Headlines

nagaraj11081993

ಮುನಿಸಿಕೊಂಡ ಬಾಲಕಿಯನ್ನು ಮನೆಗೆ ಕರೆಸಿ ಊಟ ಬಡಿಸಿದ ರಶ್ಮಿಕಾ ಮಂದಣ್ಣ, ವಿಜಯ್

ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ದಂಪತಿಯು ತಮ್ಮ ಪುಟ್ಟ ಅಭಿಮಾನಿಯೊಬ್ಬಳ ಆಸೆಯನ್ನು ಈಡೇರಿಸುವ ಮೂಲಕ ಫ್ಯಾನ್ಸ್ ಮನ ಗೆದ್ದಿದ್ದಾರೆ. ತನ್ನನ್ನು ಮದುವೆಗೆ ಆಹ್ವಾನಿಸಿಲ್ಲ ಎಂದು ಮುನಿಸಿಕೊಂಡಿದ್ದ ಬಾಲಕಿಯನ್ನು ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿಕೊಂಡು ಪ್ರೀತಿಯಿಂದ ಆತಿಥ್ಯ ನೀಡಿದ್ದಾರೆ. ಈ ವಿಡಿಯೋವನ್ನು ಬಾಲಕಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಫೆಬ್ರವರಿ 28ರಂದು ರಶ್ಮಿಕಾ ಮತ್ತು ವಿಜಯ್ ಅದ್ದೂರಿಯಾಗಿ ವಿವಾಹವಾಗಿದ್ದರು. ಈ ಸಂದರ್ಭದಲ್ಲಿ…

Read More

WITT Summit: ಜಗತ್ತಿನ ಅನಿಶ್ಚಿತತೆಯ ನಡುವೆಯೂ ಜಾಗತಿಕ ದಿಕ್ಕನ್ನು ರೂಪಿಸಲು ಭಾರತ ಸಜ್ಜಾಗಿದೆ; ಟಿವಿ9 ಎಂಡಿ ಮತ್ತು ಸಿಇಒ ಬರುಣ್ ದಾಸ್

ನವದೆಹಲಿ, ಮಾರ್ಚ್ 20: ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ (WITT) ಮಾರ್ಚ್ 23-24 ರಂದು ದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಗೂ ಮುನ್ನ ಮಾತನಾಡಿದ ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್, “ಜಾಗತಿಕ ಅನಿಶ್ಚಿತತೆ ಮತ್ತು ಭೌಗೋಳಿಕ ರಾಜಕೀಯ ಸಂಘರ್ಷಗಳ ಹೊರತಾಗಿಯೂ ಭಾರತವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತವು ಇತಿಹಾಸದಲ್ಲಿ ಒಂದು ವಿಶಿಷ್ಟ ಘಟ್ಟದಲ್ಲಿ ನಿಂತಿದೆ” ಎಂದು ಹೇಳಿದ್ದಾರೆ. “ಕಳೆದ ವರ್ಷ ಜಾಗತೀಕರಣವು ತೀವ್ರ ಹೊಡೆತ ನೀಡಿದೆ. ಸುಂಕಗಳನ್ನು ಆಯುಧಗಳಾಗಿ…

Read More

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಕಾರವಾರ, ಮಾರ್ಚ್​ 20: ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೇನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ (R. V. Deshpande) ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆ ಹೆರಿಗೆ ಮಾಡಿದರೆ ಯಾಕೆ ಹಣ…

Read More

ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ನವದೆಹಲಿ, ಮಾರ್ಚ್ 20: ಸರ್ಕಾರಿ ಸ್ವಾಮ್ಯದ ಮೂರು ತೈಲ ಮಾರುಕಟ್ಟೆ ಕಂಪನಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಿರುವ ಬೆನ್ನಲ್ಲೇ ಇಂಡಿಯನ್ ಆಯಿಲ್ ಸಂಸ್ಥೆಯು ಕೈಗಾರಿಕಾ ಡೀಸಲ್ ಬೆಲೆಯನ್ನು (Industrial Diesel prices) ಹೆಚ್ಚಿಸಿದೆ. ಒಂದು ಲೀಟರ್​ಗೆ 87.57 ರೂ ಇದ್ದ ಡೀಸಲ್ ಬೆಲೆ 109.59 ರೂಗೆ ಏರಿಸಲಾಗಿದೆ. ಬೆಲೆಯಲ್ಲಿ ಬರೋಬ್ಬರಿ ಶೇ. 25ರಷ್ಟು ಹೆಚ್ಚಳ ಆಗಿದೆ. ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಮತ್ತು ಅನಿಲಗಳ ಹಡಗುಗಳ ಸಾಗಣೆಗೆ ನಿರ್ಬಂಧ ಇರುವುದರಿಂದ ಜಾಗತಿಕವಾಗಿ ಇವುಗಳ ಸರಬರಾಜು…

Read More

IPL 2026: ಐಪಿಎಲ್​ನಲ್ಲಿ ಕನ್ನಡಿಗರ ಕಾರುಬಾರು; ಯಾರು ಯಾವ ತಂಡದ ಪರ ಆಡುತ್ತಾರೆ?

19ನೇ ಆವೃತ್ತಿಯ ಐಪಿಎಲ್ ಮಾರ್ಚ್​ 28 ರಂದು ಆರಂಭವಾಗುತ್ತಿದೆ. ಇದರೊಂದಿಗೆ ಒಂದು ಟ್ರೋಫಿ ಗೆಲ್ಲುವ ಸಲುವಾಗಿ 10 ತಂಡಗಳು ಮೈದಾನದಲ್ಲಿ ಹೋರಾಟ ನೀಡಲಿವೆ. ಈ 10 ತಂಡಗಳಲ್ಲಿ ದೇಶ, ವಿದೇಶಗಳ 200 ಕ್ಕೂ ಅಧಿಕ ಪ್ರತಿಭಾನಿತ್ವ ಕ್ರಿಕೆಟಿಗರು ತಮ್ಮ ತಂಡವನ್ನು ಚಾಂಪಿಯನ್ ಮಾಡುವ ಸಲುವಾಗಿ ಸಾಕಷ್ಟು ಬೆವರು ಹರಿಸಲಿದ್ದಾರೆ. ಈ 200 ಕ್ಕೂ ಅಧಿಕ ಆಟಗಾರರ ಪಟ್ಟಿಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಆಟಗಾರರು ಎಷ್ಟು ಮಂದಿ? ಅವರುಗಳಲ್ಲಿ ಯಾರ್ಯಾರು ಯಾವ ತಂಡದ ಪರ ಆಡಲಿದ್ದಾರೆ? ಇದರಲ್ಲಿ ಎಷ್ಟು ಆಟಗಾರರಿಗೆ…

Read More

ನಿಮ್ಮ ಮಕ್ಕಳು ಕೂಡ ಎಸಿ ಕೊಠಡಿಯಲ್ಲಿ ಮಲಗುತ್ತಾರಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಹವಾಮಾನ ಬದಲಾಗುತ್ತಿರುವುದರಿಂದ ಮನೆಗಳಲ್ಲಿ ಎಸಿ (AC) ಬಳಕೆ ಆರಂಭ ಹೆಚ್ಚಾಗಿದೆ. ಆದರೆ ಮನೆಯಲ್ಲಿ ಮಕ್ಕಳಿದ್ದಾಗ, ಎಸಿ ಬಳಸುವಾಗ ವಿಶೇಷ ಜಾಗ್ರತೆ ಅಗತ್ಯವಾಗಿದೆ. ಸರಿಯಾದ ರೀತಿಯಲ್ಲಿ ಬಳಸದೇ ಇದ್ದರೆ, ಇದು ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ವೈದ್ಯರ ಪ್ರಕಾರ, ಅನೇಕ ಬಾರಿ ಪಾಲಕರು ಅರಿವಿಲ್ಲದೆ ಕೆಲವು ತಪ್ಪುಗಳನ್ನು ಮಾಡುತ್ತಾರೆ, ಇದು ಮಕ್ಕಳ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹಾಗಾಗಿ, ಎಸಿ ಬಳಸುವಾಗ ಯಾವ ವಿಷಯಗಳನ್ನು ಗಮನಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಮಕ್ಕಳ…

Read More

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್​ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್​​ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್​ಕುಮಾರ್….

Read More

ಜೊಮಾಟೊದಲ್ಲಿ ಫುಡ್ ಆರ್ಡರ್ ಮತ್ತಷ್ಟು ದುಬಾರಿ; ಪ್ಲಾಟ್​ಫಾರ್ಮ್ ಶುಲ್ಕ ಶೇ 19ರಷ್ಟು ಏರಿಕೆ

ನವದೆಹಲಿ, ಮಾರ್ಚ್ 20: ಫುಡ್ ಡೆಲಿವರಿ ಕಂಪನಿಯಾದ ಜೊಮಾಟೊ ತನ್ನ ಪ್ಲಾಟ್​​ಫಾರ್ಮ್ ಶುಲ್ಕವನ್ನು (Zomato platform fee) ಏರಿಸಿದೆ. 12.50 ರೂ ಇದ್ದ ಜೊಮಾಟೊ ಪ್ಲಾಟ್​ಫಾರ್ಮ್ ಫೀ ಅನ್ನು 14.90 ರೂಗೆ ಏರಿಸಲಾಗಿದೆ. ಒಬ್ಬ ಗ್ರಾಹಕ ನೀಡುವ ಪ್ರತೀ ಆರ್ಡರ್​ಗೆ ಪ್ಲಾಟ್​ಫಾರ್ಮ್ ಫೀ ಅನ್ವಯ ಆಗುತ್ತದೆ. ಇದರಲ್ಲಿ 2.40 ರೂ ಅಥವಾ ಶೇ. 19.2ರಷ್ಟು ಶುಲ್ಕ ಏರಿಕೆ ಆಗಿದೆ. ಒಂದು ವರ್ಷದೊಳಗೆ ಜೊಮಾಟೊ ಎರಡನೇ ಬಾರಿ ತನ್ನ ಪ್ಲಾಟ್​ಫಾರ್ಮ್ ಫೀ ಏರಿಸಿರುವುದು. 2025ರ ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಳ…

Read More

ಸಕ್ಕರೆ ಕಡಿಮೆ ತಿನ್ನಿ, ದಿನವೂ ಯೋಗ ಮಾಡಿ; ಭಾರತೀಯರಿಗೆ ಆರೋಗ್ಯದ ರಹಸ್ಯ ಹೇಳಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 20: ಪ್ರಧಾನಿ ನರೇಂದ್ರ ಮೋದಿ (PM Narendra Modi) ಯೋಗ, ಫಿಟ್​ನೆಸ್​, ಉತ್ತಮ ಆಹಾರ ಸೇವನೆಗೆ ಸದಾ ಆದ್ಯತೆ ನೀಡುತ್ತಾರೆ. ಅವರು ಯಾವ ರಾಜ್ಯ, ಯಾವ ದೇಶಕ್ಕೇ ಪ್ರಯಾಣಿಸಲಿ ತಮ್ಮ ಯೋಗ ದಿನಚರಿ, ತಾವು ಸೇವಿಸುವ ಆಹಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರತಿದಿನ ಯೋಗಾಭ್ಯಾಸ, ಧ್ಯಾನ ಮಾಡುವ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೂ ದಿನವೂ ಯೋಗ ಮಾಡಲು ಸಲಹೆ ನೀಡಿದ್ದಾರೆ. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಆರೋಗ್ಯವಾಗಿರಿ,…

Read More

ಪ್ರತ್ಯೇಕ ರಸ್ತೆ ಅಪಘಾತಗಳು: ಐವರು ಸಾವು, ಓರ್ವನ ಕಾಲು ಮುರಿತ

ತುಮಕೂರು, ಮಾರ್ಚ್​ 20: ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸಾವರರು ಸಾವನ್ನಪ್ಪಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಮಧ್ಯೆ ನಡೆದಿದೆ. ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತ‌ರು. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ನರಸಿಂಹಮೂರ್ತಿ ಮತ್ತು ನವೀನ್​ ಇಬ್ಬರು ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಬಸ್​ ನಿಯಂತ್ರಣ ತಪ್ಪಿ ಮುಂದೆ…

Read More