೊತೆಗೆ ಪಿಎಸ್‌ಎಲ್ ನಡೆಸಬೇಕೆಂಬ ಹಠಕ್ಕೆ ಬಿದ್ದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಸಂಕಷ್ಟಗಳ ಮೇಲೆ ಸಂಕಷ್ಟಗಳು ಎದುರಾಗುತ್ತಿವೆ. ವಾಸ್ತವವಾಗಿ ಕಳೆದ ಆವೃತ್ತಿಯಿಂದ ಪಾಕಿಸ್ತಾನ ಸೂಪರ್ ಲೀಗ್, ಐಪಿಎಲ್ ಜೊತೆಗೆ ಆರಂಭವಾಗುತ್ತಿದೆ. ಕಳೆದ ಆವೃತ್ತಿಯ ಪಿಎಸ್​ಎಲ್ ಹೆಚ್ಚಿನ ತೊಂದರೆಗಳಿಲ್ಲದೆ ಮುಗಿದಿತ್ತು. ಆದರೆ ಈ ಆವೃತ್ತಿ, ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿಯ ಪಾಕಿಸ್ತಾನ ಸೂಪರ್ ಲೀಗ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ. ಆದರೆ ಅದಕ್ಕೂ ಮೊದಲೇ ಅನೇಕ ವಿದೇಶಿ ಆಟಗಾರರು ಈ ಲೀಗ್​ನಿಂದ ತಮ್ಮ ಹೆಸರುಗಳನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ….

Read More

ಶುಕ್ರನ ದೆಸೆಯಿಂದ ಸಂಗಾತಿಯೊಂದಿಗೆ ರೋಮ್ಯಾಂಟಿಕ್ ಕ್ಷಣ ಕಳೆಯಬಹುದು, ಆದರೆ ಈ ತಪ್ಪು ಮಾಡಬೇಡಿ

ಮಾರ್ಚ್ 22ರಿಂದ ಮಾರ್ಚ್ 28ರವರೆಗೆ ನಾಲ್ಕನೇ ವಾರವಾಗಿದ್ದು ಶುಕ್ರನು ಮೇಷ ರಾಶಿಯನ್ನು ಪ್ರವೇಶಿಸುವನು.‌ ಮಿತ್ರನ ರಾಶಿಯಾದ ಕಾರಣ ಸ್ತ್ರೀ-ಪುರುಷರ ವ್ಯವಹಾರ ದಾರಿ ತಪ್ಪಬಹುದು. ಕುಜನ ಮೇಲೆ ಗುರು ದೃಷ್ಟಿ ಇದ್ದರೂ ಅವಗಡ ಸಾಧ್ಯತೆವಿದೆ. ದಾಂಪತ್ಯದಲ್ಲಿ ಸುಖಮಯ ವಾತಾವರಣ ವೃದ್ಧಿಯಾಗುವುದು. ಮೇಷ: ಈ ವಾರ ಪ್ರೇಮ ಜೀವನದಲ್ಲಿ ಉತ್ಸಾಹ ಹೆಚ್ಚಲಿದೆ. ಸಂಗಾತಿಯೊಂದಿಗೆ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಅವಿವಾಹಿತರಿಗೆ ಹೊಸ ಸಂಬಂಧಗಳು ಕೂಡಿಬರಲಿವೆ. ಹಳೆಯ ಭಿನ್ನಾಭಿಪ್ರಾಯಗಳು ದೂರವಾಗಿ ಬಾಂಧವ್ಯ ಗಟ್ಟಿಯಾಗುವುದು. ​ವೃಷಭ: ನಿಮಗೆ ಶುಕ್ರನ ಕೃಪೆಯಿಂದ ಪ್ರೇಮ…

Read More

ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ; ಸಮರ್ಥ್ ಶಾಮನೂರು ನಾಮಪತ್ರಕ್ಕೆ ಜಮೀರ್ ಗೈರು, ಸಾದಿಕ್ ಪೈಲ್ವಾನ್ ಅಖಾಡಕ್ಕೆ

ದಾವಣಗೆರೆ (ಮಾರ್ಚ್ 23): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಆದರೆ, ಈ ಪ್ರಮುಖ ಕಾರ್ಯಕ್ರಮದಿಂದ ಸಚಿವ ಜಮೀರ್ ಅಹಮದ್ ಖಾನ್ ದೂರ ಉಳಿದಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಬಂಡಾಯದ ಅಭ್ಯರ್ಥಿಯಾಗಿ ಮುಸ್ಲಿಂ ಸಮುದಾಯದ…

Read More

ಬೆಳಗಾವಿ: ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ

ಬೆಳಗಾವಿ, ಮಾರ್ಚ್​​ 23: ಹೆಂಡತಿ ಮಲಗಿರುವಾಗಲೇ ಎಳೆದೊಯ್ದು ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಗಂಡ ಬರ್ಬರವಾಗಿ ಹತ್ಯೆ (kill) ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಾಯಿಗೆ ಬೈದಿದ್ದಕ್ಕೆ ಮತ್ತು ಪತ್ನಿ ಶೀಲ ಶಂಕಿಸಿ ಕೊಲೆ  ಬಸವರಾಜ ಜೋಡಳ್ಳಿಯಿಂದ ಶಿವಕ್ಕ ಜೋಡಳ್ಳಿ( 33)ಯ ಕೊಲೆ ಮಾಡಲಾಗಿದೆ. ಈ ಭಯಾನಕ ಘಟನೆಗೆ ಗೋವನಕೊಪ್ಪ ಗ್ರಾಮವೇ ಬೆಚ್ಚಿಬಿದ್ದಿದೆ. ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ ಮೊದಲ ಗಂಡ ಅಕಾಲಿಕ…

Read More

ಒಂದಂಕಿಯಲ್ಲಿ ಕುಂಟಿದ ‘ಉಸ್ತಾದ ಭಗತ್ ಸಿಂಗ್’ ಕಲೆಕ್ಷನ್; ‘ಹರಿ ಹರ ವೀರ ಮಲ್ಲು’ಗಿಂತ ಹೀನಾಯ

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ ಭಗತ್ ಸಿಂಗ್’ ಸಿನಿಮಾದ ಗಳಿಕೆ ಹೀನಾಯ ಮಟ್ಟ ತಲುಪಿದೆ. ನಾಲ್ಕು ದಿನಕ್ಕೆ ಚಿತ್ರ ಅಂದುಕೊಂಡಷ್ಟು ಗಳಿಕೆ ಮಾಡಿಲ್ಲ. ನಾಲ್ಕು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ದಾಟಲು ಕೂಡ ಚಿತ್ರದ ಬಳಿ ಸಾಧ್ಯವಾಗಿಲ್ಲ. ಇನ್ನು, ಎರಡನೇ ದಿನದಿಂದ ಸಿಂಗಲ್ ಡಿಜಿಟಲ್​ನಲ್ಲೇ ಸಿನಿಮಾ ಕುಂಟುತ್ತಾ ಸಾಗುತ್ತಿದೆ. ಈ ಮೊದಲು ರಿಲೀಸ್ ಆಗಿ ಸೋತ ‘ಹರಿ ಹರ ವೀರ ಮಲ್ಲು’ ಚಿತ್ರಕ್ಕಿಂತ ಈ ಸಿನಿಮಾದ ಸ್ಥಿತಿ ಹೀನಾಯವಾಗಿದೆ. ‘ಧುರಂಧರ್ 2’ ಸಿನಿಮಾ ಸೂಪರ್ ಹಿಟ್…

Read More

ಧುರಂಧರ್ 2 ಸಿನಿಮಾ ರಿಯಾಲಾ? ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವುದಷ್ಟೇ ಅಲ್ಲದೆ, ಅದರ ‘ಪೀಕ್ ಡಿಟೇಲಿಂಗ್’ (Peak Detailing) ನಿಂದಾಗಿ ಸಿನೆಮಾ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ಎಸ್‌ಪಿ ಅಸ್ಲಾಂ ಅವರ ಹತ್ಯೆಯ ದೃಶ್ಯವು 2014ರಲ್ಲಿ ನಡೆದ ನೈಜ ಘಟನೆಯನ್ನು ಯಥಾವತ್ತಾಗಿ ಪ್ರತಿಬಿಂಬಿಸಿದೆ ಎಂಬುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸಿನಿಮಾದಲ್ಲಿ ಎಸ್‌ಪಿ ಅಸ್ಲಾಂ ಅವರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಪ್ರತಿಯೊಂದು ಹಂತವು  2014ರ ಸಿಸಿಟಿವಿ/ಡ್ಯಾಶ್‌ಕ್ಯಾಮ್ ದೃಶ್ಯಗಳನ್ನೇ ಹೋಲುತ್ತದೆ. ನಿರ್ದೇಶಕ ಆದಿತ್ಯ ಧರ್…

Read More