nagaraj11081993

1,2,3,4,5,6,7 ಈ ದಿನದಂದು ಮಧ್ಯಾಹ್ನ ನಂತರ ಬರಲಿ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಬೆಂಗಳೂರು, ಏ.1: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಮುಂದಿನ ಒಂದು ವಾರ ಕರ್ನಾಟಕದಾದ್ಯಂತ ಒಣ ಹವೆ ಮತ್ತು ಬಿಸಿಲಿನ ತಾಪಮಾನ ಮುಂದುವರಿಯಲಿದೆ. ಆದರೆ, ಮಧ್ಯಾಹ್ನದ ನಂತರ ಹವಾಮಾನದಲ್ಲಿ ಬದಲಾವಣೆಯಾಗುವ ಲಕ್ಷಣಗಳಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಲಿದ್ದು, ಸೆಖೆಯ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ವಾರದ ಕೆಲವು ದಿನಗಳಲ್ಲಿ ರಾಜ್ಯದ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ…

Read More

Astrological Impact: ಏ.02ರಂದು ಮಂಗಳ ಮೀನ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಅಧಿಪತಿಯಾದ ಮಂಗಳನ ಪ್ರತಿ ಚಲನೆಯು ದ್ವಾದಶ ರಾಶಿಗಳ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಸುಮಾರು 18 ತಿಂಗಳ ಸುದೀರ್ಘ ಅವಧಿಯ ನಂತರ, ಏಪ್ರಿಲ್ 2 ರಂದು ಮಂಗಳ ಗ್ರಹವು ಮೀನ ರಾಶಿಗೆ ಪ್ರವೇಶಿಸುತ್ತಿದೆ. ವಿಶೇಷವೆಂದರೆ, ಈಗಾಗಲೇ ಮೀನ ರಾಶಿಯಲ್ಲಿ ಸೂರ್ಯ ಮತ್ತು ಶನಿ ನೆಲೆಸಿದ್ದಾರೆ. ಶನಿ ಮತ್ತು ಮಂಗಳ ಎರಡೂ ಅತ್ಯಂತ ಪ್ರಬಲ ಹಾಗೂ ಉಗ್ರ ಸ್ವಭಾವದ ಗ್ರಹಗಳಾಗಿದ್ದು, ಪರಸ್ಪರ ಶತ್ರುತ್ವವನ್ನು ಹೊಂದಿವೆ. ಮೀನ ರಾಶಿಯಲ್ಲಿ ಉಂಟಾಗುತ್ತಿರುವ ಈ ಮಂಗಳ ಮತ್ತು…

Read More

Adam Zampa: IPL ತೊರೆದು PSL ಆಡಲು ಇದುವೇ ಮುಖ್ಯ ಕಾರಣ..!

ಆಸ್ಟ್ರೇಲಿಯಾದ ಸ್ಟಾರ್ ಸ್ಪಿನ್ನರ್ ಆ್ಯಡಂ ಝಂಪಾ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿಲ್ಲ. ಇತ್ತ ಐಪಿಎಲ್​ನಿಂದ ಹಿಂದೆ ಸರಿದಿರುವ ಝಂಪಾ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಇದಕ್ಕೆ ಕಾರಣಗಳೇನು ಎಂಬುದನ್ನು ಖುದ್ದು ಝಂಪಾ ಬಹಿರಂಗಪಡಿಸಿದ್ದಾರೆ. ಸಮಯ ಮತ್ತು ಹಣದ ಮೌಲ್ಯ: ಆ್ಯಡಂ ಝಂಪಾ  ಅವರ ಪ್ರಕಾರ, ಐಪಿಎಲ್ ಸುದೀರ್ಘ ಅವಧಿಯ ಟೂರ್ನಿಯಾಗಿದೆ. ತಮ್ಮ ಸ್ಪಿನ್ ಬೌಲಿಂಗ್ ಕೌಶಲ್ಯಕ್ಕೆ ಐಪಿಎಲ್‌ನಲ್ಲಿ ಸಿಗುವ ಸಂಭಾವನೆಗಿಂತ, ಅಲ್ಲಿ ವಿನಿಯೋಗಿಸಬೇಕಾದ ಸಮಯ ಬಹಳ ಹೆಚ್ಚು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬೇರೆ ಕೌಶಲವಿರುವ…

Read More

ಇದು ರೈಲ್ವೆ ಬೋಗಿನಾ ಅಥ್ವಾ ಮನೇನಾ, ಕೋಚ್ ತುಂಬಾ ಒಳ ಉಡುಪುಗಳನ್ನು ನೇತು ಹಾಕಿದ ಮಹಿಳೆಯರು

ಮನಿಹಾರಿ, ಏಪ್ರಿಲ್ 1: ಒಮ್ಮೆ ಈ ರೈಲ್ವೆ ಬೋಗಿಯನ್ನು ನೋಡಿದಾಗ ಇದು ನಿಜವಾಗಿಯೂ ಬೋಗಿಯೇ ಅಥವಾ ಖಾಸಗಿ ವಿಮಾನವೇ ಎನ್ನುವ ಅನುಮಾನ ಮೂಡುತ್ತದೆ. ಯಾಕೆಂದರೆ ಬೇರೆ ಬಟ್ಟೆಗಳು ಹಾಗಿರಲಿ ಒಳ ಉಡುಪುಗಳನ್ನು ಕೂಡ ಮಹಿಳೆಯರು ನೇತುಹಾಕಿದ್ದಾರೆ. ಈ ಘಟನೆ ಮನಿಹಾರಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಇಡೀ ಬೋಗಿಯ ತುಂಬೆಲ್ಲಾ ಬಟ್ಟೆಗಳನ್ನು ಒಣಹಾಕಿದ್ದಾರೆ. ಇವರಿಗೆ ಕಿಂಚಿತ್ತಾದರೂ ನಾಗರಿಕ ಪ್ರಜ್ಞೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ರೈಲ್ವೆ ಆಡಳಿತ ಇಂಥವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎನ್ನುವ ಪ್ರಶ್ನೆಯೂ…

Read More

ಬ್ರ್ಯಾಂಡೆಡ್ ವಾಚ್ ಎಂದು ಕಮ್ಮಿ ಬೆಲೆಗೆ ನಕಲಿ ವಾಚ್​ಗಳನ್ನು ಮಾರುತ್ತಿದ್ದ ಐವರ ಬಂಧನ!

ಬೆಂಗಳೂರು, ಏಪ್ರಿಲ್ 01: ಬ್ರಾಂಡೆಡ್ ವಾಚ್ (Branded Watch)​ ಎಂದು ಹೇಳಿಕೊಂಡು ನಕಲಿ ಗಡಿಯಾರಗಳನ್ನು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿಧೆಡೆ ನಕಲಿ ಕೈ ಗಡಿಯಾರದ ಅಂಗಡಿಗಳನ್ನು ನಡೆಸುತ್ತಿದ್ದು, ಪೊಲೀಸರು ಅವರಿಂದ ಸುಮಾರು 25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಸಿದ್ಧ ಭಾರತೀಯ ಬ್ರಾಂಡ್‌ಗಳ ಹೆಸರಿನಲ್ಲಿ ನಕಲಿ ಗಡಿಯಾರಗಳ ಮಾರಾಟ ಬಂಧಿತ ಆರೋಪಿಗಳನ್ನು ಹರೀಶ್ ಕುಮಾರ್, ಸಯ್ಯದ್ ಜೈಸಾದ್ ಇಕ್ಬಾಲ್, ಮೊಹಮ್ಮದ್ ಹಬೀಬ್ ಹುಸೈನ್, ಖಲೀಮ್…

Read More

Vasthu Tips: ಮನೆಯಲ್ಲಿ ಈ ಗಿಡಗಳಿದ್ದರೆ ತಕ್ಷಣ ಹೊರಹಾಕಿ, ಇಲ್ಲದಿದ್ದರೆ ಆರ್ಥಿಕ ಸಂಕಷ್ಟ ತಪ್ಪಿದ್ದಲ್ಲ!

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತುವು ಧನಾತ್ಮಕ ಅಥವಾ ನಕಾರಾತ್ಮಕ ಶಕ್ತಿಯನ್ನು ಹೊರಸೂಸುತ್ತದೆ. ಗಿಡಗಳು ಪ್ರಕೃತಿಯ ಸಂಕೇತವಾಗಿದ್ದರೂ, ಕೆಲವು ನಿರ್ದಿಷ್ಟ ಗಿಡಗಳನ್ನು ಮನೆಯೊಳಗೆ ಅಥವಾ ಆವರಣದಲ್ಲಿ ಬೆಳೆಸುವುದು ವಾಸ್ತು ಪ್ರಕಾರ ಅಶುಭ ಎಂದು ಪರಿಗಣಿಸಲಾಗಿದೆ. ಅಂತಹ ಗಿಡಗಳ ಬಗ್ಗೆ ವಿವರವಾದ ಮಾಹಿತಿ ಇಲ್ಲಿ ತಿಳಿದುಕೊಳ್ಳಿ. ಮುಳ್ಳಿನ ಗಿಡಗಳು: ವಾಸ್ತು ಶಾಸ್ತ್ರದ ಪ್ರಕಾರ, ಮುಳ್ಳಿನ ಗಿಡಗಳನ್ನು ಮನೆಯ ಒಳಗೆ ಇಡಬಾರದು. ಕಳ್ಳಿ ಗಿಡ ಅಥವಾ ಕ್ಯಾಕ್ಟಸ್‌ನಂತಹ ಮುಳ್ಳಿನ ಸಸ್ಯಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹರಡುತ್ತವೆ ಎಂದು ನಂಬಲಾಗಿದೆ….

Read More

ಬೆಂಗಳೂರಿನಲ್ಲಿ ಕಾನೂನು ಪಾಲನೆ ಕೇವಲ ಆಯ್ಕೆಯ ವಿಷಯವೇ?: ಬಸವನಗುಡಿ ಪುತ್ತಿಗೆ ಮಠಕ್ಕೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಯುವಕ

ಬೆಂಗಳೂರು, ಏ.1: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ನಾಗರಿಕ ಪ್ರಜ್ಞೆ ಹೇಗೆ ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಬಸವನಗುಡಿಯಲ್ಲಿ ನಡೆದ ಪಾರ್ಕಿಂಗ್ ವಿವಾದವೊಂದು ಸಾಕ್ಷಿಯಾಗಿದೆ. ಪುತ್ತಿಗೆ ಮಠದ ಮುಂಭಾಗ ವಾಹನ ನಿಲುಗಡೆ ಮಾಡುವ ವಿಚಾರದಲ್ಲಿ ಕಾಲೇಜು ವಿದ್ಯಾರ್ಥಿ ಮತ್ತು ಮಹಿಳಾ  ನಡುವೆ ನಡೆದ ಜಗಳ, ಕೊನೆಗೆ ಪೊಲೀಸರ ಸಮ್ಮುಖದಲ್ಲಿ ‘ರಾಜಿ’ಯೊಂದಿಗೆ ಅಂತ್ಯಗೊಂಡಿದೆ. ವರದಿಗಳ ಪ್ರಕಾರ, ಕಾಲೇಜು ವಿದ್ಯಾರ್ಥಿಯೊಬ್ಬ ಮಠದ ಮುಂಭಾಗ ನಿರ್ಬಂಧವಿದ್ದರೂ ಆತುರದಲ್ಲಿ ವಾಹನ ಪಾರ್ಕ್ ಮಾಡಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಮಠದ ಭಕ್ತನೊಂದಿಗೆ ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದು, ಇದು ದೈಹಿಕ ಹಲ್ಲೆಯ…

Read More

ಮಧ್ಯರಾತ್ರಿ ಸುರಿದ ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮನೆಗೆ ನುಗ್ಗಿದ ನೀರು: ಭಾರಿ ಅವಾಂತರ

ಶಿವಮೊಗ್ಗ, ಏಪ್ರಿಲ್​​ 01: ನಿನ್ನೆ ಮಧ್ಯರಾತ್ರಿ ಸುರಿದ ಭಾರಿ ಮಳೆಗೆ ಶಿವಮೊಗ್ಗದ ನಗರದ ಶರಾವತಿ ನಗರ ಬಡಾವಣೆಯ ಮನೆಯೊಂದಕ್ಕೆ ಚಾನಲ್ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ರಾತ್ರಿ 12 ಗಂಟೆಯ ವೇಳೆಗೆ ಗುಡುಗು ಸಮೇತ ಆರಂಭವಾದ ಮಳೆ, ಬೆಳಗ್ಗಿನ ಜಾವ ಸುಮಾರು 3 ಗಂಟೆಯವರೆಗೂ ಸುರಿದಿದೆ. ಭಾರಿ ಮಳೆ ಹಿನ್ನೆಲೆ ತುಂಗಾ ಚಾನಲ್​​ನಿಂದ ಉಕ್ಕಿ ಹರಿದ ನೀರು ತಗ್ಗುಪ್ರದೇಶದಲ್ಲಿರುವ ಮನೆಗೆ ನುಗ್ಗಿದೆ. ಮನೆಯಲ್ಲಿದ್ದ ಸಾಮಗ್ರಿಗಳು ನೀರಿನಲ್ಲಿ ನೆಂದು ತೊಪ್ಪೆಯಾಗಿದ್ದು, ಹಾಸಿಗೆ, ಮಂಚ, ಅಡುಗೆ ಮನೆಯ ಬಹುತೇಕ…

Read More

VIDEO: ಬ್ಯಾಟ್ಸ್​ಮನ್​ನಿಂದ ಗಾಯಗೊಂಡ ಶ್ರೇಯಸ್ ಅಯ್ಯರ್

ಗುಜರಾತ್ ಟೈಟಾನ್ಸ್ (GT) ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. ಹೀಗೆ ಗಾಯಗೊಂಡಿದ್ದು ಪಂಜಾಬ್ ಕಿಂಗ್ಸ್ ಬ್ಯಾಟರ್​ನಿಂದ. ಅಂದರೆ ಕೂಪರ್ ಕೊನೊಲಿ ಬಾರಿಸಿದ ಚೆಂಡು ಶ್ರೇಯಸ್ ಅಯ್ಯರ್ ಅವರ ಕೈಗೆ ಬಲವಾಗಿ ಬಡಿದಿದೆ. ಇನ್ನಿಂಗ್ಸ್‌ನ 12ನೇ ಓವರ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಕೂಪರ್ ಕೊನೊಲಿ ಹೊಡೆದ ವೇಗದ ‘ಸ್ಟ್ರೈಟ್ ಡ್ರೈವ್’ ಚೆಂಡು ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ಶ್ರೇಯಸ್ ಅಯ್ಯರ್ ಅವರ ಮಣಿಕಟ್ಟಿಗೆ ನೇರವಾಗಿ ಬಡಿಯಿತು. ತೀವ್ರ ನೋವಿನಿಂದ ಅಯ್ಯರ್ ಮೈದಾನದಲ್ಲೇ ಕುಸಿದು ಬಿದ್ದ…

Read More

Middle East Flight Advisory: ದುಬೈ, ಅಬುಧಾಬಿಗೆ ಹೋಗುವ ಪ್ರಯಾಣಿಕರಿಗೆ ಕೆಲವು ಸಲಹೆಗಳ ಕೊಟ್ಟ ಏರ್ ಇಂಡಿಯಾ, ಇಂಡಿಗೋ

ನವದೆಹಲಿ, ಏಪ್ರಿಲ್ 1: ಭಾರತದ ಎರಡು ದೊಡ್ಡ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾ(Air India) ಹಾಗೂ ಇಂಡಿಗೋ ದುಬೈ, ಅಬುಧಾಭಿ ಅಥವಾ ಇತರೆ ಗಲ್ಫ್​ ದೇಶಗಳಿಗೆ ಹೋಗುವ ಪ್ರಯಾಣಿಕರಿಗೆ ಕೆಲವು ಸಲಹೆಗಳನ್ನು ನೀಡಿವೆ. ಮಧ್ಯಪ್ರಾಚ್ಯದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ ಏರ್‌ಲೈನ್ಸ್ ಪ್ರಯಾಣಿಕರಿಗೆ ಪ್ರಯಾಣ ಸಲಹೆಯನ್ನು ನೀಡಿದೆ. ಪ್ರದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಯಿಂದಾಗಿ, ವಿಮಾನ ವೇಳಾಪಟ್ಟಿಗಳು ಆಗಾಗ ಬದಲಾಗುತ್ತಿರುತ್ತವೆ. ಆದ್ದರಿಂದ, ಎಲ್ಲಾ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ಪ್ರಸ್ತುತ ಪರಿಸ್ಥಿತಿ ಬಗ್ಗೆ ಪರಿಶೀಲಿಸಿ ಎಂದು ವಿನಂತಿಸಿದ್ದಾರೆ. ಪ್ರಯಾಣಿಕರ…

Read More