All posts by nagaraj11081993

ಸುಳ್ಳು ಕೇಸ್​​, ಸುದೀರ್ಘ ಹೋರಾಟ: ಸರ್ಕಾರಿ ನೌಕರಿಯಲ್ಲಿದ್ದ ಮಹಿಳೆಗೆ ಬಾಕಿ ಭತ್ಯೆ ಸಿಕ್ಕಿದ್ದು ಸತ್ತು 3 ವರ್ಷಗಳ ಬಳಿಕ! – Kannada News | Mysuru Govt Officer Malinis 200 Bribery Case: Justice After 17 Years; Pending Salary Released 3 Years After Her Death

ಮೈಸೂರು, ಫೆಬ್ರವರಿ 16: ತಮ್ಮದಲ್ಲದ ತಪ್ಪಿಗೆ, ತಾವು ಮಾಡದ 200 ರೂ. ಲಂಚದ ಆರೋಪದಿಂದ 17 ವರ್ಷಗಳ ಕಾಲ ನ್ಯಾಯಕ್ಕಾಗಿ ಹೋರಾಡಿದ ಮೈಸೂರಿನ ಪ್ರಾಮಾಣಿಕ ಮಹಿಳಾ ಸರ್ಕಾರಿ ಅಧಿಕಾರಿ ಮಾಲಿನಿ ಪ್ರಕರಣ ಇದೀಗ ಮತ್ತೆ ಚರ್ಚೆಗೆ ಬಂದಿದೆ. ಲೋಕಾಯುಕ್ತ ಮಾಡಿದ ಲಂಚದ ಆರೋಪದಿಂದಾಗಿ ಅಮಾನತು, ಉದ್ಯೋಗ ಕಳೆದುಕೊಳ್ಳುವಿಕೆ, ಆರೋಗ್ಯ ಸಮಸ್ಯೆಗಳು ಸೇರಿದಂತೆ ಹಲವು ಸಂಕಷ್ಟಗಳನ್ನು ಅನುಭವಿಸಿದ ಬಳಿಕ ಹಲವು ವರ್ಷಗಳ ನಂತರ ನ್ಯಾಯಾಲಯದಿಂದ ನಿರಪರಾಧಿ ಎಂದು ಘೋಷಿಸಲ್ಪಟ್ಟರೂ ಅವರ ಬದುಕಿಗೆ ಆಗಿದ್ದ ಗಂಭೀರ ಹಾನಿಗೆ ಮಾತ್ರ ನ್ಯಾಯ ಸಿಗಲೇ ಇಲ್ಲ. ಮಾಲಿನಿ ಮೃತಪಟ್ಟು ಮೂರು ವರ್ಷಗಳ ನಂತರ ಸರ್ಕಾರದಿಂದ ಬಾಕಿ ಹಣ ಬಿಡುಗಡೆ ಮಾಡಿರುವುದು ಪ್ರಕರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ.

200 ರೂ. ಆರೋಪದಿಂದ ಆರಂಭವಾದ ಸಂಕಷ್ಟ

ಮೈಸೂರಿನ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಾಲಿನಿ ವಿರುದ್ಧ 200 ರೂಪಾಯಿ ಲಂಚದ ಆರೋಪ ಕೇಳಿಬಂದಿತ್ತು. ಅಲ್ಪಸಂಖ್ಯಾತರ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ನಿಯಮಾನುಸಾರ ಅರ್ಜಿ ತಿರಸ್ಕರಿಸಿದ್ದ ಹಿನ್ನೆಲೆ, ಬಳಿಕ ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಈ ಪ್ರಕರಣ ತೀವ್ರತೆ ಪಡೆದಿತ್ತು. ಲಂಚ ಸ್ವೀಕರಿಸಿದ್ದ ವ್ಯಕ್ತಿ ಬೇರೆ ಆಗಿದ್ದರೂ, ತನಿಖೆಯಲ್ಲಿ ಮಾಲಿನಿ ಅವರನ್ನು ಸಹ ಆರೋಪಿಯಾಗಿ ಸೇರಿಸಲಾಗಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಇದನ್ನೂ ಓದಿ: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌

ಲಂಚ ಪ್ರಕರಣದಿಂದಾಗಿ ಅಮಾನತು, ಸೇವೆಯಿಂದ ವಜಾ

ಪ್ರಕರಣದ ನಂತರ ಮಾಲಿನಿ ಅಮಾನತುಗೊಂಡು, ಪದೋನ್ನತಿ ಹಾಗೂ ವೇತನ ಹೆಚ್ಚಳ ನಿಂತುಹೋಯಿತು. 2007ರಲ್ಲಿ ಸರ್ಕಾರಿ ಸೇವೆಯಿಂದಲೇ ವಜಾಗೊಂಡರು. ಈ ನಡುವೆ ಕುಟುಂಬ ಆರ್ಥಿಕ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಯಿತು.

ಸುದೀರ್ಘ ಕಾನೂನು ಹೋರಾಟ

ಸ್ಥಳೀಯ ನ್ಯಾಯಾಲಯ ಅವರನ್ನು ಅಪರಾಧಿ ಎಂದೇ ಘೋಷಿಸಿ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ಮಾಲಿನಿ ಹಾಗೂ ಅವರ ಪತಿ ದೇವ ಪ್ರಕಾಶ್, ಹಲವು ವರ್ಷಗಳ ಕಾಲ ನ್ಯಾಯಕ್ಕಾಗಿ ಹೋರಾಟ ನಡೆಸಿದರು. ಪ್ರಕರಣದಲ್ಲಿ 300ಕ್ಕೂ ಹೆಚ್ಚು ವಿಚಾರಣೆಗಳು ನಡೆದಿದ್ದು, ದಶಕಕ್ಕಿಂತ ಹೆಚ್ಚು ಕಾಲ ಕಾನೂನು ಪ್ರಕ್ರಿಯೆ ಮುಂದುವರಿಯಿತು.

ಹೈಕೋರ್ಟ್‌ನಲ್ಲಿ ನಿರಪರಾಧಿ ಎಂದು ತೀರ್ಪು!

ಕೊನೆಗೆ ಕರ್ನಾಟಕ ಹೈಕೋರ್ಟ್ 2012ರಲ್ಲಿ ನೀಡಿದ ತೀರ್ಪಿನಲ್ಲಿ, ಮಾಲಿನಿ ವಿರುದ್ಧ ಲಂಚ ಪಡೆದ ಅಥವಾ ಕೇಳಿದ್ದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿ ಅವರನ್ನು ನಿರಪರಾಧಿ ಎಂದು ಘೋಷಿಸಿತು. ಈ ತೀರ್ಪಿನ ಬಳಿಕ ಅವರ ಉದ್ಯೋಗ, ಬಡ್ತಿ ಹಾಗೂ ಸಂಬಳ ಸೇರಿದಂತೆ ಹಲವಾರು ಹಕ್ಕುಗಳನ್ನು ಮರುಸ್ಥಾಪಿಸುವಂತೆ ಆದೇಶಿಸಲಾಗಿತ್ತು.

ಆರೋಗ್ಯ ಹದಗೆಟ್ಟು ಮರಣ

ಪ್ರಕರಣದಿಂದ ಉಂಟಾದ ಮಾನಸಿಕ ಒತ್ತಡದಿಂದ ಮಾಲಿನಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದರು. ಕಿಡ್ನಿ ಸಮಸ್ಯೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಅನೇಕ ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು. ಬಳಿಕ ಅವರು 2023ರಲ್ಲಿ ನಿಧನರಾದರು.

ಸಾವಿನ ವರೆಗೂ ಬಾರದ ಬಾಕಿ ಹಣ!

ನ್ಯಾಯಾಲಯದ ತೀರ್ಪಿನ ನಂತರವೂ ಬಾಕಿ ಉಳಿದಿದ್ದ ಸಂಬಳ ಹಾಗೂ ಭತ್ಯೆಗಳನ್ನು ಸರ್ಕಾರ ವರ್ಷಗಳ ನಂತರ, ಅವರ ಸಾವಿನ ಬಳಿಕ ಬಿಡುಗಡೆ ಮಾಡಿದೆ. ಇನ್ನೂ ಕೆಲವು ಭತ್ಯೆಗಳು ಬಾಕಿಯಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. ಈ ಪ್ರಕರಣವು ಸುಳ್ಳು ಆರೋಪ ಮತ್ತು ದೀರ್ಘ ಕಾನೂನು ಪ್ರಕ್ರಿಯೆ ಸರ್ಕಾರಿ ನೌಕರರ ಜೀವನದ ಮೇಲೆ ಯಾವ ರೀತಿಯ ಪರಿಣಾಮ ಉಂಟು ಮಾಡಬಹುದು ಎಂಬ ಚರ್ಚೆ ಹುಟ್ಟುಹಾಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:08 pm, Mon, 16 February 26

Source link

Ranji Trophy Semifinal: ಸ್ಮರಣ್ ಶತಕ; ಬೃಹತ್​ ಮೊತ್ತದತ್ತ ಕರ್ನಾಟಕ – Kannada News | Ranji Semifinal 2026:Smaran Ravichandran Century Lead Karnataka’s Mammoth Total

ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ ಬೃಹತ್ ಮೊತ್ತ ಕಲೆಹಾಕಿದೆ. ಮೊದಲ ದಿನ ತಂಡದ ಪರ ಎರಡು ಶತಕಗಳು ದಾಖಲಾದರೆ, ಎರಡನೇ ದಿನವೂ ಎರಡು ಶತಕಗಳು ಸಿಡಿದವು. ಮೊದಲ ದಿನ ಕೆಎಲ್ ರಾಹುಲ್ 141 ರನ್ ಬಾರಿಸಿದರೆ, ನಾಯಕ ದೇವದತ್ ಪಡಿಕ್ಕಲ್ ಶತಕ ಬಾರಿಸಿ ಅಜೇಯರಾಗಿ ಉಳಿದಿದ್ದರು. ಎರಡನೇ ದಿನ ಬ್ಯಾಟಿಂಗ್‌ ಮುಂದುವರೆಸಿದ ಪಡಿಕ್ಕಲ್ ದಾಖಲೆಯ ದ್ವಿಶತಕ ಬಾರಿಸಿದರೆ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸ್ಮರಣ್ ರವಿಚಂದ್ರನ್ ಕೂಡ ಸ್ಮರಣೀಯ ಶತಕ ಸಿಡಿಸಿದರು.

ಎರಡನೇ ದಿನದಾಟದಲ್ಲಿ ಕರುಣ್ ನಾಯರ್ ಔಟಾದ ಬಳಿಕ ಬ್ಯಾಟಿಂಗ್​ಗೆ ಬಂದ ಸ್ಮರಣ್, ನಾಯಕ ದೇವದತ್ ಪಡಿಕ್ಕಲ್ ಜೊತೆ ಸೇರಿ ಉತ್ತಮ ಜೊತೆಯಾಟ ಕಟ್ಟಿದರು. ಇವರಿಬ್ಬರು 59 ರನ್​ಗಳ ಜೊತೆಯಾಟ ಕಟ್ಟಿದರು. ನಾಯಕ ಪಡಿಕ್ಕಲ್ ಔಟಾದ ಬಳಿಕವೂ ತಮ್ಮ ತಾಳ್ಮೆಯ ಆಟವನ್ನು ಮುಂದುವರೆಸಿದ ಸ್ಮರಣ್ 85 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಆ ಬಳಿಕ 150 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದ ಸ್ಮರಣ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 5ನೇ ಶತಕವನ್ನು ದಾಖಲಿಸಿದರು.

ಇದು ಈ ಆವೃತ್ತಿಯಲ್ಲಿ ಸ್ಮರಣ್ ಅವರ ಮೂರನೇ ಶತಕವಾಗಿದ್ದು, ಎರಡು ದ್ವಿಶತಕಗಳನ್ನು ಬಾರಿಸಿದ್ದಾರೆ. ಸ್ಮರಣ್ ಅವರ ಈ ಶತಕದಿಂದಾಗಿ ಕರ್ನಾಟಕ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 600 ರನ್​ಗಳ ಗಡಿ ದಾಟಿದ್ದು, ಪಂದ್ಯದ ಮೇಲೆ ಹಿಡಿತ ಸಾಧಿಸಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ಕರ್ನಾಟಕ ತಂಡ ಎರಡನೇ ದಿನದಾಟದ ಟೀ ವಿರಾಮದ ವೇಳೆಗೆ 6 ವಿಕೆಟ್​ಗಳನ್ನು ಕಳೆದುಕೊಂಡು 661 ರನ್ ಕಲೆಹಾಕಿದೆ. ಸ್ಮರಣ್ 104 ರನ್​ಗಳೊಂದಿಗೆ ಬ್ಯಾಟಿಂಗ್‌ ಮುಂದುವರೆಸಿದ್ದಾರೆ.

Source link

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ವಿದೇಶಿಗನ ಕೊಲೆ ಕೇಸ್: ಮೂವರಿಗೆ ಗಲ್ಲು ಶಿಕ್ಷೆ – Kannada News | Gangavathi Court Orders Death Penalty Sentence for three men in Israel woman assault And US Tourist Murder Case

ಕೊಪ್ಪಳ, (ಫೆಬ್ರವರಿ 16): ಹಂಪಿ (Hampi) ಬಳಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿದೇಶಿ ಪ್ರವಾಸಿಗನ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಸ್ರೇಲ್ ಮಹಿಳೆ (Israel woman)ಮೇಲಿನ ಅತ್ಯಾಚಾರ ಮತ್ತು ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣ ಸಂಬಂಧ ಗಂಗಾವತಿ ನ್ಯಾಯಾಲಯವು (Gangavathi Court), ಇದೇ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷಿ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು.

ಸಾಣಾಪೂರ ಬಳಿ ನಡೆದಿದ್ದ ಘೋರ ಕೃತ್ಯ

2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ಈ ಪೈಶಾಚಿಕ ಕೃತ್ಯ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರವೆಸಗಿದ್ದರು. ಈ ಘಟನೆಯಲ್ಲಿ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಕರಿನೆರಳು ಬಿದ್ದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅತ್ಯಂತ ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಸತ್ರ ನ್ಯಾಯಾಲಯವು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಈ ಮೂವರೂ ದೋಷಿಗಳು ಎಂದು ಆದೇಶಿಸಿತ್ತು.

Source link

ಬೈಕ್​ನಲ್ಲಿ ಸ್ಟಂಟ್ ಮಾಡಿದ ಪ್ರೇಮಿಯಿಂದ ಮಹಿಳೆಯ ಗುಪ್ತಾಂಗಕ್ಕೆ ಗಾಯ! – Kannada News | Mumbai Woman Injured In Private Parts After her boyfriends Dhoom Style bike Stunt Goes Wrong

ನವದೆಹಲಿ, ಫೆಬ್ರವರಿ 16: ಯುವಕ-ಯುವತಿಯರಿಬ್ಬರ ರಾತ್ರಿಯ ಔಟಿಂಗ್ ಸಂಕಷ್ಟ ತಂದೊಡ್ಡಿದೆ. ಬೈಕ್​ನಲ್ಲಿ ಬಾಯ್​​ಫ್ರೆಂಡ್ (Boyfriend) ಹಿಂದೆ ಕುಳಿತು ಹೋಗುವಾಗ ಸ್ವಲ್ಪ ಸಮಯದವರೆಗೆ ಇಬ್ಬರೂ ಎಂಜಾಯ್ ಮಾಡುತ್ತಿದ್ದರು. ಅಲ್ಲಿಯವರೆಗೂ ಎಲ್ಲವೂ ಸರಿಯಾಗೇ ಇತ್ತು. ಆಕೆ ಬಾಯ್​​ಫ್ರೆಂಡ್​​ನನ್ನು ಹಿಡಿದು ಕುಳಿತಿದ್ದಾಗ ಆತ ಆಕೆಗೆ ತನ್ನ ಸ್ಟಂಟ್ ತೋರಿಸಲು ಧೂಮ್ ಸಿನಿಮಾ ಸ್ಟೈಲ್​ನಲ್ಲಿ ವೀಲಿಂಗ್ ಮಾಡಿದ್ದಾನೆ. ಇದರ ಸುಳಿವಿಲ್ಲದ ಆಕೆ ಹಿಂದಿನ ಸೀಟಿನಿಂದ ಕೆಳಗೆ ಜಾರಿದಳು. ಆಗ ಹಿಂದಿನ ಚಕ್ರ ಮತ್ತು ಸೀಟಿನ ನಡುವಿನ ಜಾಗದಲ್ಲಿ ಆಕೆ ಸಿಲುಕಿಕೊಂಡಳು. ಇದರಿಂದ ಆಕೆಯ ಗುಪ್ತಾಂಗಕ್ಕೆ ಗಾಯವಾಗಿದೆ.

ಆ ಬೈಕ್ ಹಿಂದೆ ಹೋಗುತ್ತಿದ್ದ ಬೇರೆ ಸವಾರರು ಇವರ ಈ ಸಾಹಸವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ. ದಿಢೀರನೆ ಆತ ವೀಲಿಂಗ್ ಮಾಡಿದ್ದರಿಂದ ಆಕೆ ಬ್ಯಾಲೆನ್ಸ್ ತಪ್ಪಿದಳು. ಆಕೆಯ ಕಾಲುಗಳು ಮತ್ತು ಆಕೆಯ ದೇಹದ ಅರ್ಧದಷ್ಟು ಭಾಗವು ಚಕ್ರದ ನಡವಿನ ಜಾಗದಲ್ಲಿ ಸಿಲುಕಿಕೊಂಡಿದ್ದರಿಂದ, ಆಕೆಯ ಖಾಸಗಿ ಜಾಗಕ್ಕೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ

ಇದಾದ ನಂತರ ಆ ಯುವಕನಿಗೆ ತಾನು ಮಾಡಿದ ತಪ್ಪಿನ ಅರಿವಾಯಿತು. ಆಕೆಯನ್ನು ಕಾಪಾಡಲು ಅವನು ತಕ್ಷಣ ತನ್ನ ಬೈಕನ್ನು ನಿಲ್ಲಿಸಿದನು. ಆ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Viral: ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ; ವಿಚಿತ್ರ ಕಾರಣ ಕೊಟ್ಟು 80,000 ರೂ ಬಾಡಿಗೆ ಕೇಳಿದ ಮನೆ ಮಾಲೀಕ – Kannada News | Bengaluru: Woman shocked after hearing strange reason from Bengaluru homeowner

ಬೆಂಗಳೂರು, ಫೆಬ್ರವರಿ 16: ಬೆಂಗಳೂರಿನಲ್ಲಿ (Bengaluru) ಕಡಿಮೆ ಬಾಡಿಗೆಯುಳ್ಳ ಮನೆ ಸಿಗುವುದೇ ಕಷ್ಟ. ಹೌದು, ಉದ್ಯೋಗ ಗಿಟ್ಟಿಸಿಕೊಂಡು ಬಾಡಿಗೆ ಮನೆ ಮಾಡಿ ನೆಮ್ಮದಿಯಿಂದ ಇರೋಣ ಅಂದ್ರೆ ಮನೆ ಮಾಲೀಕರ ಡಿಮ್ಯಾಂಡ್ ಹೆಚ್ಚಾಗಿದೆ. ನೀವೇನಾದ್ರೂ ಬೆಂಗಳೂರಿನಲ್ಲಿ ಮನೆ ಹುಡುಕುತ್ತಿದ್ರೆ ಮನೆ ಮಾಲೀಕರ ಡಿಮ್ಯಾಂಡ್ ನೋಡಿಯೇ ತಲೆ ಗ್ರಿರ್ ಎನ್ನುತ್ತೆ. ಇದೀಗ ಬೆಂಗಳೂರಿನ ಮನೆ ಮಾಲೀಕರು ಆಸೆ ಬುರುಕರು ಎನ್ನುವುದಕ್ಕೆ ಈ ಪೋಸ್ಟ್‌ಯೇ ಸಾಕ್ಷಿ. ಬೆಂಗಳೂರಿನಲ್ಲಿ ಬಾಡಿಗೆ ಮನೆ ನೋಡಲು ಹೋದ ಮಹಿಳೆಗೆ ಮನೆ ಮಾಲೀಕರು ನೈಸರ್ಗಿಕ ಬೆಳಕು ಮತ್ತು ಬಿಸಿಲು ಬರುತ್ತದೆ ಎನ್ನುವ ಕಾರಣ ನೀಡಿ 80,000 ರೂಪಾಯಿ ಬಾಡಿಗೆ ಎಂದು ಕೇಳಿದ್ದಾರೆ. ಮನೆ ಮಾಲೀಕರು ಹೇಳಿದ್ದನ್ನು ನೋಡಿ ಶಾಕ್ ಆದ ಮಹಿಳೆಯು ಪೋಸ್ಟ್ ಮಾಡಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನು (Anu) ಹೆಸರಿನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್‌ನಲ್ಲಿ ಬೆಂಗಳೂರು ಬಾಡಿಗೆ ನನಗೆ ಅಚ್ಚರಿ ಮೂಡಿಸುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ. ಮೇಡಂ, ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ ಹೀಗಾಗಿ ಅದರ ಬಾಡಿಗೆ 80,000 ರೂ ಅಂದರೆ ಏನರ್ಥ ಎಂದು ಪ್ರಶ್ನೆ ಮಾಡಿದ್ದಾರೆ.

ವೈರಲ್‌ ಪೋಸ್ಟ್‌ ಇಲ್ಲಿದೆ

ಇದನ್ನೂ ಓದಿ: ತಿಂಗಳ ಸಂಬಳ 3 ಲಕ್ಷ ರೂ, ಖರ್ಚು ಆಗೋದು 2 ಲಕ್ಷಕ್ಕೂ ಹೆಚ್ಚು; ತನ್ನ ಖರ್ಚು ವೆಚ್ಚಗಳನ್ನು ವಿವರಿಸಿದ ಇಂಜಿನಿಯರ್

ಫೆಬ್ರವರಿ 13 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ಐದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪ್ರಮುಖ ನಗರಗಳಲ್ಲಿಯೂ ಇದೇ ಪರಿಸ್ಥಿತಿ. ಬಾಡಿಗೆ ಹೆಚ್ಚಿಸಲು ಅವರು ಹೊಸ ನವೀನ ಮಾರ್ಗಗಳನ್ನು ಕಂಡುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಕೆಲವರು ಇಲ್ಲಿ ಬಾಲ್ಕನಿ ಇದೆ, ಬಾಡಿಗೆ 1 ಲಕ್ಷ ಅಂತ ಹೇಳ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಬಾಡಿಗೆಯಲ್ಲಿ ವಿಟಮಿನ್ ಡಿ ಕೂಡ ಸೇರಿದೆಯಂತೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವೈರಲ್ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ – Kannada News | Vijay Deverakonda and Rashmika Mandanna Wedding: Official Invite Leaked, Date Revealed!

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ವಿವಾಹವಾಗಲಿದ್ದಾರೆ . ಈ ವಿಷಯ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ಮದುವೆಗೆ ಅತಿಥಿಗಳನ್ನು ಆಹ್ವಾನಿಸುತ್ತಿದ್ದಾರೆ. ಈ ರೀತಿ ಆಹ್ವಾನ ನೀಡಿದವರ ಪೈಕಿ ಒಬ್ಬರು ಮದುವೆ ಆಮಂತ್ರಣ ಪತ್ರವನ್ನು ವೈರಲ್ ಮಾಡಿದ್ದಾರೆ. ವಿವಾಹ ಆಮಂತ್ರಣ ಬಾಕ್ಸ್ ಅಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಎಂದು ಬರೆದಿದೆ. ಆಮಂತ್ರಣ ಪತ್ರದಲ್ಲಿ ಮದುವೆ ಫೆಬ್ರವರಿ 26ರಂದು ನಡೆಯಲಿದೆ ಎಂದು ಬರೆಯಲಾಗಿದೆ.

ಹೈದರಾಬಾದ್​ ಅಲ್ಲಿರುವ ವಿಜಯ್ ಅಭಿಮಾನಿಗಳಿಗೋಸ್ಕರ ವಿಶೇಷ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೌದು, ಮಾರ್ಚ್ 4ರಂದು ಹೈದರಾಬಾದ್​​ನ ತಾಜ್ ಕೃಷ್ಣಾದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಮದುವೆಗೂ ಮುನ್ನ ಮ್ಯಾಚಿಂಗ್ ಡ್ರೆಸ್ ಹಾಕಿ ಮುಂಬೈನಿಂದ ಹಾರಿದ ವಿಜಯ್-ರಶ್ಮಿಕಾ

ಕೆಲವು ಸಮಯದಿಂದ ಪ್ರೀತಿಸುತ್ತಿದ್ದ ವಿಜಯ್ ಮತ್ತು ರಶ್ಮಿಕಾ ಈಗ ಮದುವೆಯಾಗುತ್ತಿದ್ದಾರೆ. ಅವರ ವಿವಾಹದ ಸುದ್ದಿ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡಿತ್ತು. ಇತ್ತೀಚೆಗೆ, ಅವರಿಬ್ಬರ ನಿಶ್ಚಿತಾರ್ಥ ನಡೆದಿದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಈ ವಿಷಯದಲ್ಲಿ ಇಲ್ಲಿಯವರೆಗೆ ಯಾವುದೇ ಅಧಿಕೃತ ಘೋಷಣೆ ಬಂದಿರಲಿಲ್ಲ. ಈಗ ಅವರ ಆಮಂತ್ರಣ ಪತ್ರದಿಂದ ಎಲ್ಲವೂ ಅಧಿಕೃತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs PAK: ಟಿವಿ ಹೊಡೆದು ಹಾಕುವುದಕ್ಕೆ ಹೊಸ ಮಾರ್ಗ ಕಂಡುಕೊಂಡ ಪಾಕ್ ಫ್ಯಾನ್ಸ್ – Kannada News | T20 World Cup: India’s Unbeaten Run Continues, Pakistan Crushed; Fans’ Rage Explodes

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಲಿಷ್ಠ ಭಾರತ ತಂಡ, ಬದ್ಧವೈರಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ 61 ರನ್‌ಗಳಿಂದ ಸೋಲಿಸಿ ತನ್ನ ಅಜೇಯ ಓಟವನ್ನು ಮುಂದುವರೆಸಿತು. ಈ ಗೆಲುವಿನೊಂದಿಗೆ ಸೂಪರ್ 8 ಸುತ್ತಿಗೆ ಟಿಕೆಟ್ ಪಡೆದುಕೊಂಡಿತು. ಇತ್ತ ಈ ಪಂದ್ಯದಲ್ಲಾದರೂ ಭಾರತವನ್ನು ಸೋಲಿಸಿ ಅಭಿಮಾನಿಗಳ ಮನಸಲ್ಲಿ ಹೀರೋಗಳಾಗಬೇಕು ಎಂದುಕೊಂಡಿದ್ದ ಪಾಕ್ ಆಟಗಾರರು ಹೀನಾಯ ಸೋಲಿನೊಂದಿಗೆ ಮತ್ತೆ ಕಳನಾಯಕರಾಗಿದ್ದಾರೆ.

ಪ್ರತಿ ಬಾರಿಯಂತೆ ಈ ಬಾರಿಯೂ ಪಾಕ್ ಅಭಿಮಾನಿಗಳ ಅಸಹನೆಯ ಕಟ್ಟೆ ಒಡೆದಿದೆ. ಭಾರತದ ವಿರುದ್ಧ ಪಾಕಿಸ್ತಾನ ಸೋತಾಗಲೆಲ್ಲ ಅಭಿಮಾನಿಗಳು ತಮ್ಮ ಕೋಪವನ್ನು ಟಿವಿಗಳ ಮೇಲೆ ತೋರಿಸುವುದು ಹೊಸದೇನೆಲ್ಲ. ಪಾಕ್ ಅಭಿಮಾನಿಗಳ ಇಂತಹ ಕೃತ್ಯವನ್ನು ಬಹಳ ವರ್ಷಗಳಿಂದಲೇ ನೋಡುತ್ತಿದ್ದೇವೆ. ಇದೀಗ ಅಭಿಮಾನಿಗಳು ಟಿವಿಗಳನ್ನು ಹೊಡೆದು ಹಾಕುವುದಕ್ಕೆ ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಅದೆನೆಂದರೆ ತಾವು ಧರಿಸಿದ್ದ ಶೂಗಳನ್ನು ಕಳಚಿ ಟಿವಿಗಳ ಮೇಲೆ ಎಸೆದು, ಶೂಗಳಿಂದ ಹಾಗೂ ಇಟ್ಟಿಗೆಗಳಿಂದ ಟಿವಿಯನ್ನು ಹೊಡೆದು ಹಾಕುವಷ್ಟರ ಮಟ್ಟಿಗೆ ಪಾಕ್ ಅಭಿಮಾನಿಗಳು ತಮ್ಮ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಿದ್ದಾರೆ.

ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 175 ರನ್ ಕಲೆಹಾಕಿತು. ಟಿ20 ವಿಶ್ವಕಪ್​ ಇತಿಹಾಸದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕಲೆಹಾಕಿದ ಅತ್ಯಧಿಕ ಸ್ಕೋರ್ ಇದಾಗಿತ್ತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಪಾಕಿಸ್ತಾನ ನಿರೀಕ್ಷೆಯಂತೆ ಭಾರತದ ಮಾರಕ ದಾಳಿಗೆ ತತ್ತಿರಿಸಿ ಬರೋಬ್ಬರಿ 61 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೈವದ ಗಗ್ಗರ ಕಟ್ಟಲು ಕಾಲುಗಳೇ ಇಲ್ಲ: ದೈವ ನರ್ತಕನಿಗೆ ಆಸರೆಯಾದ 2.10 ಲಕ್ಷ ರೂ. ಕೃತಕ ಕಾಲು – Kannada News | Mangalore Rotary Gives Dhaiva Nartaka Babu a Second Chance: Prosthetic Leg Changes Life

ಮಂಗಳೂರು, ಫೆ.16: ತುಳುನಾಡಿನ ನಂಬಿಕೆಯ ಪ್ರಕಾರ, ದೈವಗಳು ದೇವರಿಗಿಂತ ಭಿನ್ನ. ದೇವರು “ಕಣ್ಣಿಗೆ ಕಾಣದ ಶಕ್ತಿ”ಯಾದರೆ, ದೈವಗಳು “ನೆಲದ ಮೇಲೆ ಸಂಚರಿಸುವ, ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿಗಳು”. ದೈವಗಳನ್ನು ‘ನಂಬಿದವರ ಕೈ ಬಿಡದ ಶಕ್ತಿಗಳು’ ಎಂದು ಕರೆಯಲಾಗುತ್ತದೆ. ದೈವಗಳ ನೇಮೋತ್ಸವದಂದು ಗಗ್ಗರ ಸೇವೆ ಮೊದಲು ನಡೆಯುತ್ತದೆ. ಈ ವೇಳೆ ದೈವ ನರ್ತಕರು ಕಾಲಿಗೆ ಗಗ್ಗರ ಕಟ್ಟುತ್ತಾರೆ. ಆದರೆ ಇಲ್ಲೊಬ್ಬ ನರ್ತಕರಿಗೆ ಅದನ್ನು ಕಟ್ಟಲು ಕಾಲುಗಳೇ ಇಲ್ಲ. ಕಾಸರಗೋಡು ತಾಲೂಕಿನ ಪೆರ್ಮುದೆ ಗ್ರಾಮದ ಹಿರಿಯ ದೈವ ನರ್ತಕ ಬಾಬು (53 ವರ್ಷ) ಅವರಿಗೆ ಮಂಗಳೂರು ಸೆಂಟ್ರಲ್ ರೋಟರಿ ಸಂಸ್ಥೆಯು ಮಾನವೀಯತೆಯ ನೆಲೆಯಲ್ಲಿ ಹೊಸ ಬದುಕು ನೀಡಿದೆ. ಬಾಬು ಅವರು ದೀರ್ಘಕಾಲದಿಂದ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ, ಅತಿಯಾದ ಮಧುಮೇಹದಿಂದಾಗಿ ಅವರ ಎಡಗಾಲಿಗೆ ‘ಗ್ಯಾಂಗ್ರೀನ್’ ರೋಗ ತಗುಲಿತ್ತು. ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ವೈದ್ಯರು ಅವರ ಕಾಲನ್ನೇ ಕತ್ತರಿಸಬೇಕಾಯಿತು.

ಕಾಲು ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದ ಬಾಬು ಅವರು ರೋಟರಿ ಮಾಜಿ ಜಿಲ್ಲಾ ಗವರ್ನರ್ ಮತ್ತು ಖ್ಯಾತ ವೈದ್ಯರಾದ ಡಾ. ದೇವದಾಸ್ ರೈ ಅವರನ್ನು ಭೇಟಿ ಮಾಡಿ ಸಹಾಯ ಕೋರಿದ್ದರು. ಬಾಬು ಅವರ ಕರುಣಾಜನಕ ಸ್ಥಿತಿಯನ್ನು ಮನಗಂಡ ಡಾ. ರೈ ಅವರು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ಸಮಾಜ ಸೇವಾ ಯೋಜನೆಯಡಿ ಸುಮಾರು 2.10 ಲಕ್ಷ ರೂಪಾಯಿ ಮೌಲ್ಯದ ಕೃತಕ ಕಾಲನ್ನು ಮಂಜೂರು ಮಾಡಿಸಿದರು.

ಇದನ್ನೂ ಓದಿ: ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್​ಗೆ ಹೋಗಬಹುದು ಗೊತ್ತೇ!

ಇಲ್ಲಿದೆ ನೋಡಿ ಫೋಟೋ: 

ಇತ್ತೀಚೆಗೆ ಮಂಗಳೂರಿನ ಡಾ. ದೇವದಾಸ್ ರೈ ಅವರ ‘ಸೌರಭ್’ ಚಿಕಿತ್ಸಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಾಬು ಅವರಿಗೆ ಕೃತಕ ಕಾಲನ್ನು ಜೋಡಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ಮಾಜಿ ಅಧ್ಯಕ್ಷ ಸಂತೋಷ್ ಶೆಟ್ ಮತ್ತು ಮಾಧ್ಯಮ ಸಲಹೆಗಾರ ಎಂ.ವಿ. ಮಲ್ಯ ಉಪಸ್ಥಿತರಿದ್ದರು. ಈಗ ಬಾಬು ಅವರು ಯಾವುದೇ ಆಧಾರವಿಲ್ಲದೆ ಸುಸೂತ್ರವಾಗಿ ನಡೆದಾಡುತ್ತಿದ್ದು, ತಮಗೆ ಮರುಜೀವ ನೀಡಿದ ರೋಟರಿ ಸಂಸ್ಥೆಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್​​ನಲ್ಲಿ ಕಿಡ್ನ್ಯಾಪ್: ಸ್ಪಾ ನಡೆಸುತ್ತಿದ್ದವನನ್ನ ಹೊತ್ತೊಯ್ದು ಹಣಕ್ಕೆ ಡಿಮ್ಯಾಂಡ್ – Kannada News | Bengaluru: Man Kidnapped in Cinematic Style; 2 Lakh Demanded, Threatened with Murder

ಕಿಡ್ನ್ಯಾಪ್ ಆದ ವ್ಯಕ್ತಿ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆImage Credit source: tv9 kannada

ಆನೇಕಲ್​, ಫೆಬ್ರವರಿ 16: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪ ಥೇಟ್ ಸಿನಿಮಾ ಸ್ಟೈಲ್​​ನಲ್ಲಿ ಮೂವರು ದುಷ್ಕರ್ಮಿಗಳು ಓರ್ವ ವ್ಯಕ್ತಿಯನ್ನ ಕಿಡ್ನ್ಯಾಪ್​​​ (Kidnapp) ಮಾಡಿರುವಂತಹ ಘ​​ಟನೆ ಮಾಡಿದೆ. ಬಿಹಾರ ಮೂಲದ ಅಶೀತ್ ಜ್ಹಾ(29) ಕಿಡ್ನ್ಯಾಪ್ ಆದ ವ್ಯಕ್ತಿ. ಎರಡು ಲಕ್ಷ ರೂ ಕೊಟ್ಟರೆ ಮಾತ್ರ ಅಶೀತ್​​​ನನ್ನು ಬಿಡುವುದಾಗಿ ಹೇಳಿರುವ ಅಪಹರಣಕಾರರು, ಒಂದು ವೇಳೆ ಹಣ ಕೊಡದಿದ್ದರೆ ಕೊಲೆ ಮಾಡುವುದಾಗ ಬೆದರಿಕೆ ಹಾಕಿದ್ದಾರೆ. ಸದ್ಯ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಬಿಹಾರ ಮೂಲದ ಅಶೀತ್ ಜ್ಹಾ, ತಿರುಪಾಳ್ಯದಲ್ಲಿ ವಾಸವಾಗಿದ್ದು, ಬೇಗೂರಿನ ಅಕ್ಷಯನಗರದಲ್ಲಿ ಸ್ಪಾ ನಡೆಸುತ್ತಿದ್ದರು. ಕಳೆದ ರಾತ್ರಿ ಮ್ಯಾನೇಜರ್ ಮನುಕುಮಾರ್ ಜೊತೆ ಬೈಕ್​​ನಲ್ಲಿ ಸ್ಪಾಯಿಂದ ಮನೆ ಕಡೆಗೆ ಹೊರಟಿದ್ದರು. ಈ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಏಕಾಏಕಿ ಬೈಕ್​​ಗೆ ಡಿಕ್ಕಿ ಹೊಡೆದಿದ್ದಾರೆ.

ಬೈಕ್​​ನಿಂದ ಕೆಳಗೆ ಬೀಳುತ್ತಿದ್ದಂತೆ ಲಾಂಗ್​​ನಿಂದ ಕಾಲಿಗೆ ಹಲ್ಲೆ ಮಾಡಿ ಅಶೀತ್​​ನನ್ನ ಕಿಡ್ನ್ಯಾಪ್ ಮಾಡಿದ್ದಾರೆ. ಅಪಹರಣಕಾರರು ಸ್ಪಾ ಮಾಲೀಕ ಪ್ರಕಾಶ್ ಮಂಡಲ್​​ಗೆ ಫೋನ್​ ಮಾಡಿ ಎರಡು ಲಕ್ಷ ರೂ ಹಣ ಕೊಟ್ಟರೆ ಅಶೀತ್ ಬಿಡುವುದಾಗಿ ಹೇಳಿದ್ದಾರೆ. ಇಲ್ಲವೆಂದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.

ಇದನ್ನೂ ಓದಿ: ಮಹಿಳೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​: ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ

ಇನ್ನು ಕಿಡ್ನ್ಯಾಪ್​ ವೇಳೆ ದುಷ್ಕರ್ಮಿಗಳಿಂದ ಮನುಕುಮಾರ್ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಮನುಕುಮಾರ್​​​ನನ್ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹೇಳಿದ್ದಿಷ್ಟು 

ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್​ ಮಾತನಾಡಿದ್ದು, ಬೈಕ್​ನಲ್ಲಿ ಅಶೀತ್ ಜ್ಹಾ, ಮನುಕುಮಾರ್ ಹೋಗುತ್ತಿದ್ದರು. ರಾತ್ರಿ 9.30 ಸುಮಾರಿಗೆ ಕಿಡ್ನ್ಯಾಪ್ ನಡೆದಿದೆ. ಕಾರಿನಲ್ಲಿ ಬಂದ ಮೂವರು ಈ ಕೃತ್ಯ ಎಸಗಿದ್ದಾರೆ. ಚಾಕು ಮತ್ತೆ ಲಾಂಗ್​ನಿಂದ ಬೆದರಿಸಿ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​: ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ?

ಅಶೀತ್ ಜ್ಹಾ ಎಂಬಾತನನ್ನ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ. ಜೊತೆಯಲ್ಲಿದ್ದ ಮನುಕುಮಾರ್ ದೂರು ನೀಡಿದ್ದಾನೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ. ಎಸಿಪಿ ಸತೀಶ್ ಅವರ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ನವೀನ್, ಪಿಎಸ್ಐ ದರ್ಶನ್ ಸೇರಿದಂತೆ ಮೂರು ತಂಡ ರಚನೆ ಮಾಡಲಾಗಿದ್ದು, ಆರೋಪಿಗಳನ್ನ ಆದಷ್ಟು ಬೇಗ ಬಂಧಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ – Kannada News | Mahadevapura Road Accident: Two Year Old Child Dies, Locals Protest Against Poor Infrastructure

ಬೆಂಗಳೂರು, ಫೆಬ್ರವರಿ 16: ಮಹದೇವಪುರದ ಕಿತ್ತಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಹಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ತ್ರಿಶೂಲ್ ಸಾವನ್ನಪ್ಪಿದೆ. ರಸ್ತೆಯ ದುಸ್ಥಿತಿಯೇ ಮಗುವಿನ ಸಾವಿಗೆ ಕಾರಣವೆಂದು ಆರೋಪಿಸಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಕಾಮಗಾರಿಯ ನಿರ್ಲಕ್ಷ್ಯವನ್ನು ಖಂಡಿಸಿ, ಗ್ರಾಮಸ್ಥರು ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಕಳೆದ ಐದಾರು ವರ್ಷಗಳಿಂದಲೂ ರಸ್ತೆಯ ಸ್ಥಿತಿ ಹೀಗೇ ಇದೆ. ಇದು ಈ ರಸ್ತೆಯಲ್ಲಿ ನಡೆದ ಐದನೇ ಸಾವು ಎಂದು ದೂರಿದ್ದಾರೆ. ಸ್ಥಳಕ್ಕೆ ಯಾವುದೇ ಜನಪ್ರತಿನಿಧಿಗಳು ಅಥವಾ ಪಿಡಿಒ ಭೇಟಿ ನೀಡದಿರುವುದು ಅವರ ಸಿಟ್ಟಿಗೆ ಮತ್ತಷ್ಟು ಕಾರಣವಾಗಿದೆ. ರಸ್ತೆ ಸರಿಪಡಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link