All posts by nagaraj11081993

ಪಂಜಾಬ್ ಕಿಂಗ್ಸ್ ಔಟ್: ಶ್ರೇಯಸ್ ಅಯ್ಯರ್ ಸಹೋದರಿ ಶ್ರೇಷ್ಠಾ ಖಡಕ್ ತಿರುಗೇಟು! – Kannada News | Shreyas Iyer’s sister Shresta Iyer hits back at online abuse

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಿಂದ ಪಂಜಾಬ್ ಕಿಂಗ್ಸ್ ತಂಡವು ಕೇವಲ ಒಂದು ಅಂಕದ ಅಂತರದಿಂದ ಹೊರಬಿದ್ದಿದೆ. ಅಂದರೆ ಪ್ಲೇಆಫ್​ಗೇರಿರುವ ರಾಜಸ್ಥಾನ್ ರಾಯಲ್ಸ್ 16 ಅಂಕಗಳಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ 15 ಅಂಕಗಳೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ. ಹೀಗೆ ಪಂಜಾಬ್ ಕಿಂಗ್ಸ್​ ಹೊರಬಿದ್ದ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಅವರ ಸಹೋದರಿ ಶ್ರೇಷ್ಠಾ ಅಯ್ಯರ್​ ಆನ್​ಲೈನ್​ನಲ್ಲಿ ತೀವ್ರ ಕಿರುಕುಳ ಎದುರಿಸಿದ್ದಾರೆ. ತಮ್ಮ ವಿರುದ್ಧ ಹರಿದುಬರುತ್ತಿರುವ ಈ ಅತಿರೇಕಕ್ಕೆ ಖುದ್ದು ಶ್ರೇಷ್ಠಾ ಅಯ್ಯರ್ ಇನ್‌ಸ್ಟಾಗ್ರಾಮ್ ವಿಡಿಯೋ ಮೂಲಕ ಖಡಕ್ ಆಗಿ ಉತ್ತರ ನೀಡಿದ್ದಾರೆ.

ವಿವಾದಕ್ಕೆ ಕಾರಣವೇನು?

ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ನೀಡಲಾಗಿತ್ತು.

ಇತ್ತ ಪಂದ್ಯ ರದ್ದಾದ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಶ್ರೇಷ್ಠಾ ಅಯ್ಯರ್, “ನಾವು ಪಂಜಾಬಿಗಳು ಹೃದಯವಂತರು, ನಿಮಗೊಂದು ಪಾಯಿಂಟ್ ಬಿಟ್ಟುಕೊಟ್ಟೆವು” ಎಂದು ತಮಾಷೆಯ ರೀಲ್ಸ್​ ಒಂದನ್ನು ಶೇರ್ ಮಾಡಿದ್ದರು.

ಪ್ಲೇಆಫ್​ನಿಂದ ಪಂಜಾಬ್ ಕಿಂಗ್ಸ್ ಔಟ್:

ಮೊದಲು ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಪಂಜಾಬ್ ಕಿಂಗ್ಸ್ ತಂಡವು ದ್ವಿತೀಯ ಸುತ್ತಿನಲ್ಲಿ ಕೇವಲ 1 ಮ್ಯಾಚ್​ ಮಾತ್ರ ಗೆದ್ದಿದ್ದಾರೆ. ಈ ಮೂಲಕ ಪಡೆದ ಒಟ್ಟು ಅಂಕ 15, ಈ ಹದಿನೈದು ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನ ಅಲಂಕರಿಸಿ ಪಂಜಾಬ್ ಕಿಂಗ್ಸ್ ಹೊರಬಿದ್ದಿದೆ.

ಈ ಹೊರಬೀಳುವಿಕೆಯ ಬೆನ್ನಲ್ಲೇ, ಶ್ರೇಷ್ಠಾ ಅಯ್ಯರ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಅಂದರೆ ಈ ಹಿಂದೆ “ನಾವು ಪಂಜಾಬಿಗಳು ಹೃದಯವಂತರು, ನಿಮಗೊಂದು ಪಾಯಿಂಟ್ ಬಿಟ್ಟುಕೊಟ್ಟೆವು” ಎಂದು ಕೆಕೆಆರ್ ಅನ್ನು ಟ್ರೋಲ್ ಮಾಡಿದ್ದ ಶ್ರೇಷ್ಠಾ ಅವರನ್ನು ಇದೇ ಒಂದು ಅಂಕದ ವಿಡಿಯೋದೊಂದಿಗೆ ಕಾಲೆಳೆಯುತ್ತಿದ್ದಾರೆ.

ಇದರ ನಡುವೆ ಕೆಲವರು ಶ್ರೇಯಸ್ ಅಯ್ಯರ್ ಅವರ ಸಹೋದರಿಯನ್ನು ನಿಂದಿಸಿ ಕಮೆಂಟಿಸಿದ್ದಾರೆ. ಇನ್ನೂ ಕೆಲವರು ಕರ್ಮ ರಿಟರ್ನ್ಸ್, ನನಿಗೆ ಹೀಗೆ ಆಗಬೇಕು, ಯಾವತ್ತೂ ಮೊದಲೇ ಸಂಭ್ರಮಿಸಬೇಡ ಎಂದೆಲ್ಲಾ ಕಿಚಾಯಿಸಿದ್ದಾರೆ.

ಶ್ರೇಷ್ಠಾ ಆಕ್ರೋಶ:

ಸೋಷಿಯಲ್ ಮೀಡಿಯಾದಲ್ಲಿ ತನ್ನ ವಿರುದ್ಧ ಹಾಗೂ ಆಪ್ತರನ್ನು ಗುರಿಯಾಗಿಸಿ ನಡೆಯುತ್ತಿರುವ ಟ್ರೋಲ್ ವಿರುದ್ಧ ಪ್ರತಿಕ್ರಿಯಿಸಿರುವ ಶ್ರೇಷ್ಠಾ ಅಯ್ಯರ್, “ಆ ವಿಡಿಯೋ ಕೇವಲ ಒಂದು ತಮಾಷೆಯಾಗಿತ್ತು. ಕ್ರೀಡೆಯನ್ನು ಕ್ರೀಡೆಯಾಗಿ ನೋಡದ, ವಿಷಯಕ್ಕೆ ಸಂಬಂಧವೇ ಇಲ್ಲದ ನನ್ನ ವೃತ್ತಿಜೀವನ ಮತ್ತು ಕುಟುಂಬವನ್ನು ಮಧ್ಯೆ ಎಳೆದು ತರುತ್ತಿರುವ ನಿಮ್ಮ ಬುದ್ಧಿಹೀನ ನಡವಳಿಕೆಯನ್ನು ಕಂಡು ನನಗೆ ಅಯ್ಯೋ ಪಾಪ ಎನಿಸುತ್ತದೆ”.

“ನನ್ನ ಸಹೋದರ ಶ್ರೇಯಸ್ ಅಯ್ಯರ್ ಗೆಲ್ಲಲಿ ಅಥವಾ ಸೋಲಲಿ, ನಾನು ಸದಾ ಅವನ ಪರವಾಗಿ ನಿಲ್ಲುತ್ತೇನೆ. ಅವನ ಸಾಧನೆಯನ್ನು ಸಂಭ್ರಮಿಸುತ್ತೇನೆ. ಕೆಲಸ ಇಲ್ಲದ ನೀವುಗಳು ಹೀಗೆ ಟ್ರೋಲ್ ಮಾಡುತ್ತಿರಿ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದರ ಜೊತೆಗೆ ಈ ಆನ್‌ಲೈನ್ ಟ್ರೋಲ್ ಕೇವಲ ಕಮೆಂಟ್‌ಗಳಿಗೆ ಸೀಮಿತವಾಗಿಲ್ಲ ಎಂಬುದನ್ನು ತಿಳಿಸಿರುವ ಶ್ರೇಷ್ಠಾ ಅಯ್ಯರ್, ಟ್ರೋಲರ್‌ಗಳು ನನ್ನ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಫೋನ್ ಮಾಡಿ ನಡುರಾತ್ರಿಯಲ್ಲಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

“ನೀವು ನನ್ನ ಆಪ್ತರಿಗೆ ಮತ್ತು ಕಚೇರಿಗೆ ಫೋನ್ ಮಾಡಿ ತೊಂದರೆ ಕೊಡುತ್ತಿರುವುದು ನಿಮ್ಮ ಸಂಸ್ಕಾರವನ್ನು ತೋರಿಸುತ್ತದೆ. ಕೆಟ್ಟ ಕರ್ಮ ನಿಮಗೂ ಒಂದು ದಿನ ಹಿಂತಿರುಗುತ್ತದೆ” ಎಂದು ಶ್ರೇಷ್ಠಾ ಅಯ್ಯರ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಐಪಿಎಲ್​ಗೆ ಗುಡ್ ಬೈ ಹೇಳಿದ RCB ಮಾಜಿ ಆಟಗಾರ!

ಇದೀಗ ಶ್ರೇಯಸ್ ಅಯ್ಯರ್ ಅವರ ಸಹೋದರಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ವೈರಲ್ ಬೆನ್ನಲ್ಲೇ ಶ್ರೇಷ್ಠಾ ಅಯ್ಯರ್​ಗೆ ಪಂಜಾಬ್ ಕಿಂಗ್ಸ್​ ಅಭಿಮಾನಿಗಳಿಂದ ಭಾರೀ ಬೆಂಬಲ ವ್ಯಕ್ತವಾಗಿದೆ. ಅಲ್ಲದೆ ಸೋಷಿಯಲ್ ಮೀಡಿಯಾ ಬುಲ್ಲಿಂಗ್ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ.

Source link

Gold Rate: ಚಿನ್ನದ ಬೆಲೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 26: ಚಿನ್ನದ ಬೆಲೆ ಸತತವಾಗಿ ಏರಿಳಿತಗಳನ್ನು ಕಾಣುತ್ತಿದೆ. ನಿನ್ನೆ 30 ರೂ ಹೆಚ್ಚಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 45 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 49 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲೂ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ ಐದಾರು ದಿನಗಳಿಂದ ಏರಿಳಿತ ಕಾಣದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,58,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,889 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,565 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,917 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,880 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,565 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,565 ರೂ
  • ಚೆನ್ನೈ: 14,730 ರೂ
  • ಮುಂಬೈ: 14,565 ರೂ
  • ದೆಹಲಿ: 14,680 ರೂ
  • ಕೋಲ್ಕತಾ: 14,565 ರೂ
  • ಕೇರಳ: 14,565 ರೂ
  • ಅಹ್ಮದಾಬಾದ್: 14,570 ರೂ
  • ಜೈಪುರ್: 14,580 ರೂ
  • ಲಕ್ನೋ: 14,580 ರೂ
  • ಭುವನೇಶ್ವರ್: 14,565 ರೂ

ಇದನ್ನೂ ಓದಿ: ದಿಲ್ಲಿ ಜಿಮ್ಖಾನಾ ಕ್ಲಬ್​ಗೆ ಬೀಗ? ಹೃದಯಭಾಗದಲ್ಲಿ 27 ಎಕರೆಯಲ್ಲಿರವ ಈ ಕ್ಲಬ್ ಸುತ್ತಮುತ್ತಲ ವಿವಾದಗಳೇನು?

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 593 ರಿಂಗಿಟ್ (14,265 ರುಪಾಯಿ)
  • ದುಬೈ: 550.50 ಡಿರಾಮ್ (14,278 ರುಪಾಯಿ)
  • ಅಮೆರಿಕ: 141 ಡಾಲರ್ (14,361 ರುಪಾಯಿ)
  • ಸಿಂಗಾಪುರ: 198 ಸಿಂಗಾಪುರ್ ಡಾಲರ್ (14,783 ರುಪಾಯಿ)
  • ಕತಾರ್: 550.50 ಕತಾರಿ ರಿಯಾಲ್ (14,411 ರೂ)
  • ಸೌದಿ ಅರೇಬಿಯಾ: 567 ಸೌದಿ ರಿಯಾಲ್ (14,418 ರುಪಾಯಿ)
  • ಓಮನ್: 57.70 ಒಮಾನಿ ರಿಯಾಲ್ (14,299 ರುಪಾಯಿ)
  • ಕುವೇತ್: 46.06 ಕುವೇತಿ ದಿನಾರ್ (14,327 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Vasthu Shastra: ಬಾಗಿಲು ತೆರೆಯುವಾಗ ಮತ್ತು ಮುಚ್ಚುವಾಗ ಶಬ್ದ ಬರುತ್ತಿದ್ದರೆ ನಿರ್ಲಕ್ಷಿಸಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Main Door Sound Vastu Defects: Avoid Financial Hardship and Stress with Easy Remedies

ಮನೆಯ ಮುಖ್ಯ ಬಾಗಿಲು ತೆರೆಯುವಾಗ ಶಬ್ದImage Credit source: Pinterest

ನಿಮ್ಮ ಮನೆಯ ಮುಖ್ಯ ಬಾಗಿಲನ್ನು ತೆರೆಯುವಾಗ ಅಥವಾ ಮುಚ್ಚುವಾಗ ಶಬ್ದ ಬರುವುದನ್ನು ನೀವು ಎಂದಾದರೂ ಗಮನಿಸಿದ್ದೀರಾ? ಹಾಗಿದ್ದರೆ, ಅದನ್ನು ಕೇವಲ ಒಂದು ಸಣ್ಣ ತಾಂತ್ರಿಕ ದೋಷ ಅಥವಾ ರಿಪೇರಿ ಕೆಲಸ ಎಂದು ನಿರ್ಲಕ್ಷಿಸಬೇಡಿ. ವಾಸ್ತು ಶಾಸ್ತ್ರದ ಪ್ರಕಾರ, ಮುಖ್ಯ ಬಾಗಿಲಿನಿಂದ ಬರುವ ಇಂತಹ ಕರ್ಕಶ ಧ್ವನಿಯು ಒಂದು ಗಂಭೀರವಾದ ವಾಸ್ತು ದೋಷವಾಗಿದೆ. ಇದು ನಿಮ್ಮ ಪ್ರಗತಿಯ ಹಾದಿಯಲ್ಲಿ ದೊಡ್ಡ ಅಡ್ಡಿಯಾಗಬಹುದು.

ವಾಸ್ತು ಶಾಸ್ತ್ರದಲ್ಲಿ ಮನೆಯ ಮುಖ್ಯ ಬಾಗಿಲಿಗೆ ಅತ್ಯಂತ ಪ್ರಮುಖ ಸ್ಥಾನವನ್ನು ನೀಡಲಾಗಿದೆ. ಇದು ಕೇವಲ ನಾವು ಮನೆ ಒಳಗೆ ಹೋಗಲು ಮತ್ತು ಹೊರಗೆ ಬರಲು ಇರುವ ದಾರಿಯಷ್ಟೇ ಅಲ್ಲ; ಸುಖ, ಸಮೃದ್ಧಿ, ಸಕಾರಾತ್ಮಕ ಶಕ್ತಿ (Positive Energy) ಮತ್ತು ಲಕ್ಷ್ಮಿ ದೇವಿಯು ಮನೆಗೆ ಪ್ರವೇಶಿಸುವ ಮಹಾದ್ವಾರವಾಗಿದೆ. ಬಾಗಿಲಿನ ಶಬ್ದದ ಹಿಂದಿರುವ ವಾಸ್ತು ದೋಷಗಳು ಮತ್ತು ಅದರ ಪರಿಣಾಮಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ರಾಹು-ಕೇತು ದೋಷ:

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದ ಪ್ರಕಾರ, ಬಾಗಿಲಿನಿಂದ ಬರುವ ಕರ್ಕಶ ಅಥವಾ ತೀಕ್ಷ್ಣವಾದ ಧ್ವನಿಯು ವ್ಯಕ್ತಿಯ ಜಾತಕದಲ್ಲಿ ರಾಹು ಮತ್ತು ಕೇತು ಗ್ರಹಗಳ ಕೆಟ್ಟ ಪ್ರಭಾವವನ್ನು ಹೆಚ್ಚಿಸುತ್ತದೆ. ಇದರ ಪರಿಣಾಮವಾಗಿ ಮನೆಯಲ್ಲಿ ಹಠಾತ್ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗುತ್ತವೆ ಅಥವಾ ಅನಗತ್ಯ ಕೋರ್ಟ್-ಕಚೇರಿ, ಕಾನೂನು ವೆಚ್ಚಗಳು ಎದುರಾಗಬಹುದು.

ಆರ್ಥಿಕ ನಷ್ಟ ಮತ್ತು ದಾರಿದ್ರ್ಯ:

ಯಾವ ಮನೆಯ ಮುಖ್ಯ ಬಾಗಿಲು ಇಂತಹ ಶಬ್ದವನ್ನು ಮಾಡುತ್ತದೆಯೋ, ಅಲ್ಲಿ ಹಣವು ನೀರಿನಂತೆ ಖರ್ಚಾಗುತ್ತದೆ ಎಂದು ನಂಬಲಾಗಿದೆ. ಅಂದರೆ ದುಡಿದ ಹಣ ಯಾವುದೋ ಒಂದು ರೂಪದಲ್ಲಿ ಪೋಲಾಗುತ್ತದೆ ಮತ್ತು ಆರ್ಥಿಕ ನಷ್ಟ ಉಂಟಾಗುತ್ತದೆ. ಇದು ಕ್ರಮೇಣವಾಗಿ ಮನೆಯಲ್ಲಿ ಬಡತನ ಮತ್ತು ನಿರಾಶೆ ಮೂಡಲು ಮೂಲ ಕಾರಣವಾಗುತ್ತದೆ.

ಇದನ್ನೂ ಓದಿ: ಅಂಗೈಯಲ್ಲಿ ‘M’ ಗುರುತಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು?

ಮಾನಸಿಕ ಒತ್ತಡ ಮತ್ತು ಕೌಟುಂಬಿಕ ಕಲಹ:

ಬೆಳಗ್ಗೆ ಮತ್ತು ಸಂಜೆಯ ಸಮಯದಲ್ಲಿ ಬಾಗಿಲಿನ ಈ ಕರ್ಕಶ ಶಬ್ದವನ್ನು ಕೇಳುವುದರಿಂದ ನಮ್ಮ ಮನಸ್ಸಿನ ಮೇಲೆ ನೇರವಾದ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಕುಟುಂಬದ ಸದಸ್ಯರಲ್ಲಿ ಕಿರಿಕಿರಿ ಮತ್ತು ಸಿಟ್ಟನ್ನು ಉಂಟುಮಾಡುತ್ತದೆ. ಇದರಿಂದಾಗಿ ಮನೆಯಲ್ಲಿ ಸಣ್ಣಪುಟ್ಟ ವಿಷಯಗಳಿಗೂ ಜಗಳಗಳು ನಡೆದು, ಸದಾ ಮಾನಸಿಕ ಒತ್ತಡದ ವಾತಾವರಣ ನಿರ್ಮಾಣವಾಗುತ್ತದೆ.

ವಾಸ್ತು ಪರಿಹಾರವೇನು?

  • ನಿಮ್ಮ ಮನೆಯ ಬಾಗಿಲಿನಿಂದ ಇಂತಹ ಶಬ್ದ ಬರುತ್ತಿದ್ದರೆ ತಕ್ಷಣವೇ ಅದಕ್ಕೆ ಎಣ್ಣೆ ಅಥವಾ ಗ್ರೀಸ್ ಹಾಕಿ ಆ ಶಬ್ದವನ್ನು ನಿಲ್ಲಿಸಿ.
  • ಬಾಗಿಲುಗಳು ಯಾವಾಗಲೂ ಸರಾಗವಾಗಿ ಮತ್ತು ಯಾವುದೇ ಅಡೆತಡೆಯಿಲ್ಲದೆ ತೆರೆಯುವಂತಿರಬೇಕು.
  • ಮುಖ್ಯ ಬಾಗಿಲಿನ ಸುತ್ತಮುತ್ತಲಿನ ಜಾಗವನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಬೆಳಕಿನಿಂದ ಕೂಡಿರುವಂತೆ ನೋಡಿಕೊಳ್ಳಿ. ಇದರಿಂದ ನಕಾರಾತ್ಮಕ ಶಕ್ತಿ ದೂರವಾಗಿ, ಧನಲಕ್ಷ್ಮಿಯ ಕೃಪೆ ನಿಮ್ಮ ಮೇಲಿರುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಕ್ರಮ ಸಂಬಂಧವಿದೆಯೆಂಬ ಶಂಕೆ, ಪತಿ ಮಲಗಿರುವಾಗ ಖಾಸಗಿ ಅಂಗ ಕತ್ತರಿಸಿದ ಪತ್ನಿ – Kannada News | Woman Arrested After Violent Domestic Attack in Chhattisgarh

ಬಿಲಾಸ್‌ಪುರ, ಮೇ 26: ವಿವಾಹೇತರ ಸಂಬಂಧದ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿ(husband)ಯ ಮೇಲೆ ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ, ಅವರ ಖಾಸಗಿ ಅಂಗವನ್ನೇ ಕತ್ತರಿಸಿರುವ ಅತ್ಯಂತ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ. ಸದ್ಯ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸ್ಥಳೀಯ ಸರ್ಕಾರಿ ಸಿಮ್ಸ್ (CIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾಜೇಶ್ ಕೌಶಿಕ್ ಮತ್ತು ಆತನ ಪತ್ನಿ ದ್ರೌಪದಿ ಬಾಯಿ ನಡುವೆ ದೀರ್ಘಕಾಲದಿಂದ ಕೌಟುಂಬಿಕ ಜಗಳಗಳು ನಡೆಯುತ್ತಿದ್ದವು. ರಾಜೇಶ್‌ಗೆ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ದ್ರೌಪದಿ ಅನುಮಾನಿಸುತ್ತಿದ್ದಳು. ಘಟನೆ ನಡೆದ ರಾತ್ರಿ ಕೂಡ ಇಬ್ಬರೂ ಒಟ್ಟಿಗೆ ಊಟ ಮಾಡಿ ಮಲಗಿದ್ದರು. ಆದರೆ, ತಡರಾತ್ರಿ ಪತಿ ರಾಜೇಶ್ ಗಾಢ ನಿದ್ದೆಯಲ್ಲಿದ್ದಾಗ, ದ್ರೌಪತಿ ಕತ್ತಿಯಿಂದ ಆತನ ಖಾಸಗಿ ಭಾಗಗಳನ್ನು ಕತ್ತರಿಸಿ ಕ್ರೂರತೆ ಮೆರೆದಿದ್ದಾಳೆ.

ಮತ್ತಷ್ಟು ಓದಿ: ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು

ದಾಳಿಯ ಭೀಕರತೆಗೆ ತತ್ತರಿಸಿದ ರಾಜೇಶ್ ತೀವ್ರ ರಕ್ತಸ್ರಾವದ ನಡುವೆಯೂ ಕಿರುಚುತ್ತಾ ಕೋಣೆಯಿಂದ ಹೊರಗೆ ಓಡಿಬಂದಿದ್ದಾರೆ. ತಂದೆಯ ಕಿರುಚಾಟ ಕೇಳಿ ಎಚ್ಚರಗೊಂಡ ಅಪ್ರಾಪ್ತ ಮಗ ತಕ್ಷಣವೇ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಕುಟುಂಬಸ್ಥರು ರಾಜೇಶ್ ಮತ್ತು ಆತನ ಕತ್ತರಿಸಿದ ದೇಹದ ಭಾಗವನ್ನು ಹಿಡಿದುಕೊಂಡು ತಕ್ಷಣವೇ ಆಸ್ಪತ್ರೆಗೆ ಧಾವಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಮಹಿಳೆ ದ್ರೌಪದಿ ಬಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ವಿಚಾರಣೆಯ ವೇಳೆ ಅನೈತಿಕ ಸಂಬಂಧದ ಅನುಮಾನ ಮತ್ತು ನಿರಂತರ ಕೌಟುಂಬಿಕ ಕಲಹವೇ ಈ ಘೋರ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ಪೊಲೀಸರು ಮಹಿಳೆಯ ವಿರುದ್ಧ ಕಠಿಣ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಐಪಿಎಲ್​ಗೆ ಗುಡ್ ಬೈ ಹೇಳಿದ RCB ಮಾಜಿ ಆಟಗಾರ! – Kannada News | Murugan Ashwin announces retirement from IPL

ತಮಿಳುನಾಡು ಮೂಲದ ಕ್ರಿಕೆಟಿಗ ಮುರುಗನ್ ಅಶ್ವಿನ್ ಅವರು ಎಲ್ಲಾ ಮಾದರಿಯ ದೇಶಿ ಕ್ರಿಕೆಟ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಂದ  ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಅಶ್ವಿನ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 10 ವರ್ಷಗಳ ವೃತ್ತಿಪರ ಕ್ರಿಕೆಟ್ ಜೀವನಕ್ಕೆ ತೆರೆ ಎಳೆದಿದ್ದಾರೆ.

ಈ ನಿವೃತ್ತಿಯ ಘೋಷಣೆಯೊಂದಿಗೆ ಇದು ಕ್ರಿಕೆಟ್‌ನಿಂದ ಸಂಪೂರ್ಣ ವಿದಾಯವಲ್ಲ ಎಂದು ಸ್ಪಷ್ಟಪಡಿಸಿರುವ ಮುರುಗನ್ ಅಶ್ವಿನ್, ಮುಂಬರುವ ದಿನಗಳಲ್ಲಿ ವಿದೇಶಿ ಲೀಗ್‌ಗಳಲ್ಲಿ ಆಡುವ ಅವಕಾಶಗಳನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ವಿದೇಶಿ ಲೀಗ್ ಹಾಗೂ ನಿವೃತ್ತ ಆಟಗಾರರ ಲೀಗ್​ಗಳಲ್ಲಿ ಕಣಕ್ಕಿಳಿಯುವ ಯೋಜನೆ ಹಾಕಿಕೊಂಡಿದ್ದಾರೆ.

ಮೂವರು ನಾಯಕರುಗಳಿಗೆ ಧನ್ಯವಾದ:

ಮುರುಗನ್ ಅಶ್ವಿನ್ ಐಪಿಎಲ್​ನಲ್ಲಿ ಮೂವರು ದಿಗ್ಗಜರ ನಾಯಕತ್ವದಲ್ಲಿ ಆಡಿದ ಕೆಲವೇ ಕೆಲವು ಆಟಗಾರರಲ್ಲಿ ಇಬ್ಬರು. ಇದೀಗ ಈ ಮೂವರಿಗೆ, ಅಂದರೆ ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಕೃತಜ್ಞತೆಗಳ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

  • ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಮುರುಗನ್ ಅಶ್ವಿನ್ ರೈಸಿಂಗ್ ಪುಣೆ ಜೈಂಟ್ಸ್ ಪರ ಕಣಕ್ಕಿಳಿದಿದ್ದರು.
  • ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದರು
  • ವಿರಾಟ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದರು.

6 ತಂಡಗಳ ಪರ ಕಣಕ್ಕಿಳಿದಿದ್ದ ಮುರುಗನ್:

ಮುರುಗನ್ ಅಶ್ವಿನ್  2016 ರಿಂದ 2023 ರವರೆಗೆ ಅವರು ಒಟ್ಟು 6 ವಿಭಿನ್ನ ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದಾರೆ. ಆ ತಂಡಗಳಾವುವು ಎಂದರೆ…

  • ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ (RPS)
  • ಡೆಲ್ಲಿ ಡೇರ್‌ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್- DC)
  • ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)
  • ಪಂಜಾಬ್ ಕಿಂಗ್ಸ್​ (PBKS)
  • ಮುಂಬೈ ಇಂಡಿಯನ್ಸ್ (MI)
  • ರಾಜಸ್ಥಾನ್ ರಾಯಲ್ಸ್​ (RR)

ಆರ್​ಸಿಬಿ ಮಾಜಿ ಆಟಗಾರ:

2018 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಮುರುಗನ್ ಅಶ್ವಿನ್ ಆರ್​ಸಿಬಿ ಪರ 2 ಪಂದ್ಯಗಳನ್ನಾಡಿದ್ದರು. ಈ ವೇಳೆ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

ಐಪಿಎಲ್ ವೃತ್ತಿ ಜೀವನ:

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಒಟ್ಟು 44 ಪಂದ್ಯಗಳನ್ನಾಡಿರುವ ಮುರುಗನ್ ಅಶ್ವಿನ್ ಒಟ್ಟು 35 ಪಂದ್ಯಗಳನ್ನು ಪಡದಿದ್ದಾರೆ. ಈ ವೇಳೆ 21 ರನ್​ಗಳಿಗೆ ಮೂರು ವಿಕೆಟ್ ಕಬಳಿಸಿರುವುದು ಅವರ ಶ್ರೇಷ್ಠ ಪ್ರದರ್ಶನ.

ಹಾಗೆಯೇ ದೇಶೀಯ ಅಂಗಳದಲ್ಲಿ ತಮಿಳುನಾಡು ಪರ ಕಣಕ್ಕಿಳಿಯುವ ಮೂಲಕ ಕೆರಿಯರ್ ಆರಂಭಿಸಿದ್ದ ಮುರುಗನ್, ಆ ಬಳಿಕ ಚಂಡೀಗಢ್ ಹಾಗೂ ಜಮ್ಮು ಕಾಶ್ಮೀರ ತಂಡಗಳನ್ನು ಪ್ರತಿನಿಧಿಸಿದ್ದರು. ಈ ವೇಳೆ ಒಟ್ಟು 117 ಟಿ20 ಪಂದ್ಯಗಳನ್ನಾಡಿರುವ ಅವರು 115 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಲಿಸ್ಟ್​-ಎ ಕ್ರಿಕೆಟ್​ನಲ್ಲಿ 34 ಮ್ಯಾಚ್​ಗಳನ್ನಾಡಿರುವ ಮುರುಗನ್ 35 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ: 07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ?

ಇದೀಗ ತಮ್ಮ 35ನೇ ವಯಸ್ಸಿಗೆ ದೇಶೀಯ ಕ್ರಿಕೆಟ್​ ಹಾಗೂ ಐಪಿಎಲ್​​ಗೆ ಗುಡ್ ಬೈ ಹೇಳಿರುವ ಮುರುಗನ್ ಅಶ್ವಿನ್ ಮುಂಬರುವ ದಿನಗಳಲ್ಲಿ ವಿದೇಶಿ ಲೀಗ್​ಗಳಲ್ಲಿ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ.

Published On – 10:32 am, Tue, 26 May 26

Source link

ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ರಾಮ್ ಚರಣ್​, ಶಿವರಾಜ್​​ ಕುಮಾರ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಸಿನಿಮಾ ಜೂನ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಈವೆಂಟ್ ಬೆಂಗಳೂರಿನಲ್ಲಿ ನಡೆಯಿತು. ಈ ವೇಳೆ ಶಿವಣ್ಣ ಅವರು ವೇದಿಕೆ ಮೇಲೆ ರಾಮ್ ಚರಣ್ ಅವರ ಬಗ್ಗೆ ಮಾತನಾಡಿದರು. ರಾಮ್ ಚರಣ್ ಹಾಗೂ ಚಿಕ್ಕಪ್ಪ ಪವನ್ ಕಲ್ಯಾಣ್ ಬಾಂಡಿಂಗ್ ಅವರಿಗೆ ಇಷ್ಟ ಆಗಿದೆ. ವೇದಿಕೆ ಮೇಲೆಯೇ ಈ ಬಗ್ಗೆ ಶಿವಣ್ಣ ಮಾತನಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಐದು ತಿಂಗಳಲ್ಲಿ ಎರಡನೇ ಬಾರಿಗೆ ರಾಮ್ ರಹೀಮ್​ಗೆ ಪೆರೋಲ್, 30 ದಿನಗಳ ಕಾಲ ಜೈಲಿನಿಂದ ಬಿಡುಗಡೆ – Kannada News | Ram Rahim Gets 30 Day Parole Again: Dera Chief Released from Jail for Second Time in 5 Months

ನವದೆಹಲಿ, ಮೇ 26 ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್(Gurmeet Ram Rahim Singh)ಗೆ ಮತ್ತೊಮ್ಮೆ ಪೆರೋಲ್ ಮಂಜೂರು ಮಾಡಲಾಗಿದೆ. ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಮ್ ರಹೀಮ್ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಬಾರಿ ಅವರಿಗೆ 30 ದಿನಗಳ ಪೆರೋಲ್ ನೀಡಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಗುರ್ಮೀತ್ ರಾಮ್ ರಹೀಮ್ ಬಿಗಿ ಭದ್ರತೆಯಲ್ಲಿ ಸಿರ್ಸಾ ಆಶ್ರಮಕ್ಕೆ ತೆರಳಿದರು.

ಈ ವರ್ಷ ಇದು ಅವರ ಎರಡನೇ ಪೆರೋಲ್ ಆಗಿದೆ. ಅವರು ಈ ಹಿಂದೆ 15 ಬಾರಿ ಪೆರೋಲ್ ಮತ್ತು ಫರ್ಲೋ ಪಡೆದಿದ್ದಾರೆ ಮತ್ತು ಇದು ಅವರ ಶಿಕ್ಷೆಯ ಅವಧಿಯಲ್ಲಿ 16 ನೇ ಪೆರೋಲ್ ಆಗಿದೆ. ಇಲ್ಲಿಯವರೆಗೆ, ರಾಮ್ ರಹೀಮ್ ತಮ್ಮ 3,193 ದಿನಗಳ ಶಿಕ್ಷೆಯಲ್ಲಿ 406 ದಿನಗಳನ್ನು ರೋಹ್ಟಕ್ ನ ಸುನಾರಿಯಾ ಜೈಲಿನ ಗೋಡೆಗಳ ಹೊರಗೆ ಕಳೆದಿದ್ದಾರೆ.

ರಾಮ್ ರಹೀಮ್ ಸುನಾರಿಯಾ ಜೈಲಿನಲ್ಲಿ 20 ವರ್ಷಗಳ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. 2017 ರಲ್ಲಿ, ವಿಶೇಷ ಸಿಬಿಐ ನ್ಯಾಯಾಲಯವು ಇಬ್ಬರು ಮಹಿಳಾ ಶಿಷ್ಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಆತನನ್ನು ದೋಷಿ ಎಂದು ಘೋಷಿಸಿತು. ನಂತರ ಎರಡು ಕೊಲೆ ಪ್ರಕರಣಗಳಲ್ಲಿ ಆತನನ್ನು ದೋಷಿ ಎಂದು ಘೋಷಿಸಲಾಯಿತು. 2019 ರಲ್ಲಿ, ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಕೊಲೆಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು.

2021 ರಲ್ಲಿ, ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಅವರ ಕೊಲೆಗೆ ಸಂಚು ರೂಪಿಸಿದ್ದಕ್ಕಾಗಿ ಆತನನ್ನು ದೋಷಿ ಎಂದು ಘೋಷಿಸಲಾಯಿತು. ಆದಾಗ್ಯೂ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ 2024 ರಲ್ಲಿ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಮತ್ತು 2026 ರಲ್ಲಿ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಕೊಲೆ ಪ್ರಕರಣದಲ್ಲಿ ಆತನನ್ನು ಖುಲಾಸೆಗೊಳಿಸಿತು.

30 ದಿನಗಳ ಪೆರೋಲ್‌ನೊಂದಿಗೆ, ಡೇರಾ ಮುಖ್ಯಸ್ಥರು 2026 ರ 10 ವಾರಗಳ ಪೆರೋಲ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ, ಇದು ಹರಿಯಾಣ ಉತ್ತಮ ನಡವಳಿಕೆ ಕೈದಿಗಳ (ತಾತ್ಕಾಲಿಕ ಬಿಡುಗಡೆ) ಕಾಯ್ದೆ, 2022 ರ ಅಡಿಯಲ್ಲಿ ಅಗತ್ಯವಿದೆ. ಇದಕ್ಕೂ ಮೊದಲು, ಅವರಿಗೆ ಜನವರಿಯಲ್ಲಿ 40 ದಿನಗಳ ಪೆರೋಲ್ ನೀಡಲಾಯಿತು. ಈ ಕಾನೂನು ಜನವರಿಯಿಂದ ಡಿಸೆಂಬರ್ ವರೆಗೆ ಒಟ್ಟು 10 ವಾರಗಳ ಪೆರೋಲ್‌ಗೆ ಅರ್ಹತೆ ನೀಡುತ್ತದೆ, ಇದನ್ನು ಎರಡು ಭಾಗಗಳಲ್ಲಿ ಪಡೆಯಬಹುದು. ಕಾನೂನು ಮೂರು ವಾರಗಳ ಫರ್ಲೋ (ತಾತ್ಕಾಲಿಕ ಬಿಡುಗಡೆ) ಗೆ ಸಹ ಅವಕಾಶ ನೀಡುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ – Kannada News | Dog Bite Warning: Don’t Neglect Rabies Vaccine – Bagalakote Tragedy Highlights Risk

ಬಾಗಲಕೋಟೆ, ಮೇ.26: ಹುಚ್ಚು ನಾಯಿ ಕಚ್ಚಿದ ನಂತರ ಸಕಾಲದಲ್ಲಿ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ನಾಯಿ ಕಚ್ಚಿದ ನಂತರ ಅದಕ್ಕೆ ಬೇಕಾದ ಚಿಕಿತ್ಸೆಗಳನ್ನು ಪಡೆಯುವುದು ಕಡ್ಡಾಯ. ಒಂದು ವೇಳೆ ಚಿಕಿತ್ಸೆ ಪಡೆಯದಿದ್ದರೆ ಸಾವು ಖಂಡಿತ.

ಮೂಲಗಳ ಪ್ರಕಾರ, ಕಳೆದ ಮಾರ್ಚ್ ತಿಂಗಳಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮದಲ್ಲಿ ನಡೆದಿದ್ದ ‘ಮನ್ನಿಕೇರಿ ಚಂದ್ರಾದೇವಿ ಜಾತ್ರೆ’ಗೆ ಪ್ರದೀಪ್ ತೆರಳಿದ್ದನು. ಈ ಸಂದರ್ಭದಲ್ಲಿ ಆತನಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು. ಆದರೆ, ಪ್ರದೀಪ್ ಇದನ್ನು ಗಂಭೀರವಾಗಿ ಪರಿಗಣಿಸದೆ, ಆಸ್ಪತ್ರೆಗೆ ತೆರಳಿ ಸೂಕ್ತವಾದ ಲಸಿಕೆಗಳನ್ನು ಹಾಕಿಸಿಕೊಳ್ಳದೆ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದನು ಎನ್ನಲಾಗಿದೆ.

ನಾಯಿ ಕಚ್ಚಿದ ಎರಡು ತಿಂಗಳ ಬಳಿಕ, ಅಂದರೆ ಒಂದು ವಾರದ ಹಿಂದೆ ಪ್ರದೀಪ್ ದೇಹದಲ್ಲಿ ರೇಬಿಸ್ ರೋಗದ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣ ಆತನನ್ನು ನಿಡಗುಂದಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಪರಿಸ್ಥಿತಿ ಬಿಗಡಾಯಿಸಿದ ಕಾರಣ ಬಾಗಲಕೋಟೆಯ ಕೆರೂಡಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿಂದ ನಿನ್ನೆ (ಮೇ 25) ಮಧ್ಯಾಹ್ನ 12 ಗಂಟೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ರೇಬಿಸ್ ವೈರಸ್ ಇಡೀ ದೇಹವನ್ನು ಆವರಿಸಿತ್ತು. ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಪ್ರದೀಪ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ.

ಇದನ್ನು ಓದಿ: ಪೊಲೀಸರನ್ನ ಕಂಡು ಬಿಲ್ಡಿಂಗ್‌ನಿಂದ ಕೆಳಗೆ ಹಾರಿದ ರೌಡಿ ‘ಸ್ಪಾಟ್ ನಾಗ’; ಸೊಂಟ ಮುರಿದುಕೊಂಡು ಆಸ್ಪತ್ರೆ ಸೇರಿದ ಕಿರಾತಕ!

ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದು, ನಾಯಿ ಕಡಿತಕ್ಕೊಳಗಾದ ತಕ್ಷಣವೇ ಲಸಿಕೆ ಪಡೆಯುವುದು ಎಷ್ಟು ಕಡ್ಡಾಯ ಎಂಬುದಕ್ಕೆ ಈ ದುರಂತ ಸಾಕ್ಷಿಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಕೂಡ ಆಗ್ಗಾಗೆ ಎಚ್ಚರಿಕೆಯನ್ನು ಹಾಗೂ ಜಾಗೃತಿಯನ್ನು ಮೂಡಿಸುತ್ತಿದೆ. ಅದರೂ ಇಂತಹ ನಿರ್ಲಕ್ಷ್ಯ ಸಾವಿಗೆ ಕಾರಣವಾಗಬಹುದು.

ರಾಜ್ಯದ ಸದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸದ್ಯಕ್ಕಂತೂ ಸೆಟ್ಟೇರಲ್ಲ ಮಹೇಶ್​ ಬಾಬು-ಪ್ರಶಾಂತ್ ನೀಲ್ ಸಿನಿಮಾ; ಇಲ್ಲಿದೆ ಕಾರಣಗಳ ಪಟ್ಟಿ – Kannada News | Mahesh Babu and Prashanth Neel Movie: Why the Dream Project Faces Long Delays

ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಮತ್ತು ಸ್ಯಾಂಡಲ್‌ವುಡ್ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಸಿನಿಮಾಗಾಗಿ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರಾಗನ್’ ಚಿತ್ರದ ಗ್ಲಿಂಪ್ಸ್ ಬಿಡುಗಡೆಯಾದ ಬೆನ್ನಲ್ಲೇ ಈ ಗಾಸಿಪ್‌ಗೆ ಮತ್ತಷ್ಟು ರೆಕ್ಕೆಪುಕ್ಕೆ ಬಂದಿದೆ. ಮಹೇಶ್ ಬಾಬು ಅವರು ತಮ್ಮ ಮುಂಬರುವ ‘ವಾರಣಾಸಿ’ ಚಿತ್ರವನ್ನು ಮುಗಿಸಿದ ನಂತರ ಪ್ರಶಾಂತ್ ನೀಲ್ ಜೊತೆ ಬಿಗ್ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಮಾಡಲಿದ್ದಾರೆ ಎಂದು ವರದಿಯಾಗಿದೆ.ಆದರೆ, ಪ್ರ್ಯಾಕ್ಟಿಕಲ್ ಆಗಿ ನೋಡಿದರೆ ಅದು ಸದ್ಯಕ್ಕೆ ಸಂಭವಿಸುವುದಿಲ್ಲ.

ಮಹೇಶ್ ಬಾಬು ತಮ್ಮ ಕ್ಲಾಸ್ ಮತ್ತು ಮಾಸ್ ನಟನೆಯ ಮೂಲಕ ಸೌತ್ ಸಿನಿಮಾ ರಂಗದಲ್ಲಿ ದೊಡ್ಡ ಹೆಸರು ಮಾಡಿದವರು. ಇತ್ತ ಪ್ರಶಾಂತ್ ನೀಲ್ ಕೂಡ ‘ಕೆಜಿಎಫ್’ ಮತ್ತು ‘ಸಲಾರ್’ ಚಿತ್ರಗಳ ಭರ್ಜರಿ ಯಶಸ್ಸಿನ ಮೂಲಕ ಭಾರತೀಯ ಚಿತ್ರರಂಗದಲ್ಲೇ ಸಂಚಲನ ಮೂಡಿಸಿದವರು. ಹೀಗಾಗಿ, ಸದಾ ವಿಭಿನ್ನ ಆಕ್ಷನ್ ಸಿನಿಮಾಗಳನ್ನು ಇಷ್ಟಪಡುವ ಇವರಿಬ್ಬರು ಒಂದೇ ವೇದಿಕೆಗೆ ಬಂದರೆ ಆ ಚಿತ್ರದ ಮೇಲಿನ ನಿರೀಕ್ಷೆ ಮುಗಿಲು ಮುಟ್ಟುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇತ್ತೀಚೆಗಷ್ಟೇ ಪ್ರಶಾಂತ್ ನೀಲ್ ಕೂಡ ‘ಡ್ರಾಗನ್’ ಸಿನಿಮಾ ನಂತರ ತಾವು ಸದ್ಯಕ್ಕೆ ತಮ್ಮ ಎಂದಿನ ಡಾರ್ಕ್ ಶೇಡ್ ಆಕ್ಷನ್ ಶೈಲಿಯ ಸಿನಿಮಾಗಳಿಗೆ ಬ್ರೇಕ್ ನೀಡಲಿದ್ದೇನೆ ಎಂದು ಸುಳಿವು ನೀಡಿದ್ದರು. ಇದು ಮಹೇಶ್ ಬಾಬು ಅವರೊಂದಿಗಿನ ಕ್ಲಾಸ್-ಮಾಸ್ ಸಿನಿಮಾದ ಮುನ್ಸೂಚನೆ ಎಂದೇ ಭಾವಿಸಲಾಗಿತ್ತು. ಆದರೆ, ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಈ ಕಾಂಬಿನೇಷನ್ ಸಾಧ್ಯವಿಲ್ಲ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: ಯಶ್ ‘ರಾಮಾಯಣ’ ಟೀಸರ್ ನೋಡಿ ಮಹೇಶ್ ಬಾಬು ಅಭಿಮಾನಿಗಳಿಗೆ ಹೊಟ್ಟೆಕಿಚ್ಚು?

ಸಿನಿಮಾ ತಡವಾಗಲು ಅಸಲಿ ಕಾರಣಗಳು ಇಲ್ಲಿವೆ:

ಪ್ರಶಾಂತ್ ನೀಲ್ ಬಿಡುವಿಲ್ಲದ ಶೆಡ್ಯೂಲ್:

ಪ್ರಶಾಂತ್ ನೀಲ್ ಸದ್ಯ ‘ಡ್ರಾಗನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮೂಲಗಳ ಪ್ರಕಾರ ಈ ಸಿನಿಮಾ ಎರಡು ಪಾರ್ಟ್‌ಗಳಲ್ಲಿ ಮೂಡಿಬರುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಅವರು ಬಹುನಿರೀಕ್ಷಿತ ‘ಸಲಾರ್ 2’ ಚಿತ್ರದ ಕೆಲಸಗಳನ್ನು ತಕ್ಷಣವೇ ಕೈಗೆತ್ತಿಕೊಳ್ಳಲಿದ್ದಾರೆ. ಈಗಾಗಲೇ ಈ ಸೀಕ್ವೆಲ್ ಮೇಲೆ ಹಿಮಾಲಯದಷ್ಟು ನಿರೀಕ್ಷೆ ಇರುವುದರಿಂದ, ನೀಲ್ ಅವರು ಮತ್ತೊಂದು ಪ್ರಾಜೆಕ್ಟ್‌ಗಾಗಿ ಇದನ್ನು ಮುಂದೂಡುವ ಸಾಧ್ಯತೆ ತೀರಾ ಕಡಿಮೆ.

ಮಹೇಶ್ ಬಾಬು ಅವರ ಮುಂದಿನ ಲೈನ್‌ಅಪ್:

ಮಹೇಶ್ ಬಾಬು ಅವರ ಕಾಲ್‌ಶೀಟ್ ಕೂಡ ಮುಂದಿನ ಕೆಲವು ವರ್ಷಗಳವರೆಗೆ ಸಂಪೂರ್ಣವಾಗಿ ಭರ್ತಿಯಾಗಿದೆ. ಸದ್ಯದ ಪ್ರಾಜೆಕ್ಟ್‌ಗಳನ್ನು ಮುಗಿಸಿದ ನಂತರ ಅವರು ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆ ಸಿನಿಮಾ ಮಾಡಲು ಮಾತುಕತೆ ನಡೆಸುತ್ತಿದ್ದಾರೆ ಎಂಬ ಸುದ್ದಿಯಿದೆ. ಒಂದು ವೇಳೆ ಈ ಪ್ಲಾನ್ ಗ್ರೀನ್ ಸಿಗ್ನಲ್ ಪಡೆದರೆ ಮಹೇಶ್ ಬಾಬು ಅವರ ಮುಂದಿನ ಮೂರ್ನಾಲ್ಕು ವರ್ಷಗಳ ಲೈನ್‌ಅಪ್ ಲಾಕ್ ಆಗಲಿದೆ.

ಈ ಎಲ್ಲಾ ಪ್ರಮುಖ ಕಾರಣಗಳಿಂದಾಗಿ ಮಹೇಶ್ ಬಾಬು ಹಾಗೂ ಪ್ರಶಾಂತ್ ನೀಲ್ ಅವರ ಸಿನಿಮಾ ಕೇವಲ ಗಾಸಿಪ್ ಅಥವಾ ಕಲ್ಪನೆಯಾಗಿಯೇ ಉಳಿಯುವಂತಿದೆ. ತೆರೆಮರೆಯಲ್ಲಿ ಇವರಿಬ್ಬರ ನಡುವೆ ಕಥೆಯ ಚರ್ಚೆಗಳು ನಡೆಯುತ್ತಿದ್ದರೂ ಸಹ, ಈ ಚಿತ್ರ ಅಧಿಕೃತವಾಗಿ ಸೆಟ್ಟೇರಲು ಇನ್ನು ಸಾಕಷ್ಟು ಸಮಯ ಕಾಯಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೇಸಿಗೆ ವಿಶೇಷ ರೈಲುಗಳ ಸಂಚಾರ ಒಂದು ತಿಂಗಳು ವಿಸ್ತರಣೆ! ಇಲ್ಲಿದೆ ಪೂರ್ಣ ವಿವರ – Kannada News | Good News for Rail Passengers: SWR Extends Summer Special Trains Until June End; Check Route and Train List Here

ಸಾಂದರ್ಭಿಕ ಚಿತ್ರImage Credit source: South Western Railway

ಬೆಂಗಳೂರು, ಮೇ 26: ಬೇಸಿಗೆಯ ರಜೆ ಮುಗಿಸಿ ಊರುಗಳಿಗೆ ಹಾಗೂ ಕೆಲಸದ ಸ್ಥಳಗಳಿಗೆ ಮರಳುವ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ (SWR) ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರ್ವಜನಿಕರ ದಟ್ಟಣೆ ನಿಯಂತ್ರಿಸಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸದ್ಯ ವಿವಿಧ ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬೇಸಿಗೆ ವಿಶೇಷ ರೈಲುಗಳ (Summer Special Trains) ಅವಧಿಯನ್ನು ಜೂನ್ ತಿಂಗಳ ಕೊನೆಯ ವರೆಗೆ ವಿಸ್ತರಿಸಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಈ ಎಲ್ಲಾ ವಿಶೇಷ ರೈಲುಗಳು ಈಗ ಅಸ್ತಿತ್ವದಲ್ಲಿರುವ ವೇಳಾಪಟ್ಟಿ, ನಿಲುಗಡೆ (Stoppages) ಹಾಗೂ ಬೋಗಿಗಳ ಸಂಯೋಜನೆಯೊಂದಿಗೆ (Composition) ಸಂಚರಿಸಲಿವೆ ಎಂದು ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮುಖ್ಯಾಂಶಗಳು

  • ಹುಬ್ಬಳ್ಳಿ, ಬೆಂಗಳೂರು ಮಾರ್ಗದ ಪ್ರಮುಖ ವಿಶೇಷ ರೈಲುಗಳ ಸಂಚಾರ ಜೂನ್ ಅಂತ್ಯದವರೆಗೆ ವಿಸ್ತರಣೆ.
  • ಸದ್ಯ ಇರುವ ಹಳೆಯ ರೈಲು ಸಮಯ, ನಿಲುಗಡೆ ಹಾಗೂ ಬೋಗಿಗಳ ವ್ಯವಸ್ಥೆಯಲ್ಲೇ ಮುಂದುವರಿಕೆ.
  • ತಾಂತ್ರಿಕ ಕಾಮಗಾರಿ ಹಿನ್ನೆಲೆ ಕೆಲವು ನಿರ್ದಿಷ್ಟ ದಿನಗಳಂದು ಮಾತ್ರ ರೈಲು ಸೇವೆ ರದ್ದು.

ರೈಲುಗಳ ವಿಸ್ತರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ನೈಋತ್ಯ ರೈಲ್ವೆ ಪ್ರಕಟಣೆಯ ಪ್ರಕಾರ, ಹುಬ್ಬಳ್ಳಿ-ರಾಮೇಶ್ವರಂ ಭಾನುವಾರದ ವಿಶೇಷ ರೈಲು (07355) ಜೂನ್ 7 ರಿಂದ 28 ರವರೆಗೆ ಹಾಗೂ ರಾಮೇಶ್ವರಂ-ಹುಬ್ಬಳ್ಳಿ ಸೋಮವಾರದ ರೈಲು (07356) ಜೂನ್ 8 ರಿಂದ 29 ರವರೆಗೆ ವಿಸ್ತರಣೆಗೊಂಡಿದೆ. ಅದೇ ರೀತಿ ಹುಬ್ಬಳ್ಳಿ-ಕೊಲ್ಲಂ ಭಾನುವಾರದ ರೈಲು (07313) ಮೇ 31 ರಿಂದ ಜೂನ್ 21 ರವರೆಗೆ ಮತ್ತು ಕೊಲ್ಲಂ-ಹುಬ್ಬಳ್ಳಿ ಸೋಮವಾರದ ರೈಲು (07314) ಜೂನ್ 1 ರಿಂದ ಜೂನ್ 22 ರವರೆಗೆ ಸಂಚರಿಸಲಿವೆ. ಆದರೆ, ಇಂಜಿನಿಯರಿಂಗ್ ಕಾಮಗಾರಿಗಳ ಕಾರಣದಿಂದಾಗಿ ಹುಬ್ಬಳ್ಳಿ-ಕೊಲ್ಲಂ ರೈಲು ಜೂನ್ 7 ರಂದು ಮತ್ತು ಕೊಲ್ಲಂ-ಹುಬ್ಬಳ್ಳಿ ರೈಲು ಜೂನ್ 8 ರಂದು ರದ್ದಾಗಲಿವೆ.

ನೈಋತ್ಯ ರೈಲ್ವೆ ಎಕ್ಸ್ ಸಂದೇಶ

ಮತ್ತೊಂದೆಡೆ, ಬೆಂಗಳೂರಿನ ಎಸ್‌ಎಂವಿಟಿ (SMVT) ನಿಲ್ದಾಣದಿಂದ ತಿರುವನಂತಪುರಂ ಸೆಂಟ್ರಲ್ ನಡುವೆ ಸಂಚರಿಸುವ ಪ್ರಮುಖ ವೀಕ್ಲಿ ಸ್ಪೆಷಲ್ ಟ್ರೈನ್​ಗಳಾದ 06523/06524 (ಸೋಮವಾರ/ಮಂಗಳವಾರ) ಮತ್ತು 06547/06548 (ಬುಧವಾರ/ಗುರುವಾರ) ರೈಲುಗಳ ಸೇವೆಯನ್ನು ಜೂನ್ ನಾಲ್ಕನೇ ವಾರದವರೆಗೆ ವಿಸ್ತರಿಸಲಾಗಿದೆ. ಎಸ್‌ಎಂವಿಟಿ ಬೆಂಗಳೂರು-ತಿರುವನಂತಪುರಂ ಶುಕ್ರವಾರದ ರೈಲು (06555) ಜೂನ್ 19 ರಿಂದ 26 ರವರೆಗೆ ಹಾಗೂ ತಿರುವನಂತಪುರಂ-ಎಸ್‌ಎಂವಿಟಿ ಬೆಂಗಳೂರು ಭಾನುವಾರದ ರೈಲು (06556) ಜೂನ್ 21 ರಿಂದ ಜೂನ್ 28 ರವರೆಗೆ ವಿಸ್ತರಣೆಯಾಗಿದೆ.

ಇದನ್ನೂ ಓದಿ: ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಳಗಾವಿ, ಸಿಕಂದರಾಬಾದ್, ಚರ್ಲಪಲ್ಲಿ ವೀಕ್ಲಿ ವಿಶೇಷ ರೈಲುಗಳು ಇನ್ನು ಕಾಯಂ!

ಈ ರೈಲುಗಳ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ ವಿವರಗಳನ್ನು ಪ್ರಯಾಣಿಕರು ಅಧಿಕೃತ ವೆಬ್‌ಸೈಟ್ (www.enquiry.indianrail.gov.in) ಅಥವಾ NTES ಆಪ್ ಮೂಲಕ ಪಡೆದುಕೊಳ್ಳಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link