Headlines

nagaraj11081993

ಪ್ರವಾಸೋದ್ಯಮಕ್ಕೂ ತಟ್ಟಿದ LPG ಅಭಾವ: ಕರಾವಳಿ ಖಾದ್ಯಗಳಿಗೆ ಬ್ರೇಕ್; ಪ್ರವಾಸಿಗರಿಗೆ ನಿರಾಶೆ​

ಕಾರವಾರ, ಮಾರ್ಚ್​ 22: ಎಲ್​ಪಿಜಿ ಗ್ಯಾಸ ಸಿಲಿಂಡರ್ (gas cylinder) ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇದರ ಎಫೆಕ್ಟ್ ಬೇರೆ ಉದ್ಯಮಗಳ ಮೇಲೂ ಬೀರಿದೆ. ಪ್ರವಾಸಿ ತಾಣಗಳಲ್ಲಿ ಸಮರ್ಪಕ ಎಲ್.ಪಿ.ಜಿ ಗ್ಯಾಸ್ ಸಿಗದೆ ಎಲ್ಲಾ ಬಗೆಯ ಅಡುಗೆ ಮಾಡಲಾಗುತ್ತಿಲ್ಲ. ಹೀಗಾಗಿ ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪ್ರವಾಸಿಗರಿಗೆ ಕರಾವಳಿಯ ಖಾದ್ಯ ಸವಿಯಲು ಸಿಗದೇ ನಿರಾಸೆ ಆಗಿದ್ದಾರೆ. ಇನ್ನೂ ಕೆಲವರು  ಬುಕ್ಕಿಂಗ್ ಮಾಡಿರುವುದನ್ನ ಕ್ಯಾನ್ಸಲ್ ಮಾಡಿಕೊಳ್ಳುತ್ತಿದ್ದಾರೆ. ಇರಾನ್​​-ಇಸ್ರೇಲ್ ಯುದ್ಧ ಆರಂಭವಾಗಿ ಇಂದಿಗೆ 23 ದಿನ….

Read More

Ayush Department Recruitment 2026: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ನೇರ ಸಂದರ್ಶನ

ಬೆಂಗಳೂರು: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯು (AYUSH Department Karnataka) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಖಾಲಿ ಇರುವ ಖಾತೆ ಸಹಾಯಕ (Accounts Assistant) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಾಣಿಜ್ಯ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಭ್ಯರ್ಥಿಗಳು ಯಾವುದೇ ಆನ್‌ಲೈನ್ ಅರ್ಜಿ ಸಲ್ಲಿಸುವ ಅಗತ್ಯವಿಲ್ಲದೆ ಮಾರ್ಚ್ 25 ರಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹುದ್ದೆಯ ವಿವರ ಮತ್ತು ವೇತನ ಶ್ರೇಣಿ: ಪ್ರಸ್ತುತ ಆಯುಷ್ ನಿರ್ದೇಶನಾಲಯದಲ್ಲಿ ಒಂದು ಖಾತೆ…

Read More

IND vs IRE: ಭಾರತ- ಐರ್ಲೆಂಡ್ ನಡುವೆ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

2026 ರ ಐಪಿಎಲ್ (IPL 2026) ಪ್ರಾರಂಭವಾಗುವ ಮೊದಲೇ ಬಿಸಿಸಿಐ (BCCI), ಟೀಂ ಇಂಡಿಯಾದ ಮುಂದಿನ ವೇಳಾಪಟ್ಟಿಯ ಬಗ್ಗೆ ಮಹತ್ವದ ಮಾಹಿತಿ ನೀಡಿದೆ. ಎರಡು ತಿಂಗಳ ಕಾಲ ಐಪಿಎಲ್​ನಲ್ಲಿ ಬ್ಯುಸಿಯಾಗಲಿರುವ ಟೀಂ ಇಂಡಿಯಾ ಆ ಬಳಿಕ ಒಂದರ ಹಿಂದೆ ಒಂದರಂತೆ ಸರಣಿಗಳನ್ನು ಆಡಲಿದೆ. ಮೊದಲಿಗೆ ಅಫ್ಘಾನಿಸ್ತಾನವನ್ನು ಎದುರಿಸಲಿರುವ ಭಾರತ ತಂಡ ಆ ಬಳಿಕ ವಿದೇಶಿ ಪ್ರವಾಸ ಮಾಡಲಿದೆ. ಆ ವಿದೇಶಿ ಪ್ರವಾಸಗಳಲ್ಲಿ ಮೊದಲನೆಯದ್ದಾಗಿ ಐರ್ಲೆಂಡ್ (India vs Ireland) ದೇಶಕ್ಕೆ ಕಾಲಿಡಲಿದೆ. ಉಭಯ ತಂಡಗಳ ನಡುವೆ ಎರಡು…

Read More

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದು‌ ಕೊಲೆಗೆ ಯತ್ನಿಸಿದ ಪತ್ನಿ: ಆಗಿದ್ದೇನು?

ಚಿಕ್ಕಬಳ್ಳಾಪುರ, (ಮಾರ್ಚ್ 22): ಜಗಳದ ಬಳಿಕ ಮಲಗಿದ್ದ ಗಂಡನ (Husband) ಮರ್ಮಾಂಗಕ್ಕೆ ಹೆಂಡತಿ (Wife) ಒದ್ದು ಕೊಲೆಗೆ ಯತ್ನಿಸಿರುವ ಘಟನೆ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ. ಪತಿ ಮುನೀಂದ್ರ ಹಾಗೂ ವರ್ಷಾ ನಡುವೆ ಗಲಾಟೆಯಾಗಿದ್ದು, ಬಳಿಕ ಮುನೀಂದ್ರ ಮಲಗಿದ್ದ ವೇಳೆ ಪತ್ನಿ ವರ್ಷಾ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ.  ತನ್ನ ಗಂಡನಿಗೆ ಡೈವೋರ್ಸ್ ಕೊಡುವಂತೆ ಪೀಡಿಸಿದ್ದಾಳೆ. ಆದ್ರೆ,  ಡೈವೋರ್ಸ್ ಕೊಡಲು ಒಪ್ಪದ ಗಂಡ ಮನೆಯಲ್ಲಿ ಮಲಗಿದ್ದಾಗ, ಆತನ ಮರ್ಮಾಂಗಕ್ಕೆ ಒದ್ದು…

Read More

ಕುಸಿದು ಬಿದ್ದ ಇರಾನ್ ಕರೆನ್ಸಿ; ಒಂದು ಕೋಟಿ ರಿಯಾಲ್ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ; ಇದರ ಮೌಲ್ಯ ಕೆಲವೇ ಡಾಲರ್ ಮಾತ್ರ

ನವದೆಹಲಿ, ಮಾರ್ಚ್ 22: ಯುದ್ಧದಿಂದ ಜರ್ಝರಿತವಾಗಿರುವ ಇರಾನ್ ಇದೀಗ ಆರ್ಥಿಕವಾಗಿ ದುಸ್ತರ ಪರಿಸ್ಥಿತಿಗೆ ಸಿಲುಕಿದೆ. ಅಮೆರಿಕದ ಆರ್ಥಿಕ ದಿಗ್ಬಂಧನದ ಫಲವಾಗಿ ಇರಾನ್​ನ ರಿಯಾಲ್ ಕರೆನ್ಸಿಯ ಮೌಲ್ಯ (Irani Rial notes) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯವಾಗಿ ಕುಸಿದಿದೆ. ಈ ಮಧ್ಯೆ ಇರಾನ್ ದೇಶವು 10 ಮಿಲಿಯನ್ ರಿಯಾಲ್ ಬ್ಯಾಂಕ್ ನೋಟೊಂದನ್ನು ಬಿಡುಗಡೆ ಮಾಡಿದೆ. 10 ಮಿಲಿಯನ್ ಎಂದರೆ ಒಂದು ಕೋಟಿ ರಿಯಾಲ್ ಮುಖಬೆಲೆಯ ನೋಟು ಇದು. ಈ ಒಂದು ಕೋಟಿ ರಿಯಾಲ್ ನೋಟಿನ ಮೌಲ್ಯ ಕೇವಲ 7 ಡಾಲರ್…

Read More

IPL 2026: ತನ್ನ ಬಗ್ಗೆ ಹರಡಿದ್ದ ವದಂತಿಯ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ

ಮಡದಿ ಮಕ್ಕಳೊಂದಿಗೆ ಲಂಡನ್​ನಲ್ಲಿ ನೆಲೆಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಯಾವುದಾದರೂ ಸರಣಿಗಳಿದ್ದಾಗ ಮಾತ್ರ ಭಾರತಕ್ಕೆ ಬರುತ್ತಾರೆ. ಉಳಿದಂತೆ ಕೊಹ್ಲಿ ಲಂಡನ್​ನಲ್ಲಿಯೇ ಇರುತ್ತಾರೆ. ಇದೀಗ 2026 ರ ಐಪಿಎಲ್ ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಇದರ ಸಲುವಾಗಿ ವಿರಾಟ್ ಕೊಹ್ಲಿ ತಮ್ಮ ಮಡದಿ ಅನುಷ್ಕಾ ಶರ್ಮಾ ಅವರೊಂದಿಗೆ ಕೆಲವು ದಿನಗಳ ಹಿಂದೆ ಭಾರತಕ್ಕೆ ಬಂದಿಳಿದಿದ್ದರು. ಆ ಬಳಿಕ ಆರ್​ಸಿಬಿ ತಂಡವನ್ನು ಕೂಡಿಕೊಂಡಿರುವ ಕೊಹ್ಲಿ, ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದೆಲ್ಲದರ ನಡುವೆ ವಿರಾಟ್ ಕೊಹ್ಲಿಗೆ ಸಂಬಂಧಿಸಿದ ವದಂತಿಯೊಂದು ಸೋಶಿಯಲ್…

Read More

ಪಾಕಿಸ್ತಾನದಲ್ಲೆಲ್ಲ ‘ಧುರಂಧರ್ 2’ನದ್ದೇ ಚರ್ಚೆ, ಬೇಡಿಕೆ ಏನು ಗೊತ್ತೆ?

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಗಳಾಗಿದ್ದು, ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತದ ಸೈನಿಕನೋರ್ವ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ಮಟ್ಟ ಹಾಕುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕೆಲವು ನಿಜ ವ್ಯಕ್ತಿಗಳ ಕತೆಗಳನ್ನು ತೋರಿಸಲಾಗಿದೆ. ಅದರಲ್ಲೂ ಪಾಕಿಸ್ತಾನದ ರಹಾಮನ್ ಡಕೈತ್, ಎಸ್​​ಪಿ ಚೌಧರಿ ಅಸ್ಲಂ, ಇಲಿಯಾಸ್ ಕಶ್ಮೀರಿ ಇನ್ನೂ ಕೆಲವು ಅಕೀತ್ ಅಹ್ಮದ್ ಇನ್ನೂ ಕೆಲವು ನಿಜ ವ್ಯಕ್ತಿಗಳ ಪಾತ್ರಗಳನ್ನು ತೋರಿಸಲಾಗಿದೆ. ಪಾಕಿಸ್ತಾನದಲ್ಲಿ…

Read More

ಫ್ಲೆಕ್ಸ್​, ಸೋಷಿಯಲ್ ಮೀಡಿಯಾನಲ್ಲಿ ಮಂಡ್ಯ ಎಸ್ಪಿ ಶೋಭಾರಾಣಿ ಹವಾ: ಎಲ್ಲಾ ಗೊಂದಗಳಿಗೆ ತೆರೆ

ಮಂಡ್ಯ, (ಮಾರ್ಚ್ 22): ಯುಗಾದಿ ಹಬ್ಬದ ಶುಭಾಶಯ ಕೋರಿ ಮಂಡ್ಯ ನಗರದಾದ್ಯಂತ ಎಸ್ಪಿ ಶೋಭಾರಾಣಿ  (mandya sp dr shobharani) ಅವರ ಫ್ಲೆಕ್ಸ್‌ಗಳನ್ನು‌ (Ugadi Flex) ಹಾಕಲಾಗಿದ್ದು . ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.  ಇದರ ಬೆನ್ನಲ್ಲೇ ಎಚ್ಚೆತ್ತ ಐಪಿಎಸ್​ ಶೋಭಾರಾಣಿ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು,  ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಫ್ಲೆಕ್ಸ್ ಹಾಕುವುದು ಸರಿಯಲ್ಲ ಎಂದಿದ್ದಾರೆ. ಈ ರೀತಿ ಮಾಡಬೇಡಿ ಎಂದು ತಮ್ಮ ಅಭಿಮಾನಿಗಳಲ್ಲಿ ವಿಶೇಷ…

Read More

ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಹಾಸನ, ಮಾರ್ಚ್​​ 22: ಗಾಂಜಾ ಅಮಲಿನಲ್ಲಿ ಸ್ನೇಹಿತನನ್ನೇ ಸ್ನೇಹಿತರ ಗ್ಯಾಂಗ್​​ ಕೊಂದು (kill) ಶವ ಸುಟ್ಟು ಹಾಕಿರುವಂತಹ ಘಟನೆ ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಕಾಡಯ್ಯನಕೊಪ್ಪಲು ನಿವಾಸಿ ವರುಣ್(22) ಕೊಲೆಯಾದ ಯುವಕ. ಹಣಕಾಸು ವಿಚಾರದಲ್ಲಿ ಕರೆದೊಯ್ದು ಹಲ್ಲೆ ಮಾಡಲಾಗಿದೆ. ಶಶಾಂಕ್, ಸತೀಶ್, ಕಿರಣ್, ಅಭಿ, ಜೀವನ್, ಚೇತನ್, ಪೃಥ್ವಿಕ್​​, ಗಜ ಅಲಿಯಾಸ್ ಪ್ರಜ್ವಲ್ ವಿರುದ್ಧ ಕೊಲೆ ಆರೋಪದಡಿ ಮೊಕದ್ದಮೆ ದಾಖಲಾಗಿದೆ. ನಡೆದಿದ್ದೇನು? ಮಾರ್ಚ್ 10ರಿಂದ ವರುಣ್ ಕಾಣೆಯಾಗಿದ್ದಾನೆ. ಹಣಕಾಸು…

Read More

ಬರೋಬ್ಬರಿ 21 ಸಿಕ್ಸ್..! 69 ಎಸೆತಗಳಲ್ಲಿ 195 ರನ್ ಚಚ್ಚಿದ ಆರ್​ಸಿಬಿ ಕೈಬಿಟ್ಟ ಸ್ವಸ್ತಿಕ್ ಚಿಕಾರ

ಕೆಲವೇ ತಿಂಗಳ ಹಿಂದೆ ನಡೆದಿದ್ದ ಐಪಿಎಲ್ ಮಿನಿ ಹರಾಜಿನಲ್ಲಿ ಯಾವ ತಂಡಕ್ಕೂ ಬೇಡವಾಗಿದ್ದ ಯುವ ಬ್ಯಾಟ್ಸ್‌ಮನ್ ಇದೀಗ ದೇಶಿ ಲೀಗ್​ನಲ್ಲಿ ಸಿಡಿಲಬ್ಬರದ ಇನ್ನಿಂಗ್ಸ್ ಆಡುವ ಮೂಲಕ ತನ್ನನ್ನು ತಿರಸ್ಕರಿಸಿದ ಎಲ್ಲಾ ಫ್ರಾಂಚೈಸಿಗಳಿಗೆ ಸರಿಯಾದ ತಿರುಗೇಟು ನೀಡಿದ್ದಾನೆ. ಅದರಲ್ಲೂ ತಂಡಕ್ಕೆ ಸೇರಿಸಿಕೊಂಡು ಒಂದೇ ಒಂದು ಪಂದ್ಯದಲ್ಲಿ ಆಡಲು ಅವಕಾಶ ಕೊಡದ ಆರ್​ಸಿಬಿ ತಂಡಕ್ಕೆ ತೀವ್ರ ಮುಖಭಂಗವಾದ್ದಂತ್ತಾಗಿದೆ. ಅಷ್ಟಕ್ಕೂ ನಾವು ಇಷ್ಟೆಲ್ಲ ಮಾತನಾಡುವ ಆಟಗಾರ ಯಾರೆಂದರೆ, ಉತ್ತರ ಪ್ರದೇಶ ಮೂಲದ ಸ್ವಸ್ತಿಕ್ ಚಿಕಾರ. ಯಾವ ಐಪಿಎಲ್ ತಂಡಕ್ಕೂ ಬೇಡವಾದ ಸ್ವಸ್ತಿಕ್…

Read More