All posts by nagaraj11081993

Karnataka by-elections: ಕಾಂಗ್ರೆಸ್​ಗೆ ಪೈಲ್ವಾನ್ ಸವಾಲಿನ ಬೆನ್ನಲ್ಲೇ ಹೈಡ್ರಾಮಾಕ್ಕೆ ಸಜ್ಜಾದ ದಾವಣಗೆರೆ ಅಖಾಡ

Karnataka by-elections: ಕಾಂಗ್ರೆಸ್​ಗೆ ಪೈಲ್ವಾನ್ ಸವಾಲಿನ ಬೆನ್ನಲ್ಲೇ ಹೈಡ್ರಾಮಾಕ್ಕೆ ಸಜ್ಜಾದ ದಾವಣಗೆರೆ ಅಖಾಡ

ದಾವಣಗೆರೆ, ಮಾರ್ಚ್ 23: ದಾವಣಗೆರೆ ನಗರದಲ್ಲಿ ಇಂದು ರಾಜಕೀಯ ಹೈಡ್ರಾಮಾ ನಡೆಯುವ ಸಾಧ್ಯತೆ ತೀವ್ರವಾಗಿದೆ. ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ (Congress) ಟಿಕೆಟ್ ಅಲ್ಪಸಂಖ್ಯಾತರಿಗೆ ಸಿಗದ ಹಿನ್ನೆಲೆ ಅಸಮಾಧಾನ ಭುಗಿಲೆದ್ದಿದ್ದು, ಹಲವು ಅಭ್ಯರ್ಥಿಗಳು ಸ್ವತಂತ್ರವಾಗಿ ಮತ್ತು ಬೇರೆ ಪಕ್ಷಗಳಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಎಂಐಎಂ, ಎಸ್‌ಡಿಪಿಐ, ಆಮ್ ಆದ್ಮಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ವಿಶೇಷವಾಗಿ ಸಮಾಜದ ಮುಖಂಡ ಸಾದಿಕ್ ಪೈಲ್ವಾನ್ ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿರುವುದು ಗಮನ ಸೆಳೆದಿದೆ.

ನಾಮಪತ್ರ ಸಲ್ಲಿಕೆ ಕೊನೆಯ ದಿನ

ಇಂದು (ಮಾರ್ಚ್ 23) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಭಾರೀ ಮೆರವಣಿಗೆಗಳು ನಡೆಯಲಿದ್ದು, ಅದೇ ವೇಳೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದಲೂ ನಾಮಪತ್ರ ಸಲ್ಲಿಕೆ ನಡೆಯಲಿದೆ. ಮಾರ್ಚ್ 22ರಂದು ಅಲ್ಪಸಂಖ್ಯಾತ ಯುವಕರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ‘ಪಾಠ ಕಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದರು.

ದಾವಣಗೆರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ರಾಜಕೀಯ ಹೈಡ್ರಾಮಾ ನಡೆಯಬಹುದಾದ ಸಾಧ್ಯತೆ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕರೆಯಲಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪ್ರಮುಖ ಸಚಿವರು ದಾವಣಗೆರೆಗೆ

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಲವು ಮಂದಿ ಸಚಿವರು ಉಪಸ್ಥಿತರಿರಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಿಎಂ, ಡಿಸಿಎಂ ಹಾಗೂ ಸಚಿವರು ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್​ನಲ್ಲಿ ಪ್ರಯಾಣಿಸಲಿದ್ದಾರೆ. ಬಳಿಕ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ವೇಳೆ ಜತೆಗಿರಲಿದ್ದಾರೆ.

ದಾವಣಗೆರೆ ದಕ್ಷಿಣ ಟಿಕೆಟ್‌ ಅಂತಿಮಗೊಳಿಸುವ ಮುನ್ನ ಅಲ್ಪಸಂಖ್ಯಾತ ಸಚಿವರು, ಶಾಸಕರನ್ನು ಕರೆದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸುರ್ಜೇವಾಲ ಮನವೊಲಿಸಿದ್ದರು. ಹೀಗಾಗಿ, ಕೊನೇ ಕ್ಷಣದಲ್ಲಿ ಕಣದಿಂದ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುತ್ತಾರೆ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತಾರೆಂಬ ವಿಶ್ವಾಸದಲ್ಲಿ ನಾಯಕರಿದ್ದಾರೆ. ಆದರೆ, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿರುವ ಸಾದಿಕ್ ಪೈಲ್ವಾನ್, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನೂರಾರು ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್​​ನಲ್ಲಿ ಭುಗಿಲೆದ್ದ ಬಂಡಾಯ: ಹೈಕಮಾಂಡ್​ಗೆ ಪೈಲ್ವಾನ್ ಸವಾಲ್

ಒಟ್ಟಿನಲ್ಲಿ ದಾವಣಗೆರೆ ದಕ್ಷಿಣ ಉಪಚುನಾವಣೆ ಅಖಾಡ ರಂಗೇರಿದ್ದು, ಬಹಳಷ್ಟು ಕುತೂಹಲ ಸೃಷ್ಟಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದು ಒಣ ಹವೆಯ ಮುನ್ಸೂಚನೆ

ಬೆಂಗಳೂರು, ಮಾರ್ಚ್​ 23: ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿತ್ತು. ಆದರೆ ಇಂದು ಮತ್ತೊಮ್ಮೆ ರಾಜ್ಯದೆಲ್ಲೆಡೆ ಶುಷ್ಕ (Weather Forecast) ವಾತಾವರಣ ಆವರಿಸಿದೆ. ಇನ್ನೂ ಎರಡು ದಿನ ಇದೇ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯಾಗಬಹುದೆಂಬ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿನ್ ಲ್ಯಾಡನ್​​ನನ್ನು ಬೇಟೆಯಾಡಿದ್ದ ಮಾಜಿ ಸಿಐಎ ಮುಖ್ಯಸ್ಥ ಟ್ರಂಪ್ ಹಾಗೂ ಯುದ್ಧದ ಬಗ್ಗೆ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 23: ಇರಾನ್ ವಿರುದ್ಧ ಅಮೆರಿಕದ ಯುದ್ಧ ಆರಂಭವಾಗಿ ಮೂರು ವಾರಗಳಿಗೂ ಹೆಚ್ಚು ಸಮಯ ಕಳೆದಿದೆ. ಆದರೆ ಅದು ಕೊನೆಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump)​​ಗೆ ಸುಲಭವಾದ ದಾರಿಯೂ ಕೂಡ ಗೋಚರಿಸುತ್ತಿಲ್ಲ. ಯುದ್ಧ ಮುಂದುವರೆದಂತೆ , ತಮ್ಮ ದೇಶದಲ್ಲೂ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಮೆರಿಕದ ಮಾಜಿ ರಕ್ಷಣಾ ಕಾರ್ಯದರ್ಶಿ ಮತ್ತು ಮಾಜಿ ಸಿಐಎ ಮುಖ್ಯಸ್ಥ ಲಿಯಾನ್ ಪನೆಟ್ಟಾ, ಪ್ರಸ್ತುತ ಪರಿಸ್ಥಿತಿಗೆ ಕಾರಣವಾಗಿರುವ ಟ್ರಂಪ್​​ರನ್ನು ಟೀಕಿಸಿದ್ದಾರೆ.

ಬ್ರಿಟಿಷ್ ಪತ್ರಿಕೆ ಗಾರ್ಡಿಯನ್‌ಗೆ ಮಾತನಾಡಿದ ಪನೆಟ್ಟಾ, ಡೊನಾಲ್ಡ್ ಟ್ರಂಪ್ ತುಂಬಾ ಕಠಿಣ ಪರಿಸ್ಥಿತಿಯಲ್ಲಿದ್ದಾರೆ ಮತ್ತು ಅದಕ್ಕೆ ಅವರೇ ಕಾರಣ ಎಂದು ಹೇಳಿದ್ದಾರೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಬಹುದು, ಜಾಗತಿಕ ತೈಲ ಪೂರೈಕೆಯನ್ನು ಅಡ್ಡಿಪಡಿಸಬಹುದು ಎಂದು ಅಮೆರಿಕದ ಭದ್ರತಾ ಅಧಿಕಾರಿಗಳಿಗೆ ವರ್ಷಗಳಿಂದ ತಿಳಿದಿದೆ ಎಂದು ಪನೆಟ್ಟಾ ಹೇಳಿದ್ದಾರೆ. ಇದು ತಿಳಿದಿರುವ ಬೆದರಿಕೆಯಾಗಿದ್ದು, ಸಂಘರ್ಷದ ಸಮಯದಲ್ಲಿ ಇದನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸುವ ಮೂಲಕ ಇರಾನ್ ಜಾಗತಿಕ ತೈಲ ಸರಬರಾಜನ್ನು ಅಡ್ಡಿಪಡಿಸಬಹುದು ಎಂದು ಅಮೆರಿಕದ ಭದ್ರತಾ ಸಂಸ್ಥೆಗಳು ಬಹಳ ಹಿಂದಿನಿಂದಲೂ ತಿಳಿದಿದ್ದವು, ಆದರೆ ಈ ಬೆದರಿಕೆಯನ್ನು ನಿರ್ಲಕ್ಷಿಸಲಾಗಿತ್ತು. ಆರಂಭಿಕ ಮಿಲಿಟರಿ ಕಾರ್ಯಾಚರಣೆಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆಯ ಪರಿಣಾಮಗಳ ಬಗ್ಗೆಯೂ ಪ್ರಶ್ನಿಸಿದ್ದಾರೆ.

ಆರಂಭಿಕ ಮಿಲಿಟರಿ ಕ್ರಮವು ಇರಾನ್​ ಅನ್ನು ದುರ್ಬಲಗೊಳಿಸಲಿಲ್ಲ ಬದಲಾಗಿ ಅದರ ನಾಯಕತ್ವವನ್ನು ಬಲಪಡಿಸಿತು. ಈಗ ಕಠಿಣ ನಾಯಕತ್ವ ಹೊರಹೊಮ್ಮಿದ್ದು, ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಿದೆ. ಯುದ್ಧವು ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದಂತೆ ಅಮೆರಿಕದಲ್ಲಿ ಟ್ರಂಪ್ ಮೇಲೆ ಒತ್ತಡ ಹೆಚ್ಚುತ್ತಿದೆ.

ಮತ್ತಷ್ಟು ಓದಿ: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ: ಟ್ರಂಪ್

ಏರುತ್ತಿರುವ ಇಂಧನ ಬೆಲೆಗಳು ಮತ್ತು ಅನಿಶ್ಚಿತತೆಯು ಸಾರ್ವಜನಿಕ ಬೆಂಬಲವನ್ನು ಕಳೆದುಕೊಳ್ಳುತ್ತಿದೆ. ಒಂದು ಸಮೀಕ್ಷೆ ಪ್ರಕಾರ, ಶೇ.59ರಷ್ಟು ಅಮೆರಿಕನ್ನರು ಇರಾನ್ ಮೇಲಿನ ದಾಳಿಯನ್ನು ವಿರೋಧಿಸುತ್ತಿದ್ದಾರೆ.

ಟ್ರಂಪ್ ಹೋಗುತ್ತಿರುವುದು ಸುಲಭದ ಹಾದಿಯೆಂದು ಅನಿಸುತ್ತಿಲ್ಲ, ಯುದ್ಧದಿಂದ ಹಿಂದೆ ಸರಿಯುವುದು ಅವರಿಗೆ ದೌರ್ಬಲ್ಯವೆನಿಸಬಹುದು ಆದರೆ ಅದು ಉಲ್ಬಣಗಗೊಂಡರೆ ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು. ಈ ಪರಿಸ್ಥಿತಿಗೆ ಟ್ರಂಪ್ ಸ್ವತಃ ಜವಾಬ್ದಾರರಾಗುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಅಮೆರಿಕ ತನ್ನ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡಿದರೆ ಅದು ಗಲ್ಫ್​ ರಾಷ್ಟ್ರಗಳ ಇಂಧನ ಮತ್ತು ಜಲ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿದೆ. ಇದು ಪ್ರಪಂಚದಾದ್ಯಂತ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಬಹುದು. 2011ರ ಮೇ 2ರಂದು ಒಸಾಮಾ ಬಿನ್ ಲ್ಯಾಡನ್​ನನ್ನು ಅಮೆರಿಕವು ಆಪರೇಷನ್ ನೆಪ್ಚೂನ್ ಸ್ಪಿಯರ್ ಅಡಿ ಹತ್ಯೆ ಮಾಡಿತ್ತು, ಅದರ ನೇತೃತ್ವವನ್ನು ಪನೆಟ್ಟಾ ಹೊತ್ತಿದ್ದರು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Horoscope Today 23rd​​ March​: ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ, ಕೃತಿಕಾ ನಕ್ಷತ್ರ, ವಿಷ್ಕಂಭ ಯೋಗ, ಭವಕರಣೆ ಇರತಕ್ಕಂತ ಈ ದಿನದ ರಾಹುಕಾಲವು ಬೆಳಗ್ಗೆ 7:52 ರಿಂದ 9:23 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲವು ಬೆಳಗ್ಗೆ 9:24 ರಿಂದ 10:55 ರವರೆಗೆ ಇದೆ.

ಇಂದು ದೇವರ ದಾಸಿಮಯ್ಯ ಜಯಂತಿ ಹಾಗೂ ವಿಶ್ವ ಹವಾಮಾನ ದಿನ. ದಾವಣಗೆರೆಯಲ್ಲಿ ಬಕ್ಕೇಶ್ವರ ಸ್ವಾಮಿಗಳ ಜಯಂತ್ಯೋತ್ಸವ, ಎಂ. ಗೋವಿಂದಪ್ಪಯ್ಯ ಅವರ ಜನ್ಮದಿನ ಹಾಗೂ ಮುಳುಬಾಗಿಲಿನಲ್ಲಿ ತ್ರಿಪುರಸುಂದರಿ ಜಾತ್ರಾ ಮಹೋತ್ಸವ ನಡೆಯಲಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ವೃಷಭ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಕೌಟುಂಬಿಕ ಸಂಬಂಧಗಳು, ಅದೃಷ್ಟ ಬಣ್ಣ, ಅದೃಷ್ಟ ಸಂಖ್ಯೆ, ಶುಭ ದಿಕ್ಕು ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದ್ದಾರೆ.

 

 

 

Source link

Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡುವ ಈ ಮರಗಳಲ್ಲಿ ತುಳಸಿ ಗಿಡವು ಅತ್ಯಂತ ಪೂಜ್ಯನೀಯ ಸ್ಥಾನ ಪಡೆದಿದೆ. ಅರಳೀಮರದಂತೆ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವಿರಬೇಕು ಎಂಬುದು ಹಿಂದೂ ಸಂಪ್ರದಾಯ. ತುಳಸಿಗೆ ನೀರು ಹಾಕಿ ಪೂಜೆ ಮಾಡುವುದರ ಜೊತೆಗೆ, ಪ್ರತಿದಿನ ಬೆಳಿಗ್ಗೆ ಐದು ನಿಮಿಷಗಳ ಕಾಲ ತುಳಸಿ ಕಟ್ಟೆ ಪ್ರದಕ್ಷಿಣೆ ಮಾಡುವುದು ವಿಶೇಷ ಫಲಗಳನ್ನು ನೀಡುತ್ತದೆ.

ಈ ಪ್ರದಕ್ಷಿಣೆಯನ್ನು ಗೋಪ ಪ್ರದಕ್ಷಿಣೆ ಎಂದೂ ಕರೆಯುತ್ತಾರೆ. ಒಂದು ಪ್ರದಕ್ಷಿಣೆ ಮಾಡಿದರೆ ಸಾಕ್ಷಾತ್ ವಿಷ್ಣುವಿನ ಅನುಗ್ರಹ ದೊರೆಯುತ್ತದೆ. ಮೂರು ಪ್ರದಕ್ಷಿಣೆಗಳಿಂದ ಮನಸ್ಸು ಶುದ್ಧಿಯಾಗುತ್ತದೆ, ನಾಲ್ಕರಿಂದ ಸಂಪತ್ತು ವೃದ್ಧಿಯಾಗುತ್ತದೆ, ಮತ್ತು ಹನ್ನೊಂದು ಪ್ರದಕ್ಷಿಣೆಗಳಿಂದ ನಿಮ್ಮ ಅಭೀಷ್ಟಗಳು ಈಡೇರುತ್ತವೆ. 11 ಪ್ರದಕ್ಷಿಣೆಗಳಿಗಿಂತ ಹೆಚ್ಚು ಮಾಡಬಾರದು ಎಂಬ ನಿಯಮವಿದೆ. ಈ ಪ್ರದಕ್ಷಿಣೆಯನ್ನು ಕನಿಷ್ಠ 48 ದಿನಗಳ ಕಾಲ ನಿರಂತರವಾಗಿ ಮಾಡಿದರೆ ಸಾಕಷ್ಟು ಶುಭ ಫಲಗಳು ಲಭಿಸುತ್ತವೆ ಎಂದು ನಂಬಲಾಗಿದೆ. ತುಳಸಿ ಗಿಡವಿರುವ ಮನೆಯು ದೇವಸ್ಥಾನವಿದ್ದಂತೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

Source link

92 ಸಾವಿರ ಶೋ, 450 ಕೋಟಿ ಗಳಿಕೆ; ದಾಖಲೆಯ ಕಲೆಕ್ಷನ್ ಮಾಡಿದ ‘ಧುರಂಧರ್ 2’

ರಣವೀರ್ ಸಿಂಗ್ ನಟನೆಯ ‘ಧುರಂದರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಹಿಂದೆ ಯಾವ ಸಿನಿಮಾಗಳೂ ಮಾಡದಷ್ಟು ಅಬ್ಬರದಲ್ಲಿ ಸಿನಿಮಾ ರಿಲೀಸ್ ಆಗಿದೆ. ಹಲವು ದಾಖಲೆಗಳನ್ನು ಸಿನಿಮಾ ಉಡೀಸ್ ಮಾಡಿದೆ. ನಾಲ್ಕು ದಿನಕ್ಕೆ 450 ಕೋಟಿ ರೂಪಾಯಿ ಆಗಿದೆ. ಹೀಗೆ ಮುಂದುವರಿದರೆ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ವಿಶ್ವ ಮಟ್ಟದಲ್ಲಿ ಚಿತ್ರದ ಗಳಿಕೆ 700 ಕೋಟಿ ರೂಪಾಯಿ ಸಮೀಪಿಸಿದೆ.

‘ಧುರಂಧರ್ 2’ ಚಿತ್ರ ಮಾರ್ಚ್ 19ರಂದು ರಿಲೀಸ್ ಆಯಿತು. ಈ ಸಿನಿಮಾ ಎದುರು ‘ಟಾಕ್ಸಿಕ್’ ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡ ತನ್ನ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿತು. ಇದು ‘ಧುರಂಧರ್ 2’ ಮತ್ತಷ್ಟು ಅಬ್ಬರಿಸಲು ಸಹಕಾರಿ ಆಗಿದೆ. ಈ ಚಿತ್ರದ ಪ್ರೀಮಿಯರ್ ಶೋಗೆ 11 ಸಾವಿರ ಶೋ ಸಿಕ್ಕಿತ್ತು. ಆ ಬಳಿಕ ಪ್ರತಿ ದಿನ ಸರಾಸರಿ 20 ಸಾವಿರ ಶೋಗಳು ಸಿಗುತ್ತಿವೆ. ಪ್ರೀಮಿಯರ್ ಶೋ ದಿನವನ್ನು ಲೆಕ್ಕಕ್ಕೆ ಹಿಡಿದರೆ ಚಿತ್ರ 92 ಸಾವಿರ ಶೋಗಳನ್ನು ಪ್ರಸಾರ ಮಾಡಿದೆ.

ಪ್ರೀಮಿಯರ್ ಶೋನಿಂದ ಚಿತ್ರಕ್ಕೆ 43 ಕೋಟಿ ರೂಪಾಯಿ, ಗುರುವಾರ 102 ಕೋಟಿ ರೂಪಾಯಿ, ಶುಕ್ರವಾರ 80 ಕೋಟಿ ರೂಪಾಯಿ, ಶನಿವಾರ 113 ಕೋಟಿ ರೂಪಾಯಿ ಹಾಗೂ ಭಾನುವಾರ 114 ಕೋಟಿ ರೂಪಾಯಿ ಚಿತ್ರ ಗಳಿಕೆ ಮಾಡಿದೆ. ಇದು ಚಿತ್ರತಂಡದ ಹೆಚ್ಚುಗಾರಿಕೆ.

ಇದನ್ನೂ ಓದಿ: ‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?

‘ಧುರಂಧರ್’ ಚಿತ್ರ 1300 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ‘ಧುರಂಧರ್ 2’ ಚಿತ್ರವು ವಾರದ ಗಳಿಕೆಯೇ ಸಾವಿರ ಕೋಟಿ ರೂಪಾಯಿ ತಲುಪುವು ನಿರೀಕ್ಷೆ ಇದೆ. ವಿಶ್ವ ಮಟ್ಟದಲ್ಲಿ ಸಿನಿಮಾದ ಕಲೆಕ್ಷನ್ 2000 ಕೋಟಿ ರೂಪಾಯಿ ತಲುಪುವ ನಿರೀಕ್ಷೆ ಇದೆ. ವಿಶ್ವ ಮಟ್ಟದಲ್ಲಿ ಸಿನಿಮಾ ಅಬ್ಬರಿಸುತ್ತಿದೆ. ಅನೇಕ ರಾಷ್ಟ್ರಗಳಲ್ಲಿ ಸಿನಿಮಾ ಬ್ಯಾನ್ ಆದ ಹೊರತಾಗಿಯೂ ಸಿನಿಮಾದ ಗಳಿಕೆ ಮೇಲೆ ಯಾವುದೇ ಪ್ರಭಾವ ಬೀರಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಮನಗರ: ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ, ಮಾರ್ಚ್ 23: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ (Ramanagara) ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಚನ್ನಪಟ್ಟಣ ತಾಲೂಕಿನ ಸಂಕಲಗೆರೆ (Sankalagere) ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್, ನಿದ್ರೆ ಮಂಪರಿನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್​ಡೇಟ್ ಆಗಲಿದೆ)

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯೋಗ್ಯತೆಯನ್ನು ಪರರ ಪರಿಚಯಿಸುವರು

ಮೇಷ ರಾಶಿ:

ಕೆಲವು ಜನರು ಸವಾಲಿನ ಕಾರ್ಯಗಳನ್ನು ನಿಭಾಯಿಸಲು ತೊಂದರೆಗಳನ್ನು ಎದುರಿಸಬಹುದು. ಇಂದು ನೀವು ಅಗತ್ಯ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಯೋಚಿಸುವಿರಿ. ಒಳ್ಳೆಯದನ್ನು ಸಾಧಿಸುವ ನಿಮಗೆ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಉದ್ಯೋಗಕ್ಕೆ ಸೇರುವಾಗ ಅಲ್ಪದೂರದ ದೃಷ್ಟಿಯಾದರೂ ಬೇಕು. ಹೂಡಿಕೆಯತ್ತ ಗಮನಹರಿಸುವುದು ಸದ್ತಕ್ಕೆ ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ರೂಪವು ನಿಮ್ಮ ಕೆಲವು ಕಾರ್ಯಕ್ಕೆ ಅಡ್ಡಿಯಾದೀತು.

ವೃಷಭ ರಾಶಿ :

ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವ್ಯಾಪಾರ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಗೊಂದಲಕ್ಕೆ ಒಳಗಾಗಬಹುದು. ಉದ್ಯೋಗವನ್ನು ಹುಡುಕುತ್ತಿರುವ ಜನರು ಅನಧಿಕೃತ ಜನರ ಸಂಪರ್ಕದಿಂದ ತೊಂದರೆಗಳನ್ನು ಎದುರಿಸಬೇಕಾಗಬಹುದು. ಆಪತ್ತಿಗಾಗಿ ಇಟ್ಟ ಸಂಪತ್ತಿನ ವಿನಿಯೋಗ ಮಾಡುವ ಸ್ಥಿತಿಯು ಬರುವುದು. ಏಕಾಂಗಿಯಾಗಿ ಇರುವುದನ್ನು ಇಷ್ಟಪಡುವುದು ಅನಿವಾರ್ಯವಾಗಲಿದೆ. ನಿಮ್ಮನ್ನು ಪ್ರಕಟಪಡಿಸಿಕೊಳ್ಳುವುದು ಇಷ್ಟವಿದ್ದರೂ ಸಾಧಿಸಲಾಗದು.

ಮಿಥುನ ರಾಶಿ:

ಇಂದು ಹಣಕಾಸಿನಿಂದ ಆಗುವ ಯಾವುದೇ ಅಪಾಯವನ್ನು ತೆಗೆದುಕೊಳ್ಳುವ ಮನಸ್ಸು ಮಾಡುವುದು ಬೇಡ. ಸಂಬಂಧದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ. ಮಕ್ಕಳ ಆರೋಗ್ಯದ ಬಗ್ಗೆ ಮನಸ್ಸು ಚಿಂತಿಸಲಿದೆ. ಅಪರಿತರು ನಿಮ್ಮನ್ನು ಪರಿಚಯ ಮಾಡಿಕೊಳ್ಳಬಹುದು. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ. ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಸಂಗಾತಿಯ ನಡುವಿನ ಸಂಬಂಧವು ದುರ್ಬಲವಾಗಲಿದ್ದು, ಗಟ್ಟಿಯಾಗಲು ತಂತ್ರವನ್ನು ಬಳಸುವಿರಿ.

ಕರ್ಕಾಟಕ ರಾಶಿ:

ನೀವು ಕುಟುಂಬದ ಜೊತೆ ಎಲ್ಲೋ ಪ್ರಯಾಣಿಸಲು ತೀರ್ಮಾನ‌ಮಾಡಿ ಹೊರಡುವಿರಿ. ಇಂದು ಸಂಬಂಧಗಳಲ್ಲಿ ತಪ್ಪು ತಿಳುವಳಿಕೆ ಹೆಚ್ಚಾಗುತ್ತದೆ. ಉಪಕಾರದ ಸ್ಮರಣೆಯು ಅಲ್ಲಗಳೆದು ಸಂತೋಷದಿಂದ ಇರುವಿರಿ. ನಿಮ್ಮಿಂದ ಕೆಲಸವಾಗಲು ನಿಮ್ಮನ್ನು ಹೊಗಳಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು. ನೀವು ಸ್ವಾರ್ಥಿಗಳಂತೆ ಕಾಣುವಿರಿ. ಎಲ್ಲವೂ ನಿಮ್ಮದಾಗಬೇಕು ಎನ್ನುವ ಬಯಕೆ ಇರಿವುದು. ಅವಿವಾಹಿತರ ವಿವಾಹಕ್ಕೆ ಸಂಬಂಧಿಸಿದಂತೆ ಶುಭ ವಾರ್ತೆಯು ಇರಲಿದೆ.

ಸಿಂಹ ರಾಶಿ:

ಸ್ನೇಹಿತರ ಜೊತೆಗೆ ಸಮಯ ಕಳೆಯುವುದು ನಿಮಗೆ ಸಂತೋಷವಾಗಲಿದೆ. ಇಂದು ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ. ಯಾವುದೋ ಕಾರಣಕ್ಕೆ ಕೊಟ್ಟ ಹಣ ವಾಪಾಸಾಗದು. ಚರಾಸ್ತಿಯ ಸಲುವಾಗಿ ಕಾನೂನು ಹೋರಾಟ ಮಾಡಬೇಕಾದೀತು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನೇರವಾದ ಮಾತಿನಿಂದ ತೊಂದರೆಯಾಗಬಹುದು. ಕುಶಲತೆಯಿಂದ ಕೆಲಸವನ್ನು ಮಾಡಿ. ಹೂಡಿಕೆಯ ವ್ಯವಹಾರವು ಕೆಲವರಲ್ಲಿ ಮಾತ್ರ ಇರಲಿ.

ಕನ್ಯಾ ರಾಶಿ:

ನಿಮ್ಮ ಲಾಭವನ್ನು ಗ್ರಾಹಕರಿಂದ ಹೆಚ್ಚು ಮಾಡಿಕೊಳ್ಳುವಿರಿ. ಸಂತೋಷದ ಸಮಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವಿರಿ. ಹರಿದು ಹೋದ ಮನಸ್ಸುಗಳನ್ನು ಕೂಡಿಸುವುದು ಕಷ್ಟವಾದೀತು. ಜೀವನದಲ್ಲಿ ಉತ್ಸಾಹ ತುಂಬಿಕೊಳ್ಳುವ ವ್ಯಕ್ತಿಯನ್ನು ಹುಡುಕಿಕೊಳ್ಳಿ. ಸಾಮಾಜಿಕ ಕೆಲಸದಲ್ಲಿ ನೀವು ಕಳೆದುಹೋಗಬಹುದು. ದೂರದ ವಾಹನ ಚಾಲನೆಯಲ್ಲಿ ಜಾಗರೂಕತೆ ಇರಲಿ. ಮಿತ್ರರಿಗೆ ಸಹಾಯ ಮಾಡಿ ನೀವು ತೊಂದರೆಯಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಸ್ವಲ್ಪ ಸಮಾಧಾನಿರುವುದು.

ತುಲಾ ರಾಶಿ:

ಇಂದು ಸರಿಯಾಗಿ ಯೋಚಿಸದೆ ದುಡುಕಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯಮಿಗಳು ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ಹಿತಶತ್ರುಗಳಿಂದ ಹಲವು ತೊಂದರೆಗಳು ಬರಬಹುದು. ಕೃತಜ್ಞತೆ ಭಾವವನ್ನು ಪ್ರಕಟಿಸುವಿರಿ. ಹೊಗಳಿಕೆಯನ್ನು ಬಹಳ ಸಂಕೋಚದಿಂದ ಪಡೆಯುವಿರಿ. ಧಾರ್ಮಿಕ ಭಾವವು ನಿಮ್ಮಲ್ಲಿ ಜಾಗರೂಕವಾಗಬಹುದು. ಪ್ರೀತಿಯ ವಿಚಾರದಲ್ಲಿ ಬುದ್ಧಿವಾದವನ್ನು ಹೇಳುವರು. ಕೆಲವರನ್ನು ನೀವು ನಂಬಬೇಕಾಗುತ್ತದೆ.

ವೃಶ್ಚಿಕ ರಾಶಿ:

ಪರರ ರಹಸ್ಯವನ್ನು ಭೇದಿಸುವ ಕುತೂಹಲ ಇರಲಿದೆ. ಗಣ್ಯರ ಜೊತೆ ಮಾತುಕತೆ ನಡೆಸುವಿರಿ. ದೂರವಾಣಿಯ ಕರೆಯಿಂದ ನಿಮಗೆ ಆತಂಕ ಎದುರಾಗಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯುವರು. ದೀರ್ಘಕಾಲ ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ನೀವು ಇಷ್ಟಪಟ್ಟಿದ್ದನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಪತ್ನಿಯ ಕಡೆಯವರಿಂದ ಅಹಿತಕರವಾದ ಮಾತುಗಳು ಕೇಳಿಬರಬಹುದು.

ಧನು ರಾಶಿ:

ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ. ಒಂದ ಕಡೆ ನಿಂತಲ್ಲಿ ನಿಲ್ಲಲಾಗದು. ಆಸ್ತಿಯಲ್ಲಿ ಹೂಡಿಕೆ ಮಾಡುವ ಮೊದಲು ಸರಿಯಾಗಿ ಯೋಚಿಸಿ. ನಿಮ್ಮ ಮಾತನ್ನು ನಿಯಂತ್ರಿಸಿ. ಇಂದು ನೀವು ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಬಹುದು. ಬಹಳ ದಿನಗಳ ಅನಂತರ ಉತ್ತಮ ಭೋಜನವು ಸಿಗವುದು. ಹಣಕಾಸಿಗೆ ಸಂಬಂಧಿಸಿದ ಆರೋಪದ ಬಗ್ಗೆ ಏನನ್ನೂ ನೀವು ಹೇಳಲಾರಿರಿ.

ಮಕರ ರಾಶಿ:

ಉದ್ಯೋಗಸ್ಥರು ಸವಾಲಿನ ಕೆಲಸಗಳನ್ನು ಬಹಳ ಎಚ್ಚರಿಕೆಯಿಂದ ನಿಭಾಯಿಸಬೇಕು. ನಿಮ್ಮ ವೃತ್ತಿಜೀವನದಲ್ಲಿ ಸಕಾರಾತ್ಮಕ ಮನಸ್ಥಿತಿಯೊಂದಿಗೆ ಮುನ್ನಡೆಯಿರಿ. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು.‌ ಸಂಗಾತಿಯ ಅಸಹಜ ಮಾತುಗಳಿಂದ ನಿಮಗೆ ಕಷ್ಟವಾಗುವುದು. ನಿಮ್ಮನ್ನು ಕುಟುಂಬವು ನಿರ್ಲಕ್ಷ್ಯಿಸಿದಂತೆ ಕಾಣುವುದು. ಕುರುಡಾಗಿ ಯಾವುದನ್ನೂ ನಂಬುವುದು ಬೇಡ.

ಕುಂಭ ರಾಶಿ:

ಇಂದು ಪ್ರೀತಿಯ ಸಂಬಂಧಗಳಲ್ಲಿ ಮಾಧುರ್ಯವಿರಲಿದೆ. ಕೆಲಸದ ಜವಾಬ್ದಾರಿಗಳನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಿ. ಇಂದು ಖರ್ಚುಗಳನ್ನು ನಿಯಂತ್ರಿಸಿ. ವ್ಯವಹಾರದಲ್ಲಿ ಆತ್ಮವಿಶ್ವಾಸದಿಂದ ಇರಿ.‌ ಭಯಪಡುವ ಅವಶ್ಯಕತೆ ಇರುವುದಿಲ್ಲ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ಸಲಹೆಯನ್ನು ಪಡೆದು ನಿಮ್ಮ ನಿರ್ಧಾರವನ್ನು ಮಾಡಿ. ಅನ್ಯ ಆಲೋಚನೆಯಲ್ಲಿ ದಿನವನ್ನು ಕಳೆಯುವಿರಿ. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಸಹೋದರನಿಂದ ವಂಚನೆಯಾದ ಅನುಮಾನ ಇರುವುದು.

ಮೀನ ರಾಶಿ:

ಇಂದು ವ್ಯಾಪಾರದಲ್ಲಿ ಆರ್ಥಿಕ ಲಾಭ ದೊರೆಯಲಿದೆ. ಶತ್ರುಗಳನ್ನು ನಿಮ್ಮ ಪ್ರಭಾವವನ್ನು ಬಳಸಿ ನಿಗ್ರಹ ಮಾಡುವಿರಿ ಬಿಡುವಿಲ್ಲದ ದುಡಿಮೆಯು ನಿಮಗೆ ಕಷ್ಟವಾಗಬಹುದು. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಹೊಸ ವಾಹನ ಖರೀದಿ ಮಾಡುವುದನ್ನು ಕೈ ಬಿಡುವಿರಿ. ಸಹೋದರರ ಜೊತೆಗಿನ ಸಂಬಂಧವು ಒಂದು ಮಾತಿನಿಂದ ಹಾಳಾಗಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಪಚಮೀ, ನಿತ್ಯನಕ್ಷತ್ರ : ಭರಣೀ, ಯೋಗ : ವಿಷ್ಕಂಭ, ಕರಣ : ಭದ್ರ, ಸೂರ್ಯೋದಯ – 06 – 27 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:59 – 09:29, ಯಮಗಂಡ ಕಾಲ 11:00 – 12:31, ಗುಳಿಕ ಕಾಲ 14:02 – 15:33

-ಲೋಹಿತ ಹೆಬ್ಬಾರ್-8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 23ರ ದಿನಭವಿಷ್ಯ

ಮದುವೆ- ಪ್ರೀತಿ, ಪ್ರೇಮದ ವಿಚಾರಗಳನ್ನು ಮಾತನಾಡುತ್ತೀರಿ ಎಂದಾದಲ್ಲಿ ಈ ದಿನ ಹಳದಿ ಬಣ್ಣದ ಬಟ್ಟೆ ಧರಿಸಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಯಾರು ಉದ್ಯೋಗಕ್ಕೆ ಸಂಬಂಧಿಸಿದಂಥ ಪರೀಕ್ಷೆಗಳನ್ನು ಬರೆದಿರುತ್ತಾರೋ ಅಂಥವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಂಬಂಧಿಕರ ಮುಖಾಂತರ ರೆಫರೆನ್ಸ್ ಗಳು ಬರಬಹುದು. ಇದು ನಿಮ್ಮ ಮನಸ್ಸಿಗೆ ಒಪ್ಪುವ ಸಾಧ‌್ಯತೆಗಳು ಸಹ ಹೆಚ್ಚಿವೆ. ಕೊನೆ ಕ್ಷಣದಲ್ಲಿ ನಿರ್ಧಾರಗಳಲ್ಲಿ ಬಹಳ ಏರುಪೇರು ಮಾಡಲಿದ್ದೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಪ್ರೀತಿ- ಪ್ರೇಮದಲ್ಲಿ ಅಂದುಕೊಳ್ಳದ ಕೆಲವು ಬೆಳವಣಿಗೆಗಳು ನಡೆಯಲಿವೆ. ಈ ಹಿಂದೆ ಆಗಿದ್ದ ಕೆಲವು ಘಟನೆಗಳಿಂದಾಗಿ ಯಾರದೋ ಮಾತು, ಟೀಕೆ, ಆಕ್ಷೇಪಗಳಿಗೆ ಇಡೀ ದಿನ ತಲೆ ಕೆಡಿಸಿಕೊಳ್ಳುವಂತಾಗುತ್ತದೆ. ಯಾರೇ ನಿಮ್ಮ ಕೆಲಸದ ಬಗ್ಗೆ ಆಕ್ಷೇಪ ಹೇಳಿದರೂ ಅದನ್ನು ತೋರಿಸುವಂತೆ ನಯವಾಗಿಯೇ ಕೇಳಿ. ಹಾಗೂ ಅವರು ನಿಜವಾಗಿಯೂ ತಪ್ಪುಗಳನ್ನು ತೋರಿಸಿದ್ದೇ ಆದಲ್ಲಿ ತಿದ್ದುಕೊಳ್ಳುವುದಕ್ಕೆ ಪ್ರಯತ್ನಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ತಂದೆ- ತಾಯಿಯ ಆರೋಗ್ಯದಲ್ಲಿ ಏನಾದರೂ ಸಮಸ್ಯೆಗಳು ಏನಾದರೂ ಇದ್ದಲ್ಲಿ ಪರಿಣತ- ತಜ್ಞ ವೈದ್ಯರ ನೆರವು ನಿಮ್ಮ ಪಾಲಿಗೆ ದೊರೆಯಲಿದೆ. ಆತಂಕಗಳು ದೂರವಾಗುವುದಕ್ಕೆ ಹಿರಿಯರು ಸಹಕಾರ ನೀಡಲಿದ್ದಾರೆ. ನಿಮ್ಮ ಅದೃಷ್ಟವು ಈ ದಿನ ಅಚ್ಚರಿಯ ರೀತಿಯಲ್ಲಿ ಕೆಲಸ ಮಾಡುತ್ತದೆ. ಈ ಹಿಂದೆ ಯಾವಾಗಲೋ ಮಾಡಿದ ಕೆಲಸಕ್ಕೆ ಮೆಚ್ಚುಗೆ ಎಂಬಂತೆ ಅದೇ ಕೆಲಸಕ್ಕೆ ಸಂಬಂಧಿಸಿದವರು ಹುಡುಕಿಕೊಂಡು ಬಂದು, ನಿಮಗೆ ಕೆಲಸಗಳನ್ನು ಒಪ್ಪಿಸುವ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 23ರ ದಿನಭವಿಷ್ಯ

ಮನೆಯಲ್ಲಿ ಹಿರಿಯರು ಅನಾರೋಗ್ಯದಿಂದ ಇದ್ದಲ್ಲಿ ಅವರ ಆರೋಗ್ಯ ಚೇತರಿಕೆಗಾಗಿ ಧನ್ವಂತರಿ ಮಂತ್ರ ಪಠಿಸಿ ಅಥವಾ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಸಣ್ಣ- ಪುಟ್ಟದಾದರೂ ಮನೆ ಮಟ್ಟಿಗೆ ಕಾರ್ಯಕ್ರಮ ಆಯೋಜಿಸುವಂಥ ಸಾಧ್ಯತೆ ಇದೆ. ತಂದೆ ಅಥವಾ ತಂದೆ ಸಮಾನರಾದವರ ಆರೋಗ್ಯ ಸ್ಥಿತಿ ಸ್ವಲ್ಪ ಆತಂಕಕ್ಕೆ ಕಾರಣ ಆಗಬಹುದು. ನಿಮ್ಮೆಲ್ಲ ಪ್ರಯತ್ನವನ್ನು ಮಾಡಿದ ನಂತರದಲ್ಲಿಯೂ ಒಬ್ಬರೇ ವ್ಯಕ್ತಿ, ಒಂದೇ ವಿಷಯ, ಒಂದು ವಸ್ತು ನಿಮ್ಮನ್ನು ಈ ದಿನ ಬಹುವಾಗಿ ಕಾಡಬಹುದು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಒಂದು ವೇಳೆ ಆಸ್ತಿ ಅಥವಾ ವಾಹನ ಮಾರಾಟಕ್ಕೆ ಇಟ್ಟಿದ್ದಲ್ಲಿ ಇವುಗಳಿಗೆ ಸಂಬಂಧಿಸಿದಂತೆ ಯಾವುದೇ ಮಾತುಕತೆಯನ್ನು ಇದೊಂದು ದಿನದ ಮಟ್ಟಿಗೆ ಮಾಡಬೇಡಿ. ನಿಮ್ಮ ಬಳಿ ಇರುವ ಹಣಕ್ಕೆ ತಕ್ಕಂತೆ ಪ್ರಾಜೆಕ್ಟ್ ವೊಂದು ಹುಡುಕಿಕೊಂಡು ಬರುವಂಥ ಸಾಧ್ಯತೆಗಳಿವೆ. ಉದಾಹರಣೆಗೆ, ಇಷ್ಟೇ ಮೊತ್ತಕ್ಕೆ ಅಪಾರ್ಟ್ ಮೆಂಟ್ ಅಥವಾ ಸೈಟು ಅಥವಾ ವಾಹನ ಹೀಗೆ ನಿಮಗೆ ದೊರೆಯುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಮನ ಮುಟ್ಟುವಂತೆ ಎಲ್ಲ ವಿಚಾರಗಳನ್ನು ಇತರರಿಗೆ ದಾಟಿಸುವುದಕ್ಕೆ ಸಫಲರಾಗಲಿದ್ದೀರಿ. ಮುಂದಾಲೋಚನೆಯಿಂದ ಲೆಕ್ಕ ಹಾಕಿಕೊಂಡು ಇಟ್ಟ ಹೆಜ್ಜೆಗಳು ಫಲ ನೀಡಲಿವೆ. ಯಾರು ಬದ್ಧತೆಯಿಂದ ನಿಮ್ಮ ಸಲಹೆ- ಸೂಚನೆಯನ್ನು ಅನುಸರಿಸಿದವರಿಗೆ ದೊಡ್ಡ ಲಾಭವಾಗುವ ಸಾಧ್ಯತೆಗಳಿವೆ. ಇತರರು ತಮ್ಮಿಂದ ಪೂರ್ತಿ ಮಾಡಲು ಸಾಧ್ಯವಿಲ್ಲ ಎಂದು ಅರ್ಧಕ್ಕೇ ನಿಲ್ಲಿಸಿದ ಕೆಲಸವೊಂದನ್ನು ಪೂರ್ತಿ ಮಾಡಬೇಕಾದ ಜವಾಬ್ದಾರಿ ನಿಮಗೆ ಬರಲಿದೆ.

ಲೇಖನ- ಸ್ವಾತಿ ಎನ್.ಕೆ.

Source link