All posts by nagaraj11081993

ಪ್ರವಾಸೋದ್ಯಮಕ್ಕೂ ತಟ್ಟಿದ LPG ಅಭಾವ: ಕರಾವಳಿ ಖಾದ್ಯಗಳಿಗೆ ಬ್ರೇಕ್; ಪ್ರವಾಸಿಗರಿಗೆ ನಿರಾಶೆ​

ಪ್ರವಾಸೋದ್ಯಮಕ್ಕೂ ತಟ್ಟಿದ LPG ಅಭಾವ: ಕರಾವಳಿ ಖಾದ್ಯಗಳಿಗೆ ಬ್ರೇಕ್; ಪ್ರವಾಸಿಗರಿಗೆ ನಿರಾಶೆ​

ಕಾರವಾರ, ಮಾರ್ಚ್​ 22: ಎಲ್​ಪಿಜಿ ಗ್ಯಾಸ ಸಿಲಿಂಡರ್ (gas cylinder) ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇದರ ಎಫೆಕ್ಟ್ ಬೇರೆ ಉದ್ಯಮಗಳ ಮೇಲೂ ಬೀರಿದೆ. ಪ್ರವಾಸಿ ತಾಣಗಳಲ್ಲಿ ಸಮರ್ಪಕ ಎಲ್.ಪಿ.ಜಿ ಗ್ಯಾಸ್ ಸಿಗದೆ ಎಲ್ಲಾ ಬಗೆಯ ಅಡುಗೆ ಮಾಡಲಾಗುತ್ತಿಲ್ಲ. ಹೀಗಾಗಿ ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪ್ರವಾಸಿಗರಿಗೆ ಕರಾವಳಿಯ ಖಾದ್ಯ ಸವಿಯಲು ಸಿಗದೇ ನಿರಾಸೆ ಆಗಿದ್ದಾರೆ. ಇನ್ನೂ ಕೆಲವರು  ಬುಕ್ಕಿಂಗ್ ಮಾಡಿರುವುದನ್ನ ಕ್ಯಾನ್ಸಲ್ ಮಾಡಿಕೊಳ್ಳುತ್ತಿದ್ದಾರೆ.

ಇರಾನ್​​-ಇಸ್ರೇಲ್ ಯುದ್ಧ ಆರಂಭವಾಗಿ ಇಂದಿಗೆ 23 ದಿನ. ಇದೇ ಯುದ್ಧ ನಮ್ಮ ದೇಶದ ಉದ್ಯಮದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಮೊದಮೊದಲು ಸಿಲಿಂಡರ್ ಗ್ಯಾಸ್ ಸಿಗದೆ ಹೊಟೇಲ್ ಉದ್ಯಮಕ್ಕೆ ದೊಡ್ಡ ನಷ್ಟ ಸಂಭವಿಸಿದೆ. ಆದರೆ ಸಿಲಿಂಡರ್ ಎಫೆಕ್ಟ್​ನ ನಷ್ಟ ಕೇವಲ ಹೋಟೆಲ್ ಉದ್ಯಮಕ್ಕೆ ಸೀಮಿತವಾಗಿಲ್ಲ. ಬೇರೆಬೇರೆ ಉದ್ಯಮಗಳ ಮೇಲೂ ಪರಿಣಾಮ ಬೀರಿದೆ.

ಇದನ್ನೂ ಓದಿ: ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್

ಉತ್ತರ ಕನ್ನಡ ಜಿಲ್ಲೆಯನ್ನ ಪ್ರವಾಸಿಗರ ಸ್ವರ್ಗ ಎಂದು ಕರೆಯಲಾಗುತ್ತದೆ. ಕೇವಲ ಪ್ರೇಕ್ಷಣೀಯ ತಾಣಗಳಿಗಷ್ಟೇ ಅಲ್ಲ, ಇಲ್ಲಿನ ಖಾದ್ಯಗಳು ಕೂಡ ಸಾಕಷ್ಟು ಫೇಮಸ್. ಇಲ್ಲಿನ ಕರಾವಳಿ ಖಾದ್ಯ ಸವಿಯಲು ರಾಜ್ಯ, ಹೊರರಾಜ್ಯಗಳಿಂದ ಜನರು ಆಗಮಿಸುತ್ತಾರೆ. ಆದರೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಿಲಿಂಡರ್ ಅಭಾವದಿಂದ ಎಲ್ಲಾ ಬಗೆಯ ಖಾದ್ಯಗಳನ್ನು ಮಾಡಲಾಗುತ್ತಿಲ್ಲ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಪ್ರವಾಸಿತಾಣಗಳಿವೆ. ಇಲ್ಲಿನ ನಿಸರ್ಗ ಸೌಂದರ್ಯಕ್ಕೆ ಮನಸೋಲದವರಿಲ್ಲ. ಇಂತಹ ಪ್ರಕೃತಿ ಸೌಂದರ್ಯದ ಮಧ್ಯೆ ತಯಾರಿಸುವ ರುಚಿಕರ ಫಿಶ್ ಹಾಗೂ ತಂದೂರಿ ಐಟಂಗಳಿಗೆ ಭಾರಿ ಬೇಡಿಕೆ ಇದೆ. ಪ್ರವಾಸಿ ತಾಣದ ಜೊತೆಗೆ ಇಲ್ಲಿನ ಖಾದ್ಯ ಸವಿಯಲೆಂದೇ ರಾಜ್ಯ, ಹೊರರಾಜ್ಯಗಳಿಂದ ಜನ ಬರುತ್ತಾರೆ. ಆದರೆ ಗ್ಯಾಸ ಅಭಾವ ಹಿನ್ನೆಲೆ ಇಲ್ಲಿನ ಹೋಟೆಲ್​​ ಹಾಗೂ ರೆಸಾರ್ಟ್ ಮಾಲೀಕರಿಗೆ ಕರೆ ಮಾಡಿ ಖಾದ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಖಾದ್ಯ ಸಿಗುತ್ತಿಲ್ಲ ಎಂಬ ಮಾಹಿತಿ ಬರುತ್ತಿದ್ದಂತೆ ಬುಕ್ಕಿಂಗ್ ಕೂಡ ಕ್ಯಾನ್ಸಲ್ ಮಾಡುತ್ತಿದ್ದಾರೆ.

ಹೋಟೆಲ್​​ ಮಾಲೀಕರು ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಪ್ರಿಮಿಯರ್ ಹೋಟೆಲ್​​ ಮಾಲೀಕ ಎಂ.ಜಿ ರಾಣೆ ಮಾತನಾಡಿದ್ದು, ಪ್ರತಿವರ್ಷ ಸಾಲು ಸಾಲು ರಜೆ ಇದ್ದರೆ ನಮ್ಮ ಹೋಟೆಲ್​​ ತುಂಬಿರುತ್ತಿತ್ತು. ಯುದ್ಧ ಆರಂಭಕ್ಕೂ ಮುನ್ನ ಮುಂಗಡ ಬುಕ್ಕಿಂಗ್ ಮಾಡಿದ್ದರು. ಕಳೆದ ವಾರ ಬಹಳಷ್ಟು ಜನ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದಾರೆ. ಕಾರವಾರದ ದೇಸಿ ಫುಡ್​​ನ್ನು ಬಹಳಷ್ಟು ಜನ ಇಷ್ಟಪಡುತ್ತಾರೆ. ದೇಸಿ ಫುಡ್ ತಿನ್ನಲು ದೂರದೂರಿನಿಂದ ವಿಐಪಿ ಗೆಸ್ಟ್ ಬರ್ತಾರೆ. ಆ ಗ್ಯಾಸ್ ಅಭಾವದಿಂದ ಬಹಳಷ್ಟು ಐಟಂ ಮಾಡುತ್ತಿಲ್ಲ. ಹೀಗಾಗಿ ಬಹಳಷ್ಟು ಜನ ಕಾರವಾರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ರೆಸಾರ್ಟ್, ಹೋಮ್ ಸ್ಟೆಗಳಲ್ಲು ಇದೆ ರೀತಿಯ ಪರಿಸ್ಥಿತಿ ಇದೆ. ನಿರೀಕ್ಷಿಸಿದಷ್ಟು ಲಾಭ ಸಿಕ್ಕಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ

ಒಟ್ಟಾರೆ ಸಾಲು ಸಾಲು ರಜೆ ಹಾಗೂ ಮಕ್ಕಳ ಬೆಸಿಗೆ ರಜೆ ಆರಂಭ ಹಿನ್ನೆಲೆ ಬಹಳಷ್ಟು ಜನರು ಕುಟುಂಬ ಸಮೇತ ಪ್ರವಾಸಕ್ಕೆ ಬರುವ ಪ್ಲ್ಯಾನ್ ಹಾಕಿರುತ್ತಾರೆ.​ ಆದರೆ ಗ್ಯಾಸ್ ಅಭಾವದಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಹೆಚ್ಚು ಆದಾಯ ಗಳಿಸಬಹುದೆಂಬ ನಿರೀಕ್ಷೆಯಲ್ಲಿದ್ದ ಹೋಟೆಲ್​​ ಉದ್ಯಮಿಗಳಿಗೆ ನಿರಾಸೆ ಉಂಟಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Ayush Department Recruitment 2026: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ನೇರ ಸಂದರ್ಶನ

ಬೆಂಗಳೂರು: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯು (AYUSH Department Karnataka) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಖಾಲಿ ಇರುವ ಖಾತೆ ಸಹಾಯಕ (Accounts Assistant) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಾಣಿಜ್ಯ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಭ್ಯರ್ಥಿಗಳು ಯಾವುದೇ ಆನ್‌ಲೈನ್ ಅರ್ಜಿ ಸಲ್ಲಿಸುವ ಅಗತ್ಯವಿಲ್ಲದೆ ಮಾರ್ಚ್ 25 ರಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಹುದ್ದೆಯ ವಿವರ ಮತ್ತು ವೇತನ ಶ್ರೇಣಿ:

ಪ್ರಸ್ತುತ ಆಯುಷ್ ನಿರ್ದೇಶನಾಲಯದಲ್ಲಿ ಒಂದು ಖಾತೆ ಸಹಾಯಕ ಹುದ್ದೆ ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು 25,000 ರೂ. ಗೌರವ ಧನವನ್ನು ನೀಡಲಾಗುತ್ತದೆ. ಉದ್ಯೋಗ ಸ್ಥಳವು ಬೆಂಗಳೂರು ಆಗಿರುತ್ತದೆ. ಸರ್ಕಾರದ ನಿಯಮಾನುಸಾರ ಆಯ್ಕೆ ಪ್ರಕ್ರಿಯೆಯು ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ವೃತ್ತಿಜೀವನವನ್ನು ರಾಜ್ಯದ ಆರೋಗ್ಯ ಮತ್ತು ಆಯುಷ್ ವಲಯದಲ್ಲಿ ಆರಂಭಿಸಲು ಇದು ಸೂಕ್ತ ವೇದಿಕೆಯಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿ.ಕಾಂ (B.Com) ಅಥವಾ ಬಿಬಿಎ/ಬಿಬಿಎಂ (BBA/BBM) ಪದವಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ ಮೀರಿರಬಾರದು. ಸರ್ಕಾರದ ನಿಯಮಗಳ ಅನ್ವಯ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಸಂದರ್ಶನ ಎಲ್ಲಿ ಮತ್ತು ಯಾವಾಗ?

ಈ ಹುದ್ದೆಯ ಆಯ್ಕೆಯು ಕೇವಲ ನೇರ ಸಂದರ್ಶನದ (Walk-in-Interview) ಮೂಲಕ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು, ಅನುಭವದ ಪತ್ರಗಳು (ಇದ್ದಲ್ಲಿ) ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಮಾರ್ಚ್ 25 ರಂದು ಈ ಕೆಳಗಿನ ವಿಳಾಸಕ್ಕೆ ಹಾಜರಾಗಬೇಕು:

ವಿಳಾಸ: ಆಡಿಟೋರಿಯಂ, 1ನೇ ಮಹಡಿ, ಆಯುಷ್ ನಿರ್ದೇಶನಾಲಯ, ಧನ್ವಂತರಿ ರಸ್ತೆ, ಬೆಂಗಳೂರು – 560009.

ಅಭ್ಯರ್ಥಿಗಳಿಗೆ ಸೂಚನೆಗಳು:

ಸಂದರ್ಶನಕ್ಕೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ಆಯುಷ್ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳು ಮತ್ತು ಅವುಗಳ ಒಂದು ಸೆಟ್ ಜೆರಾಕ್ಸ್ ಪ್ರತಿಗಳನ್ನು ಕೊಂಡೊಯ್ಯಲು ಸೂಚಿಸಲಾಗಿದೆ. ಸಮಯ ಪ್ರಜ್ಞೆ ಮತ್ತು ದಾಖಲೆಗಳ ನಿಖರತೆ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ: Ayush-Department-Karnataka-Recruitment-2026-Apply-for-1-Account-Assistant-Post-Notification

ಅಧಿಕೃತ ವೆಬ್​ಸೈಟ್​ ಲಿಂಕ್​: ayush.karnataka.gov.in

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs IRE: ಭಾರತ- ಐರ್ಲೆಂಡ್ ನಡುವೆ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

2026 ರ ಐಪಿಎಲ್ (IPL 2026) ಪ್ರಾರಂಭವಾಗುವ ಮೊದಲೇ ಬಿಸಿಸಿಐ (BCCI), ಟೀಂ ಇಂಡಿಯಾದ ಮುಂದಿನ ವೇಳಾಪಟ್ಟಿಯ ಬಗ್ಗೆ ಮಹತ್ವದ ಮಾಹಿತಿ ನೀಡಿದೆ. ಎರಡು ತಿಂಗಳ ಕಾಲ ಐಪಿಎಲ್​ನಲ್ಲಿ ಬ್ಯುಸಿಯಾಗಲಿರುವ ಟೀಂ ಇಂಡಿಯಾ ಆ ಬಳಿಕ ಒಂದರ ಹಿಂದೆ ಒಂದರಂತೆ ಸರಣಿಗಳನ್ನು ಆಡಲಿದೆ. ಮೊದಲಿಗೆ ಅಫ್ಘಾನಿಸ್ತಾನವನ್ನು ಎದುರಿಸಲಿರುವ ಭಾರತ ತಂಡ ಆ ಬಳಿಕ ವಿದೇಶಿ ಪ್ರವಾಸ ಮಾಡಲಿದೆ. ಆ ವಿದೇಶಿ ಪ್ರವಾಸಗಳಲ್ಲಿ ಮೊದಲನೆಯದ್ದಾಗಿ ಐರ್ಲೆಂಡ್ (India vs Ireland) ದೇಶಕ್ಕೆ ಕಾಲಿಡಲಿದೆ. ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದೀಗ ಬಿಸಿಸಿಐ, ಆ ಎರಡು ಪಂದ್ಯಗಳು ಎಲ್ಲಿ? ಯಾವಾಗ ನಡೆಯಲಿವೆ ಎಂಬುದರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಭಾರತ ತಂಡವು ಸುಮಾರು ಮೂರು ವರ್ಷಗಳ ನಂತರ ಮತ್ತೆ ಐರಿಶ್ ನೆಲದಲ್ಲಿ ಟಿ20 ಸರಣಿಯನ್ನಾಡಲಿದೆ. ಟೀಂ ಇಂಡಿಯಾ ಈ ಹಿಂದೆ 2018, 2022 ಮತ್ತು 2023 ರಲ್ಲಿ ಐರ್ಲೆಂಡ್ ಪ್ರವಾಸ ಮಾಡಿತ್ತು. ಈ ಬಾರಿ, ಎರಡು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್​ಗೆ ಹೋಗಲಿದೆ. ಮೊದಲ ಟಿ20 ಪಂದ್ಯ ಜೂನ್ 26 ರಂದು ನಡೆದರೆ, ಎರಡನೇ ಟಿ20 ಪಂದ್ಯ ಜೂನ್ 28 ರಂದು ನಡೆಯಲಿದೆ. ಈ ಎರಡೂ ಪಂದ್ಯಗಳು ಬೆಲ್‌ಫಾಸ್ಟ್‌ನಲ್ಲಿ ನಡೆಯಲಿವೆ. ಐಪಿಎಲ್‌ನಲ್ಲಿ ಮಿಂಚುವ ಆಟಗಾರರು ಈ ಪ್ರವಾಸಕ್ಕೆ ತಂಡದಲ್ಲಿ ಆಯ್ಕೆಯಾಗುವ ಸಾಧ್ಯತೆಗಳಿವೆ.

ರೋಹಿತ್, ವಿರಾಟ್ ಆಡ್ತಾರಾ?

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈಗಾಗಲೇ ಟಿ20 ಸ್ವರೂಪದಿಂದ ನಿವೃತ್ತಿ ಘೋಷಿಸಿರುವುದರಿಂದ ಅವರು ಐರ್ಲೆಂಡ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದಾಗ್ಯೂ, ರೋಹಿತ್ ಮತ್ತು ವಿರಾಟ್ ಐರ್ಲೆಂಡ್ ಪ್ರವಾಸದ ಮೊದಲು ಅಫ್ಘಾನಿಸ್ತಾನ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ (ಜೂನ್ 6 – ಜೂನ್ 20) ಮತ್ತು ಐರ್ಲೆಂಡ್ ಪ್ರವಾಸದ ನಂತರ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ (ಜುಲೈ 1 – ಜುಲೈ 19) ಆಡುವ ಸಾಧ್ಯತೆಯಿದೆ. ಇದರರ್ಥ ಒಟ್ಟಾರೆಯಾಗಿ, ಈ ಇಬ್ಬರು ಸ್ಟಾರ್ ಆಟಗಾರರು ಐಪಿಎಲ್ ನಂತರ 6 ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅಫ್ಘನ್, ಇಂಗ್ಲೆಂಡ್ ಸರಣಿಯ ವಿವರಗಳು

ಐಪಿಎಲ್ ಮುಗಿದ ಕೂಡಲೇ, ಟೀಂ ಇಂಡಿಯಾ ಜೂನ್ 6 ರಿಂದ ಜೂನ್ 20 ರವರೆಗೆ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಇದರಲ್ಲಿ ಒಂದು ಟೆಸ್ಟ್ ಪಂದ್ಯ ಮತ್ತು ಮೂರು ಏಕದಿನ ಪಂದ್ಯಗಳು ಸೇರಿವೆ. ಅದಾದ ತಕ್ಷಣ, ಐರ್ಲೆಂಡ್ ವಿರುದ್ಧ ಎರಡು ಟಿ20 ಪಂದ್ಯಗಳನ್ನು ಮುಗಿಸಿದ ನಂತರ ಭಾರತ ತಂಡ ಇಂಗ್ಲೆಂಡ್‌ಗೆ ತೆರಳಲಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಐದು ಟಿ20 ಮತ್ತು ಮೂರು ಏಕದಿನ ಪಂದ್ಯಗಳು ನಡೆಯಲಿವೆ.

ಯುವ ಆಟಗಾರರಿಗೆ ಸುವರ್ಣ ಅವಕಾಶ

ಐರ್ಲೆಂಡ್ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಅಥವಾ ಸೂರ್ಯಕುಮಾರ್ ಯಾದವ್ ಯುವ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ. ಐಪಿಎಲ್ 2026 ರಲ್ಲಿ ಅದ್ಭುತ ಪ್ರದರ್ಶನ ನೀಡುವವರಿಗೆ ಐರ್ಲೆಂಡ್ ಪ್ರವಾಸಕ್ಕೆ ಕರೆ ಬರುವ ಸಾಧ್ಯತೆಯಿದೆ. ರೋಹಿತ್ ಮತ್ತು ವಿರಾಟ್ ಅವರಂತಹ ಹಿರಿಯ ಆಟಗಾರರು ಇಲ್ಲದಿದ್ದರೂ, ಭಾರತ ಹೊಂದಿರುವ ಬಲವಾದ ಬೆಂಚ್ ಬಲದೊಂದಿಗೆ ಐರ್ಲೆಂಡ ತಂಡವನ್ನು ಸದೆಬಡಿಯಲು ಟೀಂ ಇಂಡಿಯಾ ಹೊರಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದು‌ ಕೊಲೆಗೆ ಯತ್ನಿಸಿದ ಪತ್ನಿ: ಆಗಿದ್ದೇನು?

ಚಿಕ್ಕಬಳ್ಳಾಪುರ, (ಮಾರ್ಚ್ 22): ಜಗಳದ ಬಳಿಕ ಮಲಗಿದ್ದ ಗಂಡನ (Husband) ಮರ್ಮಾಂಗಕ್ಕೆ ಹೆಂಡತಿ (Wife) ಒದ್ದು ಕೊಲೆಗೆ ಯತ್ನಿಸಿರುವ ಘಟನೆ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ. ಪತಿ ಮುನೀಂದ್ರ ಹಾಗೂ ವರ್ಷಾ ನಡುವೆ ಗಲಾಟೆಯಾಗಿದ್ದು, ಬಳಿಕ ಮುನೀಂದ್ರ ಮಲಗಿದ್ದ ವೇಳೆ ಪತ್ನಿ ವರ್ಷಾ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ.  ತನ್ನ ಗಂಡನಿಗೆ ಡೈವೋರ್ಸ್ ಕೊಡುವಂತೆ ಪೀಡಿಸಿದ್ದಾಳೆ. ಆದ್ರೆ,  ಡೈವೋರ್ಸ್ ಕೊಡಲು ಒಪ್ಪದ ಗಂಡ ಮನೆಯಲ್ಲಿ ಮಲಗಿದ್ದಾಗ, ಆತನ ಮರ್ಮಾಂಗಕ್ಕೆ ಒದ್ದು ಕೊಲೆ ಯತ್ನ ನಡೆಸಿದ್ದಾಳೆ ಎಂದು ತಿಳಿದುಬಂದಿದ್ದು,  ಅತ್ತ ಗಂಡ ಆಸ್ಪತ್ರೆ ಸೇರುತ್ತಿದ್ದಂತೆ ಇತ್ತ ಹೆಂಡತಿ ಆಸ್ಪತ್ರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ನಿವಾಸಿಗಳಾದ ಮುನಿಂದ್ರ ಹಾಗೂ ವರ್ಷಾ  ಐದು ವರ್ಷ ಪರಸ್ಪರ ಪ್ರಿತಿಸಿದ್ದು,  ಕಳೆದ 2 ವರ್ಷ ಹಿಂದಷ್ಟೇ ಪೊಲೀಸ್ ಠಾಣೆಯಲ್ಲಿ ವಿವಾಹವಾಗಿದ್ದರು. ಆದ್ರೆ, ಮದುವೆ ಬಳಿಕ ಅದೇನಾಯ್ತೋ ಏನೋ ವಿಚ್ಛೇದನ ನೀಡುವಂತೆ ವರ್ಷಾ, ಗಂಡನಿಗೆ ಪೀಡಿಸಲು ಶುರು ಮಾಡಿದ್ದಾಳೆ. ಇದೇ ವಿಚಾರಕ್ಕೆ ಪದೇ ಪದೇ  ಗಂಡನ ಜೊತೆ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದಳಂತೆ. ಇದೇ ರೀತಿ ಬೆಳಿಗ್ಗೆ ಗಂಡನ ಬಟ್ಟೆ ಹರಿದು ಹಾಕಿ ಜೋರು ಗಲಾಟೆ ಮಾಡಿದ್ದಳಂತೆ. ಅಲ್ಲದೇ ಜಗಳದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಬಟ್ಟೆ ಬಿಚ್ಚಿ ಹಾಕಿದ್ದಾಳೆ. ಸಾಲದಕ್ಕೆ ತನ್ನ  ಬಟ್ಟೆಯನ್ನೂ ಸಹ ತೆಗೆದು ಬನ್ನಿ ಯಾರ್ ಬರ್ತಿರಾ ಬನ್ನಿ ಎಂದು ಕಿರುಚಾಡಿದ್ದಾಳೆ.  ನಂತರ ಮಧ್ಯರಾತ್ರಿ ಮನೆಯಲ್ಲಿ ಮಲಗಿದ್ದ ಗಂಡನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ. ಬಳಿಕ ಆತನೇ ಆಂಬುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಚಿಂತಾಮಣಿ ತಾಲೂಕು  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ: ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಇನ್ನು ಬೆಳಗ್ಗೆ  ಆಸ್ಪತ್ರೆಗೆ ಬಂದ ಮಹಿಳೆಗೆ ಗಂಡನನ್ನ ನೋಡಲು ಕುಟುಂಬಸ್ಥರು ಅವಕಾಶ ನೀಡಿಲ್ಲ. ಇದಾದ ಬಳಿಕ ಪೊಲೀಸರಿಗೆ ದೂರು ಕೊಟ್ಟಿದ್ದಾರೆ ಎಂದು ಮಹಿಳೆ ಕ್ರೀಮಿನಾಶಕ ಸೇವಿಸಿ ಹೈಡ್ರಾಮಾವೇ ಮಾಡಿದ್ದಾಳೆ. ಇನ್ನು ವಿಷ ಸೇವಿ ಆತ್ಮಹತ್ಯೆಗೆ ಯತ್ನಿಸಿದ ವರ್ಷಾ, ಅಸ್ವಸ್ಥಳಾಗಿದ್ದು, ಕೂಡಲೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮದುವೆಯಾದ ಹೊಸದರಲ್ಲಿ ವರ್ಷಾ ತವರು ಮನೆಯಲ್ಲಿದ್ದು, ಇತ್ತೀಚಿಗೆ ಗಂಡನ ಮನೆಗೆ ಶಿಪ್ಟ್ ಆಗಿದ್ದರು. ಬಳಿಕ ಸಣ್ಣಪುಟ್ಟ ವಿಚಾರಕ್ಕೆ ವರ್ಷಾ ಗಂಡನ ಜೊತೆ ಕಿರಿಕ್ ಮಾಡುತ್ತಿದ್ದಳು. ಗಂಡನ ಸಹವಾಸವೆ ಬೇಡ ಎಂದು ಮಾಂಗಲ್ಯ ಸರ, ಕಾಲುಂಗರ ಬಿಚ್ಚಿ ಬೀದಿಯಲ್ಲಿ ಎಸೆದು ಹೋಗಿದ್ದಾಳಂತೆ. ಆದ್ರೆ, ಇದೀಗ ಗಂಡನನ್ನು ಕೊಲೆಗೆ ಯತ್ನಿಸಿದ್ದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಪಾಲಾಗಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕುಸಿದು ಬಿದ್ದ ಇರಾನ್ ಕರೆನ್ಸಿ; ಒಂದು ಕೋಟಿ ರಿಯಾಲ್ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ; ಇದರ ಮೌಲ್ಯ ಕೆಲವೇ ಡಾಲರ್ ಮಾತ್ರ

ನವದೆಹಲಿ, ಮಾರ್ಚ್ 22: ಯುದ್ಧದಿಂದ ಜರ್ಝರಿತವಾಗಿರುವ ಇರಾನ್ ಇದೀಗ ಆರ್ಥಿಕವಾಗಿ ದುಸ್ತರ ಪರಿಸ್ಥಿತಿಗೆ ಸಿಲುಕಿದೆ. ಅಮೆರಿಕದ ಆರ್ಥಿಕ ದಿಗ್ಬಂಧನದ ಫಲವಾಗಿ ಇರಾನ್​ನ ರಿಯಾಲ್ ಕರೆನ್ಸಿಯ ಮೌಲ್ಯ (Irani Rial notes) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ಕುಸಿದಿದೆ. ಈ ಮಧ್ಯೆ ಇರಾನ್ ದೇಶವು 10 ಮಿಲಿಯನ್ ರಿಯಾಲ್ ಬ್ಯಾಂಕ್ ನೋಟೊಂದನ್ನು ಬಿಡುಗಡೆ ಮಾಡಿದೆ. 10 ಮಿಲಿಯನ್ ಎಂದರೆ ಒಂದು ಕೋಟಿ ರಿಯಾಲ್ ಮುಖಬೆಲೆಯ ನೋಟು ಇದು.

ಈ ಒಂದು ಕೋಟಿ ರಿಯಾಲ್ ನೋಟಿನ ಮೌಲ್ಯ ಕೇವಲ 7 ಡಾಲರ್ ಮಾತ್ರ. ಭಾರತೀಯ ಕರೆನ್ಸಿಯಲ್ಲಿ ಇದರ ಮೌಲ್ಯ ಸುಮಾರು 650 ರುಪಾಯಿ ಮಾತ್ರ. ಅಷ್ಟು ಮಟ್ಟಿಗೆ ಇರಾನ್ ಕರೆನ್ಸಿಯ ಮೌಲ್ಯ ನಶಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಚೀನೀ ಯುವಾನ್ ಕರೆನ್ಸಿಗೆ ಬರೊಬ್ಬರಿ 2 ಲಕ್ಷ ಇರಾನೀ ರಿಯಾಲ್ ಸಿಗುತ್ತದೆ. ಒಂದು ಭಾರತೀಯ ರುಪಾಯಿಯ ಮೌಲ್ಯ ಸುಮಾರು 14,000 ರಿಯಾಲ್​ಗೆ ಸಮ ಎನಿಸುತ್ತದೆ.

ಇದನ್ನೂ ಓದಿ: ಹೋಟೆಲ್, ಮುಂಗಟ್ಟುಗಳಿಗೆ ನಿರಾಳ ಸುದ್ದಿ; ರಾಜ್ಯಗಳಿಗೆ ಕಮರ್ಷಿಯಲ್ ಎಲ್​ಪಿಜಿ ಪೂರೈಕೆ ಶೇ. 50ಕ್ಕೆ ಏರಿಕೆ

ಇರಾನ್​ನಲ್ಲಿ ಹಣದುಬ್ಬರ ಅತಿಯಾದ ಮಟ್ಟದಲ್ಲಿದೆ. ಶೇ. 50ಕ್ಕಿಂತಲೂ ಹೆಚ್ಚಿನ ಹಣದುಬ್ಬರ ದರ ಅಲ್ಲಿದೆ. ಅಂದರೆ, ವರ್ಷಕ್ಕೆ 50 ಪ್ರತಿಶತದಷ್ಟು ಬೆಲೆ ಏರಿಕೆ ಅಲ್ಲಿ ಆಗುತ್ತಿದೆ. ಹಣದ ಮೌಲ್ಯ ಕುಸಿಯುತ್ತಲೇ ಇದೆ. ಸಾಧಾರಣ ವಸ್ತುಗಳನ್ನು ಖರೀದಿಸಲೂ ಜನರು ಬಂಡಲ್​ಗಟ್ಟಲೆ ಹಣ ಕೊಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ, ಅಲ್ಲಿನ ಸರ್ಕಾರ ಒಂದು ಮಿಲಿಯನ್ ರಿಯಾಲ್ ಮುಖಬೆಲೆಯ ನೋಟುಗಳನ್ನು ಮುದ್ರಿಸಿದೆ.

ಜನರಿಂದ ಕ್ಯಾಷ್ ಶೇಖರಣೆ

ಯುದ್ಧದಿಂದ ಇರಾನ್​ನ ಬ್ಯಾಂಕಿಂಗ್ ಸಿಸ್ಟಂ ಮತ್ತು ಡಿಜಿಟಲ್ ಪಾವತಿ ವ್ಯವಸ್ಥೆಗೆ ಧಕ್ಕೆಯಾಗುವ ಭಯವೂ ಇರಾನ್​ನ ಆಡಳಿತ ಮತ್ತು ಜನಸಾಮಾನ್ಯರಿಗೆ ಕಾಡುತ್ತಿದೆ. ಹೀಗಾಗಿ, ಬಹಳಷ್ಟು ಜನರು ನಗದು ಹಣವನ್ನು ಇಟ್ಟುಕೊಳ್ಳಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಬ್ಯಾಂಕು ಹಾಗು ಎಟಿಎಂಗಳ ಮುಂದೆ ಜನರ ನೂಕುನುಗ್ಗಲು ಹೆಚ್ಚಾಗಿದೆ.

ಇದನ್ನೂ ಓದಿ: ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

ಅಂತಾರಾಷ್ಟ್ರೀಯ ನಿಷೇಧ ಕ್ರಮವು ಇರಾನ್ ಆರ್ಥಿಕತೆಯನ್ನು ಜರ್ಝರಿತಗೊಳಿಸಿದೆ. ಅಮೆರಿಕನ್ ಡಾಲರ್ ಬಳಕೆ ಅಸಾಧ್ಯವಾದ್ದರಿಂದ ಇರಾನ್​ಗೆ ಅಂತಾರಾಷ್ಟ್ರೀಯ ವ್ಯವಹಾರ ಕಷ್ಟವೆನಿಸಿದೆ. ಚೀನಾ ಜೊತೆ ಬಾರ್ಟರ್ ಸಿಸ್ಟಂ ರೀತಿ ಅದು ವ್ಯವಹರಿಸುತ್ತಿದೆ. ಚೀನಾಗೆ ತೈಲ ಪೂರೈಕೆಗೆ ಬದಲಾಗಿ, ಇರಾನ್​ನಲ್ಲಿ ಚೀನಾ ಬೇರೆ ಸೇವೆಗಳನ್ನು ಒದಗಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ತನ್ನ ಬಗ್ಗೆ ಹರಡಿದ್ದ ವದಂತಿಯ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ

ಮಡದಿ ಮಕ್ಕಳೊಂದಿಗೆ ಲಂಡನ್​ನಲ್ಲಿ ನೆಲೆಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಯಾವುದಾದರೂ ಸರಣಿಗಳಿದ್ದಾಗ ಮಾತ್ರ ಭಾರತಕ್ಕೆ ಬರುತ್ತಾರೆ. ಉಳಿದಂತೆ ಕೊಹ್ಲಿ ಲಂಡನ್​ನಲ್ಲಿಯೇ ಇರುತ್ತಾರೆ. ಇದೀಗ 2026 ರ ಐಪಿಎಲ್ ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಇದರ ಸಲುವಾಗಿ ವಿರಾಟ್ ಕೊಹ್ಲಿ ತಮ್ಮ ಮಡದಿ ಅನುಷ್ಕಾ ಶರ್ಮಾ ಅವರೊಂದಿಗೆ ಕೆಲವು ದಿನಗಳ ಹಿಂದೆ ಭಾರತಕ್ಕೆ ಬಂದಿಳಿದಿದ್ದರು. ಆ ಬಳಿಕ ಆರ್​ಸಿಬಿ ತಂಡವನ್ನು ಕೂಡಿಕೊಂಡಿರುವ ಕೊಹ್ಲಿ, ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದೆಲ್ಲದರ ನಡುವೆ ವಿರಾಟ್ ಕೊಹ್ಲಿಗೆ ಸಂಬಂಧಿಸಿದ ವದಂತಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ವದಂತಿ ಗಾಳಿಯಂತೆ ಹಬ್ಬುತ್ತಿರುವುದನ್ನು ಗಮನಿಸಿದ ಕೊಹ್ಲಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ವದಂತಿ ಬಗ್ಗೆ ಕೊಹ್ಲಿ ಸ್ಪಷ್ಟನೆ

ವಾಸ್ತವವಾಗಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿ ಏನೆಂದರೆ.. ವಿರಾಟ್ ಕೊಹ್ಲಿ ಭಾರತದಿಂದ ಲಂಡನ್‌ಗೆ ಪ್ರಯಾಣಿಸಲು ಆರ್‌ಸಿಬಿ ಆಡಳಿತ ಮಂಡಳಿಯಿಂದ ಚಾರ್ಟರ್ಡ್ ವಿಮಾನದ ಬೇಡಿಕೆ ಇಟ್ಟಿದ್ದಾರೆ. ಇದರ ಜೊತೆಗೆ ಆರ್‌ಸಿಬಿ ಪಂದ್ಯಗಳ ನಡುವೆ ಮೂರು ದಿನಗಳ ಅಂತರವಿದ್ದರೆ, ಆ ಚಾರ್ಟರ್ಡ್​ ವಿಮಾನದಲ್ಲಿ ಭಾರತದಿಂದ ಲಂಡನ್​ಗೆ ತೆರಳಿ, ಪಂದ್ಯದ ಹಿಂದಿನ ದಿನ ಲಂಡನ್​ನಿಂದ ಭಾರತಕ್ಕೆ ಹಿಂದಿರುಗಿ ತಂಡವನ್ನು ಕೂಡಿಕೊಳ್ಳುವ ಸಲುವಾಗಿ ಕೊಹ್ಲಿ ಈ ಬೇಡಿಕೆಯನ್ನು ಆರ್​​ಸಿಬಿ ಆಡಳಿತ ಮಂಡಳಿ ಮುಂದಿಟ್ಟಿದ್ದಾರೆ ಎಂಬುದಾಗಿತ್ತು.

ವದಂತಿಯನ್ನು ತಳ್ಳಿಹಾಕಿದ ಕೊಹ್ಲಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿಯನ್ನು ವಿರಾಟ್ ಕೊಹ್ಲಿ ನಿರಾಕರಿಸಿದ್ದು, ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ವೈರಲ್ ಪೋಸ್ಟ್ ಅನ್ನು ಹಂಚಿಕೊಂಡು, ಎರಡು ನಗುವ ಎಮೋಜಿಗಳನ್ನು ಸೇರಿಸಿ ಪೋಸ್ಟ್ ಮಾಡಿದ್ದಾರೆ. ಇದರರ್ಥ, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಸುದ್ದಿ ಶುದ್ಧ ಸುಳ್ಳು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂಬುದನ್ನು ಅರಿಯಬಹುದಾಗಿದೆ.

ಭರ್ಜರಿ ತಯಾರಿಯಲ್ಲಿ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ 2026 ಕ್ಕೆ ತಯಾರಿ ನಡೆಸುತ್ತಿದ್ದಾರೆ. ಅವರು ಕಳೆದ ವಾರವಷ್ಟೇ ಆರ್‌ಸಿಬಿ ಶಿಬಿರಕ್ಕೆ ಸೇರಿದ್ದರು. ಆರ್‌ಸಿಬಿ ತರಬೇತಿ ಶಿಬಿರದಲ್ಲಿ ವಿರಾಟ್ ಕೊಹ್ಲಿ ಅಭ್ಯಾಸ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿಯೂ ಹರಿದಾಡುತ್ತಿವೆ. ಕೆಲವು ವೀಡಿಯೊಗಳಲ್ಲಿ ವಿರಾಟ್ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂದರೆ, ಇನ್ನು ಕೆಲವು ವೀಡಿಯೊಗಳಲ್ಲಿ ಅವರು ಆರ್‌ಸಿಬಿ ಆಟಗಾರರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿರುವುದು ಕಂಡುಬರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನದಲ್ಲೆಲ್ಲ ‘ಧುರಂಧರ್ 2’ನದ್ದೇ ಚರ್ಚೆ, ಬೇಡಿಕೆ ಏನು ಗೊತ್ತೆ?

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಗಳಾಗಿದ್ದು, ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತದ ಸೈನಿಕನೋರ್ವ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ಮಟ್ಟ ಹಾಕುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೆಲವು ನಿಜ ವ್ಯಕ್ತಿಗಳ ಕತೆಗಳನ್ನು ತೋರಿಸಲಾಗಿದೆ. ಅದರಲ್ಲೂ ಪಾಕಿಸ್ತಾನದ ರಹಾಮನ್ ಡಕೈತ್, ಎಸ್​​ಪಿ ಚೌಧರಿ ಅಸ್ಲಂ, ಇಲಿಯಾಸ್ ಕಶ್ಮೀರಿ ಇನ್ನೂ ಕೆಲವು ಅಕೀತ್ ಅಹ್ಮದ್ ಇನ್ನೂ ಕೆಲವು ನಿಜ ವ್ಯಕ್ತಿಗಳ ಪಾತ್ರಗಳನ್ನು ತೋರಿಸಲಾಗಿದೆ.

ಪಾಕಿಸ್ತಾನದಲ್ಲಿ ‘ಧುರಂಧರ್ 2’ ಸಿನಿಮಾ ಬ್ಯಾನ್ ಆಗಿದೆಯಾದರೂ ಪಾಕಿಸ್ತಾನದ ಜನ ಮುಗಿಬಿದ್ದು ‘ಧುರಂಧರ್ 2’ ಸಿನಿಮಾ ನೋಡುತ್ತಿದ್ದು, ಪ್ರಸ್ತುತ ಪಾಕಿಸ್ತಾನದಲ್ಲಿ ಅತಿ ಹೆಚ್ಚು ಮಾರಾಟ ಆಗುತ್ತಿರುವ ಪೈರಸಿ ಸಿನಿಮಾ ಎಂದರೆ ಅದು ‘ಧುರಂಧರ್’ ಮತ್ತು ‘ಧುರಂಧರ್ 2’ ಆಗಿದೆ. ಸಾಮಾನ್ಯ ಜನರು ಮಾತ್ರವಲ್ಲ, ರಾಜಕಾರಣಿಗಳು ಸಹ ‘ಧುರಂಧರ್’ ಸಿನಿಮಾದ ಪೈರಸಿ ಕಾಪಿಗಳನ್ನು ನೋಡುತ್ತಿದ್ದಾರೆ.

‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾನಲ್ಲಿ ಬಹಳ ಪ್ರಮುಖ ಪಾತ್ರವೊಂದಿದೆ. ಸಿನಿಮಾನಲ್ಲಿ ಪಾತ್ರದ ಹೆಸರು ಜಮೀಲ್ ಜಮಾಲಿ, ಆದರೆ ಈ ಪಾತ್ರ ಪಾಕಿಸ್ತಾನದ ರಾಜಕಾರಣಿ ನಬೀಲ್ ಗೊಬಾಲ್ ಅವರನ್ನು ಆಧರಿಸಿದ ಪಾತ್ರವಾಗಿದೆ. ನಬೀಲ್ ಗೊಬಾಲ್ ಹಲವು ಕಡೆ ‘ಧುರಂಧರ್’ ಸಿನಿಮಾ ಬಗ್ಗೆ ಸಂದರ್ಶನಗಳನ್ನು ನೀಡಿದ್ದು, ‘ನನ್ನ ಪಾತ್ರವನ್ನು ಹಾಸ್ಯ ಪಾತ್ರಧಾರಿಯಂತೆ ತೋರಿಸಲಾಗಿದೆ’ ಎಂದು ಗೋಳು ತೋಡಿಕೊಂಡಿದ್ದಾರೆ. ಜೊತೆಗೆ ತಮ್ಮ ಹಾಗೂ ರಹಮಾನ್ ಡಕೈತ್ ನಡುವಿದ್ದ ಗೆಳೆತನದ ಬಗ್ಗೆಯೂ ಮಾತನಾಡಿದ್ದಾರೆ.

ಇದನ್ನೂ ಓದಿ:‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ನಬೀಲ್ ಗೊಬಾಲ್ ಮಾತ್ರವೇ ಅಲ್ಲದೆ, ಪಾಕಿಸ್ತಾನದ ಇನ್ನೂ ಕೆಲ ರಾಜಕಾರಣಿಗಳು ‘ಧುರಂಧರ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ತಮ್ಮದೇ ಆದ ಅಭಿಪ್ರಾಯಗಳನ್ನು ಸಿನಿಮಾ ಬಗ್ಗೆ ನೀಡಿದ್ದಾರೆ. ಇತ್ತೀಚೆಗಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಪಾಕಿಸ್ತಾನದ ರಾಜಕಾರಣಿ ನಬೀಲ್ ಗೊಬಾಲ್, ‘ನಾವು (ಪಾಕಿಸ್ತಾನ) ಸಹ ಇದೇ ರೀತಿಯಾದ ಸಿನಿಮಾ ಒಂದನ್ನು ಮಾಡಿ, ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಬೇಕು’ ಎಂದು ಹಾಸ್ಯಾಸ್ಪದ ಹೇಳಿಕೆಯನ್ನು ನೀಡಿದ್ದಾರೆ.

‘ಧುರಂಧರ್’ ಮತ್ತು ಈಗ ‘ಧುರಂಧರ್ 2’ ಸಿನಿಮಾದ ಹಾಡುಗಳಂತೂ ಪಾಕಿಸ್ತಾನದಲ್ಲಿ ಭಾರಿ ವೈರಲ್ ಆಗಿವೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಮದುವೆಗಳಲ್ಲಿಯೂ ‘ಧುರಂಧರ್’ ಸಿನಿಮಾದ ಹಾಡುಗಳನ್ನು ಹಾಕಲಾಗುತ್ತಿದೆ. ಪಾಕಿಸ್ತಾನದಲ್ಲಿ ಪೈರಸಿ ಸಿಡಿ ಕ್ಯಾಸೆಟ್ ಮಾರಾಟ ಮಾಡುವವರಿಗಂತೂ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾದಿಂದ ಭಾರಿ ಲಾಭವಾಗಿದೆ. ಅಂಗಡಿಗಳ ಮುಂದೆ ‘ಧುರಂಧರ್’ ಸಿನಿಮಾದ ಪೋಸ್ಟರ್​​ಗಳನ್ನು ಹಾಕಿಕೊಳ್ಳುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಫ್ಲೆಕ್ಸ್​, ಸೋಷಿಯಲ್ ಮೀಡಿಯಾನಲ್ಲಿ ಮಂಡ್ಯ ಎಸ್ಪಿ ಶೋಭಾರಾಣಿ ಹವಾ: ಎಲ್ಲಾ ಗೊಂದಗಳಿಗೆ ತೆರೆ

ಮಂಡ್ಯ, (ಮಾರ್ಚ್ 22): ಯುಗಾದಿ ಹಬ್ಬದ ಶುಭಾಶಯ ಕೋರಿ ಮಂಡ್ಯ ನಗರದಾದ್ಯಂತ ಎಸ್ಪಿ ಶೋಭಾರಾಣಿ  (mandya sp dr shobharani) ಅವರ ಫ್ಲೆಕ್ಸ್‌ಗಳನ್ನು‌ (Ugadi Flex) ಹಾಕಲಾಗಿದ್ದು . ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.  ಇದರ ಬೆನ್ನಲ್ಲೇ ಎಚ್ಚೆತ್ತ ಐಪಿಎಸ್​ ಶೋಭಾರಾಣಿ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು,  ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಫ್ಲೆಕ್ಸ್ ಹಾಕುವುದು ಸರಿಯಲ್ಲ ಎಂದಿದ್ದಾರೆ. ಈ ರೀತಿ ಮಾಡಬೇಡಿ ಎಂದು ತಮ್ಮ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಹಬ್ಬಗಳ ಹಿನ್ನೆಲೆಯಲ್ಲಿ ಎಸ್‌ಪಿ ಶೋಭಾರಾಣಿ ಅವರ ಫೋಟೋ ಬಳಸಿ ಶುಭಾಶಯ ಕೋರುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಈ ಕುರಿತು ನಿನ್ನೆಯಷ್ಟೇ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿ ಸಾರ್ವಜನಿಕರ ಚರ್ಚೆಗೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅವರು ತಕ್ಷಣವೇ ಪ್ರತಿಕ್ರಿಯಿಸಿದ್ದು, ನನ್ನ ಭಾವಚಿತ್ರವನ್ನ ಬಳಸಿಕೊಂಡು ಯಾವುದೇ ಫ್ಲೆಕ್ಸ್‌ ಬ್ಯಾನರ್ ಹಾಗೂ ಪ್ರಚಾರ ಕಾರ್ಯಗಳನ್ನು ಬಳಸಬೇಡಿ. ಕಾನೂನು ಮತ್ತು ವೈಯಕ್ತಿಕ ಗೌರವ ಕಾಪಡೋದು ನನ್ನ ಕರ್ತವ್ಯವಾಗಿದೆ. ದಯವಿಟ್ಟು ನನ್ನ ಮನವಿಯನ್ನ ಗಂಭೀರವಾಗಿ ಪರಿಗಣಿಸಿ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ.

ಮಂಡ್ಯ ರಸ್ತೆ ತುಂಬೆಲ್ಲಾ ಶೋಭರಾಣಿ ಬ್ಯಾನರ್

ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕಾರಣಿಗಳ ನಡುವಿನ ಫ್ಲೆಕ್ಸ್ ವಾರ್ ಹೊಸದೇನಲ್ಲ. ಆದರೆ, ಈಗ ಮಂಡ್ಯದ ಬೀದಿಗಳಲ್ಲಿ ಜನಪ್ರತಿನಿಧಿಗಳಿಗಿಂತಲೂ ಹೆಚ್ಚಾಗಿ ಐಪಿಎಸ್ ಅಧಿಕಾರಿಯೊಬ್ಬರ ಭಾವಚಿತ್ರವಿರುವ ಫ್ಲೆಕ್ಸ್ ಫೋಟೋಗಳು ರಾರಾಜಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ವಿ.ಜೆ. ಶೋಭರಾಣಿ ಅವರ ಈ ‘ಫ್ಲೆಕ್ಸ್ ಪ್ರೀತಿ’ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿತ್ತು.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಂಡ್ಯ ನಗರದ ಪ್ರಮುಖ ವೃತ್ತಗಳು, ಹೆದ್ದಾರಿ ಬದಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಎಸ್ಪಿಯವರಿಗೆ ಹಬ್ಬದ ಶುಭಾಶಯ ಕೋರಿ ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ವಿಶೇಷವೆಂದರೆ, ಈ ಫ್ಲೆಕ್ಸ್‌ಗಳಲ್ಲಿ ಕೇವಲ ಎಸ್ಪಿಯವರ ಫೋಟೋ ಮಾತ್ರವಲ್ಲದೆ, ಮಂಜುನಾಥ್ ಗೌಡ, ಶಿವಾನಂದ್ ಮತ್ತು ಪಾಪಣ್ಣ ಎಂಬುವವರ ಭಾವಚಿತ್ರಗಳೂ ಕಾಣಿಸಿಕೊಂಡಿವೆ. ಈ ಹಿಂದೆ ಶೋಭರಾಣಿ ಅವರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ಬಂದಾಗಲೂ ಸಹ ಇದೇ ರೀತಿ ನಗರದಾದ್ಯಂತ ಫ್ಲೆಕ್ಸ್ ಹಾಕಿ ಸ್ವಾಗತ ಕೋರಲಾಗಿತ್ತು.

ನಾನಾ ರೀತಿಯ ಚರ್ಚೆ

ಶೋಭರಾಣಿಯವರ ಪ್ಲೆಕ್ಸ್, ಬ್ಯಾನರ್​ ಬಗ್ಗೆ ಜಿಲ್ಲೆಯಲ್ಲಿ ಪರ ವಿರೋಧದ ಚರ್ಚೆಗಳು ಆಗುತ್ತಿದ್ದು,
ಮಂಡ್ಯದ ಜನರು ಇಂತಹದ್ದನ್ನು ಈ ಹಿಂದೆ ನೋಡಿಲ್ಲ. ಅಧಿಕಾರಿಗಳು ಜನಸ್ನೇಹಿಯಾಗಿರುವುದು ಸ್ವಾಗತಾರ್ಹ, ಆದರೆ ಫ್ಲೆಕ್ಸ್ ಮೂಲಕ ಅತಿರಂಜಿತವಾಗಿ ಬಿಂಬಿಸಿಕೊಳ್ಳುವುದು ಬೇಕಿತ್ತೇ ಎಂಬುದು ಕೆಲವರ ವಾದ. ಸಾಮಾಜಿಕ ಜಾಲತಾಣಗಳಲ್ಲೂ ಈ ಫೋಟೋಗಳು ವೈರಲ್ ಆಗುತ್ತಿದ್ದು, ಅಧಿಕಾರಿಯೊಬ್ಬರು ಈ ಮಟ್ಟಿಗೆ ಫ್ಲೆಕ್ಸ್‌ಗಳಲ್ಲಿ ಕಾಣಿಸಿಕೊಳ್ಳುವುದು ರಾಜಕೀಯ ಪ್ರಭಾವದ ಮುನ್ಸೂಚನೆಯೇ ಎನ್ನುವ ಮಾತುಗಳು ಸಹ ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಹಾಸನ, ಮಾರ್ಚ್​​ 22: ಗಾಂಜಾ ಅಮಲಿನಲ್ಲಿ ಸ್ನೇಹಿತನನ್ನೇ ಸ್ನೇಹಿತರ ಗ್ಯಾಂಗ್​​ ಕೊಂದು (kill) ಶವ ಸುಟ್ಟು ಹಾಕಿರುವಂತಹ ಘಟನೆ ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಕಾಡಯ್ಯನಕೊಪ್ಪಲು ನಿವಾಸಿ ವರುಣ್(22) ಕೊಲೆಯಾದ ಯುವಕ. ಹಣಕಾಸು ವಿಚಾರದಲ್ಲಿ ಕರೆದೊಯ್ದು ಹಲ್ಲೆ ಮಾಡಲಾಗಿದೆ. ಶಶಾಂಕ್, ಸತೀಶ್, ಕಿರಣ್, ಅಭಿ, ಜೀವನ್, ಚೇತನ್, ಪೃಥ್ವಿಕ್​​, ಗಜ ಅಲಿಯಾಸ್ ಪ್ರಜ್ವಲ್ ವಿರುದ್ಧ ಕೊಲೆ ಆರೋಪದಡಿ ಮೊಕದ್ದಮೆ ದಾಖಲಾಗಿದೆ.

ನಡೆದಿದ್ದೇನು?

ಮಾರ್ಚ್ 10ರಿಂದ ವರುಣ್ ಕಾಣೆಯಾಗಿದ್ದಾನೆ. ಹಣಕಾಸು ವಿಚಾರದಲ್ಲಿ ವರುಣ್, ಸ್ನೇಹಿತ ಲೋಹಿತ್​ನನ್ನು ಸ್ನೇಹಿತರ ಗ್ಯಾಂಗ್ ಅಪಹರಿಸಿದೆ. ಹಂಗರಹಳ್ಳಿಯ ತೋಟದ ಮನೆಯಲ್ಲಿ ಇಬ್ಬರನ್ನು ಕೂಡಿಹಾಕಿದೆ. ಹಲ್ಲೆಗೊಳಗಾಗಿದ್ದ ಲೋಹಿತ್ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದಿದ್ದ. ವರುಣ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಂದಿದ್ದಾರೆ. ನಂತರ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ವರುಣ್ ಶವವನ್ನು ಸಂಪೂರ್ಣ ಸುಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಬರ್ಬರ ಕೊಲೆ; ಹತ್ಯೆಯಾದವನ ಮೇಲಿವೆ 10ಕ್ಕೂ ಹೆಚ್ಚು ಕೇಸ್​ಗಳು!

ಇತ್ತ ಮಾರ್ಚ್ 15ರಂದು ಪುತ್ರ ನಾಪತ್ತೆ ಬಗ್ಗೆ ತಾಯಿ ಕಲಾವತಿ ದೂರು ನೀಡಿದ್ದು, ನಾಪತ್ತೆ ಕೇಸ್ ದಾಖಲಿಸಿಕೊಂಡು ಗಂಡಸಿ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ಪೊಲೀಸರ ತನಿಖೆ ವೇಳೆ ವರುಣ್ ಕೊಲೆಯಾಗಿರುವ ವಿಚಾರ ಇದೀಗ ಬಹಿರಂಗವಾಗಿದೆ.

ಇದನ್ನೂ ಓದಿ: ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?

ಸಿನಿಮೀಯ ರೀತಿಯಲ್ಲಿ ಅಪಹರಿಸಿ ಹಲ್ಲೆ ನಡೆಸಿ ಹತ್ಯೆಗೈದಿದ್ದ ಸ್ನೇಹಿತರ ವಿರುದ್ಧ ಮಾ.19ರಂದು ಹಾಸನ ತಾಲೂಕಿನ ದುದ್ದ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ವರುಣ್ ಅಪಹರಣ ಮತ್ತು ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬರೋಬ್ಬರಿ 21 ಸಿಕ್ಸ್..! 69 ಎಸೆತಗಳಲ್ಲಿ 195 ರನ್ ಚಚ್ಚಿದ ಆರ್​ಸಿಬಿ ಕೈಬಿಟ್ಟ ಸ್ವಸ್ತಿಕ್ ಚಿಕಾರ

ಕೆಲವೇ ತಿಂಗಳ ಹಿಂದೆ ನಡೆದಿದ್ದ ಐಪಿಎಲ್ ಮಿನಿ ಹರಾಜಿನಲ್ಲಿ ಯಾವ ತಂಡಕ್ಕೂ ಬೇಡವಾಗಿದ್ದ ಯುವ ಬ್ಯಾಟ್ಸ್‌ಮನ್ ಇದೀಗ ದೇಶಿ ಲೀಗ್​ನಲ್ಲಿ ಸಿಡಿಲಬ್ಬರದ ಇನ್ನಿಂಗ್ಸ್ ಆಡುವ ಮೂಲಕ ತನ್ನನ್ನು ತಿರಸ್ಕರಿಸಿದ ಎಲ್ಲಾ ಫ್ರಾಂಚೈಸಿಗಳಿಗೆ ಸರಿಯಾದ ತಿರುಗೇಟು ನೀಡಿದ್ದಾನೆ. ಅದರಲ್ಲೂ ತಂಡಕ್ಕೆ ಸೇರಿಸಿಕೊಂಡು ಒಂದೇ ಒಂದು ಪಂದ್ಯದಲ್ಲಿ ಆಡಲು ಅವಕಾಶ ಕೊಡದ ಆರ್​ಸಿಬಿ ತಂಡಕ್ಕೆ ತೀವ್ರ ಮುಖಭಂಗವಾದ್ದಂತ್ತಾಗಿದೆ. ಅಷ್ಟಕ್ಕೂ ನಾವು ಇಷ್ಟೆಲ್ಲ ಮಾತನಾಡುವ ಆಟಗಾರ ಯಾರೆಂದರೆ, ಉತ್ತರ ಪ್ರದೇಶ ಮೂಲದ ಸ್ವಸ್ತಿಕ್ ಚಿಕಾರ.

ಯಾವ ಐಪಿಎಲ್ ತಂಡಕ್ಕೂ ಬೇಡವಾದ ಸ್ವಸ್ತಿಕ್ ಚಿಕಾರ ಪ್ರಸ್ತುತ ಅಯೋಧ್ಯಾ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿದ್ದಾರೆ. ಮಾರ್ಚ್ 22 ರಂದು ನಡೆದ ಪಂದ್ಯದಲ್ಲಿ ಗೋಮತಿ ಥಂಡರ್ ಪರ ಆಡುತ್ತಿರುವ ಸ್ವಸ್ತಿಕ್ ಚಿಕಾರ ಬಿರುಗಾಳಿಯ ಶತಕ ಸಿಡಿಸಿದರು. ಹಿಂಡನ್ ಟೈಟಾನ್ಸ್ ತಂಡದ ವಿರುದ್ಧ ನಡೆದ ಈ ಪಂದ್ಯದಲ್ಲಿ ಗೋಮತಿ ಥಂಡರ್ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ತಂಡದ ಪರ ಬ್ಯಾಟಿಂಗ್‌ ಆರಂಭಿಸಿದ ಸ್ವಸ್ತಿಕ್ ಚಿಕಾರ ಮತ್ತು ಪ್ರಿಯಾಂಶು ಪಾಂಡೆ ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು 307 ರನ್​ಗಳ ದಾಖಲೆಯ ಮೊತ್ತ ಪೇರಿಸಿದರು. ಈ ಇಬ್ಬರೂ ಶತಕದ ಇನ್ನಿಂಗ್ಸ್ ಕೂಡ ಆಡಿದರು.

21 ಸಿಕ್ಸರ್‌, 195 ರನ್ ಬಾರಿಸಿದ ಸ್ವಸ್ತಿಕ್

ಮೊದಲು ಬ್ಯಾಟಿಂಗ್ ಮಾಡಿದ ಗೋಮ್ತಿ ಥಂಡರ್ 20 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 307 ರನ್ ಗಳಿಸಿತು. ತಂಡದ ಪರ ಪ್ರಿಯಾಂಶು ಪಾಂಡೆ 54 ಎಸೆತಗಳಲ್ಲಿ 100 ರನ್ ಗಳಿಸಿ ಅಜೇಯರಾಗಿ ಉಳಿದರೆ, ಸ್ವಸ್ತಿಕ್ ಚಿಕಾರ 69 ಎಸೆತಗಳಲ್ಲಿ 195 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಸ್ವಸ್ತಿಕ್ ಚಿಕಾರ ಅವರ ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 21 ಸಿಕ್ಸರ್‌ಗಳು ಸೇರಿದ್ದವು. ಇನ್ನೊಂದು ಗಮನಿಸಬೇಕಾದ ಸಂಗತಿಯೆಂದರೆ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ ಯಾವುದೇ ಬ್ಯಾಟ್ಸ್‌ಮನ್ 195 ರನ್ ಗಳಿಸಿರಲಿಲ್ಲ. ಆದರೀಗ ಆ ದಾಖಲೆ ಸ್ವಸ್ತಿಕ್ ಪಾಲಾಗಿದೆ.

308 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಹಿಂದನ್ ಟೈಟಾನ್ಸ್ ತಂಡ 180 ರನ್‌ ಕಲೆಹಾಕಲಷ್ಟೇ ಶಕ್ತವಾಗಿ ಪಂದ್ಯವನ್ನು 89 ರನ್‌ಗಳಿಂದ ಸೋತಿತು. ಸರಳವಾಗಿ ಹೇಳುವುದಾದರೆ, ಸ್ವಸ್ತಿಕ್ ಚಿಕಾರ ಕಲೆಹಾಕಿದ 195 ರನ್​ಗಳನ್ನು ಕಲೆಹಾಕುವುದಕ್ಕೂ ಹಿಂದನ್ ಟೈಟಾನ್ಸ್‌ ತಂಡಕ್ಕೆ ಸಾಧ್ಯವಾಗಲಿಲ್ಲ.

ವಾಸ್ತವವಾಗಿ 2025 ರ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಸ್ವಸ್ತಿಕ್ ಚಿಕಾರ ಅವರನ್ನು ಮೂಲ ಬೆಲೆಗೆ ತಂಡಕ್ಕೆ ಸೇರಿಸಿಕೊಂಡಿತ್ತು. ಆದಾಗ್ಯೂ ಅವರಿಗೆ ಕಳೆದ ಆವೃತ್ತಿಯಲ್ಲಿ ಒಂದೇ ಒಂದು ಪಂದ್ಯವನ್ನು ಆಡಲು ಅವಕಾಶ ಸಿಗಲಿಲ್ಲ. ಆದಾಗ್ಯೂ ಸ್ವಸ್ತಿಕ್, ಸದಾ ವಿರಾಟ್ ಕೊಹ್ಲಿ ಹಿಂದೆ ಸುತ್ತುವುದರಿಂದಲೇ ಸಾಕಷ್ಟು ಸುದ್ದಿಯಾಗಿದ್ದರು. ಐಪಿಎಲ್ ಮುಗಿದ ಬಳಿಕ 2026 ರ ಮಿನಿ ಹರಾಜಿಗೂ ಮುನ್ನ ಚಿಕಾರ ಅವರನ್ನು ಆರ್​ಸಿಬಿ ಫ್ರಾಂಚೈಸಿ ಬಿಡುಗಡೆ ಮಾಡಿತ್ತು. ಇತ್ತ ಹರಾಜಿನಲ್ಲೂ ಯಾವ ತಂಡವೂ ಅವರನ್ನು ಖರೀದಿಸಿರಲಿಲ್ಲ.

Source link