ಅನಿಷ್ಟ ಪದ್ಧತಿ ಜೀವಂತ: ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ಡಿ ದರ್ಜೆ ನೌಕರ ಸೇರಿ ಮರ್ತೋವನ ಮೇಲೆ ಹಲ್ಲೆ
ಯಾದಗಿರಿ, ಮಾರ್ಚ್ 22: ಎಐ ತಂತ್ರಜ್ಞಾನದ ಜಮಾನಾದಲ್ಲಿ ಸಮಾಜದಲ್ಲಿ ಇನ್ನೂ ಅನಿಷ್ಟ ಪದ್ದತಿ ಜೀವಂತವಾಗಿದೆ. ಇತ್ತೀಚೆಗೆ ಯಾದಗಿರಿ ಜಿಲ್ಲೆಯಲ್ಲಿ ಸ್ವಸಮಾಜದವರೇ ತಮ್ಮದೇ ಸಮಾಜದ 12 ಕುಟುಂಬಗಳನ್ನ ಬಹಿಷ್ಕಾರ ಹಾಕಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದೆ. ದೇವಸ್ಥಾನದ ಕಟ್ಟೆಯ ಮೇಲೆ ಕೂತಿದ್ದಕ್ಕೆ ಇಬ್ಬರು ದಲಿತ (Dalits) ಯುವಕರ ಮೇಲೆ ಸವರ್ಣೀಯರ ಗುಂಪಿನಿಂದ ಹಲ್ಲೆ ಮಾಡಿರುವಂತಹ ಘಟನೆ ಗುರುಮಠಕಲ್ ತಾಲೂಕಿನ ಯಂಪಾಡ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಅನೀಲ್ ಕುಮಾರ್ ಹಾಗೂ ಸಿದ್ದಲಿಂಗಪ್ಪ ಎನ್ನುವವರು ಸಂಬಂಧಿಕರ ಮಗನ ಜವಳ ಕಾರ್ಯಕ್ರಮಕ್ಕೆ ತೆರಳಿದ್ದರು….