ಈ ಸ್ವಾರ್ಥ (selfish) ತುಂಬಿದ ಪ್ರಪಂಚದಲ್ಲಿ ಮಾನವೀಯತೆ, ಬೆಲೆಯಿಲ್ಲ ಎಂಬ ಮಾತಿದೆ. ಸ್ವಾರ್ಥ ಜನರ ನಡುವೆ ಹೃದಯವಂತ ಹಾಗೂ ಸಹಾಯ ಮಾಡುವ ಗುಣವಿರುವ ವ್ಯಕ್ತಿಗಳನ್ನು ನೋಡಿದಾಗ ನಿಜಕ್ಕೂ ಹೆಮ್ಮೆಯಾಗುತ್ತದೆ. ನಾವು ಮಾಡುವ ಸಣ್ಣ ಪುಟ್ಟ ಸಹಾಯವು ಕೂಡ ಇನ್ನೊಬ್ಬರ ಜೀವ ಉಳಿಸುತ್ತದೆ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಯುವಕನು (young man) ಮಂಗನಿಗೆ ನೀರು ಕುಡಿಸಿ ಅದರ ಬಾಯಾರಿಕೆ ನೀಗಿಸಿ ಪುಣ್ಯಾತ್ಮ ಎನಿಸಿಕೊಂಡಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಯುವಕನ ಮಾನವೀಯ ಕೆಲಸವನ್ನು ಹಾಡಿಹೊಗಳಿದ್ದಾರೆ.
Manjunath Lokapur ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಬಾಯಾರಿದ ಮಂಗವೊಂದು ನೀರಿಗಾಗಿ ಹಪತಪಿಸಿದೆ. ಇದೇ ವೇಳೆ ಯುವಕನು ನಲ್ಲಿ ನೀರು ಕುಡಿಸಿ ಮಂಗನ ಬಾಯಾರಿಕೆ ನೀಗಿಸಿರುವುದನ್ನು ಕಾಣಬಹುದು.
ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಜೈ ಶ್ರೀರಾಮ್ ಎಂದರೆ, ಮತ್ತೊಬ್ಬರು ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮೂಕ ಪ್ರಾಣಿಗಳಿಗೆ ಸಹಾಯ ಮಾಡುವ ಗುಣ ಇಷ್ಟ ಆಯ್ತು ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ, ಮಾರ್ಚ್ 19: ಅಮೆರಿಕ ಮತ್ತು ಇಸ್ರೇಲ್ ದಾಳಿಗಳಿಗೆ ಮತ್ತು ಬೆದರಿಕೆಗಳಿಗೆ ಬಗ್ಗೆ ಪ್ರತಿರೋಧ ವ್ಯಕ್ತಪಡಿಸುತ್ತಿರುವ ಇರಾನ್ ಇದೀಗ ಹಾರ್ಮುಜ್ ಜಲಸಂಧಿಯನ್ನು (Hormuz Strait) ಪೂರ್ಣವಾಗಿ ಹತೋಟಿಗೆ ತೆಗೆದುಕೊಂಡಿದೆ. ಜಗತ್ತಿನ ಶೇ. 20ಕ್ಕೂ ಹೆಚ್ಚು ತೈಲ ಮತ್ತು ಗ್ಯಾಸ್ ಅನ್ನು ಹಡಗುಗಳ ಮೂಲಕ ಇದೇ ಹಾರ್ಮುಜ್ ಸ್ಟ್ರೇಟ್ನಿಂದ ಸಾಗಿಸಲಾಗುತ್ತದೆ. ಈಗ ಇದನ್ನೇ ಇರಾನ್ ತನ್ನ ಆದಾಯ ಮೂಲವಾಗಿ ಮಾಡಿಕೊಳ್ಳಲು ಆಲೋಚಿಸಿದೆ. ವರದಿಗಳ ಪ್ರಕಾರ, ಹಾರ್ಮುಜ್ ಜಲಸಂಧಿಯಿಂದ ಅರೇಬಿಯನ್ ಸಮುದ್ರ ಮುಟ್ಟಲು ಹಡಗುಗಳಿಗೆ ಸಾಗಣೆ ಅನುಮತಿ ಶುಲ್ಕ (ಟ್ರಾನ್ಸಿಟ್ ಫೀ) ವಿಧಿಸುವ ಒಂದು ಪ್ರಸ್ತಾಪವನ್ನು ಇರಾನ್ ಪರಿಗಣಿಸುತ್ತಿದೆಯಂತೆ.
ಹಾರ್ಮುಜ್ ಜಲಸಂಧಿಯು ಬಹಳ ಕಿರಿದಾದ ಜಲಮಾರ್ಗವಾಗಿದೆ. ಪರ್ಷಿಯನ್ ಗಲ್ಫ್ ಮತ್ತು ಅರಬ್ಬಿ ಸಮುದ್ರವನ್ನು ಸಂಪರ್ಕಿಸುವ ಜಲಮಾರ್ಗ ಅದು. ಸೌದಿ, ಕತಾರ್ ಇತ್ಯಾದಿ ಗಲ್ಫ್ ರಾಷ್ಟ್ರಗಳಿಂದ ತೈಲ, ಗ್ಯಾಸ್, ಹಾಗೂ ಇತರ ಸರಕುಗಳನ್ನು ಹಡಗುಗಳ ಮೂಲಕ ಇದೇ ಜಲಮಾರ್ಗದಿಂದ ಸಾಗಿಸಲಾಗುತ್ತದೆ. ಇಲ್ಲಿಂದ ಪೂರೈಕೆಯಾಗುವ ತೈಲ ಮತ್ತು ಅನಿಲದ ಮೇಲೆ ಹೆಚ್ಚಿನ ಏಷ್ಯನ್ ದೇಶಗಳು ಅವಲಂಬಿತವಾಗಿವೆ. ಗಲ್ಫ್ ರಾಷ್ಟ್ರಗಳಿಗೂ ಇದು ಪ್ರಮುಖ ಆದಾಯ ಮೂಲವಾಗಿದೆ. ಹೀಗಾಗಿ, ಇರಾನ್ ದೇಶ ಹಾರ್ಮುಜ್ ಜಲಸಂಧಿಯನ್ನು ಇಟ್ಟುಕೊಂಡು ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳಿಗೆ ಮರ್ಮಾಘಾತ ಕೊಡಲು ಅಣಿಗೊಂಡಂತಿದೆ.
ಒಂದು ಮಾಹಿತಿ ಪ್ರಕಾರ ಹಾರ್ಮುಜ್ ಜಲಮಾರ್ಗದಲ್ಲಿ ಒಂದು ದಿನಕ್ಕೆ 100ರಿಂದ 135 ಹಡಗುಗಳು ಹಾದು ಹೋಗುತ್ತವೆ. ಇದರಲ್ಲಿ 15-20 ತೈಲ ಟ್ಯಾಂಕರ್ಗಳಿವೆ. ವಿಶ್ವದ ಶೇ. 20ರಷ್ಟು ತೈಲ ಸಾಗಣೆ ಇದೇ ಮಾರ್ಗದಲ್ಲಿ ಆಗುವುದು. ಹೀಗಾಗಿ, ಇರಾನ್ಗೆ ತನ್ನ ಪ್ರಭಾವ ಮತ್ತು ಶಕ್ತಿ ಹೆಚ್ಚಿಸಿಕೊಳ್ಳಲು ಅವಕಾಶ ಸಿಕ್ಕಂತಾಗಿದೆ.
ಹಾರ್ಮುಜ್ ಜಲಸಂಧಿಯಲ್ಲಿ ತೈಲ ಅಷ್ಟೇ ಅಲ್ಲದೆ ಆಹಾರ ಮತ್ತಿತರೆ ವಸ್ತುವನ್ನು ಹೊತ್ತು ಸಾಗುವ ಎಲ್ಲಾ ದೇಶಗಳ ಹಡಗುಗಳು ಇರಾನ್ಗೆ ಟೋಲ್ ಮತ್ತು ತೆರಿಗೆ ಪಾವತಿಸುವಂತೆ ಕಾನೂನು ತರುವಂತಹ ಮಸೂದೆಯನ್ನು ರಚಿಸಲಾಗುತ್ತಿದೆ. ಯುದ್ಧ ಮುಗಿದ ಬಳಿಕ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಬಂಧನೆಗಳ ವ್ಯವಸ್ಥೆ ತರಲಾಗುತ್ತದೆ. ತನ್ನ ಮೇಲೆ ನಿಷೇಧ ಹೇರಿದ ದೇಶಗಳಿಗೆ ಜಲನಿರ್ಬಂಧಗಳನ್ನು ಹಾಕಲು ಇರಾನ್ಗೆ ಅವಕಾಶ ಕೊಡುವಂತಹ ಕಾನೂನು ಇದಾಗಿರುತ್ತದೆ ಎಂದು ಇರಾನ್ನ ಸರ್ವೋಚ್ಚ ನಾಯಕರಿಗೆ ಸಲಹೆಗಾರರಾದವರೊಬ್ಬರು ಹೇಳಿದ್ದಾರೆ.
ಹಾರ್ಮುಜ್ ಜಲಸಂಧಿಯ ಅಗಲ ಕೇವಲ 33 ಕಿಮೀ ಮಾತ್ರವೇ ಇರುವುದು. ಹೀಗಾಗಿ, ಹಡಗುಗಳ ಸಾಗಣೆ ಇಲ್ಲಿ ಅಷ್ಟು ಸುಗಮವಿಲ್ಲ. ಈ ಜಲಸಂಧಿಯನ್ನು ಇರಾನ್ ಮತ್ತು ಓಮನ್ ನಿಯಂತ್ರಿಸುತ್ತವೆ. ಇರಾನ್ ಅನುಮತಿ ಇಲ್ಲದೇ ಯಾವ ಹಡಗುಗಳು ಇಲ್ಲಿ ಸಾಗುವುದು ಕಷ್ಟ. ಸದ್ಯದ ಯುದ್ಧ ಬಿಕ್ಕಟ್ಟಿನಲ್ಲಿ ಇಲ್ಲಿ ಹೊರಹೋಗಲಾಗದೆ ಸ್ಥಗಿತಗೊಂಡಿರುವ ಹಡಗುಗಳ ಸಂಖ್ಯೆ ಸಾವಿರಕ್ಕೂ ಹೆಚ್ಚಿದೆ.
ನಟ ಸುದೀಪ್ ಅವರು ಪತ್ನಿ ಪ್ರಿಯಾ ಅವರೊಟ್ಟಿಗೆ ಯುಗಾದಿ ಹಬ್ಬದ ಪ್ರಯುಕ್ತ ತಿರುಪತಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುದೀಪ್ ಅವರು ದೇವಾಲಯಕ್ಕೆ ಭೇಟಿ ನೀಡಿದ್ದ ಚಿತ್ರ ಇಲ್ಲಿದೆ.
ಯಶ್ ಪತ್ನಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆಗೆ ಯುಗಾದಿ ಹಬ್ಬ ಆಚರಣೆ ಮಾಡಿದ್ದಾರೆ. ಮಕ್ಕಳೊಂದಿಗೆ ದೇವಾಲಯಕ್ಕೆ ತೆರಳಿದ್ದು, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದಾರೆ.
ನಟ ಶ್ರೀಮುರಳಿ ಅವರು ಕುಟುಂಬದೊಟ್ಟಿಗೆ ಯುಗಾದಿ ಆಚರಿಸಿದ್ದಾರೆ. ಮನೆಯಲ್ಲಿ ಯುಗಾದಿ ವಿಶೇಷವಾದ ಹೋಳಿಕೆ ಮಾಡಲು ನೆರವಾಗಿದ್ದಾರೆ. ಹಬ್ಬದ ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ನಟಿ ಖುಷಿ ಸಹ ಸಂಪ್ರದಾಯಬದ್ಧವಾಗಿ ಯುಗಾದಿ ಹಬ್ಬ ಆಚರಣೆ ಮಾಡಿದ್ದಾರೆ. ತಲೆಗೆ ಎಣ್ಣೆ ಹಚ್ಚಿಕೊಳ್ಳುವ ಮೂಲಕ ಅವರ ಯುಗಾದಿ ಆರಂಭಿಸಿ, ತಳಿರು ತೋರಣ ಕಟ್ಟಿ, ಹೋಳಿಗೆ, ಚಿತ್ರಾನ್ನ ಮಾಡಿ, ಬೇವು ಬೆಲ್ಲ ತಿಂದು ಹಬ್ಬ ಮಾಡಿದ್ದಾರೆ.
ನಟಿ ಅಮೂಲ್ಯ ಸಹ ಕುಟುಂಬದ ಜೊತೆಗೆ ಯುಗಾದಿ ಆಚರಿಸಿದ್ದಾರೆ. ವಿಶೇಷವೆಂದರೆ ಯುಗಾದಿ ಹಬ್ಬಕ್ಕೆ ಮಾಡುವ ಮಾವಿನಕಾಯಿ ಚಿತ್ರಾನ್ನದ ರೆಸಿಪಿ ವಿಡಿಯೋವನ್ನು ಸಹ ಅವರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.
ನಟಿ ಸಂಗೀತಾ ಭಟ್ ಅವರು ಕುಟುಂಬದೊಟ್ಟಿಗೆ ಯುಗಾದಿ ಹಬ್ಬ ಆಚರಣೆ ಮಾಡಿದ್ದಾರೆ. ದೇವರ ಪೂಜೆ ಮಾಡಿ, ಬೇವು-ಬೆಲ್ಲ ಸವಿದಿದ್ದಾರೆ. ವಿಡಿಯೋ ಅನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಯುಜ್ವೇಂದ್ರ ಚಾಹಲ್ ಕೆಲವು ವರ್ಷಗಳ ಹಿಂದೆ ಟೀಂ ಇಂಡಿಯಾದ ಪ್ರಮುಖ ಸ್ಪಿನ್ ಅಸ್ತ್ರವಾಗಿದ್ದವರು. ಆದರೆ ಕಳಪೆ ಫಾರ್ಮ್ಗೆ ಸಿಲುಕಿದ ಚಾಹಲ್ಗೆ ಆ ಬಳಿಕ ಮತ್ತೊಂದು ಅವಕಾಶವೆನ್ನುವುದು ಸಿಗಲೇ ಇಲ್ಲ. ಪ್ರಸ್ತುತ ಐಪಿಎಲ್ನಲ್ಲಿ ಮಾತ್ರ ಆಡುತ್ತಿರುವ ಚಾಹಲ್, ಇದೀಗ ಆ ವೃತ್ತಿಜೀವನವನ್ನಾದರೂ ಉಳಿಸಿಕೊಳ್ಳುವ ಸಲುವಾಗಿ ಮಹಾತ್ಯಾಗವೊಂದನ್ನು ಮಾಡಿದ್ದಾರೆ.
ವೃತ್ತಿಜೀವನದಂತೆ ಯುಜ್ವೇಂದ್ರ ಚಾಹಲ್ ಅವರ ವೈಯಕ್ತಿಕ ಜೀವನವೂ ಹಳಿತಪ್ಪಿದೆ. ಹೀಗಾಗಿ ಮದ್ಯಪಾನದ ಹಿಂದೆ ಬಿದ್ದಿದ್ದ ಚಾಹಲ್ ಇದೀಗ ಅದಕ್ಕೆಲ್ಲ ಗುಡ್ ಬೈ ಹೇಳಿದ್ದಾರೆ. ಪ್ರಸ್ತುತ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ಚಾಹಲ್, ಐಪಿಎಲ್ ಆರಂಭಕ್ಕೂ ಮುನ್ನ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.
ಈ ಹಿಂದೆ ಐಪಿಎಲ್ನಲ್ಲಿ ಎಬಿ ಡಿವಿಲಿಯರ್ಸ್ ಹಾಗೂ ಯುಜ್ವೇಂದ್ರ ಚಾಹಲ್ ಆರ್ಸಿಬಿ ತಂಡದ ಪರ ಆಡಿದ್ದರು. ಇದೀಗ ಡಿವಿಲಿಯರ್ಸ್ ಅವರ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿರುವ ಚಾಹಲ್ ನಾನು ಮದ್ಯಪಾನ ತ್ಯಜಿಸಿ 6 ತಿಂಗಳಿಗೂ ಹೆಚ್ಚು ಸಮಯವಾಗಿದೆ ಎಂದಿದ್ದಾರೆ. ಮದ್ಯಪಾನವನ್ನು ತ್ಯಜಿಸಿದ್ದು ಏಕೆ ಎಂತಲೂ ಚಾಹಲ್ ಬಹಿರಂಗಪಡಿಸಿದ್ದಾರೆ.
ಈ ವರ್ಷದ ಆರಂಭದಿಂದ ನಾನು ನನ್ನ ದೇಹದ ಬಗ್ಗೆ ಹೆಚ್ಚು ಗಮನ ಹರಿಸಲು ನಿರ್ಧರಿಸಿದ್ದೇನೆ. ನನಗೀಗ 35 ವರ್ಷ. ಹೀಗಾಗಿ ನಾನು ಹೆಚ್ಚು ಸಕ್ರಿಯವಾಗಿರಲು ಬಯಸುತ್ತೇನೆ ಮತ್ತು ತಂಡಕ್ಕಾಗಿ ನಾನು ಶೇಕಡಾ 150 ರಷ್ಟು ನೀಡಲು ಬಯಸುತ್ತೇನೆ. ಹಿರಿಯ ಆಟಗಾರನಾಗಿ, ಇತರರು ನನ್ನಿಂದ ಏನನ್ನಾದರೂ ಕಲಿಯಬಹುದು ಎಂಬ ಭಾವನೆ ಮೂಡಿಸಲು ನಾನು ಬಯಸುತ್ತೇನೆ ಎಂದಿದ್ದಾರೆ.
ಈ ಬಾರಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆಯಲ್ಲಿರುವ ಚಾಹಲ್, ಕಳೆದ ಬಾರಿ ಫೈನಲ್ನಲ್ಲಿ ಸೋತ ಬಗ್ಗೆಯೂ ಮಾತನಾಡಿದರು. ಮಾರ್ಕೊ ಯಾನ್ಸೆನ್ ಫೈನಲ್ನಲ್ಲಿ ಆಡಲು ಸಾಧ್ಯವಾಗಲಿಲ್ಲ. ಒಂದು ವೇಳೆ ಯಾನ್ಸೆನ್ ಫೈನಲ್ ಆಡಿದ್ದರೆ, ನಮ್ಮ ತಂಡ ಗೆಲ್ಲುತ್ತಿತ್ತು ಎಂದು ಚಾಹಲ್ ಹೇಳಿದ್ದಾರೆ.
ಚಿಕ್ಕಮಗಳೂರು, ಮಾರ್ಚ್ 19: ಭದ್ರಾ ನದಿಯ ದಡದಲ್ಲಿ ನಿರಂತರ ವಾಮಾಚಾರಗಳು(black magic) ನಡೆಯುತ್ತಲೇ ಇರುತ್ತದೆ. ಆದರೆ ಈಗ ನದಿಯ ಸಮೀಪವಿರುವ ದೇವಸ್ಥಾನದ (temple) ಮುಂಭಾಗದಲ್ಲಿಯೇ ವಾಮಾಚಾರ ಮಾಡಲಾಗಿದೆ. ಅದರಲ್ಲೂ ಯುಗಾದಿಯ ಹಬ್ಬದ ದಿನವೇ ಕಿಡಿಗೇಡಿಗಳ ಕೃತ್ಯ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿರವ ಕಾಲಭೈರವೇಶ್ವರ ದೇಗುಲದ ಎದುರು ಘಟನೆ ನಡೆದಿದೆ.
ಯುಗಾದಿ ಹಬ್ಬದ ದಿನವೇ ದೇವಾಲಯದ ಮುಂದೆ ವಾಮಾಚಾರ
ಕಾಫಿನಾಡು ಚಿಕ್ಕಮಗಳೂರಿನ ದಕ್ಷಿಣ ಕಾಶಿ ಎಂದು ಕರೆಸಿಕೊಳ್ಳುವ ಕಳಸೇಶ್ವರ ದೇವರಿಗೆ ಹಲವು ದೇವಸ್ಥಾನಗಳು ಸೇರುತ್ತೆ. ಅದರಲ್ಲಿಯೂ ಗಿರಿಜಾ ಕಲ್ಯಾಣದ ಮೆರವಣಿಗೆ ನಡೆಯುವ ಮಾರ್ಗದಲ್ಲಿರುವ ಕಳಸ ಪಟ್ಟಣದ ಕಂಚಿಕೆರೆ ಗ್ರಾಮದ ಕಾಲಭೈರವನ ದೇವಸ್ಥಾನದ ಮುಂಭಾಗದಲ್ಲಿ ವಾಮಾಚಾರ ಮಾಡಲಾಗಿದೆ ಅದು ಹಿಂದೂಗಳ ಹೊಸ ವರ್ಷದ ಸಂಭ್ರಮದ ಯುಗಾದಿ ಹಬ್ಬದ ದಿನವೇ.
ತೆಂಗಿನಕಾಯಿ, ಅರಿಶಿನ, ಕುಂಕುಮ, ನಾಣ್ಯ, ನಿಂಬೆ ಹಣ್ಣು ಸೇರಿದಂತೆ ಹಲವು ವಸ್ತುಗಳನ್ನ ಬಳಕೆ ಮಾಡಲಾಗಿದೆ. ದೇವಾಲಯದ ಮುಂಭಾಗದಲ್ಲಿ ನಾಲ್ಕು ಕಲ್ಲುಗಳನ್ನ ಇಟ್ಟು ಪೂಜೆ ಮಾಡಲಾಗಿದೆ. ಹಬ್ಬದ ದಿನ ಪೂಜಾ ಕೈಂಕರ್ಯ ಮುಗಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡೋಣ ಅಂತಾ ಮುಂಜಾನೆ ಬಂದ ಅರ್ಚಕರು ವಾಮಾಚಾರ ಕಂಡು ಬೆಚ್ಚಿಬಿದ್ದಿದ್ದಾರೆ.
ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹ
ಇನ್ನು ಕಳಸ ಸಮೀಪದ ಕಂಚಿಕೆರೆ ಕಾಲಭೈರವ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಭಕ್ತರಿದ್ದಾರೆ. ಹೊರ ಜಿಲ್ಲೆ ಸೇರಿದಂತೆ ಸ್ಥಳೀಯರು ಕಾಲಭೈರವನನ್ನ ನಂಬಿ ಪೂಜಿಸುತ್ತಾರೆ. ದೇವಸ್ಥಾನದ ಮುಂದೆಯೇ ವಾಮಾಚಾರ ಮಾಡಿರುವುದರಿಂದ ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷವೂ ವಾಮಾಚಾರ ನಡೆದ ಕಾಲಭೈರವ ದೇವಾಲಯದಲ್ಲಿ ಕಳ್ಳತನ ನಡೆದಿತ್ತು. ಇಂದು ವಾಮಾಚಾರ ಮಾಡಲಾಗಿದೆ. ಕಳಸ ಭಾಗದಲ್ಲಿ ಹರಿಯುವ ಭದ್ರಾ ನದಿಯ ತಟದಲ್ಲಿ ವಾಮಾಚಾರದ ಪ್ರಕರಣ ನಡೆಯುತ್ತಲೇ ಇತ್ತು. ಈಗ ದೇವಸ್ಥಾನದ ಮುಂದೆಯೇ ಮಾಡಿದ್ದಾರೆ. ಅದು ಬಹುತೇಕ ತಡರಾತ್ರಿ ಎರಡರಿಂದ ಮೂರುಗಂಟೆಯೊಳಗೆ ನಡೆದಿರಬಹುದು ಎನ್ನಲಾಗುತ್ತಿದೆ. ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ದೇವಾಲಯದ ಮುಂಭಾಗದಲ್ಲಿ ವಾಮಾಚಾರ ಮಾಡಿರುವ ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿಯವರಾ? ಅಥವಾ ಹೊರ ಭಾಗದವರಾ? ಅನ್ನೋ ಅನುಮಾನ ಸ್ಥಳೀಯರು ಮುಂದಿಟ್ಟಿದ್ದಾರೆ. ಪವಿತ್ರ ಭದ್ರಾ ನದಿ ಹಾಗೂ ಸುತ್ತಮುತ್ತ ಇರುವ ದೇವಸ್ಥಾನಗಳಲ್ಲಿ ಇತ್ತೀಚಿನ ದಿನದಲ್ಲಿ ವಾಮಾಚಾರ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಕಳಸದ ಜನರು ಒತ್ತಾಯಿಸಿದ್ದಾರೆ.
ಹಾಸನ (ಮಾರ್ಚ್ 19): ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ಹಾಸನದ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ ಪುಟಗಳಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಸೇರಿ 39 ಮಂದಿಯ ವಿರುದ್ಧ ಆರೋಪ ದೃಢಪಡಿಸಿ ಸಾಕ್ಷಿ ಒದಗಿಸಲಾಗಿದೆ. ಇನ್ನು ಎಸ್ಐಟಿ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.
ವಿಡಿಯೋ ವೈರಲ್ ಪ್ರಕರಣದಲ್ಲಿ ಒಟ್ಟು 52 ಮಂದಿ ಹೆಸರು ಉಲ್ಲೇಖಿಸಲಾಗಿದ್ದು, 39 ಮಂದಿ ವಿರುದ್ಧ ಆರೋಪ ಸಾಬೀತಾಗಿದೆ. ಲೋಕಸಭೆ ಚುನಾವಣೆ (Lok Sabha Election) ವೇಳೆ 70 ಪೆನ್ಡ್ರೈವ್ (Pendrive) ಖರೀದಿಸಿ ವಿಡಿಯೋ ವೈರಲ್ (Video Viral) ಮಾಡಿದ್ದು ತನಿಖೆ ವೇಳೆ ಬಯಲಾಗಿದೆ. ಇನ್ನು ಜೆಡಿಎಸ್ ಕಾರ್ಯಕರ್ತರನ್ನೇ ಆರೋಪಿಗಳನ್ನಾಗಿಸಿದೆ.
ನವದೆಹಲಿ, ಮಾರ್ಚ್ 19: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಉಲ್ಬಣವನ್ನು ಶಮನಗೊಳಿಸುವಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆಯ ತುರ್ತು ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. ಈ ಪ್ರದೇಶದ ಶಾಂತಿ ಮತ್ತು ಸ್ಥಿರತೆಗಾಗಿ ಮ್ಯಾಕ್ರನ್ ಜೊತೆ ಸಮನ್ವಯವನ್ನು ಸಾಧಿಸಲು ಸಿದ್ಧ ಎಂದು ಮೋದಿ ಹೇಳಿದ್ದಾರೆ.
“ನನ್ನ ಆತ್ಮೀಯ ಸ್ನೇಹಿತರಾದ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯದ ಕುರಿತು ಹಾಗೂ ಸಂವಾದ, ರಾಜತಾಂತ್ರಿಕತೆಯ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತು ಮಾತನಾಡಿದ್ದೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Spoke with my dear friend, President Emmanuel Macron, on the situation in West Asia and the urgent need for de-escalation, as well as a return to dialogue and diplomacy.
We look forward to continuing our close coordination to advance peace and stability in the region and…
Spoke with my friend, Prime Minister Anwar Ibrahim of Malaysia, and conveyed warm greetings to him and the people of Malaysia on the occasion of the upcoming festival of Hari Raya Aidilfitri.
We also discussed the deeply concerning situation in West Asia and reaffirmed our…
ಇದಕ್ಕೂ ಮೊದಲು, ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಒಮಾನ್ನ ಸುಲ್ತಾನ್ ಹೈತಮ್ ಬಿನ್ ತಾರಿಕ್ ಮತ್ತು ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಮಾತನಾಡಿದ್ದರು. ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಉಲ್ಬಣವನ್ನು ಕಡಿಮೆ ಮಾಡಲು, ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ಬಗ್ಗೆ ಅವರು ಚರ್ಚಿಸಿದ್ದರು.
Had a productive conversation with my brother Sultan Haitham bin Tariq and conveyed advance Eid greetings to the people of Oman.
We agreed on the need to prioritize dialogue and diplomacy for de-escalation and subsequent restoration of peace and stability.
“ನನ್ನ ಸಹೋದರ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿದೆ. ಹಾಗೇ, ಒಮಾನ್ ಜನರಿಗೆ ಈದ್ ಶುಭಾಶಯಗಳನ್ನು ತಿಳಿಸಿದೆ. ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ಶಾಂತಿ, ಸ್ಥಿರತೆಯನ್ನು ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಗೆ ಆದ್ಯತೆ ನೀಡುವ ಅಗತ್ಯವನ್ನು ನಾವು ಒಪ್ಪಿಕೊಂಡಿದ್ದೇವೆ” ಎಂದು ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 19: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನು ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ವ್ಯಕ್ತಿಯೋರ್ವ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣದ ತನಿಖೆ ವೇಳೆ ಶಾಕಿಂಗ್ ವಿಚಾರಗಳು ಬೆಳಕಿಗೆ ಬಂದಿವೆ. ಯುವತಿ ಮೇಲೆ ಆರೋಪಿ ಸೈಯದ್ ಶಬೀಲ್ಗಿದ್ದ ಅನುಮಾನವೇ ಕೊಲೆಗೆ ಕಾರಣ ಎಂಬುದು ಗೊತ್ತಾಗಿದೆ. ಆಕೆಯನ್ನು ಭೇಟಿಯ ನೆಪದಲ್ಲಿ ಕರೆದಿದ್ದ ಈತ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಮತ್ತು ಕುತ್ತಿಗೆ ಕೊಯ್ದು ಹತ್ಯೆ ಮಾಡಿರೋದು ತನಿಖೆ ವೇಳೆ ಬಯಲಾಗಿದೆ. ಘಟನೆ ಬಳಿಕ ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರಿಂದ ಶೋಧ ಮುಂದುವರಿದಿದೆ.
ಕೋಲಾರ ಮೂಲದ ಅಪ್ರಾಪ್ತ ಬಾಲಕಿ ಆಗಾಗ ಬೆಂಗಳೂರಿನ ಸಂಬಂಧಿಕರ ಮನೆಗೆ ಬರುತ್ತಿದ್ದಳು. ಈ ನಡುವೆ ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್ನಲ್ಲಿ ಕೆಲಸ ಮಾಡ್ತಿದ್ದ ಸೈಯದ್ ಶಬೀಲ್ ಎಂಬ ಯುವಕನ ಜೊತೆ ಆಕೆಗೆ ಪ್ರೀತಿ ಶುರುವಾಗಿತ್ತು. ಆಗಾಗ ಫೋನ್ನಲ್ಲಿಇವರು ಮಾತಾನಾಡುತ್ತಿರೋದನ್ನು ಗಮನಿಸಿದ ಸಂಬಂಧಿಕರು, ಪೋಷಕರಿಗೆ ವಿಚಾರ ತಿಳಿಸಿದ್ದರು. ಬಳಿಕ ಆಕೆ ಪ್ರೀತಿಸುತ್ತಿದ್ದವನ ಜೊತೆಯೇ ಮದುವೆ ಮಾಡಲು ಮನೆಯವರು ಮುಂದಾಗಿದ್ದರು. ಅದರಂತೆ ಕಳೆದ 2025ರ ಜೂನ್ನಲ್ಲಿ ಇವರಿಬ್ಬರ ಎಂಗೇಜ್ಮೆಂಟ್ ಕೂಡ ನಡೆದಿತ್ತು. ಕೆಲ ಸಮಯದ ಬಳಿಕ ಮದುವೆಯ ತಯಾರಿಯಲ್ಲೂ ಮನೆಯವರಿದ್ದರು. ಆದರೆ ಇತ್ತೀಚೆಗೆ ಅಪ್ರಾಪ್ತಳ ಮೇಲೆ ಅನುಮಾನ ಪಡಲು ಶುರು ಮಾಡಿದ ಶಬೀಲ್, ವಿವಾಹಕ್ಕೂ ಮೊದಲೇ ಅಟ್ಟಹಾಸ ಮೆರೆದಿದ್ದಾನೆ.
ಶಬೀಲ್ ಮನೆಯಿಂದ ಸ್ವಲ್ಪ ದೂರದಲ್ಲಿ ಇರುವ ಸಕ್ಕರೆ ಮಂಡಿ ಪಾಳು ಬಿದ್ದ ಜಾಗದಲ್ಲಿ ಆರೋಪಿ ಶಬೀಲ್ ಮತ್ತು ಅಪ್ರಾಪ್ತ ಯುವತಿ ಇಬ್ಬರೂ ಆಗಾಗ ಭೇಟಿ ಮಾಡುತ್ತಿದ್ದರು. ಅದೇ ಜಾಗಕ್ಕೆ ಯುವತಿಯನ್ನು ಈತ ಕರೆದಿದ್ದ. ಹೀಗಾಗಿ ಮನೆಯಲ್ಲೇ ಮೊಬೈಲ್ ಬಿಟ್ಟು ಆಕೆ ಶಬೀಲ್ನ ಭೇಟಿಗಾಗಿ ತೆರಳಿದ್ದಳು. ಬೆಳಗ್ಗೆ 6 ಗಂಟೆಗೆ ಮನೆಯಿಂದ ಹೋದ ಯುವತಿ 10.30 ಆದರೂ ಬಾರದ ಕಾರಣ ಸಂಬಂಧಿಕರ ಮನೆಯವರು ಹುಡುಕಾಟ ಆರಂಭಿಸಿದ್ದರು. ಶಬೀಲ್ಗೆ ಕರೆ ಮಾಡಿದರೂಆತ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ಆತನ ಮನೆಯವರ ಬಳಿ ವಿಚಾರಿಸಿದಾಗ ಅವರಿಬ್ಬರು ಭೇಟಿ ಆಗ್ತಿದ್ದ ಜಾಗದ ಬಗ್ಗೆ ಮಾಹಿತಿ ಸಿಕ್ಕಿತ್ತು. ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿದಾಗ ರಕ್ತದ ಮಡುವಿನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಅಪ್ರಾಪ್ತಳ ಶವ ಪತ್ತೆಯಾಗಿತ್ತು. ಒಟ್ಟಿನಲ್ಲಿ ಮದುವೆಯಾಗಿ ಸುಂದರ ಜೀವನ ನಡೆಸುವ ಕನಸು ಕಂಡಿದ್ದ ಯುವತಿಯನ್ನು ತನ್ನ ಅನುಮಾನದ ಭೂತಕ್ಕೆ ಆರೋಪಿ ಶಬೀಲ್ ಬಲಿ ಪಡೆದಿರೋದು ಕುಟುಂಬಸ್ಥರನ್ನು ಬೆಚ್ಚಿ ಬೀಳಿಸಿರೋದಂತೂ ಸತ್ಯ.
ತಿರುಮಲ ಶ್ರೀವಾರಿಯ ದರ್ಶನಕ್ಕೆ ಬರುವ ಭಕ್ತರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಭಕ್ತರ ಲಗೇಜ್ಗಳ ಸುರಕ್ಷತೆ ಮತ್ತು ಸುಲಭ ನಿರ್ವಹಣೆಗಾಗಿ ಒಟ್ಟು 80 ಲಗೇಜ್ ಕೌಂಟರ್ಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ. ಈ ಕೇಂದ್ರಗಳಲ್ಲಿ ಒಟ್ಟು 394 ಸಿಬ್ಬಂದಿ ಮೂರು ಪಾಳಿಗಳಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಇಂದಿನಿಂದ ಈ ಎಲ್ಲಾ ಲಗೇಜ್ ಕೇಂದ್ರಗಳು ದಿನದ 24 ಗಂಟೆಯೂ ಭಕ್ತರ ಸೇವೆಗೆ ಮುಕ್ತವಾಗಿರಲಿವೆ. ವಿಶೇಷವಾಗಿ ಹಬ್ಬಗಳು ಮತ್ತು ರಜಾ ದಿನಗಳಲ್ಲಿ ಉಂಟಾಗುವ ಭಕ್ತರ ದಟ್ಟಣೆಯನ್ನು ನಿಯಂತ್ರಿಸಲು ಈ ನಿರಂತರ ಸೇವೆಯು ಸಹಕಾರಿಯಾಗಲಿದೆ.
ಪಾದಚಾರಿ ಮಾರ್ಗದ ಭಕ್ತರಿಗೆ ವರ:
ಅಲಿಪಿರಿ ಮತ್ತು ಶ್ರೀವರಿ ಮೆಟ್ಟು ಮಾರ್ಗಗಳ ಮೂಲಕ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತುವ ಭಕ್ತರ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಭಾರವಾದ ಸಾಮಾನುಗಳನ್ನು ಹೊತ್ತು ನಡೆಯುವುದು ಕಷ್ಟಕರವಾದ್ದರಿಂದ, ಅಲಿಪಿರಿ ಮಾರ್ಗದಲ್ಲಿ 7 ಕೌಂಟರ್ಗಳನ್ನು (46 ಸಿಬ್ಬಂದಿ) ಮತ್ತು ಶ್ರೀವರಿ ಮೆಟ್ಟು ಮಾರ್ಗದಲ್ಲಿ 2 ಕೌಂಟರ್ಗಳನ್ನು (10 ಸಿಬ್ಬಂದಿ) ಸ್ಥಾಪಿಸಲಾಗಿದೆ. ಭಕ್ತರು ತಮ್ಮ ಲಗೇಜ್ಗಳನ್ನು ಈ ಆರಂಭಿಕ ಕೇಂದ್ರಗಳಲ್ಲಿ ಠೇವಣಿ ಇರಿಸಿ, ಬೆಟ್ಟ ಹತ್ತಿದ ನಂತರ ತಿರುಮಲದಲ್ಲಿರುವ ನಿಗದಿತ ವಿತರಣಾ ಕೇಂದ್ರಗಳಲ್ಲಿ ಅವುಗಳನ್ನು ಸುಲಭವಾಗಿ ಮರಳಿ ಪಡೆಯಬಹುದಾಗಿದೆ.
ತಿರುಮಲದ ಪ್ರಮುಖ ಕೇಂದ್ರಗಳಲ್ಲಿ ವಿಸ್ತರಣೆ:
ಕೇವಲ ಪಾದಚಾರಿ ಮಾರ್ಗಗಳಲ್ಲಷ್ಟೇ ಅಲ್ಲದೆ, ತಿರುಮಲದ ಪ್ರಮುಖ ಸ್ಥಳಗಳಲ್ಲೂ ಲಗೇಜ್ ಕೇಂದ್ರಗಳನ್ನು ವಿಸ್ತರಿಸಲಾಗಿದೆ. ತಿರುಮಲದ ಉಚಿತ ಸಭಾಂಗಣದಲ್ಲಿ 10 ಕೌಂಟರ್ಗಳು, ನಾರಾಯಣಗಿರಿ ಶೆಡ್ನಲ್ಲಿ 8, ವೈಕುಂಠಂ ಕ್ಯೂ ಕಾಂಪ್ಲೆಕ್ಸ್ನಲ್ಲಿ 2 ಮತ್ತು 300 ರೂಪಾಯಿ ದರ್ಶನ ಟಿಕೆಟ್ ಹಾಲ್ನಲ್ಲಿ 5 ಕೌಂಟರ್ಗಳನ್ನು ತೆರೆಯಲಾಗಿದೆ. ಇದರೊಂದಿಗೆ ಡಿಡಿ ಹಾಲ್ ಮತ್ತು ಸ್ಕ್ಯಾನಿಂಗ್ ಕಂಪಾರ್ಟ್ಮೆಂಟ್ಗಳಲ್ಲೂ ಹೆಚ್ಚುವರಿ ಕೌಂಟರ್ಗಳನ್ನು ನೀಡಲಾಗಿದೆ. ಭಕ್ತರು ಕಲ್ಯಾಣ ಕಟ್ಟಾ ಮತ್ತು ಇತರ ಪ್ರಮುಖ ಪ್ರದೇಶಗಳಲ್ಲಿಯೂ ತಮ್ಮ ಸಾಮಾನುಗಳನ್ನು ಸುರಕ್ಷಿತವಾಗಿ ಇರಿಸಲು ವ್ಯವಸ್ಥೆ ಮಾಡಲಾಗಿದೆ.
ಲಡ್ಡು ಪ್ರಸಾದದ ಪವಿತ್ರತೆ ಮತ್ತು ಗುಣಮಟ್ಟವನ್ನು ಕಾಪಾಡಲು ಟಿಟಿಡಿ ಮತ್ತೊಂದು ಐತಿಹಾಸಿಕ ಹೆಜ್ಜೆ ಇಟ್ಟಿದೆ. ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ತಿರುಮಲದಲ್ಲಿ ಅತ್ಯಾಧುನಿಕ ‘ಎಫ್ಎಸ್ಎಸ್ಎಐ’ (FSSAI) ಪ್ರಯೋಗಾಲಯವನ್ನು ಸ್ಥಾಪಿಸಲಾಗುತ್ತಿದೆ. ಆಂಧ್ರಪ್ರದೇಶ ಆಹಾರ ಸುರಕ್ಷತಾ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿದ್ಧವಾಗಿರುವ ಈ ಪ್ರಯೋಗಾಲಯವನ್ನು ಈ ತಿಂಗಳ 21 ರಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಉದ್ಘಾಟಿಸಲಿದ್ದಾರೆ. ಈ ಮೂಲಕ ಲಡ್ಡು ತಯಾರಿಕೆಯಲ್ಲಿ ಬಳಸುವ ಪದಾರ್ಥಗಳ ಗುಣಮಟ್ಟವನ್ನು ನಿರಂತರವಾಗಿ ಪರೀಕ್ಷಿಸಿ, ಭಕ್ತರಿಗೆ ಕಲಬೆರಕೆ ರಹಿತ ಪ್ರಸಾದ ಸಿಗುವಂತೆ ಖಚಿತಪಡಿಸಿಕೊಳ್ಳಲಾಗುವುದು.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಸ್ತುತ ವಿಶ್ವ ಕ್ರಿಕೆಟ್ನ ಅತ್ಯುತ್ತಮ ಬೌಲರ್ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಬುಮ್ರಾ ಬೌಲಿಂಗ್ನಲ್ಲಿ ರನ್ ಕಲೆಹಾಕುವುದೆ ಕಷ್ಟಕರವಾಗಿರುವಾಗ ಅವರ ಬೌಲಿಂಗ್ನಲ್ಲಿ ಸಿಕ್ಸರ್ ಸಿಡಿಸುವುದು ಅಷ್ಟು ಸುಲಭದ ಕೆಲಸವಲ್ಲ. ಹಾಗಿದ್ದರೂ ಐಪಿಎಲ್ನಲ್ಲಿ ಬುಮ್ರಾ ವಿರುದ್ಧ ಸುಲಭವಾಗಿ ಸಿಕ್ಸರ್ ಬಾರಿಸಿದ ಬ್ಯಾಟರ್ಗಳಿದ್ದಾರೆ. ಅವರ ವಿವರ ಇಲ್ಲಿದೆ.
ಐಪಿಎಲ್ ಇತಿಹಾಸದಲ್ಲಿ, ಕೇವಲ ನಾಲ್ಕು ಬ್ಯಾಟ್ಸ್ಮನ್ಗಳು ಮಾತ್ರ ಬುಮ್ರಾ ವಿರುದ್ಧ ಐದು ಅಥವಾ ಹೆಚ್ಚಿನ ಸಿಕ್ಸರ್ಗಳನ್ನು ಹೊಡೆದಿದ್ದಾರೆ. ಅವರಲ್ಲಿ ದಕ್ಷಿಣ ಆಫ್ರಿಕಾದ ಲೆಜೆಂಡರಿ ಬ್ಯಾಟ್ಸ್ಮನ್ ಎಬಿ ಡಿವಿಲಿಯರ್ಸ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಬುಮ್ರಾ ಬೌಲಿಂಗ್ನಲ್ಲಿ ಡಿವಿಲಿಯರ್ಸ್ ಅತ್ಯಧಿಕ ಎಂಟು ಸಿಕ್ಸರ್ ಸಿಡಿಸಿದ್ದಾರೆ. ಡಿವಿಲಿಯರ್ಸ್, ಬುಮ್ರಾ ಬೌಲಿಂಗ್ನಲ್ಲಿ ಒಟ್ಟು 85 ಎಸೆತಗಳನ್ನು ಎದುರಿಸಿದ್ದು, 147.05 ರ ಸ್ಟ್ರೈಕ್ ರೇಟ್ನಲ್ಲಿ 125 ರನ್ ಕಲೆಹಾಕಿದ್ದಾರೆ.
ಬುಮ್ರಾ ವಿರುದ್ಧ 101 ಎಸೆತಗಳಲ್ಲಿ ಆರು ಸಿಕ್ಸರ್ಗಳು ಸೇರಿದಂತೆ 150 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಕೊಹ್ಲಿಯ ಸ್ಥಿರತೆ ಬುಮ್ರಾ ವಿರುದ್ಧ ಉತ್ತಮ ದಾಖಲೆಯನ್ನು ಕಾಯ್ದುಕೊಳ್ಳಲು ಸಹಾಯ ಮಾಡಿದೆ. ಐಪಿಎಲ್ನಲ್ಲಿ ಬುಮ್ರಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಕೂಡ ಕೊಹ್ಲಿ.
ಈ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ ಜೆಪಿ ಡುಮಿನಿ ಮೂರನೇ ಸ್ಥಾನದಲ್ಲಿ ಇದ್ದಾರೆ. ಅವರು ಬುಮ್ರಾ ವಿರುದ್ಧ ಕೇವಲ 33 ಎಸೆತಗಳಲ್ಲಿ ಆರು ಸಿಕ್ಸರ್ಗಳು ಸೇರಿದಂತೆ 70 ರನ್ ಕಲೆಹಾಕಿದ್ದಾರೆ.
ಪಟ್ಟಿಯಲ್ಲಿರುವ ಕೊನೆಯ ಬ್ಯಾಟ್ಸ್ಮನ್ ಸನ್ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್. ವಾಸ್ತವವಾಗಿ ಕಮ್ಮಿನ್ಸ್ ಬೌಲರ್ ಆಗಿದ್ದರೂ, ಅವರು ಬುಮ್ರಾ ವಿರುದ್ಧ 34 ಎಸೆತಗಳಲ್ಲಿ ಐದು ಸಿಕ್ಸರ್ಗಳು ಸೇರಿದಂತೆ 54 ರನ್ ಬಾರಿಸಿದ್ದಾರೆ.