All posts by nagaraj11081993

Chanakya Niti: ಜೀವನದಲ್ಲಿ ಮುಂದುವರೆಯಲು ಬಯಸಿದರೆ ಈ ವಿಚಾರಗಳ ಬಗ್ಗೆ ಹಿಂಜರಿಕೆ ಪಡಬಾರದು

Chanakya Niti: ಜೀವನದಲ್ಲಿ ಮುಂದುವರೆಯಲು ಬಯಸಿದರೆ ಈ ವಿಚಾರಗಳ ಬಗ್ಗೆ ಹಿಂಜರಿಕೆ ಪಡಬಾರದು

ಯಾರು ಏನೆನ್ನುತ್ತಾರೋ, ಸಮಾಜ ನಮ್ಮ ಬಗ್ಗೆ ಏನೆಂದುಕೊಳ್ಳುತ್ತೋ  ಎಂಬ ಅಂಜಿಕೆ, ಭಯ, ನಾಚಿಕೆಯಿಂದ ತಾವು ಅಂದುಕೊಂಡ ಕೆಲಸಗಳನ್ನು ಮಾಡಲು ಹಿಂಜರಿಯುತ್ತಾರೆ. ಈ ರೀತಿಯ ಹಿಂಜರಿಕೆಯಿದ್ದರೆ, ಯಶಸ್ಸು (success) ಗಳಿಸಲು, ಜೀವನದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಈ ಕೆಲವು ವಿಚಾರಗಳ ಬಗ್ಗೆ ನಾಚಿಕೆ ಪಟ್ಟರೆ, ಹಿಂಜರಿದರೆ  ಜೀವನದಲ್ಲಿ ಎಂದಿಗೂ ಮುಂದುವರೆಯಲು ಸಾಧ್ಯವಿಲ್ಲವಂತೆ. ಹಾಗಿದ್ರೆ ಜೀವನದಲ್ಲಿ ಯಾವ ಸಂಗತಿಗಳ ನಾಚಿಕೆ ಪಡಬಾರದು ಎಂಬುದನ್ನು ನೋಡೋಣ ಬನ್ನಿ.

ಜೀವನದಲ್ಲಿ ಈ ವಿಚಾರಗಳ ಬಗ್ಗೆ ಎಂದಿಗೂ ಹಿಂಜರಿಯಬೇಡಿ:

ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ: ಅನೇಕ ಬಾರಿ, ಜನ ತಮ್ಮ ನಿರ್ಧಾರಗಳು ಸರಿಯಾಗಿದ್ದರೂ ಸಹ, ಅವರು ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಲು ಹಿಂಜರಿಯುತ್ತಾರೆ. ಇತರರ ಮುಂದೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಎಂದಿಗೂ ನಾಚಿಕೆಪಡಬಾರದು, ಅದೇ ರೀತಿ, ಯಾರಾದರೂ ತಪ್ಪು ಮಾಡಿದರೆ, ಅದನ್ನು ಧೈರ್ಯದಿಂದ ತಪ್ಪು ಎಂದು ಹೇಳಲು ಎಂದಿಗೂ ಹಿಂಜರಿಯಬಾರದು ಎನ್ನುತ್ತಾರೆ ಚಾಣಕ್ಯ. ಧೈರ್ಯದಿಂದ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಹಿಂಜರಿಯುವ ವ್ಯಕ್ತಿ ಜೀವನದಲ್ಲಿ ಎಂದಿಗೂ ಯಶಸ್ಸನ್ನು ಸಾಧಿಸುವುದಿಲ್ಲ.

ತಿನ್ನಲು ಹಿಂಜರಿಯಬೇಡಿ:  ಕೆಲವು ಜನರು ಇತರರ ಮುಂದೆ ತಿನ್ನಲು ಹಿಂಜರಿಯುತ್ತಾರೆ. ಕೆಲವೊಮ್ಮೆ, ನಾಚಿಕೆಯಿಂದಾಗಿ, ಅವರು ತಮ್ಮ ನೆಚ್ಚಿನ ಆಹಾರವನ್ನು ತಿನ್ನಲು ಸಹ ಹಿಂಜರಿಯುತ್ತಾರೆ. ಆಚಾರ್ಯ ಚಾಣಕ್ಯರು ಆಹಾರವು ನಿಮ್ಮ ದೇಹದ ಪ್ರಾಥಮಿಕ ಅಗತ್ಯವಾಗಿದೆ ಮತ್ತು ನೀವು ಅದರ ಬಗ್ಗೆ ಎಂದಿಗೂ ಮುಜುಗರಪಡಬಾರದು ಎಂದು ಹೇಳುತ್ತಾರೆ. ಹಾಗೆ ಮಾಡುವ ವ್ಯಕ್ತಿ ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಆಹಾರದ ಬಗ್ಗೆ ನಾಚಿಕೆಪಡುವುದರಿಂದ, ವ್ಯಕ್ತಿಯು ಸ್ವತಃ ಹಸಿವಿನಿಂದ ಇರುತ್ತಾನೆ. ಆಹಾರಕ್ಕಾಗಿ ಮಾತನಾಡಲು ಸಾಧ್ಯವಾಗದ ವ್ಯಕ್ತಿ ಎಂದಿಗೂ ಇತರರ ಪರವಾಗಿ ನಿಲ್ಲಲು ಸಾಧ್ಯವಿಲ್ಲ ಎಂದು ಆಚಾರ್ಯ ಚಾಣಕ್ಯ ಹೇಳಿದ್ದಾರೆ.

ಹಣ ಕೇಳುವಾಗ ನಾಚಿಕೆ ಪಡಬೇಡಿ: ಯಾರಿಂದಲೂ ಹಣವನ್ನು ಎರವಲು ಪಡೆಯುವುದು ಸರಿಯಲ್ಲ, ಅದು ಸಾಲದ ಹೊರೆಯನ್ನು ಹೆಚ್ಚಿಸುತ್ತದೆ. ಆದರೆ ನಿಮಗೆ ತೀರಾ ಹಣದ ಅಗತ್ಯವಿದ್ದರೆ ನೀವು ಎಂದಿಗೂ ಹಣ ಕೇಳಲು ನಾಚಿಕೆಪಡಬಾರದು ಅಥವಾ ಹಿಂಜರಿಯಬಾರದು. ಆದಾಗ್ಯೂ, ಸಮಯಕ್ಕೆ ಸರಿಯಾಗಿ ಹಿಂದಿರುಗಿಸುವ ಸಾಮರ್ಥ್ಯವಿದ್ದರೆ ಮಾತ್ರ ಹಣವನ್ನು ಕೇಳಿ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಒಬ್ಬ ವ್ಯಕ್ತಿಯು ತನ್ನ ವ್ಯವಹಾರ ಮತ್ತು ವ್ಯಾಪಾರವನ್ನು  ನಿಭಾಯಿಸಲು, ಹಣ ಕೇಳಲು ಹಿಂಜರಿಯುವವರು ಜೀವನದಲ್ಲಿ ಯಸಸ್ಸನ್ನು ಗಳಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: ಜೀವನದ ಪ್ರಮುಖ ವಿಷಯಗಳ ಬಗ್ಗೆ ಎಂದಿಗೂ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಜ್ಞಾನವನ್ನು ಪಡೆಯಲು ನಾಚಿಕೆ ಪಡಬೇಡಿ:  ಆಚಾರ್ಯ ಚಾಣಕ್ಯರ ಪ್ರಕಾರ, ಯಾರಿಂದಲೂ ಜ್ಞಾನವನ್ನು  ಅಥವಾ ಒಳ್ಳೆಯ ವಿಚಾರಗಳನ್ನು ಕೇಳಿ ಪಡೆಯಲು ನಾಚಿಕೆಪಡಬಾರದು ಎನ್ನುತ್ತಾರೆ ಚಾಣಕ್ಯ.  ಹೌದು ಯಾವುದೇ ಅನುಮಾನವನ್ನು ನಿವಾರಿಸಲು, ಒಳ್ಳೆಯ ವಿಚಾರಗಳನ್ನು ಕಳೆಯಲು ನಾಚಿಕೆಪಡಬಾರದು. ಜ್ಞಾನ ಸಂಪಾದಿಸಲು ಹಿಂಜರಿಯುವ ವ್ಯಕ್ತಿಗಳು ಜೀವನದಲ್ಲಿ ಮುಂದುವರೆಯಲು ಎಂದಿಗೂ ಸಾಧ್ಯವಿಲ್ಲ. ಹಾಗಾಗಿ ನೀವು  ಜ್ಞಾನ ಸಂಪಾದಿಸಲು ನಾಚಿಕೆ ಪಡಬೇಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಜೆ ಹಳ್ಳಿ ಅಪ್ರಾಪ್ತೆ ಕೊಲೆಗಾರ ಅಜ್ಮೀರ್​​ನಲ್ಲಿ ಅರೆಸ್ಟ್, ಪ್ರಾಯಶ್ಚಿತಕ್ಕಾಗಿ ದರ್ಗಾ ಮೊರೆ ಹೋಗಿದ್ದ ಹಂತಕ

ಬೆಂಗಳೂರು, (ಮಾರ್ಚ್ 22): ನಗರದ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಭಾವಿ ಪತಿ ಸೈಯದ್ ಶಬೀಲ್ ಸಿಕ್ಕಿಬಿದ್ದಿದ್ದಾನೆ. ಮದುವೆಯಾಗಿಬೇಕಿದ್ದ ಯುವತಿ ಮೇಲಿನ ಅನುಮಾನದಿಂದ ಆಕೆನ್ನು ಕೊಂದಿದ್ದ. ಮಾರ್ಚ್ 17ರಂದು ಆಕೆಯನ್ನು ಭೇಟಿಯ ನೆಪದಲ್ಲಿ ಕರೆದು, ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಮತ್ತು ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದು, ಅಂತಿಮವಾಗಿ ಹಂತಕ ಶಬೀಲ್ ರಾಜಸ್ಥಾನದ ಅಜ್ಮೀರ್ ದರ್ಗಾ ಬಳಿ ಬಲೆಗೆ ಬಿದಿದ್ದಾನೆ. ಕೊಲೆ ಬಳಿಕ ಪಶ್ಚಾತ್ತಾಪಕ್ಕಾಗಿ ಅಜ್ಮೀರ್ ದರ್ಗಾಕ್ಕೆ ಹೋಗಿದ್ದ ಎಂದು ತಿಳಿದುಬಂದಿದೆ.

ಕೊಲೆ ಮಾಡಿ ಬಳಿಕ ತಲೆ ಮರಿಸಿಕೊಂಡಿದ್ದ ಶಬೀಲ್ ನನ್ನು ಅಜ್ಮೀರ್​​​ ನಲ್ಲಿ ಬಂಧಿಸುವಲ್ಲಿ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಬಳಿಕ ಪಶ್ಚಾತ್ತಾಪ ಪಟ್ಟು ಅಜ್ಮೀರಗೆ ತೆರಳಿದ್ದು, ದರ್ಗಾದಲ್ಲಿ ಪ್ರಾರ್ಥನೆ ಮಾಡಿ ಪ್ರಾಯಶ್ಚಿತಕ್ಕಾಗಿ ಬೇಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಕರವಾಗಿ ಕೊಲೆ: ಭಾವಿ ಪತಿ ಅನುಮಾನಕ್ಕೆ ಅಪ್ರಾಪ್ತೆ ಬಲಿ

ಕೋಲಾರ ಮೂಲದ ಅಪ್ರಾಪ್ತ ಬಾಲಕಿ ಆಗಾಗ ಬೆಂಗಳೂರಿನ ಸಂಬಂಧಿಕರ ಮನೆಗೆ ಬರುತ್ತಿದ್ದಳು. ಈ ನಡುವೆ ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್​​ನಲ್ಲಿ ಕೆಲಸ ಮಾಡ್ತಿದ್ದ ಸೈಯದ್ ಶಬೀಲ್ ಎಂಬ ಯುವಕನ ಜೊತೆ ಆಕೆಗೆ ಪ್ರೀತಿ ಶುರುವಾಗಿತ್ತು. ಆಗಾಗ ಫೋನ್​​ನಲ್ಲಿಇವರು ಮಾತಾನಾಡುತ್ತಿರೋದನ್ನು ಗಮನಿಸಿದ ಸಂಬಂಧಿಕರು, ಪೋಷಕರಿಗೆ ವಿಚಾರ ತಿಳಿಸಿದ್ದರು. ಬಳಿಕ ಆಕೆ ಪ್ರೀತಿಸುತ್ತಿದ್ದವನ ಜೊತೆಯೇ ಮದುವೆ ಮಾಡಲು ಮನೆಯವರು ಮುಂದಾಗಿದ್ದರು. ಅದರಂತೆ ಕಳೆದ 2025ರ ಜೂನ್​​ನಲ್ಲಿ ಇವರಿಬ್ಬರ ಎಂಗೇಜ್ಮೆಂಟ್ ಕೂಡ ನಡೆದಿತ್ತು. ಕೆಲ ಸಮಯದ ಬಳಿಕ ಮದುವೆಯ ತಯಾರಿಯಲ್ಲೂ ಮನೆಯವರಿದ್ದರು. ಆದರೆ ಇತ್ತೀಚೆಗೆ ಅಪ್ರಾಪ್ತಳ ಮೇಲೆ ಅನುಮಾನ ಪಟ್ಟಿದ್ದ. ಬಳಿಕ ಇದೇ ಮಾರ್ಚ್ 17ರಂದು ಮಾತನಾಡುವ ನೆಪದಲ್ಲಿ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಗೆ ಕರೆದೊಯ್ದು ಆಕೆಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದಿದ್ದ. ಸಾಲದಕ್ಕೆ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಮಿತಾಬ್ ಬಚ್ಚನ್-ಕಮಲ್ ಬಳಿಕ ‘ಕಲ್ಕಿ’ ಸೆಟ್​​ಗೆ ಇಬ್ಬರು ಸ್ಟಾರ್ ನಟರ ಎಂಟ್ರಿ

ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 AD’ (Kalki 2898 AD) ಸಿನಿಮಾ ಪೌರಾಣಿಕ ಕತೆ ಮತ್ತು ಫ್ಯಾಂಟಸಿಯನ್ನು ಬೆರೆಸಿದ ಸಿನಿಮಾ. ಹೆಸರೇ ಸೂಚಿಸುತ್ತಿರುವಂತೆ 2898ರಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಮೊದಲ ಭಾಗ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಸಹಜವಾಗಿಯೇ ಹಿಟ್ ಆಗಿತ್ತು. ಇದೀಗ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಈಗ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರುಗಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅದರಲ್ಲಿ ಅಮಿತಾಬ್ ಬಚ್ಚನ್ ಅವರು ತಮ್ಮ ಪಾಲಿನ ಚಿತ್ರೀಕರಣವನ್ನು ಮುಗಿಸಿ ಮುಂಬೈಗೆ ಮರಳಿದ್ದಾರೆ ಎನ್ನಲಾಗುತ್ತಿದೆ. ಕಮಲ್ ಸಹ ಸಾಕಷ್ಟು ಭಾಗಗಳ ಚಿತ್ರೀಕರಣ ಮುಗಿಸಿದ್ದಾರೆ. ಇದರ ಬೆನ್ನಲ್ಲೆ ಇದೀಗ ಇಬ್ಬರು ಸ್ಟಾರ್ ನಟರು ‘ಕಲ್ಕಿ 2898ಎಡಿ ಭಾಗ ಎರಡರ ಸೆಟ್​ ಅನ್ನು ಸೇರಿಕೊಂಡಿದ್ದಾರೆ.

ಸಿನಿಮಾದ ನಾಯಕ ಪ್ರಭಾಸ್ ಇದೀಗ ‘ಕಲ್ಕಿ’ ಎರಡನೇ ಭಾಗದ ಚಿತ್ರೀಕರಣ ಪ್ರಾರಂಭಿಸಿದ್ದಾರೆ. ಅವರೊಂದಿಗೆ ನಟ ದುಲ್ಕರ್ ಸಲ್ಮಾನ್ ಸಹ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಿದ್ದಾರೆ. ಹೈದರಾಬಾದ್‌ನಲ್ಲಿ ಚಿತ್ರದ ಮುಂದಿನ ಹಂತದ ಚಿತ್ರೀಕರಣ ನಡೆಯುತ್ತಿದ್ದು, ದುಲ್ಕರ್ ಸಲ್ಮಾನ್, ಪ್ರಭಾಸ್ ಜೊತೆಗೆ ಜೆಡಿ ಚಕ್ರವರ್ತಿ ಸಹ ಈ ಶೆಡ್ಯೂಲ್‌ನಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಪ್ರಭಾಸ್, ಹನುಪುಡಿ ನಿರ್ದೇಶನದ ‘ಫೌಜಿ’ ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಮುಗಿಸಿ, ಸಂದೀಪ್ ರೆಡ್ಡಿ ವಂಗಾ ಜೊತೆಗೆ ‘ಸ್ಪಿರಿಟ್’ ಸಿನಿಮಾ ಆರಂಭಿಸಿದ್ದರು. ಇದೀಗ ಅಲ್ಲಿಂದ ಬಿಡುವು ಪಡೆದು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರಂತೆ. ಮೊದಲ ಭಾಗದಲ್ಲಿ ಭೈರವನಾಗಿ ಮಿಂಚಿದ್ದ ಪ್ರಭಾಸ್, ಎರಡನೇ ಭಾಗದಲ್ಲಿ ಕರ್ಣನಾಗಿ ಅಬ್ಬರಿಸಲಿದ್ದಾರೆ. ಅಲ್ಲದೆ, ಮೊದಲ ಭಾಗಕ್ಕಿಂತಲೂ ಹೆಚ್ಚು ಪವರ್​ಫುಲ್ ಆಗಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ದುಲ್ಕರ್ ಸಲ್ಮಾನ್, ಮೊದಲ ಭಾಗದಲ್ಲಿ ಪ್ರಭಾಸ್ ಪಾತ್ರದ ಸಾಕು ತಂದೆಯ ಪಾತ್ರದಲ್ಲಿ ನಟಿಸಿದ್ದರು. ಇದೀಗ ಮತ್ತೆ ಅದೇ ಪಾತ್ರದಲ್ಲಿ ನಟಿಸಲು ಮರಳಿದ್ದಾರೆ. ಜೆಡಿ ಚಕ್ರವರ್ತಿ ವಿಲನ್ ಪಾತ್ರದಲ್ಲಿ ಮಿಂಚಲಿದ್ದಾರೆ.

ಇದನ್ನೂ ಓದಿ:ಮಲಯಾಳಂ ನಿರ್ದೇಶಕನ ಕಡೆ ವಾಲಿದ ಪ್ರಭಾಸ್, ಹೊಂಬಾಳೆಯದ್ದೇ ಪ್ಲ್ಯಾನ್

ಈ ಸೀಕ್ವೆಲ್‌ನ ಮತ್ತೊಂದು ವಿಶೇಷತೆಯೆಂದರೆ ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸುಮಾರು 40 ವರ್ಷಗಳ ನಂತರ ಒಂದೇ ಪರದೆಯ ಮೇಲೆ ಕಾಣಿಸಿಕೊಳ್ಳುತ್ತಿರುವುದು. ಈ ಇಬ್ಬರು ದಿಗ್ಗಜರು 1985ರಲ್ಲಿ ‘ಗಿರಫ್ತಾರ್’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಅದಾದ ಬಳಿಕ ಇದೀಗ ‘ಕಲ್ಕಿ 2898 ಎಡಿ’ ಎರಡನೇ ಭಾಗದಲ್ಲಿ ಮತ್ತೆ ಮುಖಾ-ಮುಖಿ ಆಗುತ್ತಿದ್ದಾರೆ. ಕಮಲ್ ಅವರದ್ದು ಈ ಸಿನಿಮಾದ ಮುಖ್ಯ ವಿಲನ್ ಪಾತ್ರವಾಗಿದೆ.

ನಟಿ ದೀಪಿಕಾ ಪಡುಕೋಣೆ ಮೊದಲ ಭಾಗದಲ್ಲಿ ನಾಯಕಿಯಾಗಿ ನಟಿಸಿದ್ದರು. ಆದರೆ ಅವರು ಈ ಸಿನಿಮಾದಿಂದ ಹೊರಬಂದಿದ್ದಾರೆ ಮತ್ತು ಅವರ ಸ್ಥಾನಕ್ಕೆ ನಟಿ ಸಾಯಿ ಪಲ್ಲವಿ ಅವರನ್ನು ಕರೆತರುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಡಿಸ್ಟೋಪಿಯನ್ ಫ್ಯೂಚರ್ ಮತ್ತು ಪುರಾಣದ ಕಥೆಯನ್ನು ಆಧರಿಸಿದ ಈ ಸೈನ್ಸ್ ಫಿಕ್ಷನ್ ಸಿನಿಮಾ, ಮೊದಲ ಭಾಗದಲ್ಲೇ ಭಾರಿ ಯಶಸ್ಸು ಕಂಡಿತ್ತು. ಈಗ ಎರಡನೇ ಭಾಗದಲ್ಲಿ ಕಥೆ ಯಾವ ತಿರುವು ಪಡೆಯಲಿದೆ ಮತ್ತು ಪ್ರಭಾಸ್ ಪಾತ್ರ ಹೇಗಿರಲಿದೆ ಎಂಬುದು ಸಿನಿರಸಿಕರ ಕುತೂಹಲಕ್ಕೆ ಕಾರಣವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

PSL 2026: ಕೇವಲ 2 ಕ್ರೀಡಾಂಗಣಗಳಲ್ಲಿ ಪ್ರೇಕ್ಷಕರಿಲ್ಲದೆ ನಡೆಯಲಿದೆ ಪಾಕ್ ಸೂಪರ್ ಲೀಗ್

ಮಾರ್ಚ್ 26 ರಿಂದ ಪಾಕಿಸ್ತಾನದಲ್ಲಿ ಪ್ರಾರಂಭವಾಗಬೇಕಿದ್ದ ಪಾಕಿಸ್ತಾನ ಸೂಪರ್ ಲೀಗ್​ಗೆ ಕ್ವಾರಂಟೈನ್ ಪರಿಸ್ಥಿತಿ ಎದುರಾಗಿದೆ. ಅಂದರೆ ಕ್ರೀಡಾಂಗಣದಲ್ಲಿ ಯಾವ ಪ್ರೇಕ್ಷಕರು ಇಲ್ಲದೆ ಪಂದ್ಯಾವಳಿಯನ್ನು ನಡೆಸಬೇಕಾಗಿದೆ. ಪಾಕಿಸ್ತಾನದ ಟಿ20 ಲೀಗ್​ನ 11 ನೇ ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ, ಆದರೆ ಆರಂಭಕ್ಕೆ ಕೇವಲ ನಾಲ್ಕು ದಿನಗಳ ಮೊದಲು, ಪಂದ್ಯಾವಳಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ವಿದೇಶಿ ಆಟಗಾರರು ಲೀಗ್ ತೊರೆಯುತ್ತಿರುವುದರಿಂದ ಮತ್ತು ದೇಶದಲ್ಲಿನ ಭದ್ರತಾ ಪರಿಸ್ಥಿತಿಯಿಂದಾಗಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪಿಎಸ್ಎಲ್ 2026 ಸೀಸನ್ ಅನ್ನು ಆರು ಸ್ಥಳಗಳ ಬದಲಿಗೆ ಕೇವಲ ಎರಡು ಸ್ಥಳಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಪಿಎಸ್ಎಲ್ ಬಗ್ಗೆ ದೊಡ್ಡ ಘೋಷಣೆ

ವಾಸ್ತವವಾಗಿ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಇದೇ ಮೊದಲ ಬಾರಿಗೆ ಎಂಟು ತಂಡಗಳು ಕಣಕ್ಕಿಳಿಯುತ್ತಿವೆ. ಹೀಗಾಗಿ ಪಂದ್ಯಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಹೀಗಾಗಿ ಅಭಿಮಾನಿಗಳು ಹೆಚ್ಚಿನ ಮನರಂಜನೆ ಸಿಗುವ ಖುಷಿಯಲ್ಲಿದ್ದರು. ಆದರೆ ಅಭಿಮಾನಿಗಳಿಗೆ ದೊಡ್ಡ ಆಘಾತ ಎದುರಾಗಿದೆ. ಏಕೆಂದರೆ ಮೇಲೆ ಹೇಳಿದಂತೆ ದೇಶದಲ್ಲಿನ ಭದ್ರತಾ ಪರಿಸ್ಥಿತಿಯಿಂದಾಗಿ ಈ ಪಂದ್ಯಾವಳಿಯನ್ನು ಲಾಹೋರ್ ಮತ್ತು ಕರಾಚಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅಂದರೆ ಈ ಲೀಗ್​ನ ಎಲ್ಲಾ ಪಂದ್ಯಗಳು ಈ ಎರಡು ನಗರಗಳಲ್ಲಿ ಮಾತ್ರ ನಡೆಯಲಿವೆ. ಇದಲ್ಲದೆ, ಇಡೀ ಪಂದ್ಯಾವಳಿ ಪ್ರೇಕ್ಷಕರಿಲ್ಲದೆ ನಡೆಯಲಿದೆ ಎಂದು ಮೊಹ್ಸಿನ್ ನಖ್ವಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಮೊಹ್ಸಿನ್ ನಖ್ವಿ, ‘ಕಳೆದ ಹಲವು ದಿನಗಳಿಂದ ದೇಶದ ಪ್ರಧಾನಿ ಮತ್ತು ಲೀಗ್‌ನ ಫ್ರಾಂಚೈಸಿ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದೇವೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವು ಪಾಕಿಸ್ತಾನದ ತೈಲ ಮತ್ತು ಅನಿಲ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತಿದೆ. ಇದರಿಂದಾಗಿ ಪಾಕಿಸ್ತಾನ ಸರ್ಕಾರ ತೈಲ ಮತ್ತು ಅನಿಲ ಬಿಕ್ಕಟ್ಟನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ. ಹೀಗಾಗಿ ಸಾರಿಗೆಯನ್ನು ಕಡಿಮೆ ಮಾಡಲು ಮತ್ತು ಇಂಧನವನ್ನು ಉಳಿಸಲು ಪಾಕಿಸ್ತಾನ ಮಂಡಳಿಯು ಕೇವಲ ಎರಡು ನಗರಗಳಲ್ಲಿ ಮತ್ತು ಪ್ರೇಕ್ಷಕರಿಲ್ಲದೆ ಲೀಗ್ ಅನ್ನು ನಡೆಸಲು ನಿರ್ಧರಿಸಿದೆ ಎಂದಿದ್ದಾರೆ.

ಹಿಂದೆ ಸರಿಯುತ್ತಿರುವ ವಿದೇಶಿ ಆಟಗಾರರು

ಪಂದ್ಯಾವಳಿಯನ್ನು ಮುಂದೂಡುವುದು ಒಂದು ಆಯ್ಕೆಯಾಗಿತ್ತು. ಆದರೆ ಈಗ ಪಂದ್ಯಾವಳಿಯನ್ನು ಮುಂದೂಡಿದರೆ, ಆ ಬಳಿಕ ಇದನ್ನು ಮತ್ತೆ ನಡೆಸಲು ಯಾವುದೇ ಅವಕಾಶವಿಲ್ಲ. ಇದಲ್ಲದೆ, ಕಳೆದ ಕೆಲವು ದಿನಗಳಲ್ಲಿ ಹಲವಾರು ವಿದೇಶಿ ಆಟಗಾರರು ಲೀಗ್‌ನಿಂದ ಹಿಂದೆ ಸರಿದಿದ್ದಾರೆ, ಇದಕ್ಕೆ ಪ್ರಮುಖ ಕಾರಣ ಐಪಿಎಲ್ ಜೊತೆಗೆ ಪಂದ್ಯಾವಳಿ ನಡೆಯುತ್ತಿರುವುದು. ವಾಸ್ತವವಾಗಿ, ಐಪಿಎಲ್‌ನಲ್ಲಿ ಹಲವಾರು ಆಟಗಾರರನ್ನು ಗಾಯದ ಕಾರಣದಿಂದಾಗಿ ಹೊರಗಿಡಲಾಗಿದೆ. ಪರಿಣಾಮವಾಗಿ, ಪಿಎಸ್‌ಎಲ್‌ನಲ್ಲಿ ಆಡಲು ಒಪ್ಪಿದ್ದ ಕೆಲವು ವಿದೇಶಿ ಆಟಗಾರರು ಈಗ ಲೀಗ್‌ನಿಂದ ಹಿಂದೆ ಸರಿದು ಐಪಿಎಲ್‌ನಲ್ಲಿ ಆಡಲು ಮುಂದಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?

ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ (Dhurandahr 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಆದಿತ್ಯ ಧರ್ ನಿರ್ದೇಶಿಸಿರುವ ಈ ಸಿನಿಮಾ ಭಾರತದ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ವಿರುದ್ಧ ಏಕಾಂಗಿಯಾಗಿ ಹೋರಾಡುವ ಕತೆ ಹೊಂದಿದೆ. ಸಹಜವಾಗಿಯೇ ಸಿನಿಮಾದ ಇಡೀ ಕತೆ ನಡೆಯುವುದು ಪಾಕಿಸ್ತಾನದಲ್ಲಿಯೇ. ಅದರಲ್ಲೂ ಪಾಕಿಸ್ತಾನದ ಕರಾಚಿಯ ಲಯಾರಿ ಎಂಬ ಸ್ಥಳದಲ್ಲಿ. ಸಿನಿಮಾ ನೋಡಿದವರು, ನಿರ್ದೇಶಕ ಆದಿತ್ಯ ಧರ್, ಪಾಕಿಸ್ತಾನವನ್ನು ಇರುವ ಹಾಗೆಯೇ ತೋರಿಸಿದ್ದಾರೆ ಎನ್ನುತ್ತಿದ್ದಾರೆ. ಸಿನಿಮಾದ ಕತೆ ನಡೆಯುವುದು ಪಾಕಿಸ್ತಾನದಲ್ಲಿ ಆದರೆ ಸಿನಿಮಾ ಚಿತ್ರೀಕರಣ ಆಗಿರುವುದು ಎಲ್ಲಿ?

ಎಲ್ಲರಿಗೂ ಗೊತ್ತಿರುವಂತೆ ಪಾಕಿಸ್ತಾನದಲ್ಲಿ ಭಾರತದ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ, ಅನುಮತಿ ನೀಡಲಾಗುವುದಿಲ್ಲ. ಅಲ್ಲದೆ ಭದ್ರತಾ ಸಮಸ್ಯೆಯೂ ಇದ್ದೇ ಇರುತ್ತದೆ. ಇದೇ ಕಾರಣಕ್ಕೆ ನಿರ್ದೇಶಕ ಆದಿತ್ಯ ಧರ್ ಅವರು ಸಿನಿಮಾದ ಚಿತ್ರೀಕರಣವನ್ನು ಬೇರೆ ಬೇರೆ ಕಡೆಗಳಲ್ಲಿ ಮಾಡಿದ್ದಾರೆ. ವಿಶೇಷವಾಗಿ ಭಾರತದ ಕೆಲವು ಭಾಗಗಳು ಹಾಗೂ ಥೈಲೆಂಡ್​​ಗಳಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಅದರಲ್ಲೂ ಭಾರತದಲ್ಲಿ ಸಿನಿಮಾದ ಚಿತ್ರೀಕರಣ ಮಾಡುವಾಗ ಕೆಲವು ಸಮಸ್ಯೆಗಳನ್ನು ಸಹ ಚಿತ್ರತಂಡ ಎದುರಿಸಿದ್ದಿದೆ.

ಚಿತ್ರದ ಪ್ರಮುಖ ಭಾಗಗಳನ್ನು ಪಂಜಾಬ್‌ನ ಲುಧಿಯಾನದ ಸಮೀಪವಿರುವ ಖೇರಾ ಗ್ರಾಮದಲ್ಲಿ ಚಿತ್ರೀಕರಿಸಲಾಗಿದೆ. ಇಲ್ಲಿನ ಕೆಲವು ಗಲ್ಲಿಗಳನ್ನು ಪಾಕಿಸ್ತಾನದ ‘ಲ್ಯಾರಿ’ ಪ್ರದೇಶದಂತೆ ಕಾಣುವಂತೆ ಸೆಟ್ ಹಾಕಲಾಗಿತ್ತು. ಚಿತ್ರೀಕರಣಕ್ಕಾಗಿ ಇಲ್ಲಿ ಪಾಕಿಸ್ತಾನಿ ಧ್ವಜಗಳನ್ನು ಹಾಕಿದಾಗ ಸ್ಥಳೀಯರಲ್ಲಿ ಕುತೂಹಲ ಮತ್ತು ಸ್ವಲ್ಪ ಗೊಂದಲವೂ ಉಂಟಾಗಿತ್ತು. ಕೆಲವರು ಪ್ರಶ್ನೆ ಸಹ ಮಾಡಿದ್ದರಂತೆ. ಅಲ್ಲದೆ, ಅಮೃತಸರದ ಸುವರ್ಣ ಮಂದಿರ ಮತ್ತು ಲುಧಿಯಾನದ ಸಾಹ್ನೆವಾಲ್ ವಿಮಾನ ನಿಲ್ದಾಣದಲ್ಲೂ ಚಿತ್ರೀಕರಣ ನಡೆದಿದೆ.

ಪಾಕಿಸ್ತಾನದ ಕರಾಚಿಯ ಕೆಲವು ದೃಶ್ಯಗಳನ್ನು ಮತ್ತು ಚಿತ್ರದ ಸಿನಿಮಾದ ಸಾಹಸ ಮತ್ತು ಕೆಲ ಚೇಸ್ ದೃಶ್ಯಗಳನ್ನು ಥೈಲ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗಿದೆ. ಮುಂಬೈನ ಫಿಲ್ಮಿಸ್ಟಾನ್ ಸ್ಟುಡಿಯೋ ಮತ್ತು ಮಡ್ ಐಲ್ಯಾಂಡ್‌ನಲ್ಲಿ ಚಿತ್ರದ ಒಳಾಂಗಣ ಹಾಗೂ ಕೆಲವು ಕರಾವಳಿ ತೀರದ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ದೋಂಬಿವಲಿ-ಮಂಕೋಲಿ ಸೇತುವೆಯ ಮೇಲೂ ಸಾಹಸ ದೃಶ್ಯಗಳ ಚಿತ್ರೀಕರಣ ನಡೆದಿದೆ. ಚಿತ್ರದ ಕೆಲವು ಸಸ್ಪೆನ್ಸ್ ದೃಶ್ಯಗಳಿಗಾಗಿ ಲಡಾಖ್‌ನ ಹಿಮಪರ್ವತಗಳು ಮತ್ತು ಹಿಮಾಚಲ ಪ್ರದೇಶದ ಕಸೌಲಿ ಎಂಬ ಸುಂದರ ಪ್ರದೇಶಗಳನ್ನು ಬಳಸಿಕೊಳ್ಳಲಾಗಿದೆ.

ಇದನ್ನೂ ಓದಿ:‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ನಿರ್ದೇಶಕ ಆದಿತ್ಯ ಧರ್ ಅವರು ಪಾಕಿಸ್ತಾನಕ್ಕೆ ಹೋಗದೆ ಪಾಕಿಸ್ತಾನವನ್ನು ಸೃಷ್ಟಿ ಮಾಡಿದ್ದಾರೆ. ಮಾರ್ಚ್ 19ರಂದು ಬಿಡುಗಡೆ ಆಗಿರುವ ಈ ಸಿನಿಮಾ ಹಿಂದಿ ಮಾತ್ರವಲ್ಲದೆ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೂ ತೆರೆ ಕಂಡಿದ್ದು. ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಣವೀರ್ ಸಿಂಗ್ ಅವರು ‘ಜಸ್ಕಿರತ್ ಸಿಂಗ್ ರಂಗಿ’ ಅಲಿಯಾಸ್ ಹಮ್ಜಾ ಅಲಿ ಮಜಾರಿ ಎಂಬ ಗೂಢಚಾರಿಯ ಪಾತ್ರದಲ್ಲಿ ಮಿಂಚಿದ್ದಾರೆ. ಅವರ ಜೊತೆಗೆ ಸಂಜಯ್ ದತ್ (ಚೌಧರಿ ಅಸ್ಲಂ), ಅರ್ಜುನ್ ರಾಂಪಾಲ್ (ಮೇಜರ್ ಇಕ್ಬಾಲ್), ಆರ್ ಮಾಧವನ್ (ಅಜಯ್ ಸನ್ಯಾಲ್) ಮತ್ತು ಅಕ್ಷಯ್ ಖನ್ನಾ (ರಹಮಾನ್ ಡಕೈತ್) ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಚಿತ್ರವು 3 ಗಂಟೆ 49 ನಿಮಿಷಗಳಷ್ಟು ದೀರ್ಘವಾಗಿದ್ದು, ಇತ್ತೀಚಿನ ವರ್ಷಗಳ ಅತ್ಯಂತ ದೊಡ್ಡ ಸಾಹಸಮಯ ಚಿತ್ರಗಳಲ್ಲಿ ಒಂದೆನಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಐತಿಹಾಸಿಕ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ: ಯುದ್ಧ, ಮಳೆ, ರಾಜಕೀಯ ವಿದ್ಯಮಾನಗಳ ಸ್ಫೋಟಕ ಭವಿಷ್ಯ

ವಿಜಯಪುರ, ಮಾರ್ಚ್​ 22: ಯುಗಾದಿ ಅಮಾವಾಸ್ಯೆಯಿಂದ 5 ದಿನಗಳ ಕಾಲ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ ನಡೆಯುತ್ತದೆ. ಜಾತ್ಯಾತೀತವಾಗಿ ನಡೆಯುವ ಜಾತ್ರೆಯಲ್ಲಿ ಸಾವಿರಾರು ಜನರನ್ನು ಕಾಣಬಹುದು. ಜಾತ್ರೆಯ ಕೊನೆಯ ದಿನ ಮಠದ ಪೀಠಾಧಿಪತಿಗಳು ನುಡಿಯುವ ಭವಿಷ್ಯವಾಣಿ (Bhavishyavani) ಎಂದಿಗೂ ಸುಳ್ಳಾಗಿಲ್ಲ ಎಂಬ ಪ್ರತೀತಿ ಇದೆ. ಇಂದು ಪ್ರಸಕ್ತ ವರ್ಷದ ಭವಿಷ್ಯವಾಣಿಯನ್ನು ಶ್ರೀಗಳು ನುಡಿದಿದ್ದಾರೆ.

ವಿಜಯಪುರ ತಾಲೂಕಿನ ಕತಕನಹಳ್ಳಿಯಲ್ಲಿರೀ ಶ್ರೀ ಗುರುಚಕ್ರವರ್ತಿ ಸದಾಶಿವ ಮಠದ ಜಾತ್ರೆ ಯುಗಾದಿಯಲ್ಲಿ ನಡೆಯುತ್ತದೆ. ಪ್ರತಿ ವರ್ಷ ನಡೆಯುವ ಜಾತ್ರೆಯ ಕೊನೆಯ ದಿನ ಮಠದ ಪೀಠಾಧಿಪತಿ ಶ್ರೀ ಶಿವಯ್ಯ ಸ್ವಾಮೀಜಿ ಭವಿಷ್ಯವಾಣಿಯನ್ನು ನುಡಿಯುತ್ತಾರೆ. ಸ್ವಾಮೀಜಿ ನುಡಿಯೋ ಭವಿಷ್ಯ ಇಂದಿಗೂ ಸುಳ್ಳಾಗಿಲ್ಲ ಎಂಬ ನಂಬಿಕೆ ಭಕ್ತರಲ್ಲಿದೆ.

ಜಗತ್ತು ಉಳಿಸಲು ತತ್ವಗಳ ಸಭೆ: ಭವಿಷ್ಯವಾಣಿ ನುಡಿದ ಸ್ವಾಮೀಜಿ 

ಈ ವರ್ಷದ ಜಾತ್ರೆಯ ಕೊನೆಯ ದಿನವಾದ ಇಂದು ಮಠದ ಪೀಠಾಧಿಪತಿ ಶಿವಯ್ಯ ಸ್ವಾಮೀಜಿ ಮಳೆ ಬೆಳೆ ರಾಜಕಾರಣ ಒಳಿತು, ಕೆಡಕು ಕುರಿತು ಭವಿಷ್ಯ ನುಡಿದಿದ್ದಾರೆ. ಅಕ್ರಾಳ, ವಿಕ್ರಾಳ, ಕರಾಳ ಈ ಬಾರಿಯೂ ಇದ್ದದ್ದೇ, ಯುದ್ದ ಅಲ್ಲಿ ಅಷ್ಟೇ ಅಲ್ಲ ಇಲ್ಲಿಯೂ ಇದ್ದಂತೆಯೇ ಜಗತ್ತಿನ ಉದ್ಧಾರಕ್ಕಾಗಿ ‘ಶು.ನ.ಕ. ಮೀಟಿಂಗ್ ನಡೆದಿದೆ. ಅಂದರೆ ಶು ಎಂದರೆ ಶುದ್ಧ, ನ ಎಂದರೆ ನಂಬಿಕೆ ಹಾಗೂ ಕ ಎಂದರೆ ಕರ್ತವ್ಯ. ಈ ಎಲ್ಲವೂ ಕೂಡಿದರೆ ಜಗತ್ತು ಉದ್ಧಾರ. ಹೀಗಾಗಿ ಜಗತ್ತು ಉಳಿಸಲು ಈ ತತ್ವಗಳು ಸಭೆ ಮಾಡುತ್ತಿವೆ ಎಂದರು. ಕಾವಿ, ಖಾದಿ, ಖಾಕಿ, ಮೂರು ಒಳಗೆ ಜಗಳ ಆಗ್ತದ ಎಂದು ಹಿಂದೆಯೂ ಹೇಳಿದ್ದೆ. ಕಾವಿ, ಖಾದಿ, ಖಾಕಿ, ಜೊತೆಗೆ ಕಪ್ಪು, ಹಸಿರು, ನೀಲಿ ಇನ್ನಷ್ಟೂ ಬಣ್ಣ ಕೂಡಿ ಗದ್ದಲವಾಗುತ್ತಿದೆ. ಹೀಗಾಗಿ ಇದನ್ನು ತಪ್ಪಿಸಲು ಶು.ನ.ಕ. ಸಭೆ ಮಾಡುತ್ತಿವೆ ಎಂದರು. ಅಹಂಕಾರದಿಂದ ಮೆರೆದವರು ಮಣ್ಣಾಗಿ ಹೋಗುತ್ತಾರೆ.

ಇದನ್ನೂ ಓದಿ: ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ

ನಾನು ಈ ಹಿಂದೆ ಹೇಳಿದ್ದೆ, ಗಡ್ಡ, ಗುಡ್ಡ, ಗಿಡ್ಡ ಜಗಳಾಡಿ ಗದ್ದಲ ಹಿಡಿಸುತ್ತಾರೆಂದು. ಈಗ ಅದೇ ಆಗುತ್ತಿದೆ. ಅಲ್ಲಿ ಯುದ್ದ ನಡೆದಿದೆ ನಮಗೆ ಸಂಬಂಧವಿಲ್ಲ ಎಂದೇನಿಲ್ಲ, ಇಲ್ಲಿಯೂ ಯುದ್ದ ನಡೆದಂತೆಯೇ. ಆನೆ ಬೆಲೆ ಎತ್ತಿಗೆ, ಎತ್ತಿನ ಬೆಲೆ ಕುರಿಗೆ, ಕುರಿ ಬೆಲೆ ಕೋಳಿಗೆ, ಕೋಳಿ ಬೆಲೆ ಮನುಷ್ಯನಿಗೆ ಅಂದರೆ ಮನುಷ್ಯನಿಗೆ ಯಾವ ಕಿಮ್ಮತ್ತೂ ಉಳಿದಿಲ್ಲ ಎಂದರು.

ಮಳೆ ಬೆನ್ನ ಬೆಳಿ ಹತ್ತೈತಿ: ಬೆಳಿ ಬೆನ್ನ ಮಳಿ ಹತ್ತೈತಿ

ಇನ್ನು ಮಳೆಗಾಲದ ಬಗ್ಗೆ ವಿಶ್ಲೇಷಿಸಿದ ಅವರು, ಮಳೆಗಾಲ ಈ ಬಾರಿ ಜಾಸ್ತಿ ಮಜಾ ಇದೆ, ಮಳೆ ಬೆನ್ನ ಬೆಳಿ ಹತ್ತೈತಿ. ಮುಂದೆ ಬೆಳಿ ಬೆನ್ನ ಮಳಿ ಹತ್ತೈತಿ. ಐದು ಪ್ರಕಾರದ ಮಳಿ ಆಗುತ್ತದೆ. ಅತಿವೃಷ್ಟಿ, ಅಲ್ಪವೃಷ್ಟಿ, ಸಮವೃಷ್ಟಿ, ಅನಾವೃಷ್ಟಿ ಆಗುತ್ತದೆ ಎನ್ನುವ ಮೂಲಕ ಮಳೆ ಅಭಾವ, ಮಳೆ ಹೆಚ್ಚಳ, ಅಕಾಲಿಕ ಮಳೆ ಮೊದಲಾದವುಗಳು ಸಂಭವಿಸಲಿವೆ ಎಂದು ಸಾಂಕೇತಿಕವಾಗಿ ನುಡಿದರು. ವ್ಯಾಪಾರ, ವ್ಯವಹಾರಗಳಲ್ಲಿ ಏರಿಳಿಕೆ. ಉಳಿವಿಯಲ್ಲಿ ಉರುಳುತ್ತಾ ಬರುವ ಶಬ್ದ. ನಾನು ಮೇಲು ಎನ್ನುವ ಅಹಂಕಾರವನ್ನು ಅಡಗಿಸುತ್ತದೆ. ಹಸಿರು ನಾಮದ ಒಡೆಯ, ಹಂಡ ಕುದುರೆಯನೇರಿ, ಅರಸಾಗಿ ಬರುವಾಗ ದೈತ್ಯರನ್ನು ಸಂಹರಿಸುತ್ತಾನೆ. ಮಸಲತ್ತು ಮಾಡಿ ಹಿಂಸೆ ಕೊಡುವ ದೈತ್ಯರನ್ನ ಸಂಹಾರ ಮಾಡಿ‌ ಅವರನ್ನು ಪಾತಾಳಕ್ಕೆ ತಲುಪಿಸುವನು ಎಂದಿದ್ದಾರೆ.

ಯುದ್ಧ ಎಲ್ಲಾ ಕಡೆ ನಡೆಯುತ್ತಿದೆ. ಜಾತಿ, ಮತ, ಪಂಥ ಏನೂ ಹೇಳಬೇಡಿ, ಯಾರಾದರೂ ನೀವು ಯಾರು ಎಂದು ಕೇಳಿದರೆ ನೀವು ಭಾರತೀಯರು ಎಂದಷ್ಟೇ ಹೇಳಿ. ಅಕ್ರಾಳ, ವಿಕ್ರಾಳ, ಕರಾಳ. ಹೈರಾಣ ಈ ಬಾರಿಯೂ ಇರುತ್ತದೆ. ಇದು ಹೆಸರೇ ಹೇಳಿದಂತೆ ಪರಾಭವ ನಾಮ ಸಂವತ್ಸರ, ಅಂದರೆ ಸೋಲುವುದು, ಸದಾಶಿವನ ಸಲುವಾಗಿ ಸೋಲಿರಿ, ಆಗ ನೀವು ಎಲ್ಲಾ ಕಡೆ ಗೆಲುತ್ತಿರಿ ಎಂದು ಆಶೀರ್ವದಿಸಿದರು.

ಭವಿಷ್ಯವಾಣಿ ಎಂದೂ ಸುಳ್ಳಾಗಿಲ್ಲ ಎಂದ ಭಕ್ತರು

ನುಡಿದ ಭವಿಷ್ಯದ ಬಗ್ಗೆ ಭಕ್ತರೊಬ್ಬರು ಮಾತನಾಡಿ, ಕತಕನಹಳ್ಳಿಯ ಜಾತ್ರೆಯಲ್ಲಿ ನುಡಿಯುವ ಭವಿಷ್ಯ ಎಂದೂ ಸುಳ್ಳಾಗಿಲ್ಲ, ಮುಂದೆಯೂ ಸುಳ್ಳಾಗಲ್ಲ. ಭಕ್ತಿಭಾವದಿಂದ ಇಲ್ಲಿ ಪ್ರಾರ್ಥನೆ ಮಾಡಿದರೆ ಇಷ್ಟಾರ್ಥಗಳು ಸಿದ್ದಿಸುತ್ತವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಶಿಯಿಂದ ಬರುತ್ತಿದ್ದಂತೆಯೇ ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ

ಇನ್ನು ಜಾತ್ರೆಯ ಅಂಗವಾಗಿ 52 ಜೋಡಿಗಳ ಸಾಮೂಹಿಕ ವಿವಾಹ ಮಾಡಲಾಯಿತು. ವಧು ವವರರಿಗೆ ಚಿನ್ನದ ತಾಳಿ, ಬಟ್ಟೆಗಳನ್ನು ಮಠದಿಂದಲೇ ಉಚಿತವಾಗಿ ನೀಡಲಾಯಿತು. ಜಾತ್ರೆಗೆ ಆಗಮಿಸಿದ ಎಲ್ಲಾ ಭಕ್ತರಿಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಐದು ದಿನಗಳ ಕಾಲ ಸಂಭ್ರಮದಿಂದ ನಡೆದ ಜಾತ್ರೆಗೆ ಇಂದು ತೆರೆಬಿದ್ದಿದೆ. ಪೊಲೀಸ್ ಭದ್ರತೆಯನ್ನೂ ನಿಯೋಜನೆ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

ಬಾಗಲಕೋಟೆ, (ಮಾರ್ಚ್ 22): ಬಾಗಲಕೋಟೆ ಉಪಚುನಾವಣೆಯ (Bagalkot By Election) ಕಾಂಗ್ರೆಸ್ ಟಿಕೆಟ್​ ಎಚ್​​ ವೈ ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ನೀಡಲಾಗಿದೆ. ಟಿಕೆಟ್ ಗಾಗಿ ನಾಲ್ವರು ಮೇಟಿ ಮಕ್ಕಳ ನಡುವೆ ಕಿತ್ತಾಟ ಶುರುವಾಗಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಸಂಧಾನಸಭೆ ಮಾಡಿ ಕೊನೆಗೆ ಉಮೇಶ್ ಅವರಿಗೆ ಮಣೆ ಹಾಕಿದ್ದಾರೆ. ಇನ್ನು ಟಿಕೆಟ್​​​​ನ ಪ್ರಬಲ ಆಕಾಂಕ್ಷಿಯಾಗಿದ್ದ ಮಹಾದೇವಿ ಮೇಟಿ ಸಹ ತಣ್ಣಗಾಗಿದ್ದಾರೆ. ಯಾಕಂದ್ರೆ ಕೆಲ ದಿನಗಳಿಂದಷ್ಟೇ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವ ಬಗ್ಗೆ ಬಹಿರಂಗವಾಗಿ ಹೇಳಿದ್ದರು. ಆದ್ರೆ, ಇದೀಗ ಸಿಎಂ ಸಂಧಾನ ಸಭೆ ಮಾಡಿದ ಬಳಿಕ ಮಹಾದೇವಿ ಮೇಟಿ ಕೂಲ್ ಆಗಿದ್ದು, ಸಹೋದರ ಉಮೇಶ್​ ಗೆ ಟಿಕೆಟ್ ನೀಡಿರುವುದಕ್ಕೆ ಸಂತಸಗೊಂಡಿದ್ದಾರೆ. ಅಲ್ಲದೇ ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲುಸುತ್ತೇವೆ ಎನ್ನುವುದನ್ನು ಸಹ ಹೇಳಿದ್ದಾರೆ. ಇನ್ನು ಟಿವಿ9ಗೆ ಮಹಾದೇವಿ ಮೇಟಿ ಪ್ರತಿಕ್ರಿಯಿಸಿದ್ದು, ಉಮೇಶ್ ಮೇಟಿಗೆ ಟಿಕೆಟ್ ಕೊಟ್ಡಿದ್ದು ಸಂತಸ ತಂದಿದೆ. ನಾನು ಅಂದುಕೊಂಡಂತೆ ಸಹೋದರ ಉಮೇಶ್ ಮೇಟಿಗೆ ಟಿಕೆಟ್ ನೀಡಲಾಗಿದೆ. ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಎಲ್ಲ ಬಂಡಾಯ,ಭಿನ್ನಾಭಿಪ್ರಾಯ ಸರಿಯಾಗಿದೆ. ನಾಳೆ ನಾಮಪತ್ರ ಸಲ್ಲಿಸಲು ನಾನು ಸಹೋದರನ ಜೊತೆ ಹೋಗುತ್ತೇನೆ. ಪ್ರಚಾರಕ್ಕೂ ನಾಲ್ಕು ಜನ ಮಕ್ಕಳು ಒಟ್ಟಾಗಿ ಹೋಗುತ್ತೇವೆ ಎಂದರು.

ಇದನ್ನೂ ಓದಿ: ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ ಅಭ್ಯರ್ಥಿಗಳ ಹೆಸರು ಘೋಷಣೆ

Source link

ಅಲ್ಲು ಅರ್ಜುನ್ ಸಿನಿಮಾ ಮೂಲಕ ಸ್ಟಾರ್ ಕ್ರಿಕೆಟಿಗನ ಪತ್ನಿಯ ರೀ-ಎಂಟ್ರಿ?

ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾ ಮೂಲಕ ಗಳಿಸಿರುವ ಯಶಸ್ಸನ್ನು ಹಾಗೆಯೇ ಮುಂದುವರೆಸಿಕೊಂಡು ಹೋಗುವ ಪ್ರಯತ್ನದಲ್ಲಿದ್ದಾರೆ. ಇದೇ ಕಾರಣಕ್ಕೆ ಅವರು ತ್ರಿವಿಕ್ರಮ್ ಆಫರ್ ಅನ್ನು ತ್ಯಜಿಸಿ ಅಟ್ಲಿ ಕೈ ಹಿಡಿಸಿದ್ದಾರೆ. ಅಟ್ಲಿ, ಅಲ್ಲು ಅರ್ಜುನ್​​ಗಾಗಿ ಭಾರಿ ಬಜೆಟ್​​ನ ಹಾಲಿವುಡ್ ಮಾದರಿಯ ಫ್ಯಾಂಟಸಿ ಮಾದರಿಯ ಕತೆ ಹೆಣೆದಿದ್ದು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾವನ್ನು ಯಶಸ್ಸು ಮಾಡುವ ಹಠಕ್ಕೆ ಬಿದ್ದಿರುವ ಅಟ್ಲಿ, ದೊಡ್ಡ-ದೊಡ್ಡ ಸ್ಟಾರ್ ನಟಿಯರನ್ನು ಸಿನಿಮಾಕ್ಕೆ ಸೇರಿಸಿಕೊಳ್ಳುತ್ತಾ ಸಾಗಿದ್ದಾರೆ. ಸಿನಿಮಾದ ನಾಯಕಿಯಾಗಿ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ. ಅವರೊಟ್ಟಿಗೆ ರಶ್ಮಿಕಾ ಮಂದಣ್ಣ ಸಹ ಇರಲಿದ್ದಾರೆ. ಇದೀಗ ಸ್ಟಾರ್ ಕ್ರಿಕೆಟಿಗನ ಪತ್ನಿಯನ್ನು ಸಹ ಸಿನಿಮಾಕ್ಕೆ ಎಳೆದುಕೊಂಡಿದ್ದಾರೆ.

ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ, ಅನುಷ್ಕಾ ಶರ್ಮಾ, ಅಲ್ಲು ಅರ್ಜುನ್ ಜೊತೆಗಿನ ಸಿನಿಮಾನಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದು ನಾಯಕಿ ಪಾತ್ರ ಆಗಿರುವುದಿಲ್ಲ ಬದಲಿಗೆ ಅತಿಥಿ ಪಾತ್ರ ಆಗಿರಲಿದೆಯಂತೆ. ಆದರೆ ಕತೆಗೆ ಪ್ರಮುಖವಾದ ತಿರುವು ನೀಡುವ ಪಾತ್ರ ಸಹ ಆಗಿರಲಿದೆ ಎನ್ನಲಾಗುತ್ತಿದೆ. ಈಗಾಗಲೇ ಅನುಷ್ಕಾ ಶರ್ಮಾ ಅವರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಒಂದು ವೇಳೆ ಇದು ಅಧಿಕೃತವಾದರೆ, ಅನುಷ್ಕಾ ಶರ್ಮಾ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಂತಾಗುತ್ತದೆ. 2022ರಲ್ಲಿ ತೆರೆಕಂಡ ‘ಖಾಲಾ’ ಚಿತ್ರದ ಅತಿಥಿ ಪಾತ್ರದ ನಂತರ ಅನುಷ್ಕಾ ಬೆಳ್ಳಿತೆರೆಯಿಂದ ದೂರವೇ ಉಳಿದಿದ್ದಾರೆ. ತಮ್ಮ ವೈಯಕ್ತಿಕ ಜೀವನ ಮತ್ತು ಮಕ್ಕಳ ಪಾಲನೆಯಲ್ಲಿ ಬ್ಯುಸಿಯಾಗಿರುವ ಅವರು, ಈಗ ಈ ಭರ್ಜರಿ ಪ್ರಾಜೆಕ್ಟ್ ಮೂಲಕ ಕಮ್‌ಬ್ಯಾಕ್ ಮಾಡುತ್ತಾರಾ ಎಂಬುದು ಅಭಿಮಾನಿಗಳ ಕುತೂಹಲ.

ಅನುಷ್ಕಾ ಶರ್ಮಾ, ಚಿತ್ರರಂಗದಿಂದ ಬಹುತೇಕ ದೂರಾಗಿದ್ದಾರೆ. ಅವರು ನಾಯಕಿಯಾಗಿ ನಟಿಸಿದ್ದ ಕೊನೆಯ ಸಿನಿಮಾ ‘ಜೀರೋ’ 2018 ರಲ್ಲಿ ಬಿಡುಗಡೆ ಆಗಿತ್ತು. ಅದಾದ ಬಳಿಕ 2022 ರಲ್ಲಿ ಸಿನಿಮಾ ಒಂದರಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಹಲವು ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ. ಅನುಷ್ಕಾ ಶರ್ಮಾ ಅವರನ್ನು ಅಟ್ಲಿ ಸಂಪರ್ಕಿಸಿದ್ದಾರಾದರೂ ಅವರು ನಟಿಸುವುದು ಇನ್ನೂ ಖಾತ್ರಿ ಆಗಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ:ವಯಸ್ಸಿಗೆ ಮೀರಿದ ಸಾಧನೆ: ಅಪರೂಪದ ದಾಖಲೆ ಬರೆದ ಅಲ್ಲು ಅರ್ಜುನ್ ಪುತ್ರಿ ಆರ್ಹಾ

ಇನ್ನು ಈ ಸಿನಿಮಾದಲ್ಲಿ ಈಗಾಗಲೇ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ಜೊತೆಗೆ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ಖಳನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲು ಅರ್ಜುನ್ ಈ ಚಿತ್ರದಲ್ಲಿ ದ್ವಿಪಾತ್ರ ಅಥವಾ ಎರಡಕ್ಕಿಂತಲೂ ಹೆಚ್ಚು ಪಾತ್ರಗಳಲ್ಲಿ ಮಿಂಚಲಿದ್ದಾರೆ ಎನ್ನಲಾಗುತ್ತಿದೆ. ಚಿತ್ರವು ‘ಪ್ಯಾರಲಲ್ ಯೂನಿವರ್ಸ್’ ಕಥಾಹಂದರ ಹೊಂದಿರಲಿದೆ ಎಂಬ ಮಾಹಿತಿ ಇದೆ.

ಸದ್ಯಕ್ಕೆ ಅನುಷ್ಕಾ ಶರ್ಮಾ ಅವರ ಸೇರ್ಪಡೆಯ ಬಗ್ಗೆ ಚಿತ್ರತಂಡವಾಗಲಿ ಅಥವಾ ನಟಿಯಾಗಲಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಆದರೆ, ಏಪ್ರಿಲ್ 8ರಂದು ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ಅಂಗವಾಗಿ ಚಿತ್ರದ ಟೀಸರ್ ಅಥವಾ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ. ಸಾಯಿ ಅಭ್ಯಂಕರ್ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಸನ್ ಪಿಕ್ಚರ್ಸ್​​ನವರು ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ಬೆಂಗ್ಳೂರಿನಲ್ಲಿ ತಿಂಗಳ ಬಾಡಿಗೆಗೆ 40,000 ರೂ ಖರ್ಚು ಮಾಡುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ

ಬೆಂಗಳೂರು, ಮಾರ್ಚ್ 22: ಬೆಂಗಳೂರು (Bengaluru) ಅಂದ್ರೆ ದುಬಾರಿ. ಈ ಬಾಡಿಗೆ ಮನೆ ವಿಷ್ಯದಲ್ಲಿ ಕೇಳುವುದೇ ಬೇಡ. ಸಿಗೋ ಅಲ್ಪ ಸಂಬಳದಲ್ಲಿ ಬಾಡಿಗೆ ಕಟ್ಟಿ ನೆಮ್ಮದಿಯಿಂದ ಇರೋಣ ಅಂದ್ರೆ ಮನೆ ಮಾಲೀಕರ ಡಿಮ್ಯಾಂಡ್ ಹೆಚ್ಚಾಗಿದೆ. ಹೀಗಾಗಿ ದುಡಿದದ್ದೆಲ್ಲವನ್ನು ಮನೆ ಮಾಲೀಕರ ಹೊಟ್ಟೆಗೆ ಹಾಕುವಂತಾಗಿದೆ. ಬೆಂಗಳೂರಿನ ನಿವಾಸಿಯೊಬ್ಬರು ಪ್ರತಿ ತಿಂಗಳು ಸುಮಾರು 40,000 ರೂ ಬಾಡಿಗೆಗೆ ಏಕೆ ಖರ್ಚು ಮಾಡುವೆ ಎಂದು ವಿವರಿಸಿದ್ದಾರೆ. ಇದೇ ವೇಳೆ ತನಗೆ ಬಾಡಿಗೆಗಿಂತ ಜೀವನದ ಅನುಭವ ಮುಖ್ಯ ಎಂದು ತಿಳಿಸಿದ್ದಾರೆ. ಈ ವ್ಯಕ್ತಿ ಹಂಚಿಕೊಂಡ ವಿಡಿಯೋ ಆನ್‌ಲೈನ್‌ನಲ್ಲಿ ಚರ್ಚೆ ಹುಟ್ಟುಹಾಕಿದೆ.

ಮಾಣಿಕ್ ಸಲಾರಿಯಾ (life_with_manik) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ವಸತಿ ಆಯ್ಕೆಯನ್ನು ಪ್ರಶ್ನಿಸಿದ ಸಹೋದ್ಯೋಗಿಯೊಂದಿಗಿನ ವಿಡಿಯೋ ಹಂಚಿಕೊಂಡಿದ್ದಾರೆ. ನಾನು ಬೆಂಗಳೂರಿನಲ್ಲಿ ತಿಂಗಳಿಗೆ ಸುಮಾರು 40,000 ರೂ ಪಾವತಿಸುತ್ತೇನೆ. ಇತ್ತೀಚೆಗೆ ನನ್ನ ಸಹೋದ್ಯೋಗಿ ನೀವು ತುಂಬಾ ದೂರದಲ್ಲಿ ವಾಸಿಸುತ್ತಿದ್ದೀರಿ. ನೀವು ಹೆಚ್ಚು ಬಾಡಿಗೆ ಪಾವತಿಸುತ್ತಿದ್ದೀರಿ. ನೀವು ನಿಮ್ಮ ಹಣವನ್ನು ವ್ಯರ್ಥ ಮಾಡುತ್ತಿದ್ದೀರಿ ಎಂದು ಹೇಳಿದ್ದರು. ಆ ಕ್ಷಣದಲ್ಲಿ ಜನರು ಬಾಡಿಗೆಯನ್ನು ಫ್ಲಾಟ್‌ನ ದೃಷ್ಟಿಕೋನದಿಂದ ಮಾತ್ರ ನೋಡುತ್ತಾರೆ ಎಂದು ನಾನು ಅರಿತುಕೊಂಡೆ. ಆದರೆ ನನ್ನ ಅಭಿಪ್ರಾಯ ಸ್ವಲ್ಪ ವಿಭಿನ್ನವಾಗಿದೆ ಎಂದು ವಿವರಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ನಾನು ಬಾಡಿಗೆಯನ್ನು ಜೀವನಶೈಲಿಯಾಗಿ ನೋಡುತ್ತೇನೆ. ನಾನು ಜೀವನಶೈಲಿಗಾಗಿ ಖರ್ಚು ಮಾಡುತ್ತಿದ್ದೇನೆ. ನಾನು ಗೇಟೆಡ್ ಸೊಸೈಟಿಯಲ್ಲಿ ವಾಸಿಸುತ್ತಿದ್ದೇನೆ. ನೀವು ಪಡೆಯುವ ದೊಡ್ಡ ಪ್ರಯೋಜನವೆಂದರೆ ಇಲ್ಲಿ ಭದ್ರತೆ. ನೀವು ಪಡೆಯುವ ಎರಡನೇ ದೊಡ್ಡ ಪ್ರಯೋಜನವೆಂದರೆ ಕ್ಲಬ್‌ಹೌಸ್. ಈ ಕ್ಲಬ್‌ಹೌಸ್‌ನಲ್ಲಿ ಹಲವು ಸೌಲಭ್ಯಗಳಿವೆ. ನೀವು ಕ್ರೀಡೆಗಳನ್ನು ಆಡಬಹುದು, ಟೇಬಲ್ ಟೆನ್ನಿಸ್ ಆಡಬಹುದು, ಬ್ಯಾಡ್ಮಿಂಟನ್ ಆಡಬಹುದು, ಈಜಬಹುದು ಹಾಗೂ ಜಿಮ್ ಮಾಡಬಹುದು. ಹೊರಗೆ ಲಾನ್ ಟೆನ್ನಿಸ್ ಕೋರ್ಟ್ ಇರುತ್ತದೆ. ಬಹುತೇಕ ಪ್ರತಿ ವಾರ ನಾವು ಬಾಕ್ಸ್ ಕ್ರಿಕೆಟ್ ಆಡುತ್ತೇವೆ ಎಂದು ಹೇಳಿದ್ದಾರೆ.

ಇಲ್ಲಿನ ಪರಿಸರ ತುಂಬಾ ಸ್ವಚ್ಛ ಮತ್ತು ಹಸಿರಾಗಿದ್ದು, ಸಂಜೆ ನಡಿಗೆ, ಬೆಳಿಗ್ಗೆ ನಡಿಗೆ ಅನುಭವ ಪಡೆಯುತ್ತೇನೆ. ಅದು ಮನೆಯಂತೆ ಭಾಸವಾಗುತ್ತದೆ. ಇಲ್ಲಿನ ನಿವಾಸಿಗಳು ಜತೆ ಸೇರಿ ಪ್ರತಿಯೊಂದು ಹಬ್ಬವನ್ನು ತುಂಬಾ ಉತ್ಸಾಹದಿಂದ ಆಚರಿಸುತ್ತೇವೆ. ನಾವು ಇತ್ತೀಚೆಗೆ ಹೋಳಿ ಆಚರಿಸಿದೆವು. ಆದರೆ ನನಗೆ ಇದೆಲ್ಲದಕ್ಕಿಂತ ಮುಖ್ಯವಾದುದು ಏನು ಎಂದು ನಿಮಗೆ ತಿಳಿದಿದೆಯೇ? ನಾನು ಸಂಜೆ ಆಫೀಸಿನಿಂದ ಮನೆಗೆ ಬಂದಾಗ, ನಾನು ಮಾನಸಿಕವಾಗಿ ಕೆಲಸದಿಂದ ದೂರ ಸರಿಯಬಹುದು. ಹೌದು, ಪ್ರಯಾಣಕ್ಕಿಂತ ನನಗೆ ಸೌಕರ್ಯವೇ ಹೆಚ್ಚು ಇಷ್ಟ ಎಂದು ಹೇಳಿರುವುದನ್ನು ಕಾಣಬಹುದು.

ಇದನ್ನೂ ಓದಿ: ನನ್ನ ಜೀವನದ ತಪ್ಪು ನಿರ್ಧಾರ ಇದು; ಬಸವನಗುಡಿಯಿಂದ ಬೆಳ್ಳಂದೂರಿಗೆ ಸ್ಥಳಾಂತರಗೊಂಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ನಿವಾಸಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ದುಡಿಯುವುದು ಖುಷಿಯಾಗಿರಲು, ಈ ಮಾತಿನಂತೆ ನೀವು ನಡೆದುಕೊಳ್ಳುತ್ತಿದ್ದೀರಾ ಎಂದು ಹೇಳಿದ್ದಾರೆ. ಇನ್ನೊಬ್ಬರು, ಇದು ನಿಜಕ್ಕೂ ಒಳ್ಳೆಯ ದೃಷ್ಟಿಕೋನ. ನೀವು ಅದನ್ನು ನಿಭಾಯಿಸಲು ಸಾಧ್ಯವಾದರೆ, ನಿಮ್ಮ ಜೀವನದ ಗುಣಮಟ್ಟವನ್ನು ಸುಧಾರಿಸಿದರೆ ನಿಜಕ್ಕೂ ಯೋಗ್ಯವಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ದುಡ್ಡು ಖರ್ಚು ಮಾಡಿದೆ ಯಾಕೆ ಅನ್ನೋದಕ್ಕಿಂತ, ಪಡೆದುಕೊಂಡದ್ದೇನು ಎಂದು ಅರಿಯುವುದು ಮುಖ್ಯ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಇಂಧನ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

ನವದೆಹಲಿ, ಮಾರ್ಚ್ 22: ಇರಾನ್ ಯುದ್ಧ ಮುಂದುವರಿಯುತ್ತಲೇ ಇರುವುದರಿಂದ ಜಾಗತಿಕ ತೈಲ ಬಿಕ್ಕಟ್ಟು (Oil crisis) ತೀವ್ರಗೊಳ್ಳುತ್ತಿದೆ. ಭಾರತದಲ್ಲಿ ಸರ್ಕಾರವು ಇಂಧನ ಪೂರೈಕೆಗೆ ಹರಸಾಹಸ ಮಾಡುತ್ತಿದೆ. ಈ ಮುಂದುವರಿದ ಸಂಕಷ್ಟ ಎದುರಿಸಲು ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿಗಳು ಉನ್ನತ ಮಟ್ಟದ ಸಭೆ ನಡೆಸಿದರು. ಪೆಟ್ರೋಲಿಯಂ, ಕಚ್ಚಾ ತೈಲ, ನೈಸರ್ಗಿಕ ಅನಿಲ್, ವಿದ್ಯುತ್, ರಸಗೊಬ್ಬರ ಸೆಕ್ಟರ್​ಗಳಲ್ಲಿ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆ ಮಾಡಿದರು.

ಅತಿರೇಕದ ಸ್ಥಿತಿ ಬಂದರೆ ದೇಶದಲ್ಲಿ ಈ ವಿವಿಧ ಇಂಧನ ಸರಕುಗಳ ದಾಸ್ತಾನು ಎಷ್ಟಿದೆ, ಆಮದು ಎಷ್ಟು ಬೇಕು, ಸಿದ್ಧತೆಯ ಯೋಜನೆಗಳು ಏನೇನು ಎಂಬಿತ್ಯಾದಿ ಮಾಹಿತಿಯನ್ನು ಸರ್ಕಾರದ ಈ ಸಂಬಂಧಿತ ಇಲಾಖೆಗಳ ಉನ್ನತ ಅಧಿಕಾರಿಗಳು ಪ್ರಧಾನಿಗಳಿಗೆ ನಿವೇದಿಸಿದರು. ವಿವಿಧ ಸಚಿವರೂ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಹೋಟೆಲ್, ಮುಂಗಟ್ಟುಗಳಿಗೆ ನಿರಾಳ ಸುದ್ದಿ; ರಾಜ್ಯಗಳಿಗೆ ಕಮರ್ಷಿಯಲ್ ಎಲ್​ಪಿಜಿ ಪೂರೈಕೆ ಶೇ. 50ಕ್ಕೆ ಏರಿಕೆ

ಕಚ್ಚಾ ತೈಲ ಬೆಲೆ ಹೆಚ್ಚಳ ಆಗಿದ್ದರೂ ಭಾರತ ರಷ್ಯಾದಿಂದ ಅದರ ಪೂರೈಕೆ ಪಡೆದಿದೆ. ಭಾರತದಲ್ಲೂ ಪೆಟ್ರೋಲಿಯಂ ದಾಸ್ತಾನು ತಕ್ಕಮಟ್ಟಿಗೆ ಇದೆ. ಹೀಗಾಗಿ, ತೈಲ ಬೆಲೆ ಏರಿಕೆಯ ಶಾಕ್ ಅನ್ನು ಭಾರತ ತಡೆದುಕೊಂಡು, ಸಾಮಾನ್ಯ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆಯಾಗದಂತೆ ನೋಡಿಕೊಂಡಿದೆ. ಪ್ರೀಮಿಯಮ್ ಪೆಟ್ರೋಲ್ ಬೆಲೆ ಮಾತ್ರವೇ ಏರಿಕೆ ಆಗಿರುವುದು.

ಭಾರತಕ್ಕೆ ನೈಸರ್ಗಿಕ ಅನಿಲದ ಅಭಾವವೂ ಹೆಚ್ಚೇನೂ ಕಾಡುತ್ತಿಲ್ಲ. ಪೈಪ್ಡ್ ಗ್ಯಾಸ್ ಪೂರೈಕೆ ನಿರಂತರವಾಗಿದೆ. ಅರ್ಧಕ್ಕಿಂತ ಹೆಚ್ಚಿನ ನೈಸರ್ಗಿಕ ಅನಿಲವು ಭಾರತದಲ್ಲೇ ಸಿದ್ಧವಾಗುತ್ತಿರುವುದರಿಂದ ಅದರ ಪೂರೈಕೆಯಲ್ಲಿ ಅಷ್ಟೇನೂ ವ್ಯತ್ಯಯ ಆಗಿಲ್ಲ. ಆಸ್ಟ್ರೇಲಿಯಾ, ಕೆನಡಾ ಇತ್ಯಾದಿ ಮೂಲಗಳಿಂದ ನ್ಯಾಚುರಲ್ ಗ್ಯಾಸ್ ಪೂರೈಕೆಯನ್ನು ಭಾರತ ಪಡೆಯುತ್ತಿದೆ.

ಆದರೆ, ದೇಶಕ್ಕೆ ಹೆಚ್ಚಿನ ಸಮಸ್ಯೆಯಾಗಿರುವುದು ಎಲ್​ಪಿಜಿಯದ್ದು. ಈ ಪೆಟ್ರೋಲಿಯಂ ಗ್ಯಾಸ್ ಅಭಾವ ಹೆಚ್ಚು ಕಾಡುತ್ತಿದೆ. ಕಮರ್ಷಿಯಲ್ ಗ್ಯಾಸ್ ಬಳಕೆಗೆ ನಿರ್ಬಂಧಗಳನ್ನು ಹಾಕಿದೆ. ಗೃಹಬಳಕೆ ಎಲ್​ಪಿಜಿ ಪೂರೈಕೆಗೆ ಸರ್ಕಾರ ಮೊದಲ ಆದ್ಯತೆ ಕೊಟ್ಟಿದೆ. ಕಮರ್ಷಿಯಲ್ ಗ್ಯಾಸ್ ವಿಚಾರದಲ್ಲಿ ಹೋಟೆಲ್, ರೆಸ್ಟೋರೆಂಟ್ ಇತ್ಯಾದಿ ಸಾಮಾನ್ಯ ಜನರಿಗೆ ಸಂಬಂಧಿಸಿದ ಸೇವೆಗಳಿಗೆ ಆದ್ಯತೆ ಕೊಡಲಾಗುತ್ತಿದೆ.

ಇದನ್ನೂ ಓದಿ: ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

ವಾಹನಗಳಿಗೆ ಹಾಕಲಾಗುವ ಸಿಎನ್​ಜಿ ಗ್ಯಾಸ್ ಪೂರೈಕೆ ಸಮರ್ಪಕವಾಗಿದೆ ಎಂದು ಸರ್ಕಾರ ಹೇಳಿದರೂ ಹಲವು ನಗರಗಳಲ್ಲಿ ಸಿಎನ್​ಜಿ ಸ್ಟೇಷನ್​ಗಳಲ್ಲಿ ಉದ್ದುದ್ದ ಕ್ಯೂಗಳಿರುವುದನ್ನು ಕಾಣಬಹುದು ಎಂದು ವರದಿಗಳು ಬಂದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link