Headlines

nagaraj11081993

‘ಧುರಂಧರ್ 2’ ಚಿತ್ರದಲ್ಲಿ ಆದಿತ್ಯ ಧಾರ್​ ಮಾಡಿದ್ರು ದೊಡ್ಡ ತಪ್ಪು; ವೈರಲ್ ಆಯ್ತು ಪೋಸ್ಟ್

‘ಧುರಂಧರ್ 2’ ಸಿನಿಮಾನ ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ (Aditya Dhar) ನಿರ್ದೇಶನದ ಈ ಚಿತ್ರದಲ್ಲಿ ಸಣ್ಣ ಸಣ್ಣ ವಿಷಯಕ್ಕೂ ಆದಿತ್ಯಧಾರ್ ಅವರು ಸಾಕಷ್ಟು ಪ್ರಾಮುಖ್ಯತೆ ನೀಡಿದ್ದಾರೆ. ಇದು ಸಿನಿಮಾದಲ್ಲಿ ಸ್ಪಷ್ಟವಾಗಿದೆ. ಈ ಕಾರಣಕ್ಕೆ ಎಲ್ಲರೂ ಆದಿತ್ಯಧಾರ್ ಅವರನ್ನು ಹೊಗಳುತ್ತಿದ್ದಾರೆ. ಆದರೆ, ಈಗ ಅವರು ಮಾಡಿದ ತಪ್ಪೊಂದು ಎದ್ದು ಕಾಣಿಸಿದೆ. ಆದಿತ್ಯಧಾರ್ ಅವರು ಸಣ್ಣ ಸಣ್ಣ ವಿಷಯಗಳನ್ನೂ ಗಮನ ಇಟ್ಟು ಸಿನಿಮಾ ಮಾಡುತ್ತಾರೆ. ಇದೇ ಕಾರಣಕ್ಕೆ ‘ಪೀಕ್ ಡೀಟೇಲಿಂಗ್ ಆಫ್ ಆದಿತ್ಯಧಾರ್’…

Read More

World Meteorological Day 2026: ಹವಾಮಾನ ದಿನವನ್ನು ಆಚರಿಸುವುದೇಕೆ? ಏನಿದರ ಉದ್ದೇಶ ತಿಳಿಯಿರಿ

ಹವಾಮಾನ ವೈಪರಿತ್ಯಗಳು ನಿಸರ್ಗ ಸಹಜ ಪ್ರಕ್ರಿಯೆಯಾಗಿದ್ದು, ಹವಾಮಾನ (climate) ಬದಲಾವಣೆಯ ಕಾರಣದಿಂದಾಗಿ ಪ್ರಕೃತಿಯಲ್ಲಿ ಏನೆಲ್ಲಾ ನೈಸರ್ಗಿಕ ವಿಕೋಪಗಳು ಸಂಭವಿಸುತ್ತದೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಬದಲಾಗುವಂತಹ ಹವಾಮಾನ ಪರಿಸ್ಥಿತಿಗಳು ಮಾನವ ಜೀವನ, ಕೃಷಿ, ಆರೋಗ್ಯ ಮತ್ತು ಪರಿಸರದ ಮೇಲೆ ನೇರ ಪರಿಣಾಮವನ್ನು ಬೀರುತ್ತವೆ. ಹವಾಮಾನ ಬದಲಾವಣೆಯಿಂದ ಏನೆಲ್ಲಾ ಅಪಾಯಗಳು ಸಂಭವಿಸಬಹುದು ಎಂಬುದನ್ನು ಮುನ್ಸುಚಿಸಲು ಮತ್ತು ಸಾರ್ವಜನಿಕರು ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಕ್ತ ಮಾಹಿತಿಯನ್ನು ಹವಾಮಾನ ಶಾಸ್ತ್ರ, ಹವಾಮಾನ ಇಲಾಖೆ ಒದಗಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಹವಾಮಾನ…

Read More

ಅಡುಗೆ ಗ್ಯಾಸ್ ಸ್ಟಾಕ್ ಮಾಡುವ ಮುನ್ನ ಎಚ್ಚರ: ಇಷ್ಟು ದಿನದೊಳಗೆ ಬಳಸಿ ಮುಗಿಸಬೇಕು!

ಮನೆಯಲ್ಲಿ ಅಥವಾ ವಾಣಿಜ್ಯ ಬಳಕೆಗೆ ಅಡುಗೆ ಗ್ಯಾಸ್ (LPG) ಸಿಲಿಂಡರ್ ಅನ್ನು ಸಂಗ್ರಹಿಸಿಡುವಾಗ (Stock) ಅಥವಾ ಬಳಸುವಾಗ ಸುರಕ್ಷತೆಯ ದೃಷ್ಟಿಯಿಂದ ಕೆಲವು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಸಿಲಿಂಡರ್ ಎಷ್ಟು ದಿನಗಳ ಒಳಗೆ ಖಾಲಿಯಾಗಬೇಕು ಮತ್ತು ಅದರ ಮೇಲೆ ನಮೂದಿಸಿರುವ ‘ಎಕ್ಸ್‌ಪೈರಿ ಡೇಟ್’ (Expiry Date) ಅನ್ನು ಹೇಗೆ ಗುರುತಿಸಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ. ಪ್ರತಿ ಗ್ಯಾಸ್ ಸಿಲಿಂಡರ್‌ನ ಮೇಲ್ಭಾಗದ ಮೂರು ಕಬ್ಬಿಣದ ಪಟ್ಟಿಗಳಲ್ಲಿ ಒಂದರ ಒಳಭಾಗದಲ್ಲಿ ಇಂಗ್ಲಿಷ್ ಅಕ್ಷರ ಮತ್ತು ಅಂಕಿಗಳನ್ನು ಬರೆಯಲಾಗಿರುತ್ತದೆ (ಉದಾಹರಣೆಗೆ: A-26,…

Read More

ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

ಕೊಪ್ಪಳ,ಮಾರ್ಚ್​ 23: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸಂಗಟಿ ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು…

Read More

ಇದು ಎಂಜಿನಿಯರಿಂಗ್ ಲೋಕದ ಹೊಸ ಮೈಲಿಗಲ್ಲು ! ಮೇಲೆ ರೈಲುಗಳ ಸಂಚಾರ, ಕೆಳಗೆ ಜನರಿಗಾಗಿ ಅಂಡರ್‌ಪಾಸ್

ಬೆಂಗಳೂರು, ಮಾ.23: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಾಡಪ್ರಭು ಕೆಂಪೇಗೌಡ ಲೇಔಟ್ ವ್ಯಾಪ್ತಿಯಲ್ಲಿ ಅತ್ಯಂತ ಸವಾಲಿನ ಚಲ್ಲಘಟ್ಟ ರೈಲ್ವೆ ಅಂಡರ್‌ಬ್ರಿಡ್ಜ್ (RUB) ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬೆಂಗಳೂರು-ಮೈಸೂರು ರೈಲು ಹಳಿಗಳ ಕೆಳಗೆ, ರೈಲು ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಈ ಬೃಹತ್ ಸುರಂಗ ಮಾರ್ಗವನ್ನು ನಿರ್ಮಿಸಿರುವುದು ಎಂಜಿನಿಯರಿಂಗ್ ಲೋಕದ ಮೈಲಿಗಲ್ಲು ಎನ್ನಲಾಗಿದೆ. ಚಲಿಸುತ್ತಿರುವ ರೈಲುಗಳ ಕೆಳಗೆ ‘ಬಾಕ್ಸ್ ಪುಶಿಂಗ್’ (Box Pushing) ತಂತ್ರಜ್ಞಾನ ಬಳಸಿ ತಲಾ 1,200 ಮೆಟ್ರಿಕ್ ಟನ್ ತೂಕದ ಎಂಟು ಬೃಹತ್ ಕಾಂಕ್ರೀಟ್ ಬ್ಲಾಕ್‌ಗಳನ್ನು ಜೋಡಿಸಲಾಗಿದೆ….

Read More

ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ದಾವಣಗೆರೆ, ಮಾರ್ಚ್ 23: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್​​​ನಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವುದಕ್ಕೂ ಕಾರಣವಾಗುತ್ತಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಸಿಗದೇ ಇರುವುದರಿಂದ ಅಸಮಾಧಾನಗೊಂಡಿರುವ 12ನೇ ವಾರ್ಡ್‌ನ ಯುವಕರು, ‘ಕೈ’ ಮುಖಂಡ ಶಫೀಕ್ ಪಂಡಿತ್ ಅವರ ಶಿಷ್ಯರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್…

Read More

Corporate Laws Amendment Bill: ಇಂದು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ, ಮಾರ್ಚ್​ 23: ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು(ಮಾರ್ಚ್​23) ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನುಗಳು(ತಿದ್ದುಪಡಿ)ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಪಾವತಿಸಿದ ಬಂಡವಾಳ ಮತ್ತು ಮೀಸಲು ಮೇಲಿನ ಶೇ.25 ನಿಯಮವನ್ನು ಸಡಿಲಿಸುವ ಮೂಲಕ ಮಸೂದೆಯು ಕೆಲವು ಕಂಪನಿಗಳಿಗೆ ಪರಿಹಾರವನ್ನು ನೀಡುತ್ತದೆ. ಇದು ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ. ಹೊಸ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆಯಲ್ಲಿ ಕಂಪನಿಯ ಸಿಎಸ್‌ಆರ್ ಮಿತಿಯನ್ನು 5 ಕೋಟಿ ರೂ.ಗಳಿಂದ 10 ಕೋಟಿ…

Read More

ಬೀದಿ ನಾಯಿ ಹಾವಳಿಗೆ ಬೇಸತ್ತು ದೇವರ ಮೊರೆ! ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವನಿಗೆ ಪೂಜೆ-ಪು‌ನಸ್ಕಾರ

ಬೆಂಗಳೂರು, ಮಾರ್ಚ್​ 23: ನಗರದಲ್ಲಿ ಬೀದಿ ನಾಯಿಗಳ (Dogs) ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಇದರಿಂದಾಗಿ ರಸ್ತೆಯಲ್ಲಿ ಓಡಾಡುವುದೂ ಕಷ್ಟವಾಗಿದೆ. ಪುಟ್ಟ ಮಕ್ಕಳು, ವೃದ್ಧರಿಗೇನಾದರೂ ಅಪಾಯವಾದರೆ ಎಂಬ ಭಯದ ವಾತಾವರಣವಿರುವ ನಡುವೆಯೇ ನಗರದ ಅಪಾರ್ಟ್ಮೆಂಟ್​ವೊಂದರ ನಿವಾಸಿಗಳು ದೇವರ ಮೊರೆ ಹೋಗಿದ್ದು ಆಶ್ಚರ್ಯ ಮೂಡಿಸಿದೆ. ಬೀದಿ ನಾಯಿ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್ಮೆಂಟ್ ನಿವಾಸಿಗಳು ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಿವಾಸಿಗಳು ಕಾಲಭೈರವ ಮತ್ತು ದತ್ತಾತ್ರೇಯ ಸ್ವಾಮಿಗೆ ವಿಶೇಷ…

Read More

ರಕ್ಷಣಾ, ರೈಲ್ವೆ ವಲಯಕ್ಕೂ ತಟ್ಟಿದ ಯುದ್ಧದ ಬಿಸಿ: ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುವ ಆಟೋಮೊಬೈಲ್ ಇಂಡಸ್ಟ್ರಿ ಬಂದ್

ಬೆಂಗಳೂರು, ಮಾರ್ಚ್ 23: ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ (US-Israel-Iran War) ಪರಿಣಾಮ ಇದೀಗ ಕರ್ನಾಟಕ ರಾಜಧಾನಿ ಬೆಂಗಳೂರಿಗೂ (Bangalore) ತಟ್ಟಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಕಚ್ಚಾ ತೈಲ ಬೆಲೆ ಏರಿಕೆಯಷ್ಟೇ ಅಲ್ಲ, ನಗರದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮೇಲೂ ನೇರ ಪರಿಣಾಮ ಬೀಳುತ್ತಿದೆ. ಇದು ದೇಶದ ರಕ್ಷಣಾ ಕ್ಷೇತ್ರ ಮತ್ತು ರೈಲ್ವೆ ಇಲಾಖೆ ಮೇಲೂ ಪರಿಣಾಮ ಬೀರುತ್ತಿದೆ. ರಕ್ಷಣಾ ಇಲಾಖೆಯ ವಾಹನಗಳ ತಯಾರಿಕೆಗೆ ಹಾಗೂ ರೈಲ್ವೆ ಇಲಾಖೆಗೆ ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುತ್ತಿದ್ದ ಪೀಣ್ಯಾದಲ್ಲಿರುವ…

Read More

ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ‘ಧುರಂಧರ್ 2’ ಅಬ್ಬರದ ನಡುವೆಯೂ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಮೊದಲು ಏಪ್ರಿಲ್​​ನಲ್ಲಿ ‘ಲವ್ ಮಾಕ್ಟೇಲ್ 3’ ಸಿನಿಮಾ ರಿಲೀಸ್ ಮಾಡೋದಾಗಿ ಘೋಷಿಸಲಾಗಿತ್ತು. ಆದರೆ, ‘ಟಾಕ್ಸಿಕ್’ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡ ಬಳಿಕ ಆ ದಿನಾಂಕಕ್ಕೆ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ತರೋದಾಗಿ ಘೋಷಣೆ ಮಾಡಿದರು. ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ ಸಿನಿಮಾ ತೆರೆಗೆ ಬಂದಿದೆ. ಡಾರ್ಲಿಂಗ್ ಕೃಷ್ಣ ನಟನೆಯ ಈ ಸಿನಿಮಾ ಗಮನ…

Read More