All posts by nagaraj11081993

Dhurandhar 2: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್​ಗಳು; ಆರ್​ಜಿವಿ ಟೀಕೆ

Dhurandhar 2: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್​ಗಳು; ಆರ್​ಜಿವಿ ಟೀಕೆ

‘ಧುರಂಧರ್ 2 ಒಂದು ಹಾರರ್. ಬುದ್ಧಿಹೀನ ಮತ್ತು ಅತಿಯಾದ ಅಬ್ಬರದ ಸಿನಿಮಾಗಳ ಮೂಲಕ ತಮ್ಮ ವೃತ್ತಿಜೀವನ ಕಟ್ಟಿಕೊಂಡಿರುವ ಎಲ್ಲಾ ಫಿಲ್ಮ್ ಮೇಕರ್​ಗಳಿಗೆ ಇದೊಂದು ಭಯಾನಕ ಅನುಭವ. ಮೆದುಳನ್ನು ಮನೆಯಲ್ಲೇ ಬಿಟ್ಟು ಸಿನಿಮಾ ನೋಡಲು ಪ್ರೇರೇಪಿಸುತ್ತಿದ್ದಂತಹ ಸಿನಿಮಾಗಳ ಕಾಲ ಮುಗಿಯಿತು. ಅಬ್ಬರದ ಮತ್ತು ಮಸಾಲಾ ಸಿನಿಮಾಗಳು ಈಗ ವೆಂಟಿಲೇಟರ್ ಮೇಲೆ ಉಸಿರಾಡಲು ಒದ್ದಾಡುತ್ತಿವೆ. ದೇವರಂತೆ ಆರಾಧಿಸಲ್ಪಡುವ ಪ್ರತಿಯೊಬ್ಬ ಹೀರೋಗಳಿಗೂ ಧುರಂಧರ್ 2 (Dhurandhar 2) ಸಿನಿಮಾ ನಡುಕ ಹುಟ್ಟಿಸಲಿದೆ.’

‘ಈ ಸಿನಿಮಾ ಮೂಲಕ ರಣವೀರ್ ಸಿಂಗ್ ಅವರು ಎಂದಿಗೂ ಕಷ್ಟಪಡದ ಹೀರೋಗಳನ್ನು ಕೊಂದು ಹಾಕಿದ್ದಾರೆ. ಅಂತಹ ಹಳೇ ಮಾದರಿಯ ಹೀರೋಗಳ ಹೆಣದ ಮೇಲೆ, ಅವರು ಒಬ್ಬ ನೈಜ ಹೀರೋಗೆ ಜನ್ಮ ನೀಡಿದ್ದಾರೆ. ಈ ಹೊಸ ಹೀರೋನಲ್ಲೂ ದೋಷಗಳಿವೆ. ಆದರೆ ಅತ್ಯಂತ ಅಪಾಯಕಾರಿ ಮತ್ತು ಊಹಿಸಲಾಗದ ವ್ಯಕ್ತಿ ಈತ. ಇಲ್ಲಿ ಹೀರೋಯಿಸಂ ಎನ್ನುವುದು ಕಿವಿಗೆ ಹಾನಿಯಾಗುವಂತಹ ಹಿನ್ನೆಲೆ ಸಂಗೀತದ ಮೂಲಕ ಜನರ ತಲೆಗೆ ತುರುಕಿದ್ದಲ್ಲ. ಬದಲಿಗೆ ಆತನ ಕಾರ್ಯಗಳಿಂದ ಹೀರೋಯಿಸಂ ಮೂಡಿಬಂದಿದೆ.’

‘ಈ ಹೊಸ ಮಾದರಿಯ ಹೀರೋಗೆ ಹೋಲಿಸಿದರೆ, ಹಳೆಯ ದೇವಮಾನವ ಹೀರೋಗಳು ಇದ್ದಕ್ಕಿದ್ದಂತೆ ಸರ್ಕಸ್‌ನ ಜೋಕರ್‌ಗಳಂತೆ ಹಾಸ್ಯಾಸ್ಪದವಾಗಿ ಕಾಣುತ್ತಾರೆ. ಧುರಂಧರ್ 2 ಚಿತ್ರದ ಕಲೆಕ್ಷನ್ ಕಂಡು ಅವರ ಕುರುಡು ಅಭಿಮಾನಿಗಳು ಅಸಹಾಯಕರಾಗಿ ಭಯಬೀಳುತ್ತಿದ್ದಾರೆ. ಫಿಸಿಕ್ಸ್ ಒಂದು ಹಾಸ್ಯ ಮತ್ತು ಗ್ರಾವಿಟಿಯೇ ಇಲ್ಲ ಎಂಬಂತೆ ಸಾಹಸ ದೃಶ್ಯಗಳನ್ನು ಸೃಷ್ಟಿಸಿ ಕೆರಿಯರ್ ಕಟ್ಟಿಕೊಂಡವರಿಗೆ ಈ ಸಿನಿಮಾ ಭೀತಿ ಹುಟ್ಟಿಸಿದೆ. ಮನುಷ್ಯರನ್ನು 50 ಅಡಿ ಎತ್ತರಕ್ಕೆ ಎಸೆಯುವ, ರಬ್ಬರ್ ಬಾಲ್ ತರಹ ನೆಲಕ್ಕೆ ಬಡಿಯುವ, ನಗರವನ್ನೇ ಭಸ್ಮ ಮಾಡುವ ಸ್ಫೋಟದಿಂದ ಬದುಕುಳಿದು ಧೂಳು ಕೊಡವಿಕೊಂಡು ಡೈಲಾಗ್ ಹೊಡೆಯುವ ದೃಶ್ಯಗಳನ್ನು ಹೊಸ ತಲೆಮಾರಿನ ಪ್ರೇಕ್ಷಕರು ಈಗ ಕೊಲ್ಲಲಿದ್ದಾರೆ.’

‘ನೈಜ ಆಕ್ಷನ್ ಸೀನ್‌ಗಳನ್ನು ನೋಡಿದ ಮೇಲೆ, ಗಾಳಿಯಲ್ಲಿ ಹಾರುವ ಖಳನಾಯಕ ಗುಂಪು ಈಗ ನಕಲಿಯಾಗಿ ಕಾಣುತ್ತಿದೆ. ವೈರ್ ಮತ್ತು ಕ್ರೇನ್‌ಗಳ ಮೂಲಕ ಹೀರೋಗಳನ್ನು ಮೇಲೆತ್ತಿ ತೋರಿಸುತ್ತಿದ್ದ ನಿರ್ದೇಶಕರು ಈಗ ಬೆವರುತ್ತಾ ಎಚ್ಚರಗೊಳ್ಳುವಂತಾಗಿದೆ. ಕೇವಲ ಹೇರ್ ಸ್ಟೈಲ್, ಕಾಸ್ಟ್ಯೂಮ್, ಫೋಟೋಶಾಪ್ ಮಾಡಿದ ಸಿಕ್ಸ್ ಪ್ಯಾಕ್ ಮತ್ತು ಡಿಸೈನರ್ ಬಟ್ಟೆಗಳಿಂದ ಪಾತ್ರಗಳು ಸೃಷ್ಟಿಯಾಗುತ್ತವೆ ಎಂದು ನಂಬಿರುವ ಪ್ಯಾನ್-ಇಂಡಿಯಾ ನಿರ್ದೇಶಕರು ಈಗ ತಮ್ಮ ಕುರ್ಚಿಯಲ್ಲಿ ನಡುಗುತ್ತಿದ್ದಾರೆ.’

‘ಧುರಂಧರ್ 2 ಚಿತ್ರದ ಹೀರೋನ ಶಕ್ತಿ ಆತನ ಬೈಸೆಪ್ಸ್‌ನಿಂದಲ್ಲ, ಬದಲಿಗೆ ಆತನ ಬುದ್ಧಿವಂತಿಕೆಯಿಂದ ಬರುತ್ತದೆ ಎಂದು ಪ್ರೇಕ್ಷಕರು ತಿಳಿದುಕೊಂಡ ಮೇಲೆ, ಈ ಹೇರ್ ಮತ್ತು ಕಾಸ್ಟ್ಯೂಮ್ ಶಾಲೆಯ ಸಿನಿಮಾಗಳು ಸಣ್ಣ ಮಕ್ಕಳ ಆಟದಂತೆ ಕಾಣುತ್ತಿವೆ. ಧುರಂಧರ್ 2 ಕೇವಲ ಒಂದು ಸಿನಿಮಾವಲ್ಲ. ಅದೊಂದು ಅಂತಿಮ ತೀರ್ಪು. ಪ್ರೇಕ್ಷಕರ ಬುದ್ಧಿವಂತಿಕೆಯನ್ನು ಅವಮಾನಿಸುವ ಮತ್ತು ಹೀರೋಗಳನ್ನು ದೇವರುಗಳನ್ನಾಗಿ ಮಾಡಿ ಪ್ರೇಕ್ಷಕರನ್ನು ಕುರಿಗಳನ್ನಾಗಿಸುವ ಸಿನಿಮಾಗಳನ್ನು ಆದಿತ್ಯ ಧಾರ್ ಅವರು ಕೊಂದಿದ್ದಾರೆ.’

ಇದನ್ನೂ ಓದಿ: ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ

‘ಈ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ಆ ಹಳೆಯ ನಿರ್ಮಾಪಕರ ನಂಬಿಕೆಗಳನ್ನು ಎಷ್ಟು ಆಳವಾದ ಗುಂಡಿಯಲ್ಲಿ ಹೂತು ಹಾಕುತ್ತಿದೆ ಎಂದರೆ, ಅಲ್ಲಿಂದ ಅವರ ಪ್ರೇತಾತ್ಮಗಳೂ ಹೊರಬರಲು ಸಾಧ್ಯವಿಲ್ಲ. ಈಗ ನೀವು ಕೇಳುತ್ತಿರುವ ಬಾಕ್ಸ್ ಆಫೀಸ್ ಕಲೆಕ್ಷನ್‌ನ ಆರ್ಭಟವೇ ಆ ಹಳೇ ಮಾದರಿಯ ಸಿನಿಮಾಗಳ ಅಂತ್ಯದ ಕಿರುಚಾಟ. ಈಗಾಗಲೇ ಚಿತ್ರೀಕರಣ ಹಂತದಲ್ಲಿರುವ ಅಂತಹ ಸಿನಿಮಾಗಳ ನಿರ್ಮಾಪಕರು ಈ ಕೂಡಲೇ ಧುರಂಧರ್ 2 ಚಿತ್ರವನ್ನು ಹಲವು ಬಾರಿ ನೋಡಿ ತಮ್ಮನ್ನು ತಾವು ತಿದ್ದಿಕೊಳ್ಳದಿದ್ದರೆ, ಅವರನ್ನು ಆ ದೇವರೂ ಕೂಡ ಉಳಿಸಲು ಸಾಧ್ಯವಿಲ್ಲ. ಆದರೆ ಒಂದು ಸಮಸ್ಯೆ ಇದೆ. ಅವರ ಹತ್ತಿರ ಕೋಟಿಗಟ್ಟಲೆ ಹಣವಿರಬಹುದು, ಆದರೆ ಆದಿತ್ಯ ಧಾರ್ ಅವರಂತಹ ಮೆದುಳನ್ನು ಎಲ್ಲಿಂದ ತರುತ್ತಾರೆ?’

ರಾಮ್ ಗೋಪಾಲ್ ವರ್ಮಾ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಿಲ್ಜೀತ್ ಮ್ಯಾಜಿಕ್: ಕೇವಲ 14 ಶೋ, 943 ಕೋಟಿ ಆದಾಯ, 114 ಕೋಟಿ ತೆರಿಗೆ

ಕೆಲ ತಿಂಗಳುಗಳ ಹಿಂದಷ್ಟೆ ನಟ, ಗಾಯಕ ದಿಲ್ಜೀತ್ ದೊಸ್ಸಾಂಜ್ (Diljit Dosanjh) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಲೈವ್ ಕಾನ್ಸರ್ಟ್​​ಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವಂತೆ ಮನವಿ ಮಾಡಿದ್ದರು. ಅದಾದ ಬಳಿಕ ಮೋದಿ ಸಹ ತಮ್ಮ ಭಾಷಣವೊಂದರಲ್ಲಿ ಎಲ್ಲ ರಾಜ್ಯಗಳೂ ಲೈವ್ ಕಾನ್ಸರ್ಟ್​​ಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿಕೊಡುವಂತೆ ಮನವಿ ಮಾಡಿದ್ದರು. ಇದೀಗ ಅದರ ಒಳಮರ್ಮ ತಿಳಿದು ಬರುತ್ತಿದೆ. ಗಾಯಕ ದಿಲ್ಜೀತ್ ದೊಸ್ಸಾಂಗ್ ಭಾರತದಲ್ಲೇ ಅತಿ ಹೆಚ್ಚು ಟಿಕೆಟ್ ಸೋಲ್ಡ್ ಮಾಡುವ ಲೈವ್ ಕಾರ್ನರ್ಟ್ ಕಲಾವಿದ ಸಹ ಆಗಿದ್ದು, ಅವರು ಕೇವಲ 14 ಶೋಗಳಿಗೆ ಬರೋಬ್ಬರಿ 943 ಕೋಟಿ ರೂಪಾಯಿಗಳನ್ನು ಗಳಿಸಿದ್ದಾರೆ. ಈ 14 ಶೋಗಳನ್ನು ಕೆಲವೇ ತಿಂಗಳುಗಳಲ್ಲಿ ಮುಗಿಸಿದ್ದಾರೆ ದಿಲ್ಜೀತ್ ದೊಸ್ಸಾಂಜ್.

ಖ್ಯಾತ ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರ ‘ದಿಲ್-ಲುಮಿನಾಟಿ’ ಹೆಸರಿನ ಲೈವ್ ಕಾನ್ಸರ್ಟ್ ಪ್ರವಾಸ (ಟೂರ್) ಮಾಡಿದ್ದರು. ದೇಶದ 13 ನಗರಗಳಲ್ಲಿ 14 ಶೋಗಳನ್ನು ಅವರು ನೀಡಿದ್ದರು. ಕೆಲವು ವಿದೇಶಿ ಶೋಗಳನ್ನು ಸಹ ನೀಡಿದ್ದರು. ಈ 14 ಶೋಗಳಿಗೆ ಬರೋಬ್ಬರಿ 943 ಕೋಟಿ ರೂಪಾಯಿಗಳ ಆದಾಯವನ್ನು ದಿಲ್ಜೀತ್ ಸೃಷ್ಟಿಸಿದ್ದಾರೆ. ಇದರಿಂದ 114 ಕೋಟಿ ರೂಪಾಯಿ ತೆರಿಗೆ ಸರ್ಕಾರಕ್ಕೆ ಪಾವತಿ ಆಗಿದೆ. ಲೈವ್ ಕಾನ್ಸರ್ಟ್ ಕೇವಲ ಮನರಂಜನೆ ಮಾತ್ರವಲ್ಲ, ದೇಶದ ಆರ್ಥಿಕತೆಯ ಮೇಲೆ ಅಭೂತಪೂರ್ವ ಪ್ರಭಾವ ಬೀರಿದೆ ಎಂಬುದನ್ನು ಈ ಅಂಕಿ-ಸಂಖ್ಯೆ ಸಾರುತ್ತಿದೆ.

ದಿಲ್ಜೀತ್ ದೊಸ್ಸಾಂಗ್ ಅವರಿಂದ ಗಳಿಕೆ ಅಗಿರುವ 943 ಕೋಟಿ ರೂಪಾಯಿಗಳಲ್ಲಿ 276 ಕೋಟಿ ರೂಪಾಯಿ ನೇರ ಆದಾಯ ಅಂದರೆ ಟಿಕೆಟ್ ಮಾರಾಟ, ಪ್ರಾಯೋಜಕತ್ವದಿಂದ ಬಂದರೆ. ಉಳಿದ 553 ಕೋಟಿ ಪರೋಕ್ಷ ಆದಾಯವಾಗಿ ಬಂದಿದೆ. ಈ ಸಂಗೀತ ಕಾರ್ಯಕ್ರಮಗಳ ಸರಣಿಯು ಲೈವ್ ಈವೆಂಟ್ ಮತ್ತು ಇತರ ಪೂರಕ ವಲಯಗಳಲ್ಲಿ ಸುಮಾರು 1.18 ಲಕ್ಷ ಉದ್ಯೋಗವನ್ನು ಸೃಷ್ಟಿಸಿದೆ. ಇದರಲ್ಲಿ ಭದ್ರತೆ, ಲಾಜಿಸ್ಟಿಕ್ಸ್, ಉತ್ಪಾದನೆ, ಫ್ಯಾಷನ್ ಮತ್ತು ಹೋಟೆಲ್ ಉದ್ಯಮದ ಕೆಲಸಗಾರರು ಸಹ ಸೇರಿದ್ದಾರೆ.

ಈ ಲೈವ್ ಕಾನ್ಸರ್ಟ್​​ ಗಾಗಿ ಸುಮಾರು 38% ಪ್ರೇಕ್ಷಕರು ಈ ಕಾರ್ಯಕ್ರಮಕ್ಕಾಗಿ ಬೇರೆ ನಗರಗಳಿಂದ ಪ್ರಯಾಣ ಬೆಳೆಸಿದ್ದರು. ಅವರಲ್ಲಿ ಅರ್ಧದಷ್ಟು ಮಂದಿ ತಮ್ಮ ವಾಸ್ತವ್ಯವನ್ನು 5 ದಿನಗಳವರೆಗೆ ವಿಸ್ತರಿಸಿದ್ದು, ಇದು ಸ್ಥಳೀಯ ಹೋಟೆಲ್, ಸಾರಿಗೆ ಮತ್ತು ಆಹಾರೋದ್ಯಮಕ್ಕೆ ದೊಡ್ಡ ಲಾಭ ತಂದುಕೊಟ್ಟಿದೆ. ಈ ಕಾರ್ಯಕ್ರಮದಿಂದ ಸರ್ಕಾರಕ್ಕೆ ಜಿಎಸ್‌ಟಿ (GST) ಮತ್ತು ಇತರ ತೆರಿಗೆಗಳ ರೂಪದಲ್ಲಿ ಸುಮಾರು 114 ಕೋಟಿ ಆದಾಯ ಬಂದಿದೆ ಎಂದು ಆಡಿಟ್ ಸಂಸ್ಥೆಯಾಗಿರುವ ಈಸ್ಟರ್ನ್ ಆಂಡ್ ಯಂಗ್ ವರದಿ ನೀಡಿದೆ.

ಇದನ್ನೂ ಓದಿ:ಅಮಿತಾಬ್ ಬಚ್ಚನ್ ಕಾರಣಕ್ಕೆ ದಿಲ್ಜೀತ್​​ಗೆ ಬಂತು ಖಲಿಸ್ಥಾನಿಗಳ ಬೆದರಿಕೆ

ದೆಹಲಿ, ಜೈಪುರ, ಹೈದರಾಬಾದ್, ಬೆಂಗಳೂರು ಸೇರಿದಂತೆ 13 ನಗರಗಳಲ್ಲಿ ನಡೆದ 14 ಶೋಗಳಿಗೆ ಒಟ್ಟು 3.2 ಲಕ್ಷಕ್ಕೂ ಹೆಚ್ಚು ಜನರು ಸಾಕ್ಷಿಯಾಗಿದ್ದಾರೆ. ದೆಹಲಿಯ ಒಂದೇ ಶೋನಲ್ಲಿ 55,000 ಅಭಿಮಾನಿಗಳು ಭಾಗವಹಿಸಿ ದಾಖಲೆ ನಿರ್ಮಿಸಿದ್ದರು. ಅದು ಮಾತ್ರವೇ ಅಲ್ಲದೆ ವರದಿಯ ಪ್ರಕಾರ, ಒಟ್ಟು ಪ್ರೇಕ್ಷಕರಲ್ಲಿ 49% ರಷ್ಟು ಜನರು ಮಧ್ಯಮ ಮತ್ತು ಸಣ್ಣ ನಗರಗಳಿಂದ ಬಂದವರಾಗಿದ್ದಾರೆ. ಇದು ಭಾರತದ ಸಣ್ಣ ನಗರಗಳಲ್ಲಿಯೂ ಲೈವ್ ಕಾರ್ಯಕ್ರಮಗಳಿಗೆ ಇರುವ ಭಾರೀ ಬೇಡಿಕೆಯನ್ನು ಎತ್ತಿ ತೋರಿಸುತ್ತದೆ.

ಡಿಸೆಂಬರ್ 2024ರಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾದರೂ, ಸಾಮಾಜಿಕ ಜಾಲತಾಣಗಳಲ್ಲಿ ಭಾಷಾ ವಿವಾದವೊಂದು ಸೃಷ್ಟಿಯಾಗಿತ್ತು. ಬೆಂಗಳೂರಿನಲ್ಲಿ ಶೋ ನಡೆದಾಗ ಸ್ಥಳೀಯ ಅಭಿಮಾನಿಯೊಬ್ಬರು ಮತ್ತೊಬ್ಬ ಪ್ರೇಕ್ಷಕನಿಗೆ ಕನ್ನಡದಲ್ಲಿ ಮಾತನಾಡಲು ಒತ್ತಾಯಿಸಿದ್ದ ಎಂದು ಹೇಳಿದ್ದು ಸುದ್ದಿ ಆಗಿತ್ತು. ಇದು ಆ ಸಮಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಭಾರತದ ಹೊರತಾಗಿ, ಈ ಪ್ರವಾಸವು ಅಮೆರಿಕ, ಕೆನಡಾ ಮತ್ತು ಯುರೋಪ್‌ನಲ್ಲೂ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದು, ಜಾಗತಿಕವಾಗಿ ಸುಮಾರು 137 ಮಿಲಿಯನ್ ಡಾಲರ್ ನೇರ ಆದಾಯ ಗಳಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಆರು ವರ್ಷ ಬಳಿಕ ಲಿಪುಲೇಖ ಪಾಸ್ ಮೂಲಕ ಭಾರತ-ಚೀನಾ ಟ್ರೇಡಿಂಗ್ ಪುನಾರಂಭ; ಆದರೆ, ನೇಪಾಳದಿಂದ ಆಕ್ಷೇಪ ಯಾಕೆ?

ನವದೆಹಲಿ, ಮಾರ್ಚ್ 20: ಭಾರತ ಮತ್ತು ಚೀನಾ ನಡುವೆ ಹಿಮಾಲಯದ ತಪ್ಪಲಲ್ಲಿ ಇರುವ ಮೂರು ಕಣಿವೆ ಮಾರ್ಗಗಳು ಇದೇ ಜೂನ್ ತಿಂಗಳಲ್ಲಿ ಪುನಾರಂಭಗೊಳ್ಳಲಿವೆ. ಇದರಲ್ಲಿ ಉತ್ತರಾಖಂಡ್​ನ ಪಿತ್ತೋರಗಡ್​ನ ಲಿಪುಲೇಖ್ ಪಾಸ್ (Lipulekh Pass) ಅಥವಾ ಲಿಪುಲೇಖ ಕಣಿವೆಯೂ ಒಂದು. ಹಾಗೆಯೇ, ಹಿಮಾಚಲದಲ್ಲಿರುವ ಶಿಪಕಿ ಲಾ (Shipki La Pass) ಮತ್ತು ಸಿಕ್ಕಿಂನಲ್ಲಿರುವ ನಾಥು ಲಾ ಪಾಸ್​ಗಳೂ (Nathu La Pass) ಕೂಡ ಮುಕ್ತಗೊಳ್ಳಲಿವೆ. ಕಳೆದ ವರ್ಷ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ನಡೆಸಿದ ಉನ್ನತ ಮಟ್ಟದ ಸಭೆಯ ಪ್ರತಿಫಲ ಎನ್ನಲಾಗಿದೆ.

ಆರು ವರ್ಷಗಳ ಬಳಿಕ ಈ ಕಣಿವೆ ಮಾರ್ಗಳು ತೆರೆಯಲ್ಪಡುತ್ತಿವೆ. 2020ರಲ್ಲಿ ಗಾಲ್ವನ್ ಬಳಿ ಭಾರತೀಯ ಸೈನಿಕರ ಮೇಲೆ ಚೀನೀ ಸೈನಿಕರು ಭೀಕರವಾಗಿ ಹಲ್ಲೆ ಎಸಗಿದ ಘಟನೆ ಬಳಿಕ ಭಾರತವು ಈ ಮಾರ್ಗಗಳನ್ನು ಬಂದ್ ಮಾಡಿತ್ತು. ಅದಕ್ಕೂ ಮುನ್ನ ಈ ಮಾರ್ಗಗಳಲ್ಲಿ ಎರಡೂ ದೇಶಗಳ ಗಡಿಭಾಗದ ಜನರ ನಡುವೆ ಕೊಡುಕೊಳ್ಳುವಿಕೆಯ ವ್ಯವಹಾರ ನಡೆಯುತ್ತಿತ್ತು. ಈಗ ಅದು ಪುನರಾರಂಭಗೊಳ್ಳುತ್ತದೆ.

ಎಲ್ಲಿದೆ ಲಿಪುಲೇಖ್ ಪಾಸ್?

ಉತ್ತರಾಖಂಡ್​ನ ಪಿತೋರಗಡ್ ಜಿಲ್ಲೆಯಲ್ಲಿನ ಕುಮಾವೋನ್ ಪ್ರದೇಶದಲ್ಲಿ 17,500 ಅಡಿ ಎತ್ತರದ ಹಿಮಾಲಯದಲ್ಲಿ ಲಿಪುಲೇಖ್ ಪಾಸ್ ಇದೆ. ಉತ್ತರಾಖಂಡ್, ಟಿಬೆಟ್ ಮತ್ತು ನೇಪಾಳ ಗಡಿಗಳು ಕೂಡಿಕೊಳ್ಳುವ ಸ್ಥಳ ಇದು. ಟಿಬೆಟ್​ನ ಪ್ರಮುಖ ವ್ಯಾಪಾರ ಪಟ್ಟಣಗಳಲ್ಲಿ ಒಂದಾಗಿರುವ ಟಕ್ಲಾಕೋಟ್ ಸಮೀಪದಲ್ಲಿ ಲಿಪುಲೇಖ್ ಪಾಸ್ ಬರುತ್ತದೆ.

ಇದನ್ನೂ ಓದಿ: ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್

ಭಾರತದ ಗಡಿಯೊಳಗೆ ಧರಚುಲಾದಿಂದ ಈ ಲಿಪುಲೇಖ್ ಪಾಸ್​ವರೆಗೆ 80 ಕಿಮೀ ರಸ್ತೆ ನಿರ್ಮಿಸಲಾಗಿದೆ. 2020ರಲ್ಲಿ ಇದು ಪೂರ್ಣಗೊಂಡಿತು. ರಸ್ತೆ ನಿರ್ಮಾಣಕ್ಕೆ ಮುನ್ನ ಈ ದುರ್ಗಮ ಕಣಿವೆಯಲ್ಲಿ ಗಡಿಭಾಗದ ಗ್ರಾಮಸ್ಥರು ಪಶುಗಳ ಮೂಲಕ ಸರಕುಗಳ ಸಾಗಣೆ ಮಾಡುತ್ತಿದ್ದರು.

ಟಿಬೆಟ್​ನ ಕೈಲಾಸ ಪರ್ವತ ಮತ್ತು ಮಾನಸರೋವರಕ್ಕೆ ಹೋಗಲು ಈ ಮಾರ್ಗದ ಬಳಕೆ ಮಾಡಲಾಗುತ್ತದೆ. ಮೋಟಾರು ರಸ್ತೆ ನಿರ್ಮಾಣ ಮಾಡಿರುವುದರಿಂದ ಪ್ರಯಾಣ ಅವಧಿ ಗಣನೀಯವಾಗಿ ಕಡಿಮೆ ಆಗುತ್ತದೆ.

ಲಿಪುಲೇಖ್ ಪಾಸ್​ನಲ್ಲಿ ಯಾವ್ಯಾವ ಸರಕುಗಳ ವ್ಯಾಪಾರ ನಡೆಯುತ್ತದೆ…?

ಭಾರತ, ಟಿಬೆಟ್, ನೇಪಾಳ ಗಡಿಭಾಗದಲ್ಲಿರುವ ಬುಡಕಟ್ಟು ಸಮುದಾಯದ ಜನರು ತಮ್ಮ ಸರಕುಗಳನ್ನು ಮಾರಲು ಮತ್ತು ಕೊಳ್ಳಲು ಈ ಮಾರ್ಗದ ಬಳಕೆ ಮಾಡುತ್ತಾರೆ. ಭಾರತದ ಭಾಗದ ಜನರು ಬೆಲ್ಲ, ಮಸಾಲೆ, ತಂಬಾಕು ಇತ್ಯಾದಿ ಉತ್ಪನ್ನಗಳನ್ನು ರಫ್ತು ಮಾಡುತ್ತಾರೆ. ಟಿಬೆಟ್​ನಿಂದ ಕುರಿಯ ಉಣ್ಣೆ, ಮೇಕೆ, ರೇಷ್ಮೆ ಇತ್ಯಾದಿ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!

ಈ ಪಾಸ್ ಬಳಿ ಭಾರತದ ಆಡಳಿತವು ಗುಂಜಿ ಎಂಬಲ್ಲಿ ಸುಂಕ ಕೇಂದ್ರವನ್ನು ಸ್ಥಾಪಿಸಿದೆ. ಪೊಲೀಸ್ ಚೆಕ್ ಪೋಸ್ಟ್, ಎಸ್​ಬಿಐ ಬ್ಯಾಂಕ್ ಕಚೇರಿ ಇತ್ಯಾದಿ ಸೌಲಭ್ಯಗಳನ್ನು ತೆರೆಯಲಾಗಿದೆ.

ನೇಪಾಳದ ಆಕ್ಷೇಪ ಏನು?

ಲಿಪುಲೇಖ್ ಪಾಸ್ ಮೂಲಕ ಭಾರತ ಮತ್ತು ಚೀನಾ ಮಧ್ಯೆ ವ್ಯಾಪಾರ ನಡೆಯುವುದಕ್ಕೆ ನೇಪಳ ಮೊದಲಿಂದಲೂ ತಗಾದೆ ಎತ್ತುತ್ತಿದೆ. ಲಿಪುಲೇಖ್ ಎಂಬುದು ತನಗೆ ಸೇರಿದ ಪ್ರದೇಶ ಎಂದು ನೇಪಾಳ ಹೇಳಿಕೊಳ್ಳುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ

ಚಾಮರಾಜನಗರ, ಮಾರ್ಚ್ 20: ನಗರದಲ್ಲಿ ಟೊಮೆಟೊ ಬೆಲೆ ಕುಸಿತದಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟಿಸಿದ್ದಾರೆ. ಪಕ್ಕದ ಮೈಸೂರಿನ ಎಪಿಎಂಸಿಯಲ್ಲಿರುವ ದರಕ್ಕಿಂತಲೂ ಕಡಿಮೆ ಬೆಲೆ ಸಿಗುತ್ತಿರುವುದನ್ನು ಖಂಡಿಸಿ, ಮೈಸೂರು ಎಪಿಎಂಸಿ ದರದಲ್ಲಿ ಖರೀದಿಸುವಂತೆ ಆಗ್ರಹಿಸಿದರು. ದಲ್ಲಾಳಿಗಳು ಈ ಬೇಡಿಕೆಗೆ ಒಪ್ಪದ ಕಾರಣ, ರೈತರು ಟೊಮೆಟೊಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು

ರಿಯಾದ್, ಮಾರ್ಚ್ 20: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಲ್ಬಣಗೊಳ್ಳುತ್ತಲೇ ಇದೆ. ಇಸ್ರೇಲ್-ಇರಾನ್ (Israel- Iran War) ನಡುವಿನ ಯುದ್ಧದಲ್ಲಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ (Riyadh Attack) ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಶುಕ್ರವಾರ ದೃಢಪಡಿಸಿದೆ. ಅವರ ಮೃತದೇಹವನ್ನು ಭಾರತಕ್ಕೆ ಶೀಘ್ರವಾಗಿ ಹಿಂದಿರುಗಿಸಲಾಗುವುದು ಎಂದು ಅಲ್ಲಿನ ಸರ್ಕಾರ ಹೇಳಿದೆ. “ಮಾರ್ಚ್ 18ರಂದು ರಿಯಾದ್‌ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಭಾರತೀಯ ಪ್ರಜೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತು” ಎಂದು ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಮಹಾಜನ್ ಪತ್ರಿಕಾಗೋಷ್ಠಿಯಲ್ಲಿ ಖಚಿತಪಡಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

 

Source link

ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ

ಬಾಲಿವುಡ್‌ನ ಹಿರಿಯ ನಟ ರಾಕೇಶ್ ಬೇಡಿ ಅವರು ‘ಧುರಂಧರ್ 2’ (Dhurandhar 2) ಸಿನಿಮಾದಲ್ಲಿ ಮಾಡಿದ ಪಾತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಪಾಕಿಸ್ತಾನದ ರಾಜಕಾರಣಿಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾದ ಯಶಸ್ಸಿನ ಅಲೆಯಲ್ಲಿ ರಾಕೇಶ್ ಬೇಡಿ (Rakesh Bedi) ಅವರು ತೇಲುತ್ತಿದ್ದಾರೆ. ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ, ಒಂದು ವರ್ಗದ ಜನರು ಇದನ್ನು ಪ್ರೊಪಗಾಂಡಾ ಎಂದು ಕರೆಯುತ್ತಿದ್ದಾರೆ. ಈ ಟೀಕೆಗಳಿಗೆ ರಾಕೇಶ್ ಬೇಡಿ ಅವರು ಖಡಕ್ ಉತ್ತರ ನೀಡಿದ್ದು, ಇದೇ ವೇಳೆ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿದ ‘ಎಮರ್ಜೆನ್ಸಿ’ (Emergency Movie) ಚಿತ್ರದ ಸೋಲನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಕೇಶ್ ಬೇಡಿ, ‘ನಾನು ರಾಜಕೀಯವನ್ನು ನಂಬುವುದಿಲ್ಲ. ಕೇವಲ ಸಿನಿಮಾವನ್ನು ನಂಬುತ್ತೇನೆ. ಪ್ರತಿಯೊಬ್ಬರಿಗೂ ಒಂದು ಚಿತ್ರವನ್ನು ಇಷ್ಟಪಡುವ ಅಥವಾ ಇಷ್ಟಪಡದಿರುವ ಹಕ್ಕಿದೆ. ಆದರೆ ಒಂದು ಚಿತ್ರವನ್ನು ಸರ್ಕಾರದ ಪರ ಅಥವಾ ಸರ್ಕಾರದ ವಿರೋಧಿ ಎಂಬ ಹಣೆಪಟ್ಟಿಯ ಅಡಿಯಲ್ಲಿ ವರ್ಗೀಕರಿಸುವುದು ಸರಿಯಲ್ಲ. ಜನರು ಈ ಚಿತ್ರವನ್ನು ಪ್ರೀತಿಸುತ್ತಿದ್ದಾರೆ ಎನ್ನುವುದೇ ಅಂತಿಮ ತೀರ್ಪು’ ಎಂದು ಹೇಳಿದ್ದಾರೆ.

‘ಧುರಂಧರ್ 2’ ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ ರಾಕೇಶ್ ಬೇಡಿ ಅವರು ರಾಜಕೀಯ ವ್ಯಕ್ತಿಗಳ ಬಯೋಪಿಕ್‌ಗಳ ಬಗ್ಗೆ ಪ್ರಸ್ತಾಪಿಸಿದರು. ‘ಇತ್ತೀಚೆಗೆ ಇಂದಿರಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಚಿತ್ರಗಳು ಬಂದವು. ಆದರೆ ಆ ಚಿತ್ರಗಳು ಕನಿಷ್ಠ ಎರಡು ದಿನವೂ ಚಿತ್ರಮಂದಿರದಲ್ಲಿ ಓಡಲಿಲ್ಲ. ಆದರೆ ಧುರಂಧರ್ ಚಿತ್ರದ ಬರವಣಿಗೆ ಮತ್ತು ಮೇಕಿಂಗ್ ಅತ್ಯಂತ ಪ್ರಬಲವಾಗಿದೆ. ಇಷ್ಟು ದೊಡ್ಡ ಮಟ್ಟದ ಸಿನಿಮಾವನ್ನು ಪ್ರೇಕ್ಷಕರು ಈ ಹಿಂದೆ ನೋಡಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಕೇಶ್ ಬೇಡಿ ಅವರ ಈ ಮಾತುಗಳು ನೇರವಾಗಿ ನಟಿ ಕಂಗನಾ ರಣಾವತ್ ಅವರಿಗೆ ನೀಡಿದ ಟಾಂಗ್ ಎನ್ನಲಾಗುತ್ತಿದೆ. ಕಂಗನಾ ನಿರ್ದೇಶಿಸಿ, ನಟಿಸಿದ್ದ ‘ಎಮರ್ಜೆನ್ಸಿ’ ಸಿನಿಮಾ 2025ರಲ್ಲಿ ಬಿಡುಗಡೆಯಾಗಿತ್ತು. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯ ಕುರಿತಾದ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭಾರೀ ಹಿನ್ನಡೆ ಅನುಭವಿಸಿತ್ತು. ವಿಶ್ವದಾದ್ಯಂತ ಕೇವಲ 18.40 ಕೋಟಿ ರೂಪಾಯಿ ಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿತ್ತು.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

ಸಾಮಾಜಿಕ ಜಾಲತಾಣಗಳಲ್ಲಿ ‘ಧುರಂಧರ್ 2’ ಚಿತ್ರದ ಕಥಾಹಂದರದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಉತ್ತಮವಾಗಿ ಕಮಾಯಿ ಮಾಡುತ್ತಿದೆ. ಗಟ್ಟಿಯಾದ ಚಿತ್ರಕಥೆ ಮತ್ತು ಅದ್ದೂರಿ ಮೇಕಿಂಗ್‌ನಿಂದಾಗಿ ಪ್ರೇಕ್ಷಕರು ಈ ಸಿನಿಮಾವನ್ನು ಇಷ್ಟಪಡುತ್ತಿದ್ದಾರೆ. ಧುರಂಧರ್ ಮೊದಲ ಪಾರ್ಟ್ ಹಿಟ್ ಆಗಿದ್ದರಿಂದ 2ನೇ ಪಾರ್ಟ್ ಹೆಚ್ಚು ಹೈಪ್ ಪಡೆದುಕೊಂಡಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

SA vs NZ: ದಕ್ಷಿಣ ಆಫ್ರಿಕಾಕ್ಕೆ ಸತತ 2ನೇ ಸೋಲು; ಸರಣಿಯಲ್ಲಿ ಕಿವೀಸ್ ಮೇಲುಗೈ

2026 ರ ಟಿ20 ವಿಶ್ವಕಪ್ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಅದೇ ನ್ಯೂಜಿಲೆಂಡ್ (South Africa vs New Zealand) ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಉಭಯ ತಂಡಗಳ ನಡುವೆ ಈ ಟಿ20 ಸರಣಿ ನಡೆಯುತ್ತಿದೆ. ಎರಡೂ ತಂಡಗಳು ಸ್ಟಾರ್ ಆಟಗಾರರಿಲ್ಲದೆ ಈ ಸರಣಿಯಲ್ಲಿ ಕಣಕ್ಕಿಳಿದಿವೆ. ಆದಾಗ್ಯೂ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೇಲುಗೈ ಸಾಧಿಸುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿದೆ. ಐದು ಪಂದ್ಯಗಳ ಸರಣಿಯಲ್ಲಿ ಈಗಾಗಲೇ 3 ಪಂದ್ಯಗಳು ನಡೆದಿದ್ದು, ಕಿವೀಸ್ ಪಡೆ 2 ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ 2-1 ಅಂತರದ ಮುನ್ನಡೆ ಪಡೆದುಕೊಂಡಿದೆ.

ಕಿವೀಸ್​ಗೆ ಸತತ 2ನೇ ಗೆಲುವು

ಉಭಯ ತಂಡಗಳ ನಡುವಿನ ಮೊದಲ ಪಂದ್ಯವನ್ನು ಆಫ್ರಿಕಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಆದರೆ ಆ ಬಳಿಕ ಭರ್ಜರಿ ಪುನರಾಗಮನ ಮಾಡಿರುವ ಕಿವೀಸ್ ಸತತ ಎರಡು ಪಂದ್ಯಗಳನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಎರಡನೇ ಪಂದ್ಯವನ್ನು 68 ರನ್​ಗಳಿಂದ ಗೆದ್ದುಕೊಂಡಿದ್ದ ಕಿವೀಸ್ ಇದೀಗ ಮೂರನೇ ಟಿ20 ಪಂದ್ಯದಲ್ಲಿ 8 ವಿಕೆಟ್​ಗಳ ಸುಲಭ ಜಯ ದಾಖಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಫ್ರಿಕಾ 136 ರನ್ ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 16.2 ಓವರ್​ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು.

136 ರನ್​ಗಳಿಗೆ ಕುಸಿದ ಆಫ್ರಿಕಾ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ ತಂಡ, ಲಾಕಿ ಫರ್ಗುಸನ್ ದಾಳಿಗೆ ಅಕ್ಷರಶಃ ನಲುಗಿ ಹೋಯಿತು. ಹೀಗಾಗಿ ತಂಡದ ಯಾವ ಆಟಗಾರನಿಗೂ 26 ರನ್​ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ. ತಂಡದ ಪರ ನ್ಕೊಬಾನಿ ಮೊಕೊಯೆನಾ ಗರಿಷ್ಠ 26 ರನ್​ಗಳ ಇನ್ನಿಂಗ್ಸ್ ಆಡಿದರೆ, ಜಾರ್ಜ್ ಲಿಂಡೆ 23 ರನ್​ಗಳ ಕಾಣಿಕೆ ನೀಡಿದರು. ಉಳಿದ ಯಾವ ಬ್ಯಾಟ್ಸ್‌ಮನ್​ಗೂ 20 ರನ್​ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ. ಇದರ ಪರಿಣಾಮವಾಗಿ ಆಫ್ರಿಕಾ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 136 ರನ್ ಕಲೆಹಾಕಿತು.

ಫರ್ಗುಸನ್ ಮಾರಕ ದಾಳಿ

ಕಿವೀಸ್ ಪರ ಮಾರಕ ದಾಳಿ ನಡೆಸಿದ ವೇಗಿ ಲಾಕಿ ಫರ್ಗುಸನ್ ತಮ್ಮ ನಾಲ್ಕು ಓವರ್‌ಗಳಲ್ಲಿ 2.25 ಎಕಾನಮಿ ರೇಟ್‌ನಲ್ಲಿ ಕೇವಲ 9 ರನ್‌ಗಳನ್ನು ಬಿಟ್ಟುಕೊಟ್ಟು ಒಂದು ವಿಕೆಟ್ ಪಡೆದರು. ಹಾಗೆಯೇ ತಮ್ಮ ನಾಲ್ಕು ಓವರ್‌ಗಳಲ್ಲಿ 17 ಡಾಟ್ ಬಾಲ್‌ಗಳನ್ನು ಎಸೆದಿದ್ದು, ಹರಿಣಗಳ ಮೇಲೆ ಒತ್ತಡ ಹೇರಿತು. ಉಳಿದಂತೆ ಕೈಲ್ ಜೇಮಿಸನ್, ನಾಯಕ ಮಿಚೆಲ್ ಸ್ಯಾಂಟ್ನರ್ ಹಾಗೂ ಬೆಂಜಮಿನ್ ಸಿಯರ್ಸ್ ತಲಾ 2 ವಿಕೆಟ್ ಪಡೆದರು.

SA vs NZ: 18 ರನ್​ಗೆ 5 ವಿಕೆಟ್; ಹೀನಾಯವಾಗಿ ಸೋತ ಆಫ್ರಿಕಾ

ಲೇಥಮ್ ಅರ್ಧಶತಕದ ಇನ್ನಿಂಗ್ಸ್

ಈ ಗುರಿ ಬೆನ್ನಟ್ಟಿದ ಕಿವೀಸ್ ಪಡೆಗೆ ಭರ್ಜರಿ ಆರಂಭ ಸಿಕ್ಕಿತು. ಎರಡನೇ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ಆರಂಭಿಕ ಡೆವೋನ್ ಕಾನ್ವೇ 39 ರನ್​ಗಳ ಇನ್ನಿಂಗ್ಸ್ ಆಡುವುದರ ಜೊತೆಗೆ ಟಾಮ್ ಲೇಥಮ್ ಜೊತೆಗೂಡಿ ಮೊದಲ ವಿಕೆಟ್​ಗೆ 96 ರನ್​ಗಳ ಇನ್ನಿಂಗ್ಸ್ ಆಡಿದರು. ಇತ್ತ ಲೇಥಮ್ ಅಜೇಯ 63 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವನ್ನು ಖಚಿತಪಡಿಸಿದರು. ಟಿಮ್ ರಾಬಿನ್ಸನ್ ಕೂಡ 17 ರನ್​ಗಳ ಕಾಣಿಕೆ ನೀಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್​​ ಎಚ್ಚರಿಕೆ

ಬೆಂಗಳೂರು, ಮಾರ್ಚ್​ 20: ಬೆಂಗಳೂರಲ್ಲಿ ಇನ್ಮುಂದೆ ಟೋಯಿಂಗ್ (Towing) ಪ್ರಾರಂಭವಾಗಲಿದೆ. ಆ ಮೂಲಕ ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ ಇಡಲಾಗಿದೆ. ನಾನ್ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದರೆ ಟೋಯಿಂಗ್​ ಮಾಡಲಾಗುವುದು. ಎಲ್ಲಾ ಕಾರ್ಪೊರೇಷನ್​​ಗೂ ಎರಡೆರಡು ಟೋಯಿಂಗ್ ವಾಹನ ನೀಡಿದ್ದು, ಈ ಬಗ್ಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಹೇಳಿದ್ದಾರೆ.

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ

ವಿಧಾನಸೌಧದಲ್ಲಿಂದು ಜಿಬಿಎ 5 ನಗರ ಪಾಲಿಕೆಗಳ 2026-27ನೇ ಸಾಲಿನ ಆಯವ್ಯಯದ ಸಿದ್ಧತೆಯ ಕುರಿತು ಅಧಿಕಾರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್​​ ಪೂರ್ವಭಾವಿ ಸಭೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಹೆಚ್ಚು ಕಾಲ ಹಳೇ ವಾಹನಗಳನ್ನು ನಿಲ್ಲಿಸಿದರೂ ಟೋಯಿಂಗ್ ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ನೌಕರರ ವರ್ಗಾವಣೆಗಿಂತ ಮಾಡಬೇಕಾದ ಉತ್ತಮ ಕೆಲಸಗಳಿವೆ: ಸಿಎಂಗೆ ಹೈಕೋರ್ಟ್ ತರಾಟೆ

ನಗರದ ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೇ ವಾಹನಗಳನ್ನು ನಿಲ್ಲಿಸಿದ್ದಾರೋ ಅದನ್ನು ತುಂಬಿಕೊಂಡು ಹೋಗಿ ನಿರ್ದಿಷ್ಟ ಜಾಗದಲ್ಲಿ ಡಂಪ್ ಮಾಡುತ್ತೇವೆ. ಹಳೇ ವಾಹನಗಳನ್ನು ಟೋಯಿಂಗ್ ಮಾಡಲು ಬೆಳ್ಳಳ್ಳಿ, ಮಿಟಗಾನಹಳ್ಳಿ, ಸೊಂಡೆಕೊಪ್ಪ, ಗಿಡ್ಡೇನಹಳ್ಳಿಗಳಲ್ಲಿ ಜಾಗ ನಿಗದಿ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್​ ಮಾಹಿತಿ ನೀಡಿದ್ದಾರೆ.

ಫ್ಲೆಕ್ಸ್ ಹಾಕಿದರೆ 1 ಲಕ್ಷ ರೂ ದಂಡ

ವ್ಯಾಪಾರ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಎಲ್ಲಿ ವ್ಯಾಪಾರ ಮಾಡಬೇಕು ಅಂತ ನಿಗದಿ  ಮಾಡುತ್ತೇವೆ. ಯಾರು ನೋಂದಣಿ ಮಾಡಿದ್ದಾರೆ ಅವರಿಗೆ ಮಾತ್ರ ಅವಕಾಶ ನೀಡಬೇಕು. ಇದಕ್ಕೆ ಎಲ್ಲಾ ಶಾಸಕರು ಸಹಮತ ವ್ಯಕ್ತಪಡಿಸಿದ್ದಾರೆ. ಎಲ್ಲಾ ಪಾರ್ಟಿಯವರು ಫ್ಲೆಕ್ಸ್ ಹಾಕುತ್ತಾರೆ. ಯಾರು ಫ್ಲೆಕ್ಸ್ ಹಾಕ್ತಾರೆ ಅವರಿಗೆ 50 ಸಾವಿರದಿಂದ 1 ಲಕ್ಷ ರೂ ದಂಡ ಹಾಕಬೇಕು. ಈ ಬಗ್ಗೆ ಪೊಲೀಸರಿಗೂ, ಕಾರ್ಪೊರೇಷನ್​ನವರಿಗೆ ತಿಳಿಸಿದ್ದೇನೆ, ಕೇಸ್ ಹಾಕುತ್ತೇವೆ ಎಂದಿದ್ದಾರೆ.

ಬೀದಿ ಬದಿ ವ್ಯಾಪಾರಸ್ಥರು ಅಂಗಡಿ ಹಾಕಬಾರದು, ಯಾರೇ ಇದ್ದರೂ ಎತ್ಕೊಂಡು ಹೋಗಬೇಕು. 30 ಸಾವಿರ ಜನ ತಳ್ಳೋ ಗಾಡಿ ಬೇಕು ಎಂದು ಕೇಳಿದ್ದಾರೆ, ಟೆಂಡರ್ ಕರೆದಿದ್ದೇವೆ. ಎಲ್ಲಿ ಬೇಕು ಅಷ್ಟೇ ವ್ಯಾಪಾರ ಮಾಡಬೇಕು. ಐಡೆಂಟಿಟಿ ಕಾರ್ಡ್ ಇದರೆ ಅಷ್ಟೇ ಮಾರಾಟ ಮಾಡಬೇಕು. ಇನ್ನು ಪಾರ್ಕ್​ನಲ್ಲಿ ಅನಧಿಕೃತ ಕೆಲಸ ನಡೆಯುತ್ತಿವೆ ಅಂತ ಆರೋಪವಿದೆ ಹೀಗಾಗಿ ಪಾರ್ಕ್ ಟೈಮ್ ನಿಗದಿ ಮಾಡುತ್ತೇವೆ. ಈ ಬಗ್ಗೆ ಐದು ಪಾಲಿಕೆಯ ಲೋಕಲ್ ಎಂಎಲ್ಎಗಳು ನಿರ್ಧಾರ ಮಾಡಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಉತ್ತರ ನೋಡಿ

ಫುಟ್ ಪಾತ್ ಪಾಲಿಸಿ ತರಬೇಕು ಅಂತ ಇದೆ. ಬೀದಿ ಬದಿ ವ್ಯಾಪಾರ ಮಾಡುತ್ತಾರೆ. ಇದರಿಂದ ಸಮಸ್ಯೆ ಆಗಿದೆ. ಹೀಗಾಗಿ ನಿಗದಿತ ಸ್ಥಳದಲ್ಲಿ ವ್ಯಾಪಾರ ಮಾಡಬೇಕು. ಈ ಸಮಸ್ಯೆ ನಿಲ್ಲಿಸಬೇಕು ಅಂತ ಪಾಲಿಸಿ ಮಾಡಬೇಕು ಎಂದಿದ್ದಾರೆ.

ವಾರ್ಡ್ ವೈಸ್ ಬಜೆಟ್​ಗೆ ಒತ್ತಾಯ

ಇನ್ನು ಜಿಬಿಎ ಬಜೆಟ್​​ ಸಭೆ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್​​, ಇಂದು ಬೆಂಗಳೂರು ನಗರದ ಶಾಸಕರ ಜೊತೆ ಬಜೆಟ್ ಸಭೆ ಆಗಿದೆ. ಪ್ರಮುಖ ನಿರ್ಣಯ ಆಗಿದೆ. ಅಶೋಕ್ ಕೂಡ ಬಂದಿದ್ದರು. ಅಭಿಪ್ರಾಯ ತಿಳಿಸಿದ್ದಾರೆ. ವಾರ್ಡ್ ವೈಸ್ ಬಜೆಟ್ ನೀಡಬೇಕು ಎಂದು ಒತ್ತಿಯಿಸಿದ್ದಾರೆ ಎಂದರು. ಇನ್ನು ಶಾಸಕರಿಂದ ವಾರ್ಡಿಗೆ 5-10 ಕೋಟಿ ರೂ ಅನುದಾನ ಬೇಡಿಕೆ ವಿಚಾರವಾಗಿ ಮಾತನಾಡಿದ್ದು, ನೋಡೋಣ ಎಷ್ಟಾಗಲಿದೆ. ಅವರು ಆಕಾಶನೂ ಕೇಳ್ತಾರೆ, ಭೂಮಿನೂ ತಂದು ಕೊಡಿ ಅಂತ ಕೇಳುತ್ತಾರೆ. ನಮ್ಮಿಂದ ಎಷ್ಟಾಗಲಿದೆ ಅನ್ನೋದು ನೋಡಿ ಕೊಡುತ್ತೇವೆ ಎಂದರು.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಐಪಿಎಲ್ ಮುಗಿದ ಕೂಡಲೇ ಟಿ20 ಸರಣಿ ಆಡಲಿದೆ ಭಾರತ; ವೇಳಾಪಟ್ಟಿ ಪ್ರಕಟ

ಕೆಲವೇ ದಿನಗಳ ಹಿಂದೆ ಟಿ20 ವಿಶ್ವಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾ (Team India) ಇದೀಗ ಐಪಿಎಲ್‌ನಲ್ಲಿ (IPL 2026) ಕಣಕ್ಕಿಳಿಯಲು ಸಜ್ಜಾಗಿದೆ. ಎರಡು ತಿಂಗಳ ಕಾಲ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಬೆವರು ಹರಿಸಲಿರುವ ಟೀಂ ಇಂಡಿಯಾ ಆಟಗಾರರು ಆ ಬಳಿಕ ಮತ್ತೆ ರಾಷ್ಟ್ರೀಯ ಕರ್ತವ್ಯಕ್ಕೆ ಮರಳಲಿದ್ದಾರೆ. ಅದಕ್ಕೆ ಪೂರಕವಾಗಿ ಇದೀಗ ಭಾರತದ ಮುಂದಿನ ಟಿ20 ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ (Suryakumar Yadav) ನೇತೃತ್ವದ ತಂಡವು ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

ಈ ಸರಣಿ ಜೂನ್ ಕೊನೆಯ ವಾರದಲ್ಲಿ ನಡೆಯಲಿದ್ದು, ಸರಣಿಯ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವ ಮೊದಲು ಟೀಂ ಇಂಡಿಯಾ ಈ ಸರಣಿಯನ್ನು ಆಡಲಿದೆ. ವಾಸ್ತತವಾಗಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಜುಲೈ ತಿಂಗಳಲ್ಲಿ ಐದು ಪಂದ್ಯಗಳ ಟಿ20 ಸರಣಿ ಹಾಗೂ ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆ ಸರಣಿ ಆರಂಭಕ್ಕೂ ಮುನ್ನ ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಈ ಟಿ20 ಸರಣಿಯನ್ನು ಆಡಲಿದೆ.

ಭಾರತದ ಇಂಗ್ಲೆಂಡ್ ಪ್ರವಾಸ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಜುಲೈ 1 ರಂದು ಆರಂಭವಾಗಲಿದ್ದು, ಅದಕ್ಕೂ ಮುನ್ನ ಅಂದರೆ ಜೂನ್‌ನಲ್ಲಿ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಈ ಸರಣಿಯ ದಿನಾಂಕಗಳನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಈ ಸರಣಿಯ ನಂತರ, ಟೀಂ ಇಂಡಿಯಾ ಜುಲೈ 1, 4, 7, 9 ಮತ್ತು 11 ರಂದು ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದೆ. ಇದರ ನಂತರ ಜುಲೈ 14 ರಂದು ಏಕದಿನ ಸರಣಿ ಆರಂಭವಾಗಲಿದ್ದು, ಎರಡನೇ ಏಕದಿನ ಪಂದ್ಯ ಜುಲೈ 16 ರಂದು ಮತ್ತು ಮೂರನೇ ಪಂದ್ಯ ಜುಲೈ 19 ರಂದು ನಡೆಯಲಿದೆ.

ತಪ್ಪು ನನ್ನದೇ.. ಟಿ20 ವಿಶ್ವಕಪ್ ಗೆದ್ದು ಅಕ್ಷರ್ ಪಟೇಲ್ ಬಳಿ ಕ್ಷಮೆಯಾಚಿಸಿದ ಸೂರ್ಯ

ಭಾರತ-ಐರ್ಲೆಂಡ್ ಟಿ20 ಸರಣಿ

ಭಾರತ ತಂಡವು ಟಿ20 ಸರಣಿಗಾಗಿ ಐರ್ಲೆಂಡ್​ಗೆ ಭೇಟಿ ನೀಡುತ್ತಿರುವುದು ಇದು ನಾಲ್ಕನೇ ಬಾರಿಯಾಗಲಿದೆ. ಟೀಂ ಇಂಡಿಯಾ ಇದುವರೆಗೆ ಐರ್ಲೆಂಡ್‌ನಲ್ಲಿ ಆರು ಟಿ20 ಪಂದ್ಯಗಳನ್ನು ಆಡಿದ್ದು, ಎಲ್ಲವನ್ನೂ ಗೆದ್ದಿದೆ. ಭಾರತ ಮತ್ತು ಐರ್ಲೆಂಡ್ ನಡುವಿನ ಈ ಎಲ್ಲಾ ಪಂದ್ಯಗಳು ಡಬ್ಲಿನ್‌ನ ಮಲಾಹೈಡ್‌ನಲ್ಲಿ ನಡೆದಿದ್ದವು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್​ಗೆ ಮತ್ತೊಂದು ಹೊಡೆತ; ಅಮೆರಿಕ- ಇಸ್ರೇಲ್ ದಾಳಿಯಲ್ಲಿ ಐಆರ್‌ಜಿಸಿ ವಕ್ತಾರ ಅಲಿ ನೈನಿ ಹತ್ಯೆ

ಟೆಹ್ರಾನ್, ಮಾರ್ಚ್ 20: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧವು 21ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ (Iran War) ಪ್ರಮುಖ ನಗರಗಳ ಮೇಲೆ ಇಸ್ರೇಲ್ ಮತ್ತು ಅಮೆರಿಕ ವೈಮಾನಿಕ ದಾಳಿ ನಡೆಸುತ್ತಿದೆ. ಒಂದೊಂದಾಗಿ ಕಮಾಂಡ್‌ನ ಸೇನೆಯ ಪ್ರಮುಖ ನಾಯಕರನ್ನು ಹತ್ಯೆ ಮಾಡುತ್ತಿದೆ. ಇತ್ತೀಚೆಗೆ, ಇಸ್ರೇಲ್ ಮತ್ತೊಮ್ಮೆ ಟೆಹ್ರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಗಳಲ್ಲಿ ಇರಾನ್‌ನ ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಘೋಷಿಸಿದೆ. ಇರಾನ್ ಕೂಡ ಅಲಿ ಮೊಹಮ್ಮದ್ ನೈನಿಯವರ ಸಾವನ್ನು ದೃಢಪಡಿಸಿದೆ.

ಅಲಿ ಮೊಹಮ್ಮದ್ ನೈನಿ ಸೇರಿದಂತೆ ತನ್ನ ನಾಯಕರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಘೋಷಿಸಿದೆ. ಅಲಿ ಮೊಹಮ್ಮದ್ ನೈನಿ ಅವರ ಸಾವಿನಿಂದ ತನ್ನ ಪಡೆಗಳ ನೈತಿಕತೆ ದುರ್ಬಲಗೊಳ್ಳುವುದಿಲ್ಲ ಎಂದು ಇರಾನ್ ಹೇಳಿದೆ. ಇರಾನ್ ಕೂಡ ಇಸ್ರೇಲ್ ಮತ್ತು ಅಮೆರಿಕ ಸೇರಿದಂತೆ ಅವುಗಳ ಮಿತ್ರ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ:ಈ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಸಲಹೆ

ಇರಾನ್ ಯುಎಇ, ಕತಾರ್ ಮತ್ತು ಅಬುಧಾಬಿಯಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಕ್ಷಿಪಣಿಗಳನ್ನು ನಾಶ ಮಾಡುತ್ತಿದೆ. ಇರಾನ್ ವಿಶೇಷವಾಗಿ ತೈಲ ಮತ್ತು ಅನಿಲ ಸಂಸ್ಕರಣಾಗಾರಗಳನ್ನು ಗುರಿಯಾಗಿಸಿಕೊಂಡಿದೆ. ಇರಾನ್ ಮತ್ತೊಮ್ಮೆ ದುಬೈ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇರಾನಿನ ಕ್ಷಿಪಣಿ ಇಸ್ರೇಲ್‌ನಲ್ಲಿರುವ IIFA ವಿದ್ಯುತ್ ಸ್ಥಾವರದ ಮೇಲೆ ದಾಳಿ ಮಾಡಿದೆ. ಇದರಿಂದ ಎಚ್ಚೆತ್ತ ಇಸ್ರೇಲ್ ತಕ್ಷಣವೇ ವಿದ್ಯುತ್ ಸ್ಥಾವರವನ್ನು ಸ್ಥಗಿತಗೊಳಿಸಿತು. ಇರಾನ್ ದುಬೈನಲ್ಲಿರುವ ಕುವೈತ್‌ನಲ್ಲಿರುವ ಅತಿದೊಡ್ಡ ತೈಲ ಸಂಸ್ಕರಣಾಗಾರವಾದ ಮಿನಾ ಅಲ್ ಅಹ್ಮದಿ ಮೇಲೆಯೂ ದಾಳಿ ಮಾಡಿದೆ.

ಇದನ್ನೂ ಓದಿ: Video: ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಪಶ್ಚಿಮ ಏಷ್ಯಾ ಯುದ್ಧವು ಪ್ರಪಂಚದಾದ್ಯಂತ ಸುಮಾರು 85 ದೇಶಗಳ ಮೇಲೆ ಪರಿಣಾಮ ಬೀರಿತು. ಈ ಯುದ್ಧದ ನಂತರ ಗಲ್ಫ್ ದೇಶಗಳಿಂದ ಜಗತ್ತಿಗೆ ತೈಲ ಪೂರೈಕೆ ನಿಂತುಹೋಯಿತು. ಇದರ ಪರಿಣಾಮವಾಗಿ ಸುಮಾರು 85 ಪೆಟ್ರೋಲಿಯಂ ಮತ್ತು ಅನಿಲದ ಕೊರತೆ ಉಂಟಾಯಿತು. ಇದರಿಂದಾಗಿ ಅನೇಕ ದೇಶಗಳಲ್ಲಿ ಅವುಗಳ ಬೆಲೆಗಳು ಹೆಚ್ಚಾಯಿತು. ಭಾರತದಲ್ಲಿ ವಿದ್ಯುತ್ ಪೆಟ್ರೋಲ್ ಮತ್ತು ಕೈಗಾರಿಕಾ ಡೀಸೆಲ್ ಬೆಲೆಗಳು ಕೂಡ ಹೆಚ್ಚಾಗಿದೆ. ಈ ಯುದ್ಧವು ಇರಾನ್ ಮತ್ತು ಇಸ್ರೇಲ್‌ಗೆ ಹಾಗೂ ಅಮೆರಿಕಕ್ಕೆ ಭಾರಿ ನಷ್ಟವನ್ನುಂಟುಮಾಡಿದೆ. ಇರಾನಿನ ದಾಳಿಯಿಂದಾಗಿ ಅಮೆರಿಕ ಇಲ್ಲಿಯವರೆಗೆ ಸುಮಾರು 16 ಯುದ್ಧವಿಮಾನಗಳನ್ನು ಕಳೆದುಕೊಂಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link