nagaraj11081993

Daily Devotional: ನೀವು ಸತ್ತಂತೆ ಕನಸು ಕಂಡಿದ್ದೀರಾ? ಇದರ ಹಿಂದಿನ ರಹಸ್ಯವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಮ್ಮ ಕನಸಿನಲ್ಲಿ ನಾವು ಸಾವನ್ನಪ್ಪಿದರೆ ಏನು ಅರ್ಥ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸ್ವಪ್ನಶಾಸ್ತ್ರದ ಪ್ರಕಾರ, ಮರಣಕ್ಕೆ ಸಂಬಂಧಿಸಿದ ಕನಸುಗಳು ಸಾಮಾನ್ಯವಾಗಿ ಶುಭ ಸೂಚಕವಾಗಿರುತ್ತವೆ. ನಿಮ್ಮ ಸಾವು ಕನಸಿನಲ್ಲಿ ಕಂಡರೆ ಅದು ಕಷ್ಟಗಳಿಂದ ಪಾರಾಗುವ, ಸಂಕಟಗಳು ದೂರವಾಗುವ, ದೋಷಗಳು ನಿವಾರಣೆಯಾಗುವ ಮತ್ತು ಅದೃಷ್ಟ ಕೂಡಿ ಬರುವ ಸೂಚನೆಯಾಗಿದೆ. ಬೇರೆಯವರ ಮರಣವನ್ನು ಕನಸಿನಲ್ಲಿ ಕಂಡರೆ ಅವರಿಗೆ ಆಯುಷ್ಯ ವೃದ್ಧಿಯಾಗುತ್ತದೆ. ಬ್ರಹ್ಮ ವೈವರ್ತ ಪುರಾಣದಲ್ಲಿ  ಇದನ್ನು ಸ್ಪಷ್ಟಪಡಿಸಲಾಗಿದೆ. ಇಂತಹ ಕನಸುಗಳು ಶುಭವನ್ನು ತರುವುದರಿಂದ ಯಾವುದೇ…

Read More

ಯಾವುದೇ ಒಪ್ಪಂದವಿಲ್ಲದೆ 2-3 ವಾರಗಳಲ್ಲಿ ಇರಾನ್-ಅಮೆರಿಕ ಯುದ್ಧ ಕೊನೆಗೊಳ್ಳುತ್ತೆ ಎಂದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 1: ಇರಾನ್(Iran) ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೊಸ ಗಡುವನ್ನು ನಿಗದಿಪಡಿಸಿದ್ದಾರೆ. ಇರಾನ್ ಯುದ್ಧವು ಎರಡು, ಮೂರು ವಾರಗಳಲ್ಲಿ ಕೊನೆಗೊಳ್ಳಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕ ಶೀಘ್ರದಲ್ಲೇ ಇರಾನ್​ನಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿದೆ. ಇರಾನ್‌ನಲ್ಲಿ ಆಡಳಿತ ಬದಲಾವಣೆಯ ಗುರಿಯನ್ನು ಸಾಧಿಸಲಾಗಿದೆ , ಈ ಸಂಘರ್ಷವನ್ನು ಮುಂದುವರಿಸಲು ಅಮೆರಿಕ ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇರಾನ್ ಯುದ್ಧವನ್ನು ಕೊನೆಗೊಳಿಸಲು ಯಾವುದೇ ಒಪ್ಪಂದದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಒಪ್ಪಂದ ಅಸಾಧ್ಯ ಎಂದು ಅವರು…

Read More

Horoscope Today: ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ದಿನ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 1, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಚತುರ್ದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More

ಮುಗಿಯದ ಓವರ್… ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದ ಮೂಲಕ ಪಂಜಾಬ್ ಕಿಂಗ್ಸ್ ತಂಡದ ಎಡಗೈ ವೇಗಿ ಅರ್ಷದೀಪ್ ಸಿಂಗ್ (Arshdeep singh) ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ದೀರ್ಘಾವಧಿ ಬೌಲಿಂಗ್ ಮಾಡುವ ಮೂಲಕ ಎಂಬುದು ವಿಶೇಷ.  ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 19 ಓವರ್​ಗಳಲ್ಲಿ 150 ರನ್ ಕಲೆಹಾಕಿದ್ದರು. ಅದರಂತೆ 20ನೇ ಓವರ್ ಎಸೆಯಲು ಬಂದ ಅರ್ಷದೀಪ್ ಸಿಂಗ್ ಮೊದಲ ಎಸೆತವನ್ನು ವೈಡ್ ಮಾಡಿದರು….

Read More

ಬೀದಿನಾಯಿಗಳ ದಾಳಿಗೆ ಬೆಚ್ಚಿಬಿದ್ದ ಸೂರ್ಯನಗರ ಜನ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಕಿಡಿ

ಆನೇಕಲ್​​, ಏಪ್ರಿಲ್​​ 01: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಸೂರ್ಯನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಶ್ವಾನಗಳ ಕಾಟಕ್ಕೆ ಸ್ಥಳೀಯ ನಿವಾಸಿಗಳು ಹೈರಾಣಾಗಿದ್ದಾರೆ. ಗುಂಪು ಗುಂಪಾಗಿ ರಸ್ತೆಗಳಲ್ಲಿ ಬೀಡುಬಿಟ್ಟಿರುವ ರಕ್ಕಸ ಬೀದಿನಾಯಿಗಳು ಮನೆ ಮುಂದೆ ಆಟವಾಡುವ ಮಕ್ಕಳು, ವಾಕಿಂಗ್ ಮಾಡುವ ಮಹಿಳೆಯರು ಸೇರಿದಂತೆ ಪಾದಚಾರಿಗಳ ಮೇಲೆ ದಾಳಿ ನಡೆಸುತ್ತಿವೆ. ಬೈಕ್ ಸವಾರರನ್ನೂ ಅಡ್ಡಗಟ್ಟಿ ಅಟ್ಯಾಕ್​​ ಮಾಡುತ್ತಿವೆ. ದಿನನಿತ್ಯ ಇವುಗಳ ದಾಳಿಯಿಂದ ಸಾರ್ವಜನಿಕರು ಆಸ್ಪತ್ರೆಗೆ ಅಲೆದಾಡುವಂತಾಗಿದೆ. ಆದರೆ ಪುರಸಭೆ ಅಧಿಕಾರಿಗಳು ಮಾತ್ರ ಈ ಬಗ್ಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಬುದ್ಧಿಯಿಂದ ಬದಲಾಗಲಾರರು..

ಮೇಷ ರಾಶಿ: ನಿಮ್ಮ ಆತ್ಮವಿಶ್ವಾಸದಿಂದ ಆಗಬೇಕಾದ ಕಾರ್ಯವನ್ನು ಸಾಧಿಸಿಕೊಳ್ಳಬಹುದು.‌ ಹಳೆಯ ಯೋಜನೆಗಳನ್ನು ಇಂದು ಕಾರ್ಯಕ್ಕೆ ತರುವಿರಿ. ವಿದೇಶ ಪ್ರವಾಸವು ನಿಶ್ಚಯವಾಗಲಿದೆ. ನಿಷ್ಠುರವಾಗಿ ವರ್ತಿಸುವುದು ಅವಶ್ಯಕವಾಗಿದೆ. ನಿಮ್ಮವರನ್ನು ಭಿನ್ನಾಭಿಪ್ರಾಯ ಬರದಂತೆ ಇಟ್ಟುಕೊಳ್ಳುವುದೂ ನಿಮ್ಮ ಮುಖ್ಯ. ನೀವು ಕೆಲವು ಪ್ರಮುಖ ವಿಷಯಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಮಾನಸಿಕ ನೋವಿನಿಂದ ಹೊರಬರಲು ನಿಮಗೆ ಕಷ್ಟವಾದೀತು. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ವೃಷಭ ರಾಶಿ: ಯಾವುದೋ ಕಾರಣಕ್ಕೆ ಮಾಡಿದ ಪ್ರಯಾಣ ಇನ್ನಾವುದೋ ವಿಚಾರಕ್ಕೆ ಅನುಕೂಲವಾಗಿರುವುದು. ಉತ್ತಮ ಫಲಿತಾಂಶಗಳನ್ನು ಪರೀಕ್ಷೆಯಲ್ಲಿ ಪಡೆಯುತ್ತೀರಿ. ವ್ಯವಹಾರದಲ್ಲಿ ಒಂದು ಹೆಜ್ಜೆ…

Read More

PBKS vs GT: ಸೂಪರ್ ಕೊನೊಲಿ: ಪಂಜಾಬ್ ಕಿಂಗ್ಸ್​ಗೆ ರೋಚಕ ಜಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ ಕೇವಲ 13 ರನ್​​ಗಳಿಸಿ ವಿಕೆಟ್ ಒಪ್ಪಿಸಿದ್ದರು….

Read More

ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸವಾಲು: ವಿಜಯೇಂದ್ರಗೆ ಸಿಎಂ ಅಂಕಿ-ಸಂಖ್ಯೆ ಸಮೇತ ತಿರುಗೇಟು

ಬೆಂಗಳೂರು, (ಮಾರ್ಚ್ 31): ಕರ್ನಾಟಕದ ಆರ್ಥಿಕ (karnataka economy) ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  (BY Vijayendra) ಆಗ್ರಹಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸಹ ಅಂಕಿ-ಸಂಖ್ಯೆ ಸಮೇತ ಮಾಧ್ಯಮ ಪ್ರಕಟಣೆ ಮೂಲಕ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ. ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ ಹತಾಶೆಯನ್ನು ತೋರಿಸುತ್ತೆ. ಕಳೆದ ತಿಂಗಳಷ್ಟೇ ಈ ಆರ್ಥಿಕ ವರ್ಷದ ಆಯವ್ಯಯಪತ್ರವನ್ನು ಮಂಡಿಸಿದ್ದೇನೆ. ಅದು ಅಂಕಿ-ಅಂಶಗಳ ಕಾಗದದ ಕಂತೆ…

Read More

ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್​ಡೇ ವಿಡಿಯೋ ನೋಡಿ..

ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಯ ಪುತ್ರಿ ರಾಧ್ಯಾ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ರಿಷಬ್ ಶೆಟ್ಟಿ (Rishab Shetty) ಅವರು ಸಿನಿಮಾದ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಕುಟುಂಬಕ್ಕೆ ಸಮಯ ನೀಡುತ್ತಾರೆ. ಮಕ್ಕಳ ಹುಟ್ಟುಹಬ್ಬವನ್ನು ಅವರು ಸಂಭ್ರಮದಿಂದ ಆಚರಿಸುತ್ತಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ದೊಡ್ಡ ಯಶಸ್ಸಿನ ಬಳಿಕ ಅವರಿಗೆ ಇನ್ನಷ್ಟು ಬೇಡಿಕೆ ಹೆಚ್ಚಿದೆ. ಹೊಸ ಸಿನಿಮಾದ ಕೆಲಸಗಳತ್ತ ಅವರು ಗಮನ…

Read More

ಯಾದಗಿರಿ: ಎರಡು ಎಕರೆ ಜಮೀನಿಗಾಗಿ ರಕ್ತಚರಿತ್ರೆ; ದೊಡ್ಡಪ್ಪನ ಕುಟುಂಬದಿಂದಲೇ ಯುವಕನ ಬರ್ಬರ ಹತ್ಯೆ!

ಸುರಪುರ, ಮಾ.31: ಕೇವಲ ಎರಡು ಎಕರೆ ತುಂಡು ಭೂಮಿಗಾಗಿ ದಶಕಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹವೊಂದು ಯುವಕನ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ 27 ವರ್ಷದ ಪರಮೇಶ್ವರ ಎಂಬ ಯುವಕನನ್ನು ಆತನ ದೊಡ್ಡಪ್ಪ ಹನುಮಂತರಾಯ ಮತ್ತು ಆತನ ಮಕ್ಕಳು ಸೇರಿ ತಲ್ವಾರ್, ಬರ್ಚಿ ಹಾಗೂ ಕಲ್ಲುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ಪರಮೇಶ್ವರನ ತಂದೆ ಮಲ್ಲಪ್ಪ ಮತ್ತು ಆರೋಪಿ ಹನುಮಂತರಾಯ ಸಹೋದರರು. ತಲಾ 13 ಎಕರೆ ಜಮೀನು ಹಂಚಿಕೆಯಾಗಿದ್ದರೂ, ಮಲ್ಲಪ್ಪನ ಹೆಸರಿಗಿದ್ದ ಹೆಚ್ಚುವರಿ…

Read More