All posts by nagaraj11081993

ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ! ನಿಮ್ಮ ರಾಶಿಯ ಫಲ ಇಲ್ಲಿದೆ

ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ! ನಿಮ್ಮ ರಾಶಿಯ ಫಲ ಇಲ್ಲಿದೆ

ಬೆಂಗಳೂರು, ಮಾ.20: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 20ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಪರಾಭವ ನಾಮ ಸಂವತ್ಸರದ ಪ್ರಥಮ ದಿನವಾದ ಇಂದು, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ, ರೇವತಿ ನಕ್ಷತ್ರ, ಬ್ರಹ್ಮ ಯೋಗ, ಬಾಲವಕರಣದ ವೈಶಿಷ್ಟ್ಯಗಳನ್ನು ವಿವರಿಸಲಾಗಿದೆ. ಇಂದು ರಾಹು ಕಾಲ ಬೆಳಿಗ್ಗೆ 10:56ರಿಂದ ಮಧ್ಯಾಹ್ನ 12:27ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು ಮಧ್ಯಾಹ್ನ 12:27ರಿಂದ 1:50ರ ತನಕ ಇದೆ. ರವಿ ಮತ್ತು ಚಂದ್ರ ಇಬ್ಬರೂ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದು, ತಾಯಿ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಇದು ಅದ್ಭುತವಾದ ದಿನ ಎಂದು ಗುರೂಜಿ ಹೇಳಿದ್ದಾರೆ. ಈ ದಿನ ಜನ್ಮದಿನ ಅಥವಾ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಶುಭ ಕೋರಲಾಗಿದೆ. ಮೇಷದಿಂದ ಮೀನದವರೆಗಿನ ಎಲ್ಲ ರಾಶಿಗಳವರಿಗೆ ಇಂದು ಇರುವ ಶುಭ ಫಲಗಳು, ಉದ್ಯೋಗ, ವ್ಯಾಪಾರ, ಆರೋಗ್ಯ, ಕುಟುಂಬ, ಅದೃಷ್ಟ ಸಂಖ್ಯೆ, ದಿಕ್ಕು, ಬಣ್ಣ ಹಾಗೂ ಪಠಿಸಬೇಕಾದ ಮಂತ್ರಗಳ ಕುರಿತು ವಿವರವಾದ ಮಾಹಿತಿ ನೀಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ: ಬೆಂಗಳೂರಿನಲ್ಲಿ ಹೆಚ್ಚಿದ ಸೆಕೆ; ಉತ್ತರ ಕರ್ನಾಟಕದಲ್ಲಿ ಸೂರ್ಯನ ಪ್ರತಾಪ! ಮಳೆಯ ಮುನ್ಸೂಚನೆ ಇದೆಯೇ?

ಬೆಂಗಳೂರು, ಮಾ,20: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಗೆಯ ಬಿಸಿ ಕನ್ನಡಿಗರನ್ನು ಕಂಗಾಲಾಗಿಸಿದೆ. ಇಂದು (ಮಾರ್ಚ್ 20, 2026) ರಾಜ್ಯದ ಪ್ರಮುಖ ನಗರಗಳಲ್ಲಿ ದಾಖಲಾದ ಹವಾಮಾನ ಬದಲಾವಣೆಗಳ ವಿವರ ಇಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 34°C – 35°C ತಲುಪುವ ಸಾಧ್ಯತೆಯಿದೆ. ಸಂಜೆಯ ವೇಳೆ ಭಾಗಶಃ ಮೋಡ ಕವಿದ ವಾತಾವರಣವಿದ್ದರೂ, ಉಷ್ಣಾಂಶ ಕಡಿಮೆಯಾಗುವ ಲಕ್ಷಣಗಳಿಲ್ಲ.

ಕಲ್ಬುರ್ಗಿ, ರಾಯಚೂರು ಮತ್ತು ಬಳ್ಳಾರಿಯಲ್ಲಿ ತಾಪಮಾನವು 40°C ಗಡಿ ದಾಟುತ್ತಿದೆ. ಈ ಭಾಗದಲ್ಲಿ ಬಿಸಿ ಗಾಳಿ (Heat Wave) ಬೀಸುವ ಸಾಧ್ಯತೆ ಇರುವುದರಿಂದ ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸಾರ್ವಜನಿಕರು ಹೊರಬರಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಮಂಗಳೂರು, ಉಡುಪಿ ಭಾಗದಲ್ಲಿ ತಾಪಮಾನದ ಜೊತೆಗೆ ಉಸಿರುಕಟ್ಟುವಂತಹ ಆರ್ದ್ರತೆ (Humidity) ಹೆಚ್ಚಾಗಿದ್ದು, ಗರಿಷ್ಠ ತಾಪಮಾನ 36°C ಆಸುಪಾಸಿನಲ್ಲಿದೆ.

ಹವಾಮಾನ ಇಲಾಖೆಯ ಪ್ರಕಾರ, ಮಲೆನಾಡು ಜಿಲ್ಲೆಗಳಾದ ಕೊಡಗು ಮತ್ತು ಶಿವಮೊಗ್ಗದ ಕೆಲವು ಭಾಗಗಳಲ್ಲಿ ಅತಿ ಸಣ್ಣ ಪ್ರಮಾಣದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆ ತೀರಾ ವಿರಳವಾಗಿದೆ. ಇನ್ನು ಗದಗdಲ್ಲಿ ಶುಷ್ಕ ಹವಾಮಾನ ಮತ್ತು ಅತಿ ಹೆಚ್ಚು ಬಿಸಿಲು ಇರಲಿದೆ. ತಾಪಮಾನ ಗರಿಷ್ಠ 39°C, ಕನಿಷ್ಠ 24°C ಇರಲಿದೆ. ಮೋಡಗಳ ಸುಳಿವೇ ಇಲ್ಲದೆ ಸೂರ್ಯನ ಪ್ರತಾಪ ಹೆಚ್ಚಿರಲಿದೆ. ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಿ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರೇ ನಿಮ್ಮ ಸಹಾಯಕ್ಕೆ ಆಗುವರು

ಹಾವೇರಿಯಲ್ಲಿ ತೀವ್ರ ಬಿಸಿಲು ಮತ್ತು ಸೆಕೆ ಇರಲಿದೆ. ತಾಪಮಾನ ಗರಿಷ್ಠ 38°C, ಕನಿಷ್ಠ 23°C ಇರಲಿದೆ. ಗಾಳಿಯ ವೇಗ ಕಡಿಮೆ ಇರಲಿದ್ದು, ಸೆಕೆಯಿಂದಾಗಿ ಜನರು ಹೈರಾಣಾಗುವ ಸಾಧ್ಯತೆಯಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಆಹ್ಲಾದಕರವಾಗಿದ್ದರೂ ಬಿಸಿಲಿನ ತೀವ್ರತೆ ಹೆಚ್ಚಿದೆ. ತಾಪಮಾನ ಗರಿಷ್ಠ 33°C, ಕನಿಷ್ಠ 19°C ಇರಲಿದೆ. ಮಧ್ಯಾಹ್ನ ಬಿಸಿಲು ಹೆಚ್ಚಿರುತ್ತದೆ, ಆದರೆ ಸಂಜೆ ವೇಳೆ ಗುಡ್ಡಗಾಡು ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಬಹುದು. ಹಾಸನದಲ್ಲಿ ಸಾಧಾರಣ ಬಿಸಿಲು ಮತ್ತು ಶುಷ್ಕ ಹವಾಮಾನ. ತಾಪಮಾನ ಗರಿಷ್ಠ 34°C, ಕನಿಷ್ಠ 21°C ಇರಲಿದೆ. ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಬಯಲು ಸೀಮೆಯ ಪ್ರಭಾವದಿಂದ ಸೆಕೆ ಹೆಚ್ಚಾಗಿರಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 20ರ ದಿನಭವಿಷ್ಯ

ಅತಿ ಹೆಚ್ಚಿನ ಶತ್ರು ಬಾಧೆ ಇದ್ದಲ್ಲಿ ಈ ದಿನ ‘ನಾರಾಯಣ ಕವಚ’ ಅಥವಾ ‘ದೇವಿ ಕವಚ’ ಪಾರಾಯಣ ಮಾಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮ್ಮಲ್ಲಿ ಉದ್ಯೋಗ ಬದಲಾವಣೆಯ ಆಸಕ್ತಿ ಕೆರಳಲಿದೆ. ಒಂದು ವೇಳೆ ಕೆಲ ತಿಂಗಳ ಹಿಂದೆ ಪ್ರಯತ್ನ ಪಟ್ಟು, ಆ ನಂತರದಲ್ಲಿ ಬೇಡ ಎಂದುಕೊಂಡು ಸುಮ್ಮನಾಗಿದ್ದವರು ಸಹ ಈ ದಿನ ಜಾಬ್ ಕನ್ಸಲ್ಟೆನ್ಸಿಗಳ ಮೂಲಕವಾಗಿ ಕೆಲಸಕ್ಕೆ ಪ್ರಯತ್ನಿಸಲಿದ್ದೀರಿ. ನೀವು ಯಾರಿಗಾದರೂ ಸಾಲ ಕೊಟ್ಟು, ಬಹಳ ಸಮಯದಿಂದ ಅದು ವಾಪಸ್ ಬಂದಿಲ್ಲ ಎಂದಾಗಿದ್ದಲ್ಲಿ ಈ ದಿನ ಪ್ರಯತ್ನಿಸಿದಲ್ಲಿ ವಸೂಲಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಹೆಣ್ಣುಮಕ್ಕಳು ಪ್ರೀತಿ- ಪ್ರೇಮದಲ್ಲಿ ಇದ್ದಲ್ಲಿ ಅಂಥವರಿಗೆ ಬಹಳ ಮುಖ್ಯವಾದ ದಿನ ಇದಾಗಿರುತ್ತದೆ. ಇಷ್ಟು ಸಮಯ ಯಾವುದನ್ನು ಒಪ್ಪಿಸುವುದಕ್ಕೆ ಹಾಗೂ ಯಾವ ಬಗ್ಗೆ ತೀರ್ಮಾನಿಸುವುದಕ್ಕೆ ಭಾವನಾತ್ಮಕವಾಗಿ ಬಹಳ ಕಷ್ಟ ಎಂದೆನಿಸಿರುತ್ತದೋ ಅದು ಈ ದಿನ ಸಲೀಸಾಗಿ ಮುಗಿಯಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಕೋರ್ಸ್ ವೊಂದಕ್ಕೆ ಸೇರುವುದಕ್ಕೆ ತೀರ್ಮಾನ ಮಾಡುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಕೆಲವು ಕೆಲಸಗಳನ್ನು ಮಾಡುವುದಕ್ಕೆ ಮೇಲು ನೋಟಕ್ಕೆ ನಿಮಗೆ “ಇಷ್ಟೇ ಅಲ್ಲವಾ” ಎಂದು ಅನಿಸಬಹುದು. ಆದರೆ ಅದನ್ನು ನಿಮ್ಮಿಂದ ಯಶಸ್ವಿಯಾಗಿ ಮಾಡಿ ಮುಗಿಸುವುದಕ್ಕೆ ಬೇಕಾದಷ್ಟು ಸಮಯ ಹಾಗೂ ಉತ್ಸಾಹ ಇದೆಯೇ ಎಂಬುದನ್ನು ಆಲೋಚಿಸಿ, ಆ ನಂತರ ಉತ್ತರವನ್ನು ನೀಡಿ. ವಜ್ರ- ಪ್ಲಾಟಿನಂ, ಚಿನ್ನ- ಬೆಳ್ಳಿ ಅಥವಾ ಯಾವುದೇ ಬೆಲೆಬಾಳುವ ವಸ್ತುಗಳ ಖರೀದಿಯನ್ನು ಒಂದು ದಿನದ ಮಟ್ಟಿಗೆ ಮುಂದೂಡಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 20ರ ದಿನಭವಿಷ್ಯ

ಮನೆಯ ಅಂಗಳದಲ್ಲಿರುವ ತುಳಸಿ ಗಿಡಕ್ಕೆ ಪ್ರತಿದಿನ ಸಂಜೆ ತುಪ್ಪದ ದೀಪ ಹಚ್ಚಿ ಪ್ರದಕ್ಷಿಣೆ ಹಾಕಿ. ಹೀಗೆ ಮಾಡುವುದರಿಂದ ಕುಟುಂಬದಲ್ಲಿನ ಭಿನ್ನಾಭಿಪ್ರಾಯಗಳು ದೂರ ಆಗಲಿವೆ. ಉದ್ಯೋಗ ಸ್ಥಳದಲ್ಲಿ ಇರುವ ಗೊಂದಲ ಬಗೆಹರಿಯುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮಲ್ಲಿ ಕೆಲವರು ದೂರ ಪ್ರಯಾಣಕ್ಕಾಗಿ ಸಿದ್ಧತೆ ಮಾಡಿಕೊಳ್ಳಬಹುದು ಅಥವಾ ಹೊರಟು ಬಿಡಬಹುದು. ಇದರಿಂದ ದೀರ್ಘಾವಧಿಯಲ್ಲಿ ಬಹಳ ದೊಡ್ಡ ಮಟ್ಟದ ಅನುಕೂಲ ಇದೆ. ಆದರೆ ಹೊರಡುವ ಮುನ್ನ ಕುಟುಂಬದ ಕಡೆಯಿಂದ ಒತ್ತಡವಂತೂ ಇರುತ್ತದೆ. ಆದರೆ ಅದು ನಿಮ್ಮ ಕೆಲಸ ಯಶಸ್ವಿಯಾದ ಮೇಲೆ ಕರಗಿ ಹೋಗಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಮಗೆ ಚೆನ್ನಾಗಿ ಗೊತ್ತಿರುವಂಥ ವಿಷಯದಲ್ಲೇ ನಿಮ್ಮಿಂದ ಕೆಲವು ತಪ್ಪುಗಳು ಆಗಬಹುದು. ಮುಖ್ಯವಾಗಿ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಅದರಲ್ಲೂ ಉದ್ಯೋಗ ಸ್ಥಳದಲ್ಲಿ ಮೇಲಧಿಕಾರಿಗಳು ನಿಮ್ಮನ್ನು ಪ್ರಶ್ನೆ ಕೇಳಿದಲ್ಲಿ ಒಂದು ಸಲ ಪರಿಶೀಲನೆ ಮಾಡಿ, ಆ ನಂತರವೇ ಉತ್ತರವನ್ನು ಹೇಳಿ. ಕೆಲವು ಜವಾಬ್ದಾರಿಗಳನ್ನು ನಿಮಗೆ ವಹಿಸುವುದಕ್ಕೆ ಕುಟುಂಬದಲ್ಲಿ ಹಾಗೂ ಉದ್ಯೋಗ ಸ್ಥಳದಲ್ಲಿ ಕೇಳಲಿದ್ದಾರೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಉತ್ತಮವಾದ ಸಂಬಳ ಹಾಗೂ ಹುದ್ದೆಯ ಜತೆಗೆ ಆಫರ್ ಬರಲಿದೆ. ಆದ್ದರಿಂದ ಈ ಅವಕಾಶವನ್ನು ಬೇಡ ಅನ್ನುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಎಂಬಂತೆ ಆಲೋಚನೆಯನ್ನು ಮಾಡುವುದು ಒಳ್ಳೆಯದು. ಸಾಕು ಪ್ರಾಣಿಗಳನ್ನು ಮನೆಗೆ ತರುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ದಿನದ ಕೊನೆ ಹೊತ್ತಿಗೆ ಮನಸ್ಸಿಗೆ ಹೆಚ್ಚು ಸಂತೋಷ ಎನಿಸುವಂಥ ವ್ಯಕ್ತಿ ಜತೆಗೆ ಮಾತುಕತೆ ಆಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 20ರ ದಿನಭವಿಷ್ಯ

ಈ ದಿನ ಗಣಪತಿ ಅಥರ್ವಶೀರ್ಷ ಪಠಣ ಅಥವಾ ಶ್ರವಣ ಮಾಡಿ. ಗಣಪತಿ ಅಥರ್ವಶೀರ್ಷವನ್ನು ಪಠಿಸುವುದರಿಂದ ಸಕಲ ವಿಘ್ನಗಳು ನಿವಾರಣೆಯಾಗುತ್ತವೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಹಳೇ ವಿಚಾರಗಳನ್ನು ಕೆದಕುವುದಕ್ಕೆ ಹೋಗಬೇಡಿ. ತಂದೆ ಅಥವಾ ತಂದೆ ಸಮಾನರ ಜತೆಗೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳಬಹುದು. ನೀವು ಬಹಳ ಉತ್ಸಾಹದಿಂದ ಮಾಡಿದ ಕೆಲಸಗಳು, ನಿರ್ಧಾರಗಳನ್ನು ಇತರರು ಬಹಳ ಕಡಿಮೆ ಮಾಡಿ ಮಾತನಾಡುವ ಸಾಧ್ಯತೆ ಇದೆ. ಈ ಕೆಲಸದಲ್ಲಿ ನೀವು ಹಾಕಿದ ಶ್ರಮ, ತೋರಿಸಿದ ನಿಷ್ಠೆ ಗೊತ್ತಿರುವ ವ್ಯಕ್ತಿಗಳು ಸಹ ಇಂಥ ಸನ್ನಿವೇಶದಲ್ಲಿ ನಿಮ್ಮ ಬೆಂಬಲಕ್ಕೆ ಬರುವುದಿಲ್ಲ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ವೃತ್ತಿನಿರತರಿಗೆ ಒಂದು ಬಗೆಯ ನಿರಾಸಕ್ತಿ ಕಾಡಲಿದೆ. ನಿಮ್ಮಲ್ಲಿ ಕೆಲವರಿಗೆ ನಿದ್ದೆಯ ಸಮಸ್ಯೆ ಕೂಡ ಆಗಬಹುದು. ಒಂದು ವೇಳೆ ಇದು ಗಂಭೀರವಾದ ಸಮಸ್ಯೆ ಎಂದೇನಾದರೂ ಎನಿಸಿದಲ್ಲಿ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಔಷಧೋಪಚಾರ ಮಾಡಿಕೊಳ್ಳುವುದು ಒಳ್ಳೆಯದು. ಲೇವಾದೇವಿ ವ್ಯವಹಾರ ಮಾಡುವಂಥವರಿಗೆ ಕೆಲವು ಬೆಳವಣಿಗೆಗಳಿಂದ ಆತಂಕ ಕಾಡಲು ಆರಂಭ ಆಗುತ್ತದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ದಿಢೀರನೇ ಹಣಕಾಸಿನ ಹೊಂದಾಣಿಕೆ ಮಾಡಿಕೊಳ್ಳಬೇಕಾಗಲಿದೆ. ನಿಮ್ಮ ಸ್ನೇಹಿತರಿಗೋ ಅಥವಾ ಆಪ್ತರಿಗೋ ಮಾಡಿಕೊಡಬೇಕು ಎಂದುಕೊಂಡ ವಾಹನ, ಸೈಟು ಅಥವಾ ಮನೆಯನ್ನು ನೀವೇ ಖರೀದಿ ಮಾಡುವಂಥ ಸಾಧ್ಯತೆಗಳಿವೆ. ನೀವು ಇದಕ್ಕಾಗಿ ಬಹಳ ಶ್ರಮ ಪಟ್ಟಿರುತ್ತೀರಿ. ಆದರೆ ನೀವು ಯಾರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಇಷ್ಟೆಲ್ಲ ಶ್ರಮ ಹಾಕಿರುತ್ತೀರೋ ಆ ವ್ಯಕ್ತಿಯೇ ಅದನ್ನು ಸದ್ಯಕ್ಕೆ ಬೇಡ ಎಂದು ಹೇಳುವಂಥ ಸಾಧ್ಯತೆಗಳಿವೆ.

ಲೇಖನ- ಸ್ವಾತಿ ಎನ್.ಕೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರೇ ನಿಮ್ಮ ಸಹಾಯಕ್ಕೆ ಆಗುವರು

ಮೇಷ ರಾಶಿ:

ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು. ಮಂಗಲ ಕಾರ್ಯಗಳಿಗೆ ಸಂಪತ್ತನ್ನು ವಿನಿಯೋಗ ಮಾಡುವಿರಿ. ಅಧಿಕ ಲಾಭ ಗಳಿಸಬಹುದಾದ ಉತ್ಪಾದನೆಯಿಂದ ಅಲ್ಪ ಲಾಭ. ಹೊಸತನ ಹುಡುಕಾಟದಲ್ಲಿ ನೀವು ಇರುವಿರಿ. ದ್ವೇಷವನ್ನು ಬೆಳೆಸಿಕೊಳ್ಳುವುದು ಯೋಗ್ಯವೆನಿಸದು. ಸಮಯದ ನಿರೀಕ್ಷೆಯಲ್ಲಿ ಇರಿ. ಯಾರ ಸ್ವಭಾವವನ್ನೂ ಆಡಿಕೊಳ್ಳುವುದು ಬೇಡ. ಬರಬೇಕಾದ ಹಣವು ಮಧ್ಯದಲ್ಲಿ ನಿಂತಿದ್ದು ನಿಮಗೆ ಆತಂಕವಾಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವ ಚಿಂತೆಯಲ್ಲಿ ಇರುವಿರಿ.

ವೃಷಭ ರಾಶಿ:

ತೋರಿಕೆಗೆ ಮಾಡುವ ಕೆಲಸದಲ್ಲಿ ಯಾವ ಪರಿಣಾಮ ಕಾಣಿಸದು.ಹೊಸ ಮನೆಯ ಪ್ರವೇಶದಲ್ಲಿ‌ ನೀವು ಭಾಗಿಯಾಗುವಿರಿ. ಕೆಲವು ಸಮಸ್ಯೆಗಳನ್ನು ನೀವು ಪರಿಹಾರ ಮಾಡಿಕೊಳ್ಳುವಿರಿ. ಸಂಬಂಧಗಳನ್ನು ನೀವು ಬೇಕಾದುದಕ್ಕೆ ಬಳಸಿಕೊಳ್ಳುವಿರಿ. ರಾಜಕಾರಣಿಗಳು ಅಸ್ಥಿರ ಮನಸ್ಸಿನಲ್ಲಿ ಇರುವರು. ಇಂದಿನ ಸೋಲು ನಿಮಗೆ ಪಾಠವಾಗುವುದು. ಮುನ್ನುಗ್ಗುವ ಅಭ್ಯಾಸವನ್ನು ಬೆಳೆಸಿಕೊಂಡು ನಿಮಗೆ ಇಷ್ಟವಾದ ಆಯ್ಕೆಯನ್ನು ಮಾಡಿಕೊಳ್ಳುವಿರಿ. ಮೇಲಧಿಕಾರಿಗಳ ಭಯದಿಂದ ಕಾರ್ಯದಲ್ಲಿ ಪ್ರಗತಿ.

ಮಿಥುನ ರಾಶಿ:

ಯಾವ ಕೆಲಸವನ್ನೂ ನೀವು ಪೂರ್ಣ ಮಾಡದೇ ಇರಲು ಮನಸ್ಸು ಬಾರದು. ನಿಮ್ಮ ದೌರ್ಬಲ್ಯದ ಜೊತೆ ಆಟವಾಡಬಹುದು. ನಿಮ್ಮ ವ್ಯವಹಾರದಲ್ಲಿ ಪೈಪೋಟಿಯು ಅಧಿಕವಾಗಿ ಇರಲಿದ್ದು ತಂತ್ರಗಳನ್ನು ರೂಪಿಸಬೇಕಾದೀತು. ನಕಾರಾತ್ಮಕ ಆಲೋಚನೆಗಳು ಬೆನ್ನು ಹತ್ತಬಹುದು. ತಂದೆಯ ಶ್ರಮವನ್ನು ಕಂಡು ಮಕ್ಕಳಿಗೆ ನೋವಾಗಬಹುದು. ನಿಮ್ಮವರ ಪ್ರೀತಿಯಿಂದ ನೀವು ಮನಸೋಲುವಿರಿ. ಯಾರನ್ನೂ ಅತಿಯಾಗಿ ಕಾಯಿಸದೇ ಅವರಿಗೆ ಬೇಕಾದುದನ್ನು ಹೇಳಿ, ಕೊಟ್ಟು ಕಳುಹಿಸಿ.

ಕರ್ಕಾಟಕ ರಾಶಿ:

ಇಂದು ನಿಮ್ಮ ಸಂಗಾತಿಗೆ ಅಪರೂಪದ ಉಡುಗೊರೆಯನ್ನು ಕೊಡಿಸುವಿರಿ. ನೀವು ಇಷ್ಟಪಡುವವರ ಭೇಟಿಯಾಗಲಿದೆ. ನಿಮ್ಮ ಗೌಪ್ಯತೆಯನ್ನು ಯಾರ ಜೊತೆಯೂ ಹೇಳಿಕೊಳ್ಳುವುದು ಬೇಡ. ನಿಯಮ ಪಾಲನೆಯಲ್ಲಿ ತಪ್ಪಬಹುದು. ನಿಮ್ಮ ಆಕ್ಷೇಪಗಳು ಹಲವು ಸುಳ್ಳಿನಿಂದ ಇರಲಿದೆ. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸಿ, ಬೆಳೆಸುವಿರಿ. ಜಾಡ್ಯವನ್ನು ಬಿಡಬೇಕಾದೀತು. ನಿಮ್ಮ ವೃತ್ತಿಯು ನಿಮಗೆ ಸಂತೋಷವನ್ನು ಕೊಡದೇ ಇರುವುದು. ಕೆಲಸವನ್ನು ನೀವು ಸರಳವಾಗಿ ಮಾಡಿಕೊಳ್ಳುವುದು ಉತ್ತಮ.

ಸಿಂಹ ರಾಶಿ:

ವಿದ್ಯಾರ್ಥಿಗಳಿಗೆ ದುಡಿಮೆಯ ಬಗ್ಗೆ ಆಸಕ್ತಿಯು ಹೆಚ್ಚಾಗಿ ಅಭ್ಯಾಸವು ನಿಲ್ಲುವುದು. ಇಂದು ನೀವು ಕೆಲಸವನ್ನು ಹೆಚ್ಚು ಪ್ರಯತ್ನದಿಂದ ಪೂರ್ಣ ಮಾಡುವಿರಿ. ಯಾರಾದರೂ ನಿಮ್ಮ ಸ್ನೇಹಕ್ಕೆ ಕಡ್ಡಿಗೀರಬಹುದು. ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ. ಕಾರ್ಯದ ಹಂಚಿಕೆಯಿಂದ ಕೆಲಸವು ಸುಲಭವಾಗಬಹುದು. ವಿವಾಹಕ್ಕೆ ಯೋಗ ಬಂದರೂ ಅದನ್ನು ಮುಂದೂಡುವ ನಿರ್ಧಾರ ಮಾಡುವಿ

ಕನ್ಯಾ ರಾಶಿ:

ಅವಶ್ಯಕ ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳಿ. ಇಂದು ನೀವು ನಿಮ್ಮ ಸುತ್ತಲಿನ ವಾತಾವರಣವನ್ನು ಆಹ್ಲಾದವೆನಿಸುವುದು. ಭೂಮಿಯ ಖರೀದಿಗೆ ಹುಡುಕಾಟ ಆರಂಭ. ಆರ್ಥಿಕತೆಯಲ್ಲಿ ಸಬಲರಾಗಿರುವುದು ಸಂತೋಷವನ್ನು ಇಮ್ಮಡಿ ಮಾಡೀತು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಇಷ್ಟಪಡಲಾರಿರಿ. ರಕ್ಷಣೆಯ ಜವಾಬ್ದಾರಿಯವರಿಗೆ ಆರೋಗ್ಯದ ಕೆಡಬಹುದು.

ತುಲಾ ರಾಶಿ:

ಇಂದು ಸಮೂಹವನ್ನು ಕಟ್ಟಿಕೊಂಡು ಕೆಲಸವನ್ನು ಮಾಡುವಿರಿ. ಹಿರಿಯರಲ್ಲಿ ಮನಶ್ಶಾಂತಿಗೆ ಭಂಗ ಅಧಿಕ. ಆಸ್ತಿಗೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸಿ ಮಕ್ಕಳಿಂದ ಒಪ್ಪಿಗೆಯನ್ನು ಪಡೆಯುವಿರಿ. ಸಹೋದರಿಯರ ಜೊತೆ ವಾಗ್ವಾದವನ್ನು ಮಾಡುವಿರಿ. ದೃಷ್ಟಿಯನ್ನು ಸಂಕುಚಿತ ಮಾಡುವುದು ಬೇಡ. ನೀವು ಇಂದು ಆಸ್ತಿಯನ್ನು ಖರೀದಿಸಲು ಪ್ರಯತ್ನಿಸುತ್ತಿದ್ದು ನೀವು ಅದನ್ನು ಸುಲಭವಾಗಿ ಸಾಧಿಸುವಿರಿ. ಸ್ವಪ್ನದ ಚಿಂತೆಯಲ್ಲಿಯೇ ಇರಬಹುದು. ಇಂದು ನಿಮ್ಮ ತಾಯಿಯ ಬಗ್ಗೆ ನಿಮ್ಮ ಪ್ರೀತಿ ಹೆಚ್ಚಾಗುತ್ತದೆ.

ವೃಶ್ಚಿಕ ರಾಶಿ:

ಸಾಲವನ್ನು ಹಿಂದಿರುಗಿಸಲು ಸಮಯಮಿತಿಯ ವಿಸ್ತರಣೆ ಮಾಡಿಕೊಳ್ಳುವಿರಿ. ಹಲವಾರು ಗೊಂದಲಗಳು ನಿಮ್ಮ ಮನಸ್ಸಿನಲ್ಲಿ ಓಡಾಡಬಹುದು. ಇಂದು ನಿಮಗೆ ಅನಿರೀಕ್ಷಿತ ಆನಂದವನ್ನು ತರುವ ವಾರ್ತೆಗಳು ಬರಬಹುದು. ಬಹಳ ದಿನಗಳ ಕಳೆದ ಮೇಲೆ ತಂದೆಯ ಜೊತೆ ಮಾತನಾಡಿ ನೆಮ್ಮದಿಯು ಪಡೆಯುವಿರಿ. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ. ಇಂದು ನಿಮ್ಮ ವ್ಯವಹಾರದಲ್ಲಿ ಬೇರೆಯವರ ಮಾತನ್ನು ಕೇಳಬೇಕಾಗಿಬರಬಹುದು.

ಧನು ರಾಶಿ:

ಇಷ್ಟದವರು ನಿಮ್ಮನ್ನು ಶುಭಕಾರ್ಯಗಳಿಗೆ ಆಹ್ವಾನಿಸಬಹುದು. ಅಗ್ನಿಯ ಭಯದಿಂದ ಸಾಹಸ ಕಾರ್ಯಗಳಗೆ ಹಿಂದೇಟು. ಪ್ರಭಾವೀ ವ್ಯಕ್ತಿಗಳ ಒಡನಾಟವನ್ನು ಯಾರ ಜೊತೆಯಾದರೂ ಹಂಚಿಕೊಂಡು ಸಮಾಧಾನ ಮಾಡಿಕೊಳ್ಳುವಿರಿ. ಉದ್ಯೋಗದ ಕಾರಣ ನಿಮ್ಮ ವಾಸವನ್ನು ಬದಲಾಯಿಸಬೇಕಾಗಬಹುದು. ನಿಮ್ಮ ಜೊತೆ ಇರುವವರು ನಿಮ್ಮನ್ನು ಅರ್ಥಮಾಡಿಕೊಂಡ ರೀತಿ ಬೇರೆ ರೀತಿಯಲ್ಲಿ ಇರುವುದು. ವೈಯಕ್ತಿಕ ಕಾರ್ಯದಲ್ಲಿ ಗಮನವು ಕಡಿಮೆ ಇರುವುದು.

ಮಕರ ರಾಶಿ:

ವಿದ್ಯಾರ್ಥಿಗಳು ಪರಿಶ್ರಮದಿಂದ ಪಡೆಯಬೇಕಾದುದನ್ನು ಪಡೆಯುವರು. ಔದ್ಯೋಗಿಕ ಕ್ಷೇತ್ರದಲ್ಲಿ ಇನ್ನಷ್ಟು ಒಪ್ಪಂದವನ್ನು ಮಾಡಿಕೊಂಡು ಲಾಭ ಪಡೆಯುವ ಯೋಜನೆ ರೂಪಿಸುವಿರಿ. ನೀವು ಸಾಲವನ್ನು ಮಾಡಿದ್ದರೆ, ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಹೂಡಕೆಯ ಕ್ಷೇತ್ರವನ್ನು ಬದಲಿಸುವಿರಿ. ನೂತನ ವಾಹನದ‌ ಖರೀದಿಯನ್ನು ಮಾಡುವ ಇಚ್ಛೆಯು ಇಂದು ಪೂರ್ಣವಾಗುವುದು. ನಿಮ್ಮ ಬಗ್ಗೆ ಸಲ್ಲದ ದೂರಗಳು ಕೇಳಿ ಬರಬಹುದು.

ಕುಂಭ ರಾಶಿ:

ಇಂದು ನಿಮ್ಮ ದೇಹವು ಆಯಾಸದಿಂದ ದುರ್ಬಲವಾಗಬಹುದು. ಅವಿವಾಹಿತರಿಂದ ವಿವಾಹಕ್ಕೆ ನಿರಂತರ ಪ್ರಯತ್ನ. ಹೆಚ್ಚು ವಿಶ್ರಾಂತಿಯ ಅವಶ್ಯಕತೆ ಇರುವುದು. ಇಂದು ನಿಮ್ಮ ವಾಹನದ ಬಳಕೆಯನ್ನು ಹೆಚ್ಚು ಮಾಡುವಿರಿ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವಿರಿ. ಸಮಯೋಚಿತ ಕಾರ್ಯದಿಂದ‌ ಪ್ರಶಂಸೆಯು ಇರಲಿದೆ. ಎಲ್ಲರೆದುರು ಮುಖಭಂಗವನ್ನು ಎದುರಿಸಿಬೇಕಾದೀತು. ವೈವಾಹಿಕ ಜೀವನದ ಕನಸು ಕಾಣುವಿರಿ.

ಮೀನ ರಾಶಿ:

ಹಣಕಾಸಿನ ಪ್ರಯತ್ನಗಳು ಸಫಲವಾಗಬಹುದು. ಆಗತ್ಯಕ್ಕೆ ಎಲ್ಲೂ ತೊಂದರೆಯಾಗದಂತೆ ಇರುವಿರಿ.‌ ಮಿತ್ರನಿಗೆ ನಿಮ್ಮಿಂದ ಅಲ್ಪ ಧನಸಹಾಯ. ಸಾಮಾಜಿಕ ಬದ್ಧತೆಗಳಿಗೆ ಸ್ಪಂದನೆ. ಜವಾಬ್ದಾರಿಯು ಬಂದು ಹೊರೆಯು ಹೆಚ್ಚಾಗುವುದು. ಪುರುಷಪ್ರಯತ್ನದಿಂದ ಇಂದು ಹೆಚ್ಚು ಇರುವುದು. ಸಂಗಾತಿಯ ಜೊತೆ ಆಪ್ತವಾದ ಮಾತುಕತೆ ಇರಲಿದೆ. ನಿಮಗೆ ಸಾಕಷ್ಟು ಸಮಯವು ಇಂದು ಇರಲಿದ್ದು ಏನು ಮಾಡಬೇಕೆಂದು ತಿಳಿಯದೇ ಕಾಲವನ್ನು ಕಳೆಯುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ ನಿತ್ಯನಕ್ಷತ್ರ : ರೇವತೀ, ಯೋಗ : ಬ್ರಹ್ಮ, ಕರಣ : ಬವ, ಸೂರ್ಯೋದಯ – 06 – 29 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 11:01 – 12:32, ಯಮಗಂಡ ಕಾಲ 15:33 – 17:04, ಗುಳಿಕ ಕಾಲ 08:00- 09:31

-ಲೋಹಿತ ಹೆಬ್ಬಾರ್-8762924271 (what’s app only)

Source link

ಅಮೆರಿಕದ ಎಫ್-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ; ಇಲ್ಲಿದೆ ವಿಡಿಯೋ

ಟೆಹ್ರಾನ್, ಮಾರ್ಚ್ 19: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಗಳು ಹೆಚ್ಚಾಗುತ್ತಲೇ ಇದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಅಮೆರಿಕದ ಮಿಲಿಟರಿಯ ಎಫ್-35 ಫೈಟರ್ ಜೆಟ್ ಮೇಲೆ ದಾಳಿ ನಡೆಸಿ ಹಾನಿ ಮಾಡಿದೆ. ಈ ಯುದ್ಧವಿಮಾನದ ಮೇಲೆ ಇರಾನ್ (Iran War) ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ವೀಡಿಯೊವನ್ನು ಇರಾನ್ ಮಾಧ್ಯಮವು ಬಿಡುಗಡೆ ಮಾಡಿದೆ. ಈ ಘಟನೆಯ ಬಳಿಕ ಇರಾನ್ ಮೇಲೆ ಯುದ್ಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದ ಫೈಟರ್ ಜೆಟ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು. ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು ಪೈಲಟ್ ಸುರಕ್ಷಿತರಾಗಿದ್ದಾರೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಅನುಷ್ಕಾ ಶೆಟ್ಟಿ

ಕಳೆದ ಕೆಲವು ದಿನಗಳಿಂದ ದಕ್ಷಿಣ ಭಾರತದ ಖ್ಯಾತ ನಟಿ, ‘ದೇವಸೇನಾ’ ಖ್ಯಾತಿಯ ಅನುಷ್ಕಾ ಶೆಟ್ಟಿ (Anushka Shetty) ಅವರ ಮದುವೆ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಆಗಾಗ್ಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆಯಾದರೂ ಈ ಬಾರಿ ತುಸು ಗಟ್ಟಿಯಾಗಿಯೇ ಹರಿದಾಡಿದ್ದವು. ಅನುಷ್ಕಾ ಶೆಟ್ಟಿ ಅವರು ಬೆಂಗಳೂರು ಮೂಲದ ಉದ್ಯಮಿಯೊಬ್ಬರನ್ನು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇತ್ತು. ಆದರೆ ಇದೀಗ ಅನುಷ್ಕಾ ಶೆಟ್ಟಿ ಅವರ ತಂಡವು ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಮದುವೆ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿರುವ ಅನುಷ್ಕಾ ಶೆಟ್ಟಿಯ ತಂಡ, ಈ ವದಂತಿ ಸುಳ್ಳೆಂದು ಸ್ಪಷ್ಟಪಡಿಸಿದೆ. ಮದುವೆಯ ಬಗ್ಗೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಸಾಮಾಜಿಕ ಜಾಲತಾಣದ ಪೇಜ್‌ಗಳಿಗೆ ತಂಡವು ಎಚ್ಚರಿಕೆ ನೀಡಿದೆ. ‘ಯಾರದ್ದೋ ವೈಯಕ್ತಿಕ ಜೀವನವನ್ನು ದೈನಂದಿನ ಹೆಡ್‌ಲೈನ್ ಮಾಡುವ ಮೊದಲು ಅಧಿಕೃತ ದೃಢೀಕರಣಕ್ಕಾಗಿ ಕಾಯಿರಿ’ ಎಂದು ವಿನಂತಿಸಿದೆ. ವರದಿಗಳಲ್ಲಿ ಪದೇ ಪದೇ ಅನುಷ್ಕಾ ಅವರ ವಯಸ್ಸನ್ನು (44) ಹೈಲೈಟ್ ಮಾಡುತ್ತಿರುವುದಕ್ಕೆ ಸಹ ಅನುಷ್ಕಾ ಅವರ ತಂಡವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ‘ನಟರ ವಯಸ್ಸಿನ ಬಗ್ಗೆ ಚರ್ಚಿಸದ ಮಾಧ್ಯಮಗಳು, ನಟಿಯರ ವಿಷಯ ಬಂದಾಗ ಮಾತ್ರ ವಯಸ್ಸನ್ನು ವಿವಾದಾತ್ಮಕ ಎಂಬಂತೆ ಬಿಂಬಿಸುವುದು ಸರಿಯಲ್ಲ. ಇದು ಪರೋಕ್ಷವಾಗಿ ‘ಏಜ್ ಶೇಮಿಂಗ್’ ಮಾಡಿದಂತೆ’ ಎಂದು ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿ:ವಿವಾಹ ವದಂತಿಗೆ ಸ್ಪಷ್ಟನೆ ಕೊಟ್ಟ ಅನುಷ್ಕಾ ಶೆಟ್ಟಿ

ಅನುಷ್ಕಾ ಅವರು ಯಾವಾಗಲೂ ತಮ್ಮ ಖಾಸಗಿ ಜೀವನವನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ಮದುವೆ ಎಂಬುದು ಅತ್ಯಂತ ವೈಯಕ್ತಿಕ ವಿಷಯವಾಗಿದ್ದು, ಕೇವಲ ಲೈಕ್ಸ್ ಅಥವಾ ವ್ಯೂಸ್‌ಗಾಗಿ ಇಂತಹ ಸಂವೇದನಾಶೀಲ ಸುದ್ದಿಗಳನ್ನು ಹರಡುವುದು ಸರಿಯಲ್ಲ ಎಂದು ಅನುಷ್ಕಾ ಅವರ ತಂಡ ಹೇಳಿದೆ. ಅನುಷ್ಕಾ ಅವರು ಸದ್ಯ ತಮ್ಮ ವೃತ್ತಿ ಜೀವನದ ಕಡೆಗೆ ಗಮನ ಹರಿಸುತ್ತಿದ್ದಾರೆ. ಅವರು ಮಲಯಾಳಂ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವ ‘ಕಥನಾರ್: ದಿ ವೈಲ್ಡ್ ಸೋರ್ಸೆರರ್’ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ.

ಬಹಳ ವರ್ಷಗಳಿಂದ ಅನುಷ್ಕಾ ಅವರ ಹೆಸರು ನಟ ಪ್ರಭಾಸ್ ಜೊತೆ ಕೇಳಿಬರುತ್ತಿತ್ತು. ಆದರೆ ಈ ಬಾರಿ ಬೆಂಗಳೂರಿನ ಉದ್ಯಮಿಯೊಬ್ಬರ ಜೊತೆ ಅವರ ಮದುವೆ ನಿಶ್ಚಯವಾಗಿದೆ ಎಂಬ ಹೊಸ ಸುದ್ದಿ ಹಬ್ಬಿತ್ತು. ಈ ಹಿಂದೆಯೂ 2020ರಲ್ಲಿ ಇಂತಹದೇ ವದಂತಿಗಳು ಕೇಳಿಬಂದಾಗ ಅನುಷ್ಕಾ ಅವರು, ‘ನನ್ನ ಮದುವೆಯನ್ನು ಯಾರು ಕೂಡ ಬಚ್ಚಿಡಲು ಸಾಧ್ಯವಿಲ್ಲ, ಸಮಯ ಬಂದಾಗ ನಾನೇ ತಿಳಿಸುತ್ತೇನೆ’ ಎಂದು ಹೇಳಿದ್ದರು. ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾ 2025 ರಲ್ಲಿ ಬಿಡುಗಡೆ ಆಗಿತ್ತು. ಆದರೆ ಆ ಸಿನಿಮಾ ಫ್ಲಾಪ್ ಆಯ್ತು. ಇದೀಗ ಅನುಷ್ಕಾ ಮಲಯಾಳಂ ಸಿನಿಮಾನಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಲಾರಿ ಪಲ್ಟಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!

ಹೈದರಾಬಾದ್, ಮಾರ್ಚ್ 19: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಲಾರಿಯಿಂದ ಕೂಲ್ ಡ್ರಿಂಕ್ಸ್ ಬಾಟಲಿಗಳು ರಸ್ತೆಯಲ್ಲಿ ಬಿದ್ದಿತ್ತು. ಕೂಡಲೆ ಓಡೋಡಿ ಬಂದ ಸುತ್ತಮುತ್ತಲಿನ ಮನೆಯ ಜನರು ಕೈಗೆ ಸಿಕ್ಕಷ್ಟು ಆ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಲವಾರು ಜನರು ರಸ್ತೆಯಲ್ಲಿ ಬಿದ್ದ ತಂಪು ಪಾನೀಯದ ಬಾಟಲಿಗಳನ್ನು ಹೆಕ್ಕುತ್ತಿರುವ ವಿಡಿಯೋ ವೈರಲ್ ಆಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಬಾಟಲಿಗಳನ್ನು ತೆಗೆದುಕೊಂಡು ಹೋಗದಂತೆ ಮನವಿ ಮಾಡಿದರೂ, ಜನರು ಕೇಳಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ

ಬೆಂಗಳೂರು, ಮಾರ್ಚ್​ 19: ವಿವಾಹಿತ ಮಹಿಳೆಯನ್ನು ಯುವಕನೋರ್ವ ಡ್ಯಾಗರ್​ನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಫಿರ್ದೋಸ್ ಬಾನು ಕೊಲೆಯಾದ ಎರಡು ಮಕ್ಕಳ ತಾಯಿ. ಹಫೀಸ್​ ಎಂಬಾತನಿಂದ ಕೃತ್ಯವೆಸಲಾಗಿದೆ. ಆಟೋಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ ಹಫೀಸ್​​, ಕೆಲ ತಿಂಗಳಿಂದ ಫೀರ್ದೋಸ್ ಬಾನು ಹಿಂದೆ ಬಿದ್ದಿದ್ದ. ತನ್ನನ್ನು ಲವ್ ಮಾಡುವಂತೆ ಕಾಟ ಕೊಡುತ್ತಿದ್ದ. ಹಫೀಸ್ ಕಾಟ ತಾಳಲಾರದೆ ಫಿರ್ದೋಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಫೀಸ್​ಗೆ ಪೊಲೀಸರು ಬುದ್ಧಿವಾದ ಹೇಳಿ ಎಚ್ಚರಿಕೆ ನೀಡಿ ಕಳಿಸಿದ್ದರು. ಕೆಲ ದಿನ ಸುಮ್ಮನಿದ್ದು ಮತ್ತೆ ಹಿಂದೆ ಬಿದ್ದಿದ್ದ. ಆದರೆ ಹಫೀಸ್​ನನ್ನು ಫೀರ್ದೋಸ್ ಅವಾಯ್ಡ್ ಮಾಡಿದ್ದಾರೆ. ಇಂದು ಮಧ್ಯಾಹ್ನ 2ಗಂಟೆಗೆ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದಿದ್ದ ಹಫೀಸ್, ಈ ವೇಳೆ ಜಗಳ ತೆಗೆದು ಫಿರ್ದೋಸ್ ಬಾನುಗೆ ಇರಿದು ಕೊಲೆಗೈದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಚಂದ್ರಾಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೊಲೆಯಾದ ವಿವಾಹಿತ ಮಹಿಳೆ ಸಂಬಂಧಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   

Source link