All posts by nagaraj11081993

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ

ವ್ಯಾಪಾರ- ವ್ಯವಹಾರ ಮಾಡುವಂಥವರು ಈ ದಿನ ಬಿಳಿ ಬಣ್ಣದ ಹೂವುಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ ವ್ಯಾಪಾರವನ್ನು ಆರಂಭಿಸಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಕೆಮ್ಮು, ಕಫ, ಗಂಟಲು ನೋವು ಇಂಥ ಆರೋಗ್ಯ ಸಮಸ್ಯೆಗಳು ನಿಮ್ಮಲ್ಲಿ ಕೆಲವರನ್ನು ಕಾಡಬಹುದು. ದಿಢೀರ್ ಅಂತ ದೂರ ಪ್ರಯಾಣ ಮಾಡುವ ಅನಿವಾರ್ಯ ಸೃಷ್ಟಿ ಆಗಲಿದೆ. ದೈಹಿಕ ಆಯಾಸ, ದಣಿವು ಕಾಡುವುದರಿಂದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರಿಗೆ ಅಗತ್ಯ ಇರುವ ಪುಸ್ತಕಗಳು, ಲ್ಯಾಪ್ ಟಾಪ್ ಅಥವಾ ಟ್ಯಾಬ್ಲೆಟ್ ಇಂಥವುಗಳ ಖರೀದಿಗಾಗಿ ಖರ್ಚು ಮಾಡುವ ಯೋಗ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಸರ್ಕಾರದಿಂದ ಬರಬೇಕಾದ ಟ್ಯಾಕ್ಸ್ ರೀಫಂಡ್ ಸೇರಿದಂತೆ ಇತರ ಯಾವುದೇ ಬಾಕಿ ಇದ್ದರೂ ಅದು ಯಾವಾಗ ಬರಬಹುದು ಎಂಬ ಸುಳಿವು ದೊರೆಯಲಿದೆ. ಗಾಜಿನ ವಸ್ತುಗಳು ಅಥವಾ ಚೂಪಾದ ವಸ್ತುಗಳನ್ನು ಬಳಕೆ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಜಾಗ್ರತೆಯನ್ನು ವಹಿಸಬೇಕು. ಹೋಟೆಲ್ ವ್ಯವಹಾರ ನಡೆಸುತ್ತಿರುವವರಿಗೆ ಹಣಕಾಸಿನ ಒತ್ತಡ ಕಾಣಿಸಿಕೊಳ್ಳಬಹುದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಸ್ವಂತ ವ್ಯವಹಾರ- ವ್ಯಾಪಾರ ಆರಂಭ ಮಾಡಬೇಕು ಎಂದು ಹಣಕಾಸು ವ್ಯವಸ್ಥೆ ಮಾಡುತ್ತಿದ್ದೀರಿ ಎಂದಲ್ಲಿ ಅದು ಸಾಧ್ಯವಾಗಲಿದೆ. ವಾಹನ ಖರೀದಿ ಮಾಡುವುದಕ್ಕಾಗಿ ಬ್ಯಾಂಕ್- ಬ್ಯಾಂಕೇತರ ಸಂಸ್ಥೆಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಮಾಡಿದ್ದಲ್ಲಿ ಅದು ಸಿಗುವ ಬಗ್ಗೆ ಖಾತ್ರಿ ದೊರೆಯಲಿದೆ. ಈ ಬಗ್ಗೆ ನಿಮಗೆ ಕಾಡುತ್ತಿರುವ ಆತಂಕ ದೂರವಾಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಸಾಧ್ಯವನ್ನೇ ಸಾಧಿಸುವ ಹಠ, ಸಮಾಧಾನ

ಮೇಷ ರಾಶಿ:

ಪಾಲುದಾರಿಕೆಯಲ್ಲಿ ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಚಾತುರ್ಯದಿಂದ ಏನನ್ನೂ ಮಾಡಲು ಹೋಗುವುದು ಬೇಡ. ದಿನದ ಕಾರ್ಯವನ್ನು ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗದು. ಅಗಬೇಕಾದ ಕಾರ್ಯಕ್ಕೆ ಒತ್ತಡವನ್ನು ಹೇರಿ ಮಾಡಿಸಿಕೊಳ್ಳುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯ ಬೇಕು.

ವೃಷಭ ರಾಶಿ:

ನಿಮ್ಮದಾದ ಸ್ವಂತ ಉದ್ಯೋಗವನ್ನು ಬೆಳೆಸುವ ಕಡೆ ನಿಮ್ಮ ಗಮನವಿರಲಿ. ಇಂದಿನ ಗುರಿಯನ್ನು ಬೇಗ ತಲುಪುವಿರಿ. ಮಕ್ಕಳ ವಿಚಾರಕ್ಕೆ ವಾದಗಳು ಆಡಬಹುದು. ನಿಮ್ಮನ್ನು ವೈಭವೀಕರಿಸಿವುದರಲ್ಲಿ ಅರ್ಥವಿಲ್ಲ. ಅನಿರೀಕ್ಷಿತ ಘಟನೆಯು ನಿಮ್ಮನ್ನು ಬೆಚ್ಚಿಬೀಳಿಸುವುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು.‌ ನಿಮ್ಮರ ಬಗ್ಗೆ ನಿಮಗೆ ಸಕಾರಾತ್ಮ‌ಕ‌ ಭಾವವು ಇರದು. ಹಳೆಯ ಸಾಲಗಳಿಗೆ ನೀವೇ ಮುಕ್ತಿ ಕೊಡಿಸುವಿರಿ.

ಮಿಥುನ ರಾಶಿ:

ಬಾಯಿ ಚಪಲದ ಅಧಿಕವಾಗಿ ಏನನ್ನಾದರೂ ತಿಂದು, ಆರೋಗ್ಯ ಕೆಡುವುದು. ಸ್ವಂತ ವಾಹನದಲ್ಲಿ ಒಂಟಿಯಾಗಿ ಓಡಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅತ್ತ ಕಡೆ ಹೆಚ್ಚು ಪ್ರಯತ್ನಿಸಿ. ಮಿತ್ರರ ಸಹಯೋಗದಿಂದ ಭೂಮಿಯ ಖರೀದಿಯನ್ನು ಮಾಡುವಿರಿ. ವ್ಯಯದಷ್ಟೇ ಆದಾಯ ಸಿಕ್ಕರೆ ಖರ್ಚು ಮಾಡಿ. ಮನೆಯವರನ್ನು ಕರೆದುಕೊಂಡು ಪ್ರಯಾಣ ಮಾಡುವಿರಿ. ಆಸ್ತಿಯ ದಾಖಲೆಗಳನ್ನು ಅಧಿಕಾರಿಗಳು ವಿಚಾರಿಸಬಹುದು.

ಕರ್ಕಾಟಕ ರಾಶಿ:

ಗೆಲುವಿಗಾಗಿ ಮಾಡುವ ಹೋರಾಟದ ಫಲ ನಿಮಗೆ ಆರಂಭದಲ್ಲಿಯೇ ಗೊತ್ತಾಗಲಿದೆ. ನಿಮ್ಮ ಅವ್ಯಕ್ತ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು. ಬಂಧುಗಳ ಆರೋಗ್ಯದ ವಿಚಾರಣೆಗೆ ತಿರುಗಾಟ ಮಾಡಬೇಕಾಗುವುದು. ಬೇಸರದ ಮಾತುಗಳು ಆಪ್ತರ ಮೇಲೆ ಪರಿಣಾಮ ಬೀರುವುದು. ಸಂಬಂಧದಲ್ಲಿ ಮಿತವಾದ ಬಂಧವಿರಲಿ. ಅಗತ್ಯದ ಖರ್ಚುಗಷ್ಟೇ ಪ್ರಾಧಾನ್ಯವಿರಲಿ.

ಸಿಂಹ ರಾಶಿ:

ನಿಮ್ಮದಲ್ಲದ ವೃತ್ತಿಯಲ್ಲಿ ಸೇರಿಕೊಂಡು ತೊಳಲಾಟ ನಡೆಸುವಿರಿ. ಸತತ ಪ್ರಯತ್ನದಿಂದ ಆದಾಯ ಹಾಗೂ ಖರ್ಚನ್ನು ಸರಿಯಾಗಿ ತೂಗಿಸಲು ತಿಳಿಯುವಿರಿ. ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ. ಬಂಧುಗಳು ನಿಮ್ಮ ಬಳಿ ಆರ್ಥಿಕ ಸಹಾಯವನ್ನು ಕೇಳಿಕೊಂಡು ಬರಬಹುದು. ಹಿರಿಯರ ಸೇವೆಯಿಂದ ಸಂತೋಷಪಡುವಿರಿ. ಮನಸ್ಸಿನ ಕಿರಿಕಿರಿಯಿಂದ ಕೋಪವು ಬರಬಹುದು.

ಕನ್ಯಾ ರಾಶಿ:

ಸಹೋದರಿಯ ಜೊತೆ ಮನಸ್ತಾಪ ಮಾಡಿಕೊಳ್ಳುವಿರಿ. ಗೃಹನಿರ್ಮಾಣವು ನೀವಂದುಕೊಂಡಷ್ಟು ಸರಳವಾಗಿ ಇರದು. ತಂದೆ ತಾಯಿಯರ ಸೇವೆಯ ಬಗ್ಗೆ ಅಭಿಮಾನ ಬರುವುದು. ಉತ್ತಮ‌ ದಿನದ ನಿರೀಕ್ಷೆಯಲ್ಲಿ ಇರುವ ನಿಮಗೆ ಬೇಸರವಾದೀತು. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ನೆಮ್ಮದಿಗಾಗಿ ಚಡಪಡಿಸುವಿರಿ. ಒತ್ತಡವು ನಿಮಗೆ ಯಾವ ವ್ಯವಹಾರಕ್ಕೂ ಆಸಕ್ತಿ ಇರದಂತೆ ಮಾಡುವುದು. ಯಾರ ಮಾತನ್ನೂ ಕೇಳುವ ತಾಳ್ಮೆ ಇರದು. ನಿಮ್ಮ ಮಾತನ್ನು ಕೇಳಲು ಆಸಕ್ತಿ ಇರದು.

ತುಲಾ ರಾಶಿ:

ನಿಮ್ಮ ಆಲೋಚನೆಯು ವಾಸ್ತವಕ್ಕಿಂತ ಭಿನ್ನವಾಗಿ ಕಾಣಿಸುವುದು. ಕೆಟ್ಟ ಆಲೋಚನೆಯಿಂದ ದೂರವಿರುವುದು ಸುಖ. ಋಜು ಮಾರ್ಗದಲ್ಲಿ ಇರುವ ನಿಮಗೆ ದಾರಿತಪ್ಪಿಸುವ ಜನರು ಎದುರಾಗಬಹುದು. ರಾಜಕೀಯದಲ್ಲಿ ನಿಮಗೆ ಆಸಕ್ತಿಯು ಇದ್ದರೂ ಪ್ರವೇಶಕ್ಕೆ ಮಾರ್ಗವನ್ನು ಹುಡುಕುವಿರಿ. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ.‌ ಮಕ್ಕಳ‌ ಮೇಲೆ‌ ನಿಮ್ಮ ಮೋಹವು ಅತಿಯಾಗಿದ್ದು ಅದು ಬಂಧನವೂ ಆಗಬಹುದು. ಅಸಾಮಾನ್ಯ ಕಾರ್ಯವನ್ನು ಮಾಡಲು ಬಹಳ ಉತ್ಸಾಹವಿರುವುದು.

ವೃಶ್ಚಿಕ ರಾಶಿ:

ಇಂದಿನ ನಿಮ್ಮ ಮಾತಿನಿಂದ ದ್ವೇಷವನ್ನು ಸಾಧಿಸಬಹುದು. ನಿಮಗೆ ನಕಾರಾತ್ಮಕ ಹಣೆಪಟ್ಟಿಯು ನಿಮಗೆ ಬೀಳಬಹುದು, ಎಚ್ಚರವಿರಲಿ. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು. ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಸುಖಾಂತ್ಯ ಸಿಗುವುದು. ಅಪರಿಚಿತರು ನಿಮ್ಮಿಂದ ಧನವನ್ನು ಪಡೆಯುವರು. ಅತಿಯಾದ ನಿರೀಕ್ಷೆಯು ಇಂದು ನಿಮ್ಮ ಮನಸ್ಸನ್ನು ಕೆಡಸಬಹುದು. ಮನೆಗೆ ಬಂದ ಅತಿಥಿಯನ್ನು ಸತ್ಕರಿಸುವಿರಿ.

ಧನು ರಾಶಿ:

ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರಿಗೆ ದಿನವು ಉತ್ತಮ. ಗೃಹೋಪಯೋಗಿ ವಸ್ತುಗಳನ್ನು ಜಾಣ್ಮೆಯಿಂದ ಮಾರಾಟ ಮಾಡಿದರೆ ನಿಮಗೆ ಲಾಭವಾಗುವುದು. ವಿರೋಧಿಗಳು ನಿಮ್ಮ ಹತ್ತಿರ ಬರಲು ಹೆದರುವರು. ಇಂದು ಬೆಳಗಿನ ವಾಯುವಿಹಾರದಿಂದ ಆರೋಗ್ಯವು ಕೆಡಬಹುದು. ಪುಣ್ಯ ಸ್ಥಳದಲ್ಲಿ ಸಮಯವನ್ನು ಕಳೆಯುವುದು ಇಷ್ಡವಸದೀತು. ನಿಮ್ಮ ಸೋಲನ್ನು ನೀವು ಸಹಜವಾಗಿ ಒಪ್ಪಿಕೊಳ್ಳಲಾರಿರಿ.

ಮಕರ ರಾಶಿ:

ಕಾನೂನಾತ್ಮಕ ಹೋರಾಟದ ತಂತ್ರವನ್ನು ಬದಲಿಸುವಿರಿ. ನಿಮ್ಮ ಮಾತು ಅಹಂಕಾರದಂತೆ ತೋರಬಹುದು. ವ್ಯಾಪಾರದಲ್ಲಿ ಸಾಧಾರಣ ಆದಾಯವು ಇದ್ದು ನಿಮಗೆ ಸಮಾಧಾನ ಇರದು. ವಾಹನ ಖರೀದಿಯಲ್ಲಿ ಮೋಸವಾಗುವುದು. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ಉದ್ಯೋಗಕ್ಕೆ ಸಮಯವನ್ನು ಕೊಡಲಾಗದು. ಒತ್ತಡವು ಅಧಿಕವಿರಿಲಿ. ಹತ್ತಾರು ಜವಾಬ್ದಾರಿಗಳನ್ನು ವಹಿಸಿಕೊಳ್ಳುವಿರಿ‌.

ಕುಂಭ ರಾಶಿ:

ಎಣಿಸಿಕೊಂಡ ಕಾರ್ಯವು ಆಗದೇ ಇರಬಹುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಬರಬಹುದು. ಪ್ರಾಮಾಣಿಕತೆಗೆ ಯೋಗ್ಯವಾದ ಯಶಸ್ಸನ್ನು ಪಡೆಯುವಿರಿ. ಅಂದುಕೊಂಡ ಕಾರ್ಯಗಳು ಸುಗಮವಾಗಿ ಸಾಗಲಿದ್ದು ನೆಮ್ಮದಿ ಇರುವುದು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ನೀವು ಹುಸಿಗೊಳಿಸುವಿರಿ. ಉದ್ಯೋಗವು ನಿಮಗೆ ಸಾಕೆನಿಸಿ ಕೈ ಬಿಡಬಹುದು.‌ ಸ್ವಂತಿಕೆಯನ್ನು ಮೆರೆಯುವ ಸಾಧ್ಯತೆ ಇದೆ. ಮಕ್ಕಳ ಬಗ್ಗೆ ನಿಮಗೆ ಪ್ರೀತಿ ಹೆಚ್ಚಾದೀತು.

ಮೀನ ರಾಶಿ:

ಕೊಟ್ಟ ಸಾಲವನ್ನು ಹಿಂಪಡೆಯುವ ಅನಿವಾರ್ಯತೆ ಬರಲಿದೆ. ಅದು ನಿಮಗೆ ಬಹಳ ಕಷ್ಟದ ಸಂಗತಿ. ನಿಮಗೆ ಅಂದಾಜು ಸಿಗದೇ ಇಂದಿನ ಹಣವು ಅಧಿಕವಾಗಿ ಖರ್ಚಾಗಬಹುದು. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ. ನಿಮ್ಮ ಹಾಸ್ಯವನ್ನು ಗಂಭೀರವಾಗಿ ತೆಗೆದುಕೊಳ್ಳಬಹುದು. ನಿಮ್ಮ ಮನಸ್ಸು ಯಾವುದರಲ್ಲಿಯೂ ಸ್ಥಿರವಾಗಿ ಇರದೇ ಬಹಳ ಚಂಚಲವಾಗಿ ಇರುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ವೈಧೃತಿ, ಕರಣ : ಗರಜ, ಸೂರ್ಯೋದಯ – 06 – 2 8 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 18:34, ಯಮಗಂಡ ಕಾಲ 12:31 – 14:02, ಗುಳಿಕ ಕಾಲ 15:33 – 17:04

-ಲೋಹಿತ ಹೆಬ್ಬಾರ್-8762924271 (what’s app only)

Source link

IPL 2026: 6,6,6,6,6.. ಸತತ 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ ಸಲೀಲ್ ಅರೋರಾ

ಹೈದರಾಬಾದ್‌ನಲ್ಲಿರುವ ತನ್ನ ತವರು ಮೈದಾನದಲ್ಲಿ ಕಳೆದ ಕೆಲವು ದಿನಗಳಿಂದ ತಯಾರಿ ನಡೆಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಮಾರ್ಚ್ 21 ರಂದು ತನ್ನ ಮೊದಲ ಇಂಟ್ರಾ-ಸ್ಕ್ವಾಡ್ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 94 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಹೆನ್ರಿಕ್ ಕ್ಲಾಸೆನ್ ಕೂಡ ಭರ್ಜರಿ ಪ್ರದರ್ಶನ ನೀಡಿದರು. ಇವರ ಜೊತೆಗೆ 23 ವರ್ಷದ ಸಲೀಲ್ ಅರೋರಾ ಕೂಡ ಸಿಕ್ಸರ್​ಗಳ ಮಳೆಗರೆದು ಎಲ್ಲರ ಗಮನ ಸೆಳೆದರು.

ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸಲೀಲ್ ಅರೋರಾ, ಇಂದು ನಡೆದ ಅಭ್ಯಾಸ ಪಂದ್ಯದಲ್ಲಿ ಬಿರುಗಾಳಿಯ ಇನ್ನಿಂಗ್ಸ್ ಆಡಿದರು. ಅಭಿಷೇಕ್ ಶರ್ಮಾ ಮತ್ತು ಹೆನ್ರಿಕ್ ಕ್ಲಾಸೆನ್ ಅವರ ಇನ್ನಿಂಗ್ಸ್ ನಂತರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಸಲೀಲ್, ಕೇವಲ 16 ಎಸೆತಗಳಲ್ಲಿ 48 ರನ್ ಗಳಿಸುವ ಮೂಲಕ ಬೌಲರ್‌ಗಳ ಬೆವರಿಳಿಸಿದರು. 300 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಅರೋರಾ ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಔಟಾದರು.

ಈ ಇನ್ನಿಂಗ್ಸ್‌ನಲ್ಲಿ, ಸಲೀಲ್ ಸತತ ಐದು ಎಸೆತಗಳಲ್ಲಿ ಐದು ಸಿಕ್ಸರ್‌ಗಳನ್ನು ಬಾರಿಸಿದರು. ಜಯದೇವ್ ಉನದ್ಕಟ್ ಅವರ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಸತತ 2 ಸಿಕ್ಸರ್‌ಗಳನ್ನು ಬಾರಿಸಿದ ಅರೋರಾ, ನಂತರ, ಮುಂದಿನ ಓವರ್‌ನಲ್ಲಿ ಸ್ಟ್ರೈಕ್‌ಗೆ ಬಂದ ತಕ್ಷಣ ಸತತ ಮೂರು ಸಿಕ್ಸರ್‌ಗಳನ್ನು ಬಾರಿಸಿದರು. ಅರೋರಾ ಅವರ ಅಬ್ಬರದ ಬ್ಯಾಟಿಂಗ್​ನಿಂದಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಎಸ್​ಆರ್​ಹೆಚ್ ಎ ತಂಡ 21 ಓವರ್‌ಗಳಲ್ಲಿ 253 ರನ್ ಕಲೆಹಾಕಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಸಿನಿಮಾ ಪ್ರದರ್ಶನದ ವೇಳೆ ಹೈಡ್ರಾಮಾ: ಚಿತ್ರಮಂದಿರ ಧ್ವಂಸ, ಪೊಲೀಸರ ಎಂಟ್ರಿ

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ಬಹುನಿರೀಕ್ಷಿತ ಆ್ಯಕ್ಷನ್ ಸಿನಿಮಾ ‘ಧುರಂಧರ್: ದಿ ರಿವೆಂಜ್’ ಭಾರತ ಮಾತ್ರವೇ ಅಲ್ಲದೆ ವಿದೇಶದಲ್ಲಿಯೂ ಸಹ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಳಲ್ಲಿ 300 ಕೋಟಿಗೂ ಹೆಚ್ಚಿನ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಆದರೆ ‘ಧುರಂಧರ್ 2’ ಸಿನಿಮಾ ಪ್ರದರ್ಶನ ಮಾಡುತ್ತಿದ್ದ ಚಿತ್ರಮಂದಿರ ಒಂದರಲ್ಲಿ ಘಟನೆಯೊಂದು ನಡೆದಿದ್ದು, ಇದರಿಂದಾಗಿ ಸಿನಿಮಾ ಪ್ರದರ್ಶನ ನಿಲ್ಲಿಸಿದ್ದು ಮಾತ್ರವಲ್ಲದೆ ಪೊಲೀಸರ ಎಂಟ್ರಿ ಸಹ ಆಗಿದೆ.

‘ಧುರಂಧರ್ 2’ ಸಿನಿಮಾ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಬಿಡುಗಡೆ ಆಗಿದೆ. ಕೆನಡಾನಲ್ಲಿ ಸಹ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಿದೆ. ಕೆನಡಾದ ಒಂದು ಚಿತ್ರಮಂದಿರದಲ್ಲಿ ಸಿನಿಮಾದ ಪ್ರದರ್ಶನದ ವೇಳೆ ಪ್ರೇಕ್ಷಕರು ಅಕ್ಷರಶಃ ರೊಚ್ಚಿಗೆದ್ದು ಚಿತ್ರಮಂದಿರದ ಪರದೆಯನ್ನೇ ಹರಿದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ಸಿನಿಮಾ ಪ್ರದರ್ಶನವಾಗುತ್ತಿದ್ದ ಪರದೆಯನ್ನೇ ಹರಿದ ಕಾರಣ ಚಿತ್ರ ಪ್ರದರ್ಶನವನ್ನು ನಿಲ್ಲಿಸಲಾಗಿದೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಪೊಲೀಸರು ಚಿತ್ರಮಂದಿರಕ್ಕೆ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಇದನ್ನೂ ಓದಿ:ಭಾರತೀಯ ಚಿತ್ರರಂಗದ ಭವಿಷ್ಯ ಬದಲಿಸಲಿದೆ ಧುರಂಧರ್ 2: ರಣವೀರ್ ಸಿಂಗ್

ಕೆನಡಾದ ಪ್ರಮುಖ ನಗರವೊಂದರ ಚಿತ್ರಮಂದಿರದಲ್ಲಿ ಸಿನಿಮಾದ ಪ್ರದರ್ಶನ ಆಗುತ್ತಿತ್ತು. ಈ ಚಿತ್ರದ ವಿಶೇಷ ಪ್ರದರ್ಶನದ ವೇಳೆ ಗದ್ದಲ ಆರಂಭವಾಯಿತು. ವರದಿಗಳ ಪ್ರಕಾರ, ತಾಂತ್ರಿಕ ಕಾರಣಗಳಿಂದಾಗಿ ಸಿನಿಮಾ ಪ್ರದರ್ಶನದಲ್ಲಿ ಪದೇ ಪದೇ ಅಡಚಣೆ ಉಂಟಾದ್ದರಿಂದ ಪ್ರೇಕ್ಷಕರು ತಾಳ್ಮೆ ಕಳೆದುಕೊಂಡರು. ಆರಂಭದಲ್ಲಿ ಕಿರುಚಾಟಕ್ಕೆ ಸೀಮಿತವಾಗಿದ್ದ ಪ್ರತಿಭಟನೆ, ಕ್ರಮೇಣ ಹಿಂಸಾಚಾರಕ್ಕೆ ತಿರುಗಿತು. ಕೆಲವು ಕಿಡಿಗೇಡಿ ಪ್ರೇಕ್ಷಕರು ಚಿತ್ರಮಂದಿರದ ಒಳಗಿದ್ದ ಆಸನಗಳನ್ನು ಕಿತ್ತು ಹಾಕಿದರು. ಇನ್ನು ಕೆಲವರು ಸ್ಕ್ರೀನ್ ಅನ್ನು ಚಾಕುವಿನಿಂದ ಹರಿದು ಹಾಕಿದ್ದಾರೆ. ಈ ವೇಳೆ ಚಿತ್ರಮಂದಿರದ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಕೆನಡಾ ಪೊಲೀಸರು ಚಿತ್ರಮಂದಿರವನ್ನು ಸಂಪೂರ್ಣವಾಗಿ ತೆರವುಗೊಳಿಸಿದರು. ಘಟನೆಗೆ ಸಂಬಂಧಿಸಿದಂತೆ ಕೆಲವು ಭಾರತೀಯ ಮೂಲದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋಗಳು ವೈರಲ್ ಆಗುತ್ತಿದ್ದು, ಘಟನೆಯನ್ನು ನೆಟ್ಟಿಗರು ಖಂಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಈದ್ ಹಬ್ಬದ ದಿನವೇ ಜೆರುಸಲೆಮ್ ಮೇಲೆ ಇರಾನ್ ಕ್ಷಿಪಣಿ ದಾಳಿ

ಜೆರುಸಲೇಂ, ಮಾರ್ಚ್ 21: ಈದ್ ಅಲ್-ಫಿತರ್ ದಿನದಂದೇ ಜೆರುಸಲೇಂ ಮೇಲೆ ಇರಾನಿನ (Iran War) ಕ್ಷಿಪಣಿ ದಾಳಿ ನಡೆದಿದೆ. ಅಲ್-ಅಕ್ಸಾ ಮಸೀದಿಯಿಂದ ಕೆಲವೇ ನೂರು ಮೀಟರ್ ದೂರದಲ್ಲಿ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ನೂರಾರು ಮುಸ್ಲಿಂ ಆರಾಧಕರು ಮಸೀದಿಯ ಗೇಟ್ ಹೊರಗೆ ತಮ್ಮ ಈದ್ ಪ್ರಾರ್ಥನೆಗಳನ್ನು ನಡೆಸಬೇಕಾಯಿತು. ಸುಮಾರು 60 ವರ್ಷಗಳಲ್ಲಿ ಮೊದಲ ಬಾರಿಗೆ ಮಸೀದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಯಿತು.

ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಯಹೂದಿಗಳಿಗೆ ವಿಶ್ವದ ಕೆಲವು ಪವಿತ್ರ ಸ್ಥಳಗಳಿಂದ ಕೆಲವೇ ಮೀಟರ್ ದೂರದಲ್ಲಿರುವ ಈದ್ ಅಲ್-ಫಿತರ್ ಆಚರಣೆಯ ಸಮಯದಲ್ಲಿ ಇರಾನಿನ ಕ್ಷಿಪಣಿ ಜೆರುಸಲೆಮ್ ಮೇಲೆ ದಾಳಿ ಮಾಡಿದೆ ಎಂದು ಇಸ್ರೇಲ್ ಹೇಳಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕೊನೆಗೂ ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಟಿಕೆಟ್

ಬೆಂಗಳೂರು, ಮಾರ್ಚ್​ 21: ಕೊನೆಗೂ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ ಬಗೆಹರಿದಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಫಿಕ್ಸ್ ಆಗಿದೆ. ಆ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ​ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಮಗ ಸಮರ್ಥ್ ಶಾಮನೂರ್​​ ಕಣಕ್ಕಿಳಿಯಲಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Source link

ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ತಿರುವನಂತಪುರಂ, ಮಾರ್ಚ್ 21: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಹುಲ್ ಗಾಂಧಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಬಿಜೆಪಿಯ ‘ಬಿ-ಟೀಮ್’ ಎಂದು ಟೀಕಿಸಿದ್ದಾರೆ. ಓಲೈಕೆ ರಾಜಕೀಯ ಮಾಡುವ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅನ್ನು ಒಂದೇ ರೀತಿಯಲ್ಲಿ ವಿರೋಧಿಸಿವೆ. ಅವೆರಡೂ ಚೆನ್ನಾಗಿ ಹೊಂದಿಕೊಳ್ಳುತ್ತಿವೆ ಎಂದು ಕೇರಳದ ಸಿಎಂ ಆರೋಪಿಸಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅನುಭವಗಳಿಂದ ಕಲಿಯಲು ಇಷ್ಟಪಡದ ವ್ಯಕ್ತಿಗಳಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ರಾಷ್ಟ್ರೀಯ ಮಟ್ಟದ ವ್ಯವಹಾರಗಳನ್ನು ಪರಿಶೀಲಿಸಿದರೆ ನಮಗೆ ಕಾಣುವುದೇನೆಂದರೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷವು ಬಿಜೆಪಿಯ ನಿಜವಾದ ಬಿ-ಟೀಂ ಆಗಿದೆ. ಆ ಬಗ್ಗೆ ನಾನು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ ಹೊರಗೆ ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ

ಕಾಂಗ್ರೆಸ್ ಓಲೈಕೆಯ ರಾಜಕೀಯ ಮಾಡುತ್ತಿದೆ. ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದದಲ್ಲಿ ತೊಡಗಿರುವ ಗುಂಪುಗಳ ಬೆಂಬಲವನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ವಿಜಯನ್ ಆರೋಪಿಸಿದರು. ನಾವು ಯಾವುದೇ ಕೋಮುವಾದಿ ಶಕ್ತಿಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ನಾವು ಎಲ್ಲಾ ಕೋಮುವಾದವನ್ನು ವಿರೋಧಿಸುತ್ತೇವೆ ಎಂದು ಅವರು ಹೇಳಿದರು.

ಕೇರಳದಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶಗಳು ಹೊರಬೀಳಲಿವೆ. ಈಗಾಗಲೇ ಕೇರಳದಲ್ಲಿ ಬಿಜೆಪಿ, ಕಾಂಗ್ರೆಸ್ ಚುನಾವಣಾ ಪ್ರಚಾರವನ್ನು ಆರಂಭಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತುಮಕೂರು: ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು, ಮಾರ್ಚ್​ 21: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಿನ್ನಲೆ ಏಪ್ರಿಲ್​ 1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಗಮನ ಹಿನ್ನಲೆಯಲ್ಲಿ ತುಮಕೂರಿನ ಕ್ಯಾತಸಂದ್ರ ಸಮೀಪದ ಸಿದ್ದಗಂಗಾ ಮಠದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಮಠದ ಪೀಠಾಧಿಪತಿ ಸಿದ್ದಲಿಂಗ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತುಮಕೂರು ಎಸ್ಪಿ ಅಶೋಕ್ ಹಾಗೂ ಶಾಸಕರುಗಳಾದ ಸುರೇಶ್ ಗೌಡ, ಜ್ಯೋತಿ ಗಣೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ರಾಷ್ಟ್ರಪತಿ ಭೇಟಿ ಹಿನ್ನಲೆಯಲ್ಲಿ ಅಗತ್ಯ ಬಂದೋಬಸ್ತ್ ಹಾಗೂ ಇತರೆ ಸಿದ್ಧತೆಗಳ ಕುರಿತು ಚರ್ಚೆ ಮಾಡಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವೇಳಾ ಪಟ್ಟಿ ಹೀಗಿದೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾರ್ಚ್ 31ರಂದು ಬೆಂಗಳೂರಿಗೆ ಆಗಮಿಸಲಿದ್ದು, ಲೋಕಪಾಲ್ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಅವರು, ಮಠದ ಪೂಜ್ಯ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಸಿದ್ಧಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವ: 15 ದಿನದ ಜಾತ್ರೆಯಲ್ಲಿ ಏನೆಲ್ಲಾ ವಿಶೇಷ ಗೊತ್ತಾ?

ಬಳಿಕ ಮಠದ ಸುಮಾರು 10 ಸಾವಿರ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದು, ಆ ಬಳಿಕ ಶಿವಕುಮಾರಸ್ವಾಮೀಜಿಗಳ 119ನೇ ಜನ್ಮದಿನಾಚರಣೆ ಅಂಗವಾಗಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಅಗತ್ಯ ಬಂದೋಬಸ್ತ್ ಹಾಗೂ ಇತರೆ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?

ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ ಮಾಡುವ ತಂಡದ ಪರ ಇನ್ನಿಂಗ್ಸ್ ಪ್ರಾರಂಭಿಸುವವರನ್ನು ಓಪನರ್ ಎಂದು ಕರೆದರೆ, ಪಂದ್ಯವನ್ನು ಮುಗಿಸುವವರನ್ನು ಫಿನಿಷರ್ ಎಂದು ಕರೆಯಲಾಗುತ್ತದೆ. ಇಂತಹ ಗೇಮ್ ಫಿನಿಷರ್​ಗಳು ಐಪಿಎಲ್​ನಲ್ಲಿಯೂ (IPL 2026) ಇದ್ದಾರೆ. 10 ತಂಡಗಳು ಪಾಲ್ಗೊಳ್ಳುವ ಈ ಲೀಗ್​ನಲ್ಲಿ ಪಂದ್ಯಗಳನ್ನು ಮುಗಿಸುವಲ್ಲಿ ಪ್ರವೀಣರಾದ 31 ಆಟಗಾರರಿದ್ದಾರೆ. ಹಾಗಿದ್ದರೆ ಈ 10 ತಂಡಗಳಲ್ಲಿರುವ ಆ 31 ಗೇಮ್ ಫಿನಿಷರ್‌ಗಳು ಯಾರ್ಯಾರು ಎಂಬುದು ಪ್ರಶ್ನೆ. ಇದರ ಜೊತೆಗೆ ಪ್ರತಿ ತಂಡವು ಎಷ್ಟು ಫಿನಿಷರ್‌ಗಳನ್ನು ಹೊಂದಿದೆ? ಎಂಬುದನ್ನು ವಿವರವಾಗಿ ನೋಡುವುದಾದರೆ..

10 ತಂಡಗಳಲ್ಲಿರುವ ಗೇಮ್ ಫಿನಿಷರ್ಸ್

  • ಮುಂಬೈ ಇಂಡಿಯನ್ಸ್ ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, ಈ ತಂಡ ಮೂವರು ಗೇಮ್ ಫಿನಿಷರ್‌ಗಳನ್ನು ಹೊಂದಿದೆ. ಅವರಲ್ಲಿ ಹಾರ್ದಿಕ್ ಪಾಂಡ್ಯ, ನಮನ್ ಧೀರ್ ಮತ್ತು ವಿಲ್ ಜ್ಯಾಕ್ಸ್ ಸೇರಿದ್ದಾರೆ.
  • ಮುಂಬೈ ಇಂಡಿಯನ್ಸ್​ನಂತೆಯೇ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್​ನಲ್ಲೂ ಎಂಎಸ್ ಧೋನಿ, ಶಿವಂ ದುಬೆ, ಕಾರ್ತಿಕ್ ಶರ್ಮಾ ಮತ್ತು ಡೆವಾಲ್ಡ್ ಬ್ರೆವಿಸ್ ಎಂಬ ನಾಲ್ಕು ಬಲಿಷ್ಠ ಫಿನಿಷರ್‌ಗಳಿದ್ದಾರೆ.
  • ಐಪಿಎಲ್‌ನ ಹಾಲಿ ಚಾಂಪಿಯನ್ ಆಗಿರುವ ಆರ್‌ಸಿಬಿ ತಂಡದಲ್ಲೂ ಅಪಾಯಕಾರಿ ಗೇಮ್ ಫಿನಿಷರ್​ಗಳಿದ್ದಾರೆ. ಕಳೆದ ಆವೃತ್ತಿಯಲ್ಲಿ ಆರ್​ಸಿಬಿ ತಂಡ ಚಾಂಪಿಯನ್ ಆಗುವಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ಅದರಂತೆ ಈ ಆವೃತ್ತಿಯಲ್ಲೂ ಆರ್​ಸಿಬಿ ತಂಡದಲ್ಲಿ ಟಿಮ್ ಡೇವಿಡ್, ಜಿತೇಶ್ ಶರ್ಮಾ ಮತ್ತು ರೊಮಾರಿಯೊ ಶೆಫರ್ಡ್‌ರಂತಹ ಮೂವರು ಗೇಮ್ ಫಿನಿಶರ್‌ಗಳಿದ್ದಾರೆ.
  • ಡೆಲ್ಲಿ ಕ್ಯಾಪಿಟಲ್ಸ್ ತಂಡ ಇನ್ನೂ ಐಪಿಎಲ್ ಟ್ರೋಫಿ ಎತ್ತಿಹಿಡಿದಿಲ್ಲದಿರಬಹುದು, ಆದರೆ ಈ ತಂಡದಲ್ಲೂ ಮೂವರು ಅತ್ಯುತ್ತಮ ಫಿನಿಷರ್‌ಗಳಿದ್ದಾರೆ. ಡೇವಿಡ್ ಮಿಲ್ಲರ್, ಸಮೀರ್ ರಿಜ್ವಿ ಮತ್ತು ಅಶುತೋಷ್ ಶರ್ಮಾ ಅವರಂತಹ ಮ್ಯಾಚ್-ಫಿನಿಶಿಂಗ್ ಪವರ್‌ಹೌಸ್‌ಗಳು ಅವರಲ್ಲಿವೆ.
  • ಸನ್‌ರೈಸರ್ಸ್ ಹೈದರಾಬಾದ್ ತಂಡ 2026 ರ ಐಪಿಎಲ್​ಗಾಗಿ ಲಿಯಾಮ್ ಲಿವಿಂಗ್‌ಸ್ಟೋನ್ ಎಂಬ ಹೊಸ ಫಿನಿಷರ್ ಅನ್ನು ತಂಡಕ್ಕೆ ಸೇರಿಸಿಕೊಂಡಿದೆ. ತಂಡದಲ್ಲಿ ಈಗಾಗಲೇ ಹೆನ್ರಿಚ್ ಕ್ಲಾಸೆನ್ ಮತ್ತು ಅನಿಕೇತ್ ವರ್ಮಾ ಎಂಬ ಇಬ್ಬರು ಮ್ಯಾಚ್-ಫಿನಿಷರ್‌ಗಳಿದ್ದಾರೆ.
  • ಗುಜರಾತ್ ಟೈಟಾನ್ಸ್ ತಂಡ ಕೂಡ ಮೂವರು ಬಲಿಷ್ಠ ಫಿನಿಶರ್‌ಗಳನ್ನು ಹೊಂದಿದ್ದು, ಇದರಲ್ಲಿ ಜೇಸನ್ ಹೋಲ್ಡರ್, ರಾಹುಲ್ ತೇವಾಟಿಯಾ ಮತ್ತು ಗ್ಲೆನ್ ಫಿಲಿಪ್ಸ್ ಅವರ ಹೆಸರುಗಳು ಸೇರಿವೆ.
  • ಐಪಿಎಲ್ 2026 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ನಿಕೋಲಸ್ ಪೂರನ್, ಆಯುಷ್ ಬಡೋನಿ ಮತ್ತು ಅಬ್ದುಲ್ ಸಮದ್ ಪಂದ್ಯಗಳನ್ನು ಮುಗಿಸುವ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
  • ರಾಜಸ್ಥಾನ್ ರಾಯಲ್ಸ್ ತಂಡದಲ್ಲಿಯೂ ಮ್ಯಾಚ್ ಫಿನಿಷರ್‌ಗಳ ಕೊರತೆಯಿಲ್ಲ. ತಂಡವು ವೈಭವ್ ಸೂರ್ಯವಂಶಿಯಂತಹ ಸ್ಫೋಟಕ ಆರಂಭಿಕನನ್ನು ಹೊಂದಿದ್ದರೆ, ಫಿನಿಷರ್‌ಗಳಲ್ಲಿ ಶಿಮ್ರಾನ್ ಹೆಟ್ಮೆಯರ್, ಶುಭಂ ದುಬೆ ಮತ್ತು ಡೊನೊವನ್ ಫೆರೇರಾ ಸೇರಿದ್ದಾರೆ.
  • ಐಪಿಎಲ್ 2026 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಮ್ಯಾಚ್-ಫಿನಿಷರ್ ಆಂಡ್ರೆ ರಸೆಲ್ ಅವರ ಸೇವೆಯನ್ನು ಹೊಂದಿರುವುದಿಲ್ಲ. ಆದಾಗ್ಯೂ, ತಂಡವು ಇನ್ನೂ ರಿಂಕು ಸಿಂಗ್, ರಮಣದೀಪ್ ಸಿಂಗ್ ಮತ್ತು ಪೊವೆಲ್ ಅವರಂತಹ ಆಟಗಾರರನ್ನು ಹೊಂದಿದೆ.
  • ಪಂಜಾಬ್ ಕಿಂಗ್ಸ್ ತಂಡವು ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್ ಮತ್ತು ಮಾರ್ಕೊ ಯಾನ್ಸೆನ್ ಸೇರಿದಂತೆ 3 ಅತ್ಯುತ್ತಮ ಫಿನಿಷರ್‌ಗಳನ್ನು ಹೊಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WITT Summit 2026: ರಾಜಕೀಯದಿಂದ ಕ್ರೀಡೆಯವರೆಗೆ; ವಿಟ್ ಶೃಂಗಸಭೆಯ 2ನೇ ದಿನದ ಆಕರ್ಷಣೆಗಳಿವು

ನವದೆಹಲಿ, ಮಾರ್ಚ್ 21: ದೆಹಲಿಯಲ್ಲಿ ಮಾರ್ಚ್ 23 ಮತ್ತು 24ರಂದು ನಡೆಯಲಿರುವ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit) ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಮತ್ತು ಕಾರ್ಪೊರೇಟ್ ನಾಯಕರನ್ನು ಒಟ್ಟುಗೂಡಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಮುಖ್ಯ ಅತಿಥಿಯಾಗಿ ಈ ವೇದಿಕೆಯನ್ನು ಅಲಂಕರಿಸಲಿದ್ದಾರೆ. ಈ ಬಾರಿ ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ ಇಂಧನ, ಮೂಲಸೌಕರ್ಯ ಮತ್ತು ಭಾರತದ ಕೈಗಾರಿಕಾ ಭವಿಷ್ಯದ ಕುರಿತು ಆಳವಾದ ಚರ್ಚೆಗೆ ವೇದಿಕೆಯಾಗಲಿದೆ.

“ಭಾರತ ಮತ್ತು ಜಗತ್ತು” ಎಂಬ ವಿಷಯವನ್ನು ಆಧರಿಸಿದ ಈ ಕಾರ್ಯಕ್ರಮವು ರಾಜಕೀಯ ನಾಯಕತ್ವ, ಜಾಗತಿಕ ಚಿಂತಕರು, ಕೈಗಾರಿಕೆ ಮತ್ತು ನಾಗರಿಕ ಸಮಾಜವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿ ದೇಶದ ಅಭಿವೃದ್ಧಿ ಪಥದ ಬಗ್ಗೆ ಚರ್ಚಿಸಲಿದೆ. ‘ಭಾರತ ಮತ್ತು ಜಗತ್ತು’ ಎಂಬ ವಿಷಯದೊಂದಿಗೆ ವಿಟ್ ಶೃಂಗಸಭೆಯಲ್ಲಿ ಚಿಂತಕರು, ಉದ್ಯಮಿಗಳು ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: WITT Summit: ಜಗತ್ತಿನ ಅನಿಶ್ಚಿತತೆಯ ನಡುವೆಯೂ ಜಾಗತಿಕ ದಿಕ್ಕನ್ನು ರೂಪಿಸಲು ಭಾರತ ಸಜ್ಜಾಗಿದೆ; ಟಿವಿ9 ಎಂಡಿ ಮತ್ತು ಸಿಇಒ ಬರುಣ್ ದಾಸ್

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಭಾಷಣ ಮಾಡಿದ ಶೃಂಗಸಭೆಯ ನಂತರ, ಎರಡನೇ ದಿನವು ‘ಭಾರತ ಮತ್ತು ಜಗತ್ತು’ ಎಂಬ ವಿಷಯದ ಸುತ್ತ ನಡೆಯುತ್ತಿದ್ದು, ದೇಶದ ಉನ್ನತ ರಾಜಕೀಯ ನಾಯಕರು ಭಾಷಣ ಮಾಡುತ್ತಾರೆ. ಮಾಜಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ , ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ ಪಿಯೂಷ್ ಗೋಯಲ್ ಮತ್ತು ಈಶಾನ್ಯ ಪ್ರದೇಶದ ಸಂವಹನ ಮತ್ತು ಅಭಿವೃದ್ಧಿ ಸಚಿವೆ ಜ್ಯೋತಿರಾದಿತ್ಯ ಸಿಂಧಿಯಾ ಅವರ ಭಾಷಣಗಳು ಕಾರ್ಯಕ್ರಮದ ಎರಡನೇ ದಿನದ ಪ್ರಮುಖ ಅಂಶಗಳಾಗಿವೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ , ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಭಾಷಣ ಮಾಡಲಿದ್ದಾರೆ. ಲೋಕಸಭಾ ಸದಸ್ಯರಾದ ಅಖಿಲೇಶ್ ಯಾದವ್ ಮತ್ತು ಅಸಾದುದ್ದೀನ್ ಓವೈಸಿ ಕೂಡ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: WITT Summit 2026: WITT ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯಿಂದ ಭಾರತದ ಅಭಿವೃದ್ಧಿಯ ದಿಕ್ಕಿನ ಕುರಿತು ಮಹತ್ವದ ಚರ್ಚೆ

ಈ ಶೃಂಗಸಭೆಯ ಎರಡನೇ ದಿನದ ಮುಖ್ಯ ಅಂಶಗಳಲ್ಲಿ ಭಾರತೀಯ ಕ್ರೀಡಾ ದಂತಕಥೆಗಳೊಂದಿಗಿನ ಅನೇಕ ಮಾತುಕತೆಗಳು ಕೂಡ ಸೇರಿವೆ. ಅವರಲ್ಲಿ ಪ್ರಮುಖರು ಕ್ರಿಕೆಟ್ ದಂತಕಥೆ ಸೌರವ್ ಗಂಗೂಲಿ, ಯುವ ಭಾರತೀಯ ಕ್ರಿಕೆಟಿಗರಾದ ಅಕ್ಷರ್ ಪಟೇಲ್ ಮತ್ತು ಅರ್ಶ್ದೀಪ್ ಸಿಂಗ್ .

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link