Headlines

nagaraj11081993

ಬೆಳಗಾವಿ: ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ

ಬೆಳಗಾವಿ, ಮಾರ್ಚ್​​ 23: ಹೆಂಡತಿ ಮಲಗಿರುವಾಗಲೇ ಎಳೆದೊಯ್ದು ನಡುರಸ್ತೆಯಲ್ಲಿ ಕಲ್ಲಿನಿಂದ ಜಜ್ಜಿ ಗಂಡ ಬರ್ಬರವಾಗಿ ಹತ್ಯೆ (kill) ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಾಯಿಗೆ ಬೈದಿದ್ದಕ್ಕೆ ಮತ್ತು ಪತ್ನಿ ಶೀಲ ಶಂಕಿಸಿ ಕೊಲೆ  ಬಸವರಾಜ ಜೋಡಳ್ಳಿಯಿಂದ ಶಿವಕ್ಕ ಜೋಡಳ್ಳಿ( 33)ಯ ಕೊಲೆ ಮಾಡಲಾಗಿದೆ. ಈ ಭಯಾನಕ ಘಟನೆಗೆ ಗೋವನಕೊಪ್ಪ ಗ್ರಾಮವೇ ಬೆಚ್ಚಿಬಿದ್ದಿದೆ. ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ ಮೊದಲ ಗಂಡ ಅಕಾಲಿಕ…

Read More

ಒಂದಂಕಿಯಲ್ಲಿ ಕುಂಟಿದ ‘ಉಸ್ತಾದ ಭಗತ್ ಸಿಂಗ್’ ಕಲೆಕ್ಷನ್; ‘ಹರಿ ಹರ ವೀರ ಮಲ್ಲು’ಗಿಂತ ಹೀನಾಯ

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ ಭಗತ್ ಸಿಂಗ್’ ಸಿನಿಮಾದ ಗಳಿಕೆ ಹೀನಾಯ ಮಟ್ಟ ತಲುಪಿದೆ. ನಾಲ್ಕು ದಿನಕ್ಕೆ ಚಿತ್ರ ಅಂದುಕೊಂಡಷ್ಟು ಗಳಿಕೆ ಮಾಡಿಲ್ಲ. ನಾಲ್ಕು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ದಾಟಲು ಕೂಡ ಚಿತ್ರದ ಬಳಿ ಸಾಧ್ಯವಾಗಿಲ್ಲ. ಇನ್ನು, ಎರಡನೇ ದಿನದಿಂದ ಸಿಂಗಲ್ ಡಿಜಿಟಲ್​ನಲ್ಲೇ ಸಿನಿಮಾ ಕುಂಟುತ್ತಾ ಸಾಗುತ್ತಿದೆ. ಈ ಮೊದಲು ರಿಲೀಸ್ ಆಗಿ ಸೋತ ‘ಹರಿ ಹರ ವೀರ ಮಲ್ಲು’ ಚಿತ್ರಕ್ಕಿಂತ ಈ ಸಿನಿಮಾದ ಸ್ಥಿತಿ ಹೀನಾಯವಾಗಿದೆ. ‘ಧುರಂಧರ್ 2’ ಸಿನಿಮಾ ಸೂಪರ್ ಹಿಟ್…

Read More

ಧುರಂಧರ್ 2 ಸಿನಿಮಾ ರಿಯಾಲಾ? ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವುದಷ್ಟೇ ಅಲ್ಲದೆ, ಅದರ ‘ಪೀಕ್ ಡಿಟೇಲಿಂಗ್’ (Peak Detailing) ನಿಂದಾಗಿ ಸಿನೆಮಾ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ಎಸ್‌ಪಿ ಅಸ್ಲಾಂ ಅವರ ಹತ್ಯೆಯ ದೃಶ್ಯವು 2014ರಲ್ಲಿ ನಡೆದ ನೈಜ ಘಟನೆಯನ್ನು ಯಥಾವತ್ತಾಗಿ ಪ್ರತಿಬಿಂಬಿಸಿದೆ ಎಂಬುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸಿನಿಮಾದಲ್ಲಿ ಎಸ್‌ಪಿ ಅಸ್ಲಾಂ ಅವರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಪ್ರತಿಯೊಂದು ಹಂತವು  2014ರ ಸಿಸಿಟಿವಿ/ಡ್ಯಾಶ್‌ಕ್ಯಾಮ್ ದೃಶ್ಯಗಳನ್ನೇ ಹೋಲುತ್ತದೆ. ನಿರ್ದೇಶಕ ಆದಿತ್ಯ ಧರ್…

Read More

ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!

ಗದಗ, ಮಾರ್ಚ್​ 23: ಬಡತನದ ಕಾರಣದಿಂದ ಹಲವಡೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳನ್ನು ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಾರೆ. ಓದಿ, ಪರೀಕ್ಷೆ ಬರೆದು ವಿದ್ಯಾವಂತರಾಗಬೇಕಾದ ಸಮಯದಲ್ಲಿ ಕುಟುಂಬಕ್ಕೆ ನೆರವಾಗಿ ಶಿಕ್ಷಣದಿಂದ (Education) ವಂಚಿತರಾಗುತ್ತಾರೆ. ಇದೇ ರೀತಿಯ ಘಟನೆ ಗದಗದಲ್ಲೂ ನಡೆದಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆಗೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ವಿದ್ಯಾರ್ಥಿನಿ ಜಿಲ್ಲೆಯ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದಲ್ಲಿ ಬಡತನದ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು…

Read More

PM Modi on Fertilizers: ಭಾರತದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನಿದೆ, ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ

ನವದೆಹಲಿ, ಮಾರ್ಚ್​ 23: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಎಲ್​ಪಿಜಿ, ಪೆಟ್ರೋಲ್ ಹಾಗೂ ರಸಗೊಬ್ಬರಗಳ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಆದರೆ ದೇಶದಲ್ಲಿ ರಸಗೊಬ್ಬರಗಳ ಸಾಕಷ್ಟು ಸಂಗ್ರಹವಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈತರು ಈಗ ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಜಾಗತಿಕ ಆರ್ಥಿಕತೆ ಮೇಲೆ ದುಷ್ಪರಿಣಾಮ ಯುದ್ಧವು ಇಡೀ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ…

Read More

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ

ಕಲಬುರ್ಗಿ, ಮಾರ್ಚ್​ 23: ಜಿಲ್ಲೆಯ ವಿಶ್ವವಿದ್ಯಾಲಯದ ಖಜಾನೆಗೆ ಕನ್ನ ಬಿದ್ದಿದ್ದು, ಸಿಬ್ಬಂದಿಗೆ ಸಂಬಳ ನೀಡುವ ಜವಾಬ್ದಾರಿ ಹೊತ್ತ ಅಕೌಂಟಂಟ್​ನಿಂದಲೇ ಈ ವಂಚನೆ (Fraud) ನಡೆದಿದೆ. ಆತ ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ಹಣ ವರ್ಗಾಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅನುಮಾನಕ್ಕೆ ಎಡೆಮಾಡಿಕೊಟ್ಟ ಕುಲಪತಿಗಳ ಹೇಳಿಕೆ! ಕಲಬುರ್ಗಿ ವಿವಿಯ ಎಲ್ಲಾ ಸಿಬ್ಬಂದಿಗೆ ಸಂಬಳ ಕೊಡಬೇಕಾದ ಅಕೌಂಟೆಂಟ್ ಶರಣು, ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದು…

Read More

PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್​ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ ತೈಲ ಬಿಕ್ಕಟ್ಟಿನ ಕುರಿತು ಮಾತನಾಡುತ್ತಾ, ತಮ್ಮ ಸರ್ಕಾರ ಈ ಬಿಕ್ಕಟ್ಟು ಎದುರಿಸಲು ಮಾಡುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಹಾರ್ಮುಜ್ ಸ್ಟ್ರೇಟ್​ಗೆ ತಡೆಯಾಗಿರುವುದರಿಂದ ತೈಲ ಮತ್ತು ಅನಿಲ ಪೂರೈಕೆಯನ್ನು ಸಾಧ್ಯವಿರುವೆಡೆಯೆಲ್ಲಾ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಯುದ್ಧ ನಡೆಯುತ್ತಿರುವ ಪ್ರದೇಶದಲ್ಲಿ ಭಾರತದ ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗ ಇದೆ. ಭಾರತಕ್ಕೆ…

Read More

ಬೆಂಗಳೂರು ರಸ್ತೆಯಲ್ಲಿ ಯುವಕರ ‘ಬಿಯರ್’ ದರ್ಬಾರ್: ಟ್ರಿಪಲ್ ರೈಡಿಂಗ್, ಮದ್ಯಪಾನ ಮಾಡಿದ ವಿಡಿಯೋ ವೈರಲ್

ಬೆಂಗಳೂರು, ಮಾ.23: ಸಿಲಿಕಾನ್ ಸಿಟಿಯ ಬಿಟಿಎಂ ರಸ್ತೆಯಲ್ಲಿ (BTM Road) ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದ ಯುವಕರ ಗುಂಪೊಂದು ಅತಿರೇಖಾದ ವರ್ತನೆ ತೋರಿದ್ದಾರೆ. ಸ್ಕೂಟರ್‌ನಲ್ಲಿ ಮೂವರು ಯುವಕರು ಹೆಲ್ಮೆಟ್ ಇಲ್ಲದೆ ‘ಟ್ರಿಪಲ್ ರೈಡಿಂಗ್’ ಮಾಡುತ್ತಿರುವುದಲ್ಲದೆ, ಚಲಿಸುವ ವಾಹನದಲ್ಲೇ ಬಿಯರ್ ಕುಡಿಯುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮೂವರು ಯುವಕರು ಯಾವುದೇ ಭಯವಿಲ್ಲದೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದು, ಹಿಂಬದಿ ಕುಳಿತಿದ್ದ ಯುವಕ ಬಿಯರ್ ಬಾಟಲಿ ಹಿಡಿದು ಮದ್ಯಪಾನ ಮಾಡುತ್ತಾ ವಿಕೃತವಾಗಿ ಕೈ…

Read More

ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

ದಾವಣಗೆರೆ, ಮಾರ್ಚ್ 23: ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ದಾವಣಗೆರೆ (Davanagere) ದಕ್ಷಿಣ ಉಪಚುನಾವಣೆಯಲ್ಲಿ ಬಂಡಾಯದ ಬಿಸಿ ಎದುರಿಸುತ್ತಿರುವ ಕಾಂಗ್ರೆಸ್ (Congress), ಇವುಗಳೆಲ್ಲದರ ನಡುವೆಯೂ ಸೋಮವಾರ ಒಗ್ಗಟ್ಟು ಪ್ರದರ್ಶನ ಮಾಡಿತು. ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು (Samarth Shamanur) ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವರು ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತ ನಮ್ಮ ಜತೆಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು…

Read More

PM Modi Speech Today Live: ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು

ನವದೆಹಲಿ, ಮಾರ್ಚ್​ 23: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತು ಆರಂಭಿಸಿದ್ದಾರೆ. ಇರಾನ್ ಜೊತೆ ನಡೆಯುತ್ತಿರುವ ಅಮೆರಿಕ-ಇಸ್ರೇಲ್ ಸಂಘರ್ಷದ ಪ್ರಮುಖ ಅಂಶಗಳು ಮತ್ತು ಈ ವಿಷಯದ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಮೋದಿ ವಿವರಣೆ ನೀಡಿದ್ದಾರೆ. ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಡುವೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ದೀರ್ಘ ಮತ್ತು ಅಲ್ಪಾವಧಿಯ ಕ್ರಮಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ಸಂಪುಟ ಭದ್ರತಾ ಸಮಿತಿಯ (ಸಿಸಿಎಸ್) ಸಭೆ ನಡೆಸಿದ ಒಂದು…

Read More