Headlines

nagaraj11081993

ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ

ಬಾಲಿವುಡ್​ ಸಿನಿಮಾ ‘ಧುರಂಧರ್ 2’ (Dhurandhar 2) ಸೂಪರ್ ಹಿಟ್ ಆಗಿದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಣವೀರ್ ವೃತ್ತಿ ಜೀವನದ ಅತ್ಯಂತ ದೊಡ್ಡ ಯಶಸ್ಸು ಇದು. ಆದಾಗ್ಯೂ ಅವರ ಪತ್ನಿ ದೀಪಿಕಾ ಪಡುಕೋಣೆ ಅವರು ಈ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇದಕ್ಕೆ ಕಾರಣ ಏನು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್…

Read More

ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ ಯುದ್ಧದ ಬಿಸಿ; ಸಿಲಿಂಡರ್ ಇಲ್ಲದೆ ರೋಗಿಗಳಿಗೂ ಪ್ರಾಬ್ಲಮ್!

ಗದಗ, ಮಾರ್ಚ್​ 21: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಾದ್ಯಂತ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಅದರ ಬಿಸಿ ಇದೀಗ ಗದಗ (Gadag) ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೂ ತಟ್ಟಿದೆ. ಗದಗದ ಸರ್ಕಾರಿ ಆಯುಷ್ಯ ಆಸ್ಪತ್ರೆಯಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿ ಎದುರಾಗಿದ್ದು, ಚಿಕಿತ್ಸೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದೆ. ತಾತ್ಕಾಲಿಕವಾಗಿ 5ಕೆಜಿ ಸಿಲಿಂಡರ್ ಬಳಕೆ ಪಂಚಕರ್ಮ ಚಿಕಿತ್ಸೆಗೆ ಗ್ಯಾಸ್ ಸಿಲಿಂಡರ್ ಅತ್ಯಾವಶ್ಯಕವಾಗಿದ್ದು, ಮಸಾಜ್ ಎಣ್ಣೆ ಬಿಸಿ ಮಾಡಲು ಹಾಗೂ ಸ್ಟೀಮ್ ಚಿಕಿತ್ಸೆ ನೀಡಲು ಗ್ಯಾಸ್ ಅವಶ್ಯಕವಾಗಿದೆ. ಆದರೆ…

Read More

ಆರ್​ಸಿಬಿ ಟೀಮ್​ಮೇಟ್ಸ್​ಗೆ ವಿರಾಟ್ ಬಿಗ್ ವಾರ್ನಿಂಗ್: ಈ ಬಾರಿ ಸುಲಭವಿಲ್ಲ ಎಂದ ಕಿಂಗ್ ಕೊಹ್ಲಿ!

ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ 2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಹಿನ್ನೆಲೆ ಈಗಾಗಲೇ ತಂಡ ತಯಾರಿ ಆರಂಭಿಸಿದ್ದು, ಕೊಹ್ಲಿಯ ಭರ್ಜರಿ ಬ್ಯಾಟಿಂಗ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಸೀಸನ್ ಇನ್ನಷ್ಟು ಕಠಿಣ: ತಂಡದ ಸಹ ಆಟಗಾರರೊಂದಿಗೆ ಮಾತನಾಡಿದ ಕೊಹ್ಲಿ, ಕಳೆದ 2-3 ಸೀಸನ್‌ಗಳಲ್ಲಿ ನಾವು ತುಂಬಾ ಕಷ್ಟಪಟ್ಟಿದ್ದೇವೆ. ಕಳೆದ ವರ್ಷ ಸಾಧನೆ ಮಾಡಿದ್ದೇವೆ. ಆದರೆ ಈಗ ಇನ್ನಷ್ಟು ಕಷ್ಟವಾಗಲಿದೆ. ಇತರ ತಂಡಗಳು ನಮ್ಮ…

Read More

Vastu Tips: ಮನೆಯೊಳಗೆ ಬಟ್ಟೆ ಒಣಗಿಸುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ!

ಹಿಂದಿನಿಂದಲೂ ವಾಸ್ತು ಶಾಸ್ತ್ರಕ್ಕೆ ಬಹಳ ವಿಶೇಷವಾದ ಮಹತ್ವವಿದೆ. ಮನೆಯ ದಿಕ್ಕು, ವಸ್ತುಗಳ ಜೋಡಣೆ ಮಾತ್ರವಲ್ಲದೆ, ನಾವು ಬಟ್ಟೆ ಒಣಗಿಸುವ ರೀತಿ ನೀತಿಗಳೂ ಕೂಡ ನಮ್ಮ ಅದೃಷ್ಟ ಮತ್ತು ಆರ್ಥಿಕ ಪರಿಸ್ಥಿತಿಯ ಮೇಲೆ ಪ್ರಭಾವ ಬೀರುತ್ತವೆ ಎನ್ನುತ್ತಾರೆ ತಜ್ಞರು. ಮನೆಯೊಳಗೆ ಬಟ್ಟೆ ಒಣಗಿಸುವುದರಿಂದ ಉಂಟಾಗುವ ನಕಾರಾತ್ಮಕ ಪರಿಣಾಮಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ. ವಾಸ್ತು ಶಾಸ್ತ್ರ ಮತ್ತು ನಕಾರಾತ್ಮಕ ಶಕ್ತಿ: ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಒದ್ದೆಯಾದ ಬಟ್ಟೆಗಳನ್ನು ಒಣಗಿಸುವುದು ಶುಭವಲ್ಲ. ಒದ್ದೆ ಬಟ್ಟೆಗಳು ಮನೆಯಲ್ಲಿ ತೇವಾಂಶವನ್ನು ಹೆಚ್ಚಿಸುತ್ತವೆ….

Read More

‘ಇದು ಲವ್ ಜಿಹಾದ್’; ಮೊನಾಲಿಸಾ ನಟನೆಯ ಸಿನಿಮಾ ನಿರ್ದೇಶಕನ ಗಂಭೀರ ಆರೋಪ

ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ (Monalisa Bhosle) ಈಗ ತಮ್ಮ ಖಾಸಗಿ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಎಲ್ಲರ ಇಚ್ಛೆಗೆ ವಿರುದ್ಧವಾಗಿ ಮೊನಾಲಿಸಾ, ಪೊಲೀಸ್ ರಕ್ಷಣೆಯಲ್ಲಿ ತನ್ನ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಅವರನ್ನು ವಿವಾಹವಾದರು. ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಒಂದೆಡೆ, ಮೊನಾಲಿಸಾ ಅವರ ಕುಟುಂಬವು ಮದುವೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದೆ. ಈ ಮಧ್ಯೆ, ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ! 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು, ಮಾರ್ಚ್​ 21: ತಾಲೂಕಿನ ಕೊಡಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KSRTC) ಬಸ್ ಪಲ್ಟಿಯಾದ ಘಟನೆ ನಡೆದಿದೆ. ಕುಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಘಟನೆಯಲ್ಲಿ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ…

Read More

ಅಸಲಿ ಏಕಮುಖಿ ರುದ್ರಾಕ್ಷಿ ಗುರುತಿಸುವುದು ಹೇಗೆ? ಖರೀದಿಸುವ ಮುನ್ನ ಈ ಅಂಶ ತಿಳಿದಿರಲಿ!

ಇಂದಿನ ದಿನಗಳಲ್ಲಿ ಆಧ್ಯಾತ್ಮಿಕ ಮತ್ತು ಆರೋಗ್ಯದ ದೃಷ್ಟಿಯಿಂದ ರುದ್ರಾಕ್ಷಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ, ಇದೇ ಸಂದರ್ಭವನ್ನು ಬಳಸಿಕೊಂಡು ಮಾರುಕಟ್ಟೆಯಲ್ಲಿ ನಕಲಿ ರುದ್ರಾಕ್ಷಿಗಳ ಮಾರಾಟವೂ ಜೋರಾಗಿದೆ. ವಿಶೇಷವಾಗಿ ಏಕಮುಖಿ ರುದ್ರಾಕ್ಷಿ ಅತ್ಯಂತ ಅಪರೂಪ ಮತ್ತು ಬೆಲೆಬಾಳುವಂತದ್ದು, ಹಾಗಾಗಿ ಇದನ್ನು ಖರೀದಿಸುವಾಗ ಮೋಸಹೋಗುವ ಸಾಧ್ಯತೆ ಹೆಚ್ಚು. ಏಕಮುಖಿ ರುದ್ರಾಕ್ಷಿಯ ಮಹತ್ವ: ಜ್ಯೋತಿಷ್ಯ ಮತ್ತು ಪುರಾಣಗಳ ಪ್ರಕಾರ, ಏಕಮುಖಿ ರುದ್ರಾಕ್ಷಿಯು ಸಾಕ್ಷಾತ್ ಶಿವನ ಸ್ವರೂಪವೆಂದು ಪರಿಗಣಿಸಲಾಗಿದೆ. ಇದು ಮೋಕ್ಷವನ್ನು ಪಡೆಯಲು ಅತ್ಯುತ್ತಮ ಮಾರ್ಗವೆಂದು ಹೇಳಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ, ಈ ರುದ್ರಾಕ್ಷಿಯು ಸೂರ್ಯ…

Read More

ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!

ಶಿವಮೊಗ್ಗ, ಮಾರ್ಚ್​ 21: ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಇಂಧನ ಕೊರತೆ ಭೀತಿ ಮೂಡಿದ ಹಿನ್ನೆಲೆ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನ ಮುಗಿಬಿದ್ದಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಒಟ್ಟು 4 ಪೆಟ್ರೋಲ್ ಬಂಕ್‌ಗಳಿವೆ. ಮೂರು ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಖಾಲಿಯಾದ ಹಿನ್ನೆಲೆ ಶಿವಮೊಗ್ಗ ರಸ್ತೆಯ ಹೆಚ್‌ಪಿ ಬಂಕ್‌ನಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತು ಇಂಧನ ಪಡೆದಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

World Down Syndrome Day 2026: ವಿಶ್ವ ಡೌನ್ ಸಿಂಡ್ರೋಮ್ ದಿನವನ್ನು ಆಚರಿಸುವುದೇಕೆ? ಇಲ್ಲಿದೆ ಮಾಹಿತಿ

ಮಗುವು ಹೇಗೆಯೇ ಇರಲಿ, ತಾಯಿಗೆ ಅದುವೇ ಪ್ರಪಂಚ. ಆದರೆ ಕೆಲವೊಮ್ಮೆ ಹುಟ್ಟಿದ ಮಗು ಡೌನ್ ಸಿಂಡ್ರೋಮ್ ಸಮಸ್ಯೆಗೆ ಒಳಗಾಗುತ್ತದೆ. ಇದು ಮಗುವಿನ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುವ ಸ್ಥಿತಿಯಾಗಿದ್ದು, ಚಿಕಿತ್ಸೆಯಿಂದ ಗುಣಪಡಿಸಲಾಗದು. ಈ ಡೌನ್​ ಸಿಂಡ್ರೋಮ್​ ಬಗೆಗೆ ಜಾಗೃತಿ ಮೂಡಿಸುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಮಾರ್ಚ್ 21 ರಂದು ವಿಶ್ವ ಡೌನ್ ಸಿಂಡ್ರೋಮ್ ದಿನವನ್ನು (World Down Syndrome Day) ಆಚರಿಸಲಾಗುತ್ತಿದೆ. ವಿಶ್ವ ಡೌನ್‌ ಸಿಂಡ್ರೋಮ್‌ ದಿನದ ಇತಿಹಾಸವೇನು? 2005ರಲ್ಲಿ ವರ್ಲ್ಡ್‌ ಕಾಂಗ್ರೆಸ್‌ನಲ್ಲಿ ಡೌನ್‌…

Read More

ಚಾಲಾಕಿ ಚಾಲಕ! ಊರಿಗೆ ಹೋಗಲು ವಾಹನಗಳು ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ: ಸಿಸಿಟಿವಿ ವಿಡಿಯೋ ನೋಡಿ

ಯಾದಗಿರಿ, ಮಾರ್ಚ್: ಊರಿಗೆ ಹೋಗಲು ವಾಹನ ಸಿಗದಿದ್ದ ಕಾರಣ ಚಾಲಕನೊಬ್ಬ ಬಸ್ಸನ್ನೇ ಕದ್ದೊಯ್ದ ವಿಲಕ್ಷಣ ಘಟನೆಗೆ ಯಾದಗಿರಿ ಜಿಲ್ಲೆ ಸಾಕ್ಷಿಯಾಗಿದೆ. ಯಾದಗಿರಿಯ ಸೈದಾಪುರ ಪಟ್ಟಣದಿಂದ ಬಸ್ ಕದ್ದೊಯ್ಯಲಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಇದೀಗ ಬಯಲಾಗಿವೆ. ಕೆಕೆಆರ್​ಟಿಸಿಗೆ (KKRTC) ಸೇರಿದ ಬಸ್‌ ಅನ್ನು ಅದೇ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರಾಗಿದ್ದ ಮಹಿಪಾಲರೆಡ್ಡಿ ಕದ್ದೊಯ್ದಿದ್ದಾರೆ. ಕರ್ತವ್ಯ ಲೋಪದ ಹಿನ್ನೆಲೆ ಮಹಿಪಾಲರೆಡ್ಡಿಯನ್ನು ವಜಾಗೊಳಿಸಲಾಗಿತ್ತು. ಮಾರ್ಚ್ 19ರಂದು ಸೈದಾಪುರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ ಅನ್ನು ಮಹಿಪಾಲರೆಡ್ಡಿ ತೆಗೆದುಕೊಂಡು ಹೋಗಿದ್ದಾರೆ. ಸ್ವಗ್ರಾಮ ರಾಚನಳ್ಳಿಗೆ…

Read More