ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಆರ್ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು. ಇದೀಗ ವಿಡಿಯೋ ಸತೀಶ್ ಅವರ ಸಂಕಷ್ಟಕ್ಕೆ ಕಾರಣವಾಗಿದೆ. ವಿಡಿಯೋ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸತೀಶ್ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಇದೀಗ ಸತೀಶ್ ಅವರು ವಿಡಿಯೋ ಡಿಲೀಟ್ ಮಾಡಿದ್ದಾರೆ. ಪ್ರಕರಣದ ಬಗ್ಗೆ ವಿಡಿಯೋನಲ್ಲಿದೆ…
2026 ರ ಐಪಿಎಲ್ ಆರಂಭಕ್ಕೆ ಸರಿಯಾಗಿ 8 ದಿನಗಳು ಬಾಕಿ ಉಳಿದಿವೆ. ಈ ಲೀಗ್ಗಾಗಿ ಬಿಸಿಸಿಐ ಕೂಡ ಸರ್ವ ತಯಾರಿ ಮಾಡಿಕೊಂಡಿದೆ. ಆದರೆ ಇದರ ನಡುವೆ ಬಿಸಿಸಿಐ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ವಿಶ್ವ ಕ್ರಿಕೆಟ್ನ ದೊಡ್ಡಣ್ಣ ಎನಿಸಿಕೊಂಡಿರುವ ಬಿಸಿಸಿಐ ಮೇಲೆ ವರ್ಣ ತಾರತಮ್ಯದಂತಹ ಗಂಭೀರ ಆರೋಪವನ್ನು ಹೊರಿಸಿರುವ ಟೀಂ ಇಂಡಿಯಾದ ಲೆಜೆಂಡರಿ ಆಟಗಾರರೊಬ್ಬರು ಕಾಮೆಂಟರಿ ಪ್ಯಾನಲ್ಗೆ ನಿವೃತ್ತಿ ಘೋಷಿಸಿದ್ದಾರೆ. 1983 ರಿಂದ 1987 ರ ನಡುವೆ ಟೀಂ ಇಂಡಿಯಾ ಪರ ಆಡಿದ್ದ ತಮಿಳುನಾಡು ಮೂಲದ ಲಕ್ಷ್ಮಣ್ ಶಿವರಾಮಕೃಷ್ಣನ್ ಇದೀಗ ಬಿಸಿಸಿಐ ವಿರುದ್ಧ ಈ ಗಂಭೀರ ಆರೋಪವನ್ನು ಹೊರಿಸಿದ್ದು, ನಿವೃತ್ತಿ ನಿರ್ಧಾರಕ್ಕೆ ಬಂದಿದ್ದಾರೆ.
ಶಿವರಾಮಕೃಷ್ಣನ್ ಆರೋಪದಲ್ಲಿರುವುದೇನು?
ಕಾಮೆಂಟರಿಗೆ ನಿವೃತ್ತಿ ಘೋಷಿಸಿದ ಬಳಿಕ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬಿಸಿಸಿಐ ವಿರುದ್ಧ ಗಂಭೀರ ಆರೋಪವನ್ನು ಹೊರಿಸಿ ಬರೆದುಕೊಂಡಿರುವ ಶಿವರಾಮಕೃಷ್ಣನ್, ‘ನಾನು ಬಿಸಿಸಿಐನ ಕಾಮೆಂಟರಿ ಪ್ಯಾನಲ್ನಿಂದ ನಿವೃತ್ತಿ ಹೊಂದುತ್ತಿದ್ದೇನೆ. ಕಳೆದ 23 ವರ್ಷಗಳ ನನ್ನ ಕಾಮೆಂಟರಿ ವೃತ್ತಿಜೀವನದಲ್ಲಿ ನನ್ನನ್ನು ಎಂದಿಗೂ ಪಂದ್ಯ ಪ್ರಸ್ತುತಿಗಳಿಗೆ ಬಳಸಲಾಗಿಲ್ಲ. ಇನ್ನು ಈ ಕ್ಷೇತ್ರಕ್ಕೆ ನಗಿಂತ ತಡವಾಗಿ ಬಂದವರಿಗೆ ಮತ್ತು ಯುವ ವೀಕ್ಷಕ ವಿವರಣೆಗಾರರಿಗೆ ಪಿಚ್ ವರದಿ ನೀಡುವುದಕ್ಕೆ ಮತ್ತು ಟಾಸ್ ಮತ್ತು ಪಂದ್ಯ ಪ್ರಸ್ತುತಿ ನಡೆಸಿಕೊಡುವುದಕ್ಕೆ ಅವಕಾಶ ನೀಡಲಾಯಿತು. ಆದರೆ ನನಗೆ ಆ ಅವಕಾಶ ಸಿಗಲಿಲ್ಲ. ರವಿಶಾಸ್ತ್ರಿ ಟೀಂ ಇಂಡಿಯಾದ ಕೋಚ್ ಆಗಿದ್ದಾಗಲೂ ಇದು ನಡೆಯುತ್ತಿತ್ತು’ ಎಂದು ಬರೆದುಕೊಂಡಿದ್ದಾರೆ.
ಶಿವರಾಮಕೃಷ್ಣನ್ ಅವರ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಭಾರಿ ವೈರಲ್ ಆಗುತ್ತಿದೆ. ಟೀಂ ಇಂಡಿಯಾ ಅಭಿಮಾನಿಗಳು ಮತ್ತು ಅವರ ಅಭಿಮಾನಿಗಳು ಹಾಗೂ ಕ್ರಿಕೆಟ್ ಪ್ರಿಯರು ಶಿವರಾಮಕೃಷ್ಣನ್ ಅವರ ಈ ಆರೋಪಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಶಿವರಾಮಕೃಷ್ಣನ್ ಅವರ ಪೋಸ್ಟ್ಗೆ ನೆಟ್ಟಿಗರೊಬ್ಬರು ‘ಬಹುಶಃ ನಿಮ್ಮ ಮೈಬಣ್ಣದ ಕಾರಣದಿಂದಾಗಿ ನಿಮ್ಮನ್ನು ಕಡೆಗಣಿಸಿರಬಹುದು ಎಂದು ಕಾಮೆಂಟ್ ಮಾಡಿದ್ದಾರೆ. ಇದಕ್ಕೆ ಶಿವರಾಮಕೃಷ್ಣನ್ ‘ಖಂಡಿತ’ ಎಂದು ಉತ್ತರಿಸಿರುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಶಿವರಾಮಕೃಷ್ಣನ್ ಅವರ ಈ ಕಾಮೆಂಟ್ ಅವರು ಬಿಸಿಸಿಐ ಮೇಲೆ ವರ್ಣ ತಾರತಮ್ಯದ ಆರೋಪ ಮಾಡುತ್ತಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ.
ತಿರುಗೇಟು ನೀಡಿದ ಆರ್. ಅಶ್ವಿನ್
ಶಿವರಾಮಕೃಷ್ಣನ್ ಅವರ ನಿವೃತ್ತಿಯ ಪೋಸ್ಟ್ಗೆ ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಆರ್. ಅಶ್ವಿನ್, ‘ನೀವು ಐಪಿಎಲ್ನಲ್ಲಿಯೂ ಕಾಮೆಂಟ್ ಮಾಡುವುದನ್ನು ಏಕೆ ಬಿಡಬಾರದು?’ ಎಂದು ಕಾಮೆಂಟ್ ಮಾಡಿದ್ದು, ಈ ವಿವಾದಕ್ಕೆ ಮತ್ತೊಂದು ಆಯಾಮ ನೀಡಿದ್ದಾರೆ. ವಾಸ್ತವವಾಗಿ ಇವರಿಬ್ಬರ ನಡುವೆ ವೈಮನಸ್ಸು ಬಹಳ ಹಿಂದಿನಿಂದಲೂ ಇದೆ. ಈ ಹಿಂದೆ ಶಿವರಾಮಕೃಷ್ಣನ್, ಆರ್. ಅಶ್ವಿನ್ ಅವರನ್ನು ಕಳಪೆ ಬೌಲರ್ ಎಂದು ಜರಿದಿದ್ದರು. ಮಾತ್ರವಲ್ಲದೆ, ಭಾರತೀಯ ಪಿಚ್ಗಳಲ್ಲಿ ಮೂರ್ಖ ಕೂಡ ವಿಕೆಟ್ ಪಡೆಯಬಹುದು ಎಂದಿದ್ದರು. ಹಾಗೆಯೇ ಅಶ್ವಿನ್ 100ನೇ ಟೆಸ್ಟ್ ಪಂದ್ಯವನ್ನು ಆಡಿದಾಗ ನಾನು ಅವರನ್ನು ಅಭಿನಂದಿಸಲು ಸಾಕಷ್ಟು ಬಾರಿ ಫೋನ್ ಮಾಡಿದ್ದೆ. ಆದರೆ ಅಶ್ವಿನ್ ನನ್ನ ಫೋನ್ಗೆ ಉತ್ತರಿಸುವ ಬದಲು ಕರೆಯನ್ನು ಕಟ್ ಮಾಡಿದ್ದರು ಎಂತಲೂ ಆರೋಪ ಮಾಡಿದ್ದರು.
ಶಿವರಾಮಕೃಷ್ಣನ್ ವೃತ್ತಿಜೀವನ
17 ನೇ ವಯಸ್ಸಿನಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಎಲ್. ಶಿವರಾಮಕೃಷ್ಣನ್ಗೆ ಟೀಂ ಇಂಡಿಯಾ ಪರ ದೀರ್ಘ ಕಾಲ ಆಡಲು ಸಾಧ್ಯವಾಗಲಿಲ್ಲ. ಅವರ ಅಲ್ಪ ವೃತ್ತಿಜೀವನದಲ್ಲಿ ಅವರು ಕೇವಲ ಒಂಬತ್ತು ಟೆಸ್ಟ್ ಪಂದ್ಯಗಳು ಮತ್ತು 16 ಏಕದಿನ ಪಂದ್ಯಗಳನ್ನಷ್ಟೇ ಆಡಿದ್ದಾರೆ. ಟೆಸ್ಟ್ನಲ್ಲಿ 26 ವಿಕೆಟ್ ಕಬಳಿಸಿರುವ ಎಲ್. ಶಿವರಾಮಕೃಷ್ಣನ್ ಏಕದಿನ ಪಂದ್ಯಗಳಲ್ಲಿ 15 ವಿಕೆಟ್ ಪಡೆದಿದ್ದಾರೆ. ಆದಾಗ್ಯೂ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 154 ವಿಕೆಟ್ಗಳನ್ನು ಕಬಳಿಸಿರುವ ಅವರು ಐದು ಶತಕಗಳನ್ನು ಬಾರಿಸಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಸಿಲಿನ ಧಗೆಯಿಂದ ಮುಕ್ತಿ ಪಡೆಯಲು ಹೆಚ್ಚಿನವರು ತಂಪಾದ ನೀರು (Cold Water) ಕುಡಿಯುವುದಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಾರೆ. ಬಿಸಿಲು ಮತ್ತು ಬೆವರಿನಿಂದ ದಣಿದಿದ್ದವರಿಗೆ ತಣ್ಣೀರು ತಕ್ಷಣ ತಂಪು ಮತ್ತು ಆರಾಮವನ್ನು ನೀಡುತ್ತದೆ. ಹಾಗಾಗಿ ಫ್ರಿಜ್ನ ನೀರು ಅಥವಾ ಐಸ್ ಹಾಕಿದ ನೀರು ಬಹುತೇಕ ಮನೆಗಳಲ್ಲಿ ಸಾಮಾನ್ಯವಾಗಿದೆ. ಆದರೆ, ಪ್ರತಿಯೊಂದು ಅಭ್ಯಾಸವೂ ದೇಹದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ಮರೆಯಬಾರದು. ತಣ್ಣೀರು ಕೂಡ ಇದಕ್ಕೆ ಹೊರತಾಗಿಲ್ಲ. ಅದರಲ್ಲಿಯೂ ಕೆಲವರು ಪದೇ ಪದೇ ತಂಪಾಗಿರುವ ನೀರನ್ನು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ವಿಶೇಷವಾಗಿ ದೇಹ ಹೆಚ್ಚು ಬಿಸಿಯಾಗಿರುವಾಗ ಏಕಾಏಕಿ ತಣ್ಣೀರು ಕುಡಿಯುವುದರಿಂದ ಲಾಭಕ್ಕಿಂತ ಸಮಸ್ಯೆಗಳು ಉಂಟಾಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಇದು ಮುಂದೆ ಆರೋಗ್ಯ ಸಮಸ್ಯೆಗಳ ಹೆಚ್ಚಳಕ್ಕೂ ಕಾರಣವಾಗಬಹುದು. ಹಾಗಾದರೆ ತಂಪಾದ ನೀರು ಕುಡಿಯುವುದರಿಂದ ಯಾವ ರೀತಿಯ ಸಮಸ್ಯೆಗಳಾಗುತ್ತವೆ, ಯಾರು ಇದರಿಂದ ದೂರವಿರಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
ತಂಪಾದ ನೀರು ಕುಡಿಯುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು:
ತಜ್ಞರ ಪ್ರಕಾರ, ತುಂಬಾ ತಂಪಾದ ನೀರು ಅಥವಾ ತಣ್ಣೀರು ಕುಡಿಯುವುದರಿಂದ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಹೊಟ್ಟೆ ಭಾರವಾಗುವುದು ಅಥವಾ ಗ್ಯಾಸ್ಟ್ರಿಕ್ ಸಮಸ್ಯೆಗಳು ಕಂಡುಬರಬಹುದು. ಜೊತೆಗೆ, ತಣ್ಣೀರಿನಿಂದ ಗಂಟಲಿನಲ್ಲಿ ಕೆರೆತ ಅಥವಾ ಶೀತಕ್ಕೆ ಕಾರಣವಾಗಬಹುದು, ಅದರಲ್ಲಿಯೂ ಬೇಸಿಗೆಯಲ್ಲಿ ದೇಹ ಬಿಸಿಯಾಗಿರುವುದರಿಂದ ಒಮ್ಮೆಲೇ ತಣ್ಣೀರು ಕುಡಿದಾಗ ದೇಹದ ತಾಪಮಾನದಲ್ಲಿ ಏಕಾಏಕಿ ಬದಲಾವಣೆಯಾಗುತ್ತದೆ. ಕೆಲವರಿಗೆ ತಲೆನೋವು ಅಥವಾ ಸುಸ್ತು ಕಾಣಿಸಿಕೊಳ್ಳಬಹುದು. ಮಾತ್ರವಲ್ಲ, ಇದು ರಕ್ತ ಸಂಚಾರದ ಮೇಲೂ ಪರಿಣಾಮ ಬೀರುತ್ತದೆ. ನಿರಂತರವಾಗಿ ತಣ್ಣೀರು ಕುಡಿಯುವ ಅಭ್ಯಾಸ ದೇಹದ ಸಹಜ ಪ್ರಕ್ರಿಯೆಗಳನ್ನು ನಿಧಾನಗೊಳಿಸಬಹುದು, ಇದರಿಂದ ದೀರ್ಘಕಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಬಹುದು.
ಬೆಂಗಳೂರು, ಮಾರ್ಚ್ 20: ದೇಶದಲ್ಲಿ ಸಿಲಿಂಡರ್ (Cylinder) ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉದ್ಯಮಗಳು ಬಂದ್ ಆಗುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (cm Siddaramaiah) ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ.
ಕೇಂದ್ರ ಸಚಿವ ಹರ್ದೀಪ್ ಸಿಂಗ್ಗೆ ಸಿಎಂ ಪತ್ರ
ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನ ಬರೆದಿದ್ದರು. ಈಗ ಸಿಲಿಂಡರ್ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೊಂದು ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ಗೆ ಬರೆದ ಪತ್ರದಲ್ಲಿ ರಾಜ್ಯದ ಸಿಲಿಂಡರ್ಗಳ ಅಭಾವದ ಬಗ್ಗೆ ಉಲ್ಲೇಖಿಸಿದ್ದಾರೆ. 50 ಸಾವಿರ ಸಿಲಿಂಡರ್ಗಳು ಬೇಕು. ಭಾರತಕ್ಕೆ ಬಂದಿರುವ ತೈಲ ಹಡಗುಗಳ ತೈಲವನ್ನ ಸಮರ್ಪಕವಾಗಿ ಹಂಚಿಕೆ ಮಾಡುವಂತೆ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
“I have written to the Union Petroleum Minister Shri @HardeepSPuri seeking urgent intervention to address the severe shortage of commercial LPG in Bengaluru, which is impacting supply and livelihoods across Karnataka.
ರೆಸ್ಟೋರೆಂಟ್ಗಳು, ಹೋಟೆಲ್ಗಳು, ಅಡುಗೆ ತಯಾರಿಸುವ ಸಂಸ್ಥೆಗಳು ಹಾಗೂ ಪಿಜಿಗಳಲ್ಲಿ ಸಿಲಿಂಡರ್ ಅಭಾವ ಹೆಚ್ಚಾಗಿದೆ. ಹೀಗಾಗಿ 50 ಸಾವಿರ LPG ಸಿಲಿಂಡರ್ಗಳ ಬೇಡಿಕೆಗೆ ಇದೆ. ನಾವು ದಿನಕ್ಕೆ 1000 ಸಿಲಿಂಡರ್ಗಳನ್ನು ಮಾತ್ರ ಪೂರೈಸಲು ಸಮರ್ಥರಾಗಿದ್ದೇವೆ. ಈ ಕಾರಣಕ್ಕೆ ಹೋಟೆಲ್, ಪಿಜಿಗಳು ಮುಚ್ಚುವ ಪರಿಸ್ಥಿತಿ ಎದುರಾಗಿದೆ.
ವಿದ್ಯಾರ್ಥಿಗಳು, ಐಟಿ ನೌಕರರು, ರೈತರು, ಡೈರಿ ಉತ್ಪಾದಕರು ಸೇರಿದಂತೆ ಅನೇಕ ಜನ ಆತಿಥ್ಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ. ಇದೇ ರೀತಿ ಎಲ್ಪಿಜಿ ಇಲ್ಲದೇ ಆಟೋ ರೀಕ್ಷಗಳಿಗೂ ಸಂಕಷ್ಟ ಶುರುವಾಗಿದೆ. ಭಾರತ 2 ಟ್ಯಾಂಕರ್ಗಳನ್ನ ಸ್ವೀಕರಿಸಿದೆ. ಇದು ಸಮಸ್ಯೆಗಳನ್ನ ನಿವಾರಿಸುತ್ತದೆ. ಹೀಗಾಗಿ ಕರ್ನಾಟಕಕ್ಕೆ ಸಮರ್ಪಕ ಹಂಚಿಕೆ ಮಾಡಿ. ನಮ್ಮ ಲಭ್ಯತೆ ಚಿತಪಡಿಸಿಕೊಳ್ಳಲು ನೀವು ಹಸ್ತಕ್ಷೇಪ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು, ಮಾರ್ಚ್ 20: ಕಾಳೇನ ಅಗ್ರಹಾರ ಟು ತಾವರೆಕೆರೆ ನಡುವಿನ ಪಿಂಕ್ ಲೈನ್ ಎತ್ತರಿಸಿದ ಮೆಟ್ರೋ ಮಾರ್ಗವನ್ನು ಈ ವರ್ಷ ಮೇ ತಿಂಗಳಿನಲ್ಲಿ ಓಪನ್ ಮಾಡಲು ಬಿಎಂಆರ್ಸಿಎಲ್ ಭರದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ನಾಳೆಯಿಂದ ಏಪ್ರಿಲ್ 5ರ ವರೆಗೆ 16 ದಿನಗಳ ಕಾಲ RDSO ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪರಿಶೀಲನಾ ಕಾರ್ಯಗಳು ನಡೆಯಲಿವೆ. ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು ಅಧಿಕಾರಿಗಳು ನಡೆಸಲಿದ್ದಾರೆ.
ಇನ್ನು ಈ ಪಿಂಕ್ ಲೈನ್ಗೆ ಅದಾಗಲೇ 4 ರೈಲುಗಳು ಆಗಮಿಸಿವೆ. ಇವುಗಳ ಜೊತಗೆ ಈ ತಿಂಗಳ ಕೊನೆಯಲ್ಲಿ ಒಂದು ರೈಲು ಮತ್ತು ಏಪ್ರಿಲ್ ಮೊದಲ ವಾರದಲ್ಲಿ ಆರನೇ ರೈಲು ಸೇರ್ಪಡೆಯಾಗಲಿವೆ. ಆ ಮೂಲಕ ಮೊದಲ ಹಂತದಲ್ಲಿ ಪಿಂಕ್ ಲೈನ್ನಲ್ಲಿ 6 ಡ್ರೈವರ್ಲೆಸ್ ರೈಲುಗಳು ಸಂಚರಿಸಲಿದ್ದು, ಕಾಳೇನ ಅಗ್ರಹಾರ ಟು ನಾಗವಾರ ನಡುವೆ ಇವು ಸಂಪರ್ಕ ಕಲ್ಪಿಸಲಿವೆ. ಪಿಂಕ್ ಲೈನ್ ಒಟ್ಟು 21.25 ಕಿ.ಮೀ. ವಿಸ್ತೀರ್ಣ ಹೊಂದಿದ್ದು 18 ಮೆಟ್ರೋ ನಿಲ್ದಾಣಗಳನ್ನು ಒಳಗೊಂಡಿದೆ. ಆ ಪೈಕಿ 12 ಅಂಡರ್ ಗ್ರೌಂಡ್ ಮತ್ತು 6 ಎಲಿವೇಟೆಡ್ ಸ್ಟೇಷನ್ಗಳಾಗಿವೆ. ಈ ವರ್ಷ ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6 ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಓಪನ್ ಮಾಡಲು ಬಿಎಂಆರ್ಸಿಎಲ್ ಸಿದ್ದತೆ ಮಾಡಿಕೊಂಡಿದ್ದು, ಉಳಿದ 13.76.ಕಿ.ಮೀ ವಿಸ್ತೀರ್ಣದ 12 ಅಂಡರ್ ಗ್ರೌಂಡ್ ಸ್ಟೇಷನ್ ಮಾರ್ಗದ ಕಾಮಗಾರಿ ನಡೆಯುತ್ತಿವೆ. ಇವು ಪೂರ್ಣಗೊಂಡ ಬಳಿಕ ಈ ವರ್ಷದ ಅಂತ್ಯಕ್ಕೆ ಪೂರ್ತಿ ಮಾರ್ಗ ಓಪನ್ಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.
ಪಿಂಕ್ ಲೈನ್ಗಾಗಿ ಬಿಇಎಂಎಲ್ನಲ್ಲಿ ಒಟ್ಟು 23 ರೈಲುಗಳಿಗೆ ಆರ್ಡರ್ ನೀಡಲಾಗಿದ್ದು, ಈ ಮಾರ್ಗದ ಆರಂಭದಿಂದಾಗಿ ಪ್ರತಿನಿತ್ಯ ವಿಪರೀತ ವಾಹನ ದಟ್ಟಣೆಯಿಂದ ಕೂಡಿರುವ ಬನ್ನೇರುಘಟ್ಟ ರಸ್ತೆಯ ಸಂಚಾರ ಸುಧಾರಿಸುವ ನಿರೀಕ್ಷೆಯೂ ಮೂಡಿದೆ. ಕೇಂದ್ರ ರೈಲ್ವೆ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಕೊನೆಯದಾಗಿ ಕಮಿಷನರ್ ಆಫ್ ಮೆಟ್ರೋ ರೈಲ್ವೇ ಸೇಫ್ಟಿಯಿಂದಲೂ ಅನುಮತಿ ಸಿಗುತ್ತಿದ್ದಂತೆ ಪಿಂಕ್ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳ ವಾಣಿಜ್ಯ ಸಂಚಾರ ಶುರುವಾಗಲಿದೆ.
ನವದೆಹಲಿ, ಮಾರ್ಚ್ 20: ಅಮೆರಿಕದ ಎಂಎನ್ಸಿ ಕಂಪನಿಯಾದ ವಾಲ್ಮಾರ್ಟ್ನ ಒಡೆತನದ ಫ್ಲಿಪ್ಕಾರ್ಟ್ ಸಂಸ್ಥೆಯ (Flipkart) ಎಕ್ಸಿಕ್ಯೂಟಿವ್ ಸ್ಥಾನಪಲ್ಲಟವಾಗುತ್ತಿದೆ. ಫ್ಲಿಪ್ಕಾರ್ಟ್ ಗ್ರೂಪ್ ಚೀಫ್ ಫೈನಾನ್ಷಿಯಲ್ ಆಫೀಸರ್ ಸ್ಥಾನದಿಂದ ಶ್ರೀರಾಮ್ ವೆಂಕಟರಾಮ್ (Sriram Venkatram) ಅವರು ಕೆಳಗಿಳಿಯಲಿದ್ದಾರೆ. ಭಾರತದ ಅತಿದೊಡ್ಡ ಇಕಾಮರ್ಸ್ ಕಂಪನಿಗಳಲ್ಲಿ ಒಂದೆನಿಸಿರುವ ಫ್ಲಿಪ್ಕಾರ್ಟ್ ಈ ಸಂಗತಿಯನ್ನು ಶುಕ್ರವಾರ ಪ್ರಕಟಿಸಿದೆ.
ಶ್ರೀರಾಮ್ ವೆಂಕಟರಾಮ್ ಅವರು 2015ರಲ್ಲಿ ಫ್ಲಿಪ್ಕಾರ್ಟ್ ಸೇರಿದ್ದರು. ಹಲವು ಮುಂಚೂಣಿ ಹುದ್ದೆಗಳನ್ನು ನಿಭಾಯಿಸುತ್ತಾ ಹೋಗಿದ್ದ ಅವರು 2018ರಲ್ಲಿ ಗ್ರೂಪ್ನ ಸಿಎಫ್ಒ ಆಗಿ ಕಂಪನಿಯ ಹಣಕಾಸು ವಿಭಾಗದ ಚುಕ್ಕಾಣಿ ಹಿಡಿದು ಜವಾಬ್ದಾರಿ ನಿಭಾಯಿಸಿದ್ದರು.
ಫ್ಲಿಪ್ಕಾರ್ಟ್ನ ಮಾರ್ಕೆಟ್ಪ್ಲೇಸ್ ವಿಭಾಗದ ಸಿಎಫ್ಒ ಆಗಿರುವ ರವಿ ಅಯ್ಯರ್ ಅವರು ಗ್ರೂಪ್ ಸಿಎಫ್ಒ ಆಗಿ ಶ್ರೀರಾಮ್ ವೆಂಕಟರಾಮ್ ಸ್ಥಾನವನ್ನು ತುಂಬಲಿದ್ದಾರೆ. ಅಯ್ಯರ್ ಅವರು 2014ರಿಂದಲೂ ಫ್ಲಿಪ್ಕಾರ್ಟ್ನಲ್ಲಿದ್ದಾರೆ. ಇತ್ತೀಚಿನ ಕೆಲ ವರ್ಷಗಳಿಂದ ಇವರನ್ನು ಉನ್ನತ ಹುದ್ದೆಗೆ ಅಣಿಗೊಳಿಸುವ ಕೆಲಸ ಕಂಪನಿಯಲ್ಲಿ ನಡೆದಿದೆ. ಆ ನಿಟ್ಟಿನಲ್ಲಿ ಮಾರ್ಕೆಟ್ಪ್ಲೇಸ್ ಬ್ಯುಸಿನೆಸ್ನ ಸಿಎಫ್ಒ ಆಗಿ ಅವರಿಗೆ ಬಡ್ತಿ ಕೊಡಲಾಗಿತ್ತು. ಗ್ರೂಪ್ ಸಿಎಫ್ಒ ಆಗಲು ಬೇಕಾದ ಪ್ರತ್ಯಕ್ಷ ಅನುಭವ ಗಳಿಸಲು ಅವರಿಗೆ ಆ ಸ್ಥಾನ ಕೊಡಲಾಗಿದ್ದಿರಬಹುದು.
ಅದೇ ವೇಳೆ, ಶ್ರೀರಾಮ್ ವೆಂಕಟರಾಮ್ ಅವರೂ ಕೂಡ ಆರು ತಿಂಗಳಿಂದ ಕಂಪನಿಯ ಕಾರ್ಯಗಳಲ್ಲಿ ಮತ್ತು ನಿರ್ಧಾರಗಳಲ್ಲಿ ತೀರಾ ಸಕ್ರಿಯವಾಗಿ ತೊಡಗಿಸಿಕೊಳ್ಳುವುದನ್ನು ಕಡಿಮೆಗೊಳಿಸಿದ್ದರು. ರವಿ ಅಯ್ಯರ್ ಅವರನ್ನು ಆ ಸ್ಥಾನಕ್ಕೆ ಅಣಿಗೊಳಿಸುವ ಪ್ರಯತ್ನ ಅದಾಗಿದ್ದಿರಬಹುದು.
ಬೆಂಗಳೂರಿನಲ್ಲಿ ಮುಖ್ಯಕಚೇರಿ ಹೊಂದಿರುವ ಫ್ಲಿಪ್ಕಾರ್ಟ್ ಭಾರತದ ಮುಖ್ಯ ಇಕಾಮರ್ಸ್ ಕಂಪನಿ. ಬನ್ಸಾಲ್ ಸಹೋದರರು ಸ್ಥಾಪಿಸಿದ ಕಂಪನಿ ಇದು. ಅಮೆರಿಕದ ರೀಟೇಲ್ ಮಾರಾಟ ಕಂಪನಿಯಾದ ವಾಲ್ಮಾರ್ಟ್ ಫ್ಲಿಪ್ಕಾರ್ಟ್ ಅನ್ನು ಖರೀದಿಸಿತ್ತು. ಸದ್ಯ ಕಲ್ಯಾಣ್ ಕೃಷ್ಣಮೂರ್ತಿ ಅವರು ಗ್ರೂಪ್ ಸಿಇಒ ಆಗಿದ್ದಾರೆ. ಫ್ಲಿಪ್ಕಾರ್ಟ್ ಈ ವರ್ಷ ಐಪಿಒ ಆಫರ್ ಮಾಡುತ್ತಿದ್ದು ಷೇರು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದೆ.
ತುಮಕೂರು, ಮಾರ್ಚ್ 20: ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೇ ಮಾಹಿತಿ ನೀಡಿದ್ದಾರೆ. ಜೂಜಾಟ ಕೇಸ್ ಸಂಬಂಧ ವಿಚಾರಣೆಗೆ ಪೊಲೀಸರು ಕರೆತಂದಿದ್ದ ಆರು ಮಂದಿಯ ಪೈಕಿ ಓರ್ವ ಮೃತಪಟ್ಟಿದ್ದರು. ಅನುಮಾನಾಸ್ಪದವಾಗಿ ಕಾಂತರಾಜು ಎಂಬವರು ಮೃತಪಟ್ಟಿದ್ದು, ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ವಿಚಾರಣೆ ನೆಪದಲ್ಲಿ ಹಲ್ಲೆ ನಡೆಸಿ ಕೊಲೆಗೈಯಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಸರ್ಕಾರ ಪ್ರಕರಣವನ್ನು ಸಿಐಡಿಗೆ ನೀಡಿದೆ.
ಚಿಕ್ಕನಾಯಕನಹಳ್ಳಿಯ ಯಳನಾಡು ಗ್ರಾಮದ ನಿವಾಸಿ ಮೃತ ಕಾಂತರಾಜು ಜೊತೆ ನಿನ್ನೆ ಸಂಜೆ ಇದ್ದ ಪ್ರದೀಪ್ ಎಂಬವರು ಹೇಳುವಂತೆ, ಜೂಜಾಡದಿದ್ದರೂ ಕಾಂತರಾಜು ಸೇರಿ ಐವರನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಪೊಲೀಸ್ ಠಾಣೆಗೆ ಬರುವ ಹೊತ್ತಲ್ಲಿ ಕಾಂತರಾಜು ತುಂಬಾ ಸುಸ್ತಾಗಿರುವಂತೆ ಕಂಡಿದ್ದರು. ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿರುವಂತೆ ಕಂಡರೂ ಪೊಲೀಸರು ತಲೆಕೆಡಿಸಿಕೊಂಡಿರಲಿಲ್ಲ. ಹೇಳಿಕೆ ಪಡೆಯಲು ಬಂದಿದ್ದ ಸರ್ಕಲ್ ಇನ್ಸ್ಪೆಕ್ಟರ್ ಠಾಣೆಯಲ್ಲಿಯೇ ಮಲಗಿದ್ದ ಕಾಂತರಾಜು ಮುಖಕ್ಕೆ ಕಾಲಿನಿಂದ ಒದ್ದು ಎಬ್ಬಿಸಿದ್ದಾರೆ. ಎಲ್ಲ ಪ್ರಕ್ರಿಯೆ ಮುಗಿಸಿ ಹೊರ ಬರುವಾಗ ಕಾಂತರಾಜು ಠಾಣೆಯ ಬಾಗಿಲ ಬಳಿ ಕುಸಿದು ಬಿದ್ದು ಮೃತಪಟ್ಟಿರೋದಾಗಿ ತಿಳಿಸಿದ್ದಾರೆ.
ಮತ್ತೊಂದೆಡೆ ಕಾಂತರಾಜು ಕುಟುಂಬದ ದುಃಖದ ಕಟ್ಟೆ ಒಡೆದಿದ್ದು, ಪತ್ನಿ, ಇಬ್ಬರು ಮಕ್ಕಳು ನಮಗ್ಯಾರು ದಿಕ್ಕು ಎಂದು ಗೋಳಾಡುತ್ತಿದ್ದಾರೆ. ಘಟನೆ ಬಗ್ಗೆ ಸೂಕ್ತ ತನಿಖೆ ಆಗಬೇಕು. ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಆಗಬೇಕು ಎಂದು ಮೃತನ ಮಗಳಾದ ನಂದಿತಾ ಆಗ್ರಹಿಸಿದ್ದಾರೆ. ಇನ್ನು ಕಾಂತರಾಜು ಮಗ ತಿಲಕ್ ಗೌಡ ತಂದೆಯ ಸಾವಿನ ಬಗ್ಗೆ ದೂರು ನೀಡಿದ್ದು, ಸಾವಿಗೆ ಪೊಲೀಸರೆ ಹೊಣೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಗ್ಯ ಸಮಸ್ಯೆ ಬಗ್ಗೆ ಹೇಳಿದರೂ ಚಿಕಿತ್ಸೆ ಕೊಡಿಸದೆ, ತಂದೆಯ ತಲೆ, ಕಾಲು ಹಾಗೂ ಎದೆಗೆ ಬೂಟು ಕಾಲಿನಿಂದ ಒದ್ದಿರೋದಾಗಿ ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಹುಳಿಯಾರು ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.
ನವದೆಹಲಿ, ಮಾರ್ಚ್ 20: ಭಾರತದಲ್ಲಿ ಒಟ್ಟು 8,400 ಅಕ್ರಮ ವೆಬ್ಸೈಟ್ಗಳನ್ನು ನಿರ್ಬಂಧಿಸಿರುವ ಕೇಂದ್ರ ಸರ್ಕಾರ ಆನ್ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದ ನಂತರ ಸುಮಾರು 4,900 ಸೈಟ್ಗಳ ಮೇಲೆ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಅಕ್ರಮ ಬೆಟ್ಟಿಂಗ್ (Illegal Betting) ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಹಾಗೇ, 300 ವೆಬ್ಸೈಟ್ಗಳು ಮತ್ತು ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ಗಳನ್ನು (Online Gaming Apps) ನಿರ್ಬಂಧಿಸಿದೆ.
ಕೇಂದ್ರ ಸರ್ಕಾರವು ಅಕ್ರಮ ಆನ್ಲೈನ್ ಜೂಜು ಮತ್ತು ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳ ಮೇಲಿನ ಕಠಿಣ ಕ್ರಮವನ್ನು ತೀವ್ರಗೊಳಿಸಿದೆ. ಆನ್ಲೈನ್ ಕ್ರೀಡಾ ಬೆಟ್ಟಿಂಗ್, ಕ್ಯಾಸಿನೊ-ಶೈಲಿಯ ಗೇಮಿಂಗ್ ಮತ್ತು ಪೀರ್-ಟು-ಪೀರ್ ಬೆಟ್ಟಿಂಗ್, ಓಲ್ಡ್ ಸ್ಕೂಲ್ ಸತ್ತಾ ಆ್ಯಂಡ್ ಮಟ್ಕಾ ನೆಟ್ವರ್ಕ್, ಕ್ಯಾಸಿನೋ ಆ್ಯಪ್ ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳ ಮೇಲೆ ಮೋದಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಸರ್ಕಾರದ ಈ ಕ್ರಮವು ಆನ್ಲೈನ್ ಕ್ರೀಡಾ ಬೆಟ್ಟಿಂಗ್ ವೆಬ್ಸೈಟ್ಗಳು, ಸ್ಲಾಟ್ಗಳು, ರೂಲೆಟ್ ಮತ್ತು ಲೈವ್ ಡೀಲರ್ ಟೇಬಲ್ಗಳಂತಹ ಆಟಗಳನ್ನು ನೀಡುವ ವರ್ಚುವಲ್ ಕ್ಯಾಸಿನೊಗಳು ಮತ್ತು ಪೀರ್-ಟು-ಪೀರ್ ಮಾರುಕಟ್ಟೆಗಳಾಗಿ ಕಾರ್ಯನಿರ್ವಹಿಸುವ ಬೆಟ್ಟಿಂಗ್ ಎಕ್ಸ್ಚೇಂಜ್ಗಳು ಸೇರಿದಂತೆ ಹಲವಾರು ವರ್ಗಗಳ ಅಕ್ರಮ ಪ್ಲಾಟ್ಫಾರ್ಮ್ಗಳನ್ನು ಗುರಿಯಾಗಿಸಿಕೊಂಡಿದೆ. ಅಧಿಕಾರಿಗಳು ರಿಯಲ್-ಮನಿ ಕಾರ್ಡ್ ಮತ್ತು ಕ್ಯಾಸಿನೊ ಗೇಮಿಂಗ್ ಅಪ್ಲಿಕೇಶನ್ಗಳ ಜೊತೆಗೆ ಸತ್ತಾ ಮತ್ತು ಮಟ್ಕಾ ಜೂಜಿನ ನೆಟ್ವರ್ಕ್ಗಳ ವಿರುದ್ಧವೂ ಕ್ರಮ ಕೈಗೊಂಡಿದ್ದಾರೆ.
ಅಧಿಕೃತ ಮಾಹಿತಿಯ ಪ್ರಕಾರ, ಕೇಂದ್ರ ಸರ್ಕಾರವು ಇಲ್ಲಿಯವರೆಗೆ ಸುಮಾರು 8,400 ಜೂಜು ಮತ್ತು ಬೆಟ್ಟಿಂಗ್ ವೆಬ್ಸೈಟ್ಗಳು ಮತ್ತು ಅಪ್ಲಿಕೇಶನ್ಗಳನ್ನು ನಿರ್ಬಂಧಿಸಿದೆ. ಇವುಗಳಲ್ಲಿ ಸುಮಾರು 4,900 ಪ್ಲಾಟ್ಫಾರ್ಮ್ಗಳನ್ನು ಆನ್ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದ ನಂತರ ತೆಗೆದುಹಾಕಲಾಯಿತು. ಇದು ಡಿಜಿಟಲ್ ಗೇಮಿಂಗ್ ಮತ್ತು ಬೆಟ್ಟಿಂಗ್ ಚಟುವಟಿಕೆಗಳನ್ನು ನಿಯಂತ್ರಿಸಲು ಕಾನೂನು ಚೌಕಟ್ಟನ್ನು ಬಲಪಡಿಸಿತು.
ಈ ವರ್ಷದ ಜನವರಿಯ ಆರಂಭದಲ್ಲಿ ಕೇಂದ್ರ ಸರ್ಕಾರವು 242 ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟ ವೆಬ್ಸೈಟ್ ಲಿಂಕ್ಗಳನ್ನು ನಿರ್ಬಂಧಿಸಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಬಾರಿಯಂತೆ ಈ ಬಾರಿಯೂ ಭಾಗಶಃ ಐಪಿಎಲ್ ತಂಡಗಳು ಸ್ಟಾರ್ ಆಟಗಾರರ ಇಂಜುರಿ ಮತ್ತು ಅಲಭ್ಯತೆಯಿಂದ ಸಂಕಷ್ಟಕ್ಕೆ ಸಿಲುಕಿವೆ. ಈಗಾಗಲೇ ಮೂರ್ನಾಲ್ಕು ಫ್ರಾಂಚೈಸಿಗಳಿಗೆ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇನ್ನು ಕೆಲವು ಫ್ರಾಂಚೈಸಿಗಳಿಗೆ ಸ್ಟಾರ್ ಆಟಗಾರರ ಆರಂಭಿಕ ಅಲಭ್ಯತೆ ದೊಡ್ಡ ಸವಾಲಾಗಿದೆ. ಅಂತಹ ಫ್ರಾಂಚೈಸಿಗಳ ಪಟ್ಟಿಗೆ ಇದೀಗ ಪಂಜಾಬ್ ಕಿಂಗ್ಸ್ ಸೇರಿಕೊಂಡಿದೆ.
ಕಳೆದ ಆವೃತ್ತಿಯಿಂದ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗುಸನ್, ಲೀಗ್ನ ಆರಂಭಿಕ ಪಂದ್ಯಗಳಿಗೆ ಲಭ್ಯರಿಲ್ಲ ಎಂದು ವರದಿಯಾಗಿದೆ. ಫರ್ಗುಸನ್ ಅವರ ಮಡದಿ ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ಫರ್ಗುಸನ್ ತಮ್ಮ ಪತ್ನಿ ಹಾಗೂ ಕುಟುಂಬದೊಂದಿಗೆ ಕೆಲವು ದಿನ ಕಾಲ ಕಳೆಯುವ ಸಲುವಾಗಿ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಗೈರಾಗಲಿದ್ದಾರೆ.
2025 ರ ಮೆಗಾ ಹರಾಜಿನಲ್ಲಿ ಫರ್ಗುಸನ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ 2 ಕೋಟಿ ರೂ. ಮೂಲ ಬೆಲೆಗೆ ತಂಡಕ್ಕೆ ಸೇರಿಸಿಕೊಂಡಿತ್ತು. ಅದಾದ ಬಳಿಕ 2026 ರ ಹರಾಜಿಗೂ ಮುನ್ನ ಅವರನ್ನು ತಂಡದಲ್ಲೇ ಉಳಿಸಿಕೊಂಡಿತ್ತು. ಇದೀಗ ಫರ್ಗುಸನ್ ಈಗಾಗಲೇ ತಮ್ಮ ಅಲಭ್ಯತೆಯನ್ನು ಪಂಜಾಬ್ ಕಿಂಗ್ಸ್ ಆಡಳಿತ ಮಂಡಳಿಗೆ ತಿಳಿಸಿದ್ದು, ಕೆಲವು ದಿನಗಳ ಬಳಿಕ ತಂಡವನ್ನು ಕೂಡಿಕೊಳ್ಳುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.
ಪ್ರಸ್ತುತ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸರಣಿಯಲ್ಲಿ ಈಗಾಗಲೇ 3 ಪಂದ್ಯಗಳು ಮುಗಿದಿವೆ. ಉಳಿದ ಇನ್ನೇರಡು ಪಂದ್ಯಗಳನ್ನು ಆಡಿ ಮುಗಿಸಿದ ಬಳಿಕ ಫರ್ಗುಸನ್, ಕೆಲವು ವಾರಗಳ ಕಾಲ ವಿರಾಮ ತೆಗೆದುಕೊಳ್ಳಲು ಯೋಜಿಸಿದ್ದಾರೆ ಎಂದು ಇಎಸ್ಪಿಎನ್ಕ್ರಿಕ್ಇನ್ಫೊ ವರದಿ ಮಾಡಿದೆ.
ಫರ್ಗುಸನ್ ಈ ರೀತಿಯಾಗಿ ಲೀಗ್ ಆರಂಭದಲ್ಲಿ ಅಥವಾ ಮಧ್ಯದಲ್ಲಿ ತಂಡವನ್ನು ತೊರೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅಂದರೆ ಕಳೆದ ಆವೃತ್ತಿಯ ಐಪಿಎಲ್ನಲ್ಲಿಯೂ ಫರ್ಗುಸನ್ ಕೇವಲ 4 ಪಂದ್ಯಗಳನ್ನು ಆಡಿದ್ದರು. ಆ ಪಂದ್ಯಗಳಲ್ಲಿ 4 ವಿಕೆಟ್ಗಳನ್ನು ಸಹ ಪಡೆದಿದ್ದರು. ಆ ಬಳಿಕ ಗಾಯಗೊಂಡು ಟೂರ್ನಿಯಿಂದ ಹೊರಬಿದಿದ್ದರು.
‘ಧುರಂಧರ್ 2 ಒಂದು ಹಾರರ್. ಬುದ್ಧಿಹೀನ ಮತ್ತು ಅತಿಯಾದ ಅಬ್ಬರದ ಸಿನಿಮಾಗಳ ಮೂಲಕ ತಮ್ಮ ವೃತ್ತಿಜೀವನ ಕಟ್ಟಿಕೊಂಡಿರುವ ಎಲ್ಲಾ ಫಿಲ್ಮ್ ಮೇಕರ್ಗಳಿಗೆ ಇದೊಂದು ಭಯಾನಕ ಅನುಭವ. ಮೆದುಳನ್ನು ಮನೆಯಲ್ಲೇ ಬಿಟ್ಟು ಸಿನಿಮಾ ನೋಡಲು ಪ್ರೇರೇಪಿಸುತ್ತಿದ್ದಂತಹ ಸಿನಿಮಾಗಳ ಕಾಲ ಮುಗಿಯಿತು. ಅಬ್ಬರದ ಮತ್ತು ಮಸಾಲಾ ಸಿನಿಮಾಗಳು ಈಗ ವೆಂಟಿಲೇಟರ್ ಮೇಲೆ ಉಸಿರಾಡಲು ಒದ್ದಾಡುತ್ತಿವೆ. ದೇವರಂತೆ ಆರಾಧಿಸಲ್ಪಡುವ ಪ್ರತಿಯೊಬ್ಬ ಹೀರೋಗಳಿಗೂ ಧುರಂಧರ್ 2 (Dhurandhar 2) ಸಿನಿಮಾ ನಡುಕ ಹುಟ್ಟಿಸಲಿದೆ.’
‘ಈ ಸಿನಿಮಾ ಮೂಲಕ ರಣವೀರ್ ಸಿಂಗ್ ಅವರು ಎಂದಿಗೂ ಕಷ್ಟಪಡದ ಹೀರೋಗಳನ್ನು ಕೊಂದು ಹಾಕಿದ್ದಾರೆ. ಅಂತಹ ಹಳೇ ಮಾದರಿಯ ಹೀರೋಗಳ ಹೆಣದ ಮೇಲೆ, ಅವರು ಒಬ್ಬ ನೈಜ ಹೀರೋಗೆ ಜನ್ಮ ನೀಡಿದ್ದಾರೆ. ಈ ಹೊಸ ಹೀರೋನಲ್ಲೂ ದೋಷಗಳಿವೆ. ಆದರೆ ಅತ್ಯಂತ ಅಪಾಯಕಾರಿ ಮತ್ತು ಊಹಿಸಲಾಗದ ವ್ಯಕ್ತಿ ಈತ. ಇಲ್ಲಿ ಹೀರೋಯಿಸಂ ಎನ್ನುವುದು ಕಿವಿಗೆ ಹಾನಿಯಾಗುವಂತಹ ಹಿನ್ನೆಲೆ ಸಂಗೀತದ ಮೂಲಕ ಜನರ ತಲೆಗೆ ತುರುಕಿದ್ದಲ್ಲ. ಬದಲಿಗೆ ಆತನ ಕಾರ್ಯಗಳಿಂದ ಹೀರೋಯಿಸಂ ಮೂಡಿಬಂದಿದೆ.’
‘ಈ ಹೊಸ ಮಾದರಿಯ ಹೀರೋಗೆ ಹೋಲಿಸಿದರೆ, ಹಳೆಯ ದೇವಮಾನವ ಹೀರೋಗಳು ಇದ್ದಕ್ಕಿದ್ದಂತೆ ಸರ್ಕಸ್ನ ಜೋಕರ್ಗಳಂತೆ ಹಾಸ್ಯಾಸ್ಪದವಾಗಿ ಕಾಣುತ್ತಾರೆ. ಧುರಂಧರ್ 2 ಚಿತ್ರದ ಕಲೆಕ್ಷನ್ ಕಂಡು ಅವರ ಕುರುಡು ಅಭಿಮಾನಿಗಳು ಅಸಹಾಯಕರಾಗಿ ಭಯಬೀಳುತ್ತಿದ್ದಾರೆ. ಫಿಸಿಕ್ಸ್ ಒಂದು ಹಾಸ್ಯ ಮತ್ತು ಗ್ರಾವಿಟಿಯೇ ಇಲ್ಲ ಎಂಬಂತೆ ಸಾಹಸ ದೃಶ್ಯಗಳನ್ನು ಸೃಷ್ಟಿಸಿ ಕೆರಿಯರ್ ಕಟ್ಟಿಕೊಂಡವರಿಗೆ ಈ ಸಿನಿಮಾ ಭೀತಿ ಹುಟ್ಟಿಸಿದೆ. ಮನುಷ್ಯರನ್ನು 50 ಅಡಿ ಎತ್ತರಕ್ಕೆ ಎಸೆಯುವ, ರಬ್ಬರ್ ಬಾಲ್ ತರಹ ನೆಲಕ್ಕೆ ಬಡಿಯುವ, ನಗರವನ್ನೇ ಭಸ್ಮ ಮಾಡುವ ಸ್ಫೋಟದಿಂದ ಬದುಕುಳಿದು ಧೂಳು ಕೊಡವಿಕೊಂಡು ಡೈಲಾಗ್ ಹೊಡೆಯುವ ದೃಶ್ಯಗಳನ್ನು ಹೊಸ ತಲೆಮಾರಿನ ಪ್ರೇಕ್ಷಕರು ಈಗ ಕೊಲ್ಲಲಿದ್ದಾರೆ.’
‘ನೈಜ ಆಕ್ಷನ್ ಸೀನ್ಗಳನ್ನು ನೋಡಿದ ಮೇಲೆ, ಗಾಳಿಯಲ್ಲಿ ಹಾರುವ ಖಳನಾಯಕ ಗುಂಪು ಈಗ ನಕಲಿಯಾಗಿ ಕಾಣುತ್ತಿದೆ. ವೈರ್ ಮತ್ತು ಕ್ರೇನ್ಗಳ ಮೂಲಕ ಹೀರೋಗಳನ್ನು ಮೇಲೆತ್ತಿ ತೋರಿಸುತ್ತಿದ್ದ ನಿರ್ದೇಶಕರು ಈಗ ಬೆವರುತ್ತಾ ಎಚ್ಚರಗೊಳ್ಳುವಂತಾಗಿದೆ. ಕೇವಲ ಹೇರ್ ಸ್ಟೈಲ್, ಕಾಸ್ಟ್ಯೂಮ್, ಫೋಟೋಶಾಪ್ ಮಾಡಿದ ಸಿಕ್ಸ್ ಪ್ಯಾಕ್ ಮತ್ತು ಡಿಸೈನರ್ ಬಟ್ಟೆಗಳಿಂದ ಪಾತ್ರಗಳು ಸೃಷ್ಟಿಯಾಗುತ್ತವೆ ಎಂದು ನಂಬಿರುವ ಪ್ಯಾನ್-ಇಂಡಿಯಾ ನಿರ್ದೇಶಕರು ಈಗ ತಮ್ಮ ಕುರ್ಚಿಯಲ್ಲಿ ನಡುಗುತ್ತಿದ್ದಾರೆ.’
It is a horror for all filmmakers who built their careers and their fortunes on dumbed down, over the top cinema.
The cinema that demanded the brain to be left at home .
The cinema that was rammed down our throats full of LOUDNESS and MASALA which…
‘ಧುರಂಧರ್ 2 ಚಿತ್ರದ ಹೀರೋನ ಶಕ್ತಿ ಆತನ ಬೈಸೆಪ್ಸ್ನಿಂದಲ್ಲ, ಬದಲಿಗೆ ಆತನ ಬುದ್ಧಿವಂತಿಕೆಯಿಂದ ಬರುತ್ತದೆ ಎಂದು ಪ್ರೇಕ್ಷಕರು ತಿಳಿದುಕೊಂಡ ಮೇಲೆ, ಈ ಹೇರ್ ಮತ್ತು ಕಾಸ್ಟ್ಯೂಮ್ ಶಾಲೆಯ ಸಿನಿಮಾಗಳು ಸಣ್ಣ ಮಕ್ಕಳ ಆಟದಂತೆ ಕಾಣುತ್ತಿವೆ. ಧುರಂಧರ್ 2 ಕೇವಲ ಒಂದು ಸಿನಿಮಾವಲ್ಲ. ಅದೊಂದು ಅಂತಿಮ ತೀರ್ಪು. ಪ್ರೇಕ್ಷಕರ ಬುದ್ಧಿವಂತಿಕೆಯನ್ನು ಅವಮಾನಿಸುವ ಮತ್ತು ಹೀರೋಗಳನ್ನು ದೇವರುಗಳನ್ನಾಗಿ ಮಾಡಿ ಪ್ರೇಕ್ಷಕರನ್ನು ಕುರಿಗಳನ್ನಾಗಿಸುವ ಸಿನಿಮಾಗಳನ್ನು ಆದಿತ್ಯ ಧಾರ್ ಅವರು ಕೊಂದಿದ್ದಾರೆ.’
‘ಈ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ಆ ಹಳೆಯ ನಿರ್ಮಾಪಕರ ನಂಬಿಕೆಗಳನ್ನು ಎಷ್ಟು ಆಳವಾದ ಗುಂಡಿಯಲ್ಲಿ ಹೂತು ಹಾಕುತ್ತಿದೆ ಎಂದರೆ, ಅಲ್ಲಿಂದ ಅವರ ಪ್ರೇತಾತ್ಮಗಳೂ ಹೊರಬರಲು ಸಾಧ್ಯವಿಲ್ಲ. ಈಗ ನೀವು ಕೇಳುತ್ತಿರುವ ಬಾಕ್ಸ್ ಆಫೀಸ್ ಕಲೆಕ್ಷನ್ನ ಆರ್ಭಟವೇ ಆ ಹಳೇ ಮಾದರಿಯ ಸಿನಿಮಾಗಳ ಅಂತ್ಯದ ಕಿರುಚಾಟ. ಈಗಾಗಲೇ ಚಿತ್ರೀಕರಣ ಹಂತದಲ್ಲಿರುವ ಅಂತಹ ಸಿನಿಮಾಗಳ ನಿರ್ಮಾಪಕರು ಈ ಕೂಡಲೇ ಧುರಂಧರ್ 2 ಚಿತ್ರವನ್ನು ಹಲವು ಬಾರಿ ನೋಡಿ ತಮ್ಮನ್ನು ತಾವು ತಿದ್ದಿಕೊಳ್ಳದಿದ್ದರೆ, ಅವರನ್ನು ಆ ದೇವರೂ ಕೂಡ ಉಳಿಸಲು ಸಾಧ್ಯವಿಲ್ಲ. ಆದರೆ ಒಂದು ಸಮಸ್ಯೆ ಇದೆ. ಅವರ ಹತ್ತಿರ ಕೋಟಿಗಟ್ಟಲೆ ಹಣವಿರಬಹುದು, ಆದರೆ ಆದಿತ್ಯ ಧಾರ್ ಅವರಂತಹ ಮೆದುಳನ್ನು ಎಲ್ಲಿಂದ ತರುತ್ತಾರೆ?’