Headlines

nagaraj11081993

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದು ಒಣ ಹವೆಯ ಮುನ್ಸೂಚನೆ

ಬೆಂಗಳೂರು, ಮಾರ್ಚ್​ 23: ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿತ್ತು. ಆದರೆ ಇಂದು ಮತ್ತೊಮ್ಮೆ ರಾಜ್ಯದೆಲ್ಲೆಡೆ ಶುಷ್ಕ (Weather Forecast) ವಾತಾವರಣ ಆವರಿಸಿದೆ. ಇನ್ನೂ ಎರಡು ದಿನ ಇದೇ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯಾಗಬಹುದೆಂಬ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ,…

Read More

ಬಿನ್ ಲ್ಯಾಡನ್​​ನನ್ನು ಬೇಟೆಯಾಡಿದ್ದ ಮಾಜಿ ಸಿಐಎ ಮುಖ್ಯಸ್ಥ ಟ್ರಂಪ್ ಹಾಗೂ ಯುದ್ಧದ ಬಗ್ಗೆ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 23: ಇರಾನ್ ವಿರುದ್ಧ ಅಮೆರಿಕದ ಯುದ್ಧ ಆರಂಭವಾಗಿ ಮೂರು ವಾರಗಳಿಗೂ ಹೆಚ್ಚು ಸಮಯ ಕಳೆದಿದೆ. ಆದರೆ ಅದು ಕೊನೆಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump)​​ಗೆ ಸುಲಭವಾದ ದಾರಿಯೂ ಕೂಡ ಗೋಚರಿಸುತ್ತಿಲ್ಲ. ಯುದ್ಧ ಮುಂದುವರೆದಂತೆ , ತಮ್ಮ ದೇಶದಲ್ಲೂ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಮೆರಿಕದ ಮಾಜಿ ರಕ್ಷಣಾ ಕಾರ್ಯದರ್ಶಿ ಮತ್ತು ಮಾಜಿ ಸಿಐಎ ಮುಖ್ಯಸ್ಥ ಲಿಯಾನ್ ಪನೆಟ್ಟಾ, ಪ್ರಸ್ತುತ ಪರಿಸ್ಥಿತಿಗೆ ಕಾರಣವಾಗಿರುವ ಟ್ರಂಪ್​​ರನ್ನು ಟೀಕಿಸಿದ್ದಾರೆ. ಬ್ರಿಟಿಷ್ ಪತ್ರಿಕೆ ಗಾರ್ಡಿಯನ್‌ಗೆ ಮಾತನಾಡಿದ ಪನೆಟ್ಟಾ,…

Read More

Horoscope Today 23rd​​ March​: ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ, ಕೃತಿಕಾ ನಕ್ಷತ್ರ, ವಿಷ್ಕಂಭ ಯೋಗ, ಭವಕರಣೆ ಇರತಕ್ಕಂತ ಈ ದಿನದ ರಾಹುಕಾಲವು ಬೆಳಗ್ಗೆ 7:52 ರಿಂದ 9:23 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲವು ಬೆಳಗ್ಗೆ 9:24 ರಿಂದ…

Read More

Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡುವ ಈ ಮರಗಳಲ್ಲಿ ತುಳಸಿ ಗಿಡವು ಅತ್ಯಂತ ಪೂಜ್ಯನೀಯ ಸ್ಥಾನ ಪಡೆದಿದೆ. ಅರಳೀಮರದಂತೆ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವಿರಬೇಕು ಎಂಬುದು ಹಿಂದೂ ಸಂಪ್ರದಾಯ. ತುಳಸಿಗೆ ನೀರು ಹಾಕಿ ಪೂಜೆ ಮಾಡುವುದರ ಜೊತೆಗೆ, ಪ್ರತಿದಿನ ಬೆಳಿಗ್ಗೆ ಐದು ನಿಮಿಷಗಳ ಕಾಲ…

Read More

92 ಸಾವಿರ ಶೋ, 450 ಕೋಟಿ ಗಳಿಕೆ; ದಾಖಲೆಯ ಕಲೆಕ್ಷನ್ ಮಾಡಿದ ‘ಧುರಂಧರ್ 2’

ರಣವೀರ್ ಸಿಂಗ್ ನಟನೆಯ ‘ಧುರಂದರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಹಿಂದೆ ಯಾವ ಸಿನಿಮಾಗಳೂ ಮಾಡದಷ್ಟು ಅಬ್ಬರದಲ್ಲಿ ಸಿನಿಮಾ ರಿಲೀಸ್ ಆಗಿದೆ. ಹಲವು ದಾಖಲೆಗಳನ್ನು ಸಿನಿಮಾ ಉಡೀಸ್ ಮಾಡಿದೆ. ನಾಲ್ಕು ದಿನಕ್ಕೆ 450 ಕೋಟಿ ರೂಪಾಯಿ ಆಗಿದೆ. ಹೀಗೆ ಮುಂದುವರಿದರೆ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ವಿಶ್ವ ಮಟ್ಟದಲ್ಲಿ ಚಿತ್ರದ ಗಳಿಕೆ 700 ಕೋಟಿ ರೂಪಾಯಿ ಸಮೀಪಿಸಿದೆ. ‘ಧುರಂಧರ್ 2’ ಚಿತ್ರ ಮಾರ್ಚ್ 19ರಂದು…

Read More

ರಾಮನಗರ: ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ, ಮಾರ್ಚ್ 23: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ (Ramanagara) ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಚನ್ನಪಟ್ಟಣ ತಾಲೂಕಿನ ಸಂಕಲಗೆರೆ (Sankalagere) ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್, ನಿದ್ರೆ ಮಂಪರಿನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯೋಗ್ಯತೆಯನ್ನು ಪರರ ಪರಿಚಯಿಸುವರು

ಮೇಷ ರಾಶಿ: ಕೆಲವು ಜನರು ಸವಾಲಿನ ಕಾರ್ಯಗಳನ್ನು ನಿಭಾಯಿಸಲು ತೊಂದರೆಗಳನ್ನು ಎದುರಿಸಬಹುದು. ಇಂದು ನೀವು ಅಗತ್ಯ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಯೋಚಿಸುವಿರಿ. ಒಳ್ಳೆಯದನ್ನು ಸಾಧಿಸುವ ನಿಮಗೆ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಉದ್ಯೋಗಕ್ಕೆ ಸೇರುವಾಗ ಅಲ್ಪದೂರದ ದೃಷ್ಟಿಯಾದರೂ ಬೇಕು. ಹೂಡಿಕೆಯತ್ತ ಗಮನಹರಿಸುವುದು ಸದ್ತಕ್ಕೆ ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ರೂಪವು ನಿಮ್ಮ ಕೆಲವು ಕಾರ್ಯಕ್ಕೆ ಅಡ್ಡಿಯಾದೀತು. ವೃಷಭ ರಾಶಿ : ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವ್ಯಾಪಾರ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಗೊಂದಲಕ್ಕೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 23ರ ದಿನಭವಿಷ್ಯ

ಮದುವೆ- ಪ್ರೀತಿ, ಪ್ರೇಮದ ವಿಚಾರಗಳನ್ನು ಮಾತನಾಡುತ್ತೀರಿ ಎಂದಾದಲ್ಲಿ ಈ ದಿನ ಹಳದಿ ಬಣ್ಣದ ಬಟ್ಟೆ ಧರಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಯಾರು ಉದ್ಯೋಗಕ್ಕೆ ಸಂಬಂಧಿಸಿದಂಥ ಪರೀಕ್ಷೆಗಳನ್ನು ಬರೆದಿರುತ್ತಾರೋ ಅಂಥವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಂಬಂಧಿಕರ ಮುಖಾಂತರ ರೆಫರೆನ್ಸ್ ಗಳು ಬರಬಹುದು. ಇದು ನಿಮ್ಮ ಮನಸ್ಸಿಗೆ ಒಪ್ಪುವ ಸಾಧ‌್ಯತೆಗಳು ಸಹ ಹೆಚ್ಚಿವೆ. ಕೊನೆ ಕ್ಷಣದಲ್ಲಿ ನಿರ್ಧಾರಗಳಲ್ಲಿ ಬಹಳ ಏರುಪೇರು ಮಾಡಲಿದ್ದೀರಿ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 23ರ ದಿನಭವಿಷ್ಯ

ಮನೆಯಲ್ಲಿ ಹಿರಿಯರು ಅನಾರೋಗ್ಯದಿಂದ ಇದ್ದಲ್ಲಿ ಅವರ ಆರೋಗ್ಯ ಚೇತರಿಕೆಗಾಗಿ ಧನ್ವಂತರಿ ಮಂತ್ರ ಪಠಿಸಿ ಅಥವಾ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಣ್ಣ- ಪುಟ್ಟದಾದರೂ ಮನೆ ಮಟ್ಟಿಗೆ ಕಾರ್ಯಕ್ರಮ ಆಯೋಜಿಸುವಂಥ ಸಾಧ್ಯತೆ ಇದೆ. ತಂದೆ ಅಥವಾ ತಂದೆ ಸಮಾನರಾದವರ ಆರೋಗ್ಯ ಸ್ಥಿತಿ ಸ್ವಲ್ಪ ಆತಂಕಕ್ಕೆ ಕಾರಣ ಆಗಬಹುದು. ನಿಮ್ಮೆಲ್ಲ ಪ್ರಯತ್ನವನ್ನು ಮಾಡಿದ ನಂತರದಲ್ಲಿಯೂ ಒಬ್ಬರೇ ವ್ಯಕ್ತಿ, ಒಂದೇ ವಿಷಯ, ಒಂದು ವಸ್ತು ನಿಮ್ಮನ್ನು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ನಿಮ್ಮಲ್ಲಿ ಯಾರು ಆಸ್ತ೦- ಮನೆ ಮೊದಲಾದ ಖರೀದಿಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರು ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಮನಸಿಗೆ ಒಪ್ಪುವಂಥದ್ದು ಆಸ್ತಿ- ಮನೆ ದೊರೆಯಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಜತೆಗೆ ಕೆಲಸ ಮಾಡುವವರು ನಿಮ್ಮ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಲಿದ್ದಾರೆ. ನಿಮ್ಮಲ್ಲಿ ಯಾರು ಸೈಟು, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುವ ಸಲುವಾಗಿ ಪ್ರಯತ್ನವನ್ನು ಮಾಡುತ್ತಿದ್ದೀರಿ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು…

Read More