Headlines

nagaraj11081993

ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ತುಮಕೂರು, (ಮಾರ್ಚ್ 22): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಮಾರ್ಚ್ 22) ಉಸ್ತುವಾರಿ ಜಿಲ್ಲೆ ಕೊಪ್ಪಳದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಶಿರಾ ದಾಟಿ ಕೋರ ಬಳಿ ಬರುವಾಗ ಎದೆನೋವು ಶುರುವಾಗಿದೆ. ಹೀಗಾಗಿ ಕೂಡಲೇ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ದಾಖಲಿಸಲಾಗಿದೆ. ಕನಕಗಿರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿ ಇಂದು (ಮಾರ್ಚ್ 22) ವಾಪಸ್ ಬೆಂಗಳೂರಿಗೆ…

Read More

‘ಧುರಂಧರ್ 2’ ವಿರುದ್ಧ ‘ಉಸ್ತಾದ್ ಭಗತ್ ಸಿಂಗ್’ ಬಾಕ್ಸ್ ಆಫೀಸ್ ಹರಸಾಹಸ

‘ಧುರಂಧರ್ 2’ (Dhurandhar 2 ಸಿನಿಮಾ ಬಿಡುಗಡೆ ಆದ ಮೂರೇ ದಿನಕ್ಕೆ 300 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಾ ಸಾಗುತ್ತಿದೆ. ಇದನ್ನು ಮೊದಲೇ ಊಹಿಸಿದ್ದ ಕೆಲ ಸಿನಿಮಾಗಳು ‘ಧುರಂಧರ್ 2’ ಸಿನಿಮಾ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಂಡವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರತಂಡ ‘ಧುರಂಧರ್ 2’ ಸಿನಿಮಾವನ್ನು ಸರಿಯಾಗಿ ಅಂದಾಜಿಸದೆ ಅದರ ಎದುರು ಬಿಡುಗಡೆ ಮಾಡಿತು. ಆದರೆ ಈಗ ಬಾಕ್ಸ್ ಆಫೀಸ್​​ನಲ್ಲಿ ಏದುಸಿರು ಬಿಡುತ್ತಿದೆ. ಆದರೆ…

Read More

IPL: ಸತತ ಗೆಲುವು.. ಆರ್​ಸಿಬಿಯ ಈ ಐತಿಹಾಸಿಕ ದಾಖಲೆಯನ್ನು ಮುರಿಯುವವರ್ಯಾರು?

ಸತತ 18 ವರ್ಷಗಳ ಕಾಯುವಿಕೆಯ ಬಳಿಕ 2025 ರ ಐಪಿಎಲ್‌ನಲ್ಲಿ (IPL 2025) ಫೈನಲ್ ಪಂದ್ಯವನ್ನು ಗೆದ್ದು ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಳೆದ ಆವೃತ್ತಿಯ ಯಶಸ್ಸನ್ನು ಪುನರಾವರ್ತಿಸುವ ಇರಾದೆಯಲ್ಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಹೆಚ್ಚು ಸಮತೋಲನದಿಂದ ಕೂಡಿರುವ ಆರ್​ಸಿಬಿ ಈ ಬಾರಿಯೂ ಕಪ್ ಗೆಲ್ಲುವ ಫೆವರೇಟ್ ತಂಡ ಎನಿಸಿಕೊಂಡಿದೆ. ಅದರಲ್ಲೂ ಕಳೆದ ಬಾರಿಯಂತೆ ಈ ಬಾರಿಯೂ ಆರ್​ಸಿಬಿ ತಂಡ ತವರಿನ ಹೊರಗೆ ತನ್ನ ವಿಕ್ರಮವನ್ನು ಮುಂದುವರೆಸಲಿ ಎಂಬುದು…

Read More

ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ

ನವದೆಹಲಿ, (ಮಾರ್ಚ್ 22): ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 22)  ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಅಲ್ಪಾವಧಿ ಹಾಗೂ ದೀರ್ಘಾವಧಿ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದು, ಸಚಿವರು, ಕಾರ್ಯದರ್ಶಿಗಳ ಸಮಿತಿ ರಚನೆಗೆ ಮೋದಿ ಸೂಚನೆ ನೀಡಿದ್ದಾರೆ. ಅಲ್ಲದೇ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ನೀಡಿದ್ದಾರೆ. ಹಾಗೇ ಮುಂಗಾರು ಹಂಗಾಮಿನ ರಸಗೊಬ್ಬರದ ಲಭ್ಯತೆ ಬಗ್ಗೆ ಪ್ರಧಾನಿ ಚರ್ಚೆ ಮಾಡಿದ್ದು, ರೈತರಿಗೆ ರಸಗೊಬ್ಬರ…

Read More

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಮಗನ ತಪ್ಪಿನಿಂದ ಜೈಲು ಸೇರಿದ ತಂದೆ

ಹುಬ್ಬಳ್ಳಿ, ಮಾರ್ಚ್​ 22: ಪಾಲಕರೇ ಅಪ್ರಾಪ್ತ ವಯಸ್ಸಿನ ನಿಮ್ಮ ಮಕ್ಕಳಿಗೆ ನೀವು ಓಡಿಸಲು ಕಾರು, ಬೈಕ್​​, ಸ್ಕೂಟಿ ನೀಡ್ತಿದ್ದರೆ ಎಚ್ಚರ. ಏಕೆಂದರೆ ಅಪಘಾತಗಳಾದರೆ ನಿಮ್ಮ ಮಕ್ಕಳು ಮಾತ್ರವಲ್ಲ, ನೀವು ಜೈಲು ಪಾಲಾಗುತ್ತೀರಾ ಹುಷಾರ್. ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವಾಗ ನಡೆದ ಅಪಘಾತದಲ್ಲಿ (accident) ಬಾಲಕನ ಸಾವಿಗೆ (death) ಸಂಬಂಧಿಸಿದಂತೆ ಅಪಘಾತ ಮಾಡಿದ ಬಾಲಕ ಮಾತ್ರವಲ್ಲ, ಆತನ ತಂದೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ರೀಲ್ಸ್ ತಂದ ಆಪತ್ತು ಇದು ಸೋಶಿಯಲ್ ಮೀಡಿಯಾ ಜಮಾನಾ. ನಾಲ್ಕು ವರ್ಷದ ಮಕ್ಕಳಿಂದ ವೃದ್ದರವರಗೆ ಎಲ್ಲರ…

Read More

ಹೈದರಾಬಾದ್‌: ‘ಧುರಂಧರ್ 2’ ಶೋನಲ್ಲಿ ಭಾಷಾ ವಿವಾದ, ಪೊಲೀಸರ ಎಂಟ್ರಿ

ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2: ದಿ ರಿವೇಂಜ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಹಿಂದಿ ಮಾತ್ರವಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲೂ ಬಿಡುಗಡೆ ಆಗಿದೆ. ಎಲ್ಲೆಡೆ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಕೆಲವೆಡೆ ಸಿನಿಮಾದ ಪ್ರದರ್ಶನದ ವೇಳೆ ಕೆಲವೆಡೆ ಕಿರಿಕ್ ಸಹ ಆಗಿದೆ. ಕೆನಡಾದಲ್ಲಿ ಸಿನಿಮಾ ಪ್ರದರ್ಶನದ ವೇಳೆ ನಡೆದ ಗಲಾಟೆಯಲ್ಲಿ ಸಿನಿಮಾ ಪರದೆಯನ್ನೇ ಹರಿದ ಘಟನೆ ನಿನ್ನೆ ವರದಿ ಆಗಿತ್ತು. ಇದೀಗ ಹೈದರಾಬಾದ್​​ನಲ್ಲಿ ಸಹ…

Read More

ಐಪಿಎಲ್ ಇತಿಹಾಸದಲ್ಲಿ ಫೈನಲ್ ತಲುಪದ ಏಕೈಕ ತಂಡ ಯಾವುದು ಗೊತ್ತಾ?

ಐಪಿಎಲ್‌ನಲ್ಲಿ ಇದುವರೆಗೆ 18 ಆವೃತ್ತಿಗಳು ನಡೆದಿವೆ. ಈ 18 ಆವೃತ್ತಿಗಳಲ್ಲಿ ಪ್ರತಿ ತಂಡವೂ ಒಂದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಫೈನಲ್​ನಲ್ಲಿ ಆಡಿದೆ. ಆದರೆ ಇದುವರೆಗೆ ಫೈನಲ್ ಪಂದ್ಯವನ್ನು ಆಡದೆ ಇರುವ ತಂಡವೊಂದಿದೆ. ಆ ತಂಡ ಯಾವುದೆಂದರೆ ಲಕ್ನೋ ಸೂಪರ್ ಜೈಂಟ್ಸ್. ಲೀಗ್​ನ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಈ ತಂಡ ಪ್ಲೇ ಆಫ್ ಸುತ್ತಿನಲ್ಲಿ ಎಡವಿ ಫೈನಲ್​ ರೇಸ್​ನಿಂದ ಹೊರಬಿದ್ದಿದೆ. 2022 ರಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲ…

Read More

ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ!

ದಾವಣಗೆರೆ, (ಮಾರ್ಚ್ 22): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಶಾಮನೂರು ಮೊಮ್ಮಗ ಸಮರ್ಥ್‌ಗೆ (Samarth Shamanur) ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಡೆಗಣಿಸಿದ್ದಕ್ಕೆ ಮುಸ್ಲಿಂ ಮುಖಂಡರು (Muslim Leaders) ಕೆಂಡಾಮಂಡಲವಾಗಿದ್ದಾರೆ. ಈ ಬಾರಿ ಕಾಂಗ್ರೆಸ್‌ಗೆ (Congress) ತಕ್ಕ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬೆಂಬಲಿಸದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಬಾಗಲಕೋಟೆ ಬೈ ಎಲೆಕ್ಷನ್​​​ ನಲ್ಲೂ…

Read More

ವಿಜಯನಗರ: ತಂದೆ ಕಣ್ಣೆದುರೇ ಜಲ ಸಮಾಧಿಯಾದ ಇಬ್ಬರು ಪುತ್ರರು; ಮತ್ತೊಬ್ಬ ಮಗ ಬಚಾವ್​

ವಿಜಯನಗರ, ಮಾರ್ಚ್​ 22: ತಂದೆ ಕಣ್ಣೆದುರೇ ತುಂಗಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಪುತ್ರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಬಳಿ ನಡೆದಿದೆ. ಎಂ.ಜಿ.ಮನು(19) ಮತ್ತು ಎಂ.ಜಿ.ಪ್ರಜ್ವಲ್(18) ಮೃತರು. ನದಿಯಲ್ಲಿ ಮುಳುಗುತ್ತಿದ್ದ ಕಿರಿಮಗ ಚಿರಂಜೀವಿಯನ್ನ ತಂದೆ ಮಂಜಪ್ಪ ರಕ್ಷಿಸಿದ್ದಾರೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದ ಬಳಿಯ ತುಂಗಭದ್ರ ನದಿಗೆ ಮೂವರು ಸಹೋದರರು ಕೆರೆಗೆ ಈಜಾಡಲು ಹೋಗಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ತಂದೆ…

Read More

ನಟಿ ರನ್ಯಾ ರಾವ್ ಡೀಲಿಂಗ್ ಬಗ್ಗೆ ಆಘಾತಕಾರಿ ಮಾಹಿತಿ ಬಯಲಿಗೆ, ದುಬೈನಿಂದ ಆಫ್ರಿಕಾವರೆಗೆ

ಬೆಂಗಳೂರು, (ಮಾರ್ಚ್ 22): ರನ್ಯಾ ರಾವ್ (Ranya Rao) ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣ ಸಂಬಂಧ 50 ಕೆಜಿ ಚಿನ್ನ ಸಾಗಣೆಗೆ ಉಗಾಂಡ (Uganda) ಮೂಲದ ಏಜೆಂಟ್ ಜೊತೆ ರನ್ಯಾ ರಾವ್ ಸಂಪರ್ಕದಲ್ಲಿದ್ದ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸುಮಾರು 102.55 ಕೋಟಿ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಬುಧವಾರ ಬೆಂಗಳೂರಿನ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲಿ ಉಗಾಂಡಾ ಮೂಲದ ಏಜೆಂಟರೊಂದಿಗೆ ನಟಿ ನಡೆಸಿದ್ದ ಡೀಲಿಂಗ್ ಬಗ್ಗೆ ಆಘಾತಕಾರಿ…

Read More