All posts by nagaraj11081993

ಕೆಂಪೇಗೌಡ ಏರ್​ಪೋರ್ಟ್​​ಗೆ 3ನೇ ಬಾರಿಗೆ ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ

ಕೆಂಪೇಗೌಡ ಏರ್​ಪೋರ್ಟ್​​ಗೆ 3ನೇ ಬಾರಿಗೆ ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ

ಬೆಂಗಳೂರು, ಮಾರ್ಚ್​ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda Airport) ಮತ್ತೊಂದು ಗರಿಮೆಯನ್ನು ಮುಡಿಗೇರಿಸಿಕೊಂಡಿದೆ. ಕೆಂಪೇಗೌಡ  ಏರ್​ಪೋರ್ಟ್​ ಬೆಂಗಳೂರು ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ 2026ರಲ್ಲಿ ಸತತ ಮೂರನೇ ಬಾರಿಗೆ ‘ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ’ ಎಂದು ಗುರುತಿಸಲ್ಪಟ್ಟಿದೆ.

ಈ ಮನ್ನಣೆಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಮುಖ ಪ್ರಯಾಣ ಕೇಂದ್ರಗಳಲ್ಲಿ ಒಂದಾಗಿರುವುದನ್ನು ಪುನರುಚ್ಚರಿಸುತ್ತದೆ. ಜಾಗತಿಕ ಮಟ್ಟದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವಿಶ್ವ ವಿಮಾನ ನಿಲ್ದಾಣಗಳ ಶ್ರೇಯಾಂಕದಲ್ಲಿ 48ನೇ ಸ್ಥಾನದಿಂದ 41ನೇ ಸ್ಥಾನ ಪಡೆದಿದೆ. ಆ ಮೂಲಕ ವಿಶ್ವದ ಅಗ್ರ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವುದರ ಜೊತೆಗೆ, ಪ್ರಯಾಣಿಕರಿಗೆ ವಿಶ್ವದರ್ಜೆಯ ಅನುಭವವನ್ನು ನೀಡುವ ಬದ್ಧತೆಯನ್ನು ಎತ್ತಿಹಿಡಿದಿದೆ.

ಕೆಂಪೇಗೌಡ  ಏರ್​ಪೋರ್ಟ್ ಟ್ವೀಟ್​

ವಿಮಾನ ನಿಲ್ದಾಣದ ಶ್ರೇಷ್ಠತೆಗೆ ಜಾಗತಿಕ ಮಾನದಂಡವೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟ ‘ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್’, ಚೆಕ್-ಇನ್, ಆಗಮನ, ವರ್ಗಾವಣೆ, ಚಿಲ್ಲರೆ ವ್ಯಾಪಾರ, ಭದ್ರತೆ, ವಲಸೆ ಮತ್ತು ನಿರ್ಗಮನ ಸೇರಿದಂತೆ ಪ್ರಮುಖ ಅಂಶಗಳಲ್ಲಿ ಅತ್ಯುತ್ತಮ ಗ್ರಾಹಕ ಅನುಭವವನ್ನು ನೀಡುವ ವಿಮಾನ ನಿಲ್ದಾಣಗಳನ್ನು ಗುರುತಿಸುತ್ತದೆ.

ಇದನ್ನೂ ಓದಿ: ಮಳೆಯ ನಡುವೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಮಿನಿ ವಾಟರ್ ಫಾಲ್ಸ್’? ಚರ್ಚೆಗೆ ಗ್ರಾಸವಾದ ವೈರಲ್ ವಿಡಿಯೋ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಿರವಾದ ಕಾರ್ಯಕ್ಷಮತೆಯನ್ನು ಆಧರಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕೆಂಪೇಗೌಡ ಏರ್​ಪೋರ್ಟ್ ಇತ್ತೀಚಿನ ದಿನಗಳಲ್ಲಿ ಸತತವಾಗಿ ಜಾಗತಿಕ ಮನ್ನಣೆಗಳನ್ನು ಪಡೆಯುತ್ತಿದ್ದು, ನಾಲ್ಕನೇ ಬಾರಿಗೆ ‘ವಿಶ್ವದ ಅತ್ಯುತ್ತಮ ಆಗಮನದ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರೊಂದಿಗೆ, ಟರ್ಮಿನಲ್ 2 ಸ್ಕೈಟ್ರಾಕ್ಸ್‌ನಿಂದ ‘5-ಸ್ಟಾರ್’ ರೇಟಿಂಗ್ ಪಡೆದ ಭಾರತದ ಮೊದಲ ಟರ್ಮಿನಲ್ ಎಂಬ ದಾಖಲೆ ಬರೆದಿದೆ. ಹಾಗೆಯೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿಯಿಂದ ವಿಮಾನ ನಿಲ್ದಾಣ ಕಾರ್ಬನ್ ಮಾನ್ಯತೆ ಕಾರ್ಯಕ್ರಮದಡಿ ಅತ್ಯುನ್ನತ ಮಟ್ಟದ 5ನೇ ಹಂತವನ್ನು ಮತ್ತು ಪ್ರವೇಶ ಸಾಧ್ಯತೆ ಮಾನ್ಯತೆಯ ಅಡಿಯಲ್ಲಿ 3ನೇ ಹಂತವನ್ನು ಸಾಧಿಸಿದೆ.

ಕೆಂಪೇಗೌಡ ಏರ್​ಪೋರ್ಟ್​ನ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್‌ ಹೇಳಿದ್ದಿಷ್ಟು 

ಇನ್ನು ಈ ಕುರಿತು ಕೆಂಪೇಗೌಡ ಏರ್​ಪೋರ್ಟ್​ನ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್‌ ಮಾತನಾಡಿದ್ದು, ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಪೋರ್ಟ್ ಅವಾರ್ಡ್ಸ್‌ನಲ್ಲಿ ನಮಗೆ ಸತತವಾಗಿ ಸಂದ ಈ ಮಾನ್ಯತೆಯು ನಮ್ಮ ದೀರ್ಘಕಾಲೀನ ದೃಷ್ಟಿಕೋನ ಮತ್ತು ಪ್ರಯಾಣಿಕರ ಅನುಭವದ ಮೇಲೆ ನಾವು ಹೊಂದಿರುವ ನಿರಂತರ ಗಮನವನ್ನು ಪ್ರತಿಬಿಂಬಿಸುತ್ತದೆ. ಇದು ನಮ್ಮ ತಂಡ ಮತ್ತು ಸಹಭಾಗಿ ಸಂಸ್ಥೆಗಳ ಸಾಮೂಹಿಕ ಪ್ರಯತ್ನಕ್ಕೆ ಸಂದ ಜಯ ಎಂದರು.

ಆಧುನಿಕ ವಿಮಾನ ನಿಲ್ದಾಣದ ಅನುಭವ ಹೇಗಿರಬೇಕೆಂಬುದರ ಮಿತಿಯನ್ನು ಇವೆರೆಲ್ಲರೂ ಸದಾ ವಿಸ್ತರಿಸುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿನ್ಯಾಸ, ತಂತ್ರಜ್ಞಾನ ಮತ್ತು ಸುಸ್ಥಿರತೆಗಳನ್ನು ಒಗ್ಗೂಡಿಸಿ ಪ್ರಯಾಣಿಕರಿಗೆ ಸುಗಮ ಪ್ರಯಾಣವನ್ನು ಒದಗಿಸುವ ಭವಿಷ್ಯದ ನಿರ್ಮಾಣದತ್ತ ನಮ್ಮ ಗಮನವಿದೆ. ಈ ಪ್ರದೇಶದ ಪ್ರಮುಖ ಪ್ರಯಾಣ ಕೇಂದ್ರವಾಗಿ ಬೆಳೆಯುತ್ತಾ ನಮ್ಮ ಸ್ಥಾನವನ್ನು ಬಲಪಡಿಸುತ್ತಿರುವ ಈ ಸಂದರ್ಭದಲ್ಲಿ, ಸೇವೆ ಮತ್ತು ಅನುಭವದ ಗುಣಮಟ್ಟವನ್ನು ಸದಾ ಉನ್ನತ ಮಟ್ಟಕ್ಕೇರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಸ್ಕೈಟ್ರಾಕ್ಸ್‌ನ ಸಿಇಒ ಎಡ್ವರ್ಡ್ ಪ್ಲಾಸ್ಟೆಡ್ ಅವರು ಮಾತನಾಡಿ, ಸತತ ಮೂರನೇ ವರ್ಷ ಈ ಪ್ರಶಸ್ತಿಯನ್ನು ಗೆದ್ದಿರುವುದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನದ ಅದ್ಭುತ ಸಾಧನೆ. ಪ್ರಯಾಣಿಕರು ತೋರಿದ ಮೆಚ್ಚುಗೆಯನ್ನು ಎತ್ತಿತೋರಿಸುತ್ತದೆ. ಜೊತೆಗೆ, ಟರ್ಮಿನಲ್ 2 ವಿಮಾನ ನಿಲ್ದಾಣದ ಖ್ಯಾತಿಯನ್ನು ಬಲಪಡಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಸ್ತುತ ಈ ಪ್ರದೇಶದ ಅತ್ಯಂತ ಗುರುತಿಸಬಹುದಾದ ವಿಮಾನ ನಿಲ್ದಾಣಗಳಲ್ಲಿ ಸ್ಥಾನ ಪಡೆದಿದೆ ಎಂದು ತಿಳಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಮತ್ತು ಸರಕು ಸಾಗಣೆ ಕಾರ್ಯಾಚರಣೆಗಳಲ್ಲಿ ಬಲವಾದ ಬೆಳವಣಿಗೆಯನ್ನು ಹೊಂದುತ್ತಿದೆ. 2025 ರಲ್ಲಿ 43.82 ದಶಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸಿ 520,985 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಿದೆ. ಸಂಪರ್ಕ ಜಾಲದ ವಿಸ್ತರಣೆ ಮತ್ತು ಮೂಲಸೌಕರ್ಯ ವರ್ಧನೆಗಳಿಂದ ಬೆಂಬಲಿತವಾಗಿರುವ ಈ ವಿಮಾನ ನಿಲ್ದಾಣವು ಈ ಪ್ರದೇಶದಲ್ಲಿ ಪ್ರಮುಖ ವರ್ಗಾವಣೆ ಕೇಂದ್ರವಾಗಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತಿದೆ. ಇದು ಪ್ರಯಾಣಿಕರ ನಿರೀಕ್ಷೆಗಳೊಂದಿಗೆ ವಿಕಸನಗೊಳ್ಳುವ ವಿಭಿನ್ನ ವಿಮಾನ ನಿಲ್ದಾಣ ಅನುಭವವನ್ನು ಒದಗಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಬಿಐಎಎಲ್‌ ಕುರಿತು:

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್‌) ನಿರ್ವಹಿಸುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಪ್ರಮುಖ ಮೆಟ್ರಿಕ್‌ಗಳಲ್ಲಿ ಉತ್ತಮ ಕಾರ್ಯಕ್ಷಮತೆಯೊಂದಿಗೆ 2025ರ ಹಣಕಾಸು ವರ್ಷವನ್ನು ಪೂರ್ಣಗೊಳಿಸಿದೆ. ಈ ವಿಮಾನ ನಿಲ್ದಾಣವು 43.82 ದಶಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸಿದ ದಕ್ಷಿಣ ಭಾರತದ ಮೊದಲ ಸಂಸ್ಥೆ.

ಎಸಿಐ ದೊಡ್ಡ ವಿಮಾನ ನಿಲ್ದಾಣ ವಿಭಾಗದಲ್ಲಿ ಸ್ಥಾನ ಗಳಿಸಿದ್ದು. 520,985 ಮೆಟ್ರಿಕ್ ಟನ್ ಸರಕುಗಳನ್ನು ಸಾಗಣೆ ಮಾಡಿದೆ. ದಕ್ಷಿಣ ಭಾರತದ ಅತ್ಯಂತ ಜನನಿಬಿಡ ಮತ್ತು ದೇಶದಲ್ಲಿ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಫೆಬ್ರವರಿ 2025 ರಲ್ಲಿ ಗಮನಾರ್ಹ ಮೈಲಿಗಲ್ಲನ್ನು ತಲುಪಿತ್ತು. ಇದು ಪ್ರಾರಂಭವಾದಾಗಿನಿಂದ 390 ದಶಲಕ್ಷಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸಿದೆ.

ಇದನ್ನೂ ಓದಿ: ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಸರಕು ಸಾಗಣೆಯಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸತತ ನಾಲ್ಕನೇ ವರ್ಷವೂ ಭಾರತದಲ್ಲಿ ಕೊಳೆಯುವ ಸರಕುಗಳನ್ನು ಸಂಸ್ಕರಿಸುವಲ್ಲಿ ನಂ. 1 ವಿಮಾನ ನಿಲ್ದಾಣವಾಗಿದೆ. ಬಿಐಎಎಲ್‌ನ ಬೆಳವಣಿಗೆಗೆ ಅದರ ಬಹುಪಾಲು ಖಾಸಗಿ ಪ್ರವರ್ತಕರಾದ ಫೇರ್‌ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ಕಾರ್ಪೊರೇಷನ್ ಶಕ್ತಿ ನೀಡುತ್ತಿದೆ. ಗಮನಾರ್ಹ ಹೂಡಿಕೆಯ ಮೂಲಕ, ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ರೂಪಾಂತರವನ್ನು ವೇಗಗೊಳಿಸುವಲ್ಲಿ ಫೇರ್‌ಫ್ಯಾಕ್ಸ್ ಪ್ರಮುಖ ಪಾತ್ರ ವಹಿಸುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

2027 ರ ಏಕದಿನ ವಿಶ್ವಕಪ್​ಗೆ ಈಗಲೇ 20 ಆಟಗಾರರ ಪಟ್ಟಿ ಸಿದ್ಧಪಡಿಸಿದ ಬಿಸಿಸಿಐ

ಕಳೆದ ಮೂರು ವರ್ಷಗಳಲ್ಲಿ ಹ್ಯಾಟ್ರಿಕ್ ಐಸಿಸಿ (ICC) ಟ್ರೋಫಿ ಗೆದ್ದಿರುವ ಟೀಂ ಇಂಡಿಯಾ (Team India) ಇದೀಗ ಸತತ 4ನೇ ಐಸಿಸಿ ಪ್ರಶಸ್ತಿ ಗೆಲುವಿನತ್ತ ಮಹತ್ವದ ಹೆಜ್ಜೆ ಇಟ್ಟಿದೆ. 2024 ರಲ್ಲಿ ಟಿ20 ವಿಶ್ವಕಪ್ ಎತ್ತಿಹಿಡಿದಿದ್ದ ಭಾರತ, ಆ ಬಳಿಕ 2025 ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಇದೀಗ 2026 ರಲ್ಲಿ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಇನ್ನು ಮುಂದಿನ ವರ್ಷ ಅಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಆ ಟ್ರೋಫಿಯನ್ನು ಬಾಚಿಕೊಳ್ಳಲು ಬಿಸಿಸಿಐ ಈಗಿನಿಂದಲೇ ತಯಾರಿ ನಡೆಸುತ್ತಿದೆ. ಇದಕ್ಕೆ ಪೂರಕವಾಗಿ ವಿಶ್ವಕಪ್ ನಡೆಯಲು ಇನ್ನು ಒಂದು ವರ್ಷ ಇರುವಾಗಲೇ ಈ ಪಂದ್ಯಾವಳಿಗೆ ಬಿಸಿಸಿಐ, 20 ಆಟಗಾರರ ಪಟ್ಟಿಯನನ್ನು ಸಿದ್ಧಪಡಿಸಿದೆ ಎಂದು ವರದಿಯಾಗಿದೆ.

ಏಕದಿನ ವಿಶ್ವಕಪ್ 2027 ರ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದ ಆತಿಥ್ಯದಲ್ಲಿ ನಡೆಯಲಿದೆ. ಹೀಗಾಗಿ 2023 ರ ಏಕದಿನ ವಿಶ್ವಕಪ್​ನ ಫೈನಲ್​ನಲ್ಲಿ ಸೋತು ಟ್ರೋಫಿಯಿಂದ ವಂಚಿತವಾಗಿದ್ದ ಟೀಂ ಇಂಡಿಯಾ ಈ ಬಾರಿ ಶತಾಯಗತಾಯ ಏಕದಿನ ವಿಶ್ವಕಪ್ ಗೆಲ್ಲುವ ಇರಾದೆಯಲ್ಲಿದೆ. ಹೀಗಾಗಿ ಈ ವರ್ಷ ಉಳಿದೆರಡು ಮಾದರಿಗಳಿಗಿಂತ ಏಕದಿನ ಮಾದರಿಯ ಮೇಲೆ ಬಿಸಿಸಿಐ ಹೆಚ್ಚು ಒತ್ತು ನೀಡುತ್ತಿದೆ. ಇದಕ್ಕೆ ಪೂರಕವಾಗಿ ಏಕದಿನ ಸರಣಿಗಳ ಸಂಖ್ಯೆಯನ್ನು ಹೆಚ್ಚು ಮಾಡಲು ಪ್ಲಾನ್ ರೂಪಿಸಿದೆ.

20 ಆಟಗಾರರ ಅಂತಿಮ ಪಟ್ಟಿ

ಇದೆಲ್ಲದರ ನಡುವೆ ಬಿಸಿಸಿಐ, ಮುಂಬರುವ ಏಕದಿನ ವಿಶ್ವಕಪ್​ಗೆ 20 ಆಟಗಾರರ ತಂಡವನ್ನು ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಟೀಂ ಇಂಡಿಯಾದ ಆಯ್ಕೆ ಮಂಡಳಿ ಈಗಾಗಲೇ ಅಳೆದು ತೂಗಿ ಏಕದಿನ ವಿಶ್ವಕಪ್​ಗೆ ತಂಡವನ್ನು ಸಿದ್ಧಪಡಿಸಿದ್ದಾರೆ ಎಂದು ವರದಿಯಾಗಿದೆ. ಇದರರ್ಥ, ಆಯ್ಕೆದಾರರು ಈಗಾಗಲೇ ಆಯ್ಕೆ ಮಾಡಿರುವ 20 ಆಟಗಾರರ ಮೇಲೆ ಮಾತ್ರ ಕಣ್ಣಿಡಲಿದ್ದಾರೆ. ಈ 20 ಆಟಗಾರರು ಆಡುವ ಐಪಿಎಲ್ ಆಗಲಿ, ಟಿ20 ಆಗಲಿ ಅಥವಾ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಾಗಲಿ ಅವುಗಳು ನಡೆಯುವ ಸಮಯದಲ್ಲಿ ಆಯ್ಕೆ ಮಂಡಳಿಯ ಸದಸ್ಯರು ಅಲ್ಲಿ ಹಾಜರಿದ್ದು, ಆ ಆಟಗಾರರ ಪ್ರದರ್ಶನವನ್ನು ಸೂಕ್ಷ್ಮವಾಗಿ ಗಮನಿಸಲಿದ್ದಾರೆ.

ಆಯ್ಕೆ ಮಂಡಳಿಗೆ ಮಹತ್ವದ ಜವಾಬ್ದಾರಿ

ಇದಕ್ಕೆ ಪೂರಕವೆಂಬಂತೆ ಕೆಲವೇ ದಿನಗಳಲ್ಲಿ ಐಪಿಎಲ್ ಆರಂಭವಾಗಲಿದ್ದು, ಈ ಲೀಗ್​ ನಡೆಯುವ ಸಮಯದಲ್ಲಿ ಅಜಿತ್ ಅಗರ್ಕರ್ ನೇತೃತ್ವದ ಟೀಂ ಇಂಡಿಯಾ ಆಯ್ಕೆ ಮಂಡಳಿಯ ಸದಸ್ಯರಾದ ಎಸ್ಎಸ್ ದಾಸ್, ಆರ್ ಪಿ ಸಿಂಗ್, ಅಜಯ್ ರಾತ್ರ ಮತ್ತು ಪ್ರಗ್ಯಾನ್ ಓಜಾ ಈ 20 ಆಟಗಾರರನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ಈ 20 ಆಟಗಾರರ ಪಂದ್ಯಗಳ ಸಮಯದಲ್ಲಿ ಈ ಆಯ್ಕೆದಾರರು ಕ್ರೀಡಾಂಗಣದಲ್ಲಿ ಹಾಜರಿರಲಿದ್ದಾರೆ. ಕ್ರೀಡಾಂಗಣದಲ್ಲಿ ಮತ್ತು ಟಿವಿಯಲ್ಲಿ ಪಂದ್ಯಗಳನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಇವರಿಹಗೆ ವಹಿಸಲಾಗಿದೆ.

ವರದಿಯ ಪ್ರಕಾರ, ಟೀಂ ಇಂಡಿಯಾದ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮುಂಬೈನಲ್ಲಿ ನಡೆಯುವ ಪಂದ್ಯಗಳ ಮೇಲೆ ಕಣ್ಣಿಟ್ಟರೆ, ಶಿವಸುಂದರ್ ದಾಸ್ ಕೋಲ್ಕತ್ತಾ, ಆರ್.ಪಿ. ಸಿಂಗ್ ಮತ್ತು ಅಜಯ್ ರಾತ್ರ ದೆಹಲಿಯಲ್ಲಿ ನಡೆಯುವ ಪಂದ್ಯಗಳನ್ನು ವೀಕ್ಷಿಸಲಿದ್ದಾರೆ. ಉಳಿದಂತೆ ಪ್ರಗ್ಯಾನ್ ಓಜಾ ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿ ನಡೆಯುವ ಕೆಲವು ಐಪಿಎಲ್ ಪಂದ್ಯಗಳನ್ನು ವೀಕ್ಷಿಸುವ ನಿರೀಕ್ಷೆಯಿದೆ.

PAK vs BAN: ರನೌಟ್ ವಿವಾದ; ಸಲ್ಮಾನ್ ಆಘಾ ವಿರುದ್ಧ ಕಠಿಣ ಕ್ರಮ ಜರುಗಿಸಿದ ಐಸಿಸಿ

ಐಪಿಎಲ್ ಸ್ಟಾರ್ಸ್​ಗೆ ನೋ ಛಾನ್ಸ್

ಪ್ರತಿ ಆಯ್ಕೆದಾರರು ವಾರಕ್ಕೆ ಕನಿಷ್ಠ ಒಂದು ಪಂದ್ಯವನ್ನು ವೀಕ್ಷಿಸಬೇಕೆಂದು ಬಿಸಿಸಿಐ ಆದೇಶಿಸಿದೆ ಎಂದು ವರದಿಯಾಗಿದೆ. ಹಾಗೆಯೇ 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಮತ್ತು ಅದಕ್ಕೂ ಮೊದಲು ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟವನ್ನು ಗಮನದಲ್ಲಿಟ್ಟುಕೊಂಡು ಈಗಾಗಲೇ 20 ಆಟಗಾರರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಇದರರ್ಥ ಈ ಐಪಿಎಲ್‌ನಲ್ಲಿ ಅಬ್ಬರಿಸುವ ಯಾವುದೇ ಆಟಗಾರನಿಗೆ (ಬಿಸಿಸಿಐ ಆಯ್ಕೆ ಮಾಡಿರುವ 20 ಆಟಗಾರರನ್ನು ಹೊರತುಪಡಿಸಿ) ವಿಶ್ವಕಪ್‌ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾದಂತ್ತಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೋತಿ ಕಿತಾಪತಿಗೆ ಹೆಜ್ಜೇನು ದಾಳಿ: ಜೀವ ಬಿಟ್ಟ ಕಾರು ಶೋರೂಂ ಮೇಲ್ವಿಚಾರಕ!

ತುಮಕೂರು/ ರಾಯಚೂರು, ಮಾರ್ಚ್​​ 20: ಕೋತಿಯೊಂದು ಮಾಡಿದ ಕಿತಾಪತಿಗೆ ಓರ್ವ ಮೃತಪಟ್ಟಿದ್ದು ನಾಲ್ಕೈದು ಜನ ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕೋತಿ ಕೀಟಲೆ ಮಾಡಿದ ಹಿನ್ನೆಲೆ ಏಕಾಏಕಿ ಹಲವರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕಾರು ಶೋರೂಂ ಮೇಲ್ವಿಚಾರಕರಾಗಿದ್ದ ವಿಜಯ್ ಪ್ರಕಾಶ್(65) ಘಟನೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದು, ಕೆಲಸ ಮುಗಿಸಿ ನಿನ್ನೆ ಸಂಜೆ ಮನೆಗೆ ಬರುವಾಗ ಮಾರುತಿ ನಗರದ ಪಿಎನ್ ಟಿ ಕ್ವಾಟ್ರಸ್ ಬಳಿ ಮರದಲ್ಲಿದ್ದ ಹೆಜ್ಜೇನು ಹಲವರ ಜೊತೆ ಇವರ ಮೇಲೂ ದಾಳಿ ನಡೆಸಿತ್ತು.

ಬೈಕ್​​ನಲ್ಲಿ ಬರುತ್ತಿದ್ದ ವೇಳೆ ಹೆಜ್ಜೇನು ದಾಳಿ ಮಾಡಲು ಆರಂಭಿಸಿದ ಕಾರಣ ಅವುಗಳಿಂದ ತಪ್ಪಿಸಿಕೊಳ್ಳಲು ವಿಜಯ್ ಪ್ರಕಾಶ್ ಹರಸಾಹಸ ಪಟ್ಟಿದ್ದರು. ಶರ್ಟ್ ಬಿಚ್ಚಿ ಅವನ್ನು ಓಡಿಸಲು ಪ್ರಯತ್ನ ಮಾಡಿದ್ದರು. ಹೀಗಿದ್ದರೂ ಐವತ್ತಕ್ಕೂ ಅಧಿಕ ಜೇನು ನೊಣಗಳು ಅವರ ಮುಖ ಸೇರದಂತೆ ದೇಹದ ಹಲವು ಭಾಗಗಳ ಮೇಲೆ ದಾಳಿ ನಡೆಸಿದ್ದವು. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು ತನ್ನದಲ್ಲದ ತಪ್ಪಿಗೆ ಜೀವ ತೆತ್ತಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಂದೆಯ ಸಾವಿಗೆ ಕಂಗಾಲಾಗಿರುವ ಮಗಳು ಕಣ್ಣೀರಿಟ್ಟಿದ್ದಾರೆ. ನಮ್ಮ ಅಪ್ಪನಿಗೆ ಬಂದ ಪರಿಸ್ಥಿತಿ ಮತ್ತೆ ಯಾರಿಗೂ ಬಾರದಿರಲಿ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂಬ ಆಗ್ರಹವನ್ನು ವ್ಯಕ್ತಪಡಿಸಿದ್ದಾರೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎಲೆಕ್ಷನ್​​ ವೇಳೆ ಹೈಡ್ರಾಮಾ; ಚುನಾವಣಾ ಅಧಿಕಾರಿಯಿಂದಲೇ ಕಳ್ಳ ಮತದಾನ?

ಮನೆ ಮೇಲ್ಚಾವಣಿ ಕುಸಿದು ಮಹಿಳೆ ಸಾವು

ಮಳೆಗೆ ಮನೆ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ 14ನೇ ವಾರ್ಡ್​​ನಲ್ಲಿ ಮಹಿಳೆಯೋರ್ವರು ಮೃತಪಟ್ಟಿರುವ ಅಘಾತಕಾರಿ ಘಟನೆ ನಡೆದಿದೆ. ಈಶಮ್ಮ(60) ಮೃತಳಾಗಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಈಶಮ್ಮ ಮಸ್ಕಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ನವದೆಹಲಿ, ಮಾರ್ಚ್ 20: ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್​ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ.

ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ ಮಾಮೂಲಿಯ ಪೆಟ್ರೋಲ್​ಗಿಂತ ತುಸು ಹೆಚ್ಚಿನದ್ದಿರುತ್ತದೆ. ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್, ಎಚ್​ಪಿಸಿಎಲ್ ಈ ಬೆಲೆ ಏರಿಕೆ ಮಾಡಿವೆ.

Source link

ಕೋಲ್ಕತ್ತಾದ ಆರ್​ಜಿಕರ್ ಆಸ್ಪತ್ರೆಯ ಲಿಫ್ಟ್​ನಲ್ಲಿ ಸಿಲುಕಿ ವ್ಯಕ್ತಿ ಸಾವು, ಮಗ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ, ಮಾರ್ಚ್​ 20: ಸದಾ ಒಂದಲ್ಲಾ ಒಂದು ಘಟನೆಯಿಂದ ಸುದ್ದಿಯಲ್ಲಿರುವ ಕೋಲ್ಕತ್ತಾ ಆರ್​ಜಿಕರ್ ಆಸ್ಪತ್ರೆಯ ಲಿಫ್ಟ್​​(Lift) ನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಅರೂಪ್ ಬಂಡೋಪಾಧ್ಯಾಯ ಎಂದು ಗುರುತಿಸಲಾಗಿದೆ.
ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಪ್ರಕಾರ, ಮೃತರ ಮಗನ ಕಾಲಿನ ಮೂಳೆ ಮುರಿದಿದ್ದು, ಆರ್​​ಜಿ ಕರ್ ಕಾಲೇಜು, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಅರೂಪ್ ಬಂಡೋಪಾಧ್ಯಾಯ ಶಸ್ತ್ರಚಿಕಿತ್ಸಾ ಕೊಠಡಿಯಿಂದ ಹಿಂದಿರುಗುತ್ತಿದ್ದಾಗ ಲಿಫ್ಟ್​ನಿಂದ ಕೆಳಗೆ ಹೋಗುತ್ತಿದ್ದರು. ಲಿಫ್ಟ್​ ಇದ್ದಕ್ಕಿದ್ದಂತೆ ನಿಂತಿತ್ತು, ಒಳಗೆ ಮೂವರು ಸಿಲುಕಿಕೊಂಡಿದ್ದರು. ಅರೂಪ್ ಬಹಳ ಸಮಯವಾದರೂ ಹಿಂದಿರುಗದಿದ್ದಾಗ ಕುಟುಂಬ ಚಿಂತಿತರಾಗಿ ಅವರನ್ನು ಹುಡುಕಲು ಆರಂಭಿಸಿತ್ತು. ನಂತರ ಅವರ ಶವ ಲಿಫ್ಟ್​ ಒಳಗೆ ಪತ್ತೆಯಾಗಿದೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ತುರ್ತು ಪರಿಸ್ಥಿತಿಯಲ್ಲಿ ಸಹಾಯ ಮಾಡಲು ಲಿಫ್ಟ್​ಮ್ಯಾನ್ ಇರಲಿಲ್ಲ. ಪ್ರಾಥಮಿಕ ತನಿಖೆಗಳು ಇದನ್ನು ಸಮಪೂರ್ಣ ನಿರ್ಲಕ್ಷ್ಯವೆಂದು ಪರಿಗಣಿಸುತ್ತಿವೆ. ಹಿಂದಿನ ದಿನ ಲಿಫ್ಟ್​ ಕೆಟ್ಟುಹೋಗಿತ್ತು. ಆದರೆ ಅದನ್ನು ದುರಸ್ತಿ ಮಾಡಲಾಗಿಲ್ಲ ಎಂದು ಕೆಲವರು ಹೇಳಿದ್ದಾರೆ.

ಮತ್ತಷ್ಟು ಓದಿ: ಲಿಫ್ಟ್‌ನಲ್ಲಿ ಸಿಲುಕಿದ್ದ ಕಂದಮ್ಮಗಳನ್ನು ರಕ್ಷಿಸಿ ದೇವರಾದ ಪುಟ್ಟ ಬಾಲಕಿ

ಮೃತರ ಸಹೋದರಿ ಅರ್ಪಿತಾ ಮಾತನಾಡಿ, ನಾವು ನಮ್ಮ ಅಳಿಯನ ಚಿಕಿತ್ಸೆಗಾಗಿ ಇಲ್ಲಿಗೆ ಬಂದಿದ್ದೇವೆ, ನಾವು ಕಿರುಚುತ್ತಲೇ ಇದ್ದೆವು, ಆದರೆ ಯಾರೂ ಸಹಾಯಕ್ಕೆ ಬರಲಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಇಂತಹ ಪರಿಸ್ಥಿತಿ ಉದ್ಭವಿಸಬಹುದು ಎಂದು ಊಹಿಸಿರಲಿಲ್ಲ ಎಂದರು.

ರಕ್ಷಣಾ ಕಾರ್ಯಾಚರಣೆ ಆರಂಭವಾದಾಗ ಸಿಬ್ಬಂದಿಗೆ ಲಿಫ್ಟ್​ ಕೀ ಸಿಗಲಿಲ್ಲ, ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಬಿಜೆಪಿ ನಾಯಕ ತಪಸ್ ಚಟರ್ಜಿ ಟಿಎಂಸಿ ಸರ್ಕಾರವನ್ನು ಟೀಕಿಸಿದ್ದಾರೆ. ಇದು ಸರ್ಕಾರ ಮತ್ತು ಆಸ್ಪತ್ರೆಯ ಕಡೆಯಿಂದ ಆದ ನಿರ್ಲಕ್ಷ್ಯ ಎಂದು ಹೇಳಿದ್ದಾರೆ,ಜೀವಗಳನ್ನು ಉಳಿಸಲಾಗದಿದ್ದರೂ ಅಂತಹ ನಿರ್ಲಕ್ಷ್ಯದಿಂದ ಜೀವಹಾನಿ ಸಂಭವಿಸಿದೆ. ಎರಡು ವರ್ಷಗಳ ಹಿಂದೆ ಅದೇ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶುಕ್ರವಾರ ಗರಿಗೆದರಿದ ಷೇರು ಬಜಾರು; ನಿನ್ನೆ ನೆಲಕಚ್ಚಿದ್ದ ಮಾರುಕಟ್ಟೆ ಇವತ್ತು ಚೇತರಿಸಿಕೊಂಡಿದ್ದು ಯಾಕೆ?

ನವದೆಹಲಿ, ಮಾರ್ಚ್ 20: ನಿನ್ನೆ ಯುಗಾದಿ ಹಬ್ಬದ ದಿನದಂದು ಹೂಡಿಕೆದಾರರಿಗೆ 12 ಲಕ್ಷ ಕೋಟಿ ರೂ ನಷ್ಟ ತಂದಿತ್ತು ಷೇರು ಮಾರುಕಟ್ಟೆ (Stock Market) ಇವತ್ತು ಹಸಿರು ಬಣ್ಣಕ್ಕೆ ತಿರುಗಿದೆ. ಸೆನ್ಸೆಕ್ಸ್, ನಿಫ್ಟಿ ಇತ್ಯಾದಿ ಪ್ರಧಾನ ಸೂಚ್ಯಂಕಗಳು ಗಳಿಕೆ ಕಂಡಿವೆ. ಸೆನ್ಸೆಕ್ಸ್ 1,016 ಅಂಕ ಗಳಿಸಿದೆ. ನಿಫ್ಟಿ50 ಸೂಚ್ಯಂಕ 288 ಅಂಕಗಳಷ್ಟು ಚೇತರಿಕೆ ಕಂಡಿದೆ. ಈ ವರದಿ ಬರೆಯುವ ವೇಳೆ, ಸೆನ್ಸೆಕ್ಸ್ 300ಕ್ಕೂ ಹೆಚ್ಚು ಅಂಕಗಳ ಗಳಿಕೆಯೊಂದಿಗೆ 74,530 ಮಟ್ಟದಲ್ಲಿತ್ತು. ನಿಫ್ಟಿ ಗಳಿಸಿದ ಅಂಕಗಳು ನೂರಕ್ಕಿಂತ ತುಸು ಹೆಚ್ಚು.

ಕಡಿಮೆಗೊಂಡ ಯುದ್ಧದ ತೀವ್ರತೆ

ಇರಾನ್​ನ ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ ಮಾಡಿದ ಪರಿಣಾಮ, ಇರಾನ್ ದೇಶವು ಸುತ್ತಮುತ್ತಲಿನ ಗಲ್ಫ್ ರಾಷ್ಟ್ರಗಳ ತೈಲ ಘಟಕಗಳನ್ನು ಗುರಿಯಾಗಿಸಿದ್ದು ಇಡೀ ಜಗತ್ತನ್ನು ಆತಂಕಕ್ಕೆ ದೂಡಿತ್ತು. ಇಸ್ರೇಲ್​ಗೆ ಅಮೆರಿಕ ಎಚ್ಚರಿಕೆ ಕೊಟ್ಟಿರುವುದು ಮತ್ತೆ ತೈಲ ಘಟಕಗಳ ಮೇಲೆ ದಾಳಿಯಾಗುವ ಸಾಧ್ಯತೆ ಕಡಿಮೆಗೊಂಡಿದೆ. ಹಾಗೆಯೇ, ಭೂಸೇನೆಗಳು ರಣರಂಗಕ್ಕೆ ಇಳಿಯುವುದಿಲ್ಲ ಎನ್ನುವ ಆಶ್ವಾಸನೆಯೂ ಸಿಕ್ಕಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಹು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದು ಮಾರುಕಟ್ಟೆಯನ್ನು ಶಾಂತಗೊಳಿಸಿದೆ.

ಇದನ್ನೂ ಓದಿ: ಇರಾನ್ ಹೊಸ ವರಸೆ; ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ಸಂಗ್ರಹಕ್ಕೆ ಆಲೋಚನೆ

ಯುದ್ಧದ ತೀವ್ರತೆ ಮತ್ತು ಅಪಾಯವು ಕಡಿಮೆಗೊಂಡಿರುವ ಪರಿಣಾಮ ಅಮೆರಿಕದ ಮಾರುಕಟ್ಟೆಗೆ ಕಳೆ ಬಂದಿದೆ. ಇದು ಭಾರತವೂ ಸೇರಿ ವಿಶ್ವದ ವಿವಿಧ ಷೇರುಪೇಟೆಯ ಮೇಲೂ ಸಕಾರಾತ್ಮಕ ಭಾವನೆ ಮೂಡಿಸಿದೆ.

ತೈಲ ಬೆಲೆ ಇಳಿಕೆ

ಜಾಗತಿಕ ತೈಲ ಬೆಲೆಗಳು ಇಳಿದಿವೆ. ಬ್ರೆಂಟ್ ಕ್ರೂಡ್ ತೈಲದ ಬೆಲೆ 119.13 ಡಾಲರ್ ಇದ್ದದ್ದು 107 ಡಾಲರ್​ಗೆ ಇಳಿದಿದೆ. ಹೀಗಾಗಿ, ಜಾಗತಿಕ ಆರ್ಥಿಕತೆಯ ಮೇಲಿನ ಒತ್ತಡ ಕಡಿಮೆಗೊಂಡಿದೆ. ಇದು ಮಾರುಕಟ್ಟೆಯ ವಿಶ್ವಾಸ ಹೆಚ್ಚಿಸಿದೆ.

ಇದನ್ನೂ ಓದಿ: ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

ಒಳ್ಳೆಯ ಬೆಲೆಗೆ ಷೇರುಗಳನ್ನು ಖರೀದಿಸುವ ಯತ್ನ

ಗುರುವಾರ ಷೇರು ಬಜಾರು ಶೇ. 3ರಷ್ಟು ಕುಸಿತ ಕಂಡಿತ್ತು. ಅನೇಕ ಒಳ್ಳೆಯ ಷೇರುಗಳಿಗೆ ಮಾರ್ಕೆಟ್ ಕರೆಕ್ಷನ್ ಸಿಕ್ಕಿದೆ. ಹೀಗಾಗಿ, ಅನೇಕ ಒಳ್ಳೆಯ ಷೇರುಗಳು ಕಡಿಮೆ ಬೆಲೆಗೆ ಲಭ್ಯ ಇವೆ. ಹೂಡಿಕೆದಾರರು ಇದರ ಲಾಭ ಪಡೆಯಲು ಶುಕ್ರವಾರ ಮುಗಿಬಿದ್ದಂತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಸುಗೂಸು ಸಾವು ಕೇಸ್​​ಗೆ ಟ್ವಿಸ್ಟ್: ಹೆಣ್ಣುಮಗು ಎಂದು ವಿಷವುಣಿಸಿದ್ದ ತಂದೆ ಅರೆಸ್ಟ್​​

ಬೆಳಗಾವಿ, ಮಾರ್ಚ್​ 20: 15 ದಿನದ ಹಿಂದೆಯಷ್ಟೇ ಜನಿಸಿದ್ದ ಹಸುಗೂಸು (baby death) ಏಕಾಏಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿದ್ದು, ಸದ್ಯ ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಘಟನೆ ನಡೆದಿತ್ತು. ಕಾಕತಿ ಪೊಲೀಸ್​ ಠಾಣೆಗೆ ಮಗುವಿನ ತಾಯಿ ಶೀಲಾ ದೂರು ನೀಡಿದ್ದರು.

ನಡೆದಿದ್ದೇನು?

ಇತ್ತೀಚೆಗೆ ಅಂದರೆ ಮಾರ್ಚ್​ 17ರಂದು 15 ದಿನಗಳ ಹಿಂದೆ ಜನಿಸಿದ್ದ ಹಸುಗೂಸು ಅನುಮಾನಾಸ್ಪದವಾಗಿ ಸಾವನ್ನಪ್ಪಿತ್ತು. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಮಗುವಿನ ಸಾವಿಗೆ ತಂದೆಯೇ ಕಾರಣ ಎಂಬ ಗಂಭೀರ ಆರೋಪನ್ನು ಕುಟುಂಬಸ್ಥರೇ ಮಾಡಿದ್ದರು.

ಇದನ್ನೂ ಓದಿ: 15 ದಿನ ಮಗು ಅನುಮಾಸ್ಪದ ಸಾವು: ತಂದೆಯೇ ಮಗುವಿಗೆ ವಿಷ ಪ್ರಾಶನ ಶಂಕೆ

ಒಂದು ವರ್ಷದ ಹಿಂದೆ ಭೀಮರಾಯ ಶೀಲಾ‌ರನ್ನು ಮದುವೆ ಆಗಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಭೀಮರಾಯಗೆ ಗಂಡು ಮಕ್ಕಳೆಂದರೆ ಹುಚ್ಚು. ಆದರೆ 15 ದಿನದ ಹಿಂದೆ ಹೆಣ್ಣು ಮಗು ಆಗಿದ್ದಕ್ಕೆ ನೊಂದುಕೊಂಡಿದ್ದರು. ಪತ್ನಿ ತವರು ಮನೆಗೆ ಬಂದಿದ್ದ ಭೀಮರಾಯ ಮಗು ನೋಡಿ ವಾಪಾಸ್ ಹೋಗಿದ್ದರು. ಅವರು ಅತ್ತ ಹೋಗ್ತಿದ್ದಂತೆ ಮಗು ಅಸ್ವಸ್ಥಗೊಂಡಿತ್ತು. ಕೂಡಲೇ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಆದರೆ ಅಷ್ಟರಲ್ಲಿ ಮಗು ಮೃತಪಟ್ಟಿತ್ತು.

ಹತ್ತಿ ಬೆಳೆಗೆ ಸಿಂಪಡಣೆ ಮಾಡುವ ಔಷಧಿಯನ್ನು ಮಗುವಿಗೆ ಉಣಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಮಗುವನ್ನ ಬಿಮ್ಸ್ ಆಸ್ಪತ್ರೆ ಶವಗಾರಕ್ಕೆ ಶಿಫ್ಟ್ ಮಾಡಿ, ಮರಣೋತ್ತರ ಪರೀಕ್ಷೆಯ ಬಳಿಕವೇ ಮಗುವಿನ ಸಾವಿನ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಮಗು ಕಳೆದುಕೊಂಡ ತಾಯಿ ಹಾಗೂ ಕುಟುಂಬಸ್ಥರ ದುಃಖ ಮಡುಗಟ್ಟಿತ್ತು.

ಇದನ್ನೂ ಓದಿ: 2 ವರ್ಷದಿಂದ ಮದುವೆಗೆ ದುಂಬಾಲು: ಯುವಕ ಕೊನೆಗೆ ಯುವತಿಗೆ ಮಾಡಿದ್ದೇನು ಗೊತ್ತಾ?

ಇನ್ನು ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಡಿಸಿಪಿ ನಾರಾಯಣ್ ಭರಮನಿ, ಬೆಳಗಾವಿ ಗ್ರಾಮೀಣ ಎಸಿಪಿ ಹಾಗೂ ಕಾಕತಿ ಸಿಪಿಐ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಮತ್ತೊಂದೆಡೆ ಆರೋಪ ಎದುರಿಸುತ್ತಿದ್ದ ಪತಿ ಭೀಮರಾಯ ನಾಪತ್ತೆ ಆಗಿದ್ದರು. ಬಂಧನಕ್ಕೆ ಪೊಲೀಸರು ಬಲೆ ಕೂಡ ಬೀಸಿದ್ದರು. ಅದರಂತೆಯೇ ಇಂದು ಆರೋಪಿ ತಂದೆಯನ್ನು  ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

50 ದಿನ ಪೂರೈಸಿದ ಖುಷಿಯಲ್ಲಿ ‘ಭಾರತಿ ಟೀಚರ್ 7ನೇ ತರಗತಿ’ ಸಿನಿಮಾ ತಂಡ

ಎಂ.ಎಲ್. ಪ್ರಸನ್ನ ಅವರು ನಿರ್ದೇಶನ ಮಾಡಿದ ‘ಭಾರತಿ ಟೀಚರ್ 7ನೇ ತರಗತಿ’ ಸಿನಿಮಾದಲ್ಲಿ ವಿಶೇಷ ಕಥಾಹಂದರ ಇದೆ. ಈ ಸಿನಿಮಾ ಬಿಡುಗಡೆಯಾಗಿ 50 ದಿನಗಳನ್ನು (50 Days) ಪೂರೈಸಿದೆ. ಕನ್ನಡದಲ್ಲಿ ಅರ್ಧ ಶತಕ ಪೂರೈಸಿದ 2026ರ ಮೊದಲ ಸಿನಿಮಾ ಎಂಬ ಖ್ಯಾತಿಗೆ ಈ ಸಿನಿಮಾ ಪಾತ್ರವಾಗಿದೆ. ಆ ಸಲುವಾಗಿ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಿತು. ವಿ. ನಾಗೇಂದ್ರ ಪ್ರಸಾದ್, ಧರ್ಮ ಕೀರ್ತಿರಾಜ್, ರವಿ ಗೌಡ, ಮೋಹನ್, ಜಡೇಶ್ ಕೆ. ಹಂಪಿ, ಓಂ ಪ್ರಕಾಶ್ ರಾವ್, ಚಕ್ರವರ್ತಿ ಚಂದ್ರಚೂಡ್, ವೀರಕಪುತ್ರ ಶ್ರೀನಿವಾಸ್ ಮುಂತಾದವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ‘ಭಾರತಿ ಟೀಚರ್ 7ನೇ ತರಗತಿ’ (Bharathi Teacher) ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದರು.

‘ಪೂಜ್ಯಾಯ ಫಿಲ್ಮ್ಸ್’ ಬ್ಯಾನರ್ ಮೂಲಕ ಉದ್ಯಮಿ ರಾಘವೇಂದ್ರ ರೆಡ್ಡಿ ಅವರು ‘ಭಾರತಿ ಟೀಚರ್ 7ನೇ ತರಗತಿ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಗುರುರಾಜ್ ರೆಡ್ಡಿ ಅವರು ಸಹ ನಿರ್ಮಾಪಕರಾಗಿದ್ದಾರೆ. ಎಂ.ಎಲ್. ಪ್ರಸನ್ನ ಅವರು ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಮತ್ತು ಸಂಗೀತದ ಜವಬ್ದಾರಿಯನ್ನು ನಿಭಾಯಿಸಿದ್ದಾರೆ.

ಸಚಿತ್ ಫಿಲ್ಮ್ಸ್​​ನ ವೆಂಕಟ್ ಗೌಡ ಅವರು ಕ್ರಿಯೇಟಿವ್ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಈ ಸಿನಿಮಾ 11 ಕೇಂದ್ರಗಳಲ್ಲಿ 25 ದಿವಸ , 9 ಕೇಂದ್ರಗಳಲ್ಲಿ 50 ದಿವಸ ಪೂರೈಸಿದ್ದು, ಇಲ್ಲಿಯವರೆಗೂ 2 ಲಕ್ಷ ವಿದ್ಯಾರ್ಥಿಗಳು ಸಿನಿಮಾ ವೀಕ್ಷಿಸಿದ್ದಾರೆ ಎಂದು ಚಿತ್ರತಂಡ ಹೇಳಿದೆ. ಸಿಹಿಕಹಿ ಚಂದ್ರು, ಕುಮಾರಿ ಯಶಿಕಾ, ಗೋವಿಂದೇ ಗೌಡ, ದಿವ್ಯಾ ಅಂಚನ್, ಅಶ್ವಿನ್‌ ಹಾಸನ್, ಬೆನಕಾ ನಂಜಪ್ಪ, ಸೌಜನ್ಯ ಸುನಿಲ್, ರೋಹಿತ್‌ ರಾಘವೇಂದ್ರ, ಎಂ.ಜೆ. ರಂಗಸ್ವಾಮಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಎಂ.ಬಿ. ಹಳ್ಳಿಕಟ್ಟಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಸುಜಿತ್‌ ನಾಯಕ್ ಅವರ ಸಂಕಲನ, ಕಂಬಿ ರಾಜ್ ಅವರ ನೃತ್ಯ ನಿರ್ದೇಶನ ಈ ಸಿನಿಮಾಗಿದೆ.

ನಟ ಸಿಹಿಕಹಿ ಚಂದ್ರ ಅವರು ಮಾತನಾಡಿ, ‘ಅಪರೂಪದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನ್ನ ಸೌಭಾಗ್ಯ. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರೂ, ಇಷ್ಟು ದೊಡ್ಡ ರೋಲ್ ಸಿಕ್ಕಿರೋದು ಇದೇ ಮೊದಲು. ಇಂತಹ ಪಾತ್ರ ನಿಭಾಯಿಸುತ್ತೇನೆ ಎನ್ನುವ ನಂಬಿಕೆ ಇರಲಿಲ್ಲ. ನಿರ್ದೇಶಕರು ನನ್ನ ಮೇಲೆ ಭರವಸೆ ಇಟ್ಟುಕೊಂಡಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ. ಎಲ್ಲರ ಪರಿಶ್ರಮಕ್ಕೆ ಇಂದು ಫಲ ಸಿಕ್ಕಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಭಾರತಿ ಟೀಚರ್ ಏಳನೇ ತರಗತಿ’ ಸಿನಿಮಾದಲ್ಲಿ ಸಚಿವ ಸಂತೋಷ್ ಲಾಡ್ ನಟನೆ

ವಿ. ನಾಗೇಂದ್ರ ಪ್ರಸಾದ್ ಮಾತನಾಡಿ, ‘ಇಂಥ ಚಿತ್ರವನ್ನು ಜನರಿಗೆ ತಲುಪಿಸುವಂತಹ ಕೆಲಸ ಆಗಬೇಕು. ಆ ಕೆಲಸವನ್ನು ಈ ಚಿತ್ರತಂಡದವರು ಮಾಡಿರುವುದು ಶ್ಲಾಘನೀಯ. ಇಂತಹ ಪ್ರಯತ್ನಗಳು ಮತ್ತೆ ಮತ್ತೆ ಆಗಬೇಕು. ನಾನು ಸಿನಿಮಾ ನೋಡಿದ್ದೇನೆ. ಎಲ್ಲಾ ಪಾತ್ರಗಳ ಪೋಷಣೆಯನ್ನು ಆನಂದಿಸಿದ್ದೇನೆ’ ಎಂದರು. 50 ದಿನ ಪೂರೈಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕದಿಂದ ಚಾರ್​​ ಧಾಮ್​​​ ಯಾತ್ರೆಗೆ ಹೋಗುವವರು ಈಗ ಪೂಜಾ ಫೀ ಎಷ್ಟು ಕೊಡಬೇಕು ಗೊತ್ತಾ?

ವಿಶ್ವಪ್ರಸಿದ್ಧ ಚಾರ್​​ ಧಾಮ್​ ಯಾತ್ರೆಗೂ ಮುನ್ನ ಬದ್ರಿನಾಥ್​​-ಕೇದಾರನಾಥ್​ ಟೆಂಪಲ್​​ ಕಮಿಟಿ (ಬಿಕೆಟಿಸಿ)ಯಿಂದ ಭಕ್ತರಿಗೆ ಮಹತ್ವದ ಮಾಹಿತಿ ನೀಡಲಾಗಿದೆ. ಉಭಯ ದೇಗುಲಗಳಲ್ಲಿ ವಿಶೇಷ ಪೂಜೆ ಮತ್ತು ಆರತಿಗಳ ಶುಲ್ಕವನ್ನು ಹೆಚ್ಚಿಸಲಾಗಿದ್ದು, ಬಿಕೆಟಿಸಿ ಸಭೆಯಲ್ಲಿ ಈ ನಿರ್ಧಾರವನ್ನು ಏಕಮತದಿಂದ ಅಂಗೀಕರಿಸಲಾಗಿದೆ. ಆದರೆ ಸಾಮಾನ್ಯ ದರ್ಶನ ಹಿಂದಿನಂತೆ ಉಚಿತವಾಗಿಯೇ ಮುಂದುವರಿಯಲಿದೆ. ಬಿಕೆಟಿಸಿ ನಿರ್ವಹಣೆಯಡಿ ಇರುವ ಈ ಎರಡೂ ಧಾಮಗಳಲ್ಲಿ ಪ್ರತಿದಿನ ಬೆಳಗ್ಗೆ-ಸಂಜೆ ವಿವಿಧ ಪೂಜೆಗಳು ಮತ್ತು ಆರತಿಗಳು ನಡೆಯುತ್ತವೆ. ಮಹಾಭಿಷೇಕ, ಅಭಿಷೇಕ, ಭೋಗ, ಅಖಂಡ ಜ್ಯೋತಿ ಸೇರಿದಂತೆ ಅನೇಕ ಧಾರ್ಮಿಕ ವಿಧಿಗಳು ಸಂಪನ್ನಗೊಳ್ಳುತ್ತವೆ. ಈ ವಿಶೇಷ ಪೂಜೆಗಳಲ್ಲಿ ಭಾಗವಹಿಸಲು ಭಕ್ತರು ಮುಂಚಿತವಾಗಿ ಬುಕ್ಕಿಂಗ್ ಮಾಡಬೇಕು ಹಾಗೂ ನಿಗದಿತ ಶುಲ್ಕ ಪಾವತಿಸಬೇಕಿದೆ. ಈಗಿನ ಹೊಸ ನಿರ್ಧಾರದಂತೆ ಈ ಶುಲ್ಕಗಳು ಹೆಚ್ಚಳಗೊಂಡಿವೆ.

ಬದ್ರಿನಾಥ ಧಾಮದ ಹೊಸ ದರಗಳು
ಸೇವೆಯ ವಿವರ ಹಿಂದನ ದರ (ರೂ. ಗಳಲ್ಲಿ) ಹೊಸ ದರ (ರೂ. ಗಳಲ್ಲಿ)
ಶ್ರೀಮದ್ಭಾಗವತ ಕಥೆ 51000 100000
ವೇದ ಮತ್ತು ಗೀತಾ ಪಾಠ 2500 3100
ಕರ್ಪೂರ ಆರತಿ 1951 3000
ಬೆಳ್ಳಿ ಆರತಿ 2731 5100
ಮಹಾಭಿಷೇಕ 4700 5500
ಅಭಿಷೇಕ 4500 5300
ಅಖಂಡ ಜ್ಯೋತಿ (ವಾರ್ಷಿಕ) 4951 6000
ಸ್ವರ್ಣ ಆರತಿ 5202 6100
ಖೀರ್ ಭೋಗ 1001 2100
ಬಾಲ ಭೋಗ 7301 10000
ಮಹಾಭೋಗ 32501 45000

ಇದನ್ನೂ ಓದಿ: ದೈವಾರಾಧನೆಯಲ್ಲಿ ‘ಮಡಿ’ ಎಂದರೆ ಭಯವಲ್ಲ, ಅದು ಪರಮ ಶುಚಿತ್ವದ ಸಂಕೇತ!

ಕೆದಾರನಾಥ ಧಾಮದ ಹೊಸ ದರಗಳು
ಸೇವೆಯ ವಿವರ ಹಿಂದನ ದರ (ರೂ. ಗಳಲ್ಲಿ) ಹೊಸ ದರ (ರೂ. ಗಳಲ್ಲಿ)
ಲಘು ರುದ್ರಾಭಿಷೇಕ 6100 7100
ಮಹಾಭಿಷೇಕ 9500 11500
ರುದ್ರಾಭಿಷೇಕ 7200 7500
ದಿನಪೂರ್ತಿ ಪೂಜೆ 28600 51000
ಶಿವ ಸಹಸ್ರನಾಮ 2000 2500
ಅಖಂಡ ಜ್ಯೋತಿ 28600 35000
ಕರ್ಪೂರ ಆರತಿ 1900 2400
ಬಾಲ ಭೋಗ 1000 1500

ಸಾಮಾನ್ಯ ದರ್ಶನ ಉಚಿತ

ಬಿಕೆಟಿಸಿ ಪ್ರಕಾರ, ಸಾಮಾನ್ಯ ಭಕ್ತರಿಗೆ ದರ್ಶನ ವ್ಯವಸ್ಥೆ ಹಳೆಯದಂತೆ ಉಚಿತವಾಗಿಯೇ ಇರುತ್ತದೆ. ಕೇವಲ ವಿಶೇಷ ಪೂಜೆ, ಆರತಿ ಮತ್ತು ವಿಧಿಗಳಿಗಾಗಿ ಮಾತ್ರ ಶುಲ್ಕ ವಿಧಿಸಲಾಗುತ್ತದೆ. ಸಮಿತಿ ಅಧ್ಯಕ್ಷ ಹೆಮಂತ್ ದ್ವಿವೇದಿ ಹೇಳುವಂತೆ, ಪ್ರತಿವರ್ಷದಂತೆ ಈ ವರ್ಷವೂ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡು ಹೊಸ ದರಗಳನ್ನು ಜಾರಿಗೆ ತರಲಾಗಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಚಾರಧಾಮ ಯಾತ್ರೆಗೂ ಮುನ್ನ ಕಮಿಟಿಯ ಈ ನಿರ್ಧಾರ ಪ್ರಾಮುಖ್ಯತೆ ಪಡೆದಿದೆ. ವಿಶೇಷ ಪೂಜೆಗಳಲ್ಲಿ ಭಾಗವಹಿಸುವ ಭಕ್ತರಿಗೆ ಈ ದರ ಏರಿಕೆಯ ಪರಿಣಾಮ ಬೀಳಬಹುದು. ಆದರೆ ಸಮಿತಿಯ ಪ್ರಕಾರ, ಈ ಹೆಚ್ಚುವರಿ ಶುಲ್ಕದಿಂದ ದೇವಸ್ಥಾನಗಳ ವ್ಯವಸ್ಥೆ ಮತ್ತು ಭಕ್ತರಿಗೆ ಸೌಲಭ್ಯಗಳು ಮತ್ತಷ್ಟು ಸುಧಾರಿಸಲಿವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಂಡೀಗಢದ ಜನನಿಬಿಡ ಪ್ರದೇಶವಾದ ಸೆಕ್ಟರ್-9ರಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ನ್ಯೂ ಚಂಡೀಗಢದ ನಿವಾಸಿ ಚಿನ್ನಿ ಖುಭೇರಿ ಎಂಬುವವರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೆಕ್ಟರ್-9ರಲ್ಲಿರುವ ‘ಬಾಡಿ ಝೋನ್’ (Body Zone) ಜಿಮ್‌ನ ಹೊರಗಡೆ ಈ ಘಟನೆ ಸಂಭವಿಸಿದೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಚಿನ್ನಿ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಚಂಡೀಗಢ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದಾಳಿಕೋರರು ಕೃತ್ಯ ಎಸಗಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link