ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್ಕುಮಾರ್ (Puneeth Rajkumar) ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ…
ಒಡಿಶಾ, ಮಾರ್ಚ್ 21: ಇತ್ತೀಚೆಗೆ ಒಡಿಶಾದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ಸಂದರ್ಭದಲ್ಲಿ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಿಜು ಜನತಾದಳ (ಬಿಜೆಡಿ) ತನ್ನ 6 ಶಾಸಕರನ್ನು ಅಮಾನತುಗೊಳಿಸಿದೆ. ಶಾಸಕರು ಅಡ್ಡ ಮತದಾನದಲ್ಲಿ ತೊಡಗಿದ್ದಾರೆ ಎಂದು ಪತ್ತೆಯಾದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಶೋಕಾಸ್ ನೋಟಿಸ್ಗೆ ಅವರು ನೀಡಿದ ಉತ್ತರಗಳ ಪರಿಶೀಲನೆ ಮತ್ತು ಬಿಜೆಡಿ ಶಿಸ್ತು ಸಮಿತಿಯ ಸಂಪೂರ್ಣ ಪರಿಶೀಲನೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಒಡಿಶಾದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗಮನಾರ್ಹ ಅಡ್ಡ ಮತದಾನ ಕಂಡುಬಂದಿತು. 8 ಬಿಜೆಡಿ ಶಾಸಕರು (ಈಗ ಅಮಾನತುಗೊಂಡಿರುವ ಆರು ಮಂದಿ ಮತ್ತು ಈಗಾಗಲೇ ಅಮಾನತುಗೊಂಡಿರುವ ಇಬ್ಬರು ಸದಸ್ಯರು ಸೇರಿದಂತೆ) ಬಿಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳು ಜಂಟಿಯಾಗಿ ಸ್ಪರ್ಧಿಸಿದ್ದ ಸಾಮಾನ್ಯ ವಿರೋಧ ಪಕ್ಷದ ಅಭ್ಯರ್ಥಿ ದತ್ತೇಶ್ವರ ಹೋಟಾ ಬದಲಿಗೆ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ದಿಲೀಪ್ ರೇ ಅವರಿಗೆ ಮತ ಚಲಾಯಿಸಿದ್ದರು. ಇದು ದಿಲೀಪ್ ರೇ ಅವರ ಗೆಲುವಿಗೆ ಕಾರಣವಾಯಿತು.
ಇದರ ಪರಿಣಾಮವಾಗಿ ಬಿಜೆಪಿ 2 ಸ್ಥಾನಗಳನ್ನು, ಬಿಜೆಡಿ 1 ಸ್ಥಾನ ಮತ್ತು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ 4ನೇ ಸ್ಥಾನಗಳನ್ನು ಪಡೆದರು. ಬಿಜೆಡಿ ಈ ಹಿಂದೆ ಮಾರ್ಚ್ 17ರಂದು 6 ಶಾಸಕರಿಗೆ ಪಕ್ಷದ ವಿಪ್ ಅನ್ನು ಧಿಕ್ಕರಿಸಿದ್ದಕ್ಕಾಗಿ ವಿವರಣೆಗಳನ್ನು ಕೋರಿ ಶೋಕಾಸ್ ನೋಟಿಸ್ಗಳನ್ನು ನೀಡಿತ್ತು. ಇದೀಗ ಅವರನ್ನು ಅಮಾನತುಗೊಳಿಸಲಾಗಿದೆ.
ಈ ಶಾಸಕರು ಬಿಜೆಡಿ ಪಕ್ಷದ ಮೂಲ ತತ್ವವನ್ನು ಉಲ್ಲಂಘಿಸಿದ್ದಾರೆ ಎಂದು ಆದೇಶದಲ್ಲಿ ಹೇಳಲಾಗಿದೆ. ಮಾರ್ಚ್ 16ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನವು ಪಕ್ಷದ ವಿಪ್ ಮತ್ತು ಶಿಸ್ತಿನ ಉಲ್ಲಂಘನೆಯಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಶ್ರೀಲೀಲಾ (Sreeleela), ಕನ್ನಡದ ನಟಿ. ಈಗ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಸಖತ್ ಮಿಂಚುತ್ತಿದ್ದಾರೆ. ತೆಲುಗಿನಲ್ಲಂತೂ ನಂಬರ್ 1 ನಟಿ ಎನಿಸಿಕೊಂಡಿದ್ದಾರೆ. ಮಹೇಶ್ ಬಾಬು, ಪವನ್ ಕಲ್ಯಾಣ್ ಇನ್ನೂ ಕೆಲವು ಸ್ಟಾರ್ ನಟರುಗಳೊಟ್ಟಿಗೆ ನಟಿಸಿದ್ದಾರೆ. ತಮಿಳಿನಲ್ಲೂ ಸಹ ಸ್ಟಾರ್ ನಟರುಗಳೊಟ್ಟಿಗೆ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ಆಗಲೇ ಮೂರು ಸಿನಿಮಾಕ್ಕೆ ಎಸ್ ಹೇಳಿದ್ದು, ಒಂದು ಸಿನಿಮಾದ ಚಿತ್ರೀಕರಣವನ್ನೂ ಮುಗಿಸಿದ್ದಾರೆ. ಸ್ಟಾರ್ ಪ್ಯಾನ್ ಇಂಡಿಯಾ ನಟಿ ಎನಿಸಿಕೊಂಡಿದ್ದಾರೆ. ಇಷ್ಟು ಯಶಸ್ವಿ ನಟಿ ಆಗಿರುವ ಶ್ರೀಲೀಲಾ, ಕೆಲ ವರ್ಷಗಳ ಹಿಂದೆ ನಟನೆಯನ್ನು ತ್ಯಜಿಸಿ, ಚಿತ್ರರಂಗದಿಂದಲೇ ದೂರಾಗುವ ನಿರ್ಧಾರ ಮಾಡಿದ್ದರಂತೆ.
ಶ್ರೀಲೀಲಾ, ಪವನ್ ಕಲ್ಯಾಣ್ ಜೊತೆಗೆ ನಟಿಸಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟಿ ಶ್ರೀಲೀಲಾ ಭಾಗವಹಿಸಿದ್ದರು. ತೆಲುಗಿನ ಖ್ಯಾತ ನಿರೂಪಕಿ ಸುಮಾ ಕನಕಾಲ ಅವರೊಟ್ಟಿಗೆ ತಮಾಷೆಯ ಸಂದರ್ಶನದಲ್ಲಿ ಶ್ರೀಲೀಲಾ ಭಾಗಿ ಆಗಿದ್ದರು. ಅದೇ ಸಂದರ್ಶನದಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಮತ್ತೊಬ್ಬ ನಾಯಕ ನಟಿ ರಾಶಿ ಖನ್ನಾ ಸಹ ಭಾಗಿ ಆಗಿದ್ದರು.
ಕಾರ್ಯಕ್ರಮದಲ್ಲಿ ಟ್ರೋಲ್ಗಳ ಬಗ್ಗೆ ನಿರೂಪಕಿ ಸುಮಾ ಕನಕಾಲ ಅವರು ಶ್ರೀಲೀಲಾಗೆ ಪ್ರಶ್ನೆ ಕೇಳಿದರು. ಅದಕ್ಕೆ ಶ್ರೀಲೀಲಾ, ‘”ನಾನು ಸಿನಿಮಾಗಳಲ್ಲಿ ನಟಿಸುವುದನ್ನು ಆರಂಭಿಸಿದ್ದಾಗ ಟ್ರೋಲ್ಗಳ ಬಗ್ಗೆ ಬಹಳ ಭಯ ಆಗುತ್ತಿತ್ತು, ಟ್ರೋಲ್ಗಳು ಬಹಳ ಕೆಟ್ಟದು ಅನಿಸುತ್ತಿದ್ದವು. ಹಲವು ಬಾರಿ ಅತ್ತಿದ್ದು ಸಹ ಇದೆ. ಟ್ರೋಲ್ಗಳು ನನ್ನ ಮನಸ್ಸಿನ ಮೇಲೆ ಬಹಳ ಪ್ರಭಾವ ಬೀರುತ್ತಿದ್ದವು. ಎಷ್ಟರ ಮಟ್ಟಿಗೆಂದರೆ ನಾನು ಚಿತ್ರರಂಗವನ್ನೇ ಬಿಟ್ಟುಬಿಡಲು ತೀರ್ಮಾನಿಸಿದ್ದೆ. ‘ನನಗೆ ನಟಿಸಲು ಸಾಧ್ಯವಾಗುತ್ತದೆ ಎಂದು ಅನಿಸುತ್ತಿಲ್ಲ ಎಂದು ನಾನು ನನ್ನ ತಾಯಿಗೆ ಹೇಳಿದೆ. ನಾನು ಶಾಲೆ ಅಥವಾ ಕಾಲೇಜಿಗೆ ಹಿಂತಿರುಗಿಬಿಡುತ್ತೇನೆ’ ಎಂದಿದ್ದೆ. ನಾನು ತುಂಬಾ ಸೂಕ್ಷ್ಮವಾಗಿದ್ದೆ, ಆದರೆ ಈಗ ಹಾಗಿಲ್ಲ, ಟ್ರೋಲ್ಗಳು, ಅವರ ನಿಂದನೆ, ವ್ಯಂಗ್ಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ ನಟಿ.
ಅದೇ ಸಂದರ್ಶನದಲ್ಲಿ ಮುಂದುವರೆದು ಮಾತನಾಡಿ, ‘ಇತ್ತೀಚೆಗೆ ಜನ ತುಸು ಬುದ್ಧಿವಂತರು ಸಂವೇದಶೀಲರು ಆಗಿದ್ದಾರೆ ಅನಿಸುತ್ತದೆ. ಮೊದಲು ಬಹಳ ಒರಟಾಗಿ ಕಮೆಂಟ್ ಮಾಡುತ್ತಿದ್ದರು. ಆದರೆ ಈಗ ನೆಗೆಟಿವಿ ಇದೆಯೆಂದರೆ ತುಸು ಯೋಚಿಸುತ್ತಾರೆ, ಸರಿಯಾ? ತಪ್ಪಾ? ಎಂದು ಅವಲೋಕಿಸುತ್ತಾರೆ’ ಎಂದಿದ್ದಾರೆ ಶ್ರೀಲೀಲಾ. ಅದೇ ಸಂದರ್ಶನದಲ್ಲಿ ಇದ್ದ ರಾಶಿ ಖನ್ನಾ, ಟ್ರೋಲ್ಗಳ ಬಗ್ಗೆ ಮಾತನಾಡಿ, ‘ನನಗೆ ಟ್ರೋಲ್ಗಳು ಮಾನಸಿಕವಾಗಿ ಹಿಂಸೆ ನೀಡುತ್ತವೆ. ಏಕೆಂದರೆ ನಿಜ ಗೊತ್ತಿಲ್ಲದೇ ಅವರು ನಿರ್ಧಾರಗಳನ್ನು ಪ್ರಕಟಿಸುತ್ತಾರೆ, ಒಬ್ಬ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಮಾತನಾಡುತ್ತಾರೆ. ಹಾಗಾಗಿ ನನಗೆ ಅದರ ಬಗ್ಗೆ ಈಗಲೂ ಬೇಸರ ಇದೆ’ ಎಂದಿದ್ದಾರೆ.
ಶ್ರೀಲೀಲಾ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಾರ್ತಿಕ್ ಆರ್ಯನ್ ಜೊತೆ ‘ಆಶಿಖಿ 3’ನಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಇನ್ನೂ ಎರಡು ಹಿಂದಿ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ತಮಿಳಿನಲ್ಲಿ ನಟ ಧನುಶ್ ಜೊತೆಗೆ ಒಂದು ಹಾಗೂ ಶಿವಕಾರ್ತಿಕೇಯನ್ ಜೊತೆಗೆ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದಾರೆ. ಇನ್ನು ತೆಲುಗಿನಲ್ಲಿ ರವಿತೇಜ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಮತ್ತೊಂದು ಹೊಸ ಸಿನಿಮಾವನ್ನು ಸಹ ಶ್ರೀಲೀಲಾ ಒಪ್ಪಿಕೊಂಡಿದ್ದಾರೆ.
ಕಾರವಾರ, ಮಾರ್ಚ್ 21: ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಉತ್ತರ ಕನ್ನಡ ಜಿಲ್ಲೆಗೆ ಬರುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಟ್ರಾವೆಲ್ ಏಜೆಂಟ್ಸ್ ಮತ್ತು ಜಲಸಾಹಸ ಕ್ರಿಡಾ ಕಂಪನಿಗಳ ನಡುವೆ ದರ ನಗದಿ ವಿಚಾರವಾಗಿ ಭಾರೀ ಜಟಾಪಟಿ ನಡೆದಿದ್ದು, ಪ್ರವಾಸಿಗರು (Tourists) ಜಾಸ್ತಿ ಬಂದರೂ ನಿರೀಕ್ಷಿಸಿದಷ್ಟು ಲಾಭ ಸಿಗದೆ ಎಜೆಂಟರು ಒದ್ದಾಡುತ್ತಿದ್ದಾರೆ.
ಸದ್ಯ ಒಂದು ಕಡೆ ಸಾಲು ಸಾಲು ಹಬ್ಬ ಹಿನ್ನೆಲೆ ರಜೆ. ಮತ್ತೊಂದು ಕಡೆ ಮಕ್ಕಳ ಪರೀಕ್ಷೆ ಮುಗಿದಿದ್ದು, ಜಾಲಿ ಮಾಡುವ ಸಂದರ್ಭ. ಹೀಗಾಗಿ ಪ್ರವಾಸಿಗರು ವಾಟರ್ ಸ್ಪೋರ್ಟ್ಸ್ಗಾಗಿ ಉತ್ತರ ಕನ್ನಡ ಜಿಲ್ಲೆಯತ್ತ ಮುಖ ಮಾಡುತ್ತಿದ್ದಾರೆ. ಆದರೆ ಇದೆ ಸಂದರ್ಭದಲ್ಲಿ ಜಲಸಾಹಸ ಕ್ರೀಡಾ ಕಂಪನಿಗಳು ಮತ್ತು ಟ್ರಾವೆಲ್ ಏಜೆಂಟ್ಸ್ಗಳ ನಡುವಿನ ಜಟಾಪಟಿ ಕೂಡ ಉಂಟಾಗಿದೆ. ಪರಿಣಾಮ ನಿರೀಕ್ಷಿಸಿದ ಪ್ರಮಾಣದಲ್ಲಿ ಹಣ ಮಾಡುವುದಕ್ಕೆ ಆಗದ ಪರಿಸ್ಥಿತಿ ಉಂಟಾಗಿದೆ.
ಜಲಸಾಹಸ ನಡೆಸುವವ ನಡುವಿನ ವ್ಯಾಪಾರವನ್ನು ಏಜೆಂಟ್ಗಳು ಬಂಡಾವಳ ಮಾಡಿಕೊಂಡಿದ್ದಾರೆ. ಅತ್ಯಂತ ಕಡಿಮೆ ದರದಲ್ಲಿ ಜಲಸಾಹಸ ಕ್ರೀಡೆ ಮಾಡಿಸಿ ಪ್ರವಾಸಿಗರಿಂದ ಹೆಚ್ಚಿನ ಹಣ ಪಿಕುತ್ತಿದ್ದಾರೆ. ಆದರೆ ಈಗ ಜಲಸಾಹಸ ಕಂಪನಿಗಳು ಒಂದಾಗಿ ಸಿಂಗಲ್ ವಿಂಡೊ ಸಿಸ್ಟಮ್ ಜಾರಿಗೆ ತಂದಿದ್ದು, ಏಜೆಂಟ್ಗಳು ಪಡೆಯುತ್ತಿದ್ದ ದೊಡ್ಡ ಮಟ್ಟದ ಕಮಿಷನ್ಗೆ ಬ್ರೇಕ್ ಬಿದ್ದಂತಾಗಿದೆ.
ವಿಷಯ ಏನೆಂದರೆ ಜೋಯಿಡಾ ತಾಲೂಕಿನ ಗಣೇಶ ಗುಡಿಯ ಅತ್ಯಾಕರ್ಷಣೀಯ ನಿಸರ್ಗತಾಣದಲ್ಲಿ ಹರಿಯುವ ಕಾಳಿ ನದಿಯಲ್ಲಿ ಸುಮಾರು 5 ಕ್ಕೂ ಹೆಚ್ಚು ಬಗೆಯ ಜಲಸಾಹಸ ಕ್ರೀಡೆಗಳನ್ನ ನಡೆಸುತ್ತಾರೆ. ಇದಕ್ಕಾಗಿ ರಾಜ್ಯ ಹೊರರಾಜ್ಯಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಇತ್ತೀಚೆಗೆ ಜಲಸಾಹಸ ಕ್ರೀಡೆ ನಡೆಸುವ ಜೆಟ್ಟಿಗಳು ಹೆಚ್ಚಾಗಿದ್ದಾರೆ.
ಈ ಟ್ರಾವೆಲ್ ಏಜೆಂಟ್ಸ್ ಮಾತ್ರ ಪ್ರವಾಸಿಗರಿಂದ ತಲಾ 1500 ರೂ ಪಡೆದು ದೊಡ್ಡ ಮಟ್ಟದ ಲಾಭ ಗಳಿಸುತ್ತಿದ್ದರು. ಇತ್ತೀಚೆಗೆ ಜೆಟ್ಟಿ ಮಾಲಿಕರಿಗೆ ಆಗುತ್ತಿರುವ ನಷ್ಟವನ್ನ ಮನಗಂಡು ತಮ್ಮಲ್ಲಿನ ವೈಮನಸ್ಸು ಬದಿಗಿಟ್ಟು, ಕಳೆದ ಒಂದು ತಿಂಗಳಿನಿಂದ ಸಿಂಗಲ್ ವಿಂಡೋ ಸಿಸ್ಟಮ್ ಜಾರಿಗೆ ತಂದಿದ್ದಾರೆ. ಯಾರೇ ಪ್ರವಾಸಿಗರು ಬಂದರು ಒಂದೇ ಕಡೆ ಬುಕ್ಕಿಂಗ ಮಾಡಬೇಕಾಗಿದ್ದು, ತಲಾ 750 ರೂ ದರ ನಿಗದಿ ಮಾಡಿದ್ದಾರೆ. ಇದು ಏಜೆಂಟ್ಗಳಿಗೆ ನುಂಗಲಾರದ ತುತ್ತಾಗಿದ್ದು, ದೊಡ್ಡ ಮಟ್ಟದಲ್ಲಿ ನಷ್ಟ ಅನುಭವಿಸುವಂತಾಗಿದೆ.
ಇನ್ನು ತಮಗಾಗುತ್ತಿರುವ ನಷ್ಟವನ್ನ ಸಹಿಸಲಾರದ ಏಜೆಂಟ್ಗಳು ದೊಡ್ಡ ಮಟ್ಟದಲ್ಲಿ ಗಲಾಟೆ ಮಾಡಿಕೊಂಡಿದ್ದು, ಸದ್ಯ ಈ ವಿಚಾರ ಜೋಯಿಡಾ ತಹಶೀಲ್ದಾರ್ ಅಂಗಳಕ್ಕೆ ಬಂದು ತಲುಪಿದೆ. ನಿನ್ನೆ ಈ ಬಗ್ಗೆ ಮೂರು ಗಂಟೆಗಳ ಕಾಲ ಸಭೆ ಮಾಡಿದರು ಸಹಿತ, ಇದುವರೆಗೂ ಇಬ್ಬರ ನಡುವಿನ ಜಟಾಪಟಿ ಅಂತ್ಯ ಆಗಿಲ್ಲ.
ಮಾರ್ಚ್ 22ರಿಂದ 28ರವರೆಗೆ ನಾಲ್ಕನೇ ವಾರ. ದಶಮಾಧಿಪತಿಗಳ ಸಂಚಾರದಲ್ಲಿ ವ್ಯತ್ಯಾಸ ಆಗುವ ಕಾರಣ ಉದ್ಯೋಗದಲ್ಲಿ ಉದ್ಯಮದಲ್ಲಿ ಏರಿಳಿತಗಳು ಇರಲಿವೆ. ಸೂಕ್ಷ್ಮಮತಿಗಳಾಗಿ ನಿರ್ವಹಣೆ ಮಾಡುವುದು ಇರುತ್ತದೆ.
ಮೇಷ
ಅಧಿಪತಿ ಮಂಗಳ ಲಾಭ ಸ್ಥಾನದಲ್ಲಿದ್ದಾನೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಆರ್ಥಿಕ ಸ್ಥಿತಿ ಉತ್ತಮವಾಗಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಶನಿ ಪ್ರಭಾವದಿಂದ ಕೆಲಸದಲ್ಲಿ ವಿಳಂಬ ಸಾಧ್ಯತೆ ಇದೆ.
ವೃಷಭ
ಶುಕ್ರನ ಬಲದಿಂದ ಸುಖ, ಸಂತೋಷ ಹೆಚ್ಚಲಿದೆ. ದಶಮಾಧಿಪತಿ ಶನಿ ಹತ್ತನೇ ಮನೆಯಲ್ಲಿ ಇರುವುದರಿಂದ ಉದ್ಯೋಗದಲ್ಲಿ ಬಡ್ತಿ ಸಿಗುವ ಯೋಗವಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಎದುರಾಗಬಹುದು, ಎಚ್ಚರವಿರಲಿ.
ಮಿಥುನ
ಬುಧನ ಸಂಚಾರದಿಂದ ಬುದ್ಧಿವಂತಿಕೆ ಕೆಲಸ ಮಾಡಲಿದೆ. ವ್ಯಾಪಾರದಲ್ಲಿ ಲಾಭದಾಯಕ ಒಪ್ಪಂದಗಳು ಕೈಗೂಡಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ದಶಮಾಧಿಪತಿ ಗುರು ಹನ್ನೆರಡನೇ ಮನೆಯಲ್ಲಿ ಇರುವುದರಿಂದ ದೂರದ ಪ್ರಯಾಣ ಮತ್ತು ಧಾರ್ಮಿಕ ಕಾರ್ಯಗಳಿಗೆ ಧನವ್ಯಯವಾಗುವ ಸಾಧ್ಯತೆ ಇದೆ.
ಕರ್ಕಾಟಕ
ಚಂದ್ರನ ಚಲನೆ ಮಿಶ್ರಫಲ ನೀಡಲಿದೆ. ಮಾನಸಿಕವಾಗಿ ಸ್ವಲ್ಪ ಗೊಂದಲವಿರಬಹುದು. ದಶಮಾಧಿಪತಿ ಮಂಗಳ ಅಷ್ಟಮದಲ್ಲಿ ಇರುವುದರಿಂದ ವಾಹನ ಚಲಾಯಿಸುವಾಗ ಜಾಗ್ರತೆ ಅಗತ್ಯ. ಹಠಾತ್ ಧನಲಾಭದ ಸಾಧ್ಯತೆಯಿದೆ. ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರ ಪಡೆಯುವಿರಿ.
ಸಿಂಹ
ರವಿ ಎಂಟನೇ ಮನೆಯಲ್ಲಿ ಇರುವುದರಿಂದ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ದಶಮಾಧಿಪತಿ ಶುಕ್ರ ಸಪ್ತಮದಲ್ಲಿದ್ದು, ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭವಿರುತ್ತದೆ. ಸಾರ್ವಜನಿಕ ರಂಗದಲ್ಲಿ ಗೌರವ ಹೆಚ್ಚಾಗಲಿದೆ.
ಕನ್ಯಾ
ದಶಮಾಧಿಪತಿ ಬುಧ ಎಂಟನೇ ಮನೆಯಲ್ಲಿ ಇರುವುದರಿಂದ ವೃತ್ತಿಯಲ್ಲಿ ಅಡೆತಡೆಗಳು ಎದುರಾಗಬಹುದು. ಶತ್ರುಗಳ ಬಾಧೆ ನಿವಾರಣೆಯಾಗಲಿದೆ. ಸಾಲದ ಹೊರೆ ಕಡಿಮೆಯಾಗುವ ಸಂಭವವಿದೆ. ಸಂವಹನದಲ್ಲಿ ಸ್ಪಷ್ಟತೆ ಇರಲಿ. ಧೈರ್ಯದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ.
ತುಲಾ
ಶುಕ್ರನ ಅನುಗ್ರಹದಿಂದ ಕಲಾತ್ಮಕ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ದಶಮಾಧಿಪತಿ ಚಂದ್ರನ ಸಂಚಾರದಿಂದ ಮನಸ್ಸು ಚಂಚಲವಾಗಬಹುದು. ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ. ಹೂಡಿಕೆ ಮಾಡಲು ಇದು ಸಕಾಲ. ಮಕ್ಕಳ ಸಾಧನೆ ಸಂತಸ ತರಲಿದೆ.
ವೃಶ್ಚಿಕ
ದಶಮಾಧಿಪತಿ ರವಿ ಐದನೇ ಮನೆಯಲ್ಲಿ ಇರುವುದರಿಂದ ಗೌರವ ಸಿಗಲಿದೆ. ಮಂಗಳನ ಬಲದಿಂದ ಆಸ್ತಿ ಖರೀದಿ ಯೋಗವಿದೆ. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕೆಲಸದ ಒತ್ತಡ ಹೆಚ್ಚಿದ್ದರೂ ಗುರಿ ತಲುಪುವಿರಿ. ಆತುರದ ನಿರ್ಧಾರ ಬೇಡ.
ಧನು
ದಶಮಾಧಿಪತಿ ಬುಧನ ಅನುಗ್ರಹದಿಂದ ವ್ಯಾಪಾರ ವೃದ್ಧಿಯಾಗಲಿದೆ. ಸಣ್ಣ ಪ್ರವಾಸಗಳು ಲಾಭದಾಯಕವಾಗಿರಲಿವೆ. ಸಹೋದರರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ಆತ್ಮವಿಶ್ವಾಸದಿಂದ ಹೊಸ ಕೆಲಸಗಳನ್ನು ಆರಂಭಿಸಬಹುದು. ಆಧ್ಯಾತ್ಮಿಕ ಚಿಂತನೆ ಹೆಚ್ಚಲಿದೆ.
ಮಕರ
ಶನಿ ಸ್ವಕ್ಷೇತ್ರದಲ್ಲಿ ಇರುವುದರಿಂದ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದಶಮಾಧಿಪತಿ ಶುಕ್ರ ಎರಡನೇ ಮನೆಯಲ್ಲಿ ಇರುವುದರಿಂದ ಆರ್ಥಿಕವಾಗಿ ಸದೃಢರಾಗುವಿರಿ. ಸಿಹಿ ಮಾತುಗಳಿಂದ ಕೆಲಸ ಸಾಧಿಸಿಕೊಳ್ಳುವಿರಿ. ಕೌಟುಂಬಿಕ ವಾತಾವರಣ ಸುಖಮಯವಾಗಿರಲಿದೆ.
ಕುಂಭ
ಲಗ್ನದಲ್ಲೇ ಶನಿ ಇರುವುದರಿಂದ ಜವಾಬ್ದಾರಿಗಳು ಹೆಚ್ಚಲಿವೆ. ದಶಮಾಧಿಪತಿ ಮಂಗಳ ಲಗ್ನದಲ್ಲೇ ಇರುವುದರಿಂದ ಕೋಪದ ಮೇಲೆ ನಿಯಂತ್ರಣವಿರಲಿ. ಹಣಕಾಸಿನ ಹರಿವು ಸಾಧಾರಣವಾಗಿರಲಿದೆ. ಹಳೆಯ ಮಿತ್ರರ ಭೇಟಿಯಾಗುವ ಸಾಧ್ಯತೆಯಿದೆ.
ಮೀನ
ಗುರು ಲಗ್ನದಲ್ಲಿದ್ದು ಜ್ಞಾನ ವೃದ್ಧಿಸಲಿದೆ. ದಶಮಾಧಿಪತಿ ಗುರು ಶುಭ ಸ್ಥಾನದಲ್ಲಿದ್ದಾನೆ. ಹೊಸ ಹೂಡಿಕೆಗಳಿಗೆ ಇದು ಸೂಕ್ತ ಸಮಯವಲ್ಲ. ವಿದೇಶಿ ಸಂಬಂಧಗಳಿಂದ ಲಾಭವಾಗಲಿದೆ. ದಾನ, ಧರ್ಮದಲ್ಲಿ ಆಸಕ್ತಿ ಹೆಚ್ಚಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಬೇಸಿಗೆ ಕಾಲದಲ್ಲಿ ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳಲು ಅನೇಕರು ಎಸಿ (AC) ಬಳಕೆ ಮಾಡುತ್ತಾರೆ. ಆದರೆ ಕೆಲವರಿಗೆ ಎಸಿ ಇದ್ದಲ್ಲಿಂದ ಹೊರಬಂದ ಕೂಡಲೇ ತಲೆನೋವು, ಒಂದು ರೀತಿಯ ಸುಸ್ತಾದಂತೆ ಅನುಭವವಾಗುತ್ತದೆ. ಕೆಲವರಿಗೆ ತಲೆಸುತ್ತು, ಕಣ್ಣಿನಲ್ಲಿ ನೋವು, ಮೂಗು ಬ್ಲಾಕ್ ಆಗುವುದು, ಗಂಟಲು ಒಣಗುವುದು ಮತ್ತು ದೇಹದಲ್ಲಿ ಸ್ವಲ್ಪ ದುರ್ಬಲತೆ ಕೂಡ ಕಾಣಿಸಬಹುದು. ತಣ್ಣನೆಯ ವಾತಾವರಣದಿಂದ ಏಕಾಏಕಿ ಬಿಸಿ ವಾತಾವರಣಕ್ಕೆ ಬರುವಾಗ ದೇಹಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ. ಇದರಿಂದ ಅಸಹಜತೆ ಹೆಚ್ಚಾಗುತ್ತದೆ. ಹಲವರು ಈ ರೀತಿ ಆಗುವುದನ್ನು ನಿರ್ಲಕ್ಷಿಸುತ್ತಾರೆ, ಆದರೆ ಈ ರೀತಿ ಪದೇ ಪದೇ ಆಗುತ್ತಿದ್ದರೆ ಅದನ್ನು ಕಡೆಗಣಿಸುವುದು ಒಳ್ಳೆಯದಲ್ಲ. ಆದರೆ ಅದಕ್ಕೂ ಮೊದಲು ಈ ರೀತಿ ಆಗುವುದಕ್ಕೆ ಕಾರಣವೇನು, ಇದನ್ನು ತಡೆಯಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಕಾರಣವೇನು?
ಆರ್ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಎಸಿಯಲ್ಲಿ ಹೆಚ್ಚು ಸಮಯ ಕಳೆದರೆ ದೇಹ ತಣ್ಣಗಿರುವ ತಾಪಮಾನಕ್ಕೆ ಹೊಂದಿಕೊಳ್ಳುತ್ತದೆ. ನಂತರ ಏಕಾಏಕಿ ಹೊರಗಿನ ಬಿಸಿ ಗಾಳಿಗೆ ಬಂದಾಗ ದೇಹಕ್ಕೆ ತಾಪಮಾನ ಬದಲಾವಣೆಗೆ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ಇದರಿಂದ ತಲೆನೋವು ಮತ್ತು ದೌರ್ಬಲ್ಯ ಉಂಟಾಗಬಹುದು. ತಣ್ಣನೆಯ ಗಾಳಿಯಲ್ಲಿ ಹೆಚ್ಚು ಸಮಯ ಕಳೆದರೆ ದೇಹದಲ್ಲಿ ನೀರಿನ ಕೊರತೆ (ಡಿಹೈಡ್ರೇಷನ್) ಉಂಟಾಗಬಹುದು. ಹಾಗಾದಾಗಲೂ ಈ ರೀತಿಯ ಸಮಸ್ಯೆ ಉಂಟಾಗುತ್ತದೆ. ಎಸಿ ಗಾಳಿ ಸಾಮಾನ್ಯವಾಗಿ ಒಣಗಿದಂತಿರುತ್ತದೆ. ಇದು ಮೂಗು ಮತ್ತು ಗಂಟಲಿನ ಮೇಲೆ ಪರಿಣಾಮ ಬೀರಿ ಅಸಹಜತೆಯನ್ನು ಉಂಟುಮಾಡುತ್ತದೆ. ಜೊತೆಗೆ, ಎಸಿಯನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಅದರಲ್ಲಿ ಧೂಳು ಅಥವಾ ಅಲರ್ಜಿ ಉಂಟುಮಾಡುವ ಕಣಗಳು ಸಂಗ್ರಹವಾಗುತ್ತವೆ, ಇದು ಸಮಸ್ಯೆಯನ್ನು ಹೆಚ್ಚಿಸಬಹುದು.
ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 2026 ರ ಟಿ20 ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲದಿರಬಹುದು, ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ನಲ್ಲಿ ಅದ್ಭುತ ಇನ್ನಿಂಗ್ಸ್ ಆಡಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ 2026 ರ ಐಪಿಎಲ್ನಲ್ಲೂ (IPL 2026) ಅದೇ ಆಟವನ್ನು ಮುಂದುವರೆಸಲು ಅಭಿಷೇಕ್ ಶರ್ಮಾ ಸಜ್ಜಾಗಿದ್ದಾರೆ. ಲೀಗ್ನ ಮೊದಲ ಪಂದ್ಯದಲ್ಲೇ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ (RCB vs SRH) ಮುಖಾಮುಖಿಯಾಗುತ್ತಿದ್ದು, ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಆದರೆ ಅದಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಅಭಿಷೇಕ್ 94 ರನ್ಗಳ ಅಬ್ಬರದ ಇನ್ನಿಂಗ್ಸ್ ಆಡಿದರು.
ಸನ್ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 21 ರ ಶನಿವಾರದಂದು ತಮ್ಮ ತವರು ಮೈದಾನವಾದ ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ತಮ್ಮ ಮೊದಲ ಅಭ್ಯಾಸ ಪಂದ್ಯವನ್ನು ಆಡಿತು. ತಂಡದ ಸದಸ್ಯರ ನಡುವೆ ನಡೆದ ಈ ಪಂದ್ಯದಲ್ಲಿ ಅಭಿಷೇಕ್ , ಇಶಾನ್, ಹೆನ್ರಿಕ್ ಕ್ಲಾಸೆನ್ ಮತ್ತು ಲಿಯಾಮ್ ಲಿವಿಂಗ್ಸ್ಟೋನ್ರಂತಹ ಸ್ಫೋಟಕ ಬ್ಯಾಟ್ಸ್ಮನ್ಗಳು ಎಲ್ಲರೂ ಒಂದೇ ತಂಡದಲ್ಲಿದ್ದರು.
ಅಭಿಷೇಕ್ ಸ್ಫೋಟಕ ಇನ್ನಿಂಗ್ಸ್
ಎಸ್ಆರ್ಹೆಚ್ ಎ ಮತ್ತು ಎಸ್ಆರ್ಹೆಚ್ ಬಿ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಹೆಚ್ ಎ ತಂಡದ ಪರ ಇಶಾನ್ ಕಿಶನ್ ಮತ್ತು ಅಭಿಷೇಕ್ ಜೋಡಿ ಇನ್ನಿಂಗ್ಸ್ ಆರಂಭಿಸಿತು. ಆದಾಗ್ಯೂ ಇಶಾನ್ ಕಿಶನ್ 14 ಎಸೆತಗಳಲ್ಲಿ ಕೇವಲ 18 ರನ್ಗಳಿಸಿ ಔಟಾದರು. ಇತ್ತ ಅಬ್ಬರದ ಆರಂಭ ಪಡೆದ ಅಭಿಷೇಕ್ ಶರ್ಮಾ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೈದರು. ಇದರ ಪರಿಣಾಮವಾಗಿ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಶತಕದಂಚಿನಲ್ಲಿ ಎಡವಿದ ಅಭಿಷೇಕ್ ಕೇವಲ 42 ಎಸೆತಗಳಲ್ಲಿ 94 ರನ್ ಗಳಿಸಿದರು.
ಅಭಿಷೇಕ್ ಶರ್ಮಾ ಜೊತೆಗೆ ಹೆನ್ರಿಕ್ ಕ್ಲಾಸೆನ್ ಕೂಡ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಇವರಿಬ್ಬರ ಆಟದಿಂದಾಗಿ ಈ ಎಸ್ಆರ್ಹೆಚ್ ಎ ತಂಡವು ಕೇವಲ 13 ಓವರ್ಗಳಲ್ಲಿ 160 ಕ್ಕಿಂತ ಹೆಚ್ಚು ಸ್ಕೋರ್ ಕಲೆಹಾಕಿತು. ಅಂತಿಮವಾಗಿ 20 ಓವರ್ಗಳಲ್ಲಿ ಎಸ್ಆರ್ಹೆಚ್ ಎ ತಂಡ 9 ವಿಕೆಟ್ಗಳ ನಷ್ಟಕ್ಕೆ 253 ರನ್ ಕಲೆಹಾಕಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ, ಮಾರ್ಚ್ 21: ಕೇರಳ ವಿಧಾನಸಭಾ ಚುನಾವಣೆಗೆ (Kerala Assembly Elections) ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನೇತೃತ್ವದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಮಾರ್ಚ್ 18ರಂದು ಸಭೆ ಸೇರಿ ಪಟ್ಟಿಗಳನ್ನು ಬಿಡುಗಡೆ ಮಾಡಿತು. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಸಭೆಯಲ್ಲಿ ಹಾಜರಿದ್ದರು.
ಮಾರ್ಚ್ 16ರಂದು ಬಿಜೆಪಿ ಕೇರಳದ ಮೊದಲ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ನಂತರ ಮಾರ್ಚ್ 19ರಂದು 39 ಹೆಸರುಗಳನ್ನು ಒಳಗೊಂಡ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಇದುವರೆಗೆ ಬಿಜೆಪಿ 97 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.
ಇಂದು ಘೋಷಿಸಲಾದ ಬಿಜೆಪಿಯ ಪಟ್ಟಿಯ ಪ್ರಕಾರ, ಬಿಜೆಪಿ ತಿರುವನಂತಪುರಂನಿಂದ ಜಿಲ್ಲಾಧ್ಯಕ್ಷ ಕರಮಣ ಜಯನ್ ಅವರನ್ನು ಕಣಕ್ಕಿಳಿಸಿದೆ. ಅವರು ಎಲ್ಡಿಎಫ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಟ ಸುಧೀರ್ ಕರಮಣ ಮತ್ತು ಯುಡಿಎಫ್ ನಾಯಕ ಸಿ.ಪಿ ಜಾನ್ ಅವರನ್ನು ಎದುರಿಸಲಿದ್ದಾರೆ. ಎಲ್ಡಿಎಫ್ ಮಿತ್ರ ಪಕ್ಷವಾದ ಜನಾಧಿಪತ್ಯ ಕೇರಳ ಕಾಂಗ್ರೆಸ್ (ಜೆಕೆಸಿ)ನ ಹಾಲಿ ಶಾಸಕ ಆಂಥೋನಿ ರಾಜು ಅವರನ್ನು ಸಾಕ್ಷ್ಯ ತಿರುಚುವ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಯಿತು.
ಉದ್ಯಮಿ ಎಸ್ ರಾಜಶೇಖರನ್ ನಾಯರ್ ಅವರನ್ನು ನೆಯ್ಯಟ್ಟಿಂಕರದಿಂದ ಕಣಕ್ಕಿಳಿಸಲಾಗಿದೆ. ಇದಕ್ಕೂ ಮೊದಲು, 2021ರಲ್ಲಿ ಅವರು ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ನಟ ವಿವೇಕ್ ಗೋಪನ್ ಅವರನ್ನು ಪುತ್ತುಪ್ಪಳ್ಳಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.
ಕೇರಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9ರಂದು ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಕೇರಳದ ಎಲ್ಲಾ 140 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಂಗಳೂರು ಮೂಲದ ನಟಿ ಸ್ನೇಹಾ ಉಲ್ಲಾಳ್ (Sneha Ullal), ಬಾಲಿವುಡ್ನ (Bollywood) ಜನಪ್ರಿಯ ನಟಿಯರಲ್ಲಿ ಒಬ್ಬರು. ಒಮನ್ನಲ್ಲಿ ಹುಟ್ಟಿದ್ದರಾದರೂ ಅವರದ್ದು ಮಂಗಳೂರು ಮೂಲ. ಸಲ್ಮಾನ್ ಖಾನ್ ನಟನೆಯ ‘ಲಕ್ಕಿ’ ಸಿನಿಮಾ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟರು. ಅದೂ ಅವರು ಚಿತ್ರರಂಗಕ್ಕೆ ಬರಲು ಐಶ್ವರ್ಯಾ ರೈ ಅವರೊಟ್ಟಿಗಿನ ಹೋಲಿಕೆಯೇ ಕಾರಣ. ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಆರಂಭದ ದಿನಗಳು, ಸಲ್ಮಾನ್ ಖಾನ್ ಅವರೊಂದಿಗಿನ ಒಡನಾಟ ಮತ್ತು ಐಶ್ವರ್ಯ ರೈ ಅವರೊಂದಿಗಿನ ಭೇಟಿಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಅವರು ಐಶ್ವರ್ಯಾ ರೈ ಅವರ ಬಳಿ ಕ್ಷಮೆ ಕೇಳಿರುವ ಬಗ್ಗೆ ಹೇಳಿಕೊಂಡಿದ್ದಾರೆ.
2005ರಲ್ಲಿ ‘ಲಕ್ಕಿ: ನೋ ಟೈಮ್ ಫಾರ್ ಲವ್’ ಚಿತ್ರದ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ ಸ್ನೇಹಾ, ಅಂದು ವಿಶ್ವ ಸುಂದರಿ ಐಶ್ವರ್ಯ ರೈ ಅವರಂತೆಯೇ ಕಾಣುತ್ತಿದ್ದರು ಎಂಬ ಕಾರಣಕ್ಕೆ ಭಾರೀ ಸುದ್ದಿಯಾಗಿದ್ದರು. ಮಾಧ್ಯಮಗಳು ತನ್ನನ್ನು ಐಶ್ವರ್ಯ ರೈ ಅವರ ತದ್ರೂಪು ಎಂದು ಕರೆಯುತ್ತಿದ್ದ ಕಾಲದಲ್ಲಿ ಸ್ನೇಹಾ ಅವರು ಐಶ್ವರ್ಯರನ್ನು ಭೇಟಿಯಾಗಿದ್ದರಂತೆ. ಸಂದರ್ಶನದಲ್ಲಿ ಆ ಸಂದರ್ಭವನ್ನು ನೆನಪಿಸಿಕೊಂಡಿರುವ ಸ್ನೇಹಾ ಉಲ್ಲಾಳ್ , ‘ನಾನು ಐಶ್ವರ್ಯರನ್ನು ಭೇಟಿಯಾದಾಗ ಅವರಿಗೆ ಕ್ಷಮೆ ಕೇಳಿದೆ. ಮಾಧ್ಯಮಗಳಲ್ಲಿ ಆಗುತ್ತಿದ್ದ ಹೋಲಿಕೆಗಳಿಂದಾಗಿ ಅವರು ನನ್ನ ಮೇಲೆ ಸಿಟ್ಟಾಗಿರಬಹುದು ಎಂಬ ಭಯ ನನಗಿತ್ತು. ಪ್ಲೀಸ್ ನನ್ನನ್ನು ದ್ವೇಷಿಸಬೇಡಿ ಎಂದು ಅವರಲ್ಲಿ ವಿನಂತಿಸಿದೆ’ ಎಂದು ಹೇಳಿದ್ದಾರೆ. ಆದರೆ ಐಶ್ವರ್ಯ ರೈ ಅವರು ನನ್ನೊಂದಿಗೆ ಅತ್ಯಂತ ಪ್ರೀತಿಯಿಂದ ನಡೆದುಕೊಂಡರು, ‘ಬಾಲಿವುಡ್ ಕುಟುಂಬಕ್ಕೆ ನಿನಗೆ ಸ್ವಾಗತ’ ಎಂದು ಐಶ್ವರ್ಯಾ ಹೇಳಿದರು ಎಂದು ಸ್ನೇಹಾ ನೆನಪು ಮಾಡಿಕೊಂಡಿದ್ದಾರೆ.
ಸಲ್ಮಾನ್ ಖಾನ್ ಅವರ ಬಗ್ಗೆ ಮಾತನಾಡಿದ ಸ್ನೇಹಾ, ಚಿತ್ರೀಕರಣದ ಸಮಯದಲ್ಲಿ ಅವರು ತಮಗೆ ನೀಡಿದ ಬೆಂಬಲವನ್ನು ಸ್ಮರಿಸಿದ್ದಾರೆ. ‘ಸಲ್ಮಾನ್, ನನ್ನ ಬಗ್ಗೆ ಎಂದಿಗೂ ಅಸಹನೆ ತೋರಲಿಲ್ಲ. ನಾನು ಆಗ ತಾನೇ ಕಾಲೇಜು ಮುಗಿಸಿ ಬಂದ ಹೊಸಬಳಾಗಿದ್ದೆ. ಸಲ್ಮಾನ್ ಅತ್ಯಂತ ತಾಳ್ಮೆಯಿಂದ ನನಗೆ ಎಲ್ಲವನ್ನೂ ಹೇಳಿಕೊಟ್ಟರು. ನನ್ನ ವಿರುದ್ಧ ಸಿಟ್ಟು ಪ್ರದರ್ಶಿಸಲಿಲ್ಲ, ಅಹಂ ತೋರಿಸಲಿಲ್ಲ’ ಎಂದು ಸ್ನೇಹಾ ತಿಳಿಸಿದ್ದಾರೆ.
ತಮಗೆ ನಟಿಯಾಗುವುದು ಇಷ್ಟವೇ ಇರಲಿಲ್ಲ ಎಂದಿರುವ ಸ್ನೇಹಾ, ಸಲ್ಮಾನ್ ಖಾನ್ ಅವರ ತಂಗಿ ಅರ್ಪಿತಾ ಅವರ ಗೆಳೆಯರು ಸ್ನೇಹಾರನ್ನು ಮೊದಲ ಬಾರಿಗೆ ಕಾಲೇಜಿನಲ್ಲಿ ನೋಡಿದರಂತೆ. ಅದೇ ಸಮಯದಲ್ಲಿ ಸಲ್ಮಾನ್ ಮತ್ತು ಐಶ್ವರ್ಯ ರೈ ಅವರ ಸಂಬಂಧ ಮುರಿದುಬಿದ್ದಿತ್ತು. ಸ್ನೇಹಾ ನೋಡಲು ಐಶ್ವರ್ಯಾ ರೈ ರೀತಿ ಇದ್ದ ಕಾರಣದಿಂದಾಗಿಯೇ ಅವರನ್ನು ‘ಲಕ್ಕಿ: ನೋ ಟೈಮ್ ಫಾರ್ ಲವ್’ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದರು. ಆ ಬಗ್ಗೆತೂ ಪ್ರತಿಕ್ರಿಯಿಸಿದ ಸ್ನೇಹಾ, ‘ಅದೊಂದು ಪ್ರಚಾರ ತಂತ್ರವಾಗಿತ್ತು, ನಾನು ತುಂಬಾ ಚಿಕ್ಕವಳಾಗಿದ್ದರಿಂದ ಆ ಹೋಲಿಕೆಗಳು ನನಗೆ ಎಂದೂ ಬೇಸರ ತರಲಿಲ್ಲ’ ಎಂದಿದ್ದಾರೆ.
ಸಲ್ಮಾನ್ ಖಾನ್ ಜೊತೆಗೆ ಲಾಂಚ್ ಆದರೂ ಸಹ ಸ್ನೇಹಾ ಉಲ್ಲಾಲ್ ಹೆಚ್ಚು ಯಶಸ್ವಿ ಆಗಿದ್ದು ದಕ್ಷಿಣದ ಸಿನಿಮಾಗಳಲ್ಲಿ ಅದರಲ್ಲೂ ತೆಲುಗಿನಲ್ಲಿ ‘ಉಲ್ಲಾಸಂಗಾ, ಉತ್ಸಾಹಂಗ’ ಸೇರಿದಂತೆ ಕೆಲವು ಒಳ್ಳೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ‘ದೇವಿ’ ಸಿನಿಮಾನಲ್ಲಿಯೂ ನಟಿಸಿದ್ದಾರೆ.
ಬೆಂಗಳೂರು, ಮಾರ್ಚ್ 21: ಗಲ್ಫ್ ರಾಷ್ಟ್ರಗಳ ಯುದ್ಧದಿಂದಾಗಿ ಕಚ್ಛಾ ತೈಲ ಪೂರೈಕೆಯಲ್ಲಿ ಮಾತ್ರ ಸಮಸ್ಯೆಯಾಗಿಲ್ಲ. ಪ್ಲಾಸ್ಟಿಕ್, ಫೈಬರ್, ಐರನ್ ಮತ್ತು ಇತರೆ ಲೋಹಗಳ ಸರಬರಾಜಿನಲ್ಲೂ ವ್ಯತ್ಯಯವಾಗಿದೆ. ಇದ್ರಿಂದ ಆಟೋಮೊಬೈಲ್ ಇಂಡಸ್ಟ್ರಿಗೂ ಬಿಸಿ ತಟ್ಟಿದೆ. ಮುಂದಿನ ವಾರದ ಬಳಿಕ ಕಾರು ಹಾಗೂ ಬೈಕ್ಗಳ ದರ ಶೇಕಡ 10ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿ ಕಾರುಗಳ ಮೇಲೆ 40ರಿಂದ 50ಸಾವಿರದಷ್ಟು ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಮಾರುತಿ ಸುಜಕಿ, ಟಾಟಾ ಮೋಟಾರ್ಸ್, ಮಹೀಂದ್ರಾ, ಕಿಯಾ, ಮರ್ಸಿಡಿಸ್ ಬೆಂಜ್ನಂತಹ ಕಂಪನಿಗಳು ಕೂಡ ಬೆಲೆ ಹೆಚ್ಚಿಸಲು ಪ್ಲ್ಯಾನ್ ಮಾಡಿವೆ.