Headlines

nagaraj11081993

ನಿರ್ಬಂಧದ ನಡುವೆಯೂ ಪೊಲೀಸರೊಂದಿಗೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

ಕೊಪ್ಪಳ, ಮಾರ್ಚ್​ 22: ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ಪುನೀತ್ ಕೆರಹಳ್ಳಿಗೆ (Puneeth Kerehalli) ಮಾರ್ಚ್ 21ರಿಂದ 23ರವರೆಗೆ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಈ ನಡುವೆಯೂ ದರ್ಶನಕ್ಕೆ ಒತ್ತಾಯಿಸಿದ ಕೆರಹಳ್ಳಿ, ಪೊಲೀಸರೊಂದಿಗೆ ವಾಗ್ವಾದ ನಡೆಸಿ, ನಂತರ ಅಧಿಕಾರಿಗಳೊಂದಿಗೇ ಅಂಜನಾದ್ರಿ ಬೆಟ್ಟ ಏರಿದ್ದಾರೆ. ಈ ಹಿಂದೆ ಕೋಮು ವಿವಾದ ಎಬ್ಬಿಸಿದ್ದ ಕೆರೆಹಳ್ಳಿ! ಕನಕಗಿರಿಯಲ್ಲಿ ಈ ಹಿಂದೆ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರಹಳ್ಳಿ ಭಾಗವಹಿಸಿದ…

Read More

ಹೂ ಬೆಳೆಗಾರರ ಅನ್ನ ಕಸಿದ ಅಕಾಲಿಕ ಮಳೆ: ವರುಣನ ಅಬ್ಬರಕ್ಕೆ ಕೈ ಸುಟ್ಟುಕೊಂಡ ರೈತರು

ಗದಗ, ಮಾರ್ಚ್​​ 22: ಅಕಾಲಿಕವಾಗಿ ಸುರಿದ ಮಳೆಗೆ ಗದಗ ಜಿಲ್ಲೆಯ ಹೂ ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಉತ್ತಮ ಆದಾಯ ನಿರೀಕ್ಷಿಸಿದ್ದ ರೈತರಿಗೆ ಮಳೆಯಿಂದ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ. ಲಕ್ಕುಂಡಿ, ಕಣವಿ, ಹೊಸೂರು, ದಂಬಳ, ಕಡಕೋಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳೆದ ಹೂಗಳು ಮಳೆಯಿಂದ ಹೆಚ್ಚು ಹಾನಿಗೊಳಗಾಗಿವೆ. ಈ ಪ್ರದೇಶಗಳಲ್ಲಿ ಬೆಳೆಯುವ ಹೂಗಳು ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಕಡೆ ಸಾಗಾಟವಾಗುತ್ತಿತ್ತು. ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಚಂಡು ಹೂ, ಸೇವಂತಿಗೆ…

Read More

ಐಟಂ ಸಾಂಗ್ ಮಾಡಲು ಒಪ್ಪಿಕೊಂಡ ಮೃಣಾಲ್ ಠಾಕೂರ್; ಅಭಿಮಾನಿಗಳಿಗೆ ಹಬ್ಬ

ಚಿತ್ರರಂಗದಲ್ಲಿ ಕೆಲವು ನಟಿಯರಿಗೆ ಒಂದು ಕಾಲಘಟ್ಟದಲ್ಲಿ ಅದೃಷ್ಟ ಒಲಿದು ಬರುತ್ತದೆ. ಸದ್ಯ ನಟಿ ಮೃಣಾಲ್ ಠಾಕೂರ್ (Mrunal Thakur) ಅಂತಹದ್ದೇ ಒಂದು ಸುವರ್ಣ ಯುಗದಲ್ಲಿದ್ದಾರೆ. ಇದುವರೆಗೆ ಮಧ್ಯಮ ಬಜೆಟ್ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದ ಈ ಸುಂದರಿ, ಇದೀಗ ಟಾಲಿವುಡ್‌ನ ಅತಿ ದೊಡ್ಡ ಸ್ಟಾರ್‌ ನಟರ ಚಿತ್ರಗಳಿಗೆ ಆಯ್ಕೆ ಆಗುತ್ತಿದ್ದಾರೆ. ನಟ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಅಟ್ಲಿ ಕಾಂಬಿನೇಷನ್​ನ ಸಿನಿಮಾಗೆ ಈಗ ಮೃಣಾಲ್ ಠಾಕೂರ್ ಎಂಟ್ರಿ ನೀಡಿದ್ದಾರೆ. ‘ಪೆದ್ದಿ’ (Peddi) ಚಿತ್ರದಲ್ಲೂ ಅವರು ನಟಿಸಲಿದ್ದಾರೆ. ‘ಪುಷ್ಪ…

Read More

Weekly Horoscope 2026: ಮಾರ್ಚ್ ನಾಲ್ಕನೇ ವಾರ ಹೇಗಿರಲಿದೆ? ನಿಮ್ಮ ರಾಶಿಗನುಗುಣವಾಗಿ ವಾರ ಭವಿಷ್ಯ ತಿಳಿಯಿರಿ

ಇದು 2026ರ ಮಾರ್ಚ್ ನ ನಾಲ್ಕನೇ ವಾರವಾಗಿದ್ದು ಗ್ರಹಗತಿಗಳ ಬದಲಾವಣೆಯಾಗಲಿದೆ. ಸೂರ್ಯ ಮತ್ತು ಶನಿಯ ಸಂಯೋಗವಿರಲಿದೆ. ತಂದೆ ಮಕ್ಕಳ ನಡುವೆ ವೈಷಮ್ಯ, ನೌಕರ, ಬಾಸ್ ಗಳ‌ ನಡುವೆ ಕಲಹ ಇರಲಿದ್ದು ಸರ್ಕಾರದ ಕಾರ್ಯಕ್ಕೆ ವಿಘ್ನಗಳೂ ಇರಲಿದೆ. ಯಾವುದನ್ನಾದರೂ ಸ್ವೀಕರಿಸುವ ಮನೋಭಾವ ನಿಮ್ಮದಾಗಲಿ. ಮೇಷ ರಾಶಿ: ಈ ವಾರ ನಿಮಗೆ ಶುಭ ಫಲಗಳಿವೆ. ವೃತ್ತಿಯಲ್ಲಿ ಪ್ರಗತಿ ಕಂಡುಬರಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಆರೋಗ್ಯದ ಕಡೆ ಸ್ವಲ್ಪ ಗಮನಹರಿಸಿ. ಹೊಸ ಹೂಡಿಕೆಗೆ ಇದು ಸಕಾಲ. ವೃಷಭ…

Read More

Video: ಈದ್ ಪ್ರಾರ್ಥನೆ ಬಳಿಕ ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ

ಇಸ್ಲಾಮಾಬಾದ್, ಮಾರ್ಚ್​ 22: ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ.ಈದ್ ಪ್ರಾರ್ಥನೆಯ ಕೆಲವೇ ಕ್ಷಣಗಳ ನಂತರ ಈ ದಾಳಿ ನಡೆದಿದೆ. ಬಿಲಾಲ್ ಆರಿಫ್ ಸಲಾಫಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 22: ಚಿನ್ನದ ಬೆಲೆ (Gold Rates) ಭರ್ಜರಿಯಾಗಿ ಇಳಿಯುವ ಟ್ರೆಂಡ್ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್​ಗೆ 300 ರೂ ಹತ್ತಿರದಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಮಾರ್ಚ್ ತಿಂಗಳಿಂದ ಈಚೆ ಮೂರು ವಾರದಲ್ಲಿ ಎರಡು ಸಾವಿರ ರೂಗೂ ಹೆಚ್ಚಿನ ಮೊತ್ತದಷ್ಟು ಇಳಿಕೆ ಆಗಿದೆ. ಮಾರ್ಚ್ ಆರಂಭದಲ್ಲಿ ಅಪರಂಜಿ ಚಿನ್ನಕ್ಕೆ ಇದ್ದುದಕ್ಕಿಂತ ಕಡಿಮೆ ಬೆಲೆಗೆ ಆಭರಣ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ಕಳೆದ ಎರಡು…

Read More

World Water Day 2026: ನೀರನ್ನು ಮಿತವಾಗಿ ಬಳಸುವ ಮೂಲಕ ಜೀವಜಲವನ್ನು ಸಂರಕ್ಷಿಸೋಣ

ನೀರು (Water) ಜೀವನದ ಅಡಿಪಾಯ.  ಭೂಮಿಯ ಮೇಲಿರುವ ಜೀವ ಸಂಕುಲಗಳ ಜೀವನವು ನೀರಿನ ಮೇಲೆಯೇ ಅವಲಂಬಿತವಾಗಿದೆ. ನೀರಿಲ್ಲದೆ ಬದುಕನ್ನು ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲ.  ಹೌದು ನಮ್ಮ ದಿನನಿತ್ಯದ ಜೀವನ ಆರಂಭವಾಗುವುದೇ ನೀರಿನಿಂದ. ನಾಗರಿಕತೆಗಳು ಅಭಿವೃದ್ಧಿ ಹೊಂದಿರುವುದು ಸಹ ನೀರಿನ ಮೂಲಗಳ ಬಳಿ. ಹೀಗೆ ನೀರು ಜೀವನಕ್ಕೆ ಜನ್ಮ ನೀಡಿದ್ದು ಮಾತ್ರವಲ್ಲದೆ ಸಂಸ್ಕೃತಿ, ಆರ್ಥಿಕತೆ ಮತ್ತು ಸಮಾಜವನ್ನು ಸಹ ರೂಪಿಸಿತು. ಆದರೆ ಇಂದು ಇದೇ ನೀರಿನ ಮೂಲ ಮಾನವನ ಸ್ವಾರ್ಥದ ಕಾರಣದಿಂದಾಗಿ ಅಪಾಯದ ಅಂಚಿನಲ್ಲಿನಲ್ಲಿದೆ. ನದಿ, ಕೆರೆಗಳಂತಹ ಸಿಹಿ…

Read More

ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಪರ್ಸ್​ ಮರೆತು ಹೋದ ಭಾರತದ ಯುವತಿ, ಆಮೇಲೇನಾಯ್ತು?

ಆಸ್ಟ್ರೇಲಿಯಾ, ಮಾರ್ಚ್​ 22: ಸಾಮಾನ್ಯವಾಗಿ ರಸ್ತೆಗಳಲ್ಲಿ, ಬಸ್ಸುಗಳು, ಆಟೋಗಳು, ರೈಲ್ವೆ ನಿಲ್ದಾಣ ಎಲ್ಲೇ ಆಗಿರಲಿ ಬಿಟ್ಟ ವಸ್ತುಗಳು ಸಿಗುವುದು ಕಷ್ಟವೇ. ಆದರೆ ಆಸ್ಟ್ರೇಲಿಯಾದ ರೈಲ್ವೆ ನಿಲ್ದಾಣದಲ್ಲಿ ಭಾರತದ ಯುವತಿಯೊಬ್ಬಳು ಪರ್ಸ್​ ಮರೆತು ಹೋಗಿದ್ದಳು. ಇಬ್ಬರು ಯುವತಿಯರು ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಜೇಬಿನಲ್ಲಿ ಪರ್ಸ್​ ಇಲ್ಲ ಎಂಬುದನ್ನು ಕಂಡು ಒಮ್ಮೆ ಗಾಬರಿಯಾದರು. ನಿಲ್ದಾಣದಲ್ಲಿ ಇಳಿದು ಮತ್ತೊಂದು ರೈಲು ಹಿಡಿದು ತಾವು ಹತ್ತಿದ್ದ ರೈಲ್ವೆ ನಿಲ್ದಾಣಕ್ಕೆ ಬಂದಿಳಿದರು. ಆದರೆ ರೈಲ್ವೆ ನಿಲ್ದಾಣಕ್ಕೆ ಬಂದು ಆಶ್ಚರ್ಯಚಿಕಿತರಾದರು, ಆಕೆ ಎಲ್ಲಿ ಪರ್ಸ್​ ಬಿಟ್ಟು ಹೋಗಿದ್ದರೋ…

Read More

ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ರಾಮನಗರ, ಮಾರ್ಚ್​​ 22: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಈಗಾಗಲೇ ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಒಂದು  ಆನೆಯನ್ನ ಸೆರೆ ಹಿಡಿಯಲಾಗಿತ್ತು. ಇದರಿಂದ ಜನರು ಕೊಂಚ ನಿಟ್ಟುಸಿರು ಬಿಡುವ ನಡುವೆಯೇ ಇದೀಗ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಯತ್ನ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

Goddess Durga: ಭಯ, ಆತಂಕ, ಒಂಟಿತನದಿಂದ ಮುಕ್ತಿ ಪಡೆಯಲು ಒಂಬತ್ತು ಮಂಗಳವಾರ ಈ ಕೆಲಸ ಮಾಡಿ

ಭಕ್ತಿಪೂರ್ವಕವಾಗಿ ಭಗವಂತನನ್ನು ಆರಾಧಿಸುವ ಅನೇಕ ವಿಧಾನಗಳಲ್ಲಿ, ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಒಂದು ವಿಶೇಷ ಮಹತ್ವವನ್ನು ಹೊಂದಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿ ಹೇಳುವಂತೆ, ದುರ್ಗಾ ಅಂದರೆ ದುರ್ಗತಿನಾಶಿನಿ, ಅಂದರೆ ಎಲ್ಲಾ ದುರ್ಗತಿಗಳನ್ನು ನಾಶಪಡಿಸುವ ಶಕ್ತಿ ಸ್ವರೂಪಿಣಿ ತಾಯಿ. ಮಹಾಲಕ್ಷ್ಮಿ, ಮಹಾಕಾಳಿ, ಮಹಾಸರಸ್ವತಿ ಈ ತ್ರಿಶಕ್ತಿಗಳೂ ಕೂಡ ದುರ್ಗಾದೇವಿಯ ಅಂಶಗಳೇ ಆಗಿವೆ. ಈ ಕಾರಣಕ್ಕಾಗಿ ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು…

Read More