All posts by nagaraj11081993

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗುತ್ತಾರಾ ಮಾಜಿ ಕ್ರಿಕೆಟರ್​​? ಇಬ್ಬರಲ್ಲಿ ಯಾರು? – Kannada News | Anil Kumble And Rahul Dravid Name In mysuru dasara 2026 inauguration Says yathindra siddaramaiah

ಮೈಸೂರು, (ಜುಲೈ 27): ವಿಶ್ವವಿಖ್ಯಾತ ಮೈಸೂರು ದಸರಾ 2026ರ (Mysuru Dasara 2026) ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 11ಕ್ಕೆ ಉದ್ಘಾಟನೆ ಹಾಗೂ ಅಕ್ಟೋಬರ್ 21ಕ್ಕೆ ಜಂಬೂ ಸವಾರಿ ನಡೆಯಲಿದೆ. ಹೀಗಾಗಿ ಈಗಿನಿಂದಲೆ ಸಕಲ ತಯಾರಿಗಳು ನಡೆದಿವೆ. ಈ ಸಂಬಂಧ ಸಚಿವ ಯತೀಂದ್ರ ಸಿದ್ದರಾಮಯ್ಯನವರು (yathindra siddaramaiah )(ಜುಲೈ 27) ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಭೆ ಮಾಡಿದ್ದು, ಈ ಬಾರಿ 17 ಉಪ ಸಮಿತಿಗಳನ್ನು ರಚನೆ ಮಾಡಲು ನಿರ್ಧಾರ ಮಾಡಲಾಗಿದೆ. ಇನ್ನು ಈ ಸಭೆಯಲ್ಲಿ ಕಂಬಳ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ. ಬದಲಿಗೆ ಸಿಎಂ ಡಿಕೆ ಶಿವಕುಮಾರ್ ನಿರ್ಧಾರಕ್ಕೆ ಬಿಡಲಾಗಿದೆ. ಇನ್ನು ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡುತ್ತಾರೆ ಎನ್ನುವ ಕುತೂಹಲ ಇದ್ದು, ಇಬ್ಬರು ಮಾಜಿ ಕ್ರಿಕೆಟರ್ಸ್ ಅನಿಲ್ ಕುಂಬ್ಳೆ ಹಾಗೂ ರಾಹುಲ್ ದ್ರಾವಿಡ್  ಹೆಸರು ಕೇಳಿಬಂದಿವೆ.

ದಸರಾ ಕಾರ್ಯಕಾರಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ,
ದಸರಾ ಕುರಿತು ಕಾರ್ಯಕಾರಿ ಸಭೆ ನಡೆಸಿದ್ದು, ಉಪ ಸಮಿತಿಗಳ ರಚನೆ ಕುರಿತು ಸಲಹೆಗಳನ್ನು ಪಡೆದಿದ್ದೇವೆ
17 ಉಪ ಸಮಿತಿಗಳನ್ನು ಈ ಬಾರಿ ರಚನೆ ಮಾಡಲು ನಿರ್ಧಾರ ಮಾಡಿದ್ದೇವೆ.ಕಂಬಳ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಕಂಬಳ ಫೈನಲ್ ಆದರೆ ಇನ್ನೊಂದು ಉಪ ಸಮಿತಿ ಆಗತ್ತದೆ. ಕಂಬಳ ಮಾಡಿದರೆ ಸಾತಗಳ್ಳಿ ಅಲ್ಲೇ ಮಾಡುತ್ತಾರೆ. ಆದ್ರೆ ಸಿಎಂ ಇನ್ನೂ ಆ ಬಗ್ಗೆ ಫೈನಲ್ ಮಾಡಿಲ್ಲ. ಎಲ್ಲವೂ ಕೂಡ ಅವರ ಕೈನಲ್ಲಿ ಇದೆ ಎಂದು ಮಾಹಿತಿ ನೀಡಿದರು.

ದಸರಾ ಉದ್ಘಾಟನೆಗೆ ಇಬ್ಬರು ಮಾಜಿ ಕ್ರಿಕೆಟರ್ಸ್​​ ಹೆಸರು

ಇನ್ನು ಪ್ರಮುಖವಾಗಿ ಈ ಬಾರಿ ಮೈಸೂರು ದಸರಾವನ್ನು ಯಾರು ಉದ್ಘಾಟನೆ ಮಾಡುತ್ತಾರೆ ಎನ್ನುವುದು ತೀವ್ರ ಕುತೂಲಕ ಮೂಡಿಸಿದ್ದು, ಇದರ ಮಧ್ಯೆ ಇಬ್ಬರು ಮಾಜಿ ಕ್ರಿಕೆಟರ್ಸ್ ಹೆಸರುಗಳು ಕೇಳಿಬಂದಿವೆ. ಈ ಬಗ್ಗೆ ಯತೀಂದ್ರ ಪ್ರತಿಕ್ರಿಯಿಸಿದ್ದು, ದಸರಾ ಉದ್ಘಾಟಕರ ಆಯ್ಕೆ ಮಾಡಬೇಕೆನ್ನುವುದು ಸಿಎಂ ನಿರ್ಧಾರವೇ ಅಂತಿಮ. ನಾವೆಲ್ಲರೂ ಉದ್ಘಾಟಕರ ಆಯ್ಕೆ ಅವರಿಗೆ ಬಿಟ್ಟಿದ್ದೇವೆ. ಶಾಸಕರು ಒಂದಷ್ಟು ಸಲಹೆ ಕೊಟ್ಟಿದ್ದಾರೆ. ದಸರಾ ಉದ್ಘಾಟನೆಗೆ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಹೆಸರು ಮುಂಚೂಣಿಯಲ್ಲಿ ಎಂಬ ವಿಚಾರ
ನಾನು ಈಗಾಗಲೇ ಹೇಳಿದ್ದೇನೆ. ಯಾವುದೇ ಹೆಸರನ್ನು ಆಯ್ಕೆ ಮಾಡಿದ್ರು ಸಿಎಂ ಆಯ್ಕೆ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ದಸರಾ ಪಾಸ್​​​ನಲ್ಲಿ ಗೊಂದಲವಾಗದಂತೆ ಸೂಚನೆ

ಇನ್ನು ದಸರಾ ಪಾಸ್ ಬಗ್ಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ದಸರಾ ಪಾಸ್ ವಿಚಾರವಾಗಿ ಕಳೆದ ಬಾರಿ ಗೊಂದಲ ಇತ್ತು. ಈ ಬಾರಿ ಯಾವುದೇ ಗೊಂದಲ ಆಗಬಾರದು ಅಂತ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ. ಪಾಸ್ ವಿಚಾರದಲ್ಲಿ ಸಮಸ್ಯೆ ಆಗದಂತೆ ಕ್ರಮ ಆಗುತ್ತದೆ. ಪಾಸ್ ಬೇಡ ಎಂದು ಶಾಸಕರು ಹೇಳಿದ್ದಾರೆ. ಈ ವಿಚಾರವನ್ನು ಸಿಎಂಗೆ ತಿಳಿಸಿದ್ದು, ಆ ಬಗ್ಗೆ ಸೂಕ್ತ ತೀರ್ಮಾನ ಆಗುತ್ತದೆ. ಗೋಲ್ಡ್ ಕಾರ್ಡ್ ಜನರಿಗೆ ಮಾತ್ರ ಲಭ್ಯವಾಗಲಿದೆ. ಈ ಬಾರಿ ಗೋಲ್ಡ್ ಆಸನಗಳು ಎಷ್ಟಿರುತ್ತದೆ ಅಷ್ಟೇ ಆಸನಗಳ ವ್ಯವಸ್ಥೆ ಮಾಡಲಾಗುತ್ತದೆ.

ಇನ್ನು ಜಂಬುಸವಾರಿಗೆ ಆನೆಗಳ ಆಯ್ಕೆ ಪ್ರಕ್ರಿಯೆಯು ನಡೆಯುತ್ತಿದೆ. ಯಾವುದೇ ತೊಂದರೆ ಇಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ವರದಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಆನೆಗಳ ಪಟ್ಟಿ ಬಿಡುಗಡೆಯಾಗುತ್ತೆ ಎಂದು ವಿವರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದಲ್ಲೂ ಮಳೆಯ ಕೊರತೆ; ದೇಶದ 54 ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ. 80ಕ್ಕಿಂತ ಇಳಿಕೆ – Kannada News | Karnataka Monsoon Rain; Water Storage Drops Below 80 per cent in 54 Major Reservoirs Across India

ನವದೆಹಲಿ, ಜುಲೈ 27: ದೇಶಾದ್ಯಂತ ಮುಂಗಾರು ಮಳೆಯ (Monsoon 2026) ಅಭಾವ ಮುಂದುವರಿದಿದ್ದು, ಜಲಾಶಯಗಳ ನೀರಿನ ಮಟ್ಟ (Dam Water Level) ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರಸಕ್ತ ಮುಂಗಾರು ಋತುವಿನಲ್ಲಿ ಶೇಕಡಾ 15ರಷ್ಟು ಮಳೆ ಕೊರತೆಯಾಗಿದ್ದು, ದೇಶದ 54 ಪ್ರಮುಖ ಜಲಾಶಯಗಳಲ್ಲಿ ನೀರಿನ ಶೇಖರಣೆಯು ಸಾಮಾನ್ಯ ಮಟ್ಟಕ್ಕಿಂತ ಶೇ. 80ಕ್ಕಿಂತ ಕಡಿಮೆಯಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಬೀಳಬೇಕಿದ್ದ ಸರಾಸರಿ ಮಳೆಗೆ ಹೋಲಿಸಿದರೆ ಪ್ರಸ್ತುತ ದೇಶಾದ್ಯಂತ ಶೇ. 15ರಷ್ಟು ಮಳೆಯ ಅಭಾವ ಉಂಟಾಗಿದೆ. ಕೇಂದ್ರ ಜಲ ಆಯೋಗ (CWA) ಮೇಲ್ವಿಚಾರಣೆ ಮಾಡುವ ಪ್ರಮುಖ ಜಲಾಶಯಗಳ ಪೈಕಿ 54 ಪ್ರಮುಖ ಜಲಾಶಯಗಳಲ್ಲಿ ನೀರು ಶೇಖರಣೆಯ ಮಟ್ಟವು ಅವುಗಳ ಸರಾಸರಿ ಸಾಮರ್ಥ್ಯದ ಶೇ. 80ಕ್ಕಿಂತಲೂ ಕುಸಿದಿದೆ.

ದೇಶದ ಜಲಾಶಯಗಳಲ್ಲಿ ಕಡಿಮೆ ನೀರಿನ ಸಂಗ್ರಹ ಇರುವುದು ಕಳವಳಕ್ಕೆ ಕಾರಣವಾಗಿದೆ. ಕೇಂದ್ರ ನೀರು ಸರಬರಾಜು ಮತ್ತು ಅಭಿವೃದ್ಧಿ ಆಯೋಗದ (CWC) ಪ್ರಕಾರ, ದೇಶದ 166 ಜಲಾಶಯಗಳಲ್ಲಿ 54 ಜಲಾಶಯಗಳಲ್ಲಿ ನೀರಿನ ಸಂಗ್ರಹವು ಸಾಮಾನ್ಯ ಮಟ್ಟಕ್ಕಿಂತ ಶೇ. 80ಕ್ಕಿಂತ ಕಡಿಮೆಯಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಮಾನ್ಸೂನ್ ಋತುವಿನಲ್ಲಿಯೂ ಮಳೆಯ ಕೊರತೆ.

ಜುಲೈ ಮೂರನೇ ವಾರದಲ್ಲಿ ಉತ್ತಮ ಮಳೆಯಾಗಿದ್ದರೂ, ಭಾರತದ ಜಲಾಶಯಗಳ ಪರಿಸ್ಥಿತಿ ಆತಂಕಕಾರಿಯಾಗಿಯೇ ಉಳಿದಿದೆ. ಜುಲೈ 16ರಿಂದ 22ರವರೆಗೆ ದೇಶದಲ್ಲಿ ಸಾಮಾನ್ಯ ಮಟ್ಟದ ಮಳೆಯಾಗಿದ್ದು, ಕೊರತೆ ಕೇವಲ ಶೇ. 1ರಷ್ಟಿತ್ತು. ಆದರೆ, ಜೂನ್ 1ದ ಜುಲೈ 25ರವರೆಗಿನ ಒಟ್ಟು ಅವಧಿಯಲ್ಲಿ ಮಳೆಯು ಸಾಮಾನ್ಯಕ್ಕಿಂತ ಶೇ. 15ರಷ್ಟು ಕಡಿಮೆಯಾಗಿದೆ.

ಇದನ್ನೂ ಓದಿ: ಕರ್ನಾಟಕದ ಜಲಾಶಯಗಳ ನೀರಿನ ಮಟ್ಟದಲ್ಲಿ 6 ವರ್ಷಗಳಲ್ಲೇ ಎರಡನೇ ಕನಿಷ್ಠ ಸಂಗ್ರಹ! ಕಾವೇರಿ ಕಣಿವೆಯಲ್ಲಿ ಬರದ ಛಾಯೆ

ಕೇಂದ್ರ ಜಲ ಆಯೋಗದ (CWC) ಇತ್ತೀಚಿನ ವರದಿಯ ಪ್ರಕಾರ, ದೇಶದ 166 ಪ್ರಮುಖ ಜಲಾಶಯಗಳಲ್ಲಿ ಲಭ್ಯವಿರುವ ನೀರು ಕಳೆದ ವರ್ಷಕ್ಕಿಂತ ಸುಮಾರು ಶೇ. 36ರಷ್ಟು ಕಡಿಮೆಯಿದ್ದು, ಸಾಮಾನ್ಯ ಮಟ್ಟಕ್ಕಿಂತಲೂ ಕೆಳಗಿದೆ. ಜುಲೈ 23ರ ವೇಳೆಗೆ 166 ಜಲಾಶಯಗಳಲ್ಲಿ ಒಟ್ಟು 70.432 ಬಿಲಿಯನ್ ಕ್ಯೂಬಿಕ್ ಮೀಟರ್ (BCM) ನೀರು ಲಭ್ಯವಿದ್ದು, ಇದು ಅವುಗಳ ಒಟ್ಟು ಶೇಖರಣಾ ಸಾಮರ್ಥ್ಯದ ಶೇ. 38.37ರಷ್ಟಾಗಿದೆ. ಕಳೆದ ವರ್ಷ ಇದೇ ಸಮಯದಲ್ಲಿ 110.519 BCM ನೀರು ಸಂಗ್ರಹವಾಗಿತ್ತು. ಅಂದರೆ, ಪ್ರಸ್ತುತ ನೀರಿನ ಶೇಖರಣೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಕೇವಲ ಶೇ. 63.73ರಷ್ಟು ಮತ್ತು ಸಾಮಾನ್ಯ ಮಟ್ಟಕ್ಕೆ ಹೋಲಿಸಿದರೆ ಶೇ. 93.09ರಷ್ಟಿದೆ.

54 ಜಲಾಶಯಗಳಲ್ಲಿ ಶೇ. 80ಕ್ಕಿಂತ ಕಡಿಮೆ ನೀರು:

ಸಿಡಬ್ಲ್ಯೂಸಿ ಪ್ರಕಾರ, 166 ಜಲಾಶಯಗಳ ಪೈಕಿ 54 ಜಲಾಶಯಗಳಲ್ಲಿ ನೀರಿನ ಶೇಖರಣೆಯು ಸಾಮಾನ್ಯ ಮಟ್ಟದ ಶೇ. 80 ಅಥವಾ ಅದಕ್ಕಿಂತ ಕಡಿಮೆಯಿದೆ. ಇವುಗಳಲ್ಲಿ 22 ಜಲಾಶಯಗಳಲ್ಲಿ ಸಾಮಾನ್ಯಕ್ಕಿಂತ ಅರ್ಧ ಅಥವಾ ಅದಕ್ಕಿಂತ ಕಡಿಮೆ ನೀರು ಉಳಿದಿದೆ. ಇವುಗಳಲ್ಲಿ ಶ್ರೀಶೈಲಂ, ನಾಗಾರ್ಜುನ ಸಾಗರ, ತುಂಗಭದ್ರಾ, ಕೃಷ್ಣರಾಜಸಾಗರ (KRS), ಪೆರಿಯಾರ್, ತವಾ, ವೈಗೈ, ಅಲಿಯಾರ್, ಸಿಂಗೂರ್ ಮತ್ತು ಮೌದಹದಂತಹ ಪ್ರಮುಖ ಜಲಾಶಯಗಳು ಕೂಡ ಸೇರಿವೆ.

ದಕ್ಷಿಣ ಭಾರತದಲ್ಲಿ ತೀವ್ರ ಕಡಿಮೆ ಮಳೆ:

ಪ್ರಾದೇಶಿಕ ಅಂಕಿ-ಅಂಶಗಳ ಪ್ರಕಾರ, ಪ್ರಸ್ತುತ ದಕ್ಷಿಣ ಭಾರತದಲ್ಲಿ ಪರಿಸ್ಥಿತಿ ಅತ್ಯಂತ ಹದಗೆಟ್ಟಿದೆ. ಈ ಭಾಗದ 47 ಪ್ರಮುಖ ಜಲಾಶಯಗಳಲ್ಲಿ ಅವುಗಳ ಸಾಮರ್ಥ್ಯದ ಕೇವಲ ಶೇ. 30.26ರಷ್ಟು ನೀರು ಮಾತ್ರ ಇದೆ. ಇದು ಕಳೆದ ವರ್ಷದ ಶೇ. 69.43 ಮತ್ತು ಸಾಮಾನ್ಯ ಮಟ್ಟದ ಶೇ. 44.18ಕ್ಕಿಂತ ಗಣನೀಯವಾಗಿ ಕಡಿಮೆಯಾಗಿದೆ. ಅದರಲ್ಲೂ ವಿಶೇಷವಾಗಿ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳ ಜಲಾಶಯಗಳಲ್ಲಿ ಮಧ್ಯಮ ಪ್ರಮಾಣದ ಅಭಾವ ಕಂಡುಬಂದಿದೆ. ತೆಲಂಗಾಣದ ಜಲಾಶಯಗಳಲ್ಲಿ ನೀರಿನ ಶೇಖರಣೆಯು ಸಾಮಾನ್ಯ ಮಟ್ಟಕ್ಕಿಂತ ಶೇ. 57ರಷ್ಟು ಕಡಿಮೆಯಾಗಿದೆ.

ಉತ್ತರ ಮತ್ತು ಮಧ್ಯ ಭಾರತದಲ್ಲಿ ಮಳೆ ಹೇಗಿದೆ?:

ಉತ್ತರ ಭಾರತದ ಜಲಾಶಯಗಳಲ್ಲಿ ಒಟ್ಟು ಸಾಮರ್ಥ್ಯದ ಕೇವಲ ಶೇ. 35.58ರಷ್ಟು ಮತ್ತು ಮಧ್ಯ ಭಾರತದ ಜಲಾಶಯಗಳಲ್ಲಿ ಶೇ. 39.11ರಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಎರಡೂ ಪ್ರದೇಶಗಳಲ್ಲಿನ ಸಂಗ್ರಹಣೆಯು ಕಳೆದ ವರ್ಷಕ್ಕಿಂತ ಮತ್ತು ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಿದೆ. ಪೂರ್ವ ಭಾರತದ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿದ್ದರೂ, ಕಳೆದ ವರ್ಷಕ್ಕಿಂತ ಕಡಿಮೆಯಿದೆ. ಪಶ್ಚಿಮ ಭಾರತ (ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ) ಮಾತ್ರ ಸಾಮಾನ್ಯಕ್ಕಿಂತ ಉತ್ತಮ ಶೇಖರಣೆಯನ್ನು ಹೊಂದಿದೆಯಾದರೂ, ಅದೂ ಸಹ ಕಳೆದ ವರ್ಷದ ಮಟ್ಟವನ್ನು ತಲುಪಿಲ್ಲ.

ಇದನ್ನೂ ಓದಿ: Karnataka Weather Forecast: ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

ಜಲಾಶಯಗಳು ಭರ್ತಿಯಾಗದಿರಲು ಕಾರಣವೇನು?:

ಜೂನ್ ತಿಂಗಳಿನಲ್ಲಿ ದೇಶಾದ್ಯಂತ ಶೇ. 40ರಷ್ಟು ಮಳೆ ಕಡಿಮೆಯಾಗಿತ್ತು. ಜುಲೈ ಮೂರನೇ ವಾರದಲ್ಲಿ ಉತ್ತಮ ಮಳೆಯಾಗಿದ್ದರೂ ಈ ಕೊರತೆಯನ್ನು ಸಂಪೂರ್ಣವಾಗಿ ಸರಿದೂಗಿಸಲು ಸಾಧ್ಯವಾಗಿಲ್ಲ. ಅನೇಕ ಜಲಾನಯನ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿದೆ. ಕೆಲವು ಕಡೆ ಕಡಿಮೆ ಸಮಯದಲ್ಲಿ ಅತಿಯಾದ ಮಳೆಯಾಗಿ ನೀರು ವೇಗವಾಗಿ ಹರಿದುಹೋದ ಹೊರತು ಜಲಾಶಯಗಳಲ್ಲಿ ಶೇಖರಣೆಯಾಗಲಿಲ್ಲ. ಕೃಷಿ ನೀರಾವರಿ, ಕುಡಿಯುವ ನೀರು, ಕೈಗಾರಿಕೆಗಳು ಮತ್ತು ಜಲವಿದ್ಯುತ್ ಉತ್ಪಾದನೆಗಾಗಿ ಜಲಾಶಯಗಳಿಂದ ನಿರಂತರವಾಗಿ ನೀರನ್ನು ಹೊರಬಿಡುತ್ತಿರುವುದು ಶೇಖರಣೆಯ ಮೇಲೆ ಒತ್ತಡವನ್ನುಂಟುಮಾಡಿದೆ ಎಂದು ಸಿಡಬ್ಲ್ಯೂಸಿ ಸ್ಪಷ್ಟಪಡಿಸಿದೆ.

ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕಡಿಮೆಯಾಗಿರುವುದು ಮುಂಗಾರು ಬೆಳೆಗಳ ಬಿತ್ತನೆ ಹಾಗೂ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಜಲಾಶಯಗಳ ನೀರಿನ ಮಟ್ಟವು ತೀವ್ರ ಕುಸಿತ ಕಂಡಿದ್ದು, ಮುಂಬರುವ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಕೃಷಿ ಕ್ಷೇತ್ರ ಮತ್ತು ವಿದ್ಯುತ್ ಉತ್ಪಾದನೆಯ ಮೇಲೆ ನೇರ ಹೊಡೆತ ಬೀಳಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಲ್ಲಿ ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ – Kannada News | Bengaluru: Man Stuck on Namma Metro Crane in Marathahalli, Police Probe Reason

ಬೆಂಗಳೂರು, ಜು.27: ರಾಜಧಾನಿಯ ಮಾರತಹಳ್ಳಿ ಸಮೀಪ ರಾತ್ರೋರಾತ್ರಿ ಭಾರಿ ಹೈಡ್ರಾಮಾವೊಂದು ನಡೆದಿದೆ. ನಮ್ಮ ಮೆಟ್ರೋ ಕಾಮಗಾರಿ ಸ್ಥಳದಲ್ಲಿದ್ದ ಬೃಹತ್ ಕ್ರೇನ್ ಏರಿದ ವ್ಯಕ್ತಿಯೊಬ್ಬ, ಬಳಿಕ ಕೆಳಗೆ ಇಳಿಯಲಾಗದೆ ಪರದಾಡಿದ ವಿಚಿತ್ರ ಘಟನೆ ಮಧ್ಯರಾತ್ರಿ ಸಂಭವಿಸಿದೆ. ಸುಮಾರು ಬೆಳಗಿನ ಜಾವ 1:30ರ ವೇಳೆಗೆ ಮಾರತಹಳ್ಳಿ ಬಳಿಯ ಮೆಟ್ರೋ ಕಾಮಗಾರಿ ಪ್ರದೇಶದಲ್ಲಿದ್ದ ಬೃಹತ್ ಕ್ರೇನ್ ಮೇಲೆ ವ್ಯಕ್ತಿಯೊಬ್ಬ ಏರಿದ್ದಾನೆ. ಆದರೆ, ಮೇಲೇರಿದ ಕೆಲವೇ ಕ್ಷಣಗಳಲ್ಲಿ ಆತನಿಗೆ ಕೆಳಗೆ ಇಳಿಯಲು ಸಾಧ್ಯವಾಗದೆ ಮೇಲೆಯೇ ಒದ್ದಾಡಲು ಪ್ರಾರಂಭಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಹಾಗೂ ಸಿಬ್ಬಂದಿ ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದಾರೆ. ವಿಷಯ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ಹೆಚ್‌ಎಎಲ್ (HAL) ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು. ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಳಿಸಲು ಸ್ಥಳಕ್ಕೆ ಮತ್ತೊಂದು ದೊಡ್ಡ ಕ್ರೇನ್ ತರೆಸಿ, ಹರಸಾಹಸಪಟ್ಟು ಆತನನ್ನು ಯಶಸ್ವಿಯಾಗಿ ಕೆಳಗೆ ಕರೆತರಲಾಯಿತು. ವ್ಯಕ್ತಿಯನ್ನು ಕೆಳಗಿಳಿಸುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ತಕ್ಷಣವೇ ವಶಕ್ಕೆ ಪಡೆದಿದ್ದಾರೆ. ಸದರಿ ವ್ಯಕ್ತಿ ಮಧ್ಯರಾತ್ರಿ ಮೆಟ್ರೋ ಕಾಮಗಾರಿಯ ಬೃಹತ್ ಕ್ರೇನ್ ಅನ್ನು ಯಾವ ಕಾರಣಕ್ಕಾಗಿ ಹತ್ತಿದ್ದ? ಆತ ಮದ್ಯಸೇವನೆ ಮಾಡಿದ್ದನೇ ಅಥವಾ ಮಾನಸಿಕವಾಗಿ ಅಸ್ವಸ್ಥನೇ? ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ವಶಕ್ಕೆ ಪಡೆದಿರುವ ಪೊಲೀಸರು ವ್ಯಕ್ತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ವರದಿ: ನಟರಾಜ್ ಟಿವಿ9 ಕನ್ನಡ 

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ZIM: ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಗೆದ್ದು ಸಚಿನ್ ದಾಖಲೆ ಮುರಿದ ವೈಭವ್ – Kannada News | Vaibhav Sooryavanshi Breaks Sachin’s Record: Youngest Indian MoM in T20s vs Zim

ಇದರ ಜೊತೆಗೆ ಈ ಮೊದಲು ಈ ದಾಖಲೆಯನ್ನು ಹೊಂದಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಇದಲ್ಲದೆ, ವೈಭವ್ ಅವರನ್ನು ಸರಣಿಶ್ರೇಷ್ಠ ಎಂದು ಹೆಸರಿಸಲಾಯಿತು, ಸರಣಿಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಕಿರಿಯ ಭಾರತೀಯ ಪುರುಷ ಕ್ರಿಕೆಟಿಗರಾದರು(PC-PTI).

Source link

ಪಂಜಾಬ್‌ನ ಸಂಗ್ರೂರ್​​ನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ – Kannada News | Petrol Bomb Attack on BJP Office in Sangrur, Punjab: Police Probe Underway

ಅಮೃತಸರ, ಜುಲೈ 27:ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಚೇರಿ ಮೇಲೆ ನಿನ್ನೆ ತಡರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ಈ ಅನಿರೀಕ್ಷಿತ ಘಟನೆ ರಾಜಕೀಯ ವಲಯದಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ದಾಳಿಯ ಕುರಿತು ಮಾಹಿತಿ ಲಭಿಸುತ್ತಿದ್ದಂತೆಯೇ ಸಂಗ್ರೂರ್ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ದಾಳಿಯ ನಂತರ, ಸ್ಥಳದಲ್ಲಿ ಯಾವುದೇ ಪ್ರಮುಖ ಹಾನಿಯ ಬಗ್ಗೆ ವರದಿಯಾಗಿಲ್ಲವಾದರೂ, ಭದ್ರತಾ ದೃಷ್ಟಿಯಿಂದ ಇದನ್ನು ಗಂಭೀರ ಘಟನೆ ಎಂದು ಪರಿಗಣಿಸಲಾಗಿದೆ. ಪೊಲೀಸರು ಘಟನಾ ಸ್ಥಳದಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ಮಾಹಿತಿಗಳ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆ ನಡೆದ ಪ್ರದೇಶದ ಸುತ್ತಮುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಈ ದೃಶ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಮೂಲಕ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಗುರುತಿಸಲು ಹಾಗೂ ಅವರ ಉದ್ದೇಶವನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ.

ಯಾರು ಈ ಕೃತ್ಯವನ್ನು ಎಸಗಿದ್ದಾರೆ ಮತ್ತು ಯಾವ ಕಾರಣಕ್ಕಾಗಿ ಈ ರೀತಿಯ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದೆ ಎಂಬುದು ಸಿಸಿಟಿವಿ ಪರಿಶೀಲನೆಯ ನಂತರವೇ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ, ಸಂಗ್ರೂರ್ ಬಿಜೆಪಿ ಕಚೇರಿ ಆವರಣದಲ್ಲಿ ಮತ್ತು ಸುತ್ತಮುತ್ತ ಬಿಗಿಯಾದ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವ ವಿಶ್ವಾಸ ಪೊಲೀಸರಲ್ಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪಡಿತರ ಅಂಗಡಿಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟ: ಆಹಾರ ಇಲಾಖೆ ನಿರ್ಧಾರಕ್ಕೆ ಆಕ್ಷೇಪ – Kannada News | Ration Outlets Turn Ticket Counters: Food Department Faces Flak for Ordering Sale of ‘Sarkari Nyayabele Angadi’ Movie Tickets at Fair Price Shops

ಪಡಿತರ ಅಂಗಡಿಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟ

ಹಾವೇರಿ, ಜುಲೈ 27: ರಾಜ್ಯಾದ್ಯಂತ ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯದ ವಿತರಣೆ ಜೊತೆಗೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟಕ್ಕೆ ಆಹಾರ ಇಲಾಖೆ ಸೂಚನೆ ನೀಡಿದೆ. ಒಂದು ನ್ಯಾಯಬೆಲೆ ಅಂಗಡಿಗೆ 50 ರಿಂದ 100 ಟಿಕೆಟ್ ವಿತರಣೆ ಮಾಡಲಾಗಿದ್ದು, ಆಹಾರ ಇಲಾಖೆ ಒಂದು ಟಿಕೆಟ್​​​ಗೆ 150 ರೂಪಾಯಿ ನಿಗದಿ ಮಾಡಿದೆ. ಸಾಮಾಜಿಕ ಕಾಳಜಿ ಹಾಗೂ ಗ್ರಾಮೀಣ ಹಿನ್ನೆಲೆಯನ್ನು ಹೊಂದಿರುವ ಈ ಕನ್ನಡ ಚಲನಚಿತ್ರ ಜುಲೈ 31, 2026ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ರಾಜ್ಯ ಸರ್ಕಾರದ ಕನಸಿನ ಕೂಸಾದ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಜಾಗೃತಿ ಗೊಳಿಸುವ ಸಂಬಂಧ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಎಂಬ ಚಲನಚಿತ್ರವನ್ನು ಮೊದಲಬಾರಿಗೆ ಕರ್ನಾಟಕ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರು ಹಾಗೂ ಕುಟುಂಬ ವರ್ಗದವರಿಗೆ ಹಾಗೂ ರಾಜ್ಯದ ಕಾರ್ಡುದಾರರಿಗೆ ಪ್ರದರ್ಶಿಸುವ ಸಲುವಾಗಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ಚಲನಚಿತ್ರದ ಪ್ರದರ್ಶನಕ್ಕೆ ಅನುವು ಮಾಡಿಕೊಡಲು ಕೋರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಆಯುಕ್ತರು ಅದಾಗಲೇ ಆದೇಶಿಸಿದ್ದಾರೆ.

ಇದನ್ನೂ ಓದಿ: ‘ಅರ್ಚನಾ ಕೊಟ್ಟಿಗೆ ಬಿಗ್ ಬಾಸ್​​ಗೆ ಬರಲಿ’; ವೀಕ್ಷಕರ ಒತ್ತಾಯ

ಕುಮಾರ್ ಬಂಗಾರಪ್ಪ, ರಾಗಿಣಿ ನಟನೆಯ ಸಿನಿಮಾ

ಈ ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಕುಮಾರ್ ಬಂಗಾರಪ್ಪ ಮತ್ತು ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ, ಬಿ. ರಾಮಮೂರ್ತಿ ಅವರ ಕಥೆಗೆ ಸಾತ್ವಿಕ್ ಪವನ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಸರ್ಕಾರದ ಪಡಿತರ ವಿತರಣಾ ವ್ಯವಸ್ಥೆ (Ration System) ಮತ್ತು ನ್ಯಾಯಬೆಲೆ ಅಂಗಡಿಗಳ ಮಹತ್ವ ಹಾಗೂ ಅದರ ಸುತ್ತ ನಡೆಯುವ ಸಾಮಾಜಿಕ ವಿದ್ಯಮಾನಗಳನ್ನು ಆಧರಿಸಿದ ಕತೆಯನ್ನು ಈ ಸಿನಿಮಾ ಹೊಂದಿದೆ ಎನ್ನಲಾಗಿದೆ.

ಆಹಾರ ಇಲಾಖೆ ನಿರ್ಧಾರಕ್ಕೆ ಆಕ್ರೋಶ

ಪಡಿತರ ಅಂಗಡಿಗಳಲ್ಲಿ ಸಿನಿಮಾ ಟಿಕೆಟ್​​ ಮಾರಾಟ ಸಂಬಂಧ ಆಹಾರ ಇಲಾಖೆಯ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. ಸಿನಿಮಾ ನೋಡಲು ಇಷ್ಟ ಇದ್ದವರು ಥಿಯೇಟರ್​ಗೆ ಹೋಗಿ ನೋಡ್ತಾರೆ. ನೋಡಲು ಇಷ್ಟ ಇಲ್ಲದವರು ಚಿತ್ರಮಂದಿರಗಳಿಗೆ ಹೋಗುವುದಿಲ್ಲ. ಹೀಗಾಗಿ ಆಹಾರ ಇಲಾಖೆ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:58 pm, Mon, 27 July 26

Source link

ದಳಪತಿ ವಿಜಯ್ ಹಾದಿಯಲ್ಲಿ ಧನುಷ್; ರಾಜಕೀಯ ಪ್ರವೇಶದ ಸುಳಿವು ನೀಡಿದ ನಟ – Kannada News | Actor Dhanush Sparks Political Entry Speculations Following CM Vijay Path

ದಳಪತಿ ವಿಜಯ್ ಬಳಿಕ ತಮಿಳು ಚಿತ್ರರಂಗದ ಸ್ಟಾರ್ ನಟ ಧನುಷ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ? ಇಂತಹದೊಂದು ಹೊಸ ಚರ್ಚೆ ಈಗ ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿದೆ. ಭಾನುವಾರ ಚೆನ್ನೈನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಅವರು ಆಡಿದ ಮಾತುಗಳು ಈ ಅನುಮಾನಕ್ಕೆ ಕಾರಣವಾಗಿವೆ. ಕೇವಲ ಸಿನಿಮಾ ಅಷ್ಟೇ ಅಲ್ಲದೆ ಸಮಾಜ ಸೇವೆಗೆ ಒಟ್ಟಾಗುವಂತೆ ಧನುಷ್ ಕರೆ ನೀಡಿದ್ದಾರೆ. ಇದು ಅವರ ರಾಜಕೀಯ ಪ್ರವೇಶದ ಮುನ್ಸೂಚನೆ ಎನ್ನಲಾಗುತ್ತಿದೆ.

ಅಭಿಮಾನಿಗಳ ಶಕ್ತಿಗೆ ಹೊಸ ಉದ್ದೇಶ:

ಚೆನ್ನೈನಲ್ಲಿ ಧನುಷ್ ಅಭಿಮಾನಿ ಸಂಘ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಭಾರಿ ಜನಸಾಗರ ಹರಿದುಬಂದಿತ್ತು. ಈ ವೇದಿಕೆಯಲ್ಲಿ ಮಾತನಾಡಿದ ಧನುಷ್ ಅವರು ಅಭಿಮಾನಿ ಬಳಗದ ಒಗ್ಗಟ್ಟನ್ನು ಶ್ಲಾಘಿಸಿದರು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ಒಂದೆಡೆ ಸೇರಿರುವುದರ ಹಿಂದೆ ದೊಡ್ಡ ಶಕ್ತಿ ಇದೆ ಎಂದರು. ಈ ಒಗ್ಗಟ್ಟಿಗೆ ಸಿನಿಮಾ ಮೀರಿದ ಒಂದು ದೊಡ್ಡ ಉದ್ದೇಶ ಸಿಗಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಹೆಚ್ಚಿನ ಸಮಾಜ ಸೇವೆಗೆ ಧನುಷ್ ಕರೆ:

ಕೇವಲ ಸಿನಿಮಾಗಳ ಆಡಿಯೋ ಲಾಂಚ್ ಹಾಗೂ ಅಭಿಮಾನಿಗಳ ಭೇಟಿಗೆ ಮಾತ್ರ ಸೀಮಿತವಾಗಬೇಡಿ ಎಂದು ಧನುಷ್ ತಿಳಿಸಿದರು. ನಿಮ್ಮ ಸುತ್ತಮುತ್ತಲಿನ ಜನರ ಕಷ್ಟಗಳಿಗೆ ಸ್ಪಂದಿಸಿ ಎಂದರು. ಸ್ಥಳೀಯ ಪ್ರದೇಶಗಳ ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳಿ ಎಂದು ಕರೆ ನೀಡಿದರು. ಜನರಿಗೆ ಸಾಧ್ಯವಾದಷ್ಟು ಸಹಾಯ ಮಾಡಲು ಅಭಿಮಾನಿಗಳಿಗೆ ಸೂಚಿಸಿದರು. ಇದೇ ಕಾರ್ಯಕ್ರಮದಲ್ಲಿ ಧನುಷ್ ಅವರು ತಮ್ಮ ಅಭಿಮಾನಿ ಸಂಘದ ಹೊಸ ಧ್ವಜವನ್ನು ಅನಾವರಣಗೊಳಿಸಿದರು. ಇದು ಸದ್ಯ ತಮಿಳುನಾಡಿನಲ್ಲಿ ಭಾರಿ ಕುತೂಹಲ ಮೂಡಿಸಿದೆ.

ದಳಪತಿ ವಿಜಯ್ ಹಾದಿ ನೆನಪಿಸಿದ ಧನುಷ್:

ಧನುಷ್ ಅವರ ಈ ನಡೆ ತಮಿಳುನಾಡಿನ ಇಂದಿನ ಮುಖ್ಯಮಂತ್ರಿ ದಳಪತಿ ವಿಜಯ್ ಅವರ ಆರಂಭದ ದಿನಗಳನ್ನು ನೆನಪಿಸುತ್ತಿದೆ. ವಿಜಯ್ ಕೂಡ ತಮ್ಮ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಸ್ಥಾಪಿಸುವ ಮುನ್ನ ಇದೇ ರೀತಿ ಅಭಿಮಾನಿ ಸಂಘಗಳ ಮೂಲಕ ತಳಮಟ್ಟದಲ್ಲಿ ಸಮಾಜ ಸೇವೆ ಮಾಡಿದ್ದರು. ಅದೇ ಹಾದಿಯನ್ನು ಧನುಷ್ ತುಳಿಯುತ್ತಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ತಮಿಳುನಾಡಿಗೆ ಧನುಷ್ ಅವರಂತಹ ಸುಶಿಕ್ಷಿತ ಹಾಗೂ ಧೈರ್ಯವಂತ ನಾಯಕರ ಅಗತ್ಯವಿದೆ ಎಂದು ಫ್ಯಾನ್ಸ್ ಅಭಿಪ್ರಾಯಪಡುತ್ತಿದ್ದಾರೆ. ಧನುಷ್ 2031ರ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಾಮಾಜಿಕ ಕಳಕಳಿಯ ಸಿನಿಮಾ

ನಟ ಧನುಷ್ ಅವರು ಇತ್ತೀಚಿನ ವರ್ಷಗಳಲ್ಲಿ ಕೇವಲ ಕಮರ್ಷಿಯಲ್ ಸಿನಿಮಾಗಳಿಗೆ ಸೀಮಿತವಾಗದೆ, ಸಮಾಜದಲ್ಲಿನ ತಾರತಮ್ಯ, ಶೋಷಣೆ ಮತ್ತು ಕೆಳವರ್ಗದ ಜನರ ಹಕ್ಕುಗಳನ್ನು ಪ್ರತಿಪಾದಿಸುವಂತಹ ಗಂಭೀರ ಕಥಾಹಂದರ ಹೊಂದಿರುವ ಚಿತ್ರಗಳನ್ನು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ಪ್ರಶಸ್ತಿ ವಿವಾದ; ಇನ್ನೂ ಉತ್ತಮ ಚಿತ್ರಗಳಿದ್ದವು ಎಂಬುದನ್ನು ಒಪ್ಪಿಕೊಂಡ ಧನುಷ್

ವೆಟ್ರಿಮಾರನ್ ನಿರ್ದೇಶನದ ‘ಅಸುರನ್’ ಚಿತ್ರದಲ್ಲಿ ಭೂಮಿ ಮತ್ತು ಶಿಕ್ಷಣದ ಹಕ್ಕಿಗಾಗಿ ಹೋರಾಡುವ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಆ ಬಳಿಕ ಬಂದ ಮಾರಿ ಸೆಲ್ವರಾಜ್ ಅವರ ‘ಕರ್ಣನ್’ ಚಿತ್ರದಲ್ಲಿ ಹಳ್ಳಿಯ ಜನರ ಮೇಲಾಗುವ ಪೊಲೀಸ್ ದೌರ್ಜನ್ಯ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ಧ್ವನಿ ಎತ್ತುವ ಮೂಲಕ ಗಮನ ಸೆಳೆದಿದ್ದರು. ಇತ್ತೀಚೆಗೆ ತೆರೆಕಂಡ ‘ಕ್ಯಾಪ್ಟನ್ ಮಿಲರ್’ ಚಿತ್ರದಲ್ಲೂ ಕೂಡ ಬ್ರಿಟಿಷರ ಮತ್ತು ಸ್ಥಳೀಯ ಜಮೀನ್ದಾರರ ದಬ್ಬಾಳಿಕೆಯ ವಿರುದ್ಧ ಹೋರಾಡುವ ಕ್ರಾಂತಿಕಾರಿಯ ಪಾತ್ರಕ್ಕೆ ಅವರು ಜೀವ ತುಂಬಿದ್ದರು. ಈ ಸಾಲು ಸಾಲು ಸಿನಿಮಾಗಳಲ್ಲಿ ಸಮಾಜ ಸೇವೆ, ಸಮಾನತೆ ಮತ್ತು ಜನಪರ ಹೋರಾಟದ ಸಂದೇಶಗಳಿರುವುದು, ಅವರು ತಳಮಟ್ಟದ ಜನರ ಮನಗೆದ್ದು ರಾಜಕೀಯ ಪ್ರವೇಶ ಮಾಡಲು ವ್ಯವಸ್ಥಿತವಾಗಿ ನಡೆಸುತ್ತಿರುವ ಪೂರ್ವ ಸಿದ್ಧತೆಯ ಸೂಚನೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 2:52 pm, Mon, 27 July 26

Source link

ಷೇರುಪೇಟೆಯಲ್ಲಿ ಮಂಡೇ ಧಮಾಕ; ಸತತ ಕುಸಿತದ ಬಳಿಕ ಸಖತ್ ಚೇತರಿಸಿಕೊಂಡ ಮಾರುಕಟ್ಟೆ; ಏನು ಕಾರಣ? – Kannada News | Indian stock market rises on July 27th after last week’s big fall, key reasons for this comeback

ನವದೆಹಲಿ, ಜುಲೈ 27: ಕಳೆದ ವಾರವಿಡೀ ಸತತವಾಗಿ ಕುಸಿತ ಕಂಡಿದ್ದ ಭಾರತೀಯ ಷೇರುಪೇಟೆಗೆ (stock market) ಇವತ್ತು ಸೋಮವಾರ ಸಖತ್ ಕಳೆ ಪಡೆದಿದೆ. ಸೆನ್ಸೆಕ್ಸ್ 800ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದೆ. ಶೇ. 1ಕ್ಕಿಂತಲೂ ಹೆಚ್ಚು ಉಬ್ಬಿದೆ. ನಿಫ್ಟಿ ಕೂಡ 24,000 ಅಂಕಗಳ ಗಡಿ ಮುಟ್ಟಲು ಯಶಸ್ವಿಯಾಗಿದೆ. ಕಳೆದ ವಾರ ಕಳೆದುಕೊಂಡಿದ್ದ ಸಾಕಷ್ಟ ಅಂಕಗಳಲ್ಲಿ ಒಂದಷ್ಟು ಚೇತರಿಕೆ ಸಿಕ್ಕಿದೆ. ಈ ವರದಿ ಬರೆಯುವ ಹೊತ್ತಲ್ಲಿ ಸೆನ್ಸೆಕ್ಸ್ 76,860 ಅಂಕಗಳಲ್ಲಿತ್ತು. ನಿಫ್ಟಿ 24,002 ಅಂಕಗಳ ಮಟ್ಟದಲ್ಲಿತ್ತು. ಬಿಎಸ್​ಇ ಮತ್ತು ಎನ್​ಎಸ್​ಇ ಇನ್ನೂ ಹಲವಾರು ಸೂಚ್ಯಂಕಗಳು ಹಸಿರು ಬಣ್ಣದಲ್ಲಿರುವುದು ಹೂಡಿಕೆದಾರರ ಮೊಗ ಅರಳಿಸಿದೆ. ಅದರಲ್ಲೂ ಐಟಿ ಸೆಕ್ಟರ್ ಸಖತ್ತಾಗಿ ಕಂಬ್ಯಾಕ್ ಮಾಡುತ್ತಿದೆ.

ಷೇರು ಬಜಾರು ಸೋಮವಾರ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣಲು ಹಲವು ಕಾರಣಗಳಿವೆ. ಜಾಗತಿಕ ವಿದ್ಯಮಾನಗಳೇ ಹೆಚ್ಚಾಗಿ ಮಾರುಕಟ್ಟೆಯನ್ನು ಪ್ರಭಾವಿತಗೊಳಿಸಿದೆ. ಈ ಕೆಲ ಕಾರಣಗಳೇನು ಎನ್ನುವ ವಿವರ ಇಲ್ಲಿವೆ:

ಜಾಗತಿಕವಾಗಿ ಕವಿದಿದ್ದ ಆತಂಕದ ಛಾಯೆ ಸರಿದಿದೆ

ಮಧ್ಯಪ್ರಾಚ್ಯದಲ್ಲಿ (ಅಮೆರಿಕ ಮತ್ತು ಇರಾನ್ ನಡುವೆ) ಎದುರಾಗಿದ್ದ ಉದ್ವಿಗ್ನತೆಯು ಕೊಂಚ ತಿಳಿಯಾಗಿದೆ. ಸೇನಾ ದಾಳಿಗಳನ್ನು ಅಮೆರಿಕ ತಾತ್ಕಾಲಿಕವಾಗಿ ತಡೆಹಿಡಿದಿರುವ ವರದಿಗಳು ಬಂದ ಬೆನ್ನಲ್ಲೇ ಜಾಗತಿಕ ಹೂಡಿಕೆದಾರರಲ್ಲಿ ಭರವಸೆ ಮೂಡಿದ್ದು, ಜಾಗತಿಕ ಮಾರುಕಟ್ಟೆಗಳು ಚೇತರಿಸಿಕೊಂಡಿವೆ.

ಇದನ್ನೂ ಓದಿ: ಸಿಇಒರಂಥ ಸಿಇಒರನ್ನೇ ದಾಸರನ್ನಾಗಿ ಮಾಡಿಕೊಳ್ಳುತ್ತೆ ರೀಲ್ಸ್… ಬೇಸ್ತುಬಿದ್ದ ಸ್ಯಾಮ್ ಟಿಕ್​ಟಾಕ್ ಆ್ಯಪನ್ನೇ ಡಿಲೀಟ್ ಮಾಡಿದ ಕಥೆ

ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಇಳಿಕೆ

ಕಳೆದ ವಾರ ಬ್ಯಾರೆಲ್‌ಗೆ $100 ದಾಟಿದ್ದ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇಕಡಾ 5ಕ್ಕಿಂತಲೂ ಹೆಚ್ಚು ಕುಸಿದು, $91 ರಿಂದ $95ರ ಸಾಗದಲ್ಲಿದೆ. ತೈಲ ಬೆಲೆ ಇಳಿಕೆಯು ಭಾರತದಂತಹ ತೈಲ ಆಮದು ಮಾಡಿಕೊಳ್ಳುವ ದೇಶಗಳ ಹಣದುಬ್ಬರ ಮತ್ತು ಆರ್ಥಿಕ ಹೊರೆಯನ್ನು ತಗ್ಗಿಸುವುದರಿಂದ ಮಾರುಕಟ್ಟೆಗೆ ಸಕಾರಾತ್ಮಕ ಶಕ್ತಿ ನೀಡಿದೆ.

ಬಲವರ್ಧನೆಗೊಂಡ ಭಾರತೀಯ ರೂಪಾಯಿ

ಕಚ್ಚಾ ತೈಲದ ಬೆಲೆ ಕಡಿಮೆಯಾದಂತೆ ಹಾಗೂ ಅಮೆರಿಕನ್ ಡಾಲರ್ ಮೌಲ್ಯ ಕೊಂಚ ಕುಸಿದ ಪರಿಣಾಮವಾಗಿ, ಭಾರತೀಯ ರೂಪಾಯಿ ಮೌಲ್ಯವು ಡಾಲರ್ ಎದುರು 28 ಪೈಸೆಗಳಷ್ಟು ಏರಿಕೆಯಾಗಿ ₹96.14 ಮಟ್ಟಕ್ಕೆ ಬಲಗೊಂಡಿದೆ. ಇದು ಹೂಡಿಕೆದಾರರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಏಷ್ಯನ್ ಮಾರುಕಟ್ಟೆಗಳ ಬೆಂಬಲ

ಏಷ್ಯಾದ ಪ್ರಮುಖ ಮಾರುಕಟ್ಟೆಗಳಾದ ಜಪಾನ್‌ನ ಟೋಪಿಕ್ಸ್, ಆಸ್ಟ್ರೇಲಿಯಾದ ಎಸ್‌ಆಂಡ್‌ಪಿ, ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ ಹಾಗೂ ಚೀನಾದ ಶಾಂಘೈ ಕಾಂಪೋಸಿಟ್ ಸೂಚ್ಯಂಕಗಳು ಸಕಾರಾತ್ಮಕವಾಗಿ ವಹಿವಾಟು ನಡೆಸಿದ್ದು, ದೇಶೀಯ ಮಾರುಕಟ್ಟೆಗೆ ಬೆಂಬಲ ನೀಡಿವೆ (Asian Cues).

ಇದನ್ನೂ ಓದಿ: ಸಾಲವೆಂದರೆ ಮಾರುದೂರ ಹೋಗುತ್ತೀರಾ? ಕೆಟ್ಟಸಾಲ, ಒಳ್ಳೆಯ ಸಾಲದ ವ್ಯತ್ಯಾಸ ತಿಳಿದಿರಿ… ಇಲ್ಲಿವೆ ಕೆಲ ಟ್ರಿಕ್ಸ್

ಬ್ಯಾಂಕಿಂಗ್ ಮತ್ತು ಐಟಿ ವಲಯಗಳ ಪ್ರಬಲ ಚೇತರಿಕೆ

ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್ (ಬ್ಯಾಂಕ್ ನಿಫ್ಟಿ), ಐಟಿ ಮತ್ತು ವಿಮಾನಯಾನ (Aviation) ವಲಯದ ಷೇರುಗಳು ಮುಂಚೂಣಿಯಲ್ಲಿವೆ. ಇನ್ಫೋಸಿಸ್ (Infosys), ಟಿಸಿಎಸ್ (TCS), ಟೆಕ್ ಮಹೀಂದ್ರಾ, ಬಜಾಜ್ ಫೈನಾನ್ಸ್, ಹೆಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಇಂಡಿಗೋ (IndiGo) ಷೇರುಗಳು ಶೇ. 1 ರಿಂದ ಶೇ. 3 ರವರೆಗೆ ಪ್ರಬಲ ಜಿಗಿತ ಕಂಡಿವೆ.

ತೈಲ ಬೆಲೆ ಇಳಿಕೆ ಮತ್ತು ಜಾಗತಿಕ ಮಾರುಕಟ್ಟೆಯ ಬೆಂಬಲದಿಂದ ಮಾರುಕಟ್ಟೆ ಚೇತರಿಸಿಕೊಂಡಿದ್ದರೂ, ಈ ವಾರ ನಡೆಯಲಿರುವ ಅಮೆರಿಕದ ಫೆಡರಲ್ ರಿಸರ್ವ್ (US Fed) ಸಭೆ ಮತ್ತು ಪ್ರಮುಖ ಜಾಗತಿಕ ಟೆಕ್ ಕಂಪನಿಗಳ ತ್ರೈಮಾಸಿಕ ಫಲಿತಾಂಶಗಳ ಮೇಲೆ ಹೂಡಿಕೆದಾರರು ಗಮನ ಹರಿಸಬೇಕಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸುಳ್ಳು ಆದಾಯ ಪ್ರಮಾಣಪತ್ರ ವಿವಾದ: ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ, ಕೆಪಿಎಸ್​ಸಿ ಕಾರ್ಯವೈಖರಿ ಬಗ್ಗೆ ಗರಂ – Kannada News | Karnataka High Court Pulls Up Suma Sahukar in Fake Income Certificate Case, Slams KPSC Functioning

ಬೆಂಗಳೂರು, ಜುಲೈ 27: ಕೆಪಿಎಸ್‌ಸಿ ನೇಮಕಾತಿಗಾಗಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪದ ಸಂಬಂಧ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸುಮಾ ಸಾಹುಕಾರ್ (ಕೆಪಿಎಸ್​ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮಗಳು) ಅವರನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ಈ ಪ್ರಕರಣ ವಿಚಾರಣೆಗೆ ಬಂದಿದೆ. ಸುಮಾ ಸಾಹುಕಾರ್ ಅವರ ವಾರ್ಷಿಕ ಆದಾಯ 30 ಲಕ್ಷ ರೂಪಾಯಿಗಳಾಗಿದ್ದರೂ, ಅವರು ಕೇವಲ 40,000 ರೂಪಾಯಿ ಆದಾಯ ಎಂದು ನಮೂದಿಸಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಲಯವು ಇದನ್ನು ‘‘ಮೇಲ್ನೋಟಕ್ಕೆ ವಂಚನೆ’’ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದ್ದು, ಬಡವರಿಗೆ ಸಿಗಬೇಕಾದ ಅವಕಾಶಗಳನ್ನು ಕಿತ್ತುಕೊಳ್ಳುವುದು ಸರಿಯೇ ಎಂದು ಪ್ರಶ್ನಿಸಿದೆ. ಪ್ರತಿ ನೇಮಕಾತಿಯೂ ವಿವಾದಗಳಿಂದ ಕೂಡಿರುತ್ತದೆ ಎಂದು ಹೈಕೋರ್ಟ್ ಕೆಪಿಎಸ್‌ಸಿ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು. ಸುಮಾ ಸಾಹುಕಾರ್ ಪರ ವಕೀಲರು ತಮ್ಮ ಕಕ್ಷಿದಾರರು ವೈಯಕ್ತಿಕ ಆದಾಯವನ್ನು ಮಾತ್ರ ನಮೂದಿಸಿದ್ದಾರೆ ಎಂದು ವಾದಿಸಿದರೂ, ಆದಾಯ ಪ್ರಮಾಣಪತ್ರವು ಕುಟುಂಬದ ವಾರ್ಷಿಕ ಆದಾಯವನ್ನು ಆಧರಿಸಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ನ್ಯಾಯಾಲಯದ ಕಠಿಣ ಪ್ರಶ್ನೆಗಳು ಮತ್ತು ಅರ್ಜಿಗೆ ಯಾವುದೇ ಸ್ಟೇ ಸಿಗುವುದಿಲ್ಲ ಎಂದು ಮನವರಿಕೆಯಾದ ನಂತರ, ಸುಮಾ ಸಾಹುಕಾರ್ ತಮ್ಮ ಅರ್ಜಿಯನ್ನು ಹಿಂಪಡೆದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಾವಿನ ದವಡೆಯಿಂದ ಮಾಜಿ ಶಾಸಕನ ರಕ್ಷಣೆ: ಸತತ 9 ಬಾರಿ CPR ನೀಡಿ ಜೀವ ಉಳಿಸಿದ ವೈದ್ಯೆ – Kannada News | Heroic Doctor Revives Ex MLA from Heart Attack with 9 CPR Sessions

ಹನುಮಕೊಂಡ, ಜು.27: ಹೃದಯಾಘಾತದಿಂದ (Heart Attack) ಜೀವನ್ಮರಣ ಹೋರಾಟ ನಡೆಸುತ್ತಿದ್ದ ಹನುಮಕೊಂಡದ ಬಿಆರ್‌ಎಸ್ (BRS) ಹಿರಿಯ ನಾಯಕ, ನರಸಂಪೇಟೆಯ ಮಾಜಿ ಶಾಸಕ ಪೆದ್ದಿ ಸುದರ್ಶನ್ ರೆಡ್ಡಿ ಅವರಿಗೆ ಸತತ 9 ಬಾರಿ ಸಿಪಿಆರ್ (CPR) ನೀಡುವ ಮೂಲಕ ವೈದ್ಯೆಯೊಬ್ಬರು ಮರುಜೀವ ನೀಡಿದ್ದಾರೆ.

ಭಾನುವಾರ ಬೆಳಿಗ್ಗೆ ತೀವ್ರ ಹೃದಯಾಘಾತಕ್ಕೊಳಗಾಗಿ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿದ್ದ ಸುದರ್ಶನ್ ರೆಡ್ಡಿ ಅವರನ್ನು ರೋಹಿಣಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಆದರೆ ಆಸ್ಪತ್ರೆಯ ಕಾರ್ಡಿಯಾಲಜಿಸ್ಟ್ ಡಾ. ಸಿ. ಮಮತಾ ರೆಡ್ಡಿ ತಮ್ಮ ಸತತ ಪ್ರಯತ್ನದಿಂದ, ಪಟ್ಟುಬಿಡದೆ ಸತತ 9 ಬಾರಿ CPR ನೀಡಿ ಅವರ ಹೃದಯ ಬಡಿತ ಮರಳಿ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಡಾ. ಮಮತಾ ರೆಡ್ಡಿ ಅವರು ಹೀಗೆ ಕ್ಲಿಷ್ಟಕರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಸಾವಿನ ದವಡೆಯಿಂದ ಪಾರು ಮಾಡಿರುವುದು ಇದೇ ಮೊದಲಲ್ಲ. ಬಿಜೆಪಿ ರಾಜ್ಯ ನಾಯಕ, ವಾರಂಗಲ್ ಪಶ್ಚಿಮದ ಮಾಜಿ ಶಾಸಕ ಮಾರ್ತಿನೇನಿ ಧರ್ಮಾರಾವ್ ಅವರಿಗೂ ಹೃದಯಾಘಾತವಾಗಿ ಬಡಿತ ನಿಂತಾಗ, ಡಾ. ಮಮತಾ ರೆಡ್ಡಿ ಅವರು ಏಕಪ್ರಕಾರವಾಗಿ 11 ಬಾರಿ CPR ನೀಡಿ ಜೀವ ರಕ್ಷಿಸಿದ್ದರು. ವೈದ್ಯೆಯ ಈ ಅದ್ಭುತ ಶ್ರಮ ಮತ್ತು ಸಮಯ ಪ್ರಜ್ಞೆಗೆ ಮಾಜಿ ಸಚಿವ ಹರೀಶ್ ರಾವ್ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಬಿ-ಖಾತಾ ಆಸ್ತಿ ಮಾಲೀಕರಿಗೆ ಜ್ಯಾಕ್‌ಪಾಟ್: ‘ಎ-ಖಾತಾ’ ಪರಿವರ್ತನಾ ಶುಲ್ಕ ಭಾರಿ ಕಡಿತ

ಸಿಪಿಆರ್ ಎಂಬುದು ಹೃದಯ ಬಡಿತ ಅಥವಾ ಉಸಿರಾಟ ಸಂಪೂರ್ಣ ನಿಂತುಹೋದಾಗ ಜೀವ ರಕ್ಷಿಸಲು ಮಾಡುವ ಅತ್ಯಂತ ಪ್ರಮುಖ ತುರ್ತು ಚಿಕಿತ್ಸಾ ವಿಧಾನ. ಎದೆಯ ಭಾಗದ ಮೇಲೆ ನಿರ್ದಿಷ್ಟ ವೇಗ ಮತ್ತು ಒತ್ತಡದೊಂದಿಗೆ ಕೈಗಳಿಂದ ಒತ್ತುವುದು ಹಾಗೂ ಅಗತ್ಯವಿದ್ದರೆ ಕೃತಕ ಉಸಿರಾಟ ನೀಡುವುದು. ಹೃದಯದ ಬಡಿತ ನಿಂತಿದ್ದರೂ, ಈ ಪ್ರಕ್ರಿಯೆಯಿಂದ ಮೆದುಳು ಮತ್ತು ಹೃದಯಕ್ಕೆ ಕನಿಷ್ಠ ಮಟ್ಟದ ರಕ್ತಸಂಚಾರ ಮುಂದುವರಿಯುತ್ತದೆ. ಇದರಿಂದ ಮೆದುಳಿನ ಕೋಶಗಳು ಶಾಶ್ವತವಾಗಿ ಹಾನಿಗೊಳಗಾಗುವುದು ತಪ್ಪುತ್ತದೆ ಎಂದು ಮಮತಾ ರೆಡ್ಡಿ ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:35 pm, Mon, 27 July 26

Source link