ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ಮಾವ ಗಂಭೀರ ಆರೋಪ
ಆನೇಕಲ್, ಮಾರ್ಚ್ 21: ಶಿವಮೊಗ್ಗದ ಹುಲಿಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಮೃತ ಸಮೀಕ್ಷಾ ರೆಡ್ಡಿ ಮಾವ ನವೀನ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಂದಿನಿಂದಲೂ ಕಾಡು ಪ್ರಾಣಿಗಳೆಂದರೆ ಸಮೀಕ್ಷಾಗೆ ಹೆಚ್ಚು ಪ್ರೀತಿ. ನೂರಾರು ಕೋಟಿ ರೂ ಆಸ್ತಿ ಇದ್ರೂ ಸೇವೆ ಮಾಡಬೇಕೆಂಬ ಹಂಬಲ ಇತ್ತು….