Headlines

nagaraj11081993

IPL 2026: 42 ಎಸೆತಗಳಲ್ಲಿ 94 ರನ್ ಬಾರಿಸಿದ ಅಭಿಷೇಕ್ ಶರ್ಮಾ

ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 2026 ರ ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲದಿರಬಹುದು, ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್‌ನಲ್ಲಿ ಅದ್ಭುತ ಇನ್ನಿಂಗ್ಸ್ ಆಡಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ 2026 ರ ಐಪಿಎಲ್​ನಲ್ಲೂ (IPL 2026) ಅದೇ ಆಟವನ್ನು ಮುಂದುವರೆಸಲು ಅಭಿಷೇಕ್ ಶರ್ಮಾ ಸಜ್ಜಾಗಿದ್ದಾರೆ. ಲೀಗ್​ನ ಮೊದಲ ಪಂದ್ಯದಲ್ಲೇ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ಮುಖಾಮುಖಿಯಾಗುತ್ತಿದ್ದು, ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ…

Read More

ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ 11 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ನವದೆಹಲಿ, ಮಾರ್ಚ್ 21: ಕೇರಳ ವಿಧಾನಸಭಾ ಚುನಾವಣೆಗೆ (Kerala Assembly Elections) ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನೇತೃತ್ವದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಮಾರ್ಚ್ 18ರಂದು ಸಭೆ ಸೇರಿ ಪಟ್ಟಿಗಳನ್ನು ಬಿಡುಗಡೆ ಮಾಡಿತು. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಸಭೆಯಲ್ಲಿ ಹಾಜರಿದ್ದರು. ಮಾರ್ಚ್ 16ರಂದು ಬಿಜೆಪಿ ಕೇರಳದ ಮೊದಲ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ನಂತರ ಮಾರ್ಚ್ 19ರಂದು 39 ಹೆಸರುಗಳನ್ನು ಒಳಗೊಂಡ…

Read More

ಐಶ್ವರ್ಯಾ ರೈ ಬಳಿ ಕ್ಷಮೆ ಕೇಳಿದ್ದ ನಟಿ ಸ್ನೇಹಾ ಉಲ್ಲಾಳ್: ಕಾರಣ?

ಮಂಗಳೂರು ಮೂಲದ ನಟಿ ಸ್ನೇಹಾ ಉಲ್ಲಾಳ್ (Sneha Ullal), ಬಾಲಿವುಡ್​​ನ (Bollywood) ಜನಪ್ರಿಯ ನಟಿಯರಲ್ಲಿ ಒಬ್ಬರು. ಒಮನ್​​ನಲ್ಲಿ ಹುಟ್ಟಿದ್ದರಾದರೂ ಅವರದ್ದು ಮಂಗಳೂರು ಮೂಲ. ಸಲ್ಮಾನ್ ಖಾನ್ ನಟನೆಯ ‘ಲಕ್ಕಿ’ ಸಿನಿಮಾ ಮೂಲಕ ಬಾಲಿವುಡ್​​ಗೆ ಎಂಟ್ರಿ ಕೊಟ್ಟರು. ಅದೂ ಅವರು ಚಿತ್ರರಂಗಕ್ಕೆ ಬರಲು ಐಶ್ವರ್ಯಾ ರೈ ಅವರೊಟ್ಟಿಗಿನ ಹೋಲಿಕೆಯೇ ಕಾರಣ. ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಆರಂಭದ ದಿನಗಳು, ಸಲ್ಮಾನ್ ಖಾನ್ ಅವರೊಂದಿಗಿನ ಒಡನಾಟ ಮತ್ತು ಐಶ್ವರ್ಯ ರೈ ಅವರೊಂದಿಗಿನ ಭೇಟಿಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 21: ಗಲ್ಫ್​ ರಾಷ್ಟ್ರಗಳ ಯುದ್ಧದಿಂದಾಗಿ ಕಚ್ಛಾ ತೈಲ ಪೂರೈಕೆಯಲ್ಲಿ ಮಾತ್ರ ಸಮಸ್ಯೆಯಾಗಿಲ್ಲ. ಪ್ಲಾಸ್ಟಿಕ್, ಫೈಬರ್, ಐರನ್​​ ಮತ್ತು ಇತರೆ ಲೋಹಗಳ ಸರಬರಾಜಿನಲ್ಲೂ ವ್ಯತ್ಯಯವಾಗಿದೆ. ಇದ್ರಿಂದ ಆಟೋಮೊಬೈಲ್​​ ಇಂಡಸ್ಟ್ರಿಗೂ ಬಿಸಿ ತಟ್ಟಿದೆ. ಮುಂದಿನ ವಾರದ ಬಳಿಕ ಕಾರು ಹಾಗೂ ಬೈಕ್​​ಗಳ ದರ ಶೇಕಡ 10ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿ ಕಾರುಗಳ ಮೇಲೆ 40ರಿಂದ 50ಸಾವಿರದಷ್ಟು ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಮಾರುತಿ ಸುಜಕಿ, ಟಾಟಾ ಮೋಟಾರ್ಸ್, ಮಹೀಂದ್ರಾ, ಕಿಯಾ, ಮರ್ಸಿಡಿಸ್​​​ ಬೆಂಜ್​ನಂತಹ…

Read More

2027 ರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ?

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ (T20 World Cup) ಗೆದ್ದಿರುವ ಟೀಂ ಇಂಡಿಯಾದ (Team India) ಮುಂದಿನ ಗುರಿ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ (2027 World Cup) ಗೆಲ್ಲುವುದಾಗಿದಾಗಿದೆ. ಇದಕ್ಕೆ ಪೂರಕವಾಗಿ ಟಿ20 ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ್ದ ಹೆಡ್ ಕೋಚ್ ಗೌತಮ್ ಗಂಭೀರ್, ಐಪಿಎಲ್ ಮುಗಿದ ಬಳಿಕ ಏಕದಿನ ವಿಶ್ವಕಪ್‌ಗೆ ಸಿದ್ಧತೆಗಳು ಪ್ರಾರಂಭವಾಗಲಿವೆ ಎಂದಿದ್ದರು. ಆದರೆ ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ, ಐಪಿಎಲ್​ಗೂ ಮುನ್ನವೇ ತನ್ನ…

Read More

ಭಾರತದ ಧಾರ್ಮಿಕ ಸ್ವಾತಂತ್ರ್ಯದ ಕುರಿತ USCIRF ವರದಿಗೆ 275 ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳಿಂದ ವಿರೋಧ

ಬೆಂಗಳೂರು, ಮಾರ್ಚ್ 21: ಭಾರತದ ಬಗ್ಗೆ ಅಮೆರಿಕದ ಸ್ವತಂತ್ರ ಸಂಸ್ಥೆಯಾದ USCIRF (ಯುನೈಟೆಡ್ ಸ್ಟೇಟ್ಸ್ ಕಮಿಷನ್ ಫಾರ್ ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್) ನೀಡಿದ ವರದಿಯನ್ನು ಭಾರತದ ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು, ಮಿಲಿಟರಿ ಸಿಬ್ಬಂದಿ ಸೇರಿದಂತೆ ಒಟ್ಟು 275 ಜನರು ತೀವ್ರವಾಗಿ ವಿರೋಧಿಸಿದ್ದಾರೆ. ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕುಸಿತವಾಗಿದೆ ಎಂದು USCIRF ಹೇಳಿತ್ತು. ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಒತ್ತಡ ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಮುಸ್ಲಿಮರು ಮತ್ತು ಕ್ರೈಸ್ತರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು USCIRF ವರದಿಯಲ್ಲಿ ಉಲ್ಲೇಖಿಸಲಾಗಿತ್ತು….

Read More

ವಾಣಿಜ್ಯ ಬಳಕೆ ಸಿಲಿಂಡರ್​ ಅಭಾವ: ಬೆಂಗಳೂರು ಹೋಟೆಲ್​​ಗಳಿಗೆ 150 ಕೋಟಿ ರೂ ನಷ್ಟ

ಬೆಂಗಳೂರು, ಮಾರ್ಚ್​ 21: ಗಲ್ಫ್ ಯುದ್ಧದಿಂದ ಇರಾನ್ ಹೊರ್ಮುಝ್ ಜಲಸಂಧಿ ಮುಚ್ಚಿದೆ. ಭಾರತಕ್ಕೆ ಅಡುಗೆ ಅನಿಲ, ತೈಲ ಹೊತ್ತು ಬರ್ತಿದ್ದ 22 ಹಡಗುಗಳು ಇರಾನ್ ಹಿಡಿತದಲ್ಲಿವೆ. ಇದರಿಂದ ಕರ್ನಾಟಕ ಸೇರಿದಂತೆ ದೇಶದಾದ್ಯಂತೆ ಗ್ಯಾಸ್​ ಸಿಲಿಂಡರ್ ಕೊರತೆ ತಾಂಡವವಾಡುತ್ತಿದೆ. ವಾಣಿಜ್ಯ ಬಳಕೆ ಸಿಲಿಂಡರ್​ (Commercial Gas) ಅಭಾವದಿಂದ ಬೆಂಗಳೂರಿನ ಹೋಟೆಲ್‌ಗಳಿಗೆ 150 ಕೋಟಿ ರೂ ನಷ್ಟವಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​​​ಗಳ ಸಮಸ್ಯೆಯಿಂದ ಎದುರಾಗಿರುವ ಸಂಕಷ್ಟ ಅಷ್ಟಿಷ್ಟಲ್ಲ….

Read More

ನಟಿ ಭಾವನಾ ರಾಮಣ್ಣ ಪುತ್ರಿಯ ನಾಮಕರಣ, ಮಗಳಿಗೆ ಅಜ್ಜಿಯ ಹೆಸರು: ಚಿತ್ರಗಳ ನೋಡಿ

ಭಾವನಾ ರಾಮಣ್ಣ ಅವರ ಅಜ್ಜಿಯ ಹೆಸರು ರುಕ್ಮಿಣಿ ಅಂತೆ. ಅದರಂತೆ ಭಾವನಾ ಅವರು ತಮ್ಮ ಮುದ್ದಾದ ಮಗಳಿಗೆ ರುಕ್ಮಿಣಿ ಎಂದೇ ಹೆಸರಿಟ್ಟಿದ್ದಾರೆ. ಭಾವನಾ ರಾಮಣ್ಣ ಅವರು ಎಂಟು ತಿಂಗಳ ಗರ್ಭಿಣಿ ಆಗಿದ್ದಾಗ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಈ ವೇಳೆ ಒಂದು ಮಗು ತೀರಿಕೊಂಡು ಒಂದು ಮಗು ಮಾತ್ರವೇ ಜನಿಸಿತು. ಅದೇ ಮಗುವಿಗೆ ಈಗ ನಾಮಕರಣ ಮಾಡಲಾಗಿದೆ. ಇಂದು (ಮಾರ್ಚ್ 21) ಭಾವನಾ ರಾಮಣ್ಣ ಅವರು ತಮ್ಮ ಮಗಳಿಗೆ ನಾಮಕರಣ ಮಾಡಿದ್ದಾರೆ. ಕೆಲ ಆಪ್ತರ ಹಾಜರಿಯಲ್ಲಿ…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು ಪಟ್ಟಿ ಇಲ್ಲಿದೆ

ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಭಾರಿ ಪ್ರಶಂಸೆ ಗಳಿಸಿದ್ದ ‘ವಲವಾರ’ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇಬ್ಬರು ಮಕ್ಕಳು ಮತ್ತು ಹಸುವಿನ ಸುತ್ತ ನಡೆಯುವ ಈ ಕತೆ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿತ್ತು. ಇದೀಗ ಈ ಸಿನಿಮಾವನ್ನು ಸನ್​​ನೆಕ್ಸ್ಟ್​​ನಲ್ಲಿ ವೀಕ್ಷಿಸಬಹುದು. ಅರ್ಜುನ್ ಸರ್ಜಾ ನಿರ್ದೇಶಿಸಿ, ಅವರ ಪುತ್ರಿ ಐಶ್ವರ್ಯಾ ನಾಯಕಿಯಾಗಿ, ಉಪೇಂದ್ರ ಅವರ ಅಣ್ಣನ ಪುತ್ರ ನಿರಂಜನ್ ನಾಯಕನಾಗಿ ನಟಿಸಿರುವ ‘ಸೀತಾಪಯಣ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಸನ್​​ನೆಕ್ಸ್ಟ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ. ‘ಪೀಕಿ ಬ್ಲೈಂಡರ್ಸ್’ ಜನಪ್ರಿಯ ವೆಬ್…

Read More

ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಯಾವುದು? ಆರ್​ಸಿಬಿಗೆ ಯಾವ ಸ್ಥಾನ?

ಐಪಿಎಲ್ ಎಂದರೆ ಬೌಂಡರಿ ಮತ್ತು ಸಿಕ್ಸರ್​ಗಳ ಅಬ್ಬರ. ಇಲ್ಲಿ ಬ್ಯಾಟ್ಸ್‌ಮನ್​ಗಳಿಗೆ ಸಿಗುವಷ್ಟು ಮನ್ನಣೆ ಬೌಲರ್​ಗಳಿಗೆ ಸಿಗುವುದಿಲ್ಲ. ಅದರಲ್ಲೂ ತಂಡದಲ್ಲಿ ಸಿಕ್ಸ್ ಹಿಟ್ಟರ್‌ಗಳ ದಂಡೇ ಇದ್ದರೆ ಆ ತಂಡಕ್ಕೆ ಅಭಿಮಾನಿಗಳ ಬಳಗ ಹೆಚ್ಚಿರುತ್ತದೆ. ಅದರಂತೆ ಅಭಿಮಾನಿಗಳನ್ನು ರಂಜಿಸಿ ಇದುವರೆಗೆ ನಡೆದಿರುವ 18 ಆವೃತ್ತಿಗಳ ಐಪಿಎಲ್​ನಲ್ಲಿ ಯಾವ ತಂಡ ಹೆಚ್ಚು ಸಿಕ್ಸ್​ಗಳನ್ನು ಹೊಡೆದಿದೆ ಎಂಬುದನ್ನು ನೋಡುವುದಾದರೆ.. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಇಲ್ಲಿಯವರೆಗೆ, ತಂಡವು ಒಟ್ಟು…

Read More