All posts by nagaraj11081993

Martyrs Day 2026: ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನದ ಮಹತ್ವವೇನು ಗೊತ್ತಾ?

Martyrs Day 2026: ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನದ ಮಹತ್ವವೇನು ಗೊತ್ತಾ?

ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನವು (Martyrs’ Day) ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದೆ. ಮಾರ್ಚ್ 23, 1931 ರಂದು, ಬ್ರಿಟಿಷ್ ಸರ್ಕಾರವು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಲಾಹೋರ್ ಜೈಲಿನಲ್ಲಿ ಗಲ್ಲಿಗೇರಿಸಿತು. ಸಣ್ಣ ವಯಸ್ಸಿನಲ್ಲಿಯೇ  ಈ ಮೂವರು ಕ್ರಾಂತಿಕಾರಿಗಳು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ತಮ್ಮ ಧೈರ್ಯ ಮತ್ತು ದೇಶಭಕ್ತಿಯ ಮೂಲಕ, ಈ ಮೂವರು ಕ್ರಾಂತಿಕಾರಿಗಳು ದೇಶಾದ್ಯಂತ ಸ್ವಾತಂತ್ರ್ಯ ಹೋರಾಟದ ಹೊಸ ಚೈತನ್ಯವನ್ನು ಜಾಗೃತಗೊಳಿಸಿದರು. ಇವರ ಈ ತ್ಯಾಗ ಮತ್ತು ಬಲಿದಾನವನ್ನು ಹಾಗೂ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪುತ್ರರು, ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಲು ಮಾರ್ಚ್‌ 23 ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವೇನು ಎಂಬುದನ್ನು ತಿಳಿಯೋಣ ಬನ್ನಿ.

ಹುತಾತ್ಮರ ದಿನದ ಇತಿಹಾಸವೇನು?

ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಭಾರತೀಯ ಸ್ವಾತಂತ್ರ್ಯ ಹೋರಾಟದ ಪ್ರಮುಖ ಕ್ರಾಂತಿಕಾರಿಗಳಾಗಿದ್ದಾರೆ.  ಅವರು ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟವನ್ನು ನಡೆಸಿದ್ದಲ್ಲದೆ, ತಮ್ಮ ಆಲೋಚನೆಗಳ ಮೂಲಕ ದೇಶದ ಯುವಕರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕುವಂತೆ ಪ್ರೇರೇಪಿಸಿದರು. ಭಗತ್ ಸಿಂಗ್ ಸ್ವಾತಂತ್ರ್ಯವನ್ನು ತನ್ನ ಜೀವನದ ಗುರಿಯಾಗಿಸಿಕೊಂಡರು ಮತ್ತು ಚಿಕ್ಕ ವಯಸ್ಸಿನಲ್ಲಿಯೇ ಬ್ರಿಟಿಷರ ವಿರುದ್ಧ ಹಲವಾರು ಕ್ರಮಗಳನ್ನು ಕೈಗೊಂಡರು, ಅದು ಬ್ರಿಟಿಷ್ ಆಳ್ವಿಕೆಯ ಅಡಿಪಾಯವನ್ನು ಅಲುಗಾಡಿಸಿತು. ನಂತರ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ 1929 ರಲ್ಲಿ ಸೆಂಟ್ರಲ್‌ ಜೆಜಿಸ್ಲೇಟಿವ್‌ ಅಸೆಂಬ್ಲಿಯ ಮೇಲೆ ಬಾಂಬ್‌ ದಾಳಿ ಮಾಡಿದ ನಂತರ ಇವರನ್ನು ಜೈಲಿಗೆ ಕಳುಹಿಸಲಾಯಿತು. ಬಳಿಕ ಈ ಮೂವರು ಭಾರತ ಮಾತೆಯ ವೀರ ಪುತ್ರರಿಗೆ ಮರಣ ದಂಡಣೆಯನ್ನು ವಿಧಿಸಲಾಯಿತು ಮತ್ತು ಮಾರ್ಚ್‌ 23, 1931 ರಂದು ಈ ಮೂವರು ವೀರ ಹೋರಾಟಗಾರರನ್ನು ಗಲ್ಲಿಗೇರಿಸಲಾಯಿತು. ಗಲ್ಲಿಗೇರಿಸಿದಾಗ ಭಗತ್ ಸಿಂಗ್ ಮತ್ತು ಸುಖದೇವ್ ಕೇವಲ 23 ವರ್ಷ ವಯಸ್ಸಿನವರಾಗಿದ್ದರು,ರಾಜಗುರು ಅವರು ಕೇವಲ 22 ವರ್ಷದವರಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಇವರು ದೇಶಕ್ಕಾಗಿ ಮಾಡಿದ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲು ಪ್ರತಿವರ್ಷ ಮಾರ್ಚ್‌ 23 ರಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ನೀರನ್ನು ಮಿತವಾಗಿ ಬಳಸುವ ಮೂಲಕ ಜೀವಜಲವನ್ನು ಸಂರಕ್ಷಿಸೋಣ

ಹುತಾತ್ಮರ ದಿನದ ಮಹತ್ವವೇನು?

  • ಹುತಾತ್ಮರ ದಿನದ ಮಹತ್ವ ಕೇವಲ ಭಾರತ ಮಾತೆಯ ವೀರ ಪುತ್ರರನ್ನು ನೆನಪಿಸಿಕೊಳ್ಳುವುದಲ್ಲ, ಬದಲಾಗಿ ಅವರ ಆದರ್ಶಗಳು ಮತ್ತು ಕನಸುಗಳನ್ನು ನನಸಾಗಿಸಲು ನಮ್ಮನ್ನು ಪ್ರೇರೇಪಿಸುವುದೂ ಆಗಿದೆ.
  • ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರು ತಮ್ಮ ದೇಶಕ್ಕಾಗಿ ಮಾಡಿದ ತ್ಯಾಗಗಳು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯ ಮೂಲವಾಗಿದೆ. ಈ ದಿನವು ಸ್ವಾತಂತ್ರ್ಯವು ಎಷ್ಟು ದುಬಾರಿ ಬೆಲೆಗೆ ಸಿಕ್ಕಿತು ಎಂಬುದನ್ನು ನೆನಪಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು! ವಿಡಿಯೋ ವೈರಲ್

ಮೈಸೂರು, ಮಾರ್ಚ್ 23: ನಾಗರಹೊಳೆ ಅರಣ್ಯ ವ್ಯಾಪ್ತಿಯ ರಸ್ತೆಯಲ್ಲಿ ಕಾಡಾನೆ ಹಿಂಡೊಂದು ಶಿಸ್ತಿನಿಂದ ಗುಂಪಾಗಿ ರಸ್ತೆ ದಾಟಿದ ದೃಶ್ಯ ಈಗ ಎಲ್ಲರ ಗಮನ ಸೆಳೆದಿದೆ. ಯಾವುದೇ ಗದ್ದಲವಿಲ್ಲದೆ, ಯಾರಿಗೂ ತೊಂದರೆ ಮಾಡದೆ ಕಾಡಾನೆಗಳು ಶಿಸ್ತಿನಿಂದ ರಸ್ತೆ ದಾಟಿದ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಕಿರಣ್ ಮೆಟೊಯ್ ರೆಕಾರ್ಡ್ ಮಾಡಿದ್ದಾರೆ. ​ಆನೆಗಳ ಆಗಮನ ಕಂಡು ವಾಹನ ಸವಾರರು ಕೂಡ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲ್ಲಿಸಿ ಸುಮ್ಮನಾಗಿ, ಅವು ರಸ್ತೆ ದಾಟುವ ವರೆಗೆ ಮೌನವಾಗಿ ಕಾಯುತ್ತಿರುವುದು ವಿಡಿಯೋದಲ್ಲಿದೆ. ಅಲ್ಲದೆ,. ಸದ್ಯ ಕಾಡಾನೆಗಳು ಶಿಸ್ತಿನಿಂದ ರಸ್ತೆ ದಾಟುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗನ ಕೊಲ್ಲಲು ಸುಪಾರಿ ಕೊಟ್ಟಿದ್ದ ಮಹಿಳೆಯನ್ನೇ ಕೊಂದು ಹಣ ದೋಚಿದ್ದ ವ್ಯಕ್ತಿ ಅರೆಸ್ಟ್​

ರಾಯ್​ಪುರ್, ಮಾರ್ಚ್​ 23: ತಾನು ಬಿಟ್ಟ ಬಾಣ ತನಗೇ ಮುಳುವಾಯ್ತು, ಸ್ವಂತ ಮಗನನ್ನು ಕೊಲ್ಲಲು ಸುಪಾರಿಕೊಟ್ಟಿದ್ದ ಮಹಿಳೆಯನ್ನೇ ಕೊಲೆ(Murder) ಮಾಡಿ ಹಣ ದೋಚಿದ್ದ ಹಿಟ್​ಮ್ಯಾನ್​ ಅನ್ನು ಐದು ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯ್‌ಪುರದಲ್ಲಿ 2021 ರಲ್ಲಿ ನಡೆದ ಕೊಲೆ ಮತ್ತು ದರೋಡೆ ಪ್ರಕರಣವನ್ನು ಭೇದಿಸಿದ ಪೊಲೀಸರು ಆರೋಪಿ ಅಜಯ್ ಮಿಶ್ರಾ ಎಂಬಾತನನ್ನು ಅಹಮದಾಬಾದ್ ಅಪರಾಧ ವಿಭಾಗವು ನರೋಡಾ ಪ್ರದೇಶದಲ್ಲಿ ಬಂಧಿಸಿದ್ದಾರೆ.

ಶಕುಂತಲಾ ಯಾದವ್ ಮತ್ತು ಅವರ ಕಿರಿಯ ಮಗ ಅಮಿತ್ ಯಾದವ್, ತಮ್ಮ ಹಿರಿಯ ಮಗನನ್ನು ಕೊಲ್ಲಲು ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಮಿಶ್ರಾ ಅವರನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. 4 ಲಕ್ಷ ರೂ. ಒಪ್ಪಂದ ಮಾಡಿಕೊಳ್ಳಲಾಗಿತ್ತು, ಅದರಲ್ಲಿ 1 ಲಕ್ಷ ರೂ. ಮುಂಗಡವಾಗಿ ನೀಡಲಾಗಿತ್ತು.

ಆದರೆ, ಮಿಶ್ರಾ ಮಗನನ್ನು ಕೊಲೆ ಮಾಡಲಿಲ್ಲ. ಬದಲಾಗಿ, ಅವನು ಹಣದೊಂದಿಗೆ ತನ್ನ ಹಳ್ಳಿಗೆ ಓಡಿಹೋಗಿದ್ದ. ಶಕುಂತಲಾ ಮತ್ತು ಅಮಿತ್ ಅವನನ್ನು ಪತ್ತೆಹಚ್ಚಿ ತಮ್ಮ ಹಣವನ್ನು ಹಿಂತಿರುಗಿಸುವಂತೆ ಒತ್ತಾಯಿಸಿದಾಗ, ಅವನು ಅದನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದ.

ಮತ್ತಷ್ಟು ಓದಿ: ಪಾಳು ಮನೆಯಲ್ಲಿ ಅಪ್ರಾಪ್ತೆಯ ಭೀಕರ ಕೊಲೆ: ಭಾವಿ ಪತಿಯಿಂದಲೇ ನಡೀತು ಹತ್ಯೆ!; ಕಾರಣ ನಿಗೂಢ

ತಿಂಗಳುಗಳ ನಂತರ, ಮಿಶ್ರಾ ಹಿಂತಿರುಗಿದ್ದ ಆದರೆ ಹಣವನ್ನು ವಾಪಸ್ ಕೊಟ್ಟಿರಲಿಲ್ಲ. ಪೊಲೀಸರ ಪ್ರಕಾರ, ಮಿಶ್ರಾ ತನ್ನ ಸಹಚರ ಕೇತನ್ ತಿವಾರಿ ಜೊತೆ ರಾಯ್‌ಪುರದಲ್ಲಿರುವ ಶಕುಂತಲಾ ಇದ್ದ ಆಕೆಯ ಮನೆಗೆ ಹೋಗಿದ್ದ. ಆ ಮಹಿಳೆಯನ್ನೇ ಕೊಂದ.

ಮಹಿಳೆಯನ್ನು ಹಗ್ಗದಿಂದ ಕತ್ತು ಹಿಸುಕಿ ಕೊಂದು ಸುಮಾರು 10 ಲಕ್ಷ ರೂ. ನಗದು ಮತ್ತು ಸುಮಾರು 350-450 ಗ್ರಾಂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಕದ್ದ ಚಿನ್ನವನ್ನು ನಂತರ ಮಾರಾಟ ಮಾಡಿದ್ದ.

ಬಂಧನದಿಂದ ತಪ್ಪಿಸಿಕೊಳ್ಳಲು, ಮಿಶ್ರಾ ತನ್ನ ಮೊಬೈಲ್ ಫೋನ್ ಬಿಟ್ಟು, ಪ್ಯಾನ್ ಮತ್ತು ಆಧಾರ್‌ನಂತಹ ಗುರುತಿನ ದಾಖಲೆಗಳನ್ನು ಬಳಸುವುದನ್ನು ತಪ್ಪಿಸಿದ್ದ, 2022 ರಲ್ಲಿ ಅಹಮದಾಬಾದ್‌ನ ನರೋಡಾ ಪ್ರದೇಶಕ್ಕೆ ಹೋಗುವ ಮೊದಲು ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತಲೇ ಇದ್ದ, ಆದರೆ ಅದು ಯಾರ ಗಮನಕ್ಕೂ ಬಂದಿರಲಿಲ್ಲ.

ವರ್ಷಗಳ ತನಿಖೆ ಮತ್ತು ಹೊಸ ಮಾಹಿತಿಗಳ ನಂತರ, ಅಹಮದಾಬಾದ್ ಅಪರಾಧ ವಿಭಾಗವು ಆತನನ್ನು ಪತ್ತೆಹಚ್ಚಿ ಬಂಧಿಸಿದೆ, ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

​​

Source link

‘ಧುರಂಧರ್ 2’ ಚಿತ್ರದಲ್ಲಿ ಆದಿತ್ಯ ಧಾರ್​ ಮಾಡಿದ್ರು ದೊಡ್ಡ ತಪ್ಪು; ವೈರಲ್ ಆಯ್ತು ಪೋಸ್ಟ್

‘ಧುರಂಧರ್ 2’ ಸಿನಿಮಾನ ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ (Aditya Dhar) ನಿರ್ದೇಶನದ ಈ ಚಿತ್ರದಲ್ಲಿ ಸಣ್ಣ ಸಣ್ಣ ವಿಷಯಕ್ಕೂ ಆದಿತ್ಯಧಾರ್ ಅವರು ಸಾಕಷ್ಟು ಪ್ರಾಮುಖ್ಯತೆ ನೀಡಿದ್ದಾರೆ. ಇದು ಸಿನಿಮಾದಲ್ಲಿ ಸ್ಪಷ್ಟವಾಗಿದೆ. ಈ ಕಾರಣಕ್ಕೆ ಎಲ್ಲರೂ ಆದಿತ್ಯಧಾರ್ ಅವರನ್ನು ಹೊಗಳುತ್ತಿದ್ದಾರೆ. ಆದರೆ, ಈಗ ಅವರು ಮಾಡಿದ ತಪ್ಪೊಂದು ಎದ್ದು ಕಾಣಿಸಿದೆ.

ಆದಿತ್ಯಧಾರ್ ಅವರು ಸಣ್ಣ ಸಣ್ಣ ವಿಷಯಗಳನ್ನೂ ಗಮನ ಇಟ್ಟು ಸಿನಿಮಾ ಮಾಡುತ್ತಾರೆ. ಇದೇ ಕಾರಣಕ್ಕೆ ‘ಪೀಕ್ ಡೀಟೇಲಿಂಗ್ ಆಫ್ ಆದಿತ್ಯಧಾರ್’ ಎಂಬು ಚರ್ಚೆ ಆಗುತ್ತಿದೆ. ಅಂದರೆ ಆದಿತ್ಯ ಧಾರ್ ಅವರು ಸಣ್ಣ ಸಣ್ಣ ವಿಷಯವನ್ನೂ ಹೆಚ್ಚು ಗಮನದಲ್ಲಿಟ್ಟು ಸಿನಿಮಾ ಮಾಡುತ್ತಾರೆ ಎಂಬುದು ಇದರ ಅರ್ಥ ಆಗಿತ್ತು. ಆದಾಗ್ಯೂ ‘ಧುರಂಧರ್ 2’ ಚಿತ್ರದಲ್ಲಿ ಒಂದು ದೊಡ್ಡ ಎಡವಟ್ಟು ನಡೆದು ಹೋಗಿದೆ. ಈ ವಿಡಿಯೋನ ಸಿನಿಮಾ ನೋಡಿದವರು ವೈರಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕ್ರಿಕೆಟರ್ ಆಗಬೇಕಿದ್ದ ‘ಧುರಂಧರ್’ ನಿರ್ದೇಶಕ ಆದಿತ್ಯ ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ?

ಹಮ್ಜಾ ಹಾಗೂ ಅವನ ಗೆಳೆಯನ ಮಧ್ಯೆ ಕಿತ್ತಾಟ ನಡೆಯೋ ದೃಶ್ಯ ಇದೆ. ಈ ದೃಶ್ಯ ಪ್ರಸಾರ ಕಾಣುವಾಗ ಕನ್ನಡಿಯಲ್ಲಿ ಕ್ಯಾಮೆರಾಮೆನ್​ ಕೂಡ ಕಾಣುತ್ತಾರೆ. ಇದನ್ನು ಆದಿತ್ಯ ಧಾರ್ ನೋಡದೇ ಹೇಗೆ ಮಿಸ್ ಮಾಡಿದರು ಎನ್ನುವ ಪ್ರಶ್ನೆಯನ್ನು ಅನೇಕರು ಕೇಳುತ್ತಿದ್​ದಾರೆ. ಇನ್ನೂ ಕೆಲವರು ಆದಿತ್ಯ ಅವರನ್ನು ಬೆಂಬಲಿಸಿದ್ದಾರೆ.

‘ಇದು ಆದಿತ್ಯ ಧಾರ್ ಅವರ ಪೀಕ್ ಡೀಟೇಲಿಂಗ್. ಅವರ ತಂಡ ಬಹುಶಃ ಆ್ಯಕ್ಷನ್ ಮೇಲೆ ಗಮನ ಹರಿಸಿತ್ತು ಎನ್ನಲಾಗಿದೆ’ ಎಂದು ಅವರು ಹೇಳಿದ್ದಾರೆ. ಇನ್ನೂ ಕೆಲವರು ಕ್ರಿಸ್ಟೋಫರ್ ನೋಲನ್ ಕೂಡ ಇದೇ ತಪ್ಪು ಮಾಡಿದ್ದರು ಎಂದಿದ್ದರು. ‘ಆದಿತ್ಯ ಧಾರ ಕೂಡ ಮನುಷ್ಯ. ಅವರಿಂದಲೂ ತಪ್ಪಾಗುತ್ತದೆ’ ಎಂದು ಆದಿತ್ಯ ಧಾರ್ ಪರ ಬ್ಯಾಟ್ ಬೀಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

World Meteorological Day 2026: ಹವಾಮಾನ ದಿನವನ್ನು ಆಚರಿಸುವುದೇಕೆ? ಏನಿದರ ಉದ್ದೇಶ ತಿಳಿಯಿರಿ

ಹವಾಮಾನ ವೈಪರಿತ್ಯಗಳು ನಿಸರ್ಗ ಸಹಜ ಪ್ರಕ್ರಿಯೆಯಾಗಿದ್ದು, ಹವಾಮಾನ (climate) ಬದಲಾವಣೆಯ ಕಾರಣದಿಂದಾಗಿ ಪ್ರಕೃತಿಯಲ್ಲಿ ಏನೆಲ್ಲಾ ನೈಸರ್ಗಿಕ ವಿಕೋಪಗಳು ಸಂಭವಿಸುತ್ತದೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಬದಲಾಗುವಂತಹ ಹವಾಮಾನ ಪರಿಸ್ಥಿತಿಗಳು ಮಾನವ ಜೀವನ, ಕೃಷಿ, ಆರೋಗ್ಯ ಮತ್ತು ಪರಿಸರದ ಮೇಲೆ ನೇರ ಪರಿಣಾಮವನ್ನು ಬೀರುತ್ತವೆ. ಹವಾಮಾನ ಬದಲಾವಣೆಯಿಂದ ಏನೆಲ್ಲಾ ಅಪಾಯಗಳು ಸಂಭವಿಸಬಹುದು ಎಂಬುದನ್ನು ಮುನ್ಸುಚಿಸಲು ಮತ್ತು ಸಾರ್ವಜನಿಕರು ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಕ್ತ ಮಾಹಿತಿಯನ್ನು ಹವಾಮಾನ ಶಾಸ್ತ್ರ, ಹವಾಮಾನ ಇಲಾಖೆ ಒದಗಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಹವಾಮಾನ ಸಂಸ್ಥೆಗಳ ಸೇವೆಗಳನ್ನು ಶ್ಲಾಘಿಸಲು ಹಾಗೂ ಪರಿಸರ ಪರಿಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್‌ 23 ರಂದು ವಿಶ್ವ ಹವಾಮಾನ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.

ವಿಶ್ವ ಹವಾಮಾನ ದಿನದ ಇತಿಹಾಸವೇನು?

ವಿಶ್ವ ಹವಾಮಾನ ಸಂಸ್ಥೆ (WMO) ಸ್ಥಾಪನೆಯ ಸ್ಮರಣಾರ್ಥವಾಗಿ ವಿಶ್ವ ಹವಾಮಾನ ದಿನವನ್ನು ಆಚರಿಸಲಾಗುತ್ತದೆ. ಈ ಸಂಸ್ಥೆಯನ್ನು ಮಾರ್ಚ್ 23, 1950 ರಂದು ಸ್ಥಾಪಿಸಲಾಯಿತು ಮತ್ತು 1961 ರಿಂದ ಈ ಸಂಸ್ಥೆಯ ಸ್ಥಾಪನೆಯ ಸ್ಮರಣಾರ್ಥವಾಗಿ ಪ್ರತಿವರ್ಷ ವಿಶ್ವ ಹವಾಮಾನ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ಜನರ ಯೋಗಕ್ಷೇಮ, ಸುರಕ್ಷತೆಗೆ ಹವಾಮಾನ ಸಂಸ್ಥೆಗಳು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತಿದೆ.

ವಿಶ್ವ ಹವಾಮಾನ ಸಂಸ್ಥೆ (WMO):

WMO ಹವಾಮಾನ, ಮತ್ತು ಜಲ ಸಂಪನ್ಮೂಲಗಳಿಗೆ ಸಂಬಂಧಿಸಿದ ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಇದರ ಪ್ರಧಾನ ಕಚೇರಿ ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿದೆ.  WMO 1951 ರಲ್ಲಿ ವಿಶ್ವಸಂಸ್ಥೆಯ (UN) ವಿಶೇಷ ಸಂಸ್ಥೆಯಾಯಿತು.  ಇದು ಹವಾಮಾನ, ಮತ್ತು ನೀರಿಗೆ ಸಂಬಂಧಿಸಿದ ಜಾಗತಿಕ ದತ್ತಾಂಶ, ಸಂಶೋಧನೆ ಮತ್ತು ಸಹಕಾರವನ್ನು ಉತ್ತೇಜಿಸುತ್ತದೆ. ಅಲ್ಲದೆ ದೇಶಗಳು ಹವಾಮಾನ ಮಾಹಿತಿಯನ್ನು ಹಂಚಿಕೊಳ್ಳಲು ಮತ್ತು ನೈಸರ್ಗಿಕ ವಿಕೋಪಗಳಿಗೆ ಪ್ರತಿಕ್ರಿಯಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ನೀರನ್ನು ಮಿತವಾಗಿ ಬಳಸುವ ಮೂಲಕ ಜೀವಜಲವನ್ನು ಸಂರಕ್ಷಿಸೋಣ

ವಿಶ್ವ ಹವಾಮಾನ ದಿನದ ಮಹತ್ವವೇನು?

  • ಈ ದಿನವು ಹವಾಮಾನ ಮುನ್ಸೂಚನೆಯ ಮಹತ್ವವನ್ನು ಎತ್ತಿ ತೋರಿಸುವುದಲ್ಲದೆ, ಹವಾಮಾನ ಬದಲಾವಣೆ, ವಿಪತ್ತು ನಿರ್ವಹಣೆ ಮತ್ತು ವೈಜ್ಞಾನಿಕ ಸಂಶೋಧನೆಯ ಬಗ್ಗೆ ಜಾಗೃತಿ ಮೂಡಿಸುತ್ತದೆ.
  • ವಿಶ್ವ ಹವಾಮಾನ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಹವಾಮಾನಶಾಸ್ತ್ರ ಮತ್ತು ಹವಾಮಾನ ಸೇವೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು.
  • ಪರಿಸರ ಪರಿಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವು ಮುಖ್ಯವಾಗಿದೆ. ಸರಿಯಾದ ಸಮಯದಲ್ಲಿ ಮುನ್ನೆಚ್ಚರಿಕೆಗಳು ಮತ್ತು ಕ್ರಮಗಳನ್ನು ತೆಗೆದುಕೊಂಡರೆ, ಭೂಮಿಯ ಮೇಲಿನ ಅನೇಕ ಜೀವಗಳನ್ನು ಉಳಿಸಬಹುದು ಎಂಬುದನ್ನು ಈ ದಿನ ನೆನಪಿಸುತ್ತದೆ.

ಹವಾಮಾನ ಸಂಸ್ಥೆಗಳ ಮಹತ್ವವೇನು?

ವಿಪತ್ತು ನಿರ್ವಹಣೆಯಲ್ಲಿ ಸಹಾಯ: ಹವಾಮಾನ ಸಂಸ್ಥೆಗಳು ನೀಡುವ ಮುನ್ಸೂಚನೆಯು ಸರ್ಕಾರಗಳು ಮತ್ತು ಸಂಸ್ಥೆಗಳು ಸಮಯಕ್ಕೆ ಸರಿಯಾಗಿ ಸಿದ್ಧರಾಗಲು ಅನುವು ಮಾಡಿಕೊಡುತ್ತದೆ.

ಸಾರ್ವಜನಿಕ ಸುರಕ್ಷತೆ: ಚಂಡಮಾರುತ, ಪ್ರವಾಹ ಅಥವಾ ಶಾಖದ ಅಲೆಯಂತಹ ಸಂದರ್ಭಗಳಲ್ಲಿ ಜನರಿಗೆ ಮುಂಚಿತವಾಗಿ ಎಚ್ಚರಿಕೆ ನೀಡುತ್ತದೆ.

ಆರ್ಥಿಕ ಸ್ಥಿರತೆ: ಕೃಷಿ, ವಾಯುಯಾನ ಮತ್ತು ಕಡಲ ಉದ್ಯಮದಂತಹ ವಲಯಗಳು ಹವಾಮಾನವನ್ನು ಅವಲಂಬಿಸಿವೆ. ನಿಖರವಾದ ಮಾಹಿತಿಯು ನಷ್ಟವನ್ನು ಕಡಿಮೆ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಡುಗೆ ಗ್ಯಾಸ್ ಸ್ಟಾಕ್ ಮಾಡುವ ಮುನ್ನ ಎಚ್ಚರ: ಇಷ್ಟು ದಿನದೊಳಗೆ ಬಳಸಿ ಮುಗಿಸಬೇಕು!

ಮನೆಯಲ್ಲಿ ಅಥವಾ ವಾಣಿಜ್ಯ ಬಳಕೆಗೆ ಅಡುಗೆ ಗ್ಯಾಸ್ (LPG) ಸಿಲಿಂಡರ್ ಅನ್ನು ಸಂಗ್ರಹಿಸಿಡುವಾಗ (Stock) ಅಥವಾ ಬಳಸುವಾಗ ಸುರಕ್ಷತೆಯ ದೃಷ್ಟಿಯಿಂದ ಕೆಲವು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಸಿಲಿಂಡರ್ ಎಷ್ಟು ದಿನಗಳ ಒಳಗೆ ಖಾಲಿಯಾಗಬೇಕು ಮತ್ತು ಅದರ ಮೇಲೆ ನಮೂದಿಸಿರುವ ‘ಎಕ್ಸ್‌ಪೈರಿ ಡೇಟ್’ (Expiry Date) ಅನ್ನು ಹೇಗೆ ಗುರುತಿಸಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.

ಪ್ರತಿ ಗ್ಯಾಸ್ ಸಿಲಿಂಡರ್‌ನ ಮೇಲ್ಭಾಗದ ಮೂರು ಕಬ್ಬಿಣದ ಪಟ್ಟಿಗಳಲ್ಲಿ ಒಂದರ ಒಳಭಾಗದಲ್ಲಿ ಇಂಗ್ಲಿಷ್ ಅಕ್ಷರ ಮತ್ತು ಅಂಕಿಗಳನ್ನು ಬರೆಯಲಾಗಿರುತ್ತದೆ (ಉದಾಹರಣೆಗೆ: A-26, B-27, C-28, D-29). ಇದು ಸಿಲಿಂಡರ್‌ನ ಸುರಕ್ಷತಾ ಪರೀಕ್ಷೆಯ ಅವಧಿಯನ್ನು ಸೂಚಿಸುತ್ತದೆ.

A: ಜನವರಿಯಿಂದ ಮಾರ್ಚ್

B: ಏಪ್ರಿಲ್‌ನಿಂದ ಜೂನ್

C: ಜುಲೈನಿಂದ ಸೆಪ್ಟೆಂಬರ್

D: ಅಕ್ಟೋಬರ್‌ನಿಂದ ಡಿಸೆಂಬರ್

ಅಂಕಿಗಳು: ಇದು ವರ್ಷವನ್ನು ಸೂಚಿಸುತ್ತದೆ (ಉದಾ: 26 ಎಂದರೆ 2026)

ನಿಮ್ಮ ಸಿಲಿಂಡರ್ ಮೇಲೆ A-26 ಎಂದಿದ್ದರೆ, ಆ ಸಿಲಿಂಡರ್ ಅನ್ನು 2026ರ ಮಾರ್ಚ್ ತಿಂಗಳ ಒಳಗೆ ಪರೀಕ್ಷೆಗೆ ಒಳಪಡಿಸಬೇಕು ಎಂದರ್ಥ. ಆ ದಿನಾಂಕ ಮುಗಿದ ಬಳಿಕ ಆ ಸಿಲಿಂಡರ್ ಬಳಸುವುದು ಅಪಾಯಕಾರಿ.

ಇದನ್ನೂ ಓದಿ: ಎಸಿಯಿಂದ ಹೊರಬಂದ ತಕ್ಷಣ ತಲೆನೋವು, ಸುಸ್ತಾದಂತೆ ಅನಿಸುವುದಕ್ಕೆ ಕಾರಣವೇನು?

ಸಿಲಿಂಡರ್ ಸ್ಟಾಕ್ ಮಾಡುವಾಗ ಪಾಲಿಸಬೇಕಾದ ನಿಯಮಗಳು:

ಸ್ಥಳದ ಆಯ್ಕೆ: ಸಿಲಿಂಡರ್ ಅನ್ನು ಯಾವಾಗಲೂ ಗಾಳಿಯಾಡುವ ಜಾಗದಲ್ಲಿ ಇಡಬೇಕು. ಮುಚ್ಚಿದ ಕಪಾಟು ಅಥವಾ ನೆಲಮಾಳಿಗೆಯಲ್ಲಿ ಇಡಬೇಡಿ.

ನೆಟ್ಟಗೆ ಇರಿಸಿ: ಸಿಲಿಂಡರ್ ಅನ್ನು ಎಂದಿಗೂ ಮಲಗಿಸಿ ಇಡಬಾರದು. ಯಾವಾಗಲೂ ಲಂಬವಾಗಿ ನಿಲ್ಲಿಸಿರಬೇಕು.

ಶಾಖದಿಂದ ದೂರವಿಡಿ: ಸಿಲಿಂಡರ್ ಅನ್ನು ಒಲೆ, ಎಲೆಕ್ಟ್ರಿಕಲ್ ಸ್ವಿಚ್ ಬೋರ್ಡ್ ಅಥವಾ ಯಾವುದೇ ಶಾಖದ ಮೂಲದಿಂದ ಕನಿಷ್ಠ 1 ಮೀಟರ್ ದೂರದಲ್ಲಿ ಇರಿಸಿ.

ಕ್ಯಾಪ್ ಪರಿಶೀಲಿಸಿ: ಸ್ಟಾಕ್ ಮಾಡಿರುವ ಸಿಲಿಂಡರ್‌ನ ಸುರಕ್ಷತಾ ಕ್ಯಾಪ್ ಸರಿಯಾಗಿ ಅಳವಡಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ.

ಗ್ಯಾಸ್ ಸೋರಿಕೆ ಪತ್ತೆ ಮಾಡುವುದು ಹೇಗೆ?

ತಕ್ಷಣವೇ ರೆಗ್ಯುಲೇಟರ್ ಆಫ್ ಮಾಡಿ.

ಮನೆಯ ಕಿಟಕಿ ಮತ್ತು ಬಾಗಿಲುಗಳನ್ನು ತೆರೆಯಿರಿ.

ಯಾವುದೇ ಎಲೆಕ್ಟ್ರಿಕ್ ಸ್ವಿಚ್ ಅಥವಾ ಬೆಂಕಿಕಡ್ಡಿ ಹಚ್ಚಬೇಡಿ.

ಸಿಲಿಂಡರ್ ಮೇಲೆ ಸೇಫ್ಟಿ ಕ್ಯಾಪ್ ಹಾಕಿ ಮತ್ತು ತೆರೆದ ಜಾಗಕ್ಕೆ ಸ್ಥಳಾಂತರಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

 

Source link

ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

ಕೊಪ್ಪಳ,ಮಾರ್ಚ್​ 23: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸಂಗಟಿ

ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದನ್ನೂ ಓದಿ ಡಿಕೆ ಶಿವಕುಮಾರ್​​​​ನ್ನ ಸಿಎಂ ಮಾಡಿ ಎಂದ ಸ್ವಾಮೀಜಿಗಳಿಗೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ: ಪ್ರಣವಾನಂದಶ್ರೀ

ಮೂಲತಃ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದ ನಿವಾಸಿಯಾಗಿದ್ದ ಕರಿಯಣ್ಣ ಸಂಗಟಿ ಅವರ ನಿಧನಕ್ಕೆ ರಾಜಕೀಯ ವಲಯದಲ್ಲಿ ಶೋಕ ವ್ಯಕ್ತವಾಗಿದೆ. ಅವರ ಅಗಲಿಕೆಯಿಂದ ಜಿಲ್ಲೆಯಲ್ಲಿ ಅಪಾರ ನಷ್ಟ ಉಂಟಾಗಿದೆ ಎಂದು ಹಲವರು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇದು ಎಂಜಿನಿಯರಿಂಗ್ ಲೋಕದ ಹೊಸ ಮೈಲಿಗಲ್ಲು ! ಮೇಲೆ ರೈಲುಗಳ ಸಂಚಾರ, ಕೆಳಗೆ ಜನರಿಗಾಗಿ ಅಂಡರ್‌ಪಾಸ್

ಬೆಂಗಳೂರು, ಮಾ.23: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಾಡಪ್ರಭು ಕೆಂಪೇಗೌಡ ಲೇಔಟ್ ವ್ಯಾಪ್ತಿಯಲ್ಲಿ ಅತ್ಯಂತ ಸವಾಲಿನ ಚಲ್ಲಘಟ್ಟ ರೈಲ್ವೆ ಅಂಡರ್‌ಬ್ರಿಡ್ಜ್ (RUB) ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬೆಂಗಳೂರು-ಮೈಸೂರು ರೈಲು ಹಳಿಗಳ ಕೆಳಗೆ, ರೈಲು ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಈ ಬೃಹತ್ ಸುರಂಗ ಮಾರ್ಗವನ್ನು ನಿರ್ಮಿಸಿರುವುದು ಎಂಜಿನಿಯರಿಂಗ್ ಲೋಕದ ಮೈಲಿಗಲ್ಲು ಎನ್ನಲಾಗಿದೆ. ಚಲಿಸುತ್ತಿರುವ ರೈಲುಗಳ ಕೆಳಗೆ ‘ಬಾಕ್ಸ್ ಪುಶಿಂಗ್’ (Box Pushing) ತಂತ್ರಜ್ಞಾನ ಬಳಸಿ ತಲಾ 1,200 ಮೆಟ್ರಿಕ್ ಟನ್ ತೂಕದ ಎಂಟು ಬೃಹತ್ ಕಾಂಕ್ರೀಟ್ ಬ್ಲಾಕ್‌ಗಳನ್ನು ಜೋಡಿಸಲಾಗಿದೆ.

ಅವಧಿಗೂ ಮುನ್ನವೇ ಈ ಯೋಜನೆಯನ್ನು ಪೂರ್ಣಗೊಳಿಸಲಾಗಿದೆ. ಸಾಮಾನ್ಯವಾಗಿ ಆರು ತಿಂಗಳು ಬೇಕಾಗುವ ಇಂತಹ ಕಾಮಗಾರಿಯನ್ನು ನೈಋತ್ಯ ರೈಲ್ವೆಯೊಂದಿಗೆ ಸಮನ್ವಯ ಸಾಧಿಸಿ ಕೇವಲ ಮೂರೇ ತಿಂಗಳಲ್ಲಿ ಪೂರ್ಣಗೊಳಿಸಲಾಗಿದೆ. ಈ 11 ಕಿಲೋಮೀಟರ್ ಉದ್ದದ ರಸ್ತೆಯು ಒಟ್ಟು 10 ಲೇನ್‌ಗಳನ್ನು ಹೊಂದಿರಲಿದೆ (6 ಹೈಸ್ಪೀಡ್ ಲೇನ್ ಮತ್ತು 4 ಸರ್ವಿಸ್ ರಸ್ತೆ). ಇದು ಮಾಗಡಿ ರಸ್ತೆಯನ್ನು ನೇರವಾಗಿ ಬೆಂಗಳೂರು-ಮೈಸೂರು ಹೆದ್ದಾರಿಗೆ ಸಂಪರ್ಕಿಸಲಿದೆ.

ಸಾರ್ವಜನಿಕರ ಮನವಿಯಂತೆ ಈ ಮಾರ್ಗದಲ್ಲಿ ಸೈಕಲ್ ಟ್ರ್ಯಾಕ್ ಮತ್ತು ರಸ್ತೆಯ ಎರಡೂ ಬದಿಗಳಲ್ಲಿ ಹೂವು ಹಾಗೂ ಹಣ್ಣಿನ ಮರಗಳನ್ನು ನೆಟ್ಟು ಹಸಿರು ಹೊದಿಕೆ ನಿರ್ಮಿಸಲಾಗುತ್ತಿದೆ. ಏಪ್ರಿಲ್ 2026ರ ವೇಳೆಗೆ ಈ ರಸ್ತೆ ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದ್ದು, ಕೆಂಚನಪುರ ಮತ್ತು ಚಲ್ಲಘಟ್ಟ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ದಟ್ಟಣೆ ಗಣನೀಯವಾಗಿ ಇಳಿಕೆಯಾಗಲಿದೆ.

ಇದನ್ನೂ ಓದಿ: ನನ್ನ ಜೀವನದ ತಪ್ಪು ನಿರ್ಧಾರ ಇದು; ಬಸವನಗುಡಿಯಿಂದ ಬೆಳ್ಳಂದೂರಿಗೆ ಸ್ಥಳಾಂತರಗೊಂಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ನಿವಾಸಿ

ಭವಿಷ್ಯದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುತ್ತದೆ

ಹೊಸೂರು ರಸ್ತೆಯನ್ನು ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಂಬರುವ ಪೆರಿಫೆರಲ್ ರಿಂಗ್ ರಸ್ತೆಯ ಎರಡನೇ ಹಂತಕ್ಕೆ ಮೇಜರ್ ಆರ್ಟೀರಿಯಲ್ ರಸ್ತೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಭವಿಷ್ಯದಲ್ಲಿ ಸಂಚಾರ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು, ಅಧಿಕಾರಿಗಳು ಸಂಚಾರ ಪೊಲೀಸರೊಂದಿಗೆ ಸೇರಿ ಚಲ್ಲಘಟ್ಟ ಜಂಕ್ಷನ್ ಅನ್ನು ಸುಧಾರಿತ ಸಿಗ್ನಲಿಂಗ್ ಮತ್ತು ಸಂಯೋಜಿತ ಸೇವಾ ರಸ್ತೆಗಳೊಂದಿಗೆ ವಿನ್ಯಾಸಗೊಳಿಸಲು ಕೆಲಸ ಮಾಡುತ್ತಿದ್ದಾರೆ. ಸರ್ವಿಸ್​​ ರಸ್ತೆಗಳು ಇನ್ನೂ ಡಾಂಬರು ಹಾಕುವ ಹಂತದಲ್ಲಿದ್ದರೂ, ಯೋಜನೆಯು ಏಪ್ರಿಲ್ ಗಡುವನ್ನು ಪೂರೈಸುವುದಕ್ಕಾಗಿ ಸರ್ಕಾರವು ಈಗಾಗಲೇ ನಾಲ್ಕು ಹೆಚ್ಚುವರಿ ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅನುಮೋದನೆ ನೀಡಿದೆ. ಒಮ್ಮೆ ಈ ಯೋಜನೆ ಪೂರ್ಣಗೊಂಡ ನಂತರ, ಈ ರಸ್ತೆಯು ಸಾವಿರಾರು ದೈನಂದಿನ ವಾಹನ ಚಾಲಕರಿಗೆ ಸುಗಮ, ಅತಿ ವೇಗದ ಬೈಪಾಸ್ ಅನ್ನು ಒದಗಿಸುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಆಡಿ

 

Source link

ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ದಾವಣಗೆರೆ, ಮಾರ್ಚ್ 23: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್​​​ನಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವುದಕ್ಕೂ ಕಾರಣವಾಗುತ್ತಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಸಿಗದೇ ಇರುವುದರಿಂದ ಅಸಮಾಧಾನಗೊಂಡಿರುವ 12ನೇ ವಾರ್ಡ್‌ನ ಯುವಕರು, ‘ಕೈ’ ಮುಖಂಡ ಶಫೀಕ್ ಪಂಡಿತ್ ಅವರ ಶಿಷ್ಯರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Corporate Laws Amendment Bill: ಇಂದು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ, ಮಾರ್ಚ್​ 23: ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು(ಮಾರ್ಚ್​23) ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನುಗಳು(ತಿದ್ದುಪಡಿ)ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಪಾವತಿಸಿದ ಬಂಡವಾಳ ಮತ್ತು ಮೀಸಲು ಮೇಲಿನ ಶೇ.25 ನಿಯಮವನ್ನು ಸಡಿಲಿಸುವ ಮೂಲಕ ಮಸೂದೆಯು ಕೆಲವು ಕಂಪನಿಗಳಿಗೆ ಪರಿಹಾರವನ್ನು ನೀಡುತ್ತದೆ. ಇದು ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ. ಹೊಸ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆಯಲ್ಲಿ ಕಂಪನಿಯ ಸಿಎಸ್‌ಆರ್ ಮಿತಿಯನ್ನು 5 ಕೋಟಿ ರೂ.ಗಳಿಂದ 10 ಕೋಟಿ ರೂ.ಗಳಿಗೆ ಹೆಚ್ಚಿಸುವ ಯೋಜನೆಯನ್ನು ಮಾಡಲಾಗಿದೆ.

ಇನ್ನು ಮುಂದೆ ಪ್ರತಿ ವರ್ಷ ಭೌತಿಕ ವಾರ್ಷಿಕ ಮಹಾಸಭೆಗಳು ಅಗತ್ಯವಿಲ್ಲ.ಕಂಪನಿಗಳು ಮೂರು ವರ್ಷಗಳಿಗೊಮ್ಮೆ ಭೌತಿಕ ವಾರ್ಷಿಕ ಮಹಾಸಭೆಯನ್ನು ನಡೆಸಬಹುದು.ಉಳಿದ ವಾರ್ಷಿಕ ಮಹಾಸಭೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಬಹುದು.ಇದು ಸಮಯ ಮತ್ತು ವೆಚ್ಚ ಎರಡನ್ನೂ ಉಳಿಸುತ್ತದೆ. ಡಿಜಿಟಲ್ ಪ್ರಕ್ರಿಯೆಗಳನ್ನು ಉತ್ತೇಜಿಸಲಾಗುತ್ತದೆ ಮತ್ತು ನಿಯಂತ್ರಕ ವ್ಯವಸ್ಥೆಯು ಬಲಗೊಳ್ಳುತ್ತದೆ. ಒಟ್ಟಾರೆಯಾಗಿ, ಈ ಮಸೂದೆಯು ಕಾರ್ಪೊರೇಟ್ ವಲಯಕ್ಕೆ ದೊಡ್ಡ ಬದಲಾವಣೆ ತರಬಹುದು.

ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಕಾಯ್ದೆ, 2008 ಮತ್ತು ಕಂಪನಿಗಳ ಕಾಯ್ದೆ, 2013 ಅನ್ನು ತಿದ್ದುಪಡಿ ಮಾಡುವ ಗುರಿಯನ್ನು ಈ ಮಸೂದೆ ಹೊಂದಿದೆ.  2026-2027ರ ಹಣಕಾಸು ವರ್ಷಕ್ಕೆ ಕೇಂದ್ರ ಸರ್ಕಾರದ ಹಣಕಾಸು ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅವಕಾಶ ನೀಡುವ ಹಣಕಾಸು ಮಸೂದೆ ಇದಾಗಿರಲಿದ್ದು, ಸದನದ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಲಾಗಿದೆ.

ಮತ್ತಷ್ಟು ಓದಿ: ಸೆಮಿಕಂಡಕ್ಟರ್ ಮಿಷನ್‌ಗೆ 40,000 ಕೋಟಿ ರೂ.; ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಸಭೆಯಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಾಮಾನ್ಯ ಆಡಳಿತ) ಮಸೂದೆ, 2026 ಅನ್ನು ಮಂಡಿಸಲಿದ್ದಾರೆ. ಈ ಮಸೂದೆಯು ಗ್ರೂಪ್ ‘ಎ’ ಜನರಲ್ ಡ್ಯೂಟಿ ಅಧಿಕಾರಿಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿನ ಇತರ ಅಧಿಕಾರಿಗಳ ನೇಮಕ ಮತ್ತು ಸೇವಾ ಪರಿಸ್ಥಿತಿಗಳಿಗೆ ಸಂಬಂಧಿಸಿದ ನಿಯಮಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ.

ಈ ಮಸೂದೆಯು 2026-27ರ ಹಣಕಾಸು ವರ್ಷದ ಸೇವೆಗಳಿಗಾಗಿ ಭಾರತದ ಏಕೀಕೃತ ನಿಧಿಯಿಂದ ಕೆಲವು ಮೊತ್ತಗಳ ಪಾವತಿ ಮತ್ತು ಹಂಚಿಕೆಗೆ ಅಧಿಕಾರ ನೀಡುತ್ತದೆ. ಲೋಕಸಭೆಯು ಈಗಾಗಲೇ ಈ ಮಸೂದೆಯನ್ನು ಅಂಗೀಕರಿಸಿದೆ.

ಸಿಎಲ್‌ಸಿಯ ಇತ್ತೀಚಿನ ವರದಿಯನ್ನು ಮಾರ್ಚ್ 21, 2022 ರಂದು ಸಲ್ಲಿಸಲಾಯಿತು. ಸೆಪ್ಟೆಂಬರ್ 2019 ರಲ್ಲಿ 11 ಸದಸ್ಯರೊಂದಿಗೆ ರಚಿಸಲಾದ ಈ ಸಮಿತಿಯಲ್ಲಿ ಮಾಜಿ ಲೋಕಸಭಾ ಪ್ರಧಾನ ಕಾರ್ಯದರ್ಶಿ ಟಿ ಕೆ ವಿಶ್ವನಾಥನ್, ಕೋಟಕ್ ಮಹೀಂದ್ರಾ ಬ್ಯಾಂಕ್ ಎಂಡಿ ಉದಯ್ ಕೋಟಕ್, ಶಾರ್ದುಲ್ ಅಮರ್‌ಚಂದ್ ಮಂಗಲದಾಸ್ ಹಾಗೂ ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಶಾರ್ದುಲ್ ಎಸ್. ಶ್ರಾಫ್, ಸಿಎ ಜಿ. ರಾಮಸ್ವಾಮಿ ಮತ್ತು ಎಕ್ಸ್‌ಪ್ರೊ ಇಂಡಿಯಾ ಅಧ್ಯಕ್ಷ ಸಿದ್ಧಾರ್ಥ್ ಬಿರ್ಲಾ ಇದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link