All posts by nagaraj11081993

Hindu Tradition: ಭಾನುವಾರ ತಪ್ಪದೇ ಈ ಕೆಲಸ ಮಾಡಿ; ಪ್ರಯೋಜನ ಸಾಕಷ್ಟಿವೆ

Hindu Tradition: ಭಾನುವಾರ ತಪ್ಪದೇ ಈ ಕೆಲಸ ಮಾಡಿ; ಪ್ರಯೋಜನ ಸಾಕಷ್ಟಿವೆ

ಹಿಂದೂ ಸಂಪ್ರದಾಯದ ಪ್ರಕಾರ, ವಾರದ ಮೊದಲ ದಿನವಾದ ಭಾನುವಾರವನ್ನು ರವಿವಾರ ಅಥವಾ ಭಾನುವಾರ ಎಂದು ಕರೆಯಲಾಗುತ್ತದೆ. ‘ರವಿ’ ಮತ್ತು ‘ಭಾನು’ ಎಂಬ ಪದಗಳು ಸೂರ್ಯನಿಗೆ ಸಮಾನಾರ್ಥಕಗಳಾಗಿವೆ. ಪ್ರಾಚೀನ ಕಾಲದಲ್ಲಿ ನಮ್ಮ ಋಷಿಮುನಿಗಳು ಆಕಾಶದಲ್ಲಿ ಗ್ರಹಗಳ ಚಲನೆಯನ್ನು ಆಧರಿಸಿ ಸಮಯವನ್ನು ಲೆಕ್ಕಹಾಕುತ್ತಿದ್ದರು. ಋಗ್ವೇದದಲ್ಲಿ “ಸೂರ್ಯ ಆತ್ಮ ಜಗತಸ್ಥಶ್ಚ” ಎಂದು ವರ್ಣಿಸಲಾಗಿದೆ, ಅಂದರೆ ಈ ಸೃಷ್ಟಿಯಲ್ಲಿರುವ ಚಲಿಸುವ ಮತ್ತು ಚಲಿಸದ ಸಮಸ್ತ ಜೀವಿಗಳ ಆತ್ಮವೇ ಸೂರ್ಯ. ಸೂರ್ಯನಿಲ್ಲದೆ ಈ ಭೂಮಿಯ ಮೇಲೆ ಜೀವಸಂಕುಲ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ, ಆದ್ದರಿಂದಲೇ ಸೂರ್ಯನನ್ನು ನಾವು ಕಣ್ಣಿಗೆ ಕಾಣುವ ‘ಪ್ರತ್ಯಕ್ಷ ದೈವ’ ಎಂದು ಆರಾಧಿಸುತ್ತೇವೆ.

ಭಾನುವಾರವು ಕೇವಲ ವಿಶ್ರಾಂತಿ ಪಡೆಯುವ ರಜಾದಿನವಲ್ಲ, ಬದಲಾಗಿ ಇದು ದೇಹವನ್ನು ಶುದ್ಧೀಕರಿಸುವ ಉಪವಾಸದ ದಿನವಾಗಿದೆ. ನಮ್ಮ ದೇಹದಲ್ಲಿ ಆಹಾರವನ್ನು ಜೀರ್ಣಿಸಿಕೊಳ್ಳುವ ಶಕ್ತಿಯನ್ನು ‘ಜಠರಾಗ್ನಿ’ ಎಂದು ಕರೆಯಲಾಗುತ್ತದೆ ಮತ್ತು ಈ ಅಗ್ನಿಯು ಆಕಾಶದಲ್ಲಿರುವ ಸೂರ್ಯನ ಪ್ರಖರತೆಯೊಂದಿಗೆ ನೇರ ಸಂಬಂಧ ಹೊಂದಿದೆ. ವಾರವಿಡೀ ಸತತವಾಗಿ ಕೆಲಸ ಮಾಡುವ ನಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಂದು ದಿನದ ವಿಶ್ರಾಂತಿ ಅತ್ಯಗತ್ಯ. ಭಾನುವಾರದಂದು ಲೌಕಿಕ ಕೆಲಸಗಳನ್ನು ಬದಿಗಿಟ್ಟು ಉಪವಾಸ ಅಥವಾ ಮಿತಾಹಾರದ ಮೂಲಕ ದೇಹಕ್ಕೆ ವಿಶ್ರಾಂತಿ ನೀಡಿದಾಗ, ಸೂರ್ಯನ ಶಕ್ತಿಯು ನೇರವಾಗಿ ನಮ್ಮ ದೇಹವನ್ನು ಪ್ರವೇಶಿಸುತ್ತದೆ. ಇದು ವಾರವಿಡೀ ಹಾನಿಗೊಳಗಾದ ಜೀವಕೋಶಗಳನ್ನು (Cells) ಪುನಶ್ಚೇತನಗೊಳಿಸಲು ಮತ್ತು ದೇಹದ ಆಂತರಿಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಈ ಪವಿತ್ರ ದಿನದಂದು ಕೆಲವು ವಿಶಿಷ್ಟ ಅಭ್ಯಾಸಗಳನ್ನು ಅನುಸರಿಸುವುದು ಬಹಳ ಪ್ರಯೋಜನಕಾರಿ. ಮೊದಲನೆಯದಾಗಿ, ಬ್ರಾಹ್ಮಿ ಮುಹೂರ್ತದಲ್ಲಿ ಅಂದರೆ ಸೂರ್ಯೋದಯಕ್ಕೂ ಮುನ್ನ ಎಚ್ಚರಗೊಳ್ಳುವುದು ಅತ್ಯುತ್ತಮ. ಈ ಸಮಯದಲ್ಲಿ ಗಾಳಿಯು ಅತ್ಯಂತ ತಾಜಾ ಮತ್ತು ಪ್ರಾಣಶಕ್ತಿಯಿಂದ ಕೂಡಿರುತ್ತದೆ. ಸ್ನಾನದ ನಂತರ, ಉದಯಿಸುತ್ತಿರುವ ಸೂರ್ಯನಿಗೆ ತಾಮ್ರದ ಪಾತ್ರೆಯಲ್ಲಿ ನೀರನ್ನು ಅರ್ಪಿಸುವುದು (ಸೂರ್ಯ ಅರ್ಘ್ಯ) ಶ್ರೇಷ್ಠವಾದುದು. ಬೀಳುವ ನೀರಿನ ಧಾರೆಗಳ ಮೂಲಕ ಸೂರ್ಯನನ್ನು ನೋಡುವುದರಿಂದ ಕಣ್ಣಿನ ದೃಷ್ಟಿ ಸುಧಾರಿಸುವುದಲ್ಲದೆ, ಮನಸ್ಸಿನಲ್ಲಡಗಿರುವ ನಕಾರಾತ್ಮಕ ಆಲೋಚನೆಗಳು ದೂರವಾಗುತ್ತವೆ. ಇದರೊಂದಿಗೆ ಎಳೆಯ ಬಿಸಿಲಿನಲ್ಲಿ ಸೂರ್ಯ ನಮಸ್ಕಾರ ಮಾಡುವುದರಿಂದ ಬೆನ್ನುಮೂಳೆಯು ಬಲಗೊಳ್ಳುತ್ತದೆ ಮತ್ತು ದೇಹದಲ್ಲಿನ ಆಲಸ್ಯವು ದೂರವಾಗಿ ಚೈತನ್ಯ ಮೂಡುತ್ತದೆ.

ಆಹಾರ ಮತ್ತು ಆಧ್ಯಾತ್ಮಿಕ ಚಿಂತನೆಯ ವಿಷಯಕ್ಕೆ ಬಂದರೆ, ಭಾನುವಾರ ಸಾತ್ವಿಕ ಜೀವನಕ್ಕೆ ಒತ್ತು ನೀಡಬೇಕು. ಸಾಧ್ಯವಾದರೆ ಒಂದು ಹೊತ್ತಿನ ಊಟವನ್ನು ಬಿಟ್ಟು ಹಣ್ಣುಗಳನ್ನು ಮಾತ್ರ ಸೇವಿಸಿ ಉಪವಾಸ ಮಾಡುವುದು ಉತ್ತಮ. ಉಪವಾಸ ಸಾಧ್ಯವಾಗದಿದ್ದರೆ ಮಾಂಸಾಹಾರವನ್ನು ತ್ಯಜಿಸಿ, ಕಡಿಮೆ ಉಪ್ಪಿನಿಂದ ಕೂಡಿದ ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಸೇವಿಸಬೇಕು. ಇದರ ಜೊತೆಗೆ ಶಾಂತವಾಗಿ ಕುಳಿತು ಹತ್ತು ನಿಮಿಷಗಳ ಕಾಲ ‘ಗಾಯತ್ರಿ ಮಂತ್ರ’ ಪಠಿಸುವುದು ಅಥವಾ ‘ಆದಿತ್ಯ ಹೃದಯ’ ಸ್ತೋತ್ರವನ್ನು ಕೇಳಿಸಿಕೊಳ್ಳುವುದು ಮೆದುಳಿನ ನರಗಳನ್ನು ಉತ್ತೇಜಿಸುತ್ತದೆ. ಈ ಮಂತ್ರಗಳ ಶಬ್ದ ತರಂಗಗಳು ಮನಸ್ಸಿಗೆ ಅತೀವ ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು ನೀಡುತ್ತವೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವವರಿಗೆ ಸೂರ್ಯಾರಾಧನೆಯು ವರದಾನವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯನು ಏಕಾಗ್ರತೆ, ದೃಢ ಸಂಕಲ್ಪ ಮತ್ತು ನಾಯಕತ್ವದ ಗುಣಗಳನ್ನು ಪ್ರತಿನಿಧಿಸುತ್ತಾನೆ. ಭಾನುವಾರ ಸೂರ್ಯನನ್ನು ಪೂಜಿಸುವುದರಿಂದ ಬುದ್ಧಿಶಕ್ತಿ ತೀಕ್ಷ್ಣಗೊಳ್ಳುತ್ತದೆ, ಮನಸ್ಸಿನ ಗೊಂದಲಗಳು ನಿವಾರಣೆಯಾಗಿ ಅಧ್ಯಯನದ ಮೇಲೆ ಅಸಾಧಾರಣ ಗಮನ ಹರಿಸಲು ಸಾಧ್ಯವಾಗುತ್ತದೆ. ವೈಜ್ಞಾನಿಕವಾಗಿಯೂ ಬೆಳಗಿನ ಸೂರ್ಯನ ಕಿರಣಗಳಿಗೆ ದೇಹವನ್ನು ಒಡ್ಡುವುದರಿಂದ ವಿಟಮಿನ್ ಡಿ (Vitamin D) ಲಭಿಸಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಹೀಗೆ ಭಾನುವಾರವನ್ನು ಶಿಸ್ತುಬದ್ಧವಾಗಿ ಕಳೆಯುವುದರಿಂದ ಜೀವನದಲ್ಲಿ ಅದ್ಭುತ ಬದಲಾವಣೆಗಳನ್ನು ಕಾಣಬಹುದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಪ್ರೊಪಗಾಂಡ ಸಿನಿಮಾ ಎಂದವರಿಗೆ ತಿರುಗೇಟು ನೀಡಿದ ಅನುಪಮ್ ಖೇರ್

ಆದಿತ್ಯ ಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ (Dhurandhar 2) ಚಿತ್ರಕ್ಕೆ ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಫಿದಾ ಆಗಿದ್ದಾರೆ. ಚಿತ್ರದ ಬಗ್ಗೆ ಸುದೀರ್ಘ ವಿಡಿಯೋ ಹಂಚಿಕೊಂಡಿರುವ ಅವರು, ‘ಇದೊಂದು ಕೇವಲ ಸಿನಿಮಾವಲ್ಲ, ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವಂತಹ ಅನುಭವ’ ಎಂದು ಬಣ್ಣಿಸಿದ್ದಾರೆ. ಮಾರ್ಚ್ 21ರಂದು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡ ಅನುಪಮ್ ಖೇರ್ (Anupam Kher), ಸಿನಿಮಾ ನೋಡಿದ ತಕ್ಷಣ ನಿರ್ದೇಶಕ ಆದಿತ್ಯ ಧರ್ ಅವರಿಗೆ ಫೋನ್ ಮಾಡಿ ಅಭಿನಂದಿಸಿರುವುದಾಗಿ ತಿಳಿಸಿದ್ದಾರೆ.

‘ಕೆಲವೊಮ್ಮೆ ಪದಗಳು ಸಾಲುವುದಿಲ್ಲ. ಸಿನಿಮಾ ಮುಗಿಸಿ ಹೊರಬಂದಾಗ ನಿಮ್ಮೊಳಗೆ ಒಂದು ಮೌನವಿರುತ್ತದೆ, ಅದು ಎಲ್ಲವನ್ನೂ ಹೇಳುತ್ತದೆ. ಧುರಂಧರ್ ಅಂತಹದ್ದೇ ಒಂದು ಅನುಭವ. ಇದು ನಿಮ್ಮ ಹೃದಯವನ್ನು ತಟ್ಟುತ್ತದೆ’ ಎಂದು ಬರೆದುಕೊಂಡಿದ್ದಾರೆ. ಚಿತ್ರದ ವಿರುದ್ಧ ಕೇಳಿಬರುತ್ತಿರುವ ಪ್ರೊಪಗಾಂಡ ಅಥವಾ ಅತಿರೇಕದ ದೇಶಭಕ್ತಿ ಎಂಬ ಟೀಕೆಗಳ ಬಗ್ಗೆ ಅನುಪಮ್ ಖೇರ್ ಕಿಡಿಕಾರಿದ್ದಾರೆ.

‘ಈ ಚಿತ್ರವನ್ನು ಪ್ರೊಪಗಾಂಡ ಎಂದು ಕರೆಯುವವರ ಬಗ್ಗೆ ನನಗೆ ಕನಿಕರವೆನಿಸುತ್ತದೆ. ಅವರಿಗೆ ನಾಚಿಕೆಯಾಗಬೇಕು. ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೂ ಹೀಗೆಯೇ ಹೇಳಿದ್ದರು. ನಿಮಗೆ ಇಂತಹ ಚಿತ್ರಗಳನ್ನು ಸಹಿಸಲು ಸಾಧ್ಯವಾಗದಿದ್ದರೆ, ನೀವೇ ಹಣ ಹೂಡಿ, ಬರಹಗಾರರನ್ನು ಇಟ್ಟುಕೊಂಡು ಸಿನಿಮಾ ಮಾಡಿ’ ಎಂದು ಅನುಪಮ್ ಖೇರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಆಧುನಿಕ ಭಾರತದ ವ್ಯವಸ್ಥೆ ಮತ್ತು ಏಜೆನ್ಸಿಗಳು ಎಷ್ಟು ಸಮರ್ಥವಾಗಿವೆ ಎಂಬುದನ್ನು ಈ ಸಿನಿಮಾ ತೋರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಟನೆಯ ಶಾಲೆಯನ್ನು ನಡೆಸುತ್ತಿರುವ ಅನುಪಮ್ ಖೇರ್ ಅವರು ‘ಧುರಂಧರ್ 2’ ಸಿನಿಮಾದಲ್ಲಿನ ರಣವೀರ್ ಸಿಂಗ್ ಅಭಿನಯವನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ. ‘ನಾನೊಬ್ಬ ನಟನಾ ಶಿಕ್ಷಕ. ಒಬ್ಬ ನಟನಿಗೆ ನಾನು ಸಲಾಂ ಹೊಡೆಯಬೇಕೆಂದರೆ ಅದಕ್ಕೆ ಬಹಳ ಸಮಯ ಮತ್ತು ಮನವರಿಕೆ ಬೇಕು. ಆದರೆ ರಣವೀರ್, ನಿಮ್ಮ ಬಾಡಿ ಲಾಂಗ್ವೇಜ್, ನಿಮ್ಮ ಒಳಗಿನ ಸಿಟ್ಟು ಮತ್ತು ನೋವು ಅದ್ಭುತವಾಗಿ ಮೂಡಿಬಂದಿದೆ. ಕೆಲವು ದೃಶ್ಯಗಳಲ್ಲಿ ನಿಮ್ಮ ಕಣ್ಣಲ್ಲಿನ ನೋವು ನೋಡಿ ನನ್ನ ಹೃದಯ ಭಾರವಾಯಿತು’ ಎಂದು ಅನುಪಮ್ ಖೇರ್ ಹೊಗಳಿದ್ದಾರೆ.

ಇದನ್ನೂ ಓದಿ: ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

‘ಧುರಂಧರ್ 2’ ಸಿನಿಮಾಗೆ ನೆಗೆಟಿವ್ ವಿಮರ್ಶೆಗಳು ಕೂಡ ವ್ಯಕ್ತವಾಗುತ್ತಿದೆ. ಇದು ಬಿಪಿಜೆ ಪಕ್ಷದ ತಪ್ಪುಗಳನ್ನು ಸಮರ್ಥಿಸುವ ಸಿನಿಮಾ ಎಂದು ಅನೇಕರು ಟೀಕೆ ಮಾಡಿದ್ದಾರೆ. ಸಂಜಯ್ ದತ್, ಆರ್. ಮಾಧವನ್, ಅರ್ಜುನ್ ರಾಮ್​ಪಾಲ್, ರಣವೀರ್ ಸಿಂಗ್, ಸಾರಾ ಅರ್ಜುನ್, ರಾಕೇಶ್ ಬೇಡಿ ಮುಂತಾದವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ : ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ ರಿಕ್ಕಿ?

ಬೆಂಗಳೂರು, ಮಾರ್ಚ್​​ 22: ನಗರದಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ತನಿಖೆ ವೇಳೆ ರಿಕ್ಕಿ ರೈ ನಿವಾಸದಲ್ಲಿ ಪತ್ತೆಯಾದ ಕೆಎ 05 ಎನ್ಆರ್ 0009 ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಕಬ್ಬನ್‌ಪಾರ್ಕ್ ಸಂಚಾರ ಪೊಲೀಸರು ಸೀಜ್ ಮಾಡಿದ್ದಾರೆ. ಕಾರು ದಾಖಲೆಗಳ ಪರಿಶೀಲನೆ ನಡೆಸಿದಾಗ ಮಾಲೀಕತ್ವದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ನೋಂದಣಿ ದಾಖಲೆಗಳು ಸರಿಯಿಲ್ಲದ ಕಾರಣ ಪೊಲೀಸರು ಆರ್‌ಟಿಒಗೆ ಪತ್ರ ಬರೆದಿದ್ದಾರೆ. ಅಲ್ಲದೆ, ರಿಕ್ಕಿ ರೈ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಚಾಲಕನ ಗುರುತು ಪತ್ತೆ ಹಚ್ಚುವ ಪ್ರಯತ್ನ ನಡೆಸಲಾಗುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Video: ನನ್ನ ಜೀವನದ ತಪ್ಪು ನಿರ್ಧಾರ ಇದು; ಬಸವನಗುಡಿಯಿಂದ ಬೆಳ್ಳಂದೂರಿಗೆ ಸ್ಥಳಾಂತರಗೊಂಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ನಿವಾಸಿ

ಬೆಂಗಳೂರು, ಮಾರ್ಚ್‌ 22; ಉದ್ಯೋಗದ ನಿಮ್ಮಿತ್ತ ಅಥವಾ ವಯಸ್ಸಾದ ತಂದೆತಾಯಿಯನ್ನು ನೋಡಿಕೊಳ್ಳಬೇಕೆನ್ನುವ ಕಾರಣಕ್ಕೆ ಒಂದು ಊರಿನಿಂದ ಇನ್ನೊಂದು ಊರಿಗೆ ಸ್ಥಳಾಂತರಗೊಳ್ಳುತ್ತಾರೆ. ಕೆಲವೊಮ್ಮೆ ಹೊಸ ಊರು, ಹೊಸ ವಾತಾವರಣಕ್ಕೆ ಹೊಂದಿಕೊಳ್ಳುವುದು ಕಷ್ಟವಾಗಬಹುದು. ಆದರೆ ಇದೀಗ ಬೆಂಗಳೂರು (Bengaluru) ಜೀವನವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂಬ ಸ್ಥಳೀಯ ನಿವಾಸಿಯೊಬ್ಬರ ಹೃದಯಸ್ಪರ್ಶಿ ಪೋಸ್ಟ್
ಭಾರಿ ಚರ್ಚೆಗೆ ನಾಂದಿ ಹಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಸ್ಕ್ರೀನ್‌ಗ್ರಾಬ್ (screengrab) ಹೆಸರಿನ ರೆಡ್ಡಿಟ್ ಪೋಸ್ಟ್‌ನಲ್ಲಿ ಸ್ಥಳೀಯ ನಿವಾಸಿಯೊಬ್ಬರು ಬೆಂಗಳೂರಿನ ಸರಳ ಜೀವನವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಕಳೆದ 5 ವರ್ಷಗಳಿಂದ ನಾನು ಬೆಳ್ಳಂದೂರು ಪ್ರದೇಶದಲ್ಲಿ ವಾಸಿಸುತ್ತಿದ್ದೇನೆ, ಬಸವನಗುಡಿ ಬಳಿ ವಾಸಿಸುತ್ತಿದ್ದ ನನಗೆ ಈ ಸ್ಥಳಾಂತರವು ಯೋಗ್ಯವಾಗಿಲ್ಲ ಎಂದೆನಿಸುತ್ತಿದೆ. ಕೇವಲ ಸಕಾರಾತ್ಮಕ ವಿಷಯವೆಂದರೆ ಕಡಿಮೆ ಸಮಯದಲ್ಲಿ ಆಫೀಸ್ ತಲುಪಬಹುದು ಎನ್ನುವುದಷ್ಟೇ. ಆದರೆ ವಾರಾಂತ್ಯ ಬಂದಾಗ ನಾನು ಬೇರೆ ರಾಜ್ಯದಲ್ಲಿ ವಾಸಿಸುತ್ತಿದ್ದೇನೆ ಎಂದು ಭಾಸವಾಗುತ್ತದೆ ಎಂದು ಹೇಳಿದ್ದಾರೆ.

ರೆಡ್ಡಿಟ್ ಪೋಸ್ಟ್ ಇಲ್ಲಿದೆ

ಆ ರೀತಿಯ ಸ್ವಾಧೀನ ಭಾವನೆ ಅಸ್ತಿತ್ವದಲ್ಲಿಲ್ಲ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಅಪಾರ್ಟ್ಮೆಂಟ್ ಖರೀದಿಸಿರುವುದು ಇದುವರೆಗೆ ನಾನು ಮಾಡಿದ ದೊಡ್ಡ ತಪ್ಪು ಎಂದು ನಾನು ಭಾವಿಸುತ್ತೇನೆ, ಒಂದೇ ಒಂದು ಸ್ಥಳೀಯ ಉತ್ಸವ ಆಚರಣೆಯನ್ನು ನಾನು ನೋಡಿಲ್ಲ, ಇದು ನಾನು ಒಬ್ಬ ಕನ್ನಡಿಗನಾಗಿ, ನನ್ನ ಸಲಹೆಯೆಂದರೆ ಇಂತಹ ಪ್ರದೇಶಗಳಿಗೆ ಹೋಗಬೇಡಿ, ಹಳೆಯ ಬೆಂಗಳೂರಿನ ಪ್ರದೇಶಗಳಲ್ಲಿ ವಾಸಿಸುವುದು ಮತ್ತು ಪ್ರಯಾಣದಲ್ಲಿ ರಾಜಿ ಮಾಡಿಕೊಳ್ಳುವುದು ಉತ್ತಮ. ಆದರೆ ಇಲ್ಲಿನ ಸಾಮಾಜಿಕ ಜೀವನವು ಕೆಟ್ಟದಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನನಗೆ 3BHK ಮನೆ ಹುಡುಕಿ ಕೊಡಿ, ಅರ್ಧ ತಿಂಗಳ ಬಾಡಿಗೆ ಕೊಡುತ್ತೇನೆ’: ಬೆಂಗಳೂರಿನಲ್ಲಿ ಮನೆ ಹುಡುಕಾಟದಿಂದ ಬೇಸತ್ತ ಯುವಕ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೀವು ವಾಸ್ತವ ಸ್ಥಿತಿಯನ್ನು ಅರಿತುಕೊಂಡು ಹೊಂದಾಣಿಕೆ ಮಾಡಿಕೊಳ್ಳುವುದು ಅಗತ್ಯ. ಹೆಚ್ಚಿ ಚಿಂತಿಸಿದರೆ ನೀವು ತಪ್ಪು ಮಾಡಿದ ಭಾವನೆ ಕಾಡುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಬಸವನಗುಡಿಯಿಂದ ಬೆಳ್ಳಂದೂರಿಗೆ ಪ್ರಯಾಣ ಮಾನಸಿಕ ಆರೋಗ್ಯದ ದೃಷ್ಟಿಯಿಂದ ದೊಡ್ಡ ಕುಸಿತವಾಗಿದೆ. ನನಗೆ ಆ ಸಂಘರ್ಷ ಅರ್ಥವಾಗುತ್ತದೆ. ಏಕೆಂದರೆ ಪ್ರಯಾಣದ ಸಮಯ ಮುಖ್ಯವಾಗಿದೆ. ಬಹುಶಃ ನೀವು ನಿಮ್ಮ ವಾರಾಂತ್ಯವನ್ನು ಗಾಂಧಿ ಬಜಾರ್, ಬುಗಲ್ ರಾಕ್ ಇತ್ಯಾದಿಗಳಲ್ಲಿ ಕಳೆಯಬಹುದು. ಈ ರೀತಿ ಮಾಡುವುದರಿಂದ ಕನಿಷ್ಠ ಬದುಕುತ್ತಿರುವಂತೆ ಅನಿಸಬಹುದು, ಸ್ವಲ್ಪ ಚೇತರಿಸಿಕೊಳ್ಳಬಹುದು ಎಂದು ಧೈರ್ಯ ತುಂಬಿದ್ದಾರೆ. ಮತ್ತೊಬ್ಬರು, ಬದುಕೆಂದರೆ ಹಾಗೆಯೇ, ಆಯ್ಕೆಗಳು ಎಡವುದು ಸಹಜ, ಆದರೆ ಒಪ್ಪಿಕೊಂಡು ಬದುಕುವುದು ಜಾಣತನ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ ಮಾರ್ಚ್ 29 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದಿಂದ ಕೂಡಿದೆ. ಪಂಚಮಿಯಿಂದ ಏಕಾದಶಿಯವರೆಗೆ ತಿಥಿಗಳಿವೆ. ಈ ವಾರದಲ್ಲಿ ದೇವರ ದಾಸಿಮಯ್ಯ ಜಯಂತಿ, ದಾವಣಗೆರೆ ಜಾತ್ರಾ ಮಹೋತ್ಸವ, ಅಶೋಕ ಅಷ್ಟಮಿ, ಸ್ಕಂದ ದವನಾರ್ಪಣೆ, ಸಂತಾನ ಸಪ್ತಮಿ, ಶ್ರೀರಾಮ ನವಮಿ, ಸರ್ವತ್ರ ಏಕಾದಶಿ ಸೇರಿದಂತೆ ಹಲವು ಹಬ್ಬ ಹರಿದಿನಗಳು ಮತ್ತು ವಿಶೇಷ ಆಚರಣೆಗಳಿವೆ. ಗ್ರಹಗಳ ಗೋಚಾರದಲ್ಲಿ ರವಿ, ಶನಿ, ಶುಕ್ರ ಮೀನ ರಾಶಿಯಲ್ಲಿದ್ದು, ಶುಕ್ರ ಗ್ರಹ ಮಾರ್ಚ್ 26, 2026 ರಂದು ಮೇಷ ರಾಶಿಗೆ ಪ್ರವೇಶಿಸಲಿದೆ. ಗುರು ಮಿಥುನ ರಾಶಿಯಲ್ಲಿ, ಕೇತು ಸಿಂಹ ರಾಶಿಯಲ್ಲಿ, ಕುಜ, ಬುಧ, ರಾಹು ಕುಂಭ ರಾಶಿಯಲ್ಲಿ ಸಂಚಾರ ಮಾಡಲಿವೆ.

ಮೇಷ ರಾಶಿಯವರಿಗೆ ಆರ್ಥಿಕ ಅಭಿವೃದ್ಧಿ, ಉದ್ಯೋಗದಲ್ಲಿ ಅನುಕೂಲಕರ ವಾತಾವರಣ, ವ್ಯಾಪಾರದಲ್ಲಿ ಲಾಭ ಇರಲಿದೆ. ಹಳೆಯ ಬಾಕಿ ವಸೂಲಿ, ಉತ್ತಮ ಸ್ನೇಹಿತರ ಪರಿಚಯ, ವಾಹನ ಯೋಗ, ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ ದೊರೆಯಲಿದೆ. ಆರೋಗ್ಯದ ಬಗ್ಗೆ ಮಾತ್ರ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ವೃಷಭ ರಾಶಿಯವರಿಗೆ ಖರ್ಚು ಜಾಸ್ತಿಯಾಗಲಿದೆ, ಆದಾಯದಲ್ಲೂ ಏರಿಕೆ ಇರಲಿದೆ. ಉದ್ಯೋಗದಲ್ಲಿ ಸಣ್ಣಪುಟ್ಟ ಅಪಮಾನಗಳಿರಬಹುದು, ಪಾಲುದಾರಿಕೆಯಲ್ಲಿ ಜಾಗ್ರತೆ ಅಗತ್ಯ. ಮಿಥುನ ರಾಶಿಯವರಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ, ವಾಹನ ಯೋಗ, ಆತ್ಮವಿಶ್ವಾಸ ವೃದ್ಧಿ ಇರಲಿದೆ. ಕಟಕ ರಾಶಿಯವರಿಗೆ ಆರ್ಥಿಕ ಅಭಿವೃದ್ಧಿ, ನಷ್ಟಕ್ಕೆ ಪರಿಹಾರ, ಹೊಸ ವ್ಯಾಪಾರಕ್ಕೆ ಪ್ರಯತ್ನ, ಕುಟುಂಬದ ಸಹಕಾರ ದೊರೆಯಲಿದೆ. ಸಿಂಹ ರಾಶಿಯವರಿಗೆ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಶುಭ, ಪೂರ್ವಿಕರ ಆಸ್ತಿಯಿಂದ ಲಾಭ, ಭೂಮಿ ಖರೀದಿ ಯೋಗ ಇರಲಿದೆ.

 

ಇದನ್ನೂ ಓದಿ: ಯುಗಾದಿ ಬಳಿಕ 1 ವರ್ಷ ಈ ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು, ಮಾರ್ಚ್​​ 22: ಸಾಕಷ್ಟು ಲೆಕ್ಕಾಚಾರಗಳ ಬಳಿಕ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್​​ ಕೊನೆಗೂ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಬಾಗಲಕೋಟೆಯಿಂದ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣದಿಂದ ಶಾಮನೂರು ಕುಟುಂಬದ ಸಮರ್ಥ್​​ ಅಭ್ಯರ್ಥಿಗಳಾಗಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಬಹಳ ಹೆಚ್ಚಿದ್ದು, ಟಿಕೆಟ್​​ಗಾಗಿ ತೀವ್ರ ಪೈಪೋಟಿ ನಡೆಯುತ್ತಿತ್ತು. ಈ ಹಿನ್ನೆಲೆ ಅಳೆದು ತೂಗಿ, ಕೆಲ ನಾಯಕರ ಮನವೊಲಿಸಿ ಕಾಂಗ್ರೆಸ್​​ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆ ಮೂಲಕ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ಮತ್ತು ಕಾಂಗ್ರೆಸ್​​ನಿಂದ ಉಮೇಶ್ ಮೇಟಿ ನಡುವೆ ಸ್ಪರ್ಧೆ ಏರ್ಪಟ್ಟಿದ್ದರೆ ಇತ್ತ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿಯ ಶ್ರೀನಿವಾಸ್ ಟಿ. ದಾಸಕರಿಯಪ್ಪ ವಿರುದ್ಧ ಸಚಿವ ಎಸ್​​.ಎಸ್​​. ಮಲ್ಲಿಕಾರ್ಜುನ್​​ ಅವರ ಪುತ್ರ ಸಮರ್ಥ್​​ ಅಖಾಡಕ್ಕಿಳಿದಿದ್ದಾರೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದ್ದಿದೆ)

 

 

Source link

Video: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಕೋಲಿನಿಂದ ನಿರ್ದಯವಾಗಿ ಥಳಿಸಿದ ಹಾಸ್ಟೆಲ್ ವಾರ್ಡನ್

ಉಜ್ಜಯಿನಿ, ಮಾರ್ಚ್​ 22: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಹಾಸ್ಟೆಲ್ ವಾರ್ಡನ್ ಕೋಲಿನಿಂದ ನಿರ್ದಯವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶ ಉಜ್ಜಯಿನಿಯಲ್ಲಿರುವ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾನದ ಹಾಸ್ಟೆಲ್​​ನಲ್ಲಿ ನಡೆದಿದೆ. ಈ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೇವಲ ಬೇರೆಯವರ ಹಾಸಿಗೆಯಲ್ಲಿ ಮಲಗಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆ ಕೊಡುವ ಅಗತ್ಯವಿರಲಿಲ್ಲ, ಮುಂದೆ ಹೀಗೆ ಮಾಡಬಾರದು ಎಂದು ಬುದ್ಧಿ ಹೇಳಬಹುದಿತ್ತು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

ನವದೆಹಲಿ, ಮಾರ್ಚ್ 22: ಇರಾನ್ ಯುದ್ಧದ ಪರಿಣಾಮ ಹಲವಾರು ಕ್ಷೇತ್ರಗಳ ಮೇಲೆ ಆಗುತ್ತಿದೆ. ವಿಮಾನಯಾನ ಸೆಕ್ಟರ್ (Aviation Sector) ಮೇಲೂ ಪರಿಣಾಮವಾಗುತ್ತಿದೆ. ಮುಂಬರುವ ತಿಂಗಳಿಂದ ವಿಮಾನ ಪ್ರಯಾಣ ದುಬಾರಿಯಾಗಲಿದೆ. ವಿಮಾನಗಳಿಗೆ ಬಳಸುವ ಎಟಿಎಫ್ (ATF- Aviation Turbine Fuel) ಅಥವಾ ಜೆಟ್ ಫುಯೆಲ್​ಗಳ ಬೆಲೆ ಪ್ರತೀ ತಿಂಗಳ ಆರಂಭದಲ್ಲಿ ಪರಿಷ್ಕರಣೆ ಆಗುತ್ತದೆ. ಈ ಬಾರಿ, ಏಪ್ರಿಲ್ 1ರಂದು ಎಟಿಎಫ್ ಬೆಲೆ ಸಿಕ್ಕಾಪಟ್ಟೆ ಏರುವ ಸಾಧ್ಯತೆ ಇದೆ. ಇದು ಹೆಚ್ಚಿದರೆ ವಿಮಾನ ಪ್ರಯಾಣದ ಟಿಕೆಟ್ ದರ ಗಣನೀಯವಾಗಿ ಹೆಚ್ಚಬಹುದು.

ಸರ್ಕಾರದಿಂದ ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ

ದೇಶೀಯ ವಿಮಾನ ಹಾರಾಟದಲ್ಲಿ ಟಿಕೆಟ್ ದರಗಳಿಗೆ ಸರ್ಕಾರ ಮಿತಿ ಹಾಕಿತ್ತು. ಈ ಮಿತಿಗಿಂತ ಹೆಚ್ಚಿನ ದರ ವಿಧಿಸಬೇಕಿದ್ದರೆ ವಿಮಾನ ಕಂಪನಿಗಳು ಸರ್ಕಾರದ ಅನುಮತಿ ಕೇಳಬೇಕಿತ್ತು. ಮೊನ್ನೆ ಸರ್ಕಾರ ಈ ವಿಮಾನ ಪ್ರಯಾಣ ದರದ ಮಿತಿಯನ್ನು ಹಿಂಪಡೆದುಕೊಂಡಿದೆ. ಇದರೊಂದಿಗೆ ವಿಮಾನ ಸಂಸ್ಥೆಗಳು ಸರ್ಕಾರದ ಅನುಮೋದನೆ ಇಲ್ಲದೇ ಟಿಕೆಟ್ ದರ ಏರಿಸಲು ಸಾಧ್ಯ.

ಇದನ್ನೂ ಓದಿ: ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ಹೀಗಾಗಿ, ವಿಮಾನ ಪ್ರಯಾಣ ಸಂಸ್ಥೆಗಳು ಇಂಧನದ ಬೆಲೆಗೆ ಅನುಗುಣವಾಗಿ ಮುಕ್ತವಾಗಿ ಬೆಲೆ ಪರಿಷ್ಕರಣೆ ಮಾಡಬಹುದು. ಈ ಏಪ್ರಿಲ್​ನಲ್ಲಿ ಎಟಿಎಫ್ ಇಂಧನದ ಬೆಲೆ ಸಾಕಷ್ಟು ಹೆಚ್ಚುವುದರಿಂದ, ಟಿಕೆಟ್ ದರಗಳೂ ಸಹಜವಾಗಿ ಏರಿಕೆಯಾಗಬಹುದು.

ಇದೇ ವೇಳೆ, ಏರ್ ಇಂಡಿಯಾ, ಆಕಾಶ ಏರ್ ಸಂಸ್ಥೆಗಳು ಫುಯೆಲ್ ಸರ್ಚಾರ್ಜ್ ಅನ್ನು ಏರಿಸಿವೆ. ಇದು ಟಿಕೆಟ್ ಬುಕಿಂಗ್​ಗಳಲ್ಲಿ ಅನ್ವಯ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!

ಬೆಳಗಾವಿ, ಮಾರ್ಚ್​ 22: ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ 12ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಆತ್ಮಹತ್ಯೆ

ಕಾಮರೆಡ್ಡಿ, ಮಾರ್ಚ್​ 22: ತೆಲಂಗಾಣದ ಕಾಮರೆಡ್ಡಿಯಲ್ಲಿ ದುರಂತವೊಂದು ಸಂಭವಿಸಿದೆ. ಇತ್ತೀಚೆಗಷ್ಟೇ ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ನಡೆದಿದೆ. ಇತ್ತೀಚೆಗಷ್ಟೇ ನಾಲ್ವರು ಹಸೆಮಣೆ ಏರಿದ್ದರು, ಸಂಭ್ರದ ನಡುವೆ ಈ ದುರ್ಘಟನೆ ನಡೆದಿದೆ. ಮದುವೆಯಾದ ಒಂದು ತಿಂಗಳೊಳಗೆ ಈ ದುರಂತ ಸಂಭವಿಸಿದ್ದು, ಎರಡೂ ಕುಟುಂಬಗಳು ತೀವ್ರ ದುಃಖದಲ್ಲಿ ಮುಳುಗಿವೆ.

ಕಾಮರೆಡ್ಡಿ ಜಿಲ್ಲೆಯ ಮಾಚರೆಡ್ಡಿ ಮಂಡಲದ ಘನಪುರ ಗ್ರಾಮದ ವಿನಯ್ ಕುಮಾರ್ (31) ಮತ್ತು ವಿಜಯ್ ಕುಮಾರ್ ಅವಳಿ ಸಹೋದರರು ಕೀರ್ತಿ ಮತ್ತು ಕೀರ್ತನಾ ಅವರನ್ನು ವಿವಾಹವಾಗಿದ್ದರು. ವಿನಯ್ ಹೈದರಾಬಾದ್ ನಗರದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ತಿಂಗಳು ಫೆಬ್ರವರಿ 22 ರಂದು ವಿವಾಹವಾಗಿದ್ದರು.

ಯುಗಾದಿ ಹಬ್ಬದ ದಿನದಂದು ಮನೆಯಿಂದ ಹೊರಗೆ ಹೋಗಿದ್ದ ವಿನಯ್ ಕುಮಾರ್ ಹಿಂತಿರುಗಲಿಲ್ಲ. ಅವರ ಕುಟುಂಬ ಸದಸ್ಯರು ವ್ಯಾಪಕವಾಗಿ ಹುಡುಕಾಡಿದರೂ ಅವರು ಪತ್ತೆಯಾಗಲಿಲ್ಲ. ಸಿರಿಸಿಲ್ಲಾ ಜಿಲ್ಲೆಯ ಗಂಭೀರೋಪೇಟೆ ಮಂಡಲದ ನರ್ಮಲಾದ ಮನೇರು ಹೊಳೆಯಲ್ಲಿ ಸ್ಥಳೀಯರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ತನಿಖೆ ನಡೆಸಿದಾಗ, ಅದು ವಿನಯ್ ಕುಮಾರ್ ಅವರ ಶವ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು

ಪೊಲೀಸರು ಆರಂಭದಲ್ಲಿ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಂಬಿದ್ದರು. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ಅವರು ಇಷ್ಟೊಂದು ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣಗಳು ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ಆರಂಭಿಸಿದ್ದಾರೆ.

ತಮ್ಮ ಸಂತೋಷದ ಜೀವನದಲ್ಲಿ ಸಂಭವಿಸಿದ ದುರಂತದಿಂದ ಗ್ರಾಮಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ.
ಈ ಘಟನೆಯ ಹಿಂದಿನ ಕಾರಣಗಳೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿನಯ್ ಅವರ ಮೊಬೈಲ್ ಫೋನ್ ಡೇಟಾವನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link