All posts by nagaraj11081993

ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಹಲ್ಲೆ; ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!

ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಹಲ್ಲೆ; ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!

ಮೂಡಿಗೆರೆ , ಮಾ,21: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿ ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅನುಮತಿ ಪಡೆಯದೆ ಆಟವಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 7 ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ಲಾಸ್ಟಿಕ್ ಪೈಪ್ ಮತ್ತು ಬೆಲ್ಟ್‌ನಿಂದ ಥಳಿಸಲಾಗಿದೆ. ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ನಡುವೆ ಸಣ್ಣ ಗಲಾಟೆ ನಡೆದಿತ್ತು. ಈ ಸಿಟ್ಟಿನಲ್ಲಿದ್ದ ಪ್ರಿನ್ಸಿಪಾಲ್, ಶನಿವಾರ ಬೆಳಿಗ್ಗೆ ಅನುಮತಿ ಪಡೆಯದೆ ಮೈದಾನದಲ್ಲಿ ಆಟವಾಡುತ್ತಿದ್ದ 7 ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.ಪ್ರಿನ್ಸಿಪಾಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ಸೇರಿ ವಿದ್ಯಾರ್ಥಿಗಳ ಕೈಕಾಲುಗಳಿಗೆ ಬಾಸುಂಡೆ ಬರುವಂತೆ ಪ್ಲಾಸ್ಟಿಕ್ ಪೈಪ್ ಹಾಗೂ ಬೆಲ್ಟ್‌ನಿಂದ ಮನಸೋಇಚ್ಛೆ ಹೊಡೆದಿದ್ದಾರೆ. ಬಳಿಕ ವಿದ್ಯಾರ್ಥಿಗಳನ್ನು ರೂಮಿನೊಳಗೆ ಹಾಕಿ ಬೀಗ ಹಾಕಿದ್ದಾರೆ. ವಸತಿ ಶಾಲೆಯ ರೂಮಿನೊಳಗಿಂದ ವಿದ್ಯಾರ್ಥಿಗಳ ಕಿರುಚಾಟ ಮತ್ತು ಅಳು ಕೇಳಿ ಪಕ್ಕದ ಕಾಫಿ ತೋಟದ ಕಾರ್ಮಿಕರು ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರೂಮಿನಲ್ಲಿದ್ದ 7 ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಏಳು ವಿದ್ಯಾರ್ಥಿಗಳನ್ನು ಪೊಲೀಸರು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರಿನ್ಸಿಪಾಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ಅವರ ಹೆಸರನ್ನು ಪೊಲೀಸರಿಗೆ ತಿಳಿಸಿದ್ದು, ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನದಲ್ಲಿ ‘ಧುರಂಧರ್ 2’ ಚಿತ್ರಕ್ಕೆ ಹೆಚ್ಚಿದ ಬೇಡಿಕೆ; ಮುಗಿಬಿದ್ದು ನೋಡ್ತಿರೋ ಜನ

ಭಾರತದ ಸಿನಿಮಾಗಳು ಪಾಕಿಸ್ತಾನದಲ್ಲಿ, ಪಾಕಿಸ್ತಾನದ ಸಿನಿಮಾಗಳು ಭಾರತದಲ್ಲಿ ರಿಲೀಸ್ ಆಗೋದಿಲ್ಲ. ಇದನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಆದಾಗ್ಯೂ ಭಾರತದ ಕೆಲವು ಸಿನಿಮಾಗಳನ್ನು ಪಾಕಿಸ್ತಾನದಲ್ಲಿ ಕದ್ದು ನೋಡಲಾಗುತ್ತದೆ. ‘ಧುರಂಧರ್’ ಸಿನಿಮಾ ಪಾಕಿಸ್ತಾನದಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು! ಅಲ್ಲಿನ ಜನರು ಪೈರಸಿ ಕಾಪಿಯನ್ನು ನೋಡಿದ್ದರು. ಈಗ ‘ಧುರಂಧರ್ 2’ ಚಿತ್ರದ ಪೈರಸಿ ಕಾಪಿಯನ್ನು ಪಾಕಿಸ್ತಾನದಲ್ಲಿ ನೋಡಲಾಗುತ್ತಿದೆ.

ಪಾಕಿಸ್ತಾನದಲ್ಲಿ ಭಾರತದ ಸಿನಿಮಾಗಳಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಭಾರತದ ಸಾಕಷ್ಟು ಸಿನಿಮಾಗಳನ್ನು ಅವರು ಪಾಕಿಸ್ತಾನದಲ್ಲಿ ನೋಡುತ್ತಾರೆ. ಪಾಕಿಸ್ತಾನಿ ರಿಪೋರ್ಟರ್ ಈಗ ‘ಧುರಂಧರ್ 2’ ಸಿನಿಮಾ ವೀಕ್ಷಿಸಿದ್ದಾರೆ. ಅದು ಕೂಡ ಪೈರಸಿ ಕಾಪಿಯನ್ನು. ಟಿವಿಯಲ್ಲಿ ‘ಧುರಂಧರ್ 2’ ಸಿನಿಮಾ ನೋಡಿದ ವಿಡಿಯೋನ ಅವರು ಹಂಚಿಕೊಂಡಿದ್ದಾರೆ.

ಖಲೀದ್ ಮೆಹಮೂದ್ ಎಂಬ ವ್ಯಕ್ತಿ ವಿಡಿಯೀ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಅವರು ‘ಧುರಂಧರ್ 2’ ಸಿನಿಮಾ ನೋಡುತ್ತಿದ್ದಾರೆ. ಸಿನಿಮಾ ಆರಂಭದ ವಿಡಿಯೋನ ಅವರು ಹಂಚಿಕೊಂಡಿದ್ದಾರೆ. ‘ಧುರಂಧರ್ 2 ಚಿತ್ರವನ್ನು ಲಾಹೋರ್​ನಲ್ಲಿ ನೋಡುತ್ತಿದ್ದೇನೆ’ ಎಂದಿದ್ದಾರೆ. ಅವರ ಬಯೋದಲ್ಲಿ ಪಾಕಿಸ್ತಾದ ಸುದ್ದಿ ಪತ್ರಿಕೆಯಲ್ಲಿ ಪತ್ರಕರ್ತ ಎಂದು ಬರೆದುಕೊಂಡಿದ್ದಾರೆ.

ಈ ಸಂದರ್ಭದ ಪೋಸ್ಟ್ ವೈರಲ್ ಆಗಿದೆ. ‘ಟಿವಿ ಸ್ಕ್ರಿನ್ ಅಲ್ಲಿ ಕ್ರ್ಯಾಕ್ ಕಾಣಿಸುತ್ತಿದೆ. ಟಿ20 ವಿಶ್ವಕಪ್ ಫಿನಾಲೆ ನೋಡಿದ್ರಾ’ ಎಂದು ಕೇಳಿದ್ದಾರೆ ಕೆಲವರು. ‘ಸಿನಿಮಾ ಎಷ್ಟು ಅದ್ಭುತವಾಗಿದೆ ಎಂದರೆ ಪಾಕಿಸ್ತಾನದವರೂ ಎಂಜಾಯ್ ಮಾಡುತ್ತಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ‘ಪಾಕಿಸ್ತಾನದಲ್ಲಿ ಭಾರತ ಸ್ಪೈ’ ಎಂದು ಕೆಲವರು ಬರೆದಿದ್ದಾರೆ.

ಇದನ್ನೂ ಓದಿ: ‘ಇಂತಹ ಸಿನಿಮಾ ಮಾಡಲು ಧೈರ್ಯ ಬೇಕು’; ‘ಧುರಂಧರ್ 2’ ಹಾಡಿ ಹೊಗಳಿದ ರಾಜಮೌಳಿ

‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಅರ್ಜುನ್ ರಾಂಪಾಲ್ ನಟಿಸಿದ್ದಾರೆ. ಧುರಂಧರ್  ಚಿತ್ರವನ್ನು ಆದಿತ್ಯಧಾರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಗಮನ ಸೆಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಕೇವಲ 55 ಎಸೆತಗಳಲ್ಲಿ ಸ್ಫೋಟಕ ಶತಕ ಚಚ್ಚಿದ ಅಂಗ್‌ಕ್ರಿಶ್ ರಘುವಂಶಿ

ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ 2026 ರ ಐಪಿಎಲ್​ನಲ್ಲಿ ಮಾರ್ಚ್​ 29 ರಿಂದ ತನ್ನ ಅಭಿಯಾನವನ್ನು ಶುರುಮಾಡಿದೆ. ಕೆಕೆಆರ್ ತಂಡ ತನ್ನ ಮೊದಲ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹೀಗಾಗಿ ಈ ಪಂದ್ಯಕ್ಕೆ ಬಲಿಷ್ಠ ಪ್ಲೇಯಿಂಗ್ 11 ಕಟ್ಟುವ ಸಲುವಾಗಿ ಕೆಕೆಆರ್ ಫ್ರಾಂಚೈಸಿ ತಮ್ಮ ತಂಡದೊಳಗೆ ಎರಡೆರಡು ತಂಡಗಳನ್ನು ನಿರ್ಮಿಸಿ ಅಭ್ಯಾಸ ಪಂದ್ಯವನ್ನು ಆಡಿತು. ಅದರಲ್ಲಿ ತಂಡದಲ್ಲಿರುವ 21 ವರ್ಷದ ಯುವ ಬ್ಯಾಟ್ಸ್‌ಮನ್ ಅಂಗ್‌ಕ್ರಿಶ್ ರಘುವಂಶಿ ಕೇವಲ 55 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿ ತಂಡದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಮಾರ್ಚ್ 20 ರ ಶುಕ್ರವಾರದಂದು ತಮ್ಮ ತವರು ಮೈದಾನವಾದ ಈಡನ್ ಗಾರ್ಡನ್ಸ್‌ನಲ್ಲಿ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಆಡಿತು. ಇಡೀ ತಂಡವನ್ನು ಗೋಲ್ಡ್ ನೈಟ್ಸ್ ಮತ್ತು ಪರ್ಪಲ್ ನೈಟ್ಸ್ ಎಂಬ ಎರಡು ಪ್ರತ್ಯೇಕ ತಂಡಗಳಾಗಿ ವಿಂಗಡಿಸಲಾಗಿತ್ತು. ಈ ಪಂದ್ಯದಲ್ಲಿ ಗೋಲ್ಡ್ ನೈಟ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ 199 ರನ್ ಕಲೆಹಾಕಿತು. ತಂಡದ ಪರ ರಿಂಕು ಸಿಂಗ್ 40 ರನ್ ಗಳಿಸಿದರೆ, ಹೊಸ ಆರಂಭಿಕ ಆಟಗಾರ ಟಿಮ್ ಸೀಫರ್ಟ್ 30 ರನ್ ಗಳಿಸಿದರು. ಯುವ ಬ್ಯಾಟ್ಸ್‌ಮನ್ ಸಾರ್ಥಕ್ ರಂಜನ್ ಕೂಡ 37 ರನ್​ಗಳ ಕಾಣಿಕೆ ನೀಡಿದರು. ಇತ್ತ ಪರ್ಪಲ್ ನೈಟ್ಸ್ ತಂಡದ ಪರ ವೇಗಿ ಕಾರ್ತಿಕ್ ತ್ಯಾಗಿ 3 ವಿಕೆಟ್ ಪಡೆದರು.

ರಘುವಂಶಿ ಸ್ಫೋಟಕ ಶತಕ

ಈ ಗುರಿ ಬೆನ್ನಟ್ಟಿದ ಪರ್ಪಲ್ ನೈಟ್ಸ್‌ ತಂಡಕ್ಕೆ ಫಿನ್ ಅಲೆನ್ ಸ್ಫೋಟಕ ಆರಂಭ ನೀಡಿದರು. ಆದರೆ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಬೇಗನೆ ಔಟಾದರು. ಆ ಬಳಿಕ ಕಣಕ್ಕಿಳಿದ 21 ವರ್ಷದ ಬ್ಯಾಟ್ಸ್‌ಮನ್ ಅಂಗ್‌ಕ್ರಿಶ್ ರಘುವಂಶಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಅಂಡರ್-19 ವಿಶ್ವಕಪ್‌ನಲ್ಲಿ ಭಾರತೀಯ ತಂಡದ ಭಾಗವಾಗಿದ್ದ ರಘುವಂಶಿ ನಿಧಾನವಾಗಿ ಪ್ರಾರಂಭಿಸಿದರಾದರೂ ಆ ನಂತರ ತಮ್ಮ ಬ್ಯಾಟಿಂಗ್ ಗೇರ್ ಬದಲಿಸಿ, 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕ ಕೇವಲ 55 ಎಸೆತಗಳಲ್ಲಿ ಶತಕದ ಗಡಿ ದಾಟಿದರು.

ತಂಡವನ್ನು ಗೆಲ್ಲಿಸಿದ ರಘುವಂಶಿ

ಇನ್ನಿಂಗ್ಸ್‌ನ 20 ನೇ ಓವರ್‌ನ ಎರಡನೇ ಎಸೆತದಲ್ಲಿ ಅವರು ಬೌಂಡರಿ ಬಾರಿಸಿ, ಶತಕ ಪೂರೈಸುವುದರೊಂದಿಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ ಒಂಬತ್ತು ಬೌಂಡರಿ ಮತ್ತು ಐದು ಸಿಕ್ಸರ್‌ಗಳನ್ನು ಬಾರಿಸಿದ ರಘುವಂಶಿ, 187 ರ ಬಿರುಸಿನ ಸ್ಟ್ರೈಕ್ ರೇಟ್‌ನಲ್ಲಿ 103 ರನ್ ಕಲೆಹಾಕಿದರು. ಅವರ ಈ ಇನ್ನಿಂಗ್ಸ್ ಪರ್ಪಲ್ ನೈಟ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಗೆಲ್ಲಲು ಸಹಾಯ ಮಾಡಿತು. ರಘುವಂಶಿ ಅವರ ಇನ್ನಿಂಗ್ಸ್ ಕೋಲ್ಕತ್ತಾದ ಬ್ಯಾಟಿಂಗ್ ವಿಭಾಗಕ್ಕೆ ಆನೆಬಲ ತಂದಿದೆ.

ಏಕೆಂದರೆ ಶ್ರೇಯಸ್ ಅಯ್ಯರ್ ನಿರ್ಗಮನದ ಬಳಿಕ ತಂಡದ ಬ್ಯಾಟಿಂಗ್‌ ವಿಭಾಗ ಬಲಹೀನವಾಗಿ ಕಾಣುತ್ತಿತ್ತು. ಆದರೆ ಈ ಬಾರಿ ಕೆಲವರ ಆಗಮನದ ಬಳಿಕ ಅದು ಬಲಿಷ್ಠವಾಗಿ ಕಾಣುತ್ತಿದೆ. ಅಭ್ಯಾಸ ಪಂದ್ಯದಲ್ಲಿ ಶತಕ ಬಾರಿಸಿರುವ ರಘುವಂಶಿ, ಲೀಗ್​ನಲ್ಲಿ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆ ಶಿವಕುಮಾರ್​​​​ನ್ನ ಸಿಎಂ ಮಾಡಿ ಎಂದ ಸ್ವಾಮೀಜಿಗಳಿಗೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ: ಪ್ರಣವಾನಂದಶ್ರೀ

ಬೆಂಗಳೂರು, ಮಾರ್ಚ್​ 21: ಮೇ ತಿಂಗಳಲ್ಲಿ ಅರಮನೆ ಮೈದಾನದಲ್ಲಿ ಬೃಹತ್ ಮಠಾಧೀಶ್ವರ ಮಹಾಸಭೆ ವಿಚಾರವಾಗಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಡಿಸಿಎಂ ಡಿಕೆ ಶಿವಕುಮಾರ್​​ನ್ನ ಇಂದು ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಕೆ ಶಿವಕುಮಾರ್​ ಪರ ಮಾತಾಡಿದ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಬಜೆಟ್​ನಲ್ಲಿ ಸ್ವಾಮೀಜಿಗಳಿಗೆ ಒಂದು ರೂಪಾಯಿ ಕೂಡ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಸಿಎಂ ಪರವಾಗಿ ಮಾತನಾಡಿದ ಸ್ವಾಮೀಜಿಗಳಿಗೆ ಭೂಮಿ ಕೊಟ್ಟಿದ್ದಾರೆ. ಬಡ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಯಾಕೆ ಅನುದಾನ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಬೇಕು. ಡಿಕೆ ಶಿವಕುಮಾರ್​​​ನ್ನ ಸಿಎಂ ಮಾಡಬೇಕು ಎಂದು ವರಿಷ್ಠರಿಗೆ ಮನವಿ ಮಾಡ್ತೇವೆ ಎಂದಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಡಿಕೆ ಶಿವಕುಮಾರ್​​​​ನ್ನ ಸಿಎಂ ಮಾಡಿ ಎಂದ ಸ್ವಾಮೀಜಿಗಳಿಗೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ: ಪ್ರಣವಾನಂದಶ್ರೀ

ಬೆಂಗಳೂರು, ಮಾರ್ಚ್​ 21: ಮೇ ತಿಂಗಳಲ್ಲಿ ಅರಮನೆ ಮೈದಾನದಲ್ಲಿ ಬೃಹತ್ ಮಠಾಧೀಶ್ವರ ಮಹಾಸಭೆ ವಿಚಾರವಾಗಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಡಿಸಿಎಂ ಡಿಕೆ ಶಿವಕುಮಾರ್​​ನ್ನ ಇಂದು ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಕೆ ಶಿವಕುಮಾರ್​ ಪರ ಮಾತಾಡಿದ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಬಜೆಟ್​ನಲ್ಲಿ ಸ್ವಾಮೀಜಿಗಳಿಗೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಿಎಂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಸಿಎಂ ಪರವಾಗಿ ಮಾತನಾಡಿದ ಸ್ವಾಮೀಜಿಗಳಿಗೆ ಭೂಮಿ ಕೊಟ್ಟಿದ್ದಾರೆ. ಬಡ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಯಾಕೆ ಅನುದಾನ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಬೇಕು. ಡಿಕೆ ಶಿವಕುಮಾರ್​​​ನ್ನ ಸಿಎಂ ಮಾಡಬೇಕು ಎಂದು ವರಿಷ್ಠರಿಗೆ ಮನವಿ ಮಾಡ್ತೇವೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!

ಬೆಳಗಾವಿ, ಮಾರ್ಚ್​ 21: ಜಿಲ್ಲೆಯಲ್ಲಿ ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಗುರಿಯಾಗಿಸಿಕೊಂಡು 15 ಕೋಟಿ ರೂಪಾಯಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಡಿಜಿಟಲ್ ಅರೆಸ್ಟ್ (Digital Arrest) ಎಂದು ಬೆದರಿಸಿರುವ ವಂಚಕರು ಕೋಟಿಗಟ್ಟಲೆ ಹಣ ದೋಚಿದ್ದಾರೆ. ಪ್ರಕರಣ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ.

ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡ ವಂಚಕರು

ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ವಿಡಿಯೋ ಕಾಲ್ ಮಾಡಿ ಬೆದರಿಸಿದ್ದ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಹೇಳಿ ಭಯ ಹುಟ್ಟಿಸಿದ್ದರು. ತನಿಖೆ ನಡೆಯುತ್ತಿದೆ, ಹಣವನ್ನು ಸುರಕ್ಷತೆಗೆ ಬೇರೆ ಖಾತೆಗೆ ವರ್ಗಾಯಿಸಿ, ಬಳಿಕ ಮರಳಿಸುತ್ತೇವೆ ಎಂದು ನಂಬಿಸಿ ಹಂತ ಹಂತವಾಗಿ 15 ಕೋಟಿ ರೂ. ವರ್ಗಾಯಿಸಿಕೊಂಡಿದ್ದರು. ಬಳಿಕ ಸಂಪರ್ಕ ಕಡಿತಗೊಂಡಾಗ ವೃದ್ಧ ಉದ್ಯಮಿಗೆ ಅನುಮಾನ ಬಂದು ಮಾರ್ಚ್ 18ರಂದು ಬೆಳಗಾವಿ ನಗರದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೋದಿ ಸರ್ಕಾರ!

90 ಲಕ್ಷ ರೂ. ಇರುವ ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೊಲೀಸರು

ಪೊಲೀಸರು ತಕ್ಷಣ ಕ್ರಮ ಕೈಗೊಂಡು ವಂಚಕರ ಖಾತೆಗಳನ್ನು ಫ್ರೀಜ್ ಮಾಡಿದ್ದು, 15 ಕೋಟಿಯಲ್ಲಿ 90 ಲಕ್ಷ ರೂ. ಇರುವ ಖಾತೆಯನ್ನು ತಡೆಹಿಡಿದಿದ್ದಾರೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಒಂದೇ ತಿಂಗಳಲ್ಲಿ ಮೂವರು ಹಿರಿಯ ನಾಗರಿಕರು ಇಂತಹ ವಂಚನೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ, ಇಂತಹ ಬೆದರಿಕೆಗಳಿಗೆ ಹೆದರದೇ ತಕ್ಷಣ ಪೊಲೀಸರಿಗೆ ದೂರು ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ!

ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದ ಬಳಿ ರಂಜಾನ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದು, ಸುಮಾರು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆನಗೋಡು ಗ್ರಾಮದ ಬಳಿ ಜನರು ರಂಜಾನ್ ನಮಾಜ್ ಮಾಡುತ್ತಿದ್ದ ಸಂದರ್ಭದಲ್ಲಿ, ಕೆಲವು ಯುವಕರು ಅಲ್ಲಿದ್ದ ಹೆಜ್ಜೇನು ಗೂಡಿಗೆ ಕಲ್ಲೆಸೆದಿದ್ದಾರೆ ಎನ್ನಲಾಗಿದೆ. ಇದರಿಂದ ಕೆರಳಿದ ಹೆಜ್ಜೇನುಗಳ ಗುಂಪು ಪ್ರಾರ್ಥನೆಯಲ್ಲಿದ್ದ ಜನರ ಮೇಲೆ ಏಕಾಏಕಿ ಎರಗಿದೆ. ಹೆಜ್ಜೇನು ದಾಳಿ ಮಾಡುತ್ತಿದ್ದಂತೆ ಮಕ್ಕಳು, ಮಹಿಳೆಯರು ಸೇರಿದಂತೆ ಅಲ್ಲಿದ್ದ ನೂರಾರು ಜನರು ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ. ಈ ಗದ್ದಲದಲ್ಲಿ ಸುಮಾರು 25 ಜನರು ಹೆಜ್ಜೇನು ಕಡಿತಕ್ಕೆ ಒಳಗಾಗಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡವರನ್ನು ತಕ್ಷಣವೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಐವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಐಸಿಯು ವಿಭಾಗದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ, ಸಂತ್ರಸ್ತರಿಗೆ ವೈಯಕ್ತಿಕವಾಗಿ ಚಿಕಿತ್ಸಾ ವೆಚ್ಚಕ್ಕೆ ಧನಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನ ನಾಗರಿಕರಿಗೆ ಜಲಮಂಡಳಿಯಿಂದ ಗುಡ್​ನ್ಯೂಸ್​; ಬಿಲ್ ಬಾಕಿ ಇರುವ ಗ್ರಾಹಕರ ಬಡ್ಡಿ ಮನ್ನಾ!

ಬೆಂಗಳೂರು, ಮಾರ್ಚ್​ 21: ನಾಗರಿಕರಿಗೆ ಜಲಮಂಡಳಿಯಿಂದ ಸಿಹಿಸುದ್ದಿ ಲಭಿಸಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬಡ್ಡಿ ಮನ್ನಾ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಬಾಕಿ ಇರುವ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ

ಮಾಧ್ಯಮ ಪ್ರಕಟಣೆ ಮೂಲಕ ಈ ಮಾಹಿತಿ ನೀಡಿರುವ ಅವರು, ಏಪ್ರಿಲ್ ತಿಂಗಳಿಂದ ಮೂರು ತಿಂಗಳ ಅವಧಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಬಾಕಿ ನೀರಿನ ಬಿಲ್ ಪಾವತಿಸಿದರೆ ಶೇ100ರಷ್ಟು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ.

ಇದನ್ನೂ ಓದಿ ಮಿನಿ ಕುರುಕ್ಷೇತ್ರ: ಸುರ್ಜೇವಾಲ ಜೊತೆಗಿನ ಹೈವೋಲ್ಟೇಜ್​​​ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಮೂರು ತಿಂಗಳಷ್ಟೇ ಅವಕಾಶ

ಗೃಹ, ವಾಣಿಜ್ಯ ಹಾಗೂ ಕೈಗಾರಿಕಾ ಸೇರಿದಂತೆ ಎಲ್ಲಾ ವರ್ಗದ ಗ್ರಾಹಕರಿಗೂ ಈ ಸೌಲಭ್ಯ ಅನ್ವಯವಾಗಲಿದೆ. ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯ ಎಲ್ಲಾ ಬಳಕೆದಾರರು ಇದರ ಪ್ರಯೋಜನ ಪಡೆಯಬಹುದು.ಈ ವಿಶೇಷ ಅವಕಾಶವನ್ನು ಮುಂದಿನ ಮೂರು ತಿಂಗಳಲ್ಲಿ ಬಳಸಿಕೊಳ್ಳುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಇಂತಹ ಸಿನಿಮಾ ಮಾಡಲು ಧೈರ್ಯ ಬೇಕು’; ‘ಧುರಂಧರ್ 2’ ಹಾಡಿ ಹೊಗಳಿದ ರಾಜಮೌಳಿ

ಖ್ಯಾತ ನಿರ್ದೇಶಕ ಎಸ್​​ಎಸ್​ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ದೊಡ್ಡ ನಿರ್ದೇಶಕರಾದರೂ ಯಾವುದೇ ಸಿನಿಮಾ ರಿಲೀಸ್ ಆದರೂ ಆ ಚಿತ್ರವನ್ನು ನೋಡಿ ವಿಮರ್ಶೆ ತಿಳಿಸುತ್ತಾರೆ. ಈಗ ‘ಧುರಂಧರ್ 2’ ಸಿನಿಮಾವನ್ನು ಅವರು ವೀಕ್ಷಿಸಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಲವು ವಿಷಯಗಳು ಇಷ್ಟ ಆಗಿವೆ. ಈ ಬಗ್ಗೆ ಅವರು ಟ್ವಿಟರ್ ಅಲ್ಲಿ ತಮ್ಮ ವಿಮರ್ಶೆಯನ್ನು ಹಂಚಿಕೊಂಡಿದ್ದಾರೆ. ರಣವೀರ್ ಸಿಂಗ್ ನಟನೆ ಅವರಿಗೆ ಇಷ್ಟ ಆಗಿದೆ.

ತೆಲುಗಿನಲ್ಲಿ ಮಹೇಶ್ ಬಾಬು, ಅಲ್ಲು ಅರ್ಜುನ್ ಸೇರಿದಂತೆ ಅನೇಕರು ರಾಜಮೌಳಿ ಸಿನಿಮಾನ ವೀಕ್ಷಣೆ ಮಾಡಿದ್ದಾರೆ. ಎಲ್ಲರೂ ‘ಧುರಂಧರ್ 2’ ಸಿನಿಮಾ ವೀಕ್ಷಣೆ ಮಾಡಿ ವಿಮರ್ಶೆ ತಿಳಿಸಿದ್ದಾರೆ. ಈಗ ರಾಜಮೌಳಿ ಸರದಿ. ಅವರಿಗೂ ಸಿನಿಮಾ ಇಷ್ಟ ಆಗಿದೆ. ಮೊದಲ ಭಾಗಕ್ಕಿಂತ ಎರಡನೇ ಭಾಗ ಚೆನ್ನಾಗಿದೆ ಎಂದು ಅವರು ಹೇಳಿದ್ದಾರೆ.

‘ಧುರಂಧರ್ 2 ಸಿನಿಮಾದ ಬರಹ, ಪಾತ್ರವರ​್ಗ, ತಾಂತ್ರಿಕವಾಗಿ ಸಿನಿಮಾ ತಂದಿದ್ದು, ಸಂಗೀತ, ಡಿಸೈನ್, ನಿರ್ದೇಶನ ಎಲ್ಲವೂ ಅದ್ಭುತ. ಭಾವನಾತ್ಮಕ ಅಂಶಗಳು ಉತ್ತಮವಾಗಿವೆ. ಬರವಣಿಗೆಯು ಟ್ವಿಸ್ಟ್​​ಗಳನ್ನು ಅದ್ಭುತವಾಗಿ ಮೂಡಿಸಿದೆ. 4 ಗಂಟೆಗಳ ಸಿನಿಮಾ ಮಾಡಿ ಅದನ್ನು ಬಿಡುಗಡೆ ಮಾಡಲು ಧೈರ್ಯ ಬೇಕು. ಕೊನೆಯ ಫ್ರೇಮ್‌ನವರೆಗೂ ಜನರನ್ನು ಸಿನಿಮಾ ಹಿಡಿದಿಡುತ್ತದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ

‘ರಣವೀರ್ ಸಿಂಗ್ ಅವರೇ ಎಂತಹ ಅದ್ಭುತ ಪರ್ಫಾರ್ಮೆನ್ಸ್. ಶೆಡ್‌ನಲ್ಲಿ ನಡೆಯುವ ಸನ್ನಿವೇಶ ನಟನೆಯಲ್ಲಿ ಒಂದು ಮಾಸ್ಟರ್‌ಕ್ಲಾಸ್. ನೀವು ಹಮ್ಜಾ ಮತ್ತು ಜಸ್ಕಿರತ್ ಆಗಿ ನಮ್ಮಿಬ್ಬರನ್ನೂ ಮಂತ್ರಮುಗ್ಧಗೊಳಿಸಿದ್ದೀರಿ. ಮಾಧವನ್ ಕೂಡ ಅದ್ಭಯತ. ಅದ್ಭುತ ಯಶಸ್ಸಿಗೆ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೋದಿ ಸರ್ಕಾರ!

ದೆಹಲಿ, ಮಾ.21: ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ‘ಡಿಜಿಟಲ್ ಅರೆಸ್ಟ್’ ವಂಚನೆಗಳನ್ನು ನಿಯಂತ್ರಿಸಲು ಕೇಂದ್ರ ಗೃಹ ಸಚಿವಾಲಯವು ವಾಟ್ಸಾಪ್ ಸಂಸ್ಥೆಗೆ ಮಹತ್ವದ ನಿರ್ದೇಶನಗಳನ್ನು ನೀಡಿದೆ. ವಂಚನೆಗೆ ಬಳಕೆಯಾಗುವ ಮೊಬೈಲ್ ಡಿವೈಸ್ ಐಡಿಗಳನ್ನು (Device IDs) ಶಾಶ್ವತವಾಗಿ ನಿರ್ಬಂಧಿಸುವಂತೆ ಸೂಚಿಸಲಾಗಿದೆ. ವಂಚನೆ ಎಸಗುವ ವ್ಯಕ್ತಿ ಅಥವಾ ಜಾಲವನ್ನು ಗುರುತಿಸಿದ ತಕ್ಷಣ, ಅವರು ಬಳಸುವ ಮೊಬೈಲ್‌ನ ಡಿವೈಸ್ ಐಡಿಯನ್ನು ಬ್ಲಾಕ್ ಮಾಡಬೇಕು. ಇದರಿಂದ ವಂಚಕರು ಅದೇ ಫೋನ್ ಬಳಸಿ ಮತ್ತೊಂದು ಅಕೌಂಟ್ ತೆರೆಯಲು ಸಾಧ್ಯವಾಗುವುದಿಲ್ಲ.

ಐಟಿ ನಿಯಮಗಳ ಪ್ರಕಾರ, ಡಿಲೀಟ್ ಆದ ಅಕೌಂಟ್‌ಗಳ ಮಾಹಿತಿಯನ್ನು ಕನಿಷ್ಠ 180 ದಿನಗಳ ಕಾಲ ಉಳಿಸಿಕೊಳ್ಳಬೇಕು. ಇದು ತನಿಖಾ ಸಂಸ್ಥೆಗಳಿಗೆ ಪುರಾವೆ ಸಂಗ್ರಹಿಸಲು ನೆರವಾಗಲಿದೆ.ವಾಟ್ಸಾಪ್ ಅಕೌಂಟ್‌ಗಳನ್ನು ಸಕ್ರಿಯ ಮೊಬೈಲ್ ಸಿಮ್‌ಗೆ ಕಡ್ಡಾಯವಾಗಿ ಲಿಂಕ್ ಮಾಡಬೇಕು. ಅನಾಮಧೇಯವಾಗಿ ವಾಟ್ಸಾಪ್ ಬಳಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದ್ದು, 4 ರಿಂದ 6 ತಿಂಗಳಲ್ಲಿ ಇದು ಜಾರಿಯಾಗಲಿದೆ.

ಪೊಲೀಸ್ ಅಥವಾ ಸಿಬಿಐ ಲೋಗೋಗಳನ್ನು ಪ್ರೊಫೈಲ್ ಪಿಕ್ಚರ್ ಆಗಿ ಬಳಸಿ ಜನರನ್ನು ಹೆದರಿಸುವ ವಂಚಕರನ್ನು ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ (AI) ಬಳಸಲಾಗುವುದು. ಅಂತಹ ಫೇಕ್ ಪ್ರೊಫೈಲ್‌ಗಳನ್ನು ತಕ್ಷಣವೇ ಡಿಲೀಟ್ ಮಾಡಲು ವಾಟ್ಸಾಪ್ ಒಪ್ಪಿಕೊಂಡಿದೆ. ಮ್ಯಾಲಿಶಿಯಸ್ ಎಪಿಕೆ (APK) ಫೈಲ್‌ಗಳ ವರ್ಗಾವಣೆಯನ್ನು ಪತ್ತೆಹಚ್ಚಿ ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಬಲಪಡಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ‘ಪರಮ್’ ಗೆ ಪ್ರಧಾನಿ ಮೋದಿ ಫಿದಾ! ಇದು ಭಾರತದ ಅತ್ಯಂತ ಶಕ್ತಿಶಾಲಿ ರೋಬೋಟ್ ನಾಯಿ

2024ರಲ್ಲಿ ಭಾರತದಲ್ಲಿ ಸುಮಾರು 1.23 ಲಕ್ಷ ಡಿಜಿಟಲ್ ಅರೆಸ್ಟ್ ಪ್ರಕರಣಗಳು ವರದಿಯಾಗಿದ್ದು, ಜನರಿಂದ ಸುಮಾರು 1,935 ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ಒಟ್ಟಾರೆ ಡಿಜಿಟಲ್ ವಂಚನೆಗಳಿಂದ ದೇಶಕ್ಕೆ ಸುಮಾರು 3,000 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link