Headlines

nagaraj11081993

ಗದ್ದರ್ ಪ್ರಶಸ್ತಿ: ರಶ್ಮಿಕಾ ಬೌನ್ಸರ್ ಕಿರಿಕ್, ರಾಜಮೌಳಿ ತಂದೆಗೆ ಅವಮಾನ

ತೆಲಂಗಾಣ ಸರ್ಕಾರವು ನಿನ್ನೆಯಷ್ಟೆ (ಮಾರ್ಚ್ 19) ‘ಗದ್ದರ್ ಚಲನಚಿತ್ರ ಪ್ರಶಸ್ತಿ’ (Gaddar) ಎರಡನೇ ಆವೃತ್ತಿಯ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯ್ತು. ಕಾರ್ಯಕ್ರಮ ಚೆನ್ನಾಗಿ ನಡೆಯಿತಾದರೂ ಎರಡು ಪ್ರಮುಖ ವಿಷಯಗಳು ತುಸು ತಡವಾಗಿ ವರದಿ ಆಗಿವೆ. ಕಾರ್ಯಕ್ರದ ವೇಳೆ ರಶ್ಮಿಕಾ ಮಂದಣ್ಣ ಅವರ ಬೌನ್ಸರ್ ಕಿರಿಕ್…

Read More

ಹಿಡನ್ ಕ್ಯಾಮೆರಾ, 58 ಮಹಿಳೆಯರ ಅಶ್ಲೀಲ ವಿಡಿಯೋ; ಬಯಲಾಗುತ್ತಲೇ ಇದೆ ಸಂಖ್ಯಾಶಾಸ್ತ್ರಜ್ಞ ಅಶೋಕ್ ಖರತ್ ಕರ್ಮಕಾಂಡ

ಮುಂಬೈ, ಮಾರ್ಚ್ 20: ಮಹಾರಾಷ್ಟ್ರದ ನಾಸಿಕ್‌ನಲ್ಲಿ (Nasik) ಆಧ್ಯಾತ್ಮಿಕತೆಯ ಸೋಗಿನಲ್ಲಿ 35 ವರ್ಷದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಭಾವಿ ಸಂಖ್ಯಾಶಾಸ್ತ್ರಜ್ಞ ಅಶೋಕ್ ಖರತ್ ಅವರನ್ನು ಬಂಧಿಸಲಾಗಿದೆ. ನಿವೃತ್ತ ನೌಕಾ ಅಧಿಕಾರಿಯಾಗಿರುವ 67 ವರ್ಷದ ಅಶೋಕ್ ಖರತ್ ತನಗೆ ಮಾದಕ ದ್ರವ್ಯ ನೀಡಿ, ವಶಪಡಿಸಿಕೊಂಡು, ತನ್ನ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಅವರ ಫಾರ್ಮ್​ಹೌಸ್​ ಮೇಲೆ ದಾಳಿ ನಡೆಸಿದಾಗ ಶಾಕಿಂಗ್ ಸತ್ಯಗಳು ಬೆಳಕಿಗೆ ಬಂದಿವೆ. ಲೈಂಗಿಕ ಶೋಷಣೆ ಕೇವಲ ಒಬ್ಬ…

Read More

SECL Apprentice Recruitment 2026: 1600 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪದವೀಧರರಿಗೆ ಸುವರ್ಣವಕಾಶ

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (SECL) ಅಪ್ರೆಂಟಿಸ್ ಹುದ್ದೆಗಳಿಗೆ ದೊಡ್ಡ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಈ ಅಭಿಯಾನವು ಒಟ್ಟು 1,600 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಎಂಜಿನಿಯರಿಂಗ್ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಅವಕಾಶಗಳನ್ನು ನೀಡುತ್ತದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 31 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಪ್ರತಿಷ್ಠಿತ PSU ನಲ್ಲಿ ಕೆಲಸದ ಅನುಭವವನ್ನು ಪಡೆಯಬಹುದು. ಪದವೀಧರರು ಮತ್ತು ಡಿಪ್ಲೊಮಾ ಪಡೆದವರಿಗೆ ಪ್ರತ್ಯೇಕ ಹುದ್ದೆಗಳು: ಈ ನೇಮಕಾತಿಯನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲ ವರ್ಗವು ಪದವೀಧರ ಅಪ್ರೆಂಟಿಸ್‌ಗಳಿಗೆ…

Read More

Bank Job: ಬ್ಯಾಂಕ್ ಉದ್ಯೋಗ ಪಡೆಯಲು ಇನ್ಮುಂದೆ ಪರೀಕ್ಷೆಯ ಜೊತೆಗೆ ‘ಸಿಬಿಲ್ ಸ್ಕೋರ್’ ಕೂಡ ಮುಖ್ಯ!

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಬ್ಯಾಂಕಿನಲ್ಲಿ ಕೆಲಸ ಪಡೆಯುವುದು ಸುಲಭದ ಮಾತಲ್ಲ. ಇದುವರೆಗೆ ಅಭ್ಯರ್ಥಿಗಳು ಕೇವಲ ಕಠಿಣ ಅಧ್ಯಯನ, ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳ ಮೇಲೆ ಮಾತ್ರ ಗಮನ ಹರಿಸುತ್ತಿದ್ದರು. ಆದರೆ ಈಗ ಬ್ಯಾಂಕಿಂಗ್ ವಲಯವು ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿಸಲು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಅಭ್ಯರ್ಥಿಗಳ ಕ್ರೆಡಿಟ್ ಸ್ಕೋರ್ (CIBIL Score) ಅನ್ನು ಪರಿಶೀಲಿಸುವುದು ಈಗ ಕಡ್ಡಾಯವಾಗಿದೆ. ಹಣಕಾಸಿನ ಶಿಸ್ತಿಗೆ ಆದ್ಯತೆ: ಸಾರ್ವಜನಿಕರ ಹಣ ಮತ್ತು ಬ್ಯಾಂಕಿನ ಆರ್ಥಿಕ…

Read More

‘ಸನ್‌ ಉದಯ’ ವಾಹಿನಿಯಲ್ಲಿ ಮಾರ್ಚ್‌ 23ರಿಂದ ಹೊಸ ಧಾರಾವಾಹಿ ‘ಮೂಗುತಿ ಮಲ್ಲಿ’

ಪ್ರೇಕ್ಷಕರ ನೆಚ್ಚಿನ ‘ಉದಯ’ ಟಿವಿ ಈಗ ‘ಸನ್ ಉದಯ’ (Sun Udaya) ಎಂಬ ಹೊಸ ಹೆಸರಿನೊಂದಿಗೆ ಪ್ರೇಕ್ಷಕರನ್ನು ರಂಜಿಸುತ್ತಿದೆ. ಯುಗಾದಿ ಹಬ್ಬ ಎಂದರೆ ಹೊಸ ವರ್ಷದ ಆರಂಭ. ಉದಯ ಟಿವಿಯು ಯುಗಾದಿಯ ದಿನವೇ ‘ಸನ್ ಉದಯ’ವಾಗಿ ಬದಲಾಗಿದೆ. ಕಳೆದ ಮೂರು ದಶಕಗಳಿಂದ ಕನ್ನಡಿಗರನ್ನು ರಂಜಿಸುತ್ತಿರುವ ಈ ವಾಹಿನಿಯಲ್ಲಿ ಈಗ ಸಾಕಷ್ಟು ಹೊಸತನವನ್ನು ಪರಿಚಯಿಸಲಾಗುತ್ತಿದೆ. ಅದರ ಮೊದಲ ಹಂತವಾಗಿ ಸೋಮವಾರದಿಂದ (ಮಾರ್ಚ್‌ 23) ಹೊಸ ಸೀರಿಯಲ್ ‘ಮೂಗುತಿ ಮಲ್ಲಿ’ (Muguthi Malli) ಪ್ರಸಾರ ಆರಂಭ ಆಗುತ್ತಿದೆ. ಹೌದು, ಮಾರ್ಚ್‌…

Read More

ಕೆಂಪೇಗೌಡ ಏರ್​ಪೋರ್ಟ್​​ಗೆ 3ನೇ ಬಾರಿಗೆ ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ

ಬೆಂಗಳೂರು, ಮಾರ್ಚ್​ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda Airport) ಮತ್ತೊಂದು ಗರಿಮೆಯನ್ನು ಮುಡಿಗೇರಿಸಿಕೊಂಡಿದೆ. ಕೆಂಪೇಗೌಡ  ಏರ್​ಪೋರ್ಟ್​ ಬೆಂಗಳೂರು ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ 2026ರಲ್ಲಿ ಸತತ ಮೂರನೇ ಬಾರಿಗೆ ‘ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ’ ಎಂದು ಗುರುತಿಸಲ್ಪಟ್ಟಿದೆ. ಈ ಮನ್ನಣೆಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಮುಖ ಪ್ರಯಾಣ ಕೇಂದ್ರಗಳಲ್ಲಿ ಒಂದಾಗಿರುವುದನ್ನು ಪುನರುಚ್ಚರಿಸುತ್ತದೆ. ಜಾಗತಿಕ ಮಟ್ಟದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವ…

Read More

2027 ರ ಏಕದಿನ ವಿಶ್ವಕಪ್​ಗೆ ಈಗಲೇ 20 ಆಟಗಾರರ ಪಟ್ಟಿ ಸಿದ್ಧಪಡಿಸಿದ ಬಿಸಿಸಿಐ

ಕಳೆದ ಮೂರು ವರ್ಷಗಳಲ್ಲಿ ಹ್ಯಾಟ್ರಿಕ್ ಐಸಿಸಿ (ICC) ಟ್ರೋಫಿ ಗೆದ್ದಿರುವ ಟೀಂ ಇಂಡಿಯಾ (Team India) ಇದೀಗ ಸತತ 4ನೇ ಐಸಿಸಿ ಪ್ರಶಸ್ತಿ ಗೆಲುವಿನತ್ತ ಮಹತ್ವದ ಹೆಜ್ಜೆ ಇಟ್ಟಿದೆ. 2024 ರಲ್ಲಿ ಟಿ20 ವಿಶ್ವಕಪ್ ಎತ್ತಿಹಿಡಿದಿದ್ದ ಭಾರತ, ಆ ಬಳಿಕ 2025 ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಇದೀಗ 2026 ರಲ್ಲಿ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಇನ್ನು ಮುಂದಿನ ವರ್ಷ ಅಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಆ ಟ್ರೋಫಿಯನ್ನು ಬಾಚಿಕೊಳ್ಳಲು…

Read More

ಕೋತಿ ಕಿತಾಪತಿಗೆ ಹೆಜ್ಜೇನು ದಾಳಿ: ಜೀವ ಬಿಟ್ಟ ಕಾರು ಶೋರೂಂ ಮೇಲ್ವಿಚಾರಕ!

ತುಮಕೂರು/ ರಾಯಚೂರು, ಮಾರ್ಚ್​​ 20: ಕೋತಿಯೊಂದು ಮಾಡಿದ ಕಿತಾಪತಿಗೆ ಓರ್ವ ಮೃತಪಟ್ಟಿದ್ದು ನಾಲ್ಕೈದು ಜನ ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕೋತಿ ಕೀಟಲೆ ಮಾಡಿದ ಹಿನ್ನೆಲೆ ಏಕಾಏಕಿ ಹಲವರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕಾರು ಶೋರೂಂ ಮೇಲ್ವಿಚಾರಕರಾಗಿದ್ದ ವಿಜಯ್ ಪ್ರಕಾಶ್(65) ಘಟನೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದು, ಕೆಲಸ ಮುಗಿಸಿ ನಿನ್ನೆ ಸಂಜೆ ಮನೆಗೆ ಬರುವಾಗ ಮಾರುತಿ ನಗರದ ಪಿಎನ್ ಟಿ ಕ್ವಾಟ್ರಸ್ ಬಳಿ ಮರದಲ್ಲಿದ್ದ ಹೆಜ್ಜೇನು ಹಲವರ ಜೊತೆ ಇವರ ಮೇಲೂ ದಾಳಿ ನಡೆಸಿತ್ತು….

Read More

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ನವದೆಹಲಿ, ಮಾರ್ಚ್ 20: ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್​ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ…

Read More

ಕೋಲ್ಕತ್ತಾದ ಆರ್​ಜಿಕರ್ ಆಸ್ಪತ್ರೆಯ ಲಿಫ್ಟ್​ನಲ್ಲಿ ಸಿಲುಕಿ ವ್ಯಕ್ತಿ ಸಾವು, ಮಗ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ, ಮಾರ್ಚ್​ 20: ಸದಾ ಒಂದಲ್ಲಾ ಒಂದು ಘಟನೆಯಿಂದ ಸುದ್ದಿಯಲ್ಲಿರುವ ಕೋಲ್ಕತ್ತಾ ಆರ್​ಜಿಕರ್ ಆಸ್ಪತ್ರೆಯ ಲಿಫ್ಟ್​​(Lift) ನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಅರೂಪ್ ಬಂಡೋಪಾಧ್ಯಾಯ ಎಂದು ಗುರುತಿಸಲಾಗಿದೆ. ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಪ್ರಕಾರ, ಮೃತರ ಮಗನ ಕಾಲಿನ ಮೂಳೆ ಮುರಿದಿದ್ದು, ಆರ್​​ಜಿ ಕರ್ ಕಾಲೇಜು, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅರೂಪ್ ಬಂಡೋಪಾಧ್ಯಾಯ ಶಸ್ತ್ರಚಿಕಿತ್ಸಾ ಕೊಠಡಿಯಿಂದ ಹಿಂದಿರುಗುತ್ತಿದ್ದಾಗ ಲಿಫ್ಟ್​ನಿಂದ ಕೆಳಗೆ ಹೋಗುತ್ತಿದ್ದರು. ಲಿಫ್ಟ್​ ಇದ್ದಕ್ಕಿದ್ದಂತೆ ನಿಂತಿತ್ತು, ಒಳಗೆ ಮೂವರು ಸಿಲುಕಿಕೊಂಡಿದ್ದರು. ಅರೂಪ್ ಬಹಳ…

Read More