Headlines

nagaraj11081993

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್​ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್​​ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್​ಕುಮಾರ್….

Read More

ಜೊಮಾಟೊದಲ್ಲಿ ಫುಡ್ ಆರ್ಡರ್ ಮತ್ತಷ್ಟು ದುಬಾರಿ; ಪ್ಲಾಟ್​ಫಾರ್ಮ್ ಶುಲ್ಕ ಶೇ 19ರಷ್ಟು ಏರಿಕೆ

ನವದೆಹಲಿ, ಮಾರ್ಚ್ 20: ಫುಡ್ ಡೆಲಿವರಿ ಕಂಪನಿಯಾದ ಜೊಮಾಟೊ ತನ್ನ ಪ್ಲಾಟ್​​ಫಾರ್ಮ್ ಶುಲ್ಕವನ್ನು (Zomato platform fee) ಏರಿಸಿದೆ. 12.50 ರೂ ಇದ್ದ ಜೊಮಾಟೊ ಪ್ಲಾಟ್​ಫಾರ್ಮ್ ಫೀ ಅನ್ನು 14.90 ರೂಗೆ ಏರಿಸಲಾಗಿದೆ. ಒಬ್ಬ ಗ್ರಾಹಕ ನೀಡುವ ಪ್ರತೀ ಆರ್ಡರ್​ಗೆ ಪ್ಲಾಟ್​ಫಾರ್ಮ್ ಫೀ ಅನ್ವಯ ಆಗುತ್ತದೆ. ಇದರಲ್ಲಿ 2.40 ರೂ ಅಥವಾ ಶೇ. 19.2ರಷ್ಟು ಶುಲ್ಕ ಏರಿಕೆ ಆಗಿದೆ. ಒಂದು ವರ್ಷದೊಳಗೆ ಜೊಮಾಟೊ ಎರಡನೇ ಬಾರಿ ತನ್ನ ಪ್ಲಾಟ್​ಫಾರ್ಮ್ ಫೀ ಏರಿಸಿರುವುದು. 2025ರ ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಳ…

Read More

ಸಕ್ಕರೆ ಕಡಿಮೆ ತಿನ್ನಿ, ದಿನವೂ ಯೋಗ ಮಾಡಿ; ಭಾರತೀಯರಿಗೆ ಆರೋಗ್ಯದ ರಹಸ್ಯ ಹೇಳಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 20: ಪ್ರಧಾನಿ ನರೇಂದ್ರ ಮೋದಿ (PM Narendra Modi) ಯೋಗ, ಫಿಟ್​ನೆಸ್​, ಉತ್ತಮ ಆಹಾರ ಸೇವನೆಗೆ ಸದಾ ಆದ್ಯತೆ ನೀಡುತ್ತಾರೆ. ಅವರು ಯಾವ ರಾಜ್ಯ, ಯಾವ ದೇಶಕ್ಕೇ ಪ್ರಯಾಣಿಸಲಿ ತಮ್ಮ ಯೋಗ ದಿನಚರಿ, ತಾವು ಸೇವಿಸುವ ಆಹಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರತಿದಿನ ಯೋಗಾಭ್ಯಾಸ, ಧ್ಯಾನ ಮಾಡುವ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೂ ದಿನವೂ ಯೋಗ ಮಾಡಲು ಸಲಹೆ ನೀಡಿದ್ದಾರೆ. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಆರೋಗ್ಯವಾಗಿರಿ,…

Read More

ಪ್ರತ್ಯೇಕ ರಸ್ತೆ ಅಪಘಾತಗಳು: ಐವರು ಸಾವು, ಓರ್ವನ ಕಾಲು ಮುರಿತ

ತುಮಕೂರು, ಮಾರ್ಚ್​ 20: ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಸಾವರರು ಸಾವನ್ನಪ್ಪಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಮಧ್ಯೆ ನಡೆದಿದೆ. ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತ‌ರು. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ನರಸಿಂಹಮೂರ್ತಿ ಮತ್ತು ನವೀನ್​ ಇಬ್ಬರು ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಬಸ್​ ನಿಯಂತ್ರಣ ತಪ್ಪಿ ಮುಂದೆ…

Read More

ಮುಂದಕ್ಕೆ ಹೋಗುತ್ತಾ ‘ಪೆದ್ದಿ’ ಸಿನಿಮಾ? ಉತ್ತರಕ್ಕೆ ಕಾದಿರುವ ರಾಮ್ ಚರಣ್ ಫ್ಯಾನ್ಸ್

‘ಮೆಗಾ ಪವರ್ ಸ್ಟಾರ್’ ರಾಮ್ ಚರಣ್ ಮತ್ತು ‘ಉಪ್ಪೇನ’ ಖ್ಯಾತಿಯ ನಿರ್ದೇಶಕ ಬುಚ್ಚಿ ಬಾಬು ಸನಾ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾ ಬಗ್ಗೆ ಕಳೆದ ಕೆಲವು ದಿನಗಳಿಂದ ವದಂತಿಗಳು ಹರಿದಾಡುತ್ತಿವೆ. ಈ ಪ್ಯಾನ್ ಇಂಡಿಯಾ ಚಿತ್ರವು ನಿಗದಿತ ಸಮಯಕ್ಕೆ ಬಿಡುಗಡೆಯಾಗುವುದಿಲ್ಲ ಎಂಬ ಗಾಳಿಸುದ್ದಿಯಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದರೆ ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಗುವ ನಿರೀಕ್ಷೆ ಇದೆ. ಅದಕ್ಕಾಗಿ ರಾಮ್ ಚರಣ್ (Ram Charan) ಫ್ಯಾನ್ಸ್ ಕಾದಿದ್ದಾರೆ. ‘ಪೆದ್ದಿ’ ಸಿನಿಮಾದ ಕೆಲಸಗಳು ಬಾಕಿ ಇರುವುದರಿಂದ…

Read More

ಟ್ರಂಪ್​ಗೆ ಮುಖಭಂಗ; ಅಮೆರಿಕದ ಯುದ್ಧವಿಮಾನಕ್ಕೆ ನೋ ಎಂಟ್ರಿ ಎಂದ ಶ್ರೀಲಂಕಾ

ಕೊಲಂಬೊ, ಮಾರ್ಚ್ 20: ಶ್ರೀಲಂಕಾ ಮಾರ್ಚ್ ಆರಂಭದಲ್ಲಿ ದ್ವೀಪ ರಾಷ್ಟ್ರದ ಮಟ್ಟಾಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕ (United States) ತನ್ನ 2 ಯುದ್ಧ ವಿಮಾನಗಳನ್ನು ಇಳಿಸಲು ಅನುಮತಿ ನಿರಾಕರಿಸಿದೆ. ಈ ಬಗ್ಗೆ ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶ್ರೀಲಂಕಾದ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಜಿಬೌಟಿಯಲ್ಲಿ ಬೀಡುಬಿಟ್ಟಿದ್ದ ಅಮೆರಿಕದ ಯುದ್ಧವಿಮಾನಗಳು ಮಾರ್ಚ್‌ನಲ್ಲಿ 2 ಬಾರಿ ಇಳಿಯಲು ಅನುಮತಿ ಕೋರಿದ್ದವು. ಆದರೆ ಎರಡೂ ಮನವಿಗಳನ್ನು ತಿರಸ್ಕರಿಸಲಾಯಿತು. “ಹಲವು ಒತ್ತಡಗಳ ಹೊರತಾಗಿಯೂ ನಾವು ನಮ್ಮ ತಟಸ್ಥತೆಯನ್ನು ಕಾಪಾಡಿಕೊಳ್ಳಲು ಬಯಸುತ್ತೇವೆ. ನಾವು…

Read More

ಆಫೀಸ್ ಕಾರ್ಡ್ ಬಳಕೆ, ಪ್ಯಾನ್ ಕಡ್ಡಾಯ, ಅಡ್ರೆಸ್ ಪ್ರೂಫ್ ಇತ್ಯಾದಿ ಗಮನಿಸಬೇಕಾದ ಹೊಸ ಕ್ರೆಡಿಟ್ ಕಾರ್ಡ್ ನಿಯಮಗಳು

ನವದೆಹಲಿ, ಮಾರ್ಚ್ 20: ಹೊಸ ಆದಾಯ ತೆರಿಗೆ ಕಾಯ್ದೆ (New Income Tax Rules) ಮುಂಬರುವ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಏಪ್ರಿಲ್ 1ರಿಂದ ಬರುವ ಈ ಕಾಯ್ದೆಯಿಂದಾಗಿ ಕ್ರೆಡಿಟ್ ಕಾರ್ಡ್ ಕ್ಷೇತ್ರದಲ್ಲಿ ಕೆಲ ನಿಯಮಗಳ ಬದಲಾವಣೆ ಆಗಲಿದೆ. ಕಾರ್ಡ್ ಸ್ವೈಪ್ ಮೂಲಕ ಅಧಿಕ ಮೌಲ್ಯದ ವಹಿವಾಟುಗಳಿಗೆ (High value transactions) ಮಾಡುವ ಪಾವತಿ ಮೇಲೆ ಆದಾಯ ತೆರಿಗೆ ಇಲಾಖೆ ಗಮನ ಹರಿಸುವುದರಿಂದ ಹಿಡಿದು, ತೆರಿಗೆ ಅನ್ವಯ ಆಗುವವರೆಗೂ ಕೆಲ ಹೊಸ ನಿಯಮಗಳು ಜಾರಿಗೆ ಬರಲಿವೆ. ತೆರಿಗೆ…

Read More

ನಿರ್ಮಾಪಕರಿಗೆ ನಿರಾಳ ತಂದ ಸುಪ್ರೀಂ ಕೋರ್ಟ್ ತೀರ್ಪು: ಪ್ರಕರಣ ಏನು?

ಚಲನಚಿತ್ರ (Movie) ನಿರ್ಮಾಣ ಅತ್ಯಂತ ಏರಿಳಿತ ಇರುವ ವ್ಯವಹಾರ. ಸಿನಿಮಾ ನಿರ್ಮಾಣ ಎನ್ನುವುದು ಅಲುಗಿನ ಮೇಲಿನ ನಡುಗೆ, ಅಲ್ಲಿ ಲಾಭ ಆಗುವುದಕ್ಕಿಂತಲೂ ನಷ್ಟ ಆಗುವ ಸಾಧ್ಯತೆಗಳು ಬಹಳ ಹೆಚ್ಚು. ಸಿನಿಮಾಗಳ ಗೆಲುವಿನ ಸರಾಸರಿ ಸಹ ಬಹಳ ಕಡಿಮೆ. ವರ್ಷಕ್ಕೆ ಚಿತ್ರರಂಗವೊಂದರಲ್ಲಿ 1000 ಸಿನಿಮಾಗಳು ಬಿಡುಗಡೆ ಆದರೆ ಗೆಲ್ಲುವುದು ಬೆರಳೆಣಿಕೆಯಷ್ಟು ಮಾತ್ರ. ಸಿನಿಮಾ ಗೆದ್ದರೆ ನಟ, ನಿರ್ದೇಶಕರ ಗೆಲುವಾಗುತ್ತದೆ, ಆದರೆ ಸೋತರೆ ನಷ್ಟ ನಿರ್ಮಾಪಕನಿಗೆ ಮಾತ್ರ. ನಿರ್ಮಾಪಕರು, ಫೈನ್ಯಾನ್ಶಿಯರ್​ಗಳು, ವಿತರಕರು, ಚಿತ್ರಮಂದಿರ ಮಾಲೀಕರು ಹೀಗೆ ಹಲವರೊಟ್ಟಿಗೆ ಹಣಕಾಸಿನ ವ್ಯವಹಾರ…

Read More

ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು

ಬೆಳಗಾವಿ, ಮಾರ್ಚ್​ 20: ಹೆಣ್ಣುಮಗು ಎನ್ನುವ ಕಾರಣಕ್ಕೆ 15 ದಿನದ ಹಿಂದೆ ಜನಸಿದ್ದ ಹಸುಗೂಸಿಗೆ ವಿಷವುಣಿಸಿ ಕೊಲೆ ಮಾಡಿದ್ದ ತಂದೆಯನ್ನು ಇದೀಗ ಪೊಲೀಸರು. ಭೀಮರಾಯ ಬಂಧಿತ ಆರೋಪಿ. ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಘಟನೆ ಬಗ್ಗೆ ಭೀಮರಾಯನ ಸಂಬಂಧಿಕರು ಪ್ರತಿಕ್ರಿಯಿಸಿದ್ದು, ಆತನ ಕ್ರೂರತೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸದ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ

ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್​​ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್​​ಬುಕ್​​ನಲ್ಲಿ ಹಂಚಿಕೊಂಡಿದ್ದರು. ಆರ್​​ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು….

Read More