ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ಎಂದ ವಿಜಯೇಂದ್ರ – Kannada News | Vijayendra Predicts Early Karnataka Elections Amidst CM Resignation Speculation
ಶಿವಮೊಗ್ಗ, ಮೇ 27: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ರಾಜ್ಯ ರಾಜಕೀಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಶಿವಮೊಗ್ಗದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅದು ಕೇವಲ ತಾತ್ಕಾಲಿಕವಾಗಿದ್ದು, ಅವಧಿ ಪೂರ್ವ ಚುನಾವಣೆ ನಿಶ್ಚಿತ ಎಂದು ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಮತ್ತು ಅಸಮಾಧಾನದಿಂದ ರಾಜ್ಯದ ಆಡಳಿತ ಕುಸಿದಿದ್ದು, ಇದು ಬಿಜೆಪಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಸಿದ್ದರಾಮಯ್ಯನವರು ಇಷ್ಟು…